ಒಟ್ಟು 1564 ಕಡೆಗಳಲ್ಲಿ , 99 ದಾಸರು , 1235 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸಯ್ಯ ಪವನ ಕುವರನೇ | ಪಾವನ್ನ ಮೂರ್ತಿಶೀಲರೂಪಿ ಶೈಲ ಸದನನೇ ಪ ಬಾಲ ಗೋಪಾಲ ಗುಣವ | ತೈಲಧಾರೆಯಂತೆ ಮನದಿಕಾಲಕಾಲ ಸ್ಮರಿಪ ಸುಖ | ಕೈಲಾಸವಾಸ ಕೊಟ್ಟು ಕಾಯೊಅ.ಪ. ಪಂಪಾಪುರ ನಿವಾಸ ಈಶನೇ ಜೈಗೀಷ ಔರ್ವಪೊಂಪೆ ಎಂಬ ಗಿರಿಜೆ ರಮಣನೇ ||ಲಂಪಟಾವ ಬಿಡಿಸಿ ಜ್ಞಾನ | ಸಂಪದಾವನಿತ್ತು ಸಲಹೋನೋಂಪಿ ಗೈವೆ ನಿನ್ನ ಪದದಿ | ಇಂಪನೀಯೊ ಹರಿಯ ಪದದಿ 1 ಕೃಪಣ ಕಲುಷ ಭವ ಸಮುದ್ರದಿಂದಮತ್ತೆ ಪುಟ್ಟಿ ಭಯವು ಕಾಣೆ | ಚಿತ್ತದಲ್ಲಿ ಹರಿಯು ಇರಲು 2 ತೈಜಸ ತಾಮಸಾ | ತ್ರಯವು ಅಹಂಸಾಕಾರಿ ಶುಕನೆ ದುರ್ವಾಸಾ |ಲೌಕಿಕಗಳೆಲ್ಲವು ವೈ | ದೀಕ ವೆನಿಸೊ ತತ್ಪುರೂಷಕಾಕು ಸಂಗ ಕೆಡಿಸೊ ಹರ ವಿ | ಶೋಕ ಹರಿಯ ತೋರಿ ಬೇಗ3 ನಿಕರ ವಾಯು ನಂದನಾ ||ವಾಸ ವಾದ್ಯಮರನುತ ಸ | ದಾಶಿವನೆ ಬ್ರಹ್ಮ ತನಯಮೀಸಲೆನಿಸೊ ಮನವ ಹರಿಯ | ಆಶೆಯಲ್ಲಿ ನಿರುತ ಎನಗೆ 4 ಮಂಗಳಾಂಗ ಗಂಗೆ ಧಾರಕಾ | ಊಧ್ವ5ಟನೆಅಂಗಜಹ ಮೃಕಂಡ ಪಾಲಕಾ ||ರಂಗ ಗುರು ಗೋವಿಂದ ವಿಠಲ | ಸಂಗಿ ಶಿವ£5Éೀಡ್ವೆ ಭಕ್ತಿಸಂಗವಿತ್ತು 5ಗೆ ವಿಷಯ | ಸಂಗ ಬಿಡಿಸಿ ಕಾಯೊ ರುದ್ರ 5
--------------
ಗುರುಗೋವಿಂದವಿಠಲರು
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ- ಲೋಲಾನಂತ ಗುಣಾಲಯನೇ ಪ. ನೀಲಾಭ್ರದಾಭ ಕಾಲನಿಯಾಮಕ ಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ. ಉತ್ತಮ ಗುಣಗಳು ಬತ್ತಿಪೋದುವೈ ದೈತ್ಯರ ಗುಣವು ಪ್ರವರ್ಧಿಪುದು ಚಿತ್ತಸಾಕ್ಷಿ ತವ ಭಕ್ತಿಕಥಾಮೃತ ನಿತ್ಯ ಸವಿಸುತ್ತ ಹಿಂಬಾಲಿಸೆ1 ಭಾಗವತ ಜನರ ಯೋಗಕ್ಷೇಮ ಸಂ ಯೋಗೋದ್ಯೋಗಿ ನೀನಾಗಿರಲು ಕೂಗುವಾಸುರರ ಕೂಡೆ ಕೂಡಿಸದೆ ಭೋಗಿಶಯನ ಭವರೋಗಭೇಷಜನೆ2 ಪಾವನಕರ ನಾಮಾವಳಿ ವರ್ಣಿಪ ಸೇವಕ ಜನರ ಸಂಭಾವಿಸುವ ಕೇವಳಾನಂದ ಠೀವಿಯ ಪಾಲಿಸು ಶ್ರೀವಾಸುದೇವ ದೇವಕೀತನಯ]3 ಶುದ್ಧತಮೋಗುಣಬದ್ಧ ದೈತ್ಯ ಪ್ರ- ಸಿದ್ಧರಾಗಿಹರು ಮದ್ಯಪರು ಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ- ದುದ್ಧರಿಸೈ ಗುರು ಮಧ್ವವಲ್ಲಭನೆ4 ಕೇಶವಾಚ್ಯುತ ಪರೇಶ ಹೃದ್ಗುಹನಿ- ವಾಸ ವಾಸವಾದ್ಯಮರನುತ ಶ್ರೀಶ ಶ್ರೀವೆಂಕಟೇಶ ಭಕ್ತಜನ ರಾಶ್ರಯಸ್ಥಿತ ದಿನೇಶ ಶತಪ್ರಭ 5 ಮಂಗಲ ಜಗದೋತ್ತುಂಗರಂಗ ಮಾ ತಂಗವರದ ನೀಲಾಂಗ ನಮೋ ಅಂಗಜಪಿತ ಲಕ್ಷ್ಮೀನಾರಾಯಣ ವಿಹಂಗ ತುರಂಗನೆ 6
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಶ್ರೀಹರಿಯೆ ಯದುಭೂಮಿಪತಿಯೆ ಪ ಬಾಲಾರ್ಕ ಸಮಮುಖ ಲೋಲ ಮುರಳೀಧರ ಅ.ಪ. ನಂದ ನಂದನ ದಿವ್ಯ ಸುಂದರ ರೂಪನೆ ಬಂಧುರಾಲಕ ವರ ಮಂದಹಾಸನೆ 1 ಗೋಪ ಸುಂದರೀಗಣ ದೀಪವಿರಾಜಿತ ತಾಪಿಂಛ ಪಲ್ಲವ ನೂಪುರ ಶೋಭಿತ2 ಕಾಳೀಯ ಮರ್ದನ ನೀಲಾಂಬುದ ಪ್ರಭ ನಾಳೀಕಾನನ ಚಿತ ಲೋಲಾಕ್ಷಿ ಚಿತ್ತನೆ3 ಭವ ಭಂಗ ಮಾನುಷ ವೇಷ ಶೃಂಗಾರ ಶೋಭಿತ ಭೃಂಗಾಲಕಾರ್ಚಿತ 4 ಧೇನುನಗರ ದೊರೆ ಸಾನುರಾಗದಿ ಪೊರೆ ಗಾನ ವಿನೋದ ಹರೆ ಭಾನುಸನ್ನಿಭ ಶೌರೆ 5
--------------
ಬೇಟೆರಾಯ ದೀಕ್ಷಿತರು
ಪಾಲಿಸೆನ್ನ ಶ್ರೀಲೋಲ ಕೃಪಾಳು ಪ ಬಾಲಕನುಕ್ತಿಯ ಲಾಲಿಸಿ ಕೇಳೀ ಅ.ಪ ಕಾರಾಗಾರ ಶರೀರದಾಯಗಳ ದಾರಾ[ಧಿ]ಪತ್ಯದ ದಾರಿಯನಿ[ತು]ಗಳ1 ಆರುಮಂದಿ ಬಲುಶೂರರು ಖಳರು ಚೋರರು ಚಿತ್ತವ ಹಾರಿಸುತಿಹರು 2 ತನುಸಂಬಂಧದ ಜನರರ್ಥಿಯಲಿ ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ ಈ ಪರಿಮೋಚನ ಶ್ರೀಪತಿ ಹೇಗೆ 4 ಕರುಣದಿ ಶ್ರೀಪುಲಗಿರಿಯೊಳಿರುವನೆ ಶರಣರಪೊರೆಯುವ ವರದ ವಿಠಲನೆ 5
--------------
ವೆಂಕಟವರದಾರ್ಯರು
ಪಾಲಿಸೆನ್ನ ಶ್ರೀಲೋಲ ಕೃಪಾಳೋ ಬಾಲಕನುಕ್ತಿಯ ಲಾಲಿಸಿ ಕೇಳೋ ಪ ಕಾರಾಗಾರ ಶರೀರದಯುಗಳ ದಾರಾಪತ್ಯದ ದಾರಿಯನಿಗಳ 1 ಚಿತ್ತವ ಹಾರಿಸುತಿಹರು 2 ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ | ಈ ಪರಿಮೋಚನ ಶ್ರೀಪತಿ ಹೇಗೆ 4 ಶರಣರ ಪೊರೆಯುವ ವರದವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೆನ್ನನು ಪಂಪಾಕ್ಷೇತ್ರವಾಸ ಫಾಲಲೋಚನ ಶಂಭೋ ವ್ಯೋಮಕೇಶ ಪ ನೀಲ ಲೋಹಿತ ವೀತ | ಚೈಲ ಭೂಷಿತ ಭಸಿತ ಕಾಲಾರಿ ಶಿವ ದ್ರೌಣಿ | ಶೂಲ ಪಾಣಿ || ಕಾಲ ಕೂಟವ ಮೆದ್ದು ಕೊಂಡ ಮೇತೌಷಧವನಿತ್ತು 1 ವ್ಯಾಧರೂಪದಿ ರಣದಿ ಕಾದು ಪಾರ್ಥಗೆ ಸೋತು ನೀದಯದಿ ದಿವ್ಯಾಸ್ತ್ರ ಕರುಣಿಸಿದೆಯೋ ಮೇದಿನೀಶಗೆ ಶಾಸ್ತ್ರ ಬೋಧಿಸಿದ ಮುನಿವರ್ಯ ವೇದನಂದನ ನಿನ್ನ ಪಾದಕ್ಕೆ ನಮಿಸುವೆನು 2 ಕಾಮಾರಿ ಸುಪವಿತ್ರ | ಸೋಮಾರ್ಕಶಿಖಿ ನೇತ್ರ ಶಾಮಸುಂದರವಿಠಲ ಸ್ವಾಮಿ ಮಿತ್ರ ಭೀಮ ಪಾವನಗಾತ್ರ ಪ್ರೇಮಾಬ್ಧಿ ಸುಚರಿತ್ರ ಕಳತ್ರ | ಮಹಿಮ ಚಿತ್ರಾ 3
--------------
ಶಾಮಸುಂದರ ವಿಠಲ
ಪಾಲಿಸೊ ಪತಿತಪಾವನ್ನಾ ನಿನ್ನ ಪಾಲಿಗೆ ಬಂದೆ ಮೋಹನ್ನಾ -ಆಹಾ ಪಾಲಾಬ್ಧಿಶಾಯಿ ಗೋಪಾಲರೊಡೆಯಾ ಲೋಕ ಪಾಲಕ ವಿನುತಾ ಗೋಪಾಲ ಫಾಲಾಕ್ಷನೆ ಪ ಬಂದೆನೊ ನಿನ್ನ ಹಂಬಲಿಸಿ ನಾನು ನೊಂದು ಸಂಸ್ಕøತಿಯಲ್ಲಿ ಸೂಸಿ ಈಸಿ ಮುಂದಣ ನೆಲೆಗಾಣೆ ಗುಣಿಸಿ ಏನೇ ನೆಂದು ಪೇಳಲೊ ವಿಸ್ತರಿಸಿ -ಆಹಾ ಮಂದರಧರ ನಿನ್ನ ಮಂದಿರದ ದಾಸಿ ಕಂದನು ನಾನೆಲೊ ಕಣ್ತೆರೆದು ನೋಡೊ 1 ಪೊಂದಿದೆ ಭಾರವವೊಹಿಸು ಪ್ರತಿ ಬಂಧಕವ ಪರಿಹರಿಸು ನಿನ ಗೊಂದಿಸುವೆ ಕೊಡು ಲೇಸು ಅತ್ಯಾ ನಂದದಲ್ಲಿ ಚಿತ್ತವಿಡಿಸು -ಆಹಾ ಇಂದಿರಾ ಮಂದಿರಾ ಸುಂದರ ಯೋಜನ ಗಂಧಿಯ ಬಸುರಿಲಿ ಬಂದ ಭವದೂರಾ 2 ನಿಂದ್ಯ ಕರ್ಮವು ಮಾಡಿದವನ ದೂತ ರಿಂದ ತರಿಸಿದೆ ತ್ರಿಭುವನಾ ಜಯ ವೆಂದು ಕೊಂಡಾಡಲು ಜವನಾ ಭೀತಿ ಯಿಂದ ಮಾಡಿದ ನಿನ್ನ ಸ್ತವನಾ -ಆಹ ಒಂದಾನಂತವಾಗಿ ದ್ವಂದ್ವಪಾಪಗಳಿಗೆ ನಿಂದಿರಬಲ್ಲವೆ ಸಂದರುಶನವಾಗೆ 3 ಕಂದುಕ ಪುಟಿ ಸೂತ ಬಳುಕಿ ದೈತ್ಯ ವೃಂದ ಮೋಹಕವಾಗಿ ಸಿಲುಕಿ ಸುರ ಸಂದೋಹಕೆ ನೀನೆ ಘಳಿಕಿ ನಿಜ ವೆಂದು ಮಾನವರಿಗೆ ಬಳಿಕಿ -ಆಹಾ ಎಂದೆಂದಿಗೆ ಸಿದ್ಧ್ದಾಗಂಧಮಾತುರ ಕಳೆ ಗುಂದದೆ ಮತಿ ಕೊಡು ನಂದಕಾನಂದ ಹಸ್ತನೆ 4 ಹಂದಿ ನಾಯಿ ನರಿ ರಾಸಾ ಜನ್ಮ ಬಂದರೆ ಎನಗದು ಹರುಷಾ ಬಹು ಮುಂದುಂಟು ರಹಸ್ಯಾ ಮನಸಾಪೇಕ್ಷಾ ಸಂದೇಹ ಮಾಡಿಸೊ ಶ್ರೀಶಾ -ಆಹಾ ಯೋನಿ ಸಂದೀದ ಕಾಲಕ್ಕು ಒಂದು ವಿಂಶತಿ ಮತ ಹೊಂದಿಸದಿರು ಹರಿ5 ಅಂಧಃಕಾರದೊಳೆನ್ನ ತಂದೆ ಇದ ರಿಂದ ನಿನಗೇನೊ ಮುಂದೆ ಲಾಭ ಬಂದಾದರೂ ಇಲ್ಲಾ ಇಂದೆ ಸುಖ ಸಾಂದ್ರ ಕಡಿಮೆನೊ ಮುಂದೆ -ಆಹಾ 6 ಇಂದಿರಾವರ ರಾಮ ಶಾಮಾ ರಾಮ ಚಂದ್ರ ಚತುರ ಸಾರ್ವಭೌಮಾ ದಿವ್ಯ ಸಿರಿ ಉರಪ್ರೇಮಾ ಮುಚ ಕುಂದ ಪಾಲಕ ನಿಸ್ಸೀಮಾ -ಆಹಾ ಇಂದ್ರಿಯಂಗಳು ತನು ಸಂಬಂಧದೆಡೆಗೆ ಪೋಪಾ ತೊಂದರೆ ಬಿಡಿಸೊ ಗೋವಿಂದ ಗೋವಳರಾಯಾ 7 ದುಂದುಭಿ ಭೇರಿಯ ರಭಸಾ ಮಹಾ ಬಂಧುರಾ ನೆರೆದ ವಿಶೇಷಾ ಮಂತ್ರಿ ಮಂದಿ ಪರಿವಾರ ಭೂಷಾ -ಆಹಾ ಬಿಂದು ಮಾತುರ ಇವು ಮುಂದಿನೈಶ್ವರ್ಯ ಸಿದ್ಧಾ ಕುಂದಗೊಡದೆ ಬೊಮ್ಮನಂದದಿ ಪಥತೋರಿ8 ಹಿಂದಣ ಬಲವನ್ನು ಕಾಣೆ ನಾನು ಅಂದು ನುಡಿದದ್ದು ಮಾಣೆ ಅನು ಬಂಧಗಳಿಗೆ ಕಾಮಧೇನೆ ಸತ್ಯ ಪತಿ ನೀನೆ -ಆಹಾ ನಂದನ ಮನೋಹಂಸಾ 9 ಸಂದಣೆ ತೊಲಗದೆಂಬಿಯಾ ಆಹಾ ಬಂದರೆ ಬರಲಿ ಎಂಬಿಯಾ ಇದೇ ಸಂದಲಿ ಅನುಗಾಲ ನ್ಯಾಯಾ ಅನು ಸಂಧಾನ ನಿನ್ನಲಿ ಪ್ರೀಯಾ -ಆಹಾ ಇಂಧನದೊಳು ವಾಯು ವ್ಯಾಪಿಸಿದದ ರಂದದಿ ಸರ್ವಾಂಗಾ ನಿಂದಿಹ ನಿರ್ದೋಷಾ 10 ಕಂದರ್ಪ ಕೋಟಿ ಲಾವಣ್ಯ ಅರ ವಿಂದ ನಯನ ಗುಣ ಗಣ್ಯ ದೀನ ಮಂದಾರ ಸತತ ತಾರುಣ್ಯ ಸರಿ ಬಂದಂತೆ ಮಾಡೊ ಕಾರುಣ್ಯ -ಆಹಾ ವಂದೆದೈವವು ನಾನೆಂದ ಮುರಾರಿಯ ಕೊಂದು ಬಿಸುಟಾಧೀರ ನಂದಕುಮಾರಕ11 ಇಂದ್ರಿಯಂಗಳ ಗಾತ್ರಾ ಪ್ರಾಣಾ ಸರ್ವ ಕುಂದಣ ಪುಟದಂತೆ ವರಣಾ ಕಂಬು ಕಂಧರ ಪೊಳಿಯಲಿ ವಚನಾ -ಆಹಾ ಸಂದರ್ಭವಾಗಿ ಏನೆಂದದೆ ಸಚ್ಛಾಸ್ತ್ರ ವೊಂದಿಬರಲಿ ಮುಕುಂದಾ ಮುದ್ದುರಂಗಾ12 ಅಂದಿಗೆ ಪೊಂಗೆಜ್ಜೆ ಮೆರೆಯೆ ತಂದೆ ಯೆಂದು ಕುಣಿಯೊ ಎನ್ನ ಧೊರಿಯೆ ವಾದ್ಯಾ ಧಿಂ ಧಿಂ ಧಿಮಿಕೆಂದು ಮೊರೆಯೆ ಮೇಲೆ ವೃಂದಾರಕ ಪುಷ್ಪಗರಿಯೆ -ಆಹಾ ಇಂದಿನ ಉತ್ಸಾಹ ಇಂದ್ರಾದ್ಯರು ಪೂತು ರೆಂದು ಪೊಗಳೆ ನಗೆಯಿಂದ ನೋಡುವದೆ 13 ಮಧ್ವರಮಣ ಪಾಪಿ ಭಕ್ತಿ ಜ್ಞಾನ ಸದ್ಧರ್ಮ ವೈರಾಗ್ಯಯುಕ್ತಿ ಕೊಡು ಭುಕ್ತಿ ಇತ್ತು ಮುದ್ರಧಾರನಾ ಮಾಡಿ ಮುಕ್ತಿ -ಆಹಾ ನಿರ್ಧಾರಮಾರ್ಗವ ಬದ್ಧದಿ ತೋರಯ್ಯಾ ಪತಿ 14 ಬಂಧೂರ ಕೀರ್ತಿ ಸಂಪನ್ನಾ ಕರಿ ಬಂಧ ವಿಮೋಚನ್ನ ನಾ ರಂದ ವರದ ಸುಪ್ರಸನ್ನಾ ಶತಾ ನಂದ ಕಾನನವಾಸಾ ಘನ್ನಾ -ಆಹಾ ಸಿಂಧುಜನಕನೆ ಪರಂಧಾಮತ್ರಯ ಸತ್ಯ ಸಂಧ ವಿಜಯವಿಠ್ಠಲೆಂದು ವದನ ಎನ್ನಾ15
--------------
ವಿಜಯದಾಸ
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಾಹಿ ರಮಾ ಮನೊಹರ ಪಾಪಿ ಪ ಪಾಹಿ ಸದಾಗಮವೇದ್ಯ ಸಕಲ ಕ ಲ್ಯಾಣ ಗುಣಾರ್ಣವ ಲೀಲಾಮಾನುಷ ಅ.ಪ ಆನೆಯೊಂದು ಕರೆಯಲು ಆ ಕ್ಷಣದಲಿ ನೀನೇ ಬಂದುದೇಕೆ ದೇವ ನೀನೇ ಪಡೆದ ಮಕ್ಕಳ ದೈನ್ಯದ ನುಡಿ ನೀನಲ್ಲದೆ ಕೇಳುವರ್ಯಾರಿರುವರು1 ತುರುವಿನ ಕೆಚ್ಚಲ ಕರು ಗುದ್ದಿದರದು ಕರೆಯದೇ ಕ್ಷೀರವನು ದೇವ ಮರೆತು ಎನ್ನ ಅಪರಾಧಗಳೆಲ್ಲವ ಮರೆಯದಿರೆಲೊ ಎನ್ನಯ ಬಾಂಧವ್ಯವ 2 ಅತ್ತು ಕರೆದು ಔತಣ ನೀಡಿದ ಪರಿ ನಿತ್ಯ ಸೇವೆಯಾಯ್ತೋ ಕೃಷ್ಣ ನಿತ್ಯ ಪೂರ್ಣ ಕರುಣಾಮಯ ಕರುಣಿಸೊ ಚಿತ್ತ ಪ್ರಸನ್ನತೆ ಸಾರ್ಥಕ ಜೀವನ 3
--------------
ವಿದ್ಯಾಪ್ರಸನ್ನತೀರ್ಥರು
ಪಿಡಿದೆಲೆ ಬಿಡಬೇಡ್ಹುಡುಗಹುದು ಇದು ಕೆಡದ ವಸ್ತು ನಿಜ ಪಿಡಿ ಬಿಗಿದು ಪ ಎಡರುತೊಡರಿಗೆದೆಒಡೆಯದೆ ದೃಢವಿಡಿ ಜಡಭವ ತೊಡರನು ಕಡಿಯುವುದು ಅ.ಪ ಭಕ್ತಿಯಿಂದೆಂಬುವ ಗೂಟ ಜಡಿದು ಮಹ ಸತ್ಯವೆಂದೆಂಬ ಹಗ್ಗ ಸುತ್ತ ಬಿಗಿದು ಚಿತ್ತೆಂಬ ಗಂಟ್ಹಾಕು ಎತ್ತವದಲದಂತೆ ನಿತ್ಯ ಮುಕ್ತಿಸುಖ ಕೊಡುತಿಹ್ಯನು 1 ಸುಜನ ಸಂಗವೆಂಬ ಮಂದಿರದಿ ಮಹ ಭಜನವೆಂದೆಂಬುವ ಗೋದಿಲದಿ ನಿಜಧ್ಯಾನ ಮೇವು ಹಾಕಿ ಭುಜಶಾಯಿಪಾದ ನಿಜಧೇನುವನು ಕಟ್ಟಿ ಮಜದಲಿ ನಲಿಯೊ 2 ಆರಿಗೆ ಸಿಗದಂಥ ಒಡವೆಯಿದು ಸರ ದಾರನೆ ನಿನಗೆ ಸಿಕ್ಕಿಹ್ಯದು ಸಾರಸೌಖ್ಯಕ್ಕೆ ಮೂಲಧಾರನಾಗಿಹ್ಯ ಧೀರಶ್ರೀರಾಮಪಾದ ಶೂರನೆ ಬಿಡದಿರು 3
--------------
ರಾಮದಾಸರು
ಪುರಂದರದಾಸರು ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ಪ ಪುರಂದರ ದಾಸಮಲ್ಲ ಅ.ಪ. ಘನತರದ ವೈರಾಗ್ಯ ತಳೆದು ದ್ವಿಜರಿಗೆಲ್ಲಧನಕನಕ ಸಂಪತ್ತು ದಾನ ಮಾಡಿದರೆಲ್ಲವನಜನಾಭನ ಸ್ತುತಿಗೆ ಶಬ್ದ ಸಂಪತ್ತೆಲ್ಲಒಸೆದು ನೀವೇ ಬಳಸಿ ನನಗೇನು ಕೊಡಲಿಲ್ಲ 1 ಖಂಜೂತನದ ಕಥೆಯನು ಹೇಳಲಾಸಲ್ಲಕಂಜನಾಭನ ಮಹಿಮೆ ಬಣ್ಣಿಸುವ ನೆವದಲ್ಲಿರಂಜನೆಯ ಶಬ್ದಗಳ ಸವಿದುಂಡೆಯಲ್ಲಿಎಂಜಲವನುಳಿದೆನಗೆ ಕಿಂಚಿತ್ತು ಬಿಡಲಿಲ್ಲ 2 ಕೃಪೆಮಾಡಿ ಕ್ಷಮಿಸುವುದು ವಿಪುಲ ಭಕ್ತಿಗಳಿಂದಜಪತಪದಿ ಕನ್ನಡದ ನಿಮ್ಮ ಭಾರತಮಲ್ಲ ಕೃಪಣವತ್ಸಲ ಗದುಗು ವೀರನಾರಾಯಣನ ಸಫಿಲ ಜ್ಞಾನವ ಗಳಿಸಿ ನಮಗೇನು ಕೊಡಲಿಲ್ಲ 3
--------------
ವೀರನಾರಾಯಣ
ಪುರಾಣ ಅಕ್ಕರವುಳ್ಳ ನಮ್ಮಕ್ಕ ರುಕ್ಮಿಣಿ ಕೇಳೆ ರಕ್ಕಸಾಂತಕ ಕೃಷ್ಣ ಮತ್ತೆಲ್ಲೆ ಪೋದ 1 ಸತ್ಯಭಾಮೆಯೆ ನಿನ್ನ ಚಿತ್ತದ್ವಲ್ಲಭ ನೀರೊಳು ಪೊಕ್ಕು ವೇದವ ತಂದು ಪುತ್ರಗಿಡಹೋದ 2 ಪನ್ನಂಗಶಯನ ಲಾವಣ್ಯರೂಪನು ಎನ್ನ ಕಣ್ಣಿಗೆ ಮರೆಯಾಗಿ ಇನ್ನೆಲ್ಲೆ ಹೋದ 3 ಪತಿ ಶರಧಿಯೊಳು ಬೆನ್ನಲಿ ಗಿರಿಯೆತ್ತಿ ತನ್ನ ಭಕ್ತರಿಗೆ ಸುಧೆಯ ನೀಡಲು ಹೋದ 4 ವನಜನಾಭನ ಕಾಣದೆ ಘನಕ್ಲೇಶದಿಂದೀಗ ಮನದ ವಿರಹತಾಪವನು ಸೈರಿಸಲ್ಹ್ಯಾಗೆ 5 ಅವನಿ ಕದ್ದವನ ಸಂಹರಿಸಿ ಕೋರೆಗಳಿಂದ ಭುವನಾಧಿಪತಿಯು ಬರುವನೆ ಸತ್ಯಭಾಮೆ 6 ಹಂಬಲ ಬಿಡದರವಿಂದನೇತ್ರನ ಬಿಟ್ಟು ಸುಂದರಾಂಗನ ಕರೆತಂದು ತೋರೆನಗೆ 7 ಕಂಬದಿಂದೊಡೆದು ಕಂದನ ತಂದೀ(ದೆಯ?) ಕರುಳ್ಹಾರ ಕಂದರದಿ ಧರಿಸಿ ತಾ ಬಂದನು ಭಾಮೆ 8 ಸೃಷ್ಟಿಕರ್ತನುಯೆನ್ನ ದಿ(ದೃ?) ಷ್ಟಿಂದೆ ನೋಡದೆ ಎಷ್ಟು ಹೇಳಲೆ ಪ್ರಾಣ ಬಿಟ್ಟು ಹೋಗುವುದೆ 9 ಪುಟ್ಟ ಬ್ರಾಹ್ಮಣನಾಗಿ ದಿಟ್ಟತನದಲಿ ದಾನವ ಕೊಟ್ಟ ಬಲಿ ಪಾತಾಳಕೆ ಮೆಟ್ಟಿ ಬಾಹುವನೆ 10 ತ್ವರಿತದಿಂದಲಿ ಯಾದವರರಸು ಶ್ರೀಕಾಂತನ ಸರಸವಾಡಲೀಗ ಕರೆಸಿ ತೋರೆನಗೆ 11 ಅರಸರ ಕುಲವ ಸಂಹರಿಸಿ ಕ್ಷತ್ರೇರನೆಲ್ಲ ನಿರುತ ನಿಷ್ಠೆಯಲಿ ತಪ ಚರಿಸಿ ಬಾಹುವನೆ 12 ಹೇಮಪುತ್ಥಳಿಗೊಂಬೆ ಸಾಮಜವರದನ ಆ ಮಾಸುರರೊಡೆಯ ಮೇಘಶ್ಯಾಮನ ತೋರೆ13 ಮಾಡಿ ಯುದ್ಧವ ಲಂಕಾ ನೋಡಿ ದಶಶಿರವ ಚೆಂಡಾಡಿ ಜಾನಕಿಯ ಒಡಗೂಡಿ ಬಾಹುವನೆ 14 ವಾಸುದೇವನ ಕಾಣದೊಂದರಘಳಿಗೀಗ ನಾಲ್ಕು ಯುಗವಾಗಿ ತೋರುವುದೆನ್ನ ಮನಕೆ 15 ಶ್ರೀಶ ತಾ ಸೋಳಸಾಸಿರ ಮಂದಿ ಸತಿಯೇರ ವಿ- ಲಾಸದಿಂದಿದ್ದನೀಗಿಂದೀವರಾಕ್ಷ 16 ಸಿರಿವೊಬ್ಬಳಲ್ಲದೆ ಪರನಾರಿಯರ ಕಣ್ಣು ತೆರೆದು ನೋಡುವ ತಾ ಭೂರಮಣನೆಲ್ಲಿಹನೆ 17 ಖರೆಯವೀಮಾತು ತ್ರಿಪುರದ ಸತಿಯರ ಲಜ್ಜೆ ತೊರೆದು ಕೂಡಿದನೆಂಬೋದು ಪರಮ ಮೋಹಕವೆ18 ನಾಡೊಳಗಧಿಕಶ್ವಾರೂಢ ರುಕ್ಮಿಣೀಕಾಂತನ ನೋಡದÉನಜೀವ ನಿಲ್ಲದು ನೀರಜಾಕ್ಷಿ 19 ಬೇಡಿಕೊಂಬುವೆನೆಂ(ಯೆ?)ದು ಭೀಮೇಶಕೃಷ್ಣನ ಕೂಡಿಸುವೆನೆ ಕರೆತಂದು ಕಮಲಾಕ್ಷಿ 20
--------------
ಹರಪನಹಳ್ಳಿಭೀಮವ್ವ
ಪುಷ್ಪಸೇವೆಯ ಗೀತೆ ಪುಷ್ಪಸೇವೆಯ ನೋಡುವಾ ಬನ್ನಿರೆ ನ ಮ್ಮಪ್ರಮೇಯ ರಂಗನಾ ಪ. ಕ್ಷಿಪ್ರದಿಂದಲೆ ಬಂದು ಚಪ್ಪರದಲಿ ನಿಂದು ವಿಪ್ರರೆಲ್ಲರು ತಂದು ಪುಷ್ಪ ಸಮರ್ಪಿಸುವ ಅ.ಪ. ಮೇಷರಾಶಿಗೆ ರವಿಯು ಬರಲು ವಾಸುದೇವ ಹರಿಯು ಆಗ ಬೇಸಿಗೆ ತಾಪವ ಪರಿಹರಿಸುವೆನೆಂದು ವಾಸನೆಗಂಧವ ಮೈಯೊಳು ಪೂಸಿದ 1 ಕರ್ಪೂರದ ಕಸ್ತೂರಿ ಗಂಧವ ತಂದು [ಒಪ್ಪದಿಂ] ವಕ್ಷಸ್ಥಳದಿ ಧರಿಸಿ ವಕುಳ ಪುಷ್ಪಗಳಿಂದ ಮೌಳಿಯ [ಲಂಕ]ರಿಸಿದ ರು ಪನ್ನೀರವಲ್ಲಿಯ ಚೆನ್ನಾಗಿ ಪ್ರೋಕ್ಷಿಸಿದರು2 ಮರುಗ ಮಲ್ಲಿಗೆ ಜಾಜಿ ಮುಡಿವಾಳ ಇರವಂತಿಗೆ ಪಚ್ಚೆ ದವನ ಕೇದಿಗೆ ಪಾ ಕಮಲ ಸಂಪಿಗೆ ಪುಷ್ಪಮಾಲೆಯ ಧರಿಸಿ ಪನ್ನೀರ ತಳಿದರಾಗ 3 ಪುಷ್ಪದ ದುಬಟಿಯನು ತಂದು ನಮ್ಮ ಸರ್ಪಶಯನನಿಗ್ಹೊದ್ದಿಸೆ ಕ್ಷಿಪ್ರದಿಂದಲೇ ತೀರ್ಥಪ್ರಸಾದವನಿತ್ತು ಎ ನ್ನಪ್ಪ ರಂಗನು ಬಂದ ಒಯ್ಯಾರ ನಡೆಯಿಂದ 4 ಪರಿಪರಿ, ವಾದ್ಯಂಗಳು ಭೋರಿಡುತಿರೆ ವರಾಂಗನೆಯರು ಪಾಡೆ ಸುರರು ಭೂಸುರ ನರರೆಲ್ಲರ ಕೂಡಿ ದೊರೆಯುಮಂಟಪಕ್ಕಾಗ ಪರಮಪುರಷ ಬಂದ 5 ಅಲ್ಲಿ ಪೂಜೆಯ ಗ್ರಹಿಸಿ ರಂಗಯ್ಯ ತಾ ಎಲ್ಲರೊಡನೆ ಪೊರಟಿರೆ ವಲ್ಲಭನನು ವೀಣೆಸೊಲ್ಲಿನಿಂ ಪಾಡುತಿರೆ ಲಕ್ಷ್ಮೀ ಮೆಲ್ಲಮೆಲ್ಲನೆ ಬಂದ ಏಕಾಂತದಿ ರಂಗ 6 ಚಿತ್ರಪೌರ್ಣಮಿಯಲ್ಲಿ ಶ್ರೀರಂಗ ವಿ ಚಿತ್ರದಿಂದಲೆ ಪೊರಟು ಉತ್ತರಕಾವೇರಿ ತೀರದ ಮಂಟಪದಲಿ ನಿಂದು ಭಕ್ತವತ್ಸಲನು ಮಜ್ಜನವ ಮಾಡಿದನಾಗ 7 ಮಕರಿ ಕಾಲ್ಪಿಡಿಯಲಾಗ ಮತಂಗ ವು ಕರೆಯೆ ನಿಮ್ಮನು ಅತಿ ವೇಗದಿಂದ ಚಕ್ರದಿ ನಕ್ರನ ಕೊಂದು ಕರಿಯ ರಕ್ಷಿಸಿ ಬಂದ ಕರುಣದಿಂದಲೇ ರಂಗ 8 ಕಲಿಯುಗದೊಳಗಿರುವ ಕರ್ಮಿಗಳನ್ನು ಸಲಹುವೆನೆಂದೆನುತಾ ಕರುಣದಿಂ ದಲೆ ಅರ್ಚಾವತಾರವ ಮಾಡಿ [ಸಲೆ] ಬಿರುದು ಧರಿಸಿ ಬಂದ ವರದವೆಂಕಟರಂಗ 9
--------------
ಯದುಗಿರಿಯಮ್ಮ
ಪೂಜಾ ಮಾಡೋಣ ಬಾರೆ ಶ್ರೀ ಲಕುಮಿಯ ಪೂಜಾ ಮಾಡೋಣ ಬಾರೆ ಪ. ವನಜನ ನೇತ್ರೆಯ ತ್ರಿಜಗನ್ಮಾತೆ ಪ್ರಖ್ಯಾತೆ ಅ.ಪ. ಅರ್ಥಿಯಿಂದಲಿ ಇಟ್ಟು ಚಿತ್ತದೊಲ್ಲಭನ ಸ್ತುತಿಸಿ ಬೇಡಿಕೊಂಡು ಮತ್ತೆ ನಿಮಗೆ ಕರವೆತ್ತಿ ಪ್ರಾರ್ಥಿಸುತಲಿ 1 ಗಂಧಪುಷ್ಪ ವಸ್ತ್ರಾಭರಣ ಆನಂದ ದೀಪಗಳಿಂದ ಇಂದು ನಾ ಪೂಜಿಪೆ ಮಂದಿರದೊಳು ಆನಂದಭರಿತಳಾಗಿ ಬಾ 2 ರುಕ್ಮೀಶವಿಠಲನ ಪಟ್ಟದ ರಾಣಿ ವಕ್ಷಸ್ಥಳದಲಿನಿಂತು ನಲಿಯುತ ಬಾ ಭಕ್ತಜನರ ಮನೋಭೀಷ್ಟವ ಸಲಿಸುತ ಬಾ 3
--------------
ಗುಂಡಮ್ಮ
ಪೂಜಿಸ ಬಲ್ಲೆನೆ ನಾನು ನಿನ್ನಂಘ್ರಿಯ ರಾಜೀವದಳ ನಯನ ಪ ಭಂಜನ ಭವ ರಾಮಚಂದ್ರ ಸೀತಾ ಹೃತ್ಕುಮುದ ಚಂದ್ರ ಅ.ಪ ಪಾರಿಜಾತ ಪುನ್ನಾಗ ಬಕುಳ ಮಂ- ದಾರ ಮಲ್ಲಿಕ ಕೇತಕೀ- ಸಾರಸ ಜಾಜಿ ಚಂಪಕ ತುಳಸಿಯುಕರ- ವೀರವೇ ಮೊದಲಾದ ದಿವ್ಯ ಪುಷ್ಪಗಳಿಂದ 1 ವಿಶ್ವಾದಿ ಸಾಹಸ್ರನಾಮಂಗಳಿಂ ನಿನ್ನ ಶಾಶ್ವದ್ರೂಪವ ತಿಳಿದು ಅಶ್ವಮುಖಾನಂದಮಯ ಪರಮಾತ್ಮ ನಿ- ನ್ನರ್ಚಿಸುವಡೆ ಚಪಲ ಚಿತ್ತಗೆ ಸಾಧ್ಯವೆ 2 ಸೂರ್ಯ ಚಂದ್ರರು ದೀಪ ನೀರೆಲ್ಲ ಅಭಿಷೇಕವೂ ತೋರೂವದಿಗ್ವಸ್ತ್ರ ಪೃಥ್ವಿಗಂಧವು ಸರ್ವ ಸಾರ ಭೋಕ್ತಗೆ ಗುಣಗಳ ತಾಂಬೂಲಾದಿಗಳಿಂದ3 ಕಮಲ ಸದನ ಹಂಸಾಖ್ಯ ಕು- ಡಿದ ನೀರು ಅಭಿಷೇಕವೂ ಮುದದಿ ನಿತ್ಯದಿ ಉಂಬುವುದೆ ನೈವೇದ್ಯವು ಪ್ರತಿ ಪದ ಪ್ರದಕ್ಷಣೆ ಮಲಗುವದೆ ವಂದನೆಯೆಂದು 4 ಒಂದು ಅರಿಯದ ಉಭಯಾಂಧನು ನಾನು ಗೋ- ವಿಂದ ನಿನ್ನಯ ಭಕ್ತಾರಾ ಸಂದೋಹದೊಳಗಿಟ್ಟೆನ್ನರ್ಚನೆ ಕೈಕೊಂಡು ತಂದೆ ಪಾಲಿಸೋ ಗುರುರಾಮ ವಿಠಲ ಸ್ವಾಮಿ 5
--------------
ಗುರುರಾಮವಿಠಲ