ಒಟ್ಟು 1482 ಕಡೆಗಳಲ್ಲಿ , 105 ದಾಸರು , 1122 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರುಷಾರ್ಥ ಪ ವರದ ಅಭೀಷ್ಟೆಯ ಕರದು ಎನಗೆ ನೀ ವರದನೆಂಬೊ ನಿನ್ನ ಬಿರುದನ ರಕ್ಷಿಸು ಅ.ಪ ಅಜನ ಜನಕನÀಲ್ಲಿ ಇರುವಿಯೊ ವಿಜನ ದೇಶದಲ್ಲೀ ಸುಜನರು ಇದ್ದಲ್ಲಿ ಬರುವೆಯೊ ಭಜನೆಮಾಡುವಲ್ಲೀ ಸುಜನರ ತಾಪಕೆ ವ್ಯಜನನು ನೀನೂ ಸುಜನಕಲ್ಪತರು ಕುಜನಕುಠಾರಾ 1 ನಂದನಂದನನೂ ಅವನಿನ್ನ ಬಂಧನದೊಳಗಿಹನೂ ಅಂಧನಾಗಿ ನಾನೂ ಸಂಸೃತಿ ಬಂಧನದೊಳಗಿನ್ನೂ ನೊಂದೆನು ಬೆಂದೆನು ಬಂದೆನು ನಿನ್ನಲಿ ಕಂದನ ಲಾಲಿಸು ಒಂದಿನ ಬಿಡದೆ 2 ಮರೆತೆನು ನಾನಿನ್ನಾ ಅವಗುಣ ಮರೆತು ಪಾಲಿಸು ಮುನ್ನಾ ಪರತರಗುರು ನಿನ್ನಾ ಹೊರತು ಗತಿ ಗುರುತತಿಲ್ಲ ಮುನ್ನಾ ಅರಿತು ಅನಂತಾದ್ರಿ ನಿರತನ ತೋರಿಸು ಮೋದ ಪುರನಿರತ ಸದ್ಗುರುವೆ 3
--------------
ಅನಂತಾದ್ರೀಶರು
ಪುಷ್ಪಸೇವೆಯ ಗೀತೆ ಪುಷ್ಪಸೇವೆಯ ನೋಡುವಾ ಬನ್ನಿರೆ ನ ಮ್ಮಪ್ರಮೇಯ ರಂಗನಾ ಪ. ಕ್ಷಿಪ್ರದಿಂದಲೆ ಬಂದು ಚಪ್ಪರದಲಿ ನಿಂದು ವಿಪ್ರರೆಲ್ಲರು ತಂದು ಪುಷ್ಪ ಸಮರ್ಪಿಸುವ ಅ.ಪ. ಮೇಷರಾಶಿಗೆ ರವಿಯು ಬರಲು ವಾಸುದೇವ ಹರಿಯು ಆಗ ಬೇಸಿಗೆ ತಾಪವ ಪರಿಹರಿಸುವೆನೆಂದು ವಾಸನೆಗಂಧವ ಮೈಯೊಳು ಪೂಸಿದ 1 ಕರ್ಪೂರದ ಕಸ್ತೂರಿ ಗಂಧವ ತಂದು [ಒಪ್ಪದಿಂ] ವಕ್ಷಸ್ಥಳದಿ ಧರಿಸಿ ವಕುಳ ಪುಷ್ಪಗಳಿಂದ ಮೌಳಿಯ [ಲಂಕ]ರಿಸಿದ ರು ಪನ್ನೀರವಲ್ಲಿಯ ಚೆನ್ನಾಗಿ ಪ್ರೋಕ್ಷಿಸಿದರು2 ಮರುಗ ಮಲ್ಲಿಗೆ ಜಾಜಿ ಮುಡಿವಾಳ ಇರವಂತಿಗೆ ಪಚ್ಚೆ ದವನ ಕೇದಿಗೆ ಪಾ ಕಮಲ ಸಂಪಿಗೆ ಪುಷ್ಪಮಾಲೆಯ ಧರಿಸಿ ಪನ್ನೀರ ತಳಿದರಾಗ 3 ಪುಷ್ಪದ ದುಬಟಿಯನು ತಂದು ನಮ್ಮ ಸರ್ಪಶಯನನಿಗ್ಹೊದ್ದಿಸೆ ಕ್ಷಿಪ್ರದಿಂದಲೇ ತೀರ್ಥಪ್ರಸಾದವನಿತ್ತು ಎ ನ್ನಪ್ಪ ರಂಗನು ಬಂದ ಒಯ್ಯಾರ ನಡೆಯಿಂದ 4 ಪರಿಪರಿ, ವಾದ್ಯಂಗಳು ಭೋರಿಡುತಿರೆ ವರಾಂಗನೆಯರು ಪಾಡೆ ಸುರರು ಭೂಸುರ ನರರೆಲ್ಲರ ಕೂಡಿ ದೊರೆಯುಮಂಟಪಕ್ಕಾಗ ಪರಮಪುರಷ ಬಂದ 5 ಅಲ್ಲಿ ಪೂಜೆಯ ಗ್ರಹಿಸಿ ರಂಗಯ್ಯ ತಾ ಎಲ್ಲರೊಡನೆ ಪೊರಟಿರೆ ವಲ್ಲಭನನು ವೀಣೆಸೊಲ್ಲಿನಿಂ ಪಾಡುತಿರೆ ಲಕ್ಷ್ಮೀ ಮೆಲ್ಲಮೆಲ್ಲನೆ ಬಂದ ಏಕಾಂತದಿ ರಂಗ 6 ಚಿತ್ರಪೌರ್ಣಮಿಯಲ್ಲಿ ಶ್ರೀರಂಗ ವಿ ಚಿತ್ರದಿಂದಲೆ ಪೊರಟು ಉತ್ತರಕಾವೇರಿ ತೀರದ ಮಂಟಪದಲಿ ನಿಂದು ಭಕ್ತವತ್ಸಲನು ಮಜ್ಜನವ ಮಾಡಿದನಾಗ 7 ಮಕರಿ ಕಾಲ್ಪಿಡಿಯಲಾಗ ಮತಂಗ ವು ಕರೆಯೆ ನಿಮ್ಮನು ಅತಿ ವೇಗದಿಂದ ಚಕ್ರದಿ ನಕ್ರನ ಕೊಂದು ಕರಿಯ ರಕ್ಷಿಸಿ ಬಂದ ಕರುಣದಿಂದಲೇ ರಂಗ 8 ಕಲಿಯುಗದೊಳಗಿರುವ ಕರ್ಮಿಗಳನ್ನು ಸಲಹುವೆನೆಂದೆನುತಾ ಕರುಣದಿಂ ದಲೆ ಅರ್ಚಾವತಾರವ ಮಾಡಿ [ಸಲೆ] ಬಿರುದು ಧರಿಸಿ ಬಂದ ವರದವೆಂಕಟರಂಗ 9
--------------
ಯದುಗಿರಿಯಮ್ಮ
ಪೇಳ ಸುಲಭವೆ ಜಗದಿ ಕಾಲಮಹಿಮೆಯ ನಮ್ಮ ಮೂಲ ಪುರುಷನ ದಿವ್ಯ ಲೀಲೆಯಲ್ಲವೆ ಎಲ್ಲ ಅ.ಪ ಮುಂದೆ ಸ್ತುತಿಪರು ಜನರು ಹಿಂದೆ ಜರಿವರು ಬಹಳ ತಂದೆ ಬಡವನ ನೀನ್ಯಾರೆಂದು ಕೇಳ್ವರು ಮನದಿ 1 ನೀಚಕೃತ್ಯವ ಮನದಿ ಯೋಚಿಸುತ್ತಲಿ ಸತತ ನಾಚಿಕೆಯನು ಪೊಂದದೆಲೆ ಯಾಚಿಸುವರು ದ್ರವ್ಯವನು 2 ಸತಿಯರೆಲ್ಲರು ಶುದ್ಧಮತಿಯ ತೊರೆಯುತ ತಮ್ಮ ಪತಿಯ ಜರಿವರು ಮುದದಿ ಇತರರನ್ನು ಕೋರುವರು 3 ಕಾಲ ಕಳೆದು ಖ್ಯಾತಿ ಪಡೆವರು ಬಹಳ ಸೋತು ತಮ್ಮ ದ್ರವ್ಯಗಳ ಪಾತಕಗಳ ಮಾಡುವರು4 ಸ್ನಾನ ಜಪತಪ ಪೂಜೆ ಏನನರಿಯರು ದುಷ್ಟ ಪಾನಗಳನು ಸೇವಿಸುತ ಮಾನ ದೂರ ಮಾಡುವರು 5 ಹರಿಯ ಮಹಿಮೆಗಳನ್ನು ಅರಿಯದಂತೆ ಸಂತತವು ಧರೆಯ ದುಷ್ಟ ಭೋಗದಲಿ ಕುರಿಗಳಂತೆ ಬೀಳುವರು 6 ಘನ್ನ ಧರ್ಮಗಳೆಲ್ಲ ಶೂನ್ಯವಾಗಿರೆ ಸುಪ್ರ ಸನ್ನ ಹರಿಯ ಸೇವಕರು ಇನ್ನು ಇರುವುದಚ್ಚರಿಯು7
--------------
ವಿದ್ಯಾಪ್ರಸನ್ನತೀರ್ಥರು
ಪ್ರದ್ಯುಮ್ನ ವಿಠಲ ನೀನಿವಳ ಸಲಹಬೇಕೋ ಪ ವಿದ್ಯಾಯು ಸಂಪತ್ತು | ಭಕ್ತ್ಯಾದಿಗಳನಿತ್ತುಉದ್ಧರಿಸ ಬೇಕಿವಳ | ಮಧ್ವಾಂತರಾತ್ಮಾ ಅ.ಪ. ಹರಿದಾಸ್ಯ ಕಾಂಕ್ಷಿತಳು | ಹಿರಿದಾಗಿ ಬೇಡಿಹಳುವರತೈಜ ಸಾಖ್ಯಹರಿ | ವರದ ನಾಗಿರುವೇಕರುಣನಿಧಿ ತವನಾಮ | ಸ್ಮರಿಪ ಸನ್ಮಾರ್ಗವನುಅರುಹಿ ಮಹ ಭವನಿಧಿಯ | ತರಣ ತಿಳಿಸಿರುವೇ 1 ಕಂಸಾರಿ ತವಪಾದಪಾಂಸುವನೆ ಶಿರದಿ ಅ | ಸಂಶಯದಿ ಧರಿಸೀಮಾಂಸಧಾತುಕ ಸಪ್ತ | ಹೇಸಿಕೆಯ ದೇಹವು - ವಿಪಾಂಸಗನಿಗಧಿಷ್ಠಾನ | ವೆಂಬುದನೆ ತಿಳಿಸೋ2 ಪಂಚಬೇದಾತ್ಮಕ ಪ್ರ | ಪಂಚವು ಸದಾ ಸತ್ಯಅಂಚೆವಹ ಸುರರಾದಿ | ತರತಮ್ಯದಾಸಂಚಿಂತನೆಯ ಕೊಟ್ಟು | ವಾಂಛಿತಾರ್ಥದ ಹರಿಯೆಮಿಂಚಿನಂದದಿ ಪೊಳೆಯೊ | ಹೃತ್ಪಂಕಜದ ನಡುವೆ3 ಮತೆ ಈ ಯುಗದಲ್ಲಿ | ಕೃತ್ಯ ವ್ರತನೇಮಾದಿಸತ್ವ ರಹಿತವು ಆಗಿ | ನಿತ್ಯಫಲರಹಿತಾಎತ್ತ ನೋಡಿದ ರತ್ತ | ಕತ್ತಲೆಯು ಕವಿದಿಹುದುಹತ್ತಿರವೆ ಇರುವಂಥ | ಭಕ್ತವತ್ಸಲ ಸಲಹೋ 4 ದಾವಾಗ್ನಿ ಕುಡಿದವನೆ | ಪಾವಿನಾಮದ ಹರನೆಗೋವುಗಳೊಳುದ್ಗೀಥ | ದೇವಾದಿದೇವಾಕಾವುದಿವಳನು ಎಂಬ | ಭಾವ ಬಿನ್ನಪ ಸಲಿಸೊಮಾವಿನೋದಿಯೆ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಕಲ್ಕಿ ಅಮಿತ ವಿಕ್ರಮ ಕಲ್ಕಿ ಅನಘ ಲಕ್ಷ್ಮೀರಮಣ ಶರಣು ಮಾಂ ಪಾಹಿ ಕೃಷ್ಣ ನರಹರಿ ಕಪಿಲ ತಿಲಕ ವೇಂಕಟರಮಣ ಪ್ರಾಣ ಹೃದ್‍ವನಜಸ್ಥ ರಕ್ಷಮಾಂ ಸತತ ಪ ಶ್ರೀ ದುರ್ಗಾಭೂರಮಣ ವಿಷ್ಣು ರುದ್ರ ಬ್ರಹ್ಮ ಮಾಯಾ ಜಯಾ ಕೃತಿ ಕೂರ್ಮ 1 ಧನ್ವಂತರಿ ಶರಣು ಅಜಿತ ಸ್ತ್ರೀರೂಪನೇ ಘನಭೂಮಿಧರ ನಾರಸಿಂಹ ವಾಮನ ತ್ರಿಪದ ರೇಣುಕಾತ್ಮಜರಾಮ ವೇಣುಗೋಪಾಲ ನಮೋ ಬುದ್ಧ ಸುಜನಪ್ರಿಯ ಕಲ್ಕಿ 2 ವೃಷಭ ತಾಪಸ ಯಜ್ಞ ದತ್ತ ವಡವಾವಕ್ತರ ಕೃಷ್ಣ ಹರಿನಾರಾಯಣ ವೇದವ್ಯಾಸ ಶಿಂಶುಮಾರ ಸುಗುಣಾರ್ಣವನೆ ಶ್ರೀಶ ಸರ್ವಾಶ್ರಯ ಅನಂತ ಸುಖರೂಪ 3 ಭೂಲೋಕದಲಿ ಮಣಿಮಂತಾದಿ ಅಸುರರು ಶೀಲ ಹರಿಭಕ್ತರನ ಕಂಡು ಸಹಿಸದಲೆ ಬಾಲ ಶಶಿಶೇಖರನ ಸ್ತುತಿಸಿ ವರಗಳ ಪಡೆದು ಇಳೆಯಲಿ ಜನಿಸಿದರು ತತ್ವಜ್ಞಾನಿಗಳ ವೋಲ್ 4 ಸೂತ್ರ ವಿರುದ್ಧ ಭಾಷ್ಯಗಳ್ ಮಾಡಿ ವೇದೋಪನಿಷದ್‍ಗಳಿಗೆ ಅಪ ಅರ್ಥ ಪೇಳಿ ಸಾಧುಗಳ ಮನಕೆಡಿಸೆ ಮಧ್ವಾಖ್ಯ ಸೂರ್ಯನು ಉದಿಸಿ ಸಜ್ಜನರ ಹೃತ್ತಿಮಿರ ಕಳೆಯೆ 5 ಶ್ರೀಪತಿ ವಿಷಯಕ ಜ್ಞಾನ ಮರೆ ಮಾಡುವ ಇಪ್ಪತ್ತು ಮೇಲೊಂದು ಅಪದ್ದ ದುರ್ಭಾಷ್ಯ ಅಪವಿತ್ರ ಅಚರಣೆ ದುಸ್ತರ್ಕ ದುರ್ವಾದ ಈ ಪರಿಸ್ಥಿತಿಯ ನೆಟ್ಟಗೆ ಮಾಡಿದಾ ಮಾಧ್ವ 6 ಇಪ್ಪತ್ತಿ(ತ್ತು) ಎರಡನೇ ಭಾಷ್ಯಾ ಸಿದ್ಧಾಂತವ ಉಪನಿಷದ್ ದಶಕಕೆ ಸರಿಯಾದ ಭಾಷ್ಯಗಳ ಸಪ್ತ ತ್ರಿಂಶತ್ ಒಟ್ಟುಗ್ರಂಥ ಸುರಧೇನುವ ಅಪವರ್ಗಾನಂದ ಒದಗಿಸಿದ ಯೋಗ್ಯರಿಗೆ 7 ಸದ್ಧರ್ಮ ಆಚರಣೆ ಯೋಗ್ಯ ಉಪಾಸನಾ ಭಕ್ತಿ ಸವೈರಾಗ್ಯ ಜ್ಞಾನ ಉನ್ನಾಹ ಅಧಿಕಾರಿಗಳು ಈ ಪರಿಯಲಿ ಸುಖಿಸಲು ಕ್ಷಿತಿಯ ಜನರಿಗೆ ಲಭಿಸಿತು ಕ್ಷೇಮ 8 ಕಾಲವು ಜರುಗಿತು ದೈತ್ಯರು ನೋಡಿದರು ಮೆಲ್ಲಮೆಲ್ಲನೆ ಪುನಃ ವಿಷಮ ಮಾಡಿದರು ಶೀಲರ ಹಿಂಸಿಸಿ ಸದ್ಧರ್ಮ ಕೆಡಿಸಿದರು ಖಳರು ಕ್ರೌರ್ಯವ ವರ್ಧಿಸಿದರು ದಿನ ದಿನದಿ 9 ಮಹಾಭಯಂಕರ ದೈತ್ಯ ಸಮೂಹವ ಸಂಹನನ ಮಾಡಿದಳು ಮಹಾದುರ್ಗಾದೇವಿ ಬ್ರಾಹ್ಮಣಕುಲದಲಿ ಪ್ರಾದುರ್ಭವಿಸಿದ ದೇವಿ ಮಹಾದುರ್ಗಾ ಜಗದಾಂಬಾ ಶರಣು ಮಾಂಪಾಹಿ 10 ಮಾಸ ಋತು ವರುಷಗಳು ಕಾಲ ಪ್ರವಹಿಸಿತು ಜನಗಳು ಕಲಿಯುಗದ ಕಡೇ ಭಾಗ ಬರಲಾಗ ಹೀನ ಕರ್ಮಂಗಳಲಿ ಆಸಕ್ತರಾದರು 11 ಪುರಾಣಂಗಳಲಿ ಕಲಿಯಗದ ಸ್ಥಿತಿಗತಿಯು ವಿವರಿಸಿದಂತೆಯೇ ನೆನೆಯಲೂ ಭೀತಿ - ಕರ ಪಾಪಕರ್ಮದಲಿ ಜನರು ರತರಾಗಿರಲು ನರಪರ ಕ್ರೂರತನ ದಿನ ದಿನ ಹೆಚ್ಚಿತು 12 ಜ್ಞಾನಾದಿ ಸಂಪತ್ತು ಕಳಕೊಂಡ ಜನರು ವಿಷ್ಣು ದ್ವೇಷಿಗಳಾಗಿ ಬಹು ಬಹು ನೀಚ- ತನದಲಿ ಇರುತಿರಲು ದೇವತಾವೃಂದವು ನಿನ್ನ ಬೇಡಿದರು ಪುನಃ ಧರ್ಮಸ್ಥಾಪಿಸಲು 13 ಯದಾಯದಾಹಿ ಸದ್ಧರ್ಮಕ್ಕೆ ಹಾನಿಯು ಅಧರ್ಮಕ್ಕೆ ವೃದ್ಧಿಯು ಆಗುವದೋ ಆಗಾಗ ಸಾಧುಗಳ ರಕ್ಷಣೆಗೆ ಪಾಪಿಗಳ ಹನನಕ್ಕೆ ಸದ್ಧರ್ಮ ಸ್ಥಾಪನೆಗೆ ಅವತಾರ ಮಾಳ್ಪಿ 14 ಭೂಮಿಯಲಿ ಸುಪವಿತ್ರ ಶಂಭಳ ಗ್ರಾಮದಲಿ ಬ್ರಾಹ್ಮಣ ಮಹಾತ್ಮ ವಿಷ್ಣು ಯಶಸ್ ಭವನದಲಿ ಅಮಿತ ಪೌರುಷಜ್ಞಾನ ಆನಂದಮಯ ನೀನು ವಿಮಲ ಕಲ್ಕ್ಯವತಾರ ಮಾಡಿದಿ ಮಹೋಜ 15 ಕ ಎಂದರಾನಂದ ಕಲ್ಕೆಂದರೆ ಜ್ಞಾನ ಆನಂದ ರೂಪ ಶೂಲಿ ವಜ್ರಿಗಳಿಗೆ ಸುಖಜ್ಞಾನ ಬಲ ಕೊಡುವ ಠಲಕನಮೋ ಪಾಪಹರ ಸೌಭಾಗ್ಯದಾತ 16 ಲೋಕವಿಲಕ್ಷಣ ಸುಪ್ರಭಾಶ್ವ ಏರಿ ನಿಖಿಳ ದುರ್ಮತಿ ಭೂಪಾಲ ಚೋರರನ್ನ ಅಖಿಳ ಪಾಪಿಗಳ ಅಧರ್ಮ ಆಚರಿಸುವರ ಶ್ರೀಕಾಂತದ್ವೇಷಿಗಳ ಕತ್ತರಿಸಿ ಕೊಂದಿ 17 ಸತ್ಯವ್ರತ ಸುರವೃಂದ ವಸುಮತಿ ಪ್ರಹ್ಲಾದ ಶತಮಖ ಪ್ರಜೆಗಳು ವಿಭೀಷಣ ಸುಗ್ರೀವ ಪಾರ್ಥಸುಧಾಮ ರಕ್ಷಕನೇ ಸುರಬೋಧಕನೇ ಸತ್ಯಧರ್ಮರ ಕಾಯ್ವ ಕರುಣಾಳು ಕಲ್ಕಿ 18 ಜ್ಞಾನಸುಖ ಭೂಮದಿ ಗುಣಪೂರ್ಣ ನಿರ್ದೋಷ ವಿಷ್ಣು ಪರಮಾತ್ಮ ಹರಿ ಉದ್ದಾಮ ಬ್ರಹ್ಮ ಪೂರ್ಣಪ್ರಜ್ಞಾರ ಹೃಸ್ಥ ವನಜಭವಪಿತ ಕಲ್ಕಿ ಪ್ರಸನ್ನ ಶ್ರೀನಿವಾಸ ಶರಣು ಮಾಂಪಾಹಿ 19 -ಇತಿ ಕಲ್ಕ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ನವಗ್ರಹ ಸ್ತುತಿಗಳು ಶ್ರೀ ಸೂರ್ಯದೇವ ಸ್ತೋತ್ರ 88 ಆ ನಮಿಸುವೆ ಘೃಣಿ ಆದಿತ್ಯ ಸೂರ್ಯ ಸೂರಿ ಪ್ರಾಪ್ಯ ಪ ಅಮಿತ ಸ್ವತೇಜದಿ ಝಗಿ ಝಗಿಸುತಿ ಜಗತ್ ಜನ್ಮಾದಿಕರ್ತ ಚೇಷ್ಟಕ ಸ್ಫೂರ್ತಿದಾತ ಅಮಯ ದೂರ ಸುಗುಣ ಗಣಾರ್ಣವ ದೇವ ಶ್ರೀಮನ್ನಾರಾಯಣ ಧ್ಯೇಯ ಧ್ಯಾನಿಪೆ ನಿನ್ನ 1 ಮಕರ ಕುಂಡಲವಾನ್ ಕಿರೀಟಿಯೆ ಅರಿದರ ಧಾರಿ ಅವ್ಯಯಾನಂದ ಚಿತ್ ಚಾಮೀಕರ ವಪು ಶ್ರೀಯುಕ್ ಪದ್ಮದಿ ಇರುತಿಹಿಯೋ ಅರ್ಕಸ್ಥ 2 ಹಿಂಕಾರ ಪ್ರಸ್ತಾವ ಆದಿ ನಮೋ ನಮೋ ಉದ್ಗೀಥ ಪ್ರತಿಹಾರೋಪದ್ರವ ನಿಧನ ಉತ್ಕøಷ್ಟ ಸಾಮ ಪ್ರತಿಪಾದ್ಯ ನಾರಾಯಣ ಋಕ್ ಸಾಮ ವೇದದಿಂ ಸ್ತುತ್ಯ ವಾಗ್ವಾಯ್ವಿಂದ 3 ಭೂತೇಂದ್ರಿಯ ಕರ್ಣಾದಿಗಳಿಗೆ ದೂರ ದ್ಯುಸ್ಥದಿವಃಪರ ತ್ರಿಪಾದ ಜ್ಯೋತಿರ್ಮಯನು ಹಿತಕರನಿವ ಅರ್ಕನೋಳ್ ಜ್ವಲಿಸಿ ಅರ್ಕಗೆ ಒದಗಿಸಿಹ ತನ್ನ ಸೂರ್ಯನೆಂಬೋ ನಾಮ 4 ಸೂರ್ಯದೇವನೆ ದಯಾವಂತನೆ ನಮೋ ನಮೋ ಕಶ್ಯಪಾತ್ಮಜ ನೀ ಎನ್ ಪಾಪ ಪರಿಹರಿಸೋ ಮಹಾದ್ಯುತಿ ತಮೋಘ್ನನೇ ಜ್ಞಾನಾಯುರ್ದಾತ ನೀ ಶ್ರೀಯಃಪತಿ ನಾರಾಯಣನ್ನೊಲಿಸೋ ಎನಗೆ 5 ಸೂರ್ಯ ನೀ ಅಹರಹ ಎನ್ನಸರ್ವಪೀಡೆಗಳ್ ಕಳೆದು ಬೃಹತಿಸಾಸಿರ ಸ್ವರ ವ್ಯಂಜನಾಕ್ಷರ ವಾಚ್ಯ ಶ್ರೀಹರಿಯ ಭಜಿಸಲು ಶತಾಯುಸ್ ಬಲವೀಯೋ 6 ಶರಣು ಪದ್ಮಜಪಿತ ಪ್ರಸನ್ನ ಶ್ರೀನಿವಾಸ ಸೂರ್ಯ ನಿನ್ನ ಪ್ರೀತಿಪಾತ್ರ ಸೂರ್ಯನೊಳಿದ್ದು ನೀ ಜಗತ್ಸರ್ವ ಕಾಯುತ್ತಿ ಕರುಣದಿ ಎನ್ನನು ಎನ್ನವರನು ಕಾಯೋ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರೀತಿಯ ಮಾಡನೀತಿಯ ಶುಕವಾಣಿ ಪ್ರೀತಿಯ ಮಾಡ ಚಾತುರ್ಯದಲಿಮುದ್ದು ಮಾತಿನ ಮಾಧುರಿ ಪ್ರೀತಿಯ ಮಾಡು ಪ. ದೇವಿ ರುಕ್ಮಿಣಿ ನಮ್ಮಮ್ಮ ದೇವಕಿ ಸರಿಯಮ್ಮನಾಕುಂದು ನಿನ್ನ ನುಡಿದೆನನಾಕುಂದು ನಿನ್ನ ನುಡಿದ ಅಪರಾಧವ ಭಾವದೊಳಿಡದೆ ಕರುಣಿಸು ಪ್ರೀತಿಯಮಾಡು1 ಅತ್ತಿಗೆ ನೀನಮ್ಮ ಹೆತ್ತತಾಯಿ ಸರಿಯಮ್ಮಅತ್ಯಂತ ನಿನಗೆ ನುಡಿದೆವ ಅತ್ಯಂತ ನಿನಗೆ ನುಡಿದ ಅಪರಾಧವಚಿತ್ತದೊಳಿಡದೆ ಕರುಣಿಸು ಪ್ರೀತಿಯಮಾಡು2 ವಿಗಡ ಬುದ್ಧಿಯಿಂದ ನುಡಿದೆವವಿಗಡ ಬುದ್ಧಿಯಿಂದ ನುಡಿದೆವ ಅತ್ತಿಗೆ ನಿನ್ನಮಗಳು ಜಾನ್ಹವಿಯ ಸರಿಯಮ್ಮ ಪ್ರೀತಿಯ ಮಾಡು3 ಸತ್ಯಭಾವೆ ನಮ್ಮ ಅತಿ ವಿನೋದವಮತ್ತೊಂದು ನೀನು ತಿಳಿಯದೆ ಮತ್ತೊಂದು ನೀನು ತಿಳಿಯದೆ ಅತ್ಯಂತ ಎನಮ್ಯಾಲೆ ಕರುಣವ ಇರಲೆಮ್ಮ ಪ್ರೀತಿಯ ಮಾಡು4 ಸರಸಿಜಮುಖಿ ನಮ್ಮ ಹರುಷ ವಿನೋದವ ವಿರಸ ಮಾಡದಲೆಮನದೊಳು ವಿರಸ ಮಾಡದಲೆ ಮನದೊಳು ರಾಮೇಶನ ಅರಸಿ ನೀನಮಗೆ ದಯಮಾಡು ಪ್ರೀತಿಯ ಮಾಡು5
--------------
ಗಲಗಲಿಅವ್ವನವರು
ಫಾಲಲಿಪಿ ಪರಿಹರಿಸಿಕೊಂಬರುಂಟೆ |ಕಾಲನಾಮಕ ನಿನ್ನ ಕ್ಲಪ್ತದಲಿ ಬರೆದಿದ್ದ ಪ ಸಾಲು ಸ್ಫಟಿಕದ ರತ್ನಮಯವಾದ ಮನೆ ಇರಲು ವಿಶಾಲ ಪರ್ನದ್ದಾದರಿರಬಾರದೆ ||ಆಳುಗಳು ಬಹುಮಂದಿ ಇದ್ದವಗೆನುಡಿದ ಮಾತಾಲಿಸುವ ನರನೊಬ್ಬನಿರಬಾರದೆ 1 ಜ್ಞಾನದಲಿ ಹರಿರೂಪ ಬಹಿರಂತರದಿ ನೋಳ್ಪಆನಂದದಲಿ ಸತತ ಇದ್ದವಗೆ ||ಧ್ಯಾನದಲಿ ಕ್ಷಣಮಪಿ ಕರುಹು ಕಾಣಿಸಿಕೊಂಬ ದೀನ ಮನವಾದರೂ ಇರಬಾರದೆ 2 ಕೋಟಿ ದ್ರವ್ಯವು ಇದ್ದು ನೀಟ ಕವಡಿ ಇಲ್ಲದೆಕಾಟ ಕಾಣದೆ ಸೊರಗಿ ಮರುಗಿದಂತೆ ||ಹಾಟಕಾಂಬರಧಾರ ಗುರು ವಿಜಯವಿಠ್ಠಲರೇಯದಾಟುವರಿಲ್ಲ ನಿನ್ನ ಪ್ರಬಲ ಶಾಸನವ 3
--------------
ಗುರುವಿಜಯವಿಠ್ಠಲರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಣ್ಣ ಬಣ್ಣದ ಬುಗುರಿಯಾಟವ ಅಡುತಿಯರುವೆಯಾ ರಂಗ ಗಿಣ್ಣು ಗಿಣ್ಣಲಿ ಕನಿತುನಿಂತಿಹ ಹಣ್ಣನಿದನು ಕಾಣೆಯಾ ಪ ಮಮತೆ ಇಲ್ಲವೆ ಹೇದೇವ ಮಾತಿಗೆ ಮರುಳುಹೋಗಿ ಅ.ಪ ನಿನ್ನ ಊರಲಿ ನೀನು ಕುಳಿತರೆ ಭಾಗ್ಯವೆನಗದು ಆಯಿತೆ ನನ್ನ ಇಳಿಯಿಸಿ ಅರಿವು ಕೊಟ್ಟು ನಡೆಯ ಕಲಿಸಿದೆ ಏತಕೆ ಇನ್ನು ಬರದೇ ಇರುವೆಯಾ ನನ್ನಲ್ಲಿ ಸಹನೆ ಇಲ್ಲವೆಂದು ಅರಿಯಲಾರೆಯಾ ದೇವನೇ 1 ನೆನಪು ಕೊಟ್ಟಿಹೆ ರಂಗ ಆಸೆ ಮತಿಯು ದಾರಿ ನೋಡಿದೆ ದೂರ ದಡವನು ದಾಟಿಸೈ ನಾನು ಅದರೊಳು ನಿಂತಿಹೆ ಮಾಧವ ಮತ್ತೆಯಾರನು ಕೇಳಲಿ 2
--------------
ಸಂಪತ್ತಯ್ಯಂಗಾರ್
ಬಣ್ಣಿಸಲಳವೆ ನಾನು ಬಣ್ಣಿಸಲಳವೆ ನಾ ಬಹುವೇಷವುಳ್ಳ ಲಾ-ವಣ್ಯದ ಕಣಿಯಾದ ಉಡುಪಿನ ಕೃಷ್ಣನ ಪ. ಕರಗುವ ಮಿಸುನಿಯ ಕಾಂತಿಯಿಂ ಗರುಡನಗರಿಗಳ ಇರವ ಧಿಕ್ಕರಿಪ ಪೀತಾಂಬರಎರಡು ಪಾಶ್ರ್ವಗಳಲ್ಲಿ ಶಿರದ ಕಿರೀಟವುಕೊರಳಹಾರದ ಜೋಡು ಇರಲು ಈ ಪರಿಯಿಂದಮರೆಯಲಬ್ಜದ ಕಂಕಣ ಭೂಮಿಗೈದುವವರ ಸೂರ್ಯನಾರಾಯಣ ಬಾಹುಗಳುಳ್ಳಮಕರಕುಂಡಲ ಬಾಹುಪುರಿಗಳಿಂದೆಸೆವನ1 ಪಾದ ಕಂಸೆಯಗಲಿ ಇಂದ್ರ ನೀಲದದಾಳ ದಿಕ್ಕುಗಳನೆಬೆಳಗುತಲೆ ಬಹಳ ಲೀಲೆಯ ತೋರ್ಪಖಳರೆದೆ ಶೂಲನ ಚೆಲುವ ಗೋಪಾಲನ 2 ಜಾತಿಮುತ್ತಿನ ಚುಂಗು ಖ್ಯಾತಿಯಿಂದೊಪ್ಪುವಚಾತುರ್ಯದಿ ವಾರೆಗೊಂಡೆಯ ಕಟ್ಟಿಆ ಜೂತದಿಂದಲಿ ಅತಿ ಮೈಜೋಡು ತೊಟ್ಟು ಈ-ರೀತಿಯಿಂದೆಡಗೈಯ ವಂಕಿ ಮಧ್ಯದೊಳಾನುಚ್ಚುತ ಖಡ್ಗದಿಂದೊಪ್ಪುವ ಭೂತಳದಿವಿಖ್ಯಾತಿ ಪಡೆದು ಮೆರೆವÀ ದುಷ್ಟಮೃಗವಘಾತಿಸಿ ಬಿಡುವ ಕಿರಾತÀ ಸ್ವರೂಪನ್ನ 3 ಮಿಸುನಿಯ ಮುಂಡಾಸು ಪೊಸರವಿಯಂತಿರೆಶಶಿಯ ಪ್ರಭೆಯಂತೆ ಪಸರಿಸಲಂಗಿಯುಹಸನಾದ ನವರಂಜು ವಶದಲ್ಲಿ ತುಂಬಿರೆಕುಸುಮನಂದದಿ ಧೋತ್ರವ ಉಟ್ಟುವೈರ್ವಸನವ ಸುತ್ತಿ ಗಾತ್ರದಿ ಕುಲಾಯಿ ಒಪ್ಪಿನಸುನಗೆಯಿಂದೊಪ್ಪುವ ನವವಿಪ್ರವೇಷನ್ನ 4 ಕಡೆದ ಬೊಗರಿಯಂತೆ ಕಡೆದು ಮಾಡಿದ ಬಾಹುದೃಢವಾದ ಕುಚಗಳು ದುರಿತದುನ್ನತವಾದಬಡನಡು ಬಳುಕಲು ಕಡೆಗಣ್ಣ ನೋಟದಿಮೃಡ ಮುಖ್ಯರ್ಮೋಹಿಸಿ ಒಡಲ ಮಾರದಿರಲುಮುಡಿಯ ನೋಡುತ ನವಿಲು ನಾಚಿ ಮೊಗಗೊಡದಡವಿಯ ಸೇರಲು ಭೂಷಣಗಳುಜಡಿವುತ್ತ ಜಗದೊಳು ಕಡುಮೋಹಿನೀ ಬಲು 5 ಕರ್ಮ ಕಿಂಕರರೊಳಗಾಗಿಟೊಂಕದಿ ಕೈಯಿಟ್ಟು ಶಂಕಿಸಲು ತನ್ನಂಘ್ರಿಪಂಕಜಂಗಳ ಬೇಡಿ ಪುರುಷಾರ್ಥ ಪಡೆಯಿರೊಶಂಕೆ ಬೇಡವೊ ಎಂದು ಲೆಂಕರಿಗೆ ಸೂಸಿಪ್ಪ-ಸಂಖ್ಯಾತ ಕರಯುಗಳದಿಂದೊಪ್ಪುವಶಂಖ ಚಕ್ರ ಆಯುಧಂಗಳ ಪಿಡಿದು ಸರ್ವಾಲಂಕಾರದಿಂ ವೆಂಕಟೇಶನ ರೂಪ6 ಈ ವಿಧ ತಪ್ಪದೆ ಏಳು ವಾರಗಳಲ್ಲಿಪಾವನಮತ ಗುರು ಬಳಿಗೆ ಬಂದವರೆಲ್ಲಶ್ರೀವರ ಹಯವದನನ ಸೇವೆಗೊಳ್ಳಿರೋ ನಿತ್ಯಆವಾವ ನಾಡಿನ ಆಶ್ರಿತ ಜನರನ್ನುಭಾವಶುದ್ಧಗಳರಿತು ಕೋರಿಕೆಗಳಈವ ಭಕ್ತರಿಗೊಲಿದು ಪಾಷಂಡಾದಿಶೈವರ ತರಿದ ಸದ್ವೈಷ್ಣವರ ದೇವÀನ್ನ7
--------------
ವಾದಿರಾಜ