ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂತಾ ಸಾಟಿಗಳೆಷ್ಟೊ ಜಗದೊಳಗಿಂತಾ ಸಪ್ಪಳೆಷ್ಟೊ ಪ ಅಂತರವರಿಯದೆ ಅಧಮನು ತಾನಾ ಗಿಂತಿದರೊಳು ಬೊಗಳುವ ಕಂತೆ ಅ.ಪ ಕುಂತರೆ ನಿಂತರೆ ಸುಜನರ ದೂಷಿಸೆ ಅಂತಕನಿಗೆ ಸಿಲ್ಕುವೆಯಹುದೊ ಪಂಥವಿಲ್ಲ ಪರೀಕ್ಷಿಸಿ ನೋಡೆಲೊ ಸಂತೆಯೊಳಗೆ ನೀಮಾಡುವ ಡಂಬದ 1 ಮಸ್ತಿಯೊಳಾಡಲು ಮಥನಿಪುದಹುದೆಲೊ ದುಸ್ತರವೆಲೊ ದುರಿತಾಂಬುಧಿಯು ನಿಸ್ತರಂಗನಿಗೆ ನಿಜಸುಖವೆನ್ನುತ ಶಿಸ್ತೊಡೆಯುವನಂಥಡಿಯನು ಅರಿಯದ 2 ಆಗದು ಅನುಭವ ನೀಗದು ಕತ್ತಲೆ ಹ್ಯಾಗೆಂಬುವ ಸಂಶಯ ನಿನಗೇ ನಾಗರೀಯೆ ನಿಜ ತುಲಸೀ ರಾಮ ಮದ್ಗುರುವಿ ನಪ್ಪಣೆಯ ಬಿಟ್ಟಿರೆ ಬೊಗಳುವ 3
--------------
ಚನ್ನಪಟ್ಟಣದ ಅಹೋಬಲದಾಸರು
ಇತ್ತ ಬಾರೊ ಒಲವುತ್ತ ಬಾರೊಹತ್ತವತಾರದ ಚಿತ್ರಚಾರಿತ್ರ ಎನ್ನತ್ತ ಬಾರೊಪ. ಒದ್ದು ಶಕಟನ ಮುರಿದ ಶಿಶುವೆ ನೀನೆದ್ದು ಬಾರೊ ಅ-ಳದ್ದು ಬ್ರಹ್ಮಾಂಡವ ಸೀಳ್ದ ಮಹಿಮೆಸಾಲದ್ದೆÉ ಬಾರೊಕದ್ದು ಬೆಣ್ಣೆನೇಕೆ ಮೆದ್ದೆ ದಾರಿದ್ರವೆ ಮುದ್ದೆ ಬಾರೊ ಆಡು-ತಿದ್ದ ಮಕ್ಕಳ ನೀನು ಗುದ್ದಿ ದೂರನು ತರುತಿದ್ದೆ ಬಾರೊ 1 ಹಿಂದೆ ಬಾಯೆಂದರೆ ಮುಂದೆ ಬಾಹೆ ಗೋವಿಂದ ಬಾರೊ ಎನ್ನ ಕಂದ ಬಾಯೆಂದರೆ ಮುಂದೆ ನಿಲುವೆ ಮುಕುಂದ ಬಾರೊಬಂದೆನ್ನ ಮುಂದೆ ನೀ ನಿಂದಿರು ನಿತ್ಯಾನಂದ ಬಾರೊಎಂದೆಂದು ಭಕುತರ ಹೊರೆದಿಹ ಕಾರುಣ್ಯಸಿಂಧು ಬಾರೊ 2 ಮಂಥನ ಮಾಡಲು ನಿಂತೆÀ ಕಡೆಗೋಲ ನೇಣಾಂತೆ ಬಾರೊಸಂತರಿಗನುದಿನ ಸಂತೋಷವೀವ ನಿಶ್ಚಿಂತ ಬಾರೊಅಂತವಿಲ್ಲದ ಮಾರಾಂತನ ಗೆಲಿದ ಕೃತಾಂತ ಬಾರೊಅಂತಿಂತೆನದೆ ಮಾಕಾಂತ ಹಯವದನನನಂತ ಬಾರೊ3
--------------
ವಾದಿರಾಜ
ಇಂಥ ಜನಗಳಿಗೆ ಎಂಥಾದ್ದು ಹರಿಕಥೆ ಕುಂತಿಮಕ್ಕಳಿಗಾಯ್ತು ಕಾಂತಾರವಾಸ ಪ. ಸ್ವಂತ ಧರ್ಮವ ಬಿಟ್ಟು ಆಂತನ್ಯಧರ್ಮವ ಸಂತಾಪಕ್ಕೊಳಗಾಗಿ ಭ್ರಾಂತಿಪಟ್ಟಿಹರು 1 ಜೀವಿಸಿ ಮೃಗದಂತೆ ಸಾವನು ಬಗೆಯದೆ ಕೇವಲ ತಾಮಸ ಯಾವಜ್ಜೀವನವು 2 ಸರಕಾರದ ಭಯ ಸರ್ವರಿಗಿದ್ದರು ಸರಿಯಾಗಿ ನಡೆಯದೆ ಬರಿದೆ ಬಳಲುವರು 3 ಬಡವರ ಬಾಯನು ಹೊಡೆದು ತಂದು ತನ್ನ ಮಡದಿಮಕ್ಕಳಿಗುಣಬಡಿಸಿ ಮೆರೆವರೈ 4 ಲಕ್ಷ್ಮೀನಾರಾಯಣನ ಲಕ್ಷಣಾಂಕಿತರನ್ನು ಲಕ್ಷ್ಯಕ್ಕೆ ತಾರದ ಕುಕ್ಷಿಂಭರರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಇಂಥ ಜನಗಳಿಗೆ ಎಂಥಾದ್ದು ಹರಿಕಥೆ ಕುಂತಿಮಕ್ಕಳಿಗಾಯ್ತು ಕಾಂತಾರವಾಸಪ. ಸ್ವಂತ ಧರ್ಮವ ಬಿಟ್ಟು ಆಂತನ್ಯಧರ್ಮವ ಸಂತಾಪಕ್ಕೊಳಗಾಗಿ ಭ್ರಾಂತಿಪಟ್ಟಿಹರು1 ಜೀವಿಸಿ ಮೃಗದಂತೆ ಸಾವನು ಬಗೆಯದೆ ಕೇವಲ ತಾಮಸ ಯಾವಜ್ಜೀವನವು2 ಸರಕಾರದ ಭಯ ಸರ್ವರಿಗಿದ್ದರು ಸರಿಯಾಗಿ ನಡೆಯದೆ ಬರಿದೆ ಬಳಲುವರು3 ಬಡವರ ಬಾಯನು ಹೊಡೆದು ತಂದು ತನ್ನ ಮಡದಿಮಕ್ಕಳಿಗುಣಬಡಿಸಿ ಮೆರೆವರೈ4 ಲಕ್ಷ್ಮೀನಾರಾಯಣನ ಲಕ್ಷಣಾಂಕಿತರನ್ನು ಲಕ್ಷ್ಯಕ್ಕೆ ತಾರದ ಕುಕ್ಷಿಂಭರರು5
--------------
ತುಪಾಕಿ ವೆಂಕಟರಮಣಾಚಾರ್ಯ
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದಸುಖಾ ಇಂಥಾ ಅಂಥಿಂಥವರಿಗಿಂಥಾದೈಲ್ಲದೆ ನೋಡಿ ಧ್ರುವ ಒಂದೊಂದುಪರಿ ಕೇಳಿಸುವ ಹ ನ್ನೊಂದರ ಮ್ಯಾಲಿನ್ನೊಂದರ ಘೋಷ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಮಿಡುಗತಿಹ್ಯ ಆನಂದಸುಖ 1 ಉದಯಾಸ್ತಿಲ್ಲದೆ ಬೆಳಗಿನ ಪ್ರಭೆಯು ತುದಿಮೊದಲಿಲ್ಲದೆ ತುಂಬಿತು ಪೂರ್ಣ ಬುಧಜನರನುದಿನ ಸೇವಿಸುತಿಹ್ಯ ಸದಮಲವಾದ ಸದಾ ಸವಿಸುಖ2 ವಿಹಿತ ವಿವೇಕದ ಅನುಭವಗೂಡಿ ಬಾಹ್ಯಾಂತ್ರದ ಘನದೋರುತಲಿಹ್ಯ ಸ್ವಹಿತಸುಖದ ಸುಧಾರಸಗರೆವ ಮಹಿಪತಿಗುರು ಕರಣದ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ಪ ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನಬೇಸರಿಸಿ ಬೇಡ ಬಂದುದಿಲ್ಲವಾಸುದೇವನೆ ನಿನ್ನ ದಾಸರ ದಾಸರದಾಸರ ದಾಸ್ಯವ ಕೊಡು ಸಾಕೆಂದರೆ 1 ಸತಿಸುತರುಗಳ ಸಹಿತನಾಗಿ ನಾಹಿತದಿಂದ ಇರಬೇಕೆಂಬೊದಿಲ್ಲಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನಕಥಾಮೃತವನೆ ಕೊಡು ಸಾಕೆಂದರೆ 2 ಸಾಲವಾಯಿತೆಂದು ಸಂಬಳ ಎನಗೆಸಾಲದೆಂದು ಬೇಡ ಬಂದುದಿಲ್ಲನಾಲಗೆಯಲಿ ನಿನ್ನ ನಾಮದುಚ್ಚರಣೆಯಪಾಲಿಸಬೇಕೆಂದು ಬೇಡಿದೆನಲ್ಲದೆ3 ಒಡವೆಗಳಿಲ್ಲ ಒಡ್ಯಾಣಗಳಿಲ್ಲೆಂದುಬಡವನೆಂದು ಬೇಡ ಬಂದುದಿಲ್ಲಒಡೆಯ ನಿನ್ನಡಿಗಳಿಗೆರಗುವುದಕೆ ಮನಬಿಡದಿಹದೊಂದನು ಕೊಡು ಸಾಕೆಂದರೆ4 ಆಗಬೇಕು ರಾಜ್ಯಭೋಗಗಳೆನಗೆಂದುಈಗ ನಾನು ಬೇಡ ಬಂದುದಿಲ್ಲನಾಗಶಯನ ರಂಗವಿಠಲ ನಾ ನಿನ್ನ ಬಾಗಿಲ ಕಾಯುವ ಭಾಗ್ಯ ಸಾಕೆಂದರೆ5
--------------
ಶ್ರೀಪಾದರಾಜರು
ಇದನೆ ಬೇಡುವೆನಯ್ಯ ಒದಗಿ ಪಾಲಿಸೊ ಜೀಯ ಬದಲು ನಾನೊಲ್ಲೆನೊ ವಿದಿತ ವೇದ್ಯ ಪ ಕ್ಷಣ ನಿನ್ನ ಬಿಡಲಾರೆ ನಿನ್ನವರನು ಬಿಡೆ ಕುಣಿ ಕುಣಿವೆನು ನಿನ್ನ ಜನರೆಂದರೆ ಗುಣತ್ರಯ ವಾರಣ ನಿನ್ನ ವಾರುತಿಯಿರೆ ಒಣ ಹರಟೆಗಳ ನಾ ಕೇಳಲೊಲ್ಲೆ 1 ನೀಚ ಜನರಂಗಳ ಸಂಗವ ಕೊಡದಿರು ವಾಚದಿಗನ್ಯರಿಗಾಲ್ಪರಿಸಬೇಡ ಸೂಚಿಸು ನಿನ್ನಯ ಗುಣಗಣಂಗಳೆನೆ ನಾ ಯಾಚಿಪೆ ಇದನೆ ಇದನೆ ಮುರಾರೆ 2 ಶ್ರೀಶ ನಿನ್ನಯ ಕಥೆ ಕೇಳದೆ ಬಹಳಾಯು ಕಾಸು ಬಾಳದು ಕೇಳು ಕರುಣಾಬ್ಧಿಯೆ ತಾಸು ಒಂದಾದರು ಅವನೆ ಸುಜೀವಿಯೊ ವಾಸುದೇವವಿಠಲ ನಿನ್ನವರವನೊ 3
--------------
ವ್ಯಾಸತತ್ವಜ್ಞದಾಸರು
ಇಂದರೆ ರಮಣಾ ಇಟ್ಟಾಂಗಿರಬೇಕು ಪ ಒಮ್ಮಿಗೆ ಕದಶನ ಶಾಖಾ ಆಹಾರವ ನೀಡುವನು ಒಮ್ಮಿಗೆ ಷೆಡ್ರಸದ್ದನ್ನವ ಸಾರುಣಿಸುವನು 1 ಒಮ್ಮಿಗೆ ಜೀರ್ಣ ಕಂಥಾಧಾರಿಯೆನಿಸುವನು| ಒಮ್ಮಿಗೆ ದಿವ್ಯಾಂಬರಗಳ ನುಡಿಸಿ ನೋಡುವನು 2 ಒಮ್ಮಿಗೆ ಧರಿಯಲಿ ತೋಳತಲೆದಿಂಬದಲಿಡುವಾ| ಒಮ್ಮಿಗೆ ಪರ್ಯಾಂಕಾಸನ ಸಂಪದ ಕೊಡುವಾ 3 ಒಮ್ಮಿಗೆ ಕವಡಿ ಲಾಭಕ ಕೃತ-ಕೃತ್ಯೆಯೆನಿಸುವನು ತಂದೆ ಮಹಿಪತಿ-ಕಂದಗ ಸಾರಿದ ನಿಜ ಖೂನಾ 4 ತಂದೆ ಮಹೀಪತಿ-ಕಂದಗ ಸಾರಿದ ನಿಜ ಖೂನಾ| ದ್ವಂದ್ವ ಗೆಲಿದು ಸ್ವಾನಂದದಲಿರುವವನೇ ಜಾಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದರೊಳಾರೈಯ್ಯ ನೀನು ಆತ್ಮಾ ವದಗಿ ನಾನೆಂದ ಹಂಕರಿಸಿ ಓಯಂದೆಂಬೆ ಪ ನೋಡುವವನೊಬ್ಬ ತಾ ಕೇಳಲರಿಯನು ನುಡಿಯ ನೋಡಲರಿಯನು ಕೇಳುವವ ರೂಪವಾ ಆಡುವವ ನುಡಿಯೊಬ್ಬ ಪರಿಮಳಂಗಳ ತಿಳಿಯಾ ಅಡಲರುವಿಲ್ಲ ಘ್ರಾಣೇಂದ್ರಿಯವನೆ 1 ಕೊಡುವವಗೆ ನುಡಿಯಿಲ್ಲ ನಡೆವವಗೆ ಕರವಿಲ್ಲಾ ಬಿಡದೆ ಚೇಷ್ಟಿಸುವವಗ ರೂಪವಿಲ್ಲಾ ಒಡನಾರು ಮೂರು ಇಪ್ಪತ್ತೈದು ಕೂಟದಲಿ ಗಡಣದಿಂದಿಹ ಮನೆಗೆ ಕ್ಷೇತ್ರಜ್ಞನೊಬ್ಬನಿಹ 2 ತನ್ನ ನಿಜ ತಾನರಿಯ ಧನ್ಯ ತಾನೆಂತೆಂಬೊ ನಿನ್ನ ಬಲ್ಲವಿಕಿಗಿದು ನೋಡುಚಿತವೆ ಇನ್ಯಾರೆ ತಂದೆ ಮಹಿಪತಿ ಬೋಧವನು ಸವಿದು ಕಣ್ಣದರೆದಚ್ಯುತನ ನೆನೆದು ತಿಳಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿನ ದಿನ ಸುದಿನ ನಾಳೆಗೆಂದರೆಂದು ಕಠಿಣ ಮಂದಮತಿಯು ನೀನಾಗದೆ ಈಗ ಮುಕುಂದನ ನಾಮ ಕೀರ್ತನೆಯ ಮಾಡುವುದಕೆ ಪ ಯೋಗಿಗಳೊಡನಾಡು ವಿಷಯದ ಭೋಗವ ನೀಡಾಡು ನಿನ್ನ ನೀ ತಿಳಿವುದಕೆ 1 ಅಸ್ಥಿರ ದೇಹವಿದುನಾನಾವಸ್ಥೆ ಬಾಧಿಸುತಿಹುದು ಬಿಡನೊಡನಾಡುವುದಕೆ 2 ಸಾಧು ಸಂಗತಿಯಿಂದ ಪಾಪವಿಚ್ಛೆದನವದರಿಂದ ಲಕ್ಷ್ಮೀರಮಣನ ಪೂಜಿಸಲಿಕೆ 3
--------------
ಕವಿ ಪರಮದೇವದಾಸರು
ಇಂದಿನ ದಿನವೆ ಸುದಿನ | ಗೋ ವಿಂದನ ಸ್ಮರಣೆಯ ಗೈದುದರಿಂದ ಪ ನಾಳೆ ಏಕಾದಶಿ ಹರಿದಿನವೆನಲಾ ವೇಳೆಗೆ ವುಳಿವೆವೋ ಅಳಿವೆವೋ ಅರಿಯೆವು ತಾಳವಾದ್ಯತಂಬೂರಿಗಳಿಲ್ಲವೆಂ ದಾಲೋಚಿಸೆ ಹರಿಭಜನೆಯು ದುರ್ಲಭ 1 ಗೀತವಿದ್ಯಾಕೋವಿದರಿಹರೆನ್ನುತ ಯಾತರ ದಾಸರ ಪದಗಳು ಎನುತಲಿ ಮಾತನಾಡಿ ಕಾಲವ ಕಳೆದೊಡೆ ಇ ನ್ನಿತರ ಕಾಲವು ದೊರಕುವುದಿಲ್ಲ2 ದಾಸರ ಪದದೊಳಗಿರುವ ಮಹತ್ವವು ಲೇಶವಿಲ್ಲ ಸಂಗೀತ ಸ್ವರದೊಳು ಭಾಸುರಾಂಗ ಮಾಂಗಿರಿಪತಿ ಸಲಹುವ ದಾಸರಪದ ತಾಳಗಳಿಗೊಲಿವಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದಿನಾಜನ್ಮದಲಿ ದರಿದ್ರನು ಇಂದು ಕೊಡಲಿಕೆ ಇಲ್ಲ ಎಂದೆಂದಿಗೂ ಹುಟ್ಟು ದರಿದ್ರನು ಪ ಅನ್ನವನು ಅತಿಥಿಗಿಕ್ಕದಕಾರಣ ಕೈಯಾರೆ ಮಾಡದಕಾರಣ 1 ಇಲ್ಲದ ಕಾರಣ ದರಿದ್ರವದುಕಾರಣ 2 ಮಾಡುವುದು ಕೋಪವನು ಅದು ಕಾರಣ ರೂಢಿಯೊಳು ದರಿದ್ರವದುಕಾರಣ 3 ಬಂಗಾರವಿಲ್ಲದು ಕಾರಣ ಮುನ್ನದಾನವನು ಮಾಡದಿಹಕಾರಣ 4 ನೆರೆಮಾಡಿ ಭಕ್ತೀಯೊಳುದಾರಿದ್ರವ ಪರಿಹರಿಸಿ ನೊಲಿದವರಿಗೆ ಭಾಗ್ಯ ಬಹುದದುಕಾರಣ 5
--------------
ಕವಿ ಪರಮದೇವದಾಸರು