ಒಟ್ಟು 1106 ಕಡೆಗಳಲ್ಲಿ , 101 ದಾಸರು , 863 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಾಲಿ ಶ್ರೀ ಕೃಷ್ಣ ಬಾಲ ಲಾಲಿ ನಂದ ಯಶೋದೆ ಲೀಲ ವೇಣುಗೋಪಾಲ ಪ. ವಸುದೇವ ಸುತನಾಗಿ ಬಂದು ಎಸೆವೊ ಗೋಕುಲದಲಿ ನಿಂದು ಅಸುರಕುಲ ಸಂಹಾರಕೆಂದು ನಸುನಗುತ ಗೋಪಿಯರ ವಶವಾಗ್ವೆನೆಂದು 1 ಪುಟ್ಟಿದಾ ಶಿಶುವನ್ನೆ ನೋಡಿ ನಕ್ಷತ್ರ ರೋಹಿಣಿ ಎಂದು ತಿಳಿದು ಅಷ್ಟಜನ ಸಹಿತ ಗೋಕುಲದಿ ಸಂತುಷ್ಟಿಯೊಳು ನಾಮಕರಣವ ಮಾಡಿ ನಲಿದೂ 2 ವೇದ ಘೋಷಗಳಾಗುತಿರಲೂ ಆದಿ ಮೂರುತಿಗೆ ಮೋಹದಲಿ ಕೃಷ್ಣನೆಂದ್ಹೆಸರನಿಡಲೂ ಸಾದರದಿ ಗೋಪ ದಕ್ಷಿಣೆ ತಾಂಬೂಲ ಅಗಾಧದಲಿ ಬ್ರಾಹ್ಮಣರಿಗೆ ಕೊಟ್ಟು ನಲಿದೂ 3 ಚತುರ ವೇದದ ನಾಲ್ಕು ಸರಪಣಿಯ ಹೂಡಿ ಚತುರ ದಿಕ್ಕನೆ ನಾಲ್ಕು ಚೌಕ ತೊಟ್ಟಿಲನೆ ಕಟ್ಟಿ ಚತುರ್ಮುಖನಯ್ಯನ ತೊಟ್ಟಿಲೊಳಗಿಟ್ಟು ಅತಿಶಯದಿ ನಾರಿಯರು ತೂಗಿದರು ಹರಿಯಾ ಲಾಲಿ4 ಮಚ್ಛಕೂರ್ಮನೆ ವರಹ ಲಾಲಿ ತುಚ್ಛ ದೈತ್ಯನ ಕೊಂದ ನರಹರಿಯೆ ಲಾಲಿ ಅಚ್ಚವಾಮನ ಭಾರ್ಗವ ಕೃಷ್ಣ ಲಾಲಿ ಸಚ್ಚ ಬೌದ್ಯಕ ಶ್ರೀ ಶ್ರೀನಿವಾಸನೆ ಲಾಲಿ 5
--------------
ಸರಸ್ವತಿ ಬಾಯಿ
ಲೀಲಾ ಮನೋಹರ ವಿಠಲ | ಪಾಲಿಸೊ ಇವಳಾ ಪ ನೀಲ ಮೇಘ ಶ್ಯಾಮ | ಕಾಳಿಂದಿ ರಮಣಾಅ.ಪ. ಆಪನ್ನ ಪಾಲಾ |ನಿನ್ನವಾಳೆಂದೆನುತ | ಮನ್ನಿಸೀ ತಪ್ಪುಗಳಘನ್ನ ಮಹಿಮನೆ ಕಾಯೊ | ಕಾರುಣ್ಯ ಮೂರ್ತೇ1 ಸತ್ಸಂಗದಲಿ ಇಟ್ಟು | ಸತ್ಸಾಧನೆಯಗೈಸಿಮತ್ಸರಾದ್ಸರಿಗಳನ | ಕತ್ತರಿಸಿ ಹಾಕೀಉತ್ಸಹದಿ ಸಂಸಾರ | ಯಾತ್ರೆಗಳ ಚರಿಸಯ್ಯಮತ್ಸ್ಯ ಮೂರುತಿ ಹರಿ | ಸತ್ಯವ್ರತ ಪಾಲಾ 2 ತರತಮಾತ್ಮಕ ಜ್ಞಾನ | ಸದನದಲಿ ತಿಳಿ ಪಡಿಸಿಹರಿ ಭಕ್ತಿ ವೈರಾಗ್ಯ | ಎರಡು ಅನುಸರಿಸೀ |ಬರುವಂತೆ ಗೈದು ಉ | ದ್ಧರಿಸೊ ಹರಿ ಇವಳನ್ನನರಹರೀ ಮಾಧವನೆ | ಪರಿಪೂರ್ಣ ಕಾಮಾ 3 ಕಾಮ ಜನಕನೆ ದೇವ | ಕಾಮಿನಿಯ ಮನ ಬಯಕೆಪ್ರೇಮದಲಿ ನೀನಿತ್ತು | ಭೂಮ ಗುಣಧಾಮಾ |ಈ ಮಹಾ ಕಲಿಯುಗದಿ | ನಾಮ ಸ್ಮರಣೆಯ ಸುಖವಾನೇಮದಲಿ ನೀನಿತ್ತು | ಪಾಮರಳ ಉದ್ಧರಿಸೋ 4 ಕೈವಲ್ಯ ಪದದಾತಭಾವುಕಳ ಪೊರೆಯೆಂದು | ಭಾವದಲಿ ಬೇಡ್ವೇ |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನೆಭಾವದಲಿ ನೀ ತೋರಿ | ಹರುಷವನೆ ಪಡಿಸೋ 5
--------------
ಗುರುಗೋವಿಂದವಿಠಲರು
ಲೋಕನೀತಿ ಇಳೆಯೊಳಗೆ ದೇಹತಾಳಿ ಬಂದೆಲ್ಲಾ ತಮ್ಮಾ ಗಳಸಿ ಮನೆ ಹೆಂಡಿರು ಮಕ್ಕಳಿಟ್ಟಿಲ್ಲಾ ಬಲಿಸಿ ಹಣ ಹೊನ್ನು ಹೂಳಿಟ್ಟಿಲ್ಲಾ ತಮ್ಮಾ ಒಲಿದು ಉಂಡಿ ವಿಷಯ ಸುಖವಾ ಪೇಳಲ್ಲಾ 1 ತೆರಪೀರಾದೆ ಜನಿಸಿದಾವು ಸುತ್ತಲು ಪರಿಪರಿಯ ಸುಖದುಃಖ ಪಗಲಿರುಳು ತಮ್ಮಾ ಇರದೆಯೊದಗಿ ದಣಿಸಿದಾವು ನಿನ್ನ ಮರುಳೆ 2 ಯಮನವರು ಬರುವದು ಮರೆತೇಯ ತಮ್ಮಾ ರಮಣೀ ಮೋಹಾ ಕೇಳಿರು ನೀನರಿಯಾ ಅಮಿತ ಧನ ಬಳಗ ಇನ್ನೆಲ್ಲಯ್ಯಾ ತಮ್ಮಾ ನಮೋ ನರಸಿಂಹವಿಠಲ ಎನ್ನಯ್ಯ 3
--------------
ನರಸಿಂಹವಿಠಲರು
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವರಗಿರಿವಾಸನ ಅರಮನೆ ಸೊಬಗನೆ ದೊರೆಗಳು ನೋಡಿ ಶಿರಗಳ ತೂಗುತ ಬೆರಗಾಗಿಪ. ಛÀತ್ರ ಚಾಮರ ರಾಜ ಪುತ್ರರು ಚಂದಾಗಿಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತಬ್ಯಾಗ ಹೊಕ್ಕರು ಚಿತ್ತಜನೈಯ್ಯನÀ ಅರಮನೆಯೊಳಗೆ 1 ತಾರಾಪತಿಗಳಂತೆ ತೋರುತಲೈವರುಥೋರ ಮುತ್ತುಗಳ ಅಲವೂತಥೋರ ಮುತ್ತುಗಳ ಅಲವೂತ ಹೊಕ್ಕರುವೀರಕೃಷ್ಣಯ್ಯನ ಅರಮನೆ ಬ್ಯಾಗ2 ಪಚ್ಚದ ಪಾವಟಿಗೆ ರತ್ನ ಹಚ್ಚಿದ ಚೌಕಟ್ಟುಅಚ್ಚಮುತ್ತುಗಳ ಅಲವುತಅಚ್ಚಮುತ್ತುಗಳ ಅಲವುತ ಹೊಕ್ಕರುಚಿತ್ತಜನಯ್ಯನ ಅರಮನೆ ಬ್ಯಾಗ 3 ಪಕ್ಷಿ ವಾಹನನರಮನೆ ದಕ್ಷಿಣ ದ್ವಾರದಿಲಕ್ಷಣವುಳ್ಳ ವನಿತೆಯರುಲಕ್ಷಣವುಳ್ಳ ವನಿತೆಯರು ತೆರೆದ ಬಾಗಿಲೊಳು ನಕ್ಷತ್ರದಂತೆ ಹೊಳೆಯುತ4 ಎಡಬಲ ಶ್ರೀತುಳಸಿಗಿಡಗಳು ಅಲವುತ ಕಡಲಶಯನನ ಅರಮನೆ ಒಳಹೊಂದಿಕಡಲಶಯನನ ಅರಮನೆ ಒಳಗಿನ್ನುನಾರಿಯರು ನೆರೆದರು 5 ಗಂಧದ ಥಳಿ ಕೊಟ್ಟು ಚಂದುಳ್ಳ ಅಂಗಳಕಹಂದರಗಳ್ಹಾಕಿದ ಇಂದಿರೇಶನರಮನೆಇಂದಿರೇಶನ ಅರಮನೆಯೊಳಗೆಬಂದುನಾರಿಯರು ನೆರೆದರು 6 ಚಂದ್ರನಂತೊಪ್ಪುತ ಚಂದಾಗಿನಿಂತತಂದೆ ರಾಮೇಶನ ಅರಮನೆ ತಂದೆ ರಾಮೇಶನ ಅರಮನೆ ವೃಂದಾವನಕೆಹೊಂದಿ ನಾರಿಯರುನೆರೆದರು ಬೆರಗಾಗಿ 7
--------------
ಗಲಗಲಿಅವ್ವನವರು
ವರಗುರು ತಂದೆ ಮುದ್ದು ಮೋಹನದಾಸರೆಗಿತ್ತರು ಲೇಸ ಪರಮ ಸಂಭ್ರಮದೊಳಿವರ ಸಹವಾಸ ಕರುಣಿಸಿದನು ಶ್ರೀಶ ಪ ರಾಗ ದ್ವೇಷಾದಿಗಳಿವರೊಳಗಿಲ್ಲ ಪಾಮರರಿವರಲ್ಲ ಶ್ರೀ ಗುರುಗಳೆನಗಿವರೆಂದು ಸ್ತುತಿಪನಲ್ಲ ಲಾಲಿಪುದೆನಸೊಲ್ಲ 1 ಶುಭ ಚರಿತೆಯನು ಜ್ಞಾನಿಗಳೆಂಬುದನು ಖುಲ್ಲ ಜನ ನಿಂದಿಸಿದರಾಗುವದೇನೊ ಅರಿಯೆನಯ್ಯ ನಾನು 2 ಪಾದ ಸರಸಿರುಹಕೆ ಭ್ರಮರರೆನಿಸುವ ಗುಣಯುತರ ಕುಜನಗಳೇನು ಬಲ್ಲರಯ್ಯ ಇವರ ಮಹಿಮಂಗಳ ವಿವರ 3 ಕರಿಗಿರಿಯೆಂಬ ವರಕ್ಷೇತ್ರದಲ್ಲಿ ವರುಷಂಪ್ರತಿಯಲ್ಲಿ ಹರಿದಾಸೋತ್ತಮ ಧರಣಿಸುರರನಲ್ಲಿ ಬಲು ಸೇವಿಪರಲ್ಲಿ 4 ಇಷ್ಟದೈವ ಅಪವರ್ಗಪ್ರದನೆಂಬ ಶ್ರೀ ನರಹರಿಯೆಂಬ ದಿಟ್ಟ ಶ್ರೀ ರಂಗೇಶವಿಠಲನ ಬಿಂಬಾಕೃತಿಯ ಸದಾ ಕಾಂಬ 5
--------------
ರಂಗೇಶವಿಠಲದಾಸರು
ವರದ ನಿನ್ನ ರೂಪ ಶ್ರೀ ನಿರುತ ನೋಡುವರೆ ಶ್ರೀ ಸರಸಿಜಭವ ಸಕಲ ಪ ಸುರರು ಮನುಗಳು ಮುನೀಶ್ವರರು ಶ್ರುತಿತತಿ ಯರು ದಿಗ್ವರರು ತಾಕ್ಷ್ರ್ಯಕನ ಮತ[ದವರು] ಅ.ಪ ಪರಭಕ್ತರಿಗೆ ದುಸ್ತರವಾದೊಡೆಯು ಕಾಡುವರಿಷಡ್ವರ್ಗವನೂ ತೊರೆದು ಹೃದಯದಿ ತೀರ್ಥ ಚರಣಾರವಿಂದಗಳಿಂ ನಿರಿಸಿ ಪೂಜಾತಪವನುರೆ ಚರಿಸಿ ವ್ರತಗಳಿಂ1 ಧರೆಯನಳೆದಂಗವೇನಯ್ಯ ಅಂದು ನರನಿಂಗೆ ತೋರಿದುದೆ ಜೀಯಾ ಶರಣರುಗಳೊದೆಯುವ ಕಾಯಾ ನಿನ್ನ ನಿರುಗೆಯನು ತೋರಿಸಲು ಒಡೆಯ ಕಾಣ 2 ಅರಿಯಬರುವುದಿಲ್ಲೀ ಚಿತ್ರಮಯ ಅಲ್ಪ ನರನರಿತರಿಯದವನು ನೆಲೆಯಾ ನೋಡ ಮಾಯಾ ವೇಲಾ ಪುರಿವಾಸ ವೈಕುಂಠ ಚೆನ್ನಕೇಶವರಾಯಾ 3
--------------
ಬೇಲೂರು ವೈಕುಂಠದಾಸರು
ವರಾಹ ಹರಿ ವಿಠಲ | ಕಾಪಾಡೊ ಇವನಾ ಪ ನಿರುತ ತವನಾಮ ಸ್ಮøತಿ | ಕರುಣಿಸುತ ಕಾಯೋಅ.ಪ. ತಾರಕವು ತವನಾಮ | ಸ್ಮರಣೆ ಮಾತ್ರದಿ ಎಂದುಒರಲುತಿದೆ ವೇದಗಳು | ಕರಿವರದ ಹರಿಯೇತರುಳ ಸಾಧ್ವೀ ಯುವಕ | ಮೊರೆಯಿಡುವನಂಕಿತಕೆಒರೆದಿಹೆನು ಅದರಿಂದ | ಕರೆದು ಕೈ ಪಿಡಿಯೋ 1 ಕಾಮವರದನೆ ದೇವ | ಕಾಮಿತಾರ್ಥಗಳಿತ್ತುನೇಮದಿಂ ಪೊರೆಯುವುದು | ಕಾಮಪಿತ ಹರಿಯೇ |ನೇಮ ನಿಷ್ಠೆಯಲಿಂದ | ಧೀಮಂತ ಪದಕೆರಗಿಸೌಮನಸ್ಯದಿ ಸೇವೆ | ಸಲ್ಲಿಸುವನಯ್ಯಾ 2 ಹರಿಯೆ ಸರ್ವೋತ್ತಮನು | ಸಿರಿವಾಯು ಮೊದಲಾದಸುರರೆಲ್ಲ ಕಿಂಕರೆಂಬ ಮತಿಯ ಕೊಟ್ಟುವರಜ್ಞಾನ ಭಕುತಿಯನೆ ಕರುಣಿಸುತ ಪೊರೆಯಯ್ಯಾವರದ ಗುರು ಗೋವಿಂದ ವಿಠಲ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ವಾದಿರಾಜರು ವಾದಿರಾಜ ಗುರುರಾಜರ ಕೊಂಡಾಡಿ ಜನಿಪ ಸುಖವನು ಬೇಡ ಪ ಸೋದೆ ಸ್ಥಳದಲಿ ನಿಂತು ಮೆರೆವನಯ್ಯಹಯವದನನ ಪ್ರಿಯ ಅ.ಪ. ಮೋದತೀರ್ಥ ಮತವಾರಿಧಿ ಪೂರ್ಣಚಂದ್ರ ಸದ್ಗುಣ ಸಾಂದ್ರಾಮೇದಿನಿಯೊಳಗಿಹ ತೀರ್ಥ ಕ್ಷೇತ್ರವ ಚರಿಸಿ ಸಂತರನುದ್ಧರಿಸಿಸಾದರದಲಿ ಹರಿಮಹಿಮೆಯ ಕೊಂಡಾಡಿ ಪ್ರಬಂಧವನು ಮಾಡಿವಾದಿಗಳೆಂಬುವ ಗಜಕುಲ ಹರ್ಯಕ್ಷನಾಗಿಹ ಹರಿದೀಕ್ಷಾ 1 ಎರಡೀರರುವತ್ತು ವಿದ್ಯಾಪೂರ್ಣನೆನಿಸೀ ದೂಷಕರನು ಜಯಿಸಿಬಿರುದುಗಳನಪಹರಿಸಿದ ಯತಿವರ್ಯ ಹರಕಾರ್ಯ ಧುರ್ಯವರಭೈಷ್ಮಿಶನ ವಿಜಯದ ಕಾವ್ಯವನು ಬಹುಪರಿ ಮಹಿಮೆಯನುವಿರಚಿಸಿ ಕವಿಕುಲ ಮಾನ್ಯನೆನಿಸಿಕೊಂಡ ಹರಿದಾಸ ಪ್ರಚಂಡಾ 2 ಅನುದಿನ ಸೇವಕರುಭೂತಳದ ಜನರು ಬೇಡಿದ ಇಷ್ಟಾರ್ಥ ಕೊಡುವಂಥ ಸಮರ್ಥಧಾರುಣಿಪತಿ ಗೋಪತಿವಿಠಲ ನಿನ್ನೊಶನಾಗಿಹನಲ್ಲ 3
--------------
ಗೋಪತಿವಿಠಲರು
ವಾಮ ಭಾಗದಿ ಲಕ್ಷ್ಮೀದೇವಿಯುಭೂಮಿ ದೇವಿಯು ದಕ್ಷಭಾಗದಿಶ್ರೀ ಮನೋಹರನಿಹನು ಮಧ್ಯದಿಪ್ರೇಮದಲಿ ನಮಿಸು 1 ನಮಿಸು ಕೃದ್ದೋಲ್ಕ ವಾಸುದೇವರಸ್ಮರಿಸು ಕೇಶವದ್ವಿತಿ ಮತ್ಪರಸ್ಮರಿಸು ಕೂರ್ಮಾನಂತ ಶಕ್ರರಸುರಿಪ ದಿಶಿಯಲ್ಲೀ 2 ಸ್ಮರಿಸು ಸಹಸ್ರೋಲ್ಕ ಮಾಯರಶಿರಿವರಾವನಿ ಧರನ ವಾರುಣಿಸ್ಮರಹರಾಂಚಿತನು ವಹ್ನಿಯಶರನ ಕೋನದಲಿ 3 ನಮಿಸು ಮಹೋಲ್ಕ ಸಂಕರ್ಷಣನನಮಿಸು ಗೋವಿಂದ ವಿಷ್ಣು ನರಹರಿನಮಿಸು ವಾಮನ ಬ್ರಹ್ಮ ಯಮರನುಕ್ರಮದಿ ದಕ್ಷಿಣದಿ 4 ಸ್ಮರಿಸು ಸಹಸ್ರೋಲ್ಕ ಜಯರನುಸ್ಮರಿಸು ಮಧುಹನ ಪರಷುರಾಮನಸರಸಿಜಾಸನ ಸತಿಯು ನಿಋತಿಯತಿಋತಿ ಕೋಣದಲಿ 5 ವೀರ ಉಲ್ಕ ಪ್ರದ್ಯುಮ್ನ ತ್ರಿವಿಕ್ರಮಸಾರ ರಘುವರ ವೃಷ್ಣಿನಾಥಸ-ಮೀರ ವರುಣರ ಪೂಜಿಸೂವುದುವಾರಿ ದಿಶೆಯಲ್ಲೀ 6 ನುತಿಸು ಸಹಸ್ರೋಲ್ಕ ಕೃತಿಯರನತಿಸು ಶ್ರೀಧರ ಬುದ್ಧಿ ಭಾರತಿಸತತ ಗಮನರ ವಾಯು ಕೋಣದೊಳತಿ ಸುಭಕ್ತಿಯಲಿ 7 ದ್ಯುಲ್ಕ ಅನಿರುದ್ದೇಂದ್ರಿಶೇಯರನಳಿನನಾಭನ ಕಲ್ಕಿ ನಂತರಸಲಿಲ ಮೂರುತಿ ರೋಹಿಣೇಶರಒಲಿಸು ಉತ್ತರದೀ 8 ಸ್ಮರಿಸು ಸಹಸ್ರೋಲ್ಕ ಶಾಂತರಸ್ಮರಿಸು ದಾಮೋದರನ ವಿಶ್ವನಗಿರಿಜೆಯನು ಪಾರ್ವತೀ ಪತಿಯಹರನ ಕೋಣದಲಿ 9 ವಾರಣಾಸನ ಮೊದಲು ನಿಜಪರಿವಾರ ಸಹಿತದಿ ಸರ್ವದಿವಿಜರುಮಾರನಯ್ಯನ ಸುತ್ತಲೂ ಪರಿ-ಚಾರರಾಗಿಹರು 10 ಈಸು ಪೀಠಾವರಣ ತ್ರಿದಿವನಿವಾಸಿಗಳ ಮಧ್ಯದಲಿ ಸಂತತವಾಸುದೇವನ ಪೂಜಕೇಶನಿ-ವಾಸ ಪೊಂದುವರು 11 ಗಿರಿಯೊಳಿರುತಿಹ ವೆಂಕಟೇಶನಸರಸ ಪೀಠಾವರಣ ಪೂಜೆಯಕರಡಿ ಮಗಳಿಗೆ ಜೈಗಿಷವ್ಯನುಅರುಹಿದನು ಮುದದಿ 12 ಗರುಡನಿಗೆ ಶ್ರೀಕೃಷ್ಣ ಪೇಳಿದಹರಿಯ ಪೀಠಾವರಣ ಪೂಜೆಯಸರ್ವ ಜನರಿಗೆ ತಿಳಿಯಲೋಸುಗವಿರಚಿಸಿದೆ ನಾನೂ 13 ಇಂದಿರೇಶನು ಎನ್ನವಾಣಿಲಿನಿಂದು ಮಾಡಿದನೀ ಸುಗ್ರಂಥವಲೆಂದು ಆತನ ಪಾದಕಮಲದ್ವಂದ್ವಕೊಪ್ಪಿಸುವೆ 14
--------------
ಇಂದಿರೇಶರು
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಾಸುದೇವ ವಾರಿಜಾಕ್ಷನಾ ಸ್ತುತಿಸು ಮನದಿ ಪ ಸಾಸಿರನಾಮದೊಡೆಯ ಸಕಲಲೋಕಕರ್ತನಾದ ಸುಜನ ಪೋಷಕ ಭಕ್ತವಿಲಾಸ ಅ.ಪ ಪಂಕಜೋದರ ಪರಮ ಪಾವನ ಸರ್ವಜಗವ ಬಿಂಕದಿಂದ ಪೊರೆವ ದೇವನಾ ಶಂಕೆಯಿಲ್ಲದ ದನುಜ ಮರ್ದನನಾದ ತನ್ನ ಕಿಂಕರರÀನು ಬಿಡದೆ ಕಾಯುವಾ ವೆಂಕಟಾದ್ರಿ----ದ ವೇಣುನಾದದಲಿ ಬುಧವಂದ್ಯ ಶಂಕರಾದಿ ದೇವ ದೇವ ಶರಧಿಶಯನ ಶಾಶ್ವತನಾದ 1 -----ಶ್ವ ರೂಪನಾ ಎಂದು ಎಂದಾನಂದ ದಿಂದ ಅನುದಿನ ಚಂದದಿಂದ ---ಸನಾ |----ಭವ ಬಂಧಕವನೆ ಪರಿಹರಿಸುವನಾ ಕಂದ ಕೂಗಲು ಕಂಭದಿಂದಾ ಬಂದ ನಾರಸಿಂಹನ ಮೂರ್ತಿ 2 ----------ಮಹಾನುಭಾವ ಕಂಡ ಮುನಿಗಳಂತರ್ಭಾವನಾ ಕುಂಡಲೀಶÀ ಭೂಷಣ ಪ್ರೀಯನಾಕರ ಘನಾ ಕೋದಂಡಧರ ಶ್ರೀರಾಮನಾದನಾ ಪುಂಡಲೀಕ ವರದಹರಿ-----ತನಾದ ವೇದವೇದ್ಯ ಅಂಡಜನ--------ಹರಿ 'ಹೊನ್ನಯ್ಯ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು