ಒಟ್ಟು 4717 ಕಡೆಗಳಲ್ಲಿ , 123 ದಾಸರು , 3118 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ನಿಂದಾನಂದೋಬ್ರಹ್ಮನ ಮಂಡಲೇಶನ ಧ್ರುವ ಪಿಂಡ ಬ್ರಹ್ಮಾಂಡ ತಂಡಕ ಜಡದ ಖಂಡಿತವಾಗ ಸುಪಂಡಿತರಾತ್ಮನ 1 ಸನ್ಮಾರ್ಗ ಸದ್ಗತಿ ಸಾಧನ ಸದ್ಗುರು ನಿಧಾನ ಸದ್ಬ್ರಹ್ಮಾಕರ ಸದ್ವಾಸನೆ ಪೂರಿಸಿ ಸದ್ಗೈಸುವ ಸದ್ಭಾವ ಬೋಕ್ತನ 2 ನಿಜಸುಖ ಭಾಸುವ ಮಹಿಪತಿಗೋಸುಗ ಭಾಸ್ಕರ ಕೋಟಿ ಪ್ರಕಾಶನ ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆÀನೀಗ ರಂಗನಾಥನ ಕಾರುಣ್ಯನಿಧಿಯ ಪ. ಮಂಡಲದೊಳುದ್ದಂಡ ಮೂರುತಿ ಹಿಂಡು ದೈತ್ಯರ ತಂಡ ತಂಡದಿ ತುಂಡು ತುಂಡು ಮಾಡಿದ ಸ್ವಾಮಿಯ ಅ.ಪ. ಕೌಸ್ತುಭ ನಾಮವ ನೇಮದಿಂದ ಧರಿಸಿದಾತನ ಹೇಮ ಮಂಟಪದೊಳಗೆ ಕುಳಿತು ಕಾಮಿಸಿದ ಭಕ್ತರಿಗೆ ಕಾಮಿತಾರ್ಥ ಕೊಡುವ ಸ್ವಾಮಿಯ 1 ಗರುಡವಾಹನವೇರಿ ಗಗನದಿ ಚರಿಸುತ್ತ ಬಂದು ಸರಸಿಯೊಳು ಕರಿಯ ಸಲಹಿದೆ ಪರಮಭಕ್ತರ ಕಾವದೇವ ಕರುಣವಾರಿಧಿ ಕಮಲನಯನ ಉರಗಶಯನ ಉದ್ಧಾರಿ ನಿನ್ನ ಮರೆಯಹೊಕ್ಕೆ ಕಾಯೊ ಎನ್ನ2 ಇಂದುಧರನ ಸಖನೆ ಕೇಳಯ್ಯ ಬಂದಂಥ ದುರಿತ ಹಿಂದು ಮಾಡಿ ಮುಂದೆ ಸಲಹಯ್ಯ ಇಂದು ಹೆಳವನಕಟ್ಟೆ ರಂಗ ಆ-ನಂದ ಪಡಿಸೊ ರಾಮಲಿಂಗ ಹೊಂದಿದೆನು ನಿನ್ನ ಚರಣ3
--------------
ಹೆಳವನಕಟ್ಟೆ ಗಿರಿಯಮ್ಮ
ಕಡೆಗಣ್ಣಲಿ ನೀ ನೋಡದಿರೆನ್ನಯ್ಯ ಬಿಡಬೇಡವೊ ಕೈಯ್ಯ ಬಡವರ ಬಂಧು ಬಹುಕೃಪಾಸಿಂಧು ಒಡೆಯ ನೀನಲ್ಲದೆ ಎನಗೆ ಬ್ಯಾರಿಲ್ಲವೊ ಪ. ಶತ ಅಪರಾಧವ ಮಾಡಿದೆನಯ್ಯ ಸೇರಿದೆ ನಾ ನಿನ್ನ ಬೆನ್ನ ಅತಿಪಾತಕಿ ಅಜಾಮಿಳನ ಉದ್ಧರಿಸಿದೆ ಪೃಥಿವಿಯೊಳಗೆ ಬಿರುದಾಂತ ಶ್ರೀಕಾಂತ 1 ನೆಲೆಗಾಣದೆ ನಾನಾಪರಿ ಚಿಂತೆಗೆ ಒಳಗಾದೆನೊ ನಾಹೀಗೆ ಬಳಲಿಸಬ್ಯಾಡವೊ ಭಕ್ತಕುಟುಂಬಿ ನಳಿನದಳಾಂಬಕ ನೀ ಸಲಹೆನ್ನನು 2 ಹೇರೊಪ್ಪಿಸಿದ ಮೇಲ್ಯಾತರ ಸುಂಕವು ಕಾರುಣ್ಯನಿಧಿ ಹೆಳವನಕಟ್ಟೆ ರಂಗಯ್ಯ 3
--------------
ಹೆಳವನಕಟ್ಟೆ ಗಿರಿಯಮ್ಮ
ಕಡೆಗೋಲ ತಾರೆನ್ನ ಚಿನ್ನವೆ ಮೊಸ ರೊಡೆದರೆ ಬೆಣ್ಣೆ ಬಾರದೊ ಮುದ್ದು ಕೃಷ್ಣಯ್ಯ ಪ. ಅಣ್ಣ ಬಲರಾಮನು ಚಿಣ್ಣರ ಸಹಿತಾಗಿ ಬೆಣ್ಣೆ ಹಣ್ಣನು ಮೆಲುವಿಯಂತೆ ಯನ್ನಣ್ಣನೆ ಸಣ್ಣವನಾಗಿ ಎನ್ನೊಡನಾಟವೆ ಕಣ್ಣಿಗೆ ಕಾಡಿಗೆ ಇಡುವೆ ಬಾ ರಂಗಯ್ಯ 1 ಹಸುರಂಗಿ ಕೊಡಿಸುವೆ ಹಸುಳೆ ಬಾ ಕಂದನೆ ಹೊಸಪರಿಯಾಭರಣಗಳನಿಡುವೆ ಹಸನಾದ ಹಸುವಿನ ತುಪ್ಪದ ದೋಸೆಯ ಹಸುಳೆ ನಿನಗಾರೋಗಣೆಗೆ ಹೊತ್ತಾಯಿತೊ 2 ಪಡೆದ ಜನನಿಯಲ್ಲೆ ಎನ್ನೊಡೆಯ ಶ್ರೀ ಶ್ರೀನಿವಾಸ ನಿನ್ನ ಕಡೆಹಾಯಿಸೊ ಕಡೆಗೋಲನಿತ್ತು ಎನ್ನ ಗೋಪಿ ಕಡುಮುದ್ದು ರಂಗನ ಬಿಡದೆತ್ತಿ ಮುದ್ದಿಸಿ ಸಡಗರದಿಂದಲಿ 3
--------------
ಸರಸ್ವತಿ ಬಾಯಿ
ಕಂಡೆನು ಕೌತುಕ ಮಂಡಲದೊಳಗೊಂದು ಹೊಯ್ಯಂದ ಡಂಗುರವ ಮಂಡಿಯ ಮಸಿಯಲಖಂಡಿತವಾಗ್ಯದೆ ಧ್ರುವ ಖೋಯೆಂದು ಕೂಗುತ ಕಾಯದೊಳಗದೆ ಮಾಯದ ಮರೆಯಲುಪಾಯ ಮುಚ್ಚಿದ ನೋಡಿ 1 ಝೇಂ ಝೇಂ ಝೇಂ ಝೇಂ ಝೇಂಕರಿಸುತದೆ ಕಂಜನಾಭನ ಕರುಣಾನಂದನೋಡಿರ್ಯೊ 2 ಘೇಳೆನಿಸುತದÀ ತಾಳಮೃದಂಗವು ಒಳಹೊರಗಿದು ಧಿಮಿಗುಡುತದ 3 ಅನುಹಾತ ಧ್ವನಿಅನುಭವ ನೋಡಿರೋ ಅನುದಿನ ಸಾಧಿಸಿ ಘನ ಬೆರದಾಡಿರೊ 4 ಆನಂದೊಬ್ರಹ್ಮದ ಆಟವಿದುನೋಡಿ ಏನೆಂದ್ಹೇಳಲಿ ಸ್ವಾನುಭವದ ಸುಖ 5 ತುಂಬಿತುಳುಕುತದೆ ಅಂಬುಜಾಕ್ಷನ ಮಹಿಮೆ ಕುಂಭಿನಿಯೊಳು ನಿಜ ಗಂಭಗುರುತ ನೋಡಿ 6 ಸಾಧಿಸಿ ನೋಡಿರೊ ಶ್ರೀ ಸದ್ಗುರು ಶ್ರೀಪಾದ ಗಾದಿಯ ಮಾತಲ್ಲ ಭೇದಿಸಿ ನೋಡದು 7 ಶುಕಾದಿ ಮುನಿಗಳ ಸುಖಾಶ್ರಯವಿದು ಏಕಾಕ್ಷರ ಬ್ರಹ್ಮ ಏಕೋಚಿತ್ತದಿ 8 ಮೊತ್ತರಾಗಿ ತನ್ನ ನೆತ್ತಿಯೊಳಗಿದೆ ಉತ್ತಮರ ಸುತ್ತ ಮುತ್ತ ಸೂಸುತದ9 ಗುರು ಕೃಪೆಯಿಲ್ಲದೆ ಗುರುತವಾಗದಿದು ಬರೆ ಮಾತಿನ ಮಾಲೆಗೆ ಸೆರಗ ಸಿಲುಕದಿದು 10 ಗುರುತವಿಟ್ಟು ಗುರುವಿನ ಮಹಿಮೆಯ ತರಳ ಮಹಿಪತಿ ನಿನ್ನೊಳು ನೋಡೆಂದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ಹರಿಸತಿಯ ಸುರಚಿರದುಂಡ ಕಂಕಣ ಕೈಯ್ಯಾಮಂದಾರ ಮಲ್ಲಿಗೆಯ ಹೆರಳಲಿ ದಂಡೆ ಮುಡಿದ ಪರಿಯ ಪ ಪೈಜಣಯಿಟ್ಟಿಹಳು ಗಳದಿ ಕಟ್ಟಾಣಿಯ ಕಟ್ಟಿಹಳುಹಾಟಕ ಹಾರಗಳು ನೋಳ್ಪರ ನೋಟಕೆ ಹಬ್ಬಗಳು 1 ಹೇಮ ಕಂಚುಕ ಪುತ್ಥಳಿ ಮಾಲೆ ತೂಗುವ ಕಟಿಯು 2 ಸರಸಿಜನುವ ಮುಖಿಯು ನಾಶಿಕ್ಹರಳು ಮುತ್ತಿನ ಗೊನೆಯುಹರಳು ಓಲೆಯ ಪ್ರಭೆಯು ಕರ್ಣದಿ ಕುರುಡು ದ್ರಾಕ್ಷಾಲತೆಯು 3 ಸುಂದರಿ ಶುಭಗಾತ್ರೆ ಸುಖಮಯ ಸಿಂಧೂರ ಪಟಾಕಾ ಮಾತ್ರೆಮುಂದೆ ಫಲದ ಪಾತ್ರೆ ಇಟ್ಟಳು ಬಂದು ಸರಸ ನೇರಿ4 ನಂದಬಾಲನ ಮಡದಿ ಸ್ವಪ್ನದಿ ಬಂದು ನಿಂತಳು ಭರದಿಆನಂದವಾಯ್ತು ಮನದಿ ಕಂಡೆನು ಇಂದಿರೇಶನ ದಯದಿ 5
--------------
ಇಂದಿರೇಶರು
ಕಂಡೆನೋ ಕಂಡೆ ಗುರುಚಿದಂಬರನಾ ತನು ಗೊಂಡು ಭೂಮಂಡಲದೊಳು ಚರಿಸುವನಾ ಪ ಪರಮಾತ್ಮ ಪರತತ್ವವನು ತಿಳಿದವನ ಧರೆಯ ಜನರನÀು ಪಾವನವ ಮಾಡುವನಾ ಕರುಣ ಸಮುದ್ರ ದೀನರ ದಯಾಪರನಾ ನೆರೆನಂಬಿದವರಿಗೆ ವರವ ಕೊಡುವನಾ 1 ಮಳೆ ಛಳಿ ಬಿಸಿಲು ಹಸಿವಿಗಂಜದವನ ಕಲ್ಲು ಮುಳ್ಳು ಬೆಟ್ಟವೆನ್ನದೆ ಚರಿಸುವನ ನೆಲೆಗಾಣದಂತಹ ಅಪಾರ ಮಹಿಮನು ಕಲಿಮನದೊಡ್ಡದಾನಂದ ನಿರ್ಗುಣನ 2 ಸ್ಮರಹರನಂತೆ ಭಸಿತ ದಿಗಂಬರನಾ ಕೆರೆಬಾವಿ ದೇವಾಲಯವನು ಕಟ್ಟಿಸುವನ ಪುರಹರನಂತೆ ಢಿಕ್ಕನೆ ಧರಿಸಿಹನ ನರ ಗುರಿಗಳು ಬಲ್ಲರೇನೋ ಇಂಥವನಾ 3 ಯಮನಿಯಮ ಅಷ್ಟಾಂಗ ನಿರತನ ಕಮಲಾರಿ ಪಿತನಂತೆ ಗಂಭೀರದವನ ಹಿಮವಂತನಂತೆ ಧೈರ್ಯದೊಳಿರುತಿಹನ ಕಮಲ ಬಾಂಧವನಂತೆ ತೇಜದಿಂದಿರುತಿಹನ 4 ಅರಿಗಳನರುವರ ನುಗ್ಗೊತ್ತಿದವನ ಕರಣೇಂದ್ರಿಯಂಗಳ ನಿಗ್ರಹಿಸಿದವನ ಪರಮ ದಾಸಗೆ ಆಲಿಂಗನವನಿತ್ತನಾ ಸ್ಥಿರ ಚಿದಾನಂದ ಪುರದ ದಿಗಂಬರನ 5
--------------
ಕವಿ ಪರಮದೇವದಾಸರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ದ್ರುವ ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೇವಮ್ಮ ರಂಗನಾ |ಕಂಡೇವಮ್ಮಾ ಕೃಷ್ಣನಾ ಪ ಹೃದಯದೊಳಗಿನ ಸದಮಲ ಬ್ರಹ್ಮನಾ 1 ಬಿಡದೆವೆ ಗೋಕುಲದಿ ಸಂಚರಿಪನಾ 2 ಗುರುಮಹಿಪತಿ ಪ್ರಭು ಕರುಣ ಕಟಾಕ್ಷದಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕಂಡ್ಯಾ ಕೂಸಿನ್ನಚಂಡನಾಡುತಾಲೆ ಬಾಲೆರ್ಹಿಂಡು ಕೂಡಿ ಬಂದನಂತೆ ಪ ದಂಡದಿಂದ ಚಿನ್ನಿ ಬಾಲೇರ್ಹಿಂದಿನೋಳು ಚಿಮ್ಮಿದನಂತೆಕಂಡಕಂಡ ನಾರಿಯರೆಲ್ಲ ಪುಂಡ ಕೃಷ್ಣರೆಂಬರಂತೆ 1 ದುಂಡು ಮುಖದೊಳಿಟ್ಟು ವೇಣುದಂಡವನೂದಲು ಕೃಷ್ಣಹಿಂಡು ನವಿಲು ಪಕ್ಷಿಗಳು ಮಂಡಲ ಕಟ್ಟಿದವಂತೆ 2 ದೃಷ್ಟಿಯಾದೀತೆಂದು ಕೂಸಿಗೆ ಎಷ್ಟು ಹೇಳಿದೆ ಮನೆಬಿಟ್ಟು ಪೋಗಬ್ಯಾಡೆಂದರೆ ಕೃಷ್ಣ ಘಳಿಗೆ ನಿಲ್ಲವಲ್ಲ 3 ಇಂದಿರೇಶ ಎನ್ನ ಮನೆ ಮುಂದಲಾಡೆಂದ್ಹೇಳಿದರೆನಂದ ವೃಜದಿ ಪೊಕ್ಕು ಬಹಳ ದುಂದು ಮಾಡುವನು ಕೃಷ್ಣ 4
--------------
ಇಂದಿರೇಶರು
ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು - ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಪ ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು 1 ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರÉೂ 2 ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ ಏಳಬೀಳ ಕೊರಳ ಕೊಯ್ದುಬೀಳ ಬೇಡಿ ನರಕಕೆಂದು ಹೇಳ ಬಂದೆನೊ3 ಹೊಳ್ಳದ ಬಿಚ್ಚೇರು ಸಹಿತ ಸುಳ್ಳರೆಲ್ಲ ಕೂಡಿಕೊಂಡುಬೆಳ್ಳನ ಬೆಳತನಕ ನೀರ ತಡಿಯಲಿ ಕುಳಿತುಗುಳ್ಳೆ ಗೊರಜೆ ಕೂಡಿ ತಿಂದು ಕಳ್ಳು ಕೊಡನ ಬರಿದು ಮಾಡುವಂಥಪೊಳ್ಳು ದೈವದ ಗೊಡವೆ ಬೇಡ ನರಕ ತಪ್ಪದು4 ಪಾದ ಬಿಡದೆ ಭಜಿಸಿರೊಜಡದೈವಗಳ ಇಂಥ ಪೂಜೆ ಬೇಡ ಕಾಣಿರೋ 5
--------------
ಕನಕದಾಸ
ಕಣ್ಣಾರೆ ಕಂಡೆವಯ್ಯಾ ಕಣ್ಣಾರೆ ನಾ ಧ್ರುವ ಕಣ್ಣಾರೆ ಕಂಡೆ ಹರಿಯ ಎನ್ನ ಪ್ರಾಣಧೊರಿಯ ಧನ್ಯಗೈಸಿದ ಪರಿಯ ಏನೆಂದ್ಹೇಳಲಯ್ಯ 1 ಸ್ವಾನುಭವದ ಖೂನ ಜನಕ್ಹೇಳಲೇನು 2 ಆಡೇನಂದರ ಅಮಾತು ನಾಡಿಗೇನು ತಿಳದೀತು ಪಡೆದವಗೆ ದೋರಿತು ಬಿಡದ್ಹಾಂಗಾದೀತು 3 ಗುರುಕರುಣ ಕಟಾಕ್ಷ ಗುರುತಾಗ್ಯದ್ಯನ್ನಪೇಕ್ಷಾ ಇರುಳ್ಹಗಲೆ ದೋರುವದಧ್ಯಕ್ಷ 4 ಎನಗದೆ ಬ್ರಹ್ಮಾನಂದ ಭಾನುಕೋಟಿ ತೇಜನಿಂದ ದೀನಮಹಿಪತಿ ಬಂದ ಅನುಭವ ಆನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವು ಚಿನ್ಮಯದ ರೂಪ ಕಣ್ಣಾರೆ ಕಂಡೆವು ಮಾ ಧ್ರುವ ದೋರುವದು ಮಾ ಪೂರ್ಣಗೈಸುವದು ಮಾ 1 ತಾನಾಗಿಹುದು ಮಾ ಘೋಷಗೈವದು ಮಾ 2 ದೋರುದು ಮಾ ಕೈಗೂಡದು ಮಾ 3 ತಿಳಿಯಗೊಡದು ಮಾ ತಾನೆ ಭಾಸುದು ಮಾ 4 ಉತ್ತಮರೊಳಗೆ ಅತ್ಯಂತವಾಗಿನ್ನು ಅತ್ತಿತ್ತಲಾಗದೆ ಇಹುದು ಮಾ ಹೃತ್ಕಮಲದೊಳು ಕಂಡೆನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ನೋಡೆನ್ನ ಕರುಣಾ ಕಟಾಕ್ಷದೀ ಇಂದಿರಾರ ಮಣಾ ಅರವಿಂದನೇತ್ರದಲಿ ಪ ದಶರಥನಿಗೆ ದಿವ್ಯಪ್ರಾಣನೇತ್ರಾ ಶಶಿಮುಖಿ ಸೀತೆಯ ಬಿಡದೆ ನೋಡುವ ನೇತ್ರಾ ಶಶಿ ರವಿ ಕಾಂತಿಗೆ ಸಮನಾದ ನೇತ್ರದೀ 1 ದಶರಥನಿಗೆ ದಿವ್ಯಪ್ರಾಣನೇತ್ರಾ ಶಶಿಮುಖಿಯರನೆಲ್ಲಾ ಒಲಿಸಿದ ನೇತ್ರ[ವರ ಸತಿ] ರುಕ್ಮಿಣಿದೇವಿಯ ಪ್ರಾಣನೇತ್ರಗಳಿಂದ 2 ಅಸುರರು ಮೋಹಿಸಿ ಭ್ರಮಿಸಿದ ನೇತ್ರ ಶ್ರೀನಿವಾಸನೆ ನಿಮ್ಮ ಕರುಣ ನೇತ್ರಗಳಿಂದಾ 3
--------------
ಯದುಗಿರಿಯಮ್ಮ