ಒಟ್ಟು 3404 ಕಡೆಗಳಲ್ಲಿ , 117 ದಾಸರು , 2499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಿರೋ ಕೇಳಿರೋ ಆಲಿಸಿ ಜನರು | ಕಲಿಯುಗದೊಳಗ ಒಡಿಯ ನಾಟವನು ಪ ಫುಲ್ಲನಾಭನ ಭಕ್ತಿ ಎಳ್ಳೆನಿತಿಲ್ಲಾ | ಹುಲ್ಲು ಕಲ್ಲು ದೈವಕ ಎರಗಿ ನಡೆವರು | ಬೆಲ್ಲವು ಕಹಿಯಾಗಿ ಸಿಹಿ ಬೇವಾಯಿತು | ಅಲ್ಲ-ಹುದೆಂಬುದು ಬಲ್ಲವರಾರು 1 ಸಾಧು ಸಂಗಕ ಕಾಲು ಏಳುವು ನೋಡಿ | ಸಾಧಿಸಿ ದುರ್ಜನರಾ ನೆರಿಯ ಸೇರುವರು | ಮಾಧವ ನಾಮ ಉಣ್ಣಲು ಮುಖರೋಗ | ಭೂದೇವಿ ನಿಸ್ಸಾರವಾದಳು ನೋಡಿ2 ನೀಚರಿಗುದ್ಯೋಗ ಊಚರಿಗಿಲ್ಲ | ಆಚಾರ ಸದ್ಗುಣ ಆಡವಿ ಸೇರಿದವು | ಯೋಚಿಸಿ ಒಬ್ಬರಿ ಗೊಬ್ಬರು ಕೇಡಾ | ಭೂಚಕ್ರದೊಳು ಎಲ್ಲಾ ತೀರಿ ತಿಂಬುರೈಯಾ3 ಇಲಿಯು ಹೆಗ್ಗಣ ಹೆಚ್ಚಿ ತೋಳ ಬಡಿದು | ದಾಳಿಯಿಟ್ಟವು ಲಂಕಾ ಯೋಧ್ಯದ ನಡುವೆ | ಇಳಿಯೊಳು ಹತ್ತೆಂಟು ಕಾಲ-ವೀಪರಿಯಾ | ತಲಿ ತಲಿಗಿನ್ನು ನಾಯಕರಾಗಿ ಇರಲು 4 ಮ್ಯಾಲೊಬ್ಬ ನಿಂದಲಿ ಸುಖದಲಿ-ರಲಿಕ್ಕೆ | ಕುಲ ಅನ್ಯ ಇಲ್ಲದ ರಾಜೇಶನಾ | ಕಾಲಿಲಿ ಸರ್ವ ಸಂಕರ ವಾಗುತಿರಲು | ಹೊಳೆವನು ಗುರುಮಹಿಪತಿ ಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಕಂಡ್ಯಾ ಒಂದು ಮನವೇ | ಕೇಳು ಕಂಡ್ಯಾ ಪ ಕೇಳು ಕಂಡ್ಯಾ ವಂದ | ಪ್ರೇಮ ಭಾವದಿಂದ ಬಾಳು ದೀಪರಿಂದ ನಿನಗೆ ಬಂದಕೀದೆ ಛಂದ 1 ವಿಡಿದು ಗುರುಪಾದಾ ಪಡಿಯೋ ನಿಜಬೋಧಾ | ಕಡಿದು ಕಾಮ ಕ್ರೋಧ | ನೀಗು ವ್ಯವಾಧಾ 2 ಅನ್ಯ ಮಾರ್ಗ ನೋಡಾದಿರುವ ಬಲಿದೃಢಾ | ಘನಗುರು ಗೂಢಾ | ವಿದ್ಯೆ ಸಾಧಿಸೆಲೋ ಮೂಢ 3 ದೊಡ್ಡವ ನಾನೆಂಬ ದೋರದೆÉ ನೀಡಂಭ | ಜಡ್ಡಾಗದೇ ಗುಂಭಿ | ನಿಜ ನೋಡಿ ನಿರಾಲಂಬ 4 ಮಹಿಪತಿ ಜನಸೊಲ್ಲ ಹಾದಿಯಂತಿದಲ್ಲ ಮಹಿಮನೇ ಬಲ್ಲನಿದರ ಸವಿಸುಖವೆಲ್ಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳು ಕಿವಿಗೊಟ್ಟು ನಿನ್ನ ನಿಜಗುಹ್ಯದ ಸುಮಾತ | ಹೇಳುತಿಹ್ಯಾ ನಂದಬೋಧ ತಿಳಿಯಾ ವಿಶ್ವನಾಥ ಧ್ರುವ ನೋಡಿ ನಿನ್ನ ಗೂಡಿನೊಳು ಮಾಡಿಕೊ ಸ್ವಹಿತ ಚಾಡುವಿಡಿದು ನಡೆದು ಹೋಗಿ ಕೂಡಿರೊ ಸುಪಥ ಹಿಡಿಯದೆ ಆಲೇಶದ ಮನೆಯ ನೀ ಪಡಕೊ ಘನ ಅಮೃತ ಬೇಡಿ ಬಯಸಿದರಾಗದು ವಸ್ತು ಹಿಡಕೊಡುವ ಗುರುನಾಥ 1 ಖೂನ ಕಂಡು ಗುರುಪಾದದಲಿ ತನುಮನದಲಿ ನೀಜಡಿಯೊ | ಮೌನಮುಗ್ದದಲಿ ನೀನೆಂದು ಅನುಭವದ ನೀಹಿಡಿಯೊ ನಾನು ನೀನೆಂಬುದು ತಾ ಬಿಟ್ಟರೆ ಸನ್ಮತ ಸುಖನಿಲುಕಡಿಯೊ ಜ್ಞಾನ ದೈವತೆಯಂಬು ಮಾರ್ಗದಲಿ ಅನುಸರಿಸಿ ನೀ ನಡಿಯೋ 2 ಒಂದೆ ಮನದಲಿ ಹೊಂದಿ ನಿಜವುಸಂದಿಸಿಕೊಸ್ವಾನಂದ ಬಂದ ಜನ್ಮವು ಸಾರ್ಥಕ ಮಾಡುದು ಇದು ನಿನಗೆ ಬಲುಚಂದ ಹಿಂದೆ ಮುಂದೆ ತಾ ತುಂಬ್ಯಾನೆ ಮಹಿಪತಿಸ್ವಾಮಿ ಸಚ್ಚಿದಾನಂದ ಹೊಂದಿದವರನುಮಾನವ ಬಿಡಿಸಿ ಛೇದಿಸುವ ಭವಬಂಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ನಾ ಪೇಳ್ವದೊಂದಾ ನಿತ್ಯಾನಂದಾ ಪ. ಕೇಳು ನಾ ಪೇಳ್ವದೊಂದಾ ಕಂಸಾದ್ಯಸುರವೃಂದ ಸೀಳಿ ಶೀಘ್ರಾದಿ ಪರಿಹರಿಸಿದಿ ಪಿತೃ ಬಂಧ ಅ.ಪ. ನಿಗಮ ತತಿಗಳು ನಿಶ್ಯೇಷ ತಿಳಿಯದ ಸುಗುಣವಾರಿಧಿ ಸುಖಬೋಧ ದೇಹ ಸ್ವಗತ ಖೇದೊಝ್ಝಿತ ಸರ್ವ ನಿಯಾಮಕ ಖಗಪತಿವಾಹನ ಕಾಮಿತ ಭಾವನ ಪಾಲನ ಪರಾತ್ಪರ ಸ್ವಗತಿ ನಿಯತಿ ಜ್ಞಾನ ದಾಯಕ ತ್ರಿಗುಣ ವರ್ಜಿತ ತ್ರಿಭುವನೇಶ್ವರ ಮಗುವು ನುಡಿವುದ ಮಾತೆಯಂದದಿ 1 ಮೊದಲಿನ ಭವಗಳ ಹದನ ಒಂದರಿಯೆನು ಪಾದ ಪದುಮಗಳ ಸದರದಿ ಸೇವಿಸಲಧಿಕ ಸಾಧನ ಮಾನು ಷ್ಯದಿ ಬಂದು ವೈಷ್ಣವ ಬುಧರಾ ಸೇವೆಯ ಬಿಟ್ಟು ವಿಧವಿಧ ಮೋಹಾಂಧಕಾರಗ- ಳುದಿಸಲದರೊಳು ಸಿಲುಕಿ ನಿರುಪದಿ ಬಧಿರ ಮೂಕ ಜಡಾಂಧನಾದೆನು ಸದಯ ಇನ್ನಾದರೂ ಕಟಾಕ್ಷದಿ 2 ತಾಪತ್ರಯೋನ್ಮೂಲನೇಶಾ ಕೌಸ್ತುಭಭೂಷ ಸುಜನ ಗಣೈಕ ಪೋಷಾ ಈಪರಿಯೊಳಗೆನ್ನ ಜರಿವದುಚಿತವೇನೊ ಕಾಪುರುಷರ ಸಂಗ ಕಡಿದು ಕರುಣವಿಟ್ಟು ಶ್ರೀ ಪಯೋಜ ಭವೇಂದ್ರ ವಂದ್ಯ ಪ್ರ- ದೀಪ ಸತ್ಸಿದ್ಧಾಂತ ತಿಳಿಸಿ ಪ- ದೇ ಪದೇ ಕಾಪಾಡು ವೆಂಕಟ ಭೂಪ ನೀ ಗತಿಯೆಂದು ನಂಬಿದೆ ಕೇಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳು ಮನವೇ ನೀನು | ಅನವರತಾ | ಬಾಳು ಹಿರಿಯ ನಂಬಿರು ತಾ ಪ ಸದ್ಗುರು ದಯ ಪಡೆದು | ಭವದಲಿ ಪಡಿ ಭಾಗ್ಯದಲಿ 1 ಹಲವು ಹಂಬಲ ತ್ಯಜಿಸಿ | ದೃಢದಿಂದ | ಬಲಗೊಳ್ಳುಗುರು ಪದದ್ವಂದ್ವ 2 ಉದರ ಕುದಿಯಗಾಗಿ | ಕಂಡವನಾ | ವದಕೆರಗಲು ಬಹದೇನಾ 3 ಇಂದು ಸುಖಿಸು ಹೊಂದಿ ಕೃಷ್ಣಯ್ಯನ | ಸನ್ನುತ ಮಹಿಪತಿ ಚರಣಾ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೇಳು ಹಿತವಾ ಬಾಳು ಮನವೇ ಸಾಧು ಸಂಗ ಮಾಡು | ಹೇಳತೀರದ ಸ್ವಾನಂದದ ಸುಖಭಾವಿಕಗ ಬಲು ಪಾಡು ಪ ಹೀನ ಕೀಟಕ ಸಂಗದಿಂದ ಭೃಂಗಿಯಾಗಲಿಲ್ಲಾ | ತಾನು ಕಬ್ಬಿಣ ಪರಸವ ಮುಟ್ಟಿ ಚಿನ್ನವಾದುದಲ್ಲಾ 1 ಹಳ್ಳ ಕೊಳ್ಳ ಬಂದು ಕೂಡಿ ಗಂಗೆಯಾಗುವಂತೆ | ಎಲ್ಲ ವೃಕ್ಷವು ಸಂಗದಿಂ ಚಂದನಾಗುದು ಗಾದೆಯ ಮಾತೆ 2 ಕೋಟಿಗೆಂದೇ ಮಾತು ಕೇಳು ನಾಡ ಸಾಧನ್ಯಾಕ | ಪುನರಪಿ ನೀ ಬರಬೇಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳೆ ಕೊಳಲಿನ ದನಿಯ ಸಖಿಯೆ ನಾಳೆಯೆಂದೆನಬೇಡವೆ ಪ ಹೇಳೆ ಕೊಳಲಿನ ನಾದ ಸೇರಲಿ ತಾಳವನು ಬಿಡಬೇಡವೆ ಬಾಳು ಹಸನಾಗಿರಲು ಗಾನವು ಮೇಳವಿಸಬೇಕಲ್ಲವೆ ಅ.ಪ ಗಾನವೇ ಸುಖಸಂಪದದ ನೆಲೆ ಗಾನವೆ ಶಿಶುಲಾಲನೆ ಗಾನವೇ ಫಣಿಗಿಷ್ಟವಲ್ಲವೇ ಗಾನವೇ ಪಶುಪಾಲನೆ ಗೋಪಿ ನಲಿದಳು ಗಾನ ವೇದದ ಸಾಧನೆ 1 ವೈರಿ ಅಂಗಜಾತನ ಪಿತನ ಕೊಳಲಿನ ಗಾನವೇ ಮಧುಪಾನವು ಮಂಗಳಾಂಗನ ಪಾದಸೇವೆಗೆ ಮಾಂಗಿರೀಶನ ನಾಮವು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳೆಲೋ ಪ್ರಾಣಿ ನಂಬಿ ಪೂಜಿಸು ಹರಿಯ ಪಾದಾ | ಪಾಲಿಸುವಾ ಗರದು ಅನುಭವ ಬೋಧಾ ಪ ಗುರುವಿನಾ ಬಲಗೊಂಡು ಬಲಿಯೋ ಸ್ವಸುಖ ಪಡಕೋ | ಹರಿಯದೇ ನಾನಾ ಮಾರ್ಗವ ಕಂಡು 1 ಕಂಡ ದೈವಕ ಹಲ್ಲಾ ದೆರೆದು ಬಾಗುವದಲ್ಲಾ | ಮಂಡೆ ದಡವಲ್ಲದೇ ಮತ್ತೇನಿಲ್ಲಾ 2 ಇರಲು ಮನಿಲಿ ಧರಿಲುಳ್ಳಾ ಬಯಸಿದವಟಗಳೆಲ್ಲಾ | ತಿರುಕವ ಬೇಡಿ ಉಂಬುದು ಸಲ್ಲಾ 3 ನೀರಡಿಸಿ ಬರಿಗೈಯ್ಯಾ ನೆಕ್ಕಿದರೇನು ಶ್ರಯಾ | ಗುರುವಿನ ಕೇಳು ಸ್ವಹಿತೋಪಾಯ 4 ಹತ್ತು ಕಟ್ಟುವಕಿಂತ ಮುತ್ತು ಕಟ್ಟಬೇಕೆಂದೇ | ಅರ್ತರೊಲುವನು ಮಹಿಪತಿಸುತಂದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಕೈವಲ್ಯ ಇದೇವೆ ದೇವಾಲ್ಯ ತ್ರಾಹಿ ತ್ರಾಹಿ ತ್ರಾಹಿ ಎಂದು ನೋಡಿಮನದ ವೈಶಾಲ್ಯ ಧ್ರುವ ಮಹಾಮಹಿಮೆ ದೋರುವ ಇದೆ ದೇವದ್ವಾರ ಸೋಹ್ಯದೋರಿ ಕುಡುತಿಹ ಪುಣ್ಯ ಸಹಕಾರ ಬಾಹ್ಯಾಂತ್ರ ಭಾಸುತಿಹ ಸದ್ಗುರು ಸಹಕಾರ ದೇಹ ಅಭಿಮಾನ ಬಿಟ್ಟು ಮಾಡಿ ಜಯ ಜಯಕಾರ 1 ಮಾರ್ಗ ಸುಪಥವಿದೆ ನೋಡಿ ಸಾಕ್ಷಾತ್ಕಾರ ವರ್ಗ ಷಡ್ವೆರಿಗಳ ಮಾಡಿ ಬ್ಯಾಗೆ ದೂರ ದೀರ್ಘದಂಡ ಹಾಕಿ ಗುರುವಿಗೆ ನಮಸ್ಕಾರ ಸ್ವರ್ಗ ಸುಖಗೊಳ್ಳಲಿಕೆ ಇದೇವೆ ಸಹಕಾರ 2 ಸ್ವರ್ಗ ಭೂಕೈಲಾಸ ವೈಕುಂಠವಿದೆ ನೋಡೆವೈ ಪಾದ ಪದ್ಮಕೂಡಿ ಯೋಗ ಇದೆ ಸುಗಮ ಸಾಧನವ ಮಾಡಿ ಸುಙÁ್ಞನ ಸೂರೆಗೊಂಡು ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಕೈವಲ್ಯ ಮನದ ವೈಶಾಲ್ಯ ಧ್ರುವ ಅದ್ವೈತಾಗಮ್ಯಗೋಚರನದ್ವಿತೀಯ ಅಧ್ಯಾತ್ಮ ವಿದ್ಯದಾಗರ ಸಿದ್ಧರಪ್ರಿಯ ಸದ್ಗತಿ ಸುಖಸಾಗರ ಸದ್ಗುಣಾಲಯ ಬೋಧ ಪೂರ್ಣೋದಯ 1 ಆದಿತ್ಯಕೋಟಿ ಪ್ರಕಾಶ ಸದೋದಿತ ಸಾಧು ಹೃದಯನಿವಾಸ ಭೇದಾತೀತ ಶುದ್ಧಾತ್ಮ ಸುಖಸಂತೋಷ ಸದಾ ಸುಶಾಂತ ಸದಮಲಾನಂದಘೋಷ ಆದಿದೇವ ಸಾಕ್ಷಾತ2 ಕೈವಲ್ಯನಿಧಿ ನಿಶ್ಚಯ ದೇವಾಧಿದೇವ ಅಕ್ಷಯ ಶ್ರೀವಾಸುದೇವ ಭವಾತ್ಮ ಭಜಕಹೃದಯ ಸರ್ವರೊಳಿ ಹ್ಯ ಬಾಹ್ಯಾಂತ್ರ ಭಾಸುತಿಹ್ಯ ಮಹಿಪತಿ ಮನದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಂಡಾಡುವರ ಪ್ರಿಯನ ವಿಠ್ಠಲನ ಪ ಸಮಚರಣ ಭುಜನ ನಿಗಮಾ ಗಮತತಿಗೋಚರನಾ ಅಮಿತ ಪರಾಕ್ರಮನ ರುಕ್ಮಿಣಿ ರಮಣ ರವಿಕ್ಷಣನಾ ವಿಠ್ಠಲನ 1 ಕಾಮಿತಾರ್ಥ ಪ್ರದನ ಶ್ರೀ ತುಲಸೀ ಧಾಮ ವಿಭೂಷಿತನ ಪತಿ ಪಾಲನ ತ್ರಿಭುವನ ಸ್ವಾಮಿ ಚಿತ್ಸುಖಮಯನ ವಿಠ್ಠಲನ 2 ಗೋಕುಲ ಪೋಷಕನ ಮುನಿ ಪುಂಡ ರೀಕಗೋಲಿದು ಬಂದನ ಲೋಕವಿಲಕ್ಷಣನ ಪ್ರಣತರ ಶೋಕವಿನಾಶಕನ ವಿಠ್ಠಲನ 3 ವಿಧಿ ವಿಹ ಗೇಂದ್ರ ಮುಖಾರ್ಚಿತನ ಇಂದ್ರೋತ್ಪಲನಿಭನ ಗುಣಗಣ ಸಾಂದ್ರ್ರ ಸರ್ವೋತ್ತಮನ ವಿಠ್ಠಲನ 4 ಶ್ವೇತವಾಹನ ಸಖನ ಸತಿಗೆ ಪಾರಿ ಜಾತನ ತಂದವನಾ ವೀತ ಶೋಕ ಭಯನಾ ಶ್ರೀ ಜಗ ನ್ನಾಥ ವಿಠಲರೇಯನಾ 5
--------------
ಜಗನ್ನಾಥದಾಸರು