ಒಟ್ಟು 754 ಕಡೆಗಳಲ್ಲಿ , 84 ದಾಸರು , 658 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ನಾ ಗೋವಿಂದನಪುಂಡರೀಕಾಕ್ಷಪಾಂಡವ ಪಕ್ಷನಪಕೇಶವ ನಾರಾಯಣ ಶ್ರೀ ಕೃಷ್ಣನವಾಸುದೇವಅಚ್ಯುತಾನಂತನ ||ಸಾಸಿರ ನಾಮದ ಶ್ರೀ ಹೃಷಿಕೇಶನಶೇಷಶಯನ ನಮ್ಮ ವಸುದೇವ ಸುತನ 1ಮಾಧವಮಧುಸೂದನ ತ್ರೀವಿಕ್ರಮನಯಾದವ ಕುಲಜನ ಮುನಿವಂದ್ಯನ ||ವೇದಾಂತ ವೇದ್ಯನ ಶ್ರೀಇಂದಿರೆರಮಣನ-ನಾದಿ ಮೂರುತಿ ಪ್ರಹ್ಲಾದವರದನ 2ಪುರುಷೋತ್ತಮ ನರಹರಿ ಶ್ರೀಕೃಷ್ಣನಶರಣಾಗತ ವಜ್ರಪಂಜರನ ||ಕರುಣಾಕರ ನಮ್ಮಪುರಂದರವಿಠಲನನೆರೆನಂಬಿದೆನು ಬೇಲೂರ ಚೆನ್ನಿಗನ3
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕರುಣಿಸೆನಗೆ ಶಂಭೋ ಕರುಣಿಸಯ್ಯಾಶರಣಾರಂದದಿ ನಿನ್ನ ಮನದಿರವರಿಯೆನುಕರವಜೋಡಿಸಿ ದೇವಾ ಚರಣಕೊಂದಿಪೆನು ಪಕ್ಷೋಣಿಯೊಳ್ ಮಾರ್ಕಾಂಡೆಯಂತೆ ಪೂಜಿಸಲಾರೆಮೀನಾಕ್ಷಿಯಂತೆ ಕಾದಿ ಪರಿಸಲಾನರಿಯೇಬಾಣಾಸುರನಂತೆ ತಪಗೈಯ್ಯಲಾರೆ ನಾನುರಾವಣನಂತೆ ಸಾಮಗಾನವನರಿಯೇ 1ಶಿರದಿ ಚಂದಿರನಂತೆ ಶೋಭಿಸಲಾರೆ ಭಕ್ತಿಸ್ಥಿರವರಿಯೆನು ಭೀಮಸೇನನಂತೆಉರಗನಂದದಿ ಕೊರಳಾಭರಣವಾಗಿರಲಾರೆಗಿರಿಜೆಯಂದದಿ ನೆರೆದು ಮುದ್ದಿಸಲರಿಯೆ 2ಮಂದಾಕಿನಿಯಂತೆ ಜಡೆಯಾಲಂಕರಿಸೆನುನಂದೀಶನಂತೆ ಪೊತ್ತು ತಿರುಗಾಡಲರಿಯೆಇಂದ್ರನಂದನನಂತೆ ಭರದಿ ಮೆಚ್ಚಿಸಲಾರೆಬಂದೆನ್ನ ಸಲಹೋ ಗೋವಿಂದನ ಸಖನೆ 3
--------------
ಗೋವಿಂದದಾಸ
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೆಡಿಸುವನಲ್ಲೊ ನೀ ಬಲು ಕರುಣಿ ನನ್ನಕಿಡಿಗೇಡಿತನ ಉಣಿಸಿತು ಭವಣಿ ಪ.ಹುಸಿಯ ನುಡಿದು ದೆಸೆಗೆಟ್ಟವ ನಾ ನನ್ನಕುಶಲ ಕಲ್ಯಾಣದೊಳಿಟ್ಟ ಕರುಣಿ ನೀಅಸಮ ಚಂಚಲ ಚಿತ್ತವುಳ್ಳವ ನಾ ದುವ್ರ್ಯಸನವಿದಾರಿ ಉದಾರಿಯು ನೀ 1ಹಗಲರಿತ ಕುಳಿಯೊಳ್ಬಿದ್ದವ ನಾ ಎನ್ನನೆಗಹಿ ನೆಗಹಿ ನೆಲೆಗೊಟ್ಟವ ನೀಬಗೆ ಬಗೆ ದೋಷಾಚರಣ್ಯೆವ ನಾ ಮತ್ತಘ ಸಂಚಿತವನೋಡಿಸುವೆ ನೀ 2ವಿಷಯದ ಬಯಕೆಲಿ ನವೆದವ ನಾ ಶುದ್ಧಭೇಷಜನಾಗಿಹೆ ಭವರೋಗಕೆ ನೀವಿಷವನುಂಡು ಕಳೆಗೆಡುವವ ನಾ ಪೀಯೂಷವನೆರೆವ ದಯಾವಾರಿಧಿ ನೀ 3ಅಹಂಕಾರದಲಿ ಬೆರೆತಿದ್ದವ ನಾಶುಭವಹ ನಾಮವನಿತ್ತು ತಿದ್ದುವೆ ನೀಮಹಿಯೊಳಗಮಿತಘ ಸಾಧಕ ನಾ ಎನ್ನಬಹುಕಲುಷವನ ದಾಹಕ ನೀ 4ಕೆಡಿಸಬೇಕಾದರೆ ತಿರ್ಯಗ್ಯೋನಿಯ ನೀಬಿಡಿಸಿ ವೈಷ್ಣವ ಜನ್ಮಕೆ ತಹೆಯಾಒಡೆಯ ಪ್ರಸನ್ವೆಂಕಟ ದಯಾಳು ನಿನ್ನಒಡಲ ಹೊಕ್ಕವನೆಂದು ನಂಬಿನೆಚ್ಚಲು 5
--------------
ಪ್ರಸನ್ನವೆಂಕಟದಾಸರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು
ಗಂಡಬಿಟ್ಟ ಗೈಯಾಳಿ ಕಾಣಣ್ಣ - ಅವಳಕಂಡರೆ ಕಡೆಗಾಗಿ ದಾರಿ ಪೋಗಣ್ಣ ಪ.ಊರೊಳಗೆ ತಾನು ಪರದೇಶಿಯೊನ್ನವಳುಸಾರುತ ತಿರುಗುವಳು ಮನೆಮನೆಯಕೇರಿ - ಕೇರಿಗುಂಟ ಕಲೆಯತ ತಿರುಗುವಳುನಾರಿಯಲ್ಲವೊ ಮುಕ್ಕಾ ಮಾರಿಕಾಣ್ಣ 1ಅತ್ತೆ ಮಾವನ ಕೂಡ ಅತಿ ಮತ್ಸರವ ಮಾಡಿನೆತ್ತಿಗೆ ಮದ್ದನೆ ಊಡುವಳುಸತ್ಯರ ದೇವರ ಸತ್ಯ ನಿಜವಾದರೆಬತ್ತಲೆ ಅಡ್ಡಂಬಲೂಡೇನೆಂಬುವಳು 2ಹಲವು ಜನರೊಳು ಕಿವಿಮಾತನಾಡವಳುಹಲವು ಜನರೊಳು ಕಡಿದಾಡವಳುಹಲವು ಜನರೊಳ ಕೂಗಿ ಬೊಬ್ಬೆಯನಿಡುವಳುತಳವಾರ ಚಾವಡಿಯಲಿ ಬರಲಿ ಹೆಣ್ಣು 3ಪರಪುರುಷರ ಕೂಡಿ ಸರಸವಾಡುತ ಹೋಗಿನೆರೆದಿದ್ದ ಸಭೆಯಲಿ ಕರೆಯುವಳುಮರೆಸಿ ತನ್ನವಗುಣ ಗಾಡಿಯೆಂದು ಮೆರೆವಳುಕರಿರೂಪದವಳ ನೀ ಕೆಣಕದಿರಣ್ಣ 4ಏಸು ಗೃಹಗಳೆಂದು ಎಣಿಸಿ ನೋಡಿಬಂದುಬೇಸರದೆ ಜನಕೆ ಹೇಳುವಳುಲೇಸಾಗಿ ಪುರಂದರವಿಠಲನು ಹೇಳಿದಹೇಸಿ ತೊತ್ತನು ನೀನು ಕೆಣಕದಿರಣ್ಣ 5
--------------
ಪುರಂದರದಾಸರು
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು
ಗೋಪಿಯ ಭಾಗ್ಯವಿದು |ಆ ಪರಮಾತ್ಮನ ಅಪ್ಪಿ ಮುದ್ದಿಡುವುದು ಪಅಂಬೆಗಾಲಿಡು ಹರಿಕುಣಿದಾಡೈ ತೋ-|ಳಂಬಲಿ ತಾ ಹೊಂಗುಬ್ಬಿಯನು ||ಅಂಬುಜನಾಭ ನೀನಾನೆಯನಾಡೆಂದು |ಸಂಭ್ರಮದಿಂದ ಮುದ್ದಾಡುವಳೊ 1ನಿತ್ಯನಿರ್ಮಲನಿಗೆ ನೀರನೆರೆದು ತಂದು |ಎತ್ತಿ ತೊಡೆಯೊಳಿಟ್ಟು ಮುದ್ದಿಸುತಾ ||ಸತ್ಯಲೋಕವನಾಳುವ ವಿಧಿಜನಕನ |ಪುತ್ರನೆಂದರಿತು ತಕ್ಕೈಸುವಳೊ 2ಪಾಲುಗಡಲು ಮನೆಯಾಗಿ ಮೂಲೋಕವ |ಪಾಲಿಸುತಿಪ್ಪ ನಾರಾಯಣನ ||ಕಾಲಮೇಲೆ ಮಲಗಿಸಿ ಬಟ್ಟಲ ತುಂಬ |ಹಾಲು ಕುಡಿಸಿ ಸಂತೈಸುವಳೊ 3ಹರಿನಿತ್ಯತೃಪ್ತನೆಂದರಿಯದೆ ಹೊನ್ನಿನ |ಹರಿವಾಣದೊಳಗೆ ಮೃಷ್ಟಾನ್ನವನು ||ನೊರೆಹಾಲು ಘೃತ-ಸಕ್ಕರೆ ಕೂಡಿಸಿ ಕರೆ-|ಕರೆದು ಉಣಿಸಿ ತೃಪ್ತಿ ಬಡಿಸುವಳೊ 4ಅಂಗಜಪಿತನಿಗೆ ಮೋಹದಿಂದ ಹೊಸ |ಅಂಗಿಯ ತೊಡಿಸಿ ಟೊಪ್ಪಿಗೆ ಇರಿಸಿ ||ಬಂಗಾರದರಳೆಲೆ ಬಿಂದುಲಿಗಳನಿಟ್ಟು |ಸಿಂಗರವನು ಮಾಡಿ ನೋಡುವಳೊ 5
--------------
ಪುರಂದರದಾಸರು
ಚಿಹಿಹಳಿ- ಥೂಖೋಡಿಪಾಪಿ ಮನವೇ ಇಂಥ-|ಕುಹಕಬುದ್ಧಿಯ ನೀ ಬಿಡು ಕಾಣೋ ಮನವೇಪಬಣ್ಣದ ಬೀಸಣಿಕೆಯಂತೆ ಹೆಣ್ಣು ತಿರುಗುವುದು ಕಂಡು |ಕಣ್ಣ ಸನ್ನೆಮಾಡಿ ಕೈಯ ಹೊನ್ನ ತೋರಿಸಿ ||ತಣ್ಣೀರು ಹೊಯ್ದ ಹೊಸ ಸುಣ್ಣದಂದದಿ ಕುದಿದು ಕುದಿದು |ಕಣ್ಣಿನೊಳು ಮಣ್ಣ ಚೆಲ್ಲಿ ಕೊಂಬರೇ ಮನವೆ 1ಪಗಡೆ ಚದುರಂಗ ಲೆತ್ತವನಾಡೆ ಕರೆದರೆ |ನಿಗುರಿದುವು ಕರ್ಣಗಳು ಮೊಚ್ಚೆಯಂತೆ ||ಜಗದೀಶ್ವರನ ದಿನದಿ ಜಾಗರಕೆ ಕರೆದರೆ |ಮುಗಿಲ ಹರಿದು ಧರೆಗಿಳಿದಂತೆ ಮನವೇ 2ವಾಸುದೇವನ ಪೂಜೆ ಒಮ್ಮೆ ಮಾಡೆಂದರೆ |ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ||ಆ ಸಮಯದಲೊಬ್ಬ ಕಾಸು ಕೊಡಲು ಅವನ |ದಾಸಿಯ ಮಗನಂತೆ ಬೆಂಬಿಡದೆ ಮನವೇ 3ನೆರೆಮನೆ ಹೊರಮನೆ ಪ್ರಸ್ತವಾದರೆ ಅವರು |ಕರೆಯದ ಮುನ್ನವೆ ಹೊರೆಹೊರಟೆ ||ಬರಿಗಂಟು ಬರಿಮಾತು ಸುಳ್ಳುಸುದ್ದಿಯ ಹೇಳಿ |ಹಿರಿಯ ಮಗನಂತೊಡಲ ಹೊರಕೊಂಬೆ ಮನವೆ 4ಬಿಂದು ಮಾತ್ರವೆ ಸುಖ-ದುಃಖ ಪರ್ವತದಷ್ಟು |ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ||ಎಂದೆಂದಿಗೂ ನಮ್ಮ ಪುರಂದರವಿಠಲನ |ಹೊಂದಿಹೊಂದಿ ನೀ ಸುಖಬಾಳೊ ಮನವೆ 5
--------------
ಪುರಂದರದಾಸರು
ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ತಾರಮ್ಮಯ್ಯ-ಯದುಕುಲ-ವಾರಿಧಿಚಂದ್ರಮನಪಮಾರಜನಕನ-ಮೋಹನಾಂಗನ-|ಸೇರಿ ಸುಖಿಸೆ ಹಾರೈಸಿ ಬಂದೆವು ಅ.ಪಬಿಲ್ಲು ಹಬ್ಬಗಳಂತೆ_ಅಲ್ಲಿ ಬೀದಿ ಶೃಂಗಾರವಂತೆ ||ಮಲ್ಲಕಾಳಗೆ ಮದ್ದಾನೆಗಳಂತೆ |ಫುಲ್ಲಾಕ್ಷನು ತಾನಲ್ಲಿಗೆ ತೆರಳಿದ 1ಮಧುರಾಪುರವಂತೆ-ಅಲ್ಲಿ-ಮಾವ ಕಂಸನಂತೆ ||ಒದಗಿದ ಮದಗಜತುರಗಸಾಲಿನಲಿ |ಮದನಮೋಹನ ಕೃಷ್ಣ ಮಧುರೆಗೆ ತೆರಳಿದ 2ಅತ್ತೆ ಮಾವನ ಬಿಟ್ಟು-ಬಂದೆವು ಹಿತ್ತಲ ಬಾಗಿಲಿಂದ ||ಭಕ್ತವತ್ಸಲನ ಬಹು ನಂಬಿದ್ದೆವು |ಉತ್ಸಾಹ ಭಂಗವ ಮಾಡಿದನಮ್ಮ 3ರಂಗನ ನೆರೆನಂಬಿ-ಬಂದೆವು-ಸಂಗ ಸುಖವ ಬಯಸಿ ||ಭಂಗಿಸಿ ನಮ್ಮನು ಹಾಗೆ ಪೋದನಮ್ಮ |ಮಂಗಳ ಮೂರುತಿಮದನಗೋಪಾಲನು4ಶೇಷಗಿರಿಯ ಮೇಲೆ-ಹರಿ ತಾ-ವಾಸವಾಗಿಹ ಕಾಣೆ ||ಸಾಸಿರನಾಮದ ಒಡೆಯನೆಂದೆನಿಸಿದ |ಶ್ರೀ ಪುರಂದರವಿಠಲರಾಯನ 5
--------------
ಪುರಂದರದಾಸರು
ತುತ್ತೂರಿಮೌರಿತಾಳ ದಂಡಿಗೆ ಮದ್ದಲೆ |ಉತ್ತಮ ಶಂಖದ ನಾದಗಳಿಂದ ||ಸುತ್ತಮುತ್ತಿ ನಾರಿಯರು ತಾಥೈಯೆಂದು |ಅರ್ತಿಯಿಂದ ಕುಣಿಸುವರುಪರವಸ್ತುತತ್ಥೈಹಿಡಿದು 2ಕಾಮಿನಿಯರೆಲ್ಲ ನೆರೆದು ಕಂದನೊಡನಾಟವಾಡಿ |ಪ್ರೇಮದಿಂದ ಬಿಗಿಬಿಗಿದಪ್ಪಿ ಮುದ್ದಾಡಿ ||ಕಾಮಿತ ಫಲವೀವ ಭಕುತಜನರೊಡೆಯ |ಸ್ವಾಮಿ ಶ್ರೀ ಪುರಂದರವಿಠಲರಾಯನ 3
--------------
ಪುರಂದರದಾಸರು
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು