ಒಟ್ಟು 1007 ಕಡೆಗಳಲ್ಲಿ , 98 ದಾಸರು , 873 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿನುತ ಪದ ಪ ಭವ ಸರ್ವಜೀವ ಹೃದ್ವನಜ ನಿವಾಸಿ ಅ.ಪ ಕಾನನ ಗಂಭೀರ ಸುಗುಣದಾರ ಸುವಿಚಾರಧೀರ | ರಘು ಧರಣಿಜಾ ಕರುಣಾಕರ ದಿನಕರ ಕುಲಮಣಿ ಜನ ವರ ಶುಭಕರ1 ಖರವಿದಾರ ಕಲಿ ಕಲ್ಮಷನಾಶನ ನಾಮ ಶ್ರೀಕರ ಸುಂದರ ಶ್ಯಾಮ ಭಾಸುರ ಶರೀರ ಸಂಪೂರ್ಣ ಕಾಮ ತುಳ- ಸೀದಳಧಾಮ ವಿಭೀಷಣ ಪ್ರೇಮ 2 ಕಮಠ ಕಿಟ ನರಹರಿ ವಾಮನರೂಪ ಭಾರ್ಗವ ಕರಧೃತ ಚಾಪ ಸುಜ್ಞಾನದೀಪ ವಸುದೇವ ತನಯ ಜಿನ ಜಾತ ಕಲ್ಕಿ ಗುರುರಾಮ ವಿಠಲ 3
--------------
ಗುರುರಾಮವಿಠಲ
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಶ್ವಧಾರನೋ ಶ್ರೀಶ ವಿಶ್ವಕಾರನೋ ವಿಶ್ವ ವಿಶ್ವಭರಿತ ವಿಶ್ವರಕ್ಷ ವಿಶ್ವಚರಿತ ಪ ನಾದಭರಿತನೋ ಹರಿ ನಾದಾತೀತನೋ ವೇದಾಧರನೋ ರಂಗ ವೇದ ಗೋಚರನೋ ವೇದವೇದಾಂತ ಸ್ವಾದ ನಿಖಿಲ ಬೋಧರೂಪ ಭೇದರಹಿತ ಆದಿ ಅನಾದಿದಾತ ಸತತ ಸಾಧುಸಜ್ಜನವಿನುತ ಅಮಿತ1 ದೇವದೇವನೋ ಸ್ವಾಮಿ ದಿವ್ಯಚರಿತನೋ ಕಾವ ಕರುಣನೋ ಭಕ್ತಿ ಭಾವಪೂರ್ಣನೋ ಸಾವುಹುಟ್ಟು ಭಯವಿದೂರ ಮಾಯಗೆಲಿದ ಮಹಪ್ರಕಾಶ ಭಾವಜಜನಕ ಭವಭಂಗ ಸೇವಕಜನರ ಜೀವದಾಪ್ತ 2 ದೋಷನಾಶನೋ ಕೃಷ್ಣ ಮೀಸಲಾತ್ಮನೋ ಭಾಸುರಂಗನೋ ಜಗದೀಶ ಗಮ್ಯನೋ ವಾಸುಕಿಶಯನ ವಾಸುದೇವ ಸಾಸಿರನಾಮದೊಡೆಯ ಇಂದಿ ರೇಶ ಗೋವಿಂದ ಪೋಷಿಸೆನ್ನ ಶ್ರೀಶ ಶ್ರೀರಾಮದಾಸಪ್ರಿಯ 3
--------------
ರಾಮದಾಸರು
ವಿಷಯ ಸುಖ ಕ್ಷಣಭಂಗುರ ಕೊನೆಯಲಿಯಿದು ದುಃಖರೂಪ ಪೂರ್ಣಶಾಂತಿ ದೊರಕದು ಈ ಪ ಮೋಹದಿಂದ ಬಯಸುತಿರುವ ಇಹಪರಲೋಕಗಳ ಸುಖವು ನಾಶವಂತ ಕೊನೆಯಲೊಮ್ಮೆ ಕ್ಲೇಶದಾಯಕವು ತಿಳಿಯೈ 1 ಪರಮಸೌಖ್ಯ ಆತ್ಮರೂಪ ಅರಿತುಕೊಂಡು ನಿನ್ನೊಳಗೆ ಮರುಳಾಗದೆ ವಿಷಯಸುಖಕೆ ಗುರುಶಂಕರನಡಿ ಸೇವಿಸು 2
--------------
ಶಂಕರಭಟ್ಟ ಅಗ್ನಿಹೋತ್ರಿ
ವಿಷ್ಣುವೆಂಬುದು ಕೊಂಡಾಡಿ ಧ್ರುವ ಜಿಹ್ವೆಗೊಂಡಿತು ಸುಸ್ವಾದ ದಿವ್ಯನಾಮ ಸುರಸ್ವಾದ ಭವನಾಶಗೈಸಿತು ಗುರುಬೋಧ ಸವಿದೋರಿತು ಗುರುಪ್ರಸಾದ 1 ಸ್ವಾನುಭವದ ಸವಿಸುಖ ಏನೆಂದ್ಹೇಳಲಿ ಕೌತುಕ ಮನಕಾಯಿತು ಹರುಷ ಅನೇಕ ಧನ್ಯ ಧನ್ಯಗೈಯಿತು ಜಿಹ್ವೆಮುಖ 2 ಸುಸ್ಮರಣಿಯ ಮಾಡಿ ನಿತ್ಯ ಮಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿಷ್ಣೋ ಭೋ ಸಂಸೇವಿತ ಜಿಷ್ಣೊ ಉಷ್ಣಾಂಶಾಯುತ ಪುರುರೋಚಿಷ್ಣೊ ಪ ಸುಜನ ಭವಪಾಶನಾಶ ವಾಗೀಶಜನಕ ಲಕ್ಷ್ಮೀಶ ಪರೇಶ 1 ನೀರದ ಶ್ಯಾಮ ಸುರಾರಿಸ್ತೋಮ ವಿರಾಮ 2 ವಿಹಂಗ ಗಮನಯದು ಪುಂಗವ `ಹೆನ್ನೆರಂಗ ' ಕೃಪಾಂಗ 3
--------------
ಹೆನ್ನೆರಂಗದಾಸರು
ವೆಂಕಟ ಬಾರೋ ರಿಪುಸಂಕಟ ಬಾರೊ ಕಿಂಕರಿಗೊಲಿದ ನಿಶ್ಶಂಕ ಬಾರೋ ಪ ಪೊಂದೇರಿನೊಳಗೆ ಭೂಮಿ ಇಂದಿರೆಗೂಡಿ ಚೆಂದದಿಂದಲೊಪ್ಪುತಿಹ ಇಂದುವದÀನ ಮಂದರೋದ್ಧಾರನೆ ಮಹಾನಂದ ಮೂರುತಿ ಪಾದ ವಂದಿಪನೆಂದು 1 ಲೌಕೀಕ ವಿಲಕ್ಷಣ ಅನೇಕ ಏಕ ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ ಪ್ರಾಕೃತ ರಹಿತಗಾತ್ರ ಲೋಕಪಾವನ ಶೋಕ ಮೂಲ ನಾಶನ ವಿಶೋಕ ಜನಕ 2 ಅಂಗ ಅಂಗೀ ಭಾವದಿಂದ ಅಂಗದೊಳಿದ್ದು ಸಂಗಡ ತಿರುಗುವೊ ನೀಲಾಂಗ ನಿಸ್ಸಂಗ ಭೃಂಗ ಜಗದಂತೆ- ರಂಗ ರಂಗರಾಜ ಸುಖಸಂಗ ಅನಂಗ 3 ಆಪ್ತಕಾಮ ಅಮೃತಾಂಗ ಗುಪ್ತಮಹಿಮ ತಪ್ತಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ ತೃಪ್ತ ತೃಣ ಬೊಮ್ಮಾದಿ ನಿರ್ಲಿಪ್ತವಾಸ ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲ 4 ಅಗಣಿತ ಬಂಧು ಅಗನಾಗ ಧಾರಕನೆ ನಾಗ ಭಂಜನ ಆಗಸದಂಗಾಂಗುಷ್ಟದಿಂದ ಪೆತ್ತನೆ ಆಗಲೀಗಲೆನ್ನದಲೆ ಸಾಗಿ ಬೇಗದಿ5 ನಿರ್ದೋಷ ವಸ್ತು ನೀನೆಂದು ನಿರ್ಧಾರ ಮಾಡೆ ಪೊದ್ದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳು ಭದ್ರ ಫಲದಾಯಕ ಸಮುದ್ರಶಯನ ಮಧ್ಯಜೀವಿ ವಂದ್ಯ ಸುಪ್ರಸನ್ನ ಮೋಹನ್ನ 6 ಜೀವಾಭಿಮಾನಿ ಗಿರೀಶ ದೇವ ದೇವೇಶ ಜೀವರಾಶಿಗಳ ಸ್ವಾಭಾವ ಪ್ರೇರಕ ಜೀವನನಾಗಿ ನಮ್ಮ ಕಾವುತಲಿಪ್ಪ ರಾ- ಜೀವ ನಯನ ವಿಜಯ ವಿಠ್ಠಲ ಪೂರ್ಣ 7
--------------
ವಿಜಯದಾಸ
ವೆಂಕಟಗಿರಿವಾಸ ವೆಂಕಟಗಿರಿವಾಸ ವೆಂಕಟಗಿರಿವಾಸ ಶ್ರೀ ವೆಂಕಟೇಶ ಪಸುರ ಸಮುದಾಯ ಶಿರೋಮಣಿ ರಾಜಿತಚರಣಸರೋರುಹ ಶ್ರೀ ವೆಂಕಟೇಶ 1ಕಮನೀಯ ವಿಗ್ರಹ ಕಮಲಾಲಯಾಕರಕಮಲಶೋಭಿತಪಾದ ಶ್ರೀ ವೆಂಕಟೇಶ 2ವಿಧಿಮುಖಾಮರಗಣ ವಿಧಿವಿಹಿತಾರ್ಚಿತಬುಧಹೃದಯಾಲಯ ಶ್ರೀ ವೆಂಕಟೇಶ 3ಸನಕಾದಿಮುನಿವಂದ್ಯ ಸಾಧುಸಂರಕ್ಷಕವನಧಿಸುತಾ ಭೂಮಿಧವ ವೆಂಕಟೇಶ 4ಅಂಜನವೃಷಶೇಷ ವಿನತಾತನುಜ ನಾಮರಂಜಿತಾಚಲವಾಸ ಶ್ರೀ ವೆಂಕಟೇಶ 5ನಾರಯಣಾದ್ರಿ ಸಿಂಹಾದ್ರಿ ಶ್ರೀಶೈಲೇತಿಸಾರ ವೆಂಕಟನಾಮಾಷ್ಟಕ ಭೂಧರೇಶ 6‘ವೆಂ ಪಾಪಂ ಕಟತಿ ನಾಶಯತೀತಿ’ ವಿಖ್ಯಾತಸಾಂಪ್ರತ ಸುಸ್ಥಿರ ಶ್ರೀ ವೆಂಕಟೇಶ 7ನಿತ್ಯ ನಿಜಾನಂದ ನಿರುಪಮಾಮಿತಶಕ್ತಿವೃತ್ತಿ ಪ್ರವರ್ತಕ ಶ್ರೀ ವೆಂಕಟೇಶ 8ದಿವ್ಯ ದಕ್ಷಿಣಮುಖ್ಯದೋರ್ಧೃತ ಶ್ರೀ ಚಕ್ರಸವ್ಯದೋರ್ಧೃತ ಶಂಖ ಶ್ರೀ ವೆಂಕಟೇಶ 9ಭಜಿತವ್ಯಂ ಪಾದಪಂಕಜಮಿತಿ ದರ್ಶಿತನಿಜ ದಕ್ಷಾಧಃಪಾಣೇ ಶ್ರೀ ವೆಂಕಟೇಶ 10ಭಜತಾಂ ಭವಾಂಭೋಧಿ ಕಟಿಮಿತಮಿತಿ ವಾಮಕಟಿ ನ್ಯಸ್ತ ಕರಕಂಜ ಶ್ರೀ ವೆಂಕಟೇಶ11ಹಾರ ಕಿರೀಟ ಕುಂಡಲ ಗಾತ್ರ ಶ್ರೀ ವೆಂಕಟೇಶ 12ಕಂಕಣ ಕೇಯೂರ ವಲಯ ಶೋಭಿತ ಕರಕುಂಕುಮಾಂಕಿತ ಮಾಲ ಶ್ರೀ ವೆಂಕಟೇಶ 13ಕಟಿಸೂತ್ರ ಕಲಿತ ಪೀತಾಂಬರ ಕಿಂಕಿಣಿಕಟಕಮಂಡಿತಪಾದ ಶ್ರೀ ವೆಂಕಟೇಶ 14ತಿರುಪತೀತಿಖ್ಯಾತ ತೀರ್ಥಭೂತಾದ್ರೀಶವರದ ವಿಶ್ವಾಧಾರ ಶ್ರೀ ವೆಂಕಟೇಶ 15ಓಂ ಮುರಾರಯೇ ನಮಃ
--------------
ತಿಮ್ಮಪ್ಪದಾಸರು
ವೆಂಕಟರಮಣ ಮಾಂಪಾಹಿ ಸಂಕಟಹರಣ ಸರ್ವಲೋಕಕಾಧಾರ ಪ ಮತ್ಸ್ಯರೂಪವತಾಳಿ ವೇದಗಳ ರಕ್ಷಿಸಿದೆ ಮತ್ತೆ ಬೆಟ್ಟವ ಪೊತ್ತೆ ಕೂರ್ಮನಾಗಿ ಹೊತ್ತು ಭೂಮಿಯ ಪೊರೆದೆ ವರಾಹಾವತಾರದಲಿ ಬತ್ತಿ ಕಂಬದಿ ಬಂದೆ ನರಸಿಂಹನಾಗಿ ನೀ ಇತ್ತೆ ವರವನು ತುಳಿದು ಬಲಿಯು ನೀಡಲು ತಲೆಯ ವಟುರೂಪಿನಿಂದ ವೆಂಕಟರಮಣ ಮಾಂ ಪಾಹಿ 1 ಹೊತ್ತು ಪರಶುವ ಭುವಿಯ ಕ್ಷಾತ್ರಿಯರನೀ ಕೊಂದೆ ಮತ್ತೆ ರಾಮಾವತಾರದಲಿ ರಾವಣನ ಕೊಂದೆ ನಿತ್ತು ಕಾಪಾಡಿದೆಯೋ ಕೃಷ್ಣ ಪಾಂಡವರನ್ನು ಮತ್ತೆ ಬುದ್ದನರೂಪ ತಾಳಿ ಮೆರೆದೆ ತಾಳಿ ದರುಳ ದುರ್ಜನರನ್ನು ಮೆಟ್ಟಿ ಕುಟ್ಟಿದೆಯೋ ವೆಂಕಟರಮಣ ಮಾಂ ಪಾಹಿ 2 ಬೇಡಿದವರ ಇಷ್ಟಾರ್ಥಗಳನೀವ ಕಾಡಿದ ರಕ್ಕಸರ ಜೀವ ಕೊಳುವ ನೋಡಿ ದಯಮಾಡಿ ನೀಸುಜನರನು ಕಾವ ಆಡಿ ಅಡಗಿಸೋ ನೀನೇ ಮನದ ನೋವ ಗಾಢ ರಕ್ಷಿಸು ಕಡು ಬಾಡಿದೆ ಭಯದಲ್ಲಿ ವೆಂಕಟರಮಣ ಮಾಂ ಪಾಹಿ 3 ವರ ಅಜಾಮಿಳಗೆ ವರವಿತ್ತು ಸಲಹಿದೆಯೋ ಕರಿ ರಾಜ ಬರಲಿದಡೆ ಬಂದು ಕಾಯ್ದೆ ದುರುಳ ಕಾಳಿಂಗನನು ಮೆಟ್ಟಿಕುಣಿದಾಡಿದೆಯೋ ಧರಿಸಿ ಗೋವರ್ಧನವ ಕಾಯ್ದೆಗೋವಳರನ್ನು ವೆಂಕಟರಮಣ ಮಾಂ ಪಾಹಿ 4 ಇಳೆಯೊಳಗೆ ಮೂಡಲಗಿರಿವಾಸನಾಗಿ ನೆಲೆಯ ನರಿದು ಭಜಿಪರ ಪಾಪನಾಶ ಸೂರ್ಯ ಕೋಟಿ ಪ್ರಕಾಶ ಕಲಿಯುಗದೊಳು ನಿನ್ನ ಮಹಿಮೆ ವಿಶೇಷ ಸಲಹೋ ಪಾತಳ ಸೇವೆಯ ಗೆಣಸಿನ ಕುಣಿ ವೆಂಕಟರಮಣ ಮಾಂ ಪಾಹಿ 5
--------------
ಕವಿ ಪರಮದೇವದಾಸರು
ವೆಂಕಟರಮಣನೆ ಸಂಕಟಹರಣನೆ ಶಂಖ ಚಕ್ರ ಪೀತಾಂಬರನೆ ಪ ಪಂಕಜನಾಭನೆ ಪರಮಗೋವಿಂದನೆ ಲಂಕೆ ವಿಭೀಷಣ ನಿಗಿತ್ತವನೇ ಅ.ಪ ಹಿಂದನ ಕರ್ಮದಿನೊಂದೆನು ನಿನ್ನಯ ಕಂದನಮೊರೆಯನು ಲಾಲಿಪುದೂ ಬಂದಿಸಿ ಭವಗಳ ಹೊಂದಿಸೊ ನಿಜಪುರ ಚಂದದೆ ಕ್ಷಿತಿಯೊಳ್ ಪಾಲಿಪುದೂ 1 ಘಾಸಿ ಬಿಡಿಸಿ ನಿಜದಾಸನ ಮಾಡೆಲೊ ಈಶನೆ ಕೇಶವ ಮೂರಿತಯೇ ಆಸೆಯ ತೀರಿಸಬೇಕೈಯಾ ಭವ ನಾಶನೆ ಪಾರ್ಥವ ಸಾರಥಿಯೆ 2 ಪರಿಪರಿ ಭವಗಳ ಹರಿಯುವನೆನ್ನುತಾ ಕರದೊಳು ಕಂಕಣ ಕಟ್ಟಿರುವೇ ಮೊರೆ ಬಿದ್ದೆನು ಶ್ರೀ ತುಲಸೀರಾಮನ ಸ್ಮರಣೆಯ ಹೃದಯದೊಳಿಟ್ಟರುವೆ 3
--------------
ಚನ್ನಪಟ್ಟಣದ ಅಹೋಬಲದಾಸರು
ವೆಂಕಟಾಚಲನಿಲಯಾ ಎನ್ನ ಒಡೆಯ ಪ ವೆಂಕಟಾಚಲನಿಲಯಾ ವಿಧಾತೃಸಂತರೊಡೆಯಾ | ಪಂಕಜಮುಖಿ ರಮಣ ಪಾವನಚರಣಾಅ.ಪ. ಉದಯವಾಗದ ಮುನ್ನ ಉದರ ಪೋಷಣೆ ಚಿಂತೆ | ಅದರ ಮೇಲೆ ಧಾನ್ಯ ಧನದ ಚಿಂತೆ || ಮದನ ಯೌವನದ ಚಿಂತೆ ಮತ್ತೆ ಸತ್ವದ ಚಿಂತೆ | ಹೃದಯದಲಿ ನಿಮ್ಮ ಚಿಂತೆಯನು ಮಾಡದಲೆ ಕೆಟ್ಟೆ1 ಮೇದಿನಿ ಆಳುವ ಆಶೆ | ನಂದನರ ಆಶೆ ನಾನಾ ಆಶೆಯು || ಬಂಧುಬಳಗದ ಆಶೆ ಭಾಗ್ಯವುಳ್ಳವನಾಶೆ | ಒಂದು ದಿನ ನಿಮ್ಮಾಶೆಯನು ಮಾಡದಲೆ ಕೆಟ್ಟಿ 2 ಎದುರುಯಿಲ್ಲವೆಂಬೊ ಗರ್ವ ಎದೆಯ ಬಿಗುವಿನ ಗರ್ವ | ವದನನಿಷ್ಠುರ ಗರ್ವ ವಿದ್ಯ ಗರ್ವವು || ಉದಧಿಶಯನ ನಮ್ಮ ವಿಜಯವಿಠ್ಠಲರೇಯಾ | ಮದ ಗರ್ವದಿಂದ ನಿನ್ನ ನೆನಹು ಮಾಡದೆ ಕೆಟ್ಟೆ 3
--------------
ವಿಜಯದಾಸ
ವೆಂಕಟಾಚಲನೆ ಬಾರೊ ಶಂಕರಾಭರಣ ಶಾಯಿ | ಕಿಂಕರರಿಗೊಲಿದ ನಿಃಶಂಕ ಬಾರೊ ಪ ಇಂದಿರೆ ಕೂಡ | ಚಂದದಿಂದಲೊಪ್ಪುತಿಹ ಇಂದುವದನಾ || ಮಂದರೋದ್ಧಾರನೆ ಮಹನಂದ ಮೂರುತಿ | ವೃಂದಾರಕ ವಂದ್ಯಪಾಲ ವಂದಿಪೆ ನಿಂದು 1 ಲೌಕಿಕ ವಿಲಕ್ಷಣ ಅನೇಕ ಏಕಾ | ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ || ಪ್ರಾಕೃತ ರಹಿತಗಾತ್ರ ಲೋಕಪಾವನ | ಶೋಕ ಮೂಲನಾಶನ ಅಶೋಕ ಜನಕಾ 2 ಮಣಿ ಅಗಣಿತ ಬಂಧು | ಆಗನಾಗಧಾರಕನೆ ನಾಗ ಭಂಜನಾ || ಆಕಾಶ ಗಂಗೆಯ ಅಂಗುಷ್ಟದಿ ಪೆತ್ತನೆ | ಆಗಲೀಗಲೆನ್ನದಲೆ ಸಾಗಿ ವೇಗದಿ 3 ಅಂಗ ಅಂಗಿ ಭಾವದಿಂದ ಅಂಗದೊಳಿದ್ದು | ಸಂಗಡ ತಿರುಗುವ ನೀಲಾಂಗ ನಿಃಸಂಗಾ || ಭೃಂಗ ಜಗದಂತ | ರಂಗ ರಂಗರಾಜ ಸುಖಸಂಗ ನಿಸ್ಸಂಗಾ 4 ಆಪ್ತಕಾಮಿ ಅಮೃತಾಂಗ ಗುಪ್ತ ಮಹಿಮ | ತಪ್ತ ಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ || ತೃಪ್ತ ತೃಣ ಬೊಮ್ಮದಿ ನಿರ್ಲಿಪ್ತ ವ್ಯಾಪ್ತಾ | ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲಾ 5 ನಿರ್ದೋಷ ವಸ್ತುವಿನಿಂದ ನಿರ್ಧರ ಮಾಡೆ | ಪೊಂದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳೂ || ಭದ್ರ ಫಲದಾಯಕ ಸಮುದ್ರಶಯನಾ | ಮಧ್ಯಜೀವಿ ವಂದ್ಯ ಸುಪ್ರಸಿದ್ಧ ಮೋಹನ 6 ಜೀವಾಭಿಮಾನಿ ಗಿರೀಶ ದೇವ ದೇವೇಶಾ | ಜೀವ ರಾಶಿಗಳ ಸ್ವಭಾವ ಪ್ರೇರಕಾ || ಜೀವನವಾಗಿ ನಮ್ಮನು ಕಾವುತಿಪ್ಪ | ರಾಜೀವ ನಯನ ವಿಜಯವಿಠ್ಠಲ ಪೂರ್ಣಾ 7
--------------
ವಿಜಯದಾಸ
ವೆಂಕಟೇಶ ನೀನೆ ಧೊರೀ ಧೊರೀ ಪ ಸಂಕಟವೆಲ್ಲವ ಪರಿಹರಿಸುವಂಥ ಅ.ಪ. ಎತ್ತಿನ ಪೆಸರುಳ್ಳ ಮತ್ತ ರಕ್ಕಸನ್ನ ಕುತ್ತಿಗೆ ಕೊಡಲುತ್ತಮ ಪದವಿತ್ತೆ 1 ಅಂಜನೆಯೆಂಬೊ ಮಂಜುಕಿಸಾಲಿಯ [?] ಅಂಜದೆ ತಪಿಸಲು ಸಂಜೀವನವಿತ್ತೆ2 ಸಾಸಿರ ಮುಖವುಳ್ಳ ಶೇಷನಹಂಕಾರ ಸ್ವಸನನ ಕೈಯಿಂದ ನಾಶಮಾಡಿಸಿದಂಥ3 ಮಾಧವ ಮಾದಿಗ ಹಾದಿಯ ಮೆಟ್ಟಲು ಮಾಧವ ಅವನನ್ನು 4 ಶ್ರೀದವಿಠಲ ನಿನ್ನ ಪಾದಾಶ್ರಿತರ ಮೋದದಿ ಸಲಹೊ ಆದರಿಸೆನ್ನನು 5
--------------
ಶ್ರೀದವಿಠಲರು
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ವೈದೇಹೀರಮಣನೆ ನಮೋ ನಮೋ ಪ. ವಿಶ್ವ ಭದ್ರಾದ್ರೀಶ ಲೀಲಾಮಾನುಷ ಅ.ಪ ಜಯ ರಾಮಚಂದ್ರ ಕೌಶೇಯ ಪೀತವಾಸಶೋಭಿತ 1 ದುಷ್ಟದಾನವಾಂತಕ ನಮೋ ನಮೋ ಶಿಷ್ಟರಕ್ಷಕ, ದೃಷ್ಟಿಸೆನ್ನ ಸೃಷ್ಟಿಕರ್ತನೆ ಇಷ್ಟಾರ್ಥಗಳ ನೀ ಕೊಟ್ಟು ರಕ್ಷಿಸೈ 2 ಶ್ರೀಶೈಲವರದನೇ ನಮೋ ನಮೋ ಶೇಷಶಯನ ಕ್ಲೇಶನಾಶನ ಭೇಷಜಾನನ ಶ್ರೀಶ ಸರ್ವೇಶ ನಿತ್ಯನಿರಂಕುಶ 3
--------------
ನಂಜನಗೂಡು ತಿರುಮಲಾಂಬಾ