ಒಟ್ಟು 922 ಕಡೆಗಳಲ್ಲಿ , 89 ದಾಸರು , 715 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮಾರ್ತರ ನಿಂದನೆ ಮಾಡುವ ಕೆಟ್ಟ ಧೂರ್ತನ ಬಾಯ ಮೇಲೆ ಹೊಡೀ ಹೊಡೀ ಪ ಕರ್ತಾರ ಸ್ವರ ಸಮನೆನಿಸುವವರ ಪುರು- ಷಾರ್ಥಯುತ ಶೃತಿ ಶಾಸ್ತ್ರ ಪ್ರವರ್ತರ ಅ.ಪ ಪ್ರಮಾಣವನುಸರಿಸುವರ ವಿಹಿತವಾಗಿ ತಮ್ಮಂತೆ ಸರ್ವರನು ವಿಶೇಷದಿಂದರ್ಚಿಸುವವರ ಪ್ರಕಾಶಿಸುವವರ ಕರ್ಮ ಸಮ್ಯಜ್ಞಾನವಸಂಪಾದಿಸುವರ 1 ವೇದಾಭ್ಯಾಸದಿ ಕಾಲವ ಕಳೆಯುತ ವಿಹಿತರಿವರೆನಿಸಿಕೊಳ್ಳುವರ ಭೇದಾಭೇದಗಳರಿಯುತಲೀ ಬ್ರಹ್ಮವಾದದಲಿ ಸಂತೋಷಿಪರ ಪ್ರೀತಿಯ ಮಾಡುವರ ಹೃದ್ಗುಹೆಯಲಿ ನೋಳ್ಪರ 2 ನಂಬಿರುವವರ ವಿಧಿ ಪರೇಶನಲ್ಲಿಸಮನ್ವಯಿಸುವರ ಭಕ್ತಿಯಲಿ ಪೂಜಿಪರಾ ಸಂಪಾದಿಸೆ ಪಾತ್ರರಾದವರ 3
--------------
ಗುರುರಾಮವಿಠಲ
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಗತವು ಸ್ವಾಗತವು | ಯತಿವರ್ಯರೇಯೋಗೀಶ ಶ್ರೀಕೃಷ್ಣ | ಮೂತ್ರ್ಯುಪಾಸಕರೇ ಪ ವಿಶ್ವಭಿಧರಂತಸ್ಥ | ವಿಶ್ವರೂಪಿಯ ಹರಿಯವಿಶ್ವಸರ್ಜನ ಸ್ಥಿತೀ | ವಿಶ್ವಸಂಹರವಾ |ವಿಶ್ವತೊಮುಖವಾಗಿ | ಗುಣ ಕ್ರಿಯವ ಕೊಂಡಾಡೆವಿಶ್ವೇಶ ತೀರ್ಥರೆಂದುರು | ಕೀರ್ತಿಯುಕ್ತರೇ 1 ಬೋಧ | ಸಿದ್ಧ ಪಡಿಸಿದರೇ 2 ಶರಣ ಜನರಭಿಲಾಷೆ | ನಿರುತ ಪಾಲಿಸಿ ಪೊರೆವಸರಳ ಹೃದಯರೆ ನಿಮ್ಮ | ಚರಣದ್ವಂದ್ವಗಳಾ |ವರ ರಜವ ಶಿರದಲ್ಲಿ | ಧರಿಸುತ್ತ ಧನ್ಯನೆಹೆಮರಳಿ ಮಮಕುಲವೆಲ್ಲ | ಉದ್ಧಾರವಾಯ್ತು 3 ಕಾಲ | ಸೀಮೆ ಮೀರಿದ ಸಮಯನೇಮ ಮೀರದೆ ವೈಶ್ವ | ಹೋಮಾದಿ ಶೇಷಾ |ಪ್ರೇಮದಿಂ ವಿದ್ಯಾರ್ಥಿ | ಸ್ತೋಮ ಕುಣಿಸುತ ನಿತ್ಯಸಾಮ ಸನ್ನುತನ ನಿ | ಷ್ಕಾಮ ಭಜಿಸುವರೇ 4 ಕಾಣ್ವೋಪ ನಿಷದರ್ಥ | ಕನ್ನಡ ಸುಪದ್ಯದಲಿಇನ್ನು ರಚಿಸಿರ್ಪುದಕೆ | ಮುನ್ನುಡಿಯನಿತ್ತೂ |ಅನ್ನಂತ ಗುಣ ಗುರೂ | ಗೋವಿಂದ ವಿಠ್ಠಲನನನ್ನೆಯಿಂ ಭಜಿಸೆ ಪ್ರ | ಸನ್ನ ಮಾರ್ಗದರೇ 5
--------------
ಗುರುಗೋವಿಂದವಿಠಲರು
ಸ್ವಾಮಿ ತಪ್ಪಾರಿಸುವರೆ ನೀ ನಮ್ಮ ಸುಮ್ಮನುಂಡಾಡುವ ಬಾಲಕ ನಿಮ್ಮ ಅಮ್ಮ ಅಪ್ಪನೆಂದಾಡುದೆ ನಾ ತಮ್ಮ ಕಂ ಕಿಮೆಂದಾಡಕರಿಯೆ ನಾವಮ್ಮ 1 ಓದಿ ತಿಳಿಯಲರಿಯೆ ಶಾಸ್ತ್ರವೇದ ಭೇದಿಸಲರಿಯೆ ನಾ ನಿಮ್ಮ ಬೋಧ ಹಾದಿ ತಿಳಿಯುದೆ ಬಲು ತಾ ಅಗಾಧ ಇದೆ ಪಾಲಿಸಬೇಕಯ್ಯ ಸುಪ್ರಸಾದ2 ಭಕ್ತಿ ಮಾಡಲರಿಯೆ ನಿಮ್ಮ ದೃಢ ಯುಕ್ತಿ ತಿಳಿಯಲರಿಯದೆ ನಾ ಮೂಢ ಶಕ್ತಿ ಸಾಮಥ್ರ್ಯನ್ನೊಳು ನೋಡಬ್ಯಾಡ ಯುಕ್ತಾಯುಕ್ತ ನೋಡದಿರು ಎನ್ನ ಕೂಡ3 ಪತಿತಪಾವನನೆಂಬ ನಿನ್ನ ಬಿರುದು ಎತ್ತ ಓಡಿಹೋಗಬಲ್ಲದದು ಚಿತ್ತ ನೆಲೆಗೊಂಡು ಬಂದು ನಿಮ್ಮ ಬೆರೆದು ಮತ್ತ ಒರೆದು ನೋಡುವದಿದೆ ಅರೆದು 4 ಶರಣ ಹೊಕ್ಕ ಮ್ಯಾಲೆಲ್ಲಿಹುದೈಯ ಮರಣ ಚರಣಕಮಲಕ್ಕೊಪ್ಪಿಸಿಹೆ ನಾ ಹರುಣ ಅರಿತು ಮಾಡುವ ನಿಮ್ಮ ದಯ ಕರುಣ ತರಳ ಮಹಿಪತಿ ನಿಮ್ಮಣುಗ ಪೂರ್ಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಗಲು ಸಮಯದಲಿ ಇರುಳು ನೋಡಿದ ಬಾವಿ ಗುರುಳಬಹುದೇ ನರರು ಈ ಜಗದೊಳು ಪ ಮರುಳು ಮಾಡುವ ಭವದುರುಳು ಬಂಧನದೊಳು ಸಿಗಲು ಬಯಸಬಹುದೇ ಅವಿವೇಕದಿ ಅ.ಪ ಅಡಿ ಐದು ಉದ್ದದ ಒಡಕು ಒಂಭತ್ತಿನ ಕಡು ದುಃಖ ದೇಹಕೆ ಸಿಡಿವುದು ತರವೆ ಪೊಡವೀಶನಾದರೂ ಮಡಿಯಲು ನಿನ್ನಯ ಸಡಗರವೆಲ್ಲವು ಹಿಡಿಯೊಳಗಲ್ಲವೇ 1 ಅನುದಿನದಲಿ ನೀನು ಹಣ ಹಣವೆನ್ನುತ ಕುಣಿಯುವುದನು ನೋಡಿ ಅಣಕಿಸುವರು ನಿನ್ನ ತನುಮನ ಕ್ಲೇಶವನನುಭವಿಸುತ ಸದಾ ಹಣವಗಳಿಸಲದನುಣುವರು ಬೇರಿಹರು 2 ಗೃಹಿಣಿ ಗೃಹಿಗಳೆಲ್ಲ ಕುಹಕವೆಂದರಿಯದೆ ಗೃಹವು ಎನ್ನದು ಎಂದು ಗೃಹಿಣಿ ಎನ್ನವಳೆಂದು ಬಹುವಿಧ ವೈಭವವೆನಗಿಹುದೆನ್ನುವ ಮಹದಾಗ್ರವನ್ನು ಸಹಿಸುವನೇ ಹರಿ 3 ಸಿರಿ ಸಂತತ ಗಳಿಸಲು ಅಂತಕ ತನುವನು ಸೆಳೆಯಲು ಗಳಿಸಿದ ಕಂತೆಗಳೆಲ್ಲವೂ ಎಂತು ನಿಲ್ಲಿಸುವುವು ಚಿಂತಿಸಿ ಮನದೊಳು ಹರಿಯನು ನಿಲಿಸೊ 4 ಊಹಿಸುತೆಲ್ಲವ ಈ ಮಹಿಯೊಳಗಿನ ಮೋಹವ ಜರಿಯುತ ಪಾಹಿ ಎಂದು ಆ ಮಹಾಮಹಿಮ ಪ್ರಸನ್ನ ಹರಿಯ ದಿವ್ಯ ಸ್ನೇಹಸುಜಲದ ಪ್ರವಾಹದೊಳಗೆ ನಲಿಯೊ 5
--------------
ವಿದ್ಯಾಪ್ರಸನ್ನತೀರ್ಥರು
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಹಣವನರಸುವರೆಲ್ಲ ಗುಣವನರಸುವರೆ ಮಣಿಯನರಸುವ ಕೆಲರು ಹಣಕೆ ಬಾಯ್ ಬಿಡರೆ ಪ ನೀಡುವವನೊಬ್ಬನಿರೆ ಬೇಡವೆಂಬುವರಿಹರೆ ನೀಡಲೊಲ್ಲದ ನರನ ನೋಡುವವರಿಹರೆ ಬೀಡು ಹೆಚ್ಚಳಸಿರಿಯ ನೀಡೆನಗೆ ತನಗೆಂಬ ನಾಡಿಗರ ಗಡಣವನು ಎಣಿಸಲಳವೇ 1 ಕಲಿಯುಗದ ನೀತಿಯೋ ಬಲುದುರಾಸೆಯ ಬಲೆಯೋ ಸಲೆ ಬೆಳೆದಸೂಯೆಯೋ ಕಲಿತ ದುರ್ನೀತಿಯೋ ಜಲಜಾಕ್ಷನನೀ ದುಶ್ಶೀಲ ಪ್ರವಾಹದಲಿ ಅಲೆಯಬಿಡಬೇಡಯ್ಯ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹದಿನಾರು ಜಾತಿಯವರಣ್ಣಾ ನಿಮಗೆ ಮದಮತ್ಸರಗಳೇಕೆ ಚಿಣ್ಣಾ ಪ ಬುದ್ಧರು ಇದರರ್ಥವನು ತಿಳಿದು ನೋಡುವುದರೊಳಗೆ ಬುದ್ಧಿಹೀನರ ವ್ಯಾಜ್ಯ ಮುಕ್ತಿ ಮಾರ್ಗಕೆ ಪೂಜ್ಯ ಅ.ಪ ಆದರಿಸುವರೆ ತಾಯಿ ತಂದೆ | ನಾನು ಮೋದವಡುವುದಕೆಲ್ಲಿ ಬಂದೆ ಭೇದಗಳು ಮಾಡುವುದು ವಾದಗಳು ತರವಲ್ಲ 1 ಜ್ಞಾನ ಕರ್ಮೇಂದ್ರಿಯಗಳು ಹತ್ತು | ಪಂಚ ಪ್ರಾಣಗಳು ಸೇರಿಹುದು ಗೊತ್ತು ನಾನು ಹದಿನೆಂಟನೆಯ ನೀನು ಇದು ನಿಜವಾದ ಮಾತು 2 ಬದ್ಧ ಜಾತಿಗಳಿಂಗೆ ನೇಮಾ ಮಧ್ವವಲ್ಲಭನಾಜ್ಞೆ ಇದ್ದಂತೆ ಪೇಳಿದೆವು ಪದ್ಮಾಕ್ಷ ಗುರುರಾಮ ವಿಠಲನಿದಕೆ ಸಾಕ್ಷಿ 3
--------------
ಗುರುರಾಮವಿಠಲ
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹರಿ ಗೋರಸ ಕುಡಿವುದು ನೋಡಿರೋ |ಪರಿ ಪರಿಯ ಸಂಭ್ರಮ ಮಾಡಿರೋ ಪ ಕಾರಣ ಒರಳಲಿ ವೃತ್ತಿಗುಣದಿ ತಾ |ಇದ್ದು ಯಶೋದೆಯು ಕಟ್ಟಿರಿಸಿ ||ಸ್ತನವನುಣಿಸುತಿರಲು ನಿಜಕರ್ಮದ |ಬಲದಿ ಬಿಡಿಸಿಕೊಂಡಾಡುತಲಿ 1 ನಾ ನಾ ಎನುತಾಡುವಾ ಗೋಪಾಲರ |ನೆರೆಸುವರಂತೆ ಕುಣಿವುತಲಿ ||ನಾನಾ ದ್ವಾರಗಳಿಂದ ಧುಮುಕಿ |ಮುಚ್ಚಿದ ಮಡಿಕೆಗಳ ನೋಡುತಲಿ 2 ರಾಗ ಪೀಠದಲಿ ಮೋಹದ ಹೆಗಲಲಿ |ನಿಲ್ಲಲು ನೆಲವು ನಿಲುಕುತಿರಲು ||ಯೋಗ ರುಕ್ಮ ಘಟಿಯನಾ ಛೇದಿಸಿ |ವಿರತಿ ಗೊಲ್ಲತಿಗತಿ ಕಾಡುತಲಿ 3
--------------
ರುಕ್ಮಾಂಗದರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಪಾದ ತೀರ್ಥವನು ಕರದಿ ಪಿಡಿದವರೆಲ್ಲ ತಿರುನಾಮದವರೆನಲು ನಂಬಬಹುದೇ ಪ ಪರವಾಸುದೇವನನು ಮರೆತು ಸತಿಸುತರ ವರಾಭರಣವೇ ಹಿರಿದೆಂಬ ನರರಿಲ್ಲವೇ ಅ.ಪ ಹರಿನಿವೇದನಕಾಗಿ ಕರದಿ ಫಲಪುಷ್ಪಗಳ ತರುವವರು ದಕ್ಷಿಣೆಯ ಇರಿಸಿಹರೋ ಎಂದು ಪರಿಪರಿಯ ದೃಷ್ಟಿಯಲಿ ಪರಿಕಿಸುತ ಅಲ್ಲವೆಂ ದರಿತಾಗ ಕೋಪ ನಿಷ್ಠುರ ಗೈಯುವರು 1 ಈಶಾಯನಮಃ ಓಂ ಶ್ರೀಶಾಯ ನಮಃ ಪ ರೇಶಾಯ ನಮಃ ಎಂಬುದಕೆ ಬದಲು ಆಶೋತ್ತರವನಾಂತು ಕ್ಲೇಶಪೂರಿತರಾಗಿ ನಾಶವಾಗಲಿ ಕುಡದಜನರೆಂಬರಕಟಾ 2 ಮಾನವೋತ್ತಮ ಮಾತ್ರ ತಿರುನಾಮಧಾರಿ ಜ್ಞಾನಿ ಇಂಥವನಿಂದ ತೀರ್ಥವನು ಪಡೆದವರು ಶ್ರೀನಾಥ ಮಾಂಗಿರಿಯ ಭಕ್ತರೆನಿಸುವರು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಭಕುತರ ದರುಶನವು ಅತಿಹರುಷವು ಧ್ರುವ ಹರಿ ನೆನೆವರಾ ನೆರಿಯು ನಿಧಾನದಾ ಕೆರೆಯು ಹರಿ ಸ್ಮರಿಸುವರ ಮರಿಯು ವಜ್ರವರಿಯು ಹರಿ ಭಜಿಸುವರ ಸರಿಯು ನಿಜಘನಾತ್ಮದ ಝರಿಯು ಹರಿ ಮಹಿಪರ ಕರಿಯು ಪರಮಾನಂದದ ತೆರಿಯು 1 ಹರಿಶರಣರ ನುಡಿಯು ಕರುಣದಮೃತಧ್ವನಿಯು ಹರಿಯದಾಸರ ನಡೆಯು ನಿಲಕಡೆಯು ಹರಿಭಕ್ತರಿದ್ದೆಡೆಯು ಪುಣ್ಯಕ್ಷೇತ್ರದ ತಡಿಯು ಹರಿಮಹಿಮರ ಕಡಿಯು ಕ್ಯಾದಿಗ್ಹೊಡಿಯು 2 ಹರಿಭಕ್ತರ ಸಂಗ ಸ್ನಾನಗಂಗ ತುಂಗ ಹರಿಮಹಿಮರ ಅಂಗ ಅಂತರಂಗ ಹರಿಪರಮಾನಂದ ಗುರು ಕರುಣಾಕೃಪಾಂಗ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು
ಹರಿಯಂದು ಮನದಲ್ಲಿ ಅರಿತು ಪೂಜಿಸುವರಿಗೆ ಪರಮ ದಾರಿದ್ರ್ಯ ದು:ಖ ಘೋರ ನಿಹಾರವೂ ಪ ಆರು ವರ್ಣಿಸುವರು ಭವದೋಷನಳಿದೂ ಪಾರಗಾಣಿಸಿ ಮುಕ್ತಿಪದವಿಯ ಕೊಡುವಂಥಾ 1 ಶ್ರೀ ಕೃಷ್ಣಾಯನುತಾ ನೀ ಶಾಶ್ವತವಾಗೀ------ ಅಧಿಕ ಸಾಮ್ರಾಜ್ಯ ಪದವಿ ಬೇಕಾದಷ್ಟು ಕೊಡುವಂಥ ಭಗವಂತ ಪರಬ್ರಹ್ಮ 2 ನಾರಾಯಣಾ ಎಂದು ನಾಲಿಗೆಯಲಿನುಡುವಂಥ ದನುಜ ಮರ್ದನ ದೇವ-----------ರೆಂದೆನಿಸಿ 3
--------------
ಹೆನ್ನೆರಂಗದಾಸರು