ಒಟ್ಟು 4969 ಕಡೆಗಳಲ್ಲಿ , 128 ದಾಸರು , 3500 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಏಳಯ್ಯ ಸ್ವಾಮಿ ಏಳಯ್ಯ ಪ ಏಳು ಇಂದ್ರಾದಿ ಸುರಾಳಿಗಳೆಲ್ಲ ನಿ- ನ್ನೂಳಿಗ ಬಯಸಿ ಕಾದಿರುವರೊ ಕೃಷ್ಣಾ ಅ.ಪ ವಕ್ಕಿತನಯ ಬೇಗ ಏಳಯ್ಯ ಜಾಕೃತಿ ತೋರುವೆ ಏಳಯ್ಯ 1 ಮುರಿದ ಮಹಾತ್ಮನೆ ಏಳಯ್ಯ ತರುಣಿಯರೊಡನೆ ರಾಸಕ್ರೀಡೆಯಾಡಿದ ಪರಮ ರಸಿಕನೀನು ಏಳಯ್ಯ 2 ಬಲ್ಲಿದನು ನೀನಂತೇಳಯ್ಯ ನಿಲ್ಲಿಸುವರೆ ಬೇಗ ಏಳಯ್ಯ 3 ದೇವಿ ಕೈ ಪಿಡಿಯಲು ಏಳಯ್ಯ ಭಾವಜಪಿತ ಕೃಷ್ಣ ಏಳಯ್ಯ 4 ನರಗೆ ಸಾರಥಿಯಾಗಿ ಜಯವ ಕೊಡಿಸಿ ಯುಧಿ | ಷ್ಠಿರಗೆ ಪಟ್ಟವಗಟ್ಟು ಏಳಯ್ಯ ನರನಂತೆ ನಟಿಸಿ ದಾಸರ ಪರಿಪಾಲಿಪ | ಗುರುರಾಮ ವಿಠಲನೆ ಏಳಯ್ಯ 5
--------------
ಗುರುರಾಮವಿಠಲ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಏಳೆನುತ ಭಾನು ಬರುತಿಹ |ಹೇಳುವರ್ಯಾರಿಲ್ಲ ನಿಮಗೆ ಜ್ಞಾನವ ಪ ಇರುಳೆಲ್ಲ ನೀವಿನ್ನು ವಿಷಯಕೆ ಮರುಳಾಗಿ |ಹರಟಿಯೊಳಗೆ ಸೊರಗುತಿಹರೀ ||ತರಳಾಕ್ಷಿಯರ ಅಂಗಸಂಗಕೆ ಬೆಂಡಾಗಿ |ಬರದ ಆಯುಷ್ಯ ಬರಿದೇ ಕಳೆವಿರೀ 1 ಮಾಡಲಿಲ್ಲವು ಧ್ಯಾನ ಯೋಗ ಜಪ ತಪ |ನೀಡಲಿಲ್ಲವು ದಾನ ಧರ್ಮವ ||ನೋಡಲಿಲ್ಲವು ಸಾಧುಸಂತರ ನಡತೆಯ |ಕೇಡ ಬಂದಿತು ಮುಂದೆ ನೋಡಲು 2 ತಂದೆ ಭವತಾರಕನೆ ಹಿಂದಾದುದಾಗಲಿ |ಮುಂದಾರ ನೀವಿನ್ನು ಒಂದು ನಿಮಿಷವು |ಗೊಂದಲ ಬಿಟ್ಟು ಅರಿತು ಕೊಂಡು | ಹೊಂದಿರಿ ಪೂರ್ಣ ಆನಂದವನೆಂದು 3
--------------
ಭಾವತರಕರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳೇಳು ಬಾಲಕನೆ ಅಜ್ಞಾನನಿದ್ರೆಯಿಂ ಏಳು ತಿಳಿವಿಕೆ ಎಂಬ ಎಚ್ಚರವ ಹೊಂದುತಲಿ ಪ ಹಾಳು ಮಾಯೆಯು ಎಂಬ ಮೇಲುಮುಸುಕನು ತೆಗೆದು ಕೀಳು ಬಾಳುವೆಯೆಂಬ ಹಾಸಿಗೆಯ ಸುತ್ತುತಲಿ ಕೇಳು ಕಿವಿದೆರದೇಕಚಿತ್ತದಿಂ ಶ್ರುತಿಯೆಂಬ ಕೋಳಿ ಕೂಗುತಲಿಹುದು `ತತ್ವಮಸಿ' ಎಂದು 1 ಬಿತ್ತರಿಸಿಹುದು ಮುಮುಕ್ಷುತ್ವ ಮುಂಬೆಳಗಾಗೆ ಚಿತ್ತವೆನ್ನುವ ಕಮಲವರಳಿಹುದು ನೋಡೀಗ ಸುತ್ತಲಡಿಗಿದ ಸುವಾಸನೆಯ ಮೂಸುತಲಿ ನೀ ಉತ್ತು ಮೋತ್ತುಮ ನಿಜಾನಂದವನು ಪಡೆವುದಕೆ 2 ಜ್ಞಾನನಿಂದಕರೆಂಬ ಗೂಗೆಗಳು ಅಡಗಿದವು ಕಾಣದಾದವು ಕುತರ್ಕಗಳೆಂಬ ತಾರೆಗಳು ಸ್ವಾನುಭವಸುಜ್ಞಾನಭಾನುವುದಯಿಸುತಿಹನು ಜ್ಞಾನಿಶಂಕರನ ಸದ್ಬೋಧವನೆ ಸ್ಮರಿಸುತಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಐದನೆ ವರ್ಷದ ಅಂತ್ಯ ಭಾಗದೊಳಗೆ ಐದುವೊ ಮಾರ್ಗವನು ನಿಶ್ಚಯಿಸಿದೆ ಪ. ಆದಿಮಾಸದ ಶುದ್ಧನವಮಿ ಸ್ಥಿರವಾರದಲಿ ಮೋದಗುರುಗಳು ಬೋಧಿಸೆ | ದಯದಿ ಅ.ಪ. ಐದನೆ ತಿಂಗಳಲಿ ಅಂಕುರುವು ಪಲ್ಲೈಸಿ ಐದು ಇಂದ್ರಿಯವು ಕಲೆತು ಕಾಯ ಐದಲಾರದು ಜೊತೆಗೆ ಕರ್ಮ ಒಂದು ಈ ದಿವ್ಯ ಮತಿಯೆನಗೆ ಸಾದರದಿ ಪುಟ್ಟಲು ಮೋದವಾಗುತ ಮನದೊಳು ಆದಿದೈವನ ಕರುಣವಾದ ಬಳಿಕಿನ್ನೇನು ಪಾದಪದ್ಮವ ತೋರೆಲೊ | ಸ್ವಾಮಿ 1 ಐದೆರಡು ಒಂದು ಇಂದ್ರಿಯಗಳನೆ ಬಂಧಿಸಿ ಐದಿಸಿ ಮೂಲಸ್ಥಳಕೆ ಐದು ರೂಪಾತ್ಮಕನ ಆದರದಿ ಪೂಜಿಸುತ ಐದೊಂದು ದೂರ ತ್ಯಜಿಸಿ ಐದು ನಾಲ್ಕು ತತ್ವದಧಿಪತಿಗಳನು ಆದರದಿ ಧ್ಯಾನಮಾಡಿ ಐದು ಮೂರು ದಳದಿ ಆದಿತ್ಯನಂತಿರುವ ಶ್ರೀಧರನ ನುತಿಸಿ ನುತಿಸಿ | ಸ್ತುತಿಸಿ 2 ಐದು ಭೇದಗಳ ಮತ ಸ್ಥಾಪಕರ ಕರುಣದಲಿ ಐದು ಮೂರನೆ ಖಂಡಿಸಿ ಐದೆರಡು ರೂಪಕನ ಆದರದಿ ಸ್ತುತಿಸುತ್ತ ಭೇದಿಸಿ ಹೃದಯಗ್ರಂಥಿ ಶ್ರೀದ ಶ್ರೀಗೋಪಾಲಕೃಷ್ಣವಿಠ್ಠಲನ ಪದ ಆದರದಿ ನಂಬಿ ಸ್ತುತಿಸಿ ಈ ದಾರಿ ಕಾಣಲು ಇದಕೆ ಕಾರಣದಿವ್ಯ ಮೋದ ಶ್ರೀಗುರು ಕರುಣವೋ | ದಯವೋ 3
--------------
ಅಂಬಾಬಾಯಿ
ಒಕ್ಕಲ ಮಾಡೆನ್ನ ಮುಕ್ಕುಂದ ತಂದೆ ಒಕ್ಕಲ ಮಾಡೆನ್ನ ಪ ಒಕ್ಕಲ ಮಾಡೆನ್ನ ದಕ್ಕಿಸಿ ಭವದೊಳು ಅಕ್ಕರದಲಿ ನಿಮ್ಮ ಮಿಕ್ಕ ಪ್ರಸಾದ ನೀಡಿ ಅ.ಪ ಆಸೆ ನೀಗಿಸೆನ್ನಭವದ ಪಾಶ ತರಿಯೊ ಮುನ್ನ ಪಾದ ದಾಸಾನುದಾಸರ ವಾಸದಿರಿಸಿ ಎನ್ನ ಪೋಷಿಸು ದಯದಿಂ 1 ಸೊಕ್ಕು ಮುರಿದು ಎನ್ನ ನಿಮ್ಮಯ ಪಕ್ಕದೆಳಕೊ ಎನ್ನ ತಿಕ್ಕಿ ಮುಕ್ಕುವ ಘನ ಮಕ್ಕಮಾರಿ ಸತಿಯ ರಕ್ಕರ್ಹಾರಿಸಿ ನಜರಿಕ್ಕೆ ಸಲಹುಜೀಯ 2 ಜನನ ಮರಣ ಬಿಡಿಸೊ ಎನ್ನಯ ಮನವ ನಿನ್ನೊಳಿರಿಸೊ ವನರುಹ ಬ್ರಹ್ಮಾಂಡ ಜನನಿ ಜನಕನಾದ ವನಜಾಕ್ಷ ಶ್ರೀರಾಮ ಘನಮುಕ್ತಿ ಪಾಲಿಸಿ 3
--------------
ರಾಮದಾಸರು
ಒಡಲಿಗೊಡೆಯನೆ | ಬೇಡಿಕೊಂಬೇಮಡದಿ ಮಕ್ಕಳ ಮೋಹ | ನೀನಾಗಿ ಬಿಡಿಸೋ ಪ ಚತ್ವಾರಿಂಶತ್ ಸಪ್ತ | ವರುಷ ಸಂದವು ಇಂದುಚತುರಾಸ್ಯ ಪಿತ ನೀನೆ | ಸಲಹೋ ಎನ್ನಚತುರ ಮೂತ್ರ್ಯಾತ್ಮಕನು | ಹರಿ ನಿನ್ನ ನೆನೆಯದಲೆಚತುರ ನಾರಿಯ ರೂಪ | ನೆನೆಸುತ್ತಲಿರುವೇ 1 ತತುವಾಭಿಮಾನಿ ದೇ | ವತೆಗಳೆಲ್ಲರು ಎನಗೆಮತಿ ಭ್ರಾಂತಿ ಬಡಿಸುವರೊ | ಹೃಷಿಕೇಶನೇ |ವಿತತ ಮೂರುತಿ ನಿನ್ನ | ಸತತ ನೆನಸೂವಂಥಮತಿಯನಿತ್ತಾದರಿಸೊ | ಕೃತಿರಮಣ ದೇವ 2 ಸದನ ಭವ ಭಂಗ 3
--------------
ಗುರುಗೋವಿಂದವಿಠಲರು
ಒಡಿಯ ನೀನಹುದೊ ಎನ್ನ ಬಡವನಾಧಾರಿ ನೀನು ಧ್ರುವ ಪೊಡವಿಯೊಳಗೆ ಎನ್ನ ಬಿಣದೆ ಸಲಹುತಿಹ್ಯ ಅಡಿಗಡಿಗೆ ತಂದು ನೀ ಪಡಿಯ ನಡೆಸುವ ಸ್ವಾಮಿ 1 ಪಿಡಿದು ಎನ್ನ ನೀ ಕೈಯ ಕಡೆಗಾಣಿಸುವಿ ಪೂರ್ಣ ಬಿಡಿಸಿ ಧಾವತಿಯಿಂದ ಕೊಡುವಿ ತಂದು ನಿಧಾನ 2 ಕೊಂಡಾಡಲಳವೆ ನಿನ್ನ ಮಂಡಲದೊಳು ಕೀರ್ತಿ ಪಿಂಡ ಬ್ರಹ್ಮಾಂಡ ಪರಿಪೂರ್ಣವಾಗಿಹ ದೇಹ 3 ಕೊಳದೆ ಸೇವೆಯ ನಿನ್ನ ಅಳೆದು ನಡೆಸುವ ಪಡೆಯ ಪಾಲಕನಹುದೊ ಎನ್ನ ಮೂಲೋಕದೊಡಿಯನೆ 4 ನಿತ್ಯನಿಜವಾಗ್ಯಾಗ ಹೊತ್ತು ನಡೆಸುವ ಪಡೆಯ ಭೃತ್ಯ ನಿಜ ದಾಸಮಹಿಪತಿಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು