ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣಾಗತ ರಕ್ಷಾಮಣಿಯೆ ಶ್ರೀ ಹರಿಯೆ ಪ ಶರಣಾಗತ ಜನ ವರ ರಕ್ಷಾಮಣಿಯೆಂಬ ಬಿರುದಿನಿಂದಲಿ ಮೆರೆವ ಕರುಣಾ ಭರಣ ಕಾಮಿತ ವರಪ್ರದಾಯಕ ಅ.ಪ. ಜನನ ಮರಣ ರಹಿತ ಜಗದ ಜನ್ಮಾದಿ ಕರ್ತ ಜನುಮ ಜನುಮದಲ್ಲಿ ಜಗದ ಜೀವರಿಗೆಲ್ಲಾ ಅನಿಮಿತ್ತ ಬಂಧುವೆಂದು ನಿನ್ನಯ ಪಾದ ವನಜಗಳನು ನಾವಿಂದು ನಂಬಿಹೆವಿನ್ನು ವನಜನಾಭನೇ ನೀ ಬಂದು ಕಾಯಬೇಕೆಂದು ತನುಮನಂಗಳ ನಿನಗೆ ಒಪ್ಪಿಸಿ ಅನುನಯದಿ ಶಿರ ಮಣಿದು ಬೇಡುವೆ ಅನಘ ಅನುಪಮ ಗುಣಗಣಾಂಬುಧಿ ಅನಿಮಿಷೋತ್ತಮ ಅಪ್ರಮೇಯನೆ 1 ಕಾಮಜನಕ ಪೂರ್ಣಕಾಮ ಆಶ್ರಿತ ಜನ ಕಾಮಧೇನುವೆ ಕೋಟಿ ಕಾಮಲಾವಣ್ಯನೆ ಶ್ರೀ ಮನೋಹರ ಗಂಭೀರ ಸುರುಚಿರ ಘನ ಸನ್ನುತ ಮಹಿಮ ಸಾಮಜನರ ಉದ್ಧಾರ ಭಕ್ತ ಮಂದಾರ ಸಾಮಗಾನ ಪ್ರೇಮ ಜಗದಭಿ ರಾಮ ರಾಕ್ಷಸ ಭೀಮ ಮಂಗಳ ನಾಮ ಸುರಮುನಿ ಸ್ತೋಮ ಸನ್ನುತ ಸ್ವಾಮಿದೇವ ಲಲಾಮ ನಮೊ ನಮೊ 2 ಮಾಧವ ಅರ ವಿಂದಲೋಚನ ಪೂರ್ಣಾನಂದ ಸ್ವರೂಪನೆ ಎಂದೆಂದು ನೀನಲ್ಲದೆ ಗತಿ ಎಮಗಿಲ್ಲ ವೆಂದು ನಿನ್ನನು ಬಿಡದೆ ಕರಿಗಿರೀಶನೆ ತಂದೆ ಯೆಮ್ಮಯ ಕುಂದುಗಳ ನೀ ನೊಂದನೆಣಿಸದೆ ಬಂದು ಸಲಹುವು ಇಂದು ಕರುಣಾ ಸಿಂಧು ನತಜನ ಬಂಧು ನರಹರಿ3
--------------
ವರಾವಾಣಿರಾಮರಾಯದಾಸರು
ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1 ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2 ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3 ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4 ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
--------------
ಹನುಮೇಶವಿಠಲ
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣಾಗತಿಯೊಂದೆ ಸಾಧನ ಮಾಧವ ಪ ಶರಣಾಗತಿಯಿಂದ ಹರಿಯ ಪ್ರಸಾದವು ಹರಿಯ ಪ್ರಸಾದವು ಪುರುಷಾರ್ಥಕೆ ಸಾಧನ ಅ.ಪ ಹರಿಯಲಿ ಚಿತ್ತವು ಹರಿಯಲಿ ಭಕುತಿಯು ಹರಿಯುದ್ದೇಶದಿ ಯಜನಾದಿಗಳು ಹರಿಯ ಚರಣದಲಿ ನಮ ನವು ಇದನೇ ಶರಣಾಗಿಯೆಂದರುಹಿದ ನುಡಿ ಕೇಳಿÀದೆ 1 ಸರ್ವೋತ್ತಮ ನೀನೊಬ್ಬನೆ ಎನ್ನುವ ದಿವ್ಯಜ್ಞಾನವ ಪೊಂದುತ ಮನದಲಿ ಸರ್ವಾಧಿಕ ನಿಶ್ಚಲ ಪ್ರೇಮ ಸಹಿತ ಸರ್ವಕರ್ಮ ನಿನ್ನೊಳಗರ್ಪಣೆ ಮಾಡುವೆ 2 ತ್ರಿವಿಧ ಪೂಜೆಗಳಲಿ ರತಿಯು ಹರಿಯ ಪ್ರಸನ್ನತೆಯಲಿ ನಂಬುಕೆಯು ಹರಿದಾಸನು ನಾನೆಂಬುವ ನಂಬಿಕೆ ಶರಣಾಗತಿಯಿದು ಮೋಕ್ಷಫಲಕೆ ಸಾಧನ 3
--------------
ವಿದ್ಯಾಪ್ರಸನ್ನತೀರ್ಥರು
ಶರಣಾಗು ಸಂಪೂರ್ಣ ಶರಣಾಗು ಜಿತಾರ್ಣ ಕರ ನೀಲವರ್ಣ ಪ ಅತಸೀ ಕುಸುಮಗಾತ್ರ ಅರವಿಂದ ನೇತ್ರ ಚಾರು ಚರಿತ್ರ ಧೃತ ಗೋವರ್ಧನ ಗೋತ್ರ ದಿವಿಜೇಂದ್ರ ಸ್ತೋತ್ರ ಶತಯಾಗಸುತಮಿತ್ರ ಸೌಪರ್ಣಯಾತ್ರ 1 ಸ್ಮರಕೋಟಿ ಲಾವಣ್ಯ ಪುರಜಿದ್ವರೇಣ್ಯ ಪುರುಹೂತಾದಿ ಶರಣ್ಯ ಪುರುಷಾಗ್ರಗಣ್ಯ ದುರಿತಾಪಹರೇಣ್ಯ ದಾನ ಸಾದ್ಗುಣ್ಯ ಪರಿಣತ ಲಾವಣ್ಯ ಪರಮಕಾರುಣ್ಯ 2 ಕಮಲರಮ್ಯವಿಲಾಸ ಕೌಸ್ತುಭೋದ್ಭಾಸ ಕಮನೀಯ ಸುವಿಭೂಪ ಕರಪೀತವಾಸ ಅಮಿತೇಂದು ರುಚಿಹಾಸ ಆದಿಶೇಷೋಲ್ಲಾಸ ಸುಮನಸಪುರವಾಸ ಪಾಹಿ ಲಕ್ಷ್ಮೀಶಾ 3
--------------
ಕವಿ ಲಕ್ಷ್ಮೀಶ
ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ನಳಿನ ಷಟ್ ಚರಣ ಬಿಡ ಬಲ್ಲದೆ ಪ ಹನುಮನ ಭಜನೆಂಬ ಘನವಾರಿ ಪೂರಿತ ಮನ ಸರೋವರ ಅಯನವಾಗಿಪ್ಪಾ ಜನಕಸುತೆ ಹಂಸಿ ಮನಸಾಪ ಹಾರಿ ದಿನಕರನ್ವಯದಿಂದ ವಿನುತವಾಗಿಪ್ಪ 1 ಅಮರರೋತ್ತಮರೆಂಬ ಭ್ರಮರರಾ ರವಗಳ ಸಮಯೋಚಿತ ಸಾಮಭಿ ಸೇವಿತ ವಿಮಲಾತಮದಿಂದ ಸಾಂದ್ರ ಶಮಲಾತಿ ದೂರ ಪಾದ 2 ಶಿಲೆಯ ಬಾಲೆಯ ಮಾಡಿ ಮಲವಳಿದು ಮುನಿ ಕುಲವಗೆಡಿಸಿ ಸತ್ಕುಲನೆನಿಸಿದೆ ಜಲಧಿಯೊಳಗೆ ಸೇತು ನಿಲಿಸಿ ಸಜ್ಜನರಿಗೆ ನೆಲೆ ವಾಸುದೇವವಿಠಲದೇವ ಪಾದಪದುಮ3
--------------
ವ್ಯಾಸತತ್ವಜ್ಞದಾಸರು
ಶರಣಾರ್ಥಿ ಶಿವಶರಣಾರ್ಥಿ | ಹರಿಹರ ಎಂದು ಶಿವಪದ ಕಂಡವಗೆ ಪ ಗುರುವಿಗೆರಗೆ ನಿಜ ಗುರುತಕೆ ಬಂದಿನ್ನು | ಧರೆಯೊಳು ಪುಣ್ಯ ಜಂಗಮನೆ ವಾಸಿ | ಅರಹುಮರಹು ಮೀರಿ ಸಹಜಾವಸ್ಥಿಗೆ | ಬೆರದಿಹ ಶರಣಗೆ 1 ಎದೆಸೆಜ್ಜೆಯೊಳಗಿಹ ಘನಲಿಂಗ ಪೂಜಿಸಿ | ಮುದದಿಂದ ಭಕ್ತಿಯ ಪಾವುಡದೀ | ಸದ್ಭಾವ ಸೂತ್ರದಿ ಆವಗುಧರಿಸಿಹ | ವಿದಿತ ಲಿಂಗಾಂಗಿಗೆ 2 ಆಶೆಯಸುಟ್ಟು ವಿಭೂತಿಯ ಹಚ್ಚಿದ | ಧ್ಯಾಸದಂಡ ಕೈಲಿ ಪಿಡಿದು | ಲೇಸಾದ ಸುಗುಣ ರುದ್ರಾಕ್ಷಿಯ ತೊಟ್ಟು | ಭಾಸಿಪ ಸಂತಗೆ 3 ಶಾಂತಿಯ ತೊಡರವ ಕಟ್ಟಿ ವಿವೇಕದ | ಮುಂತಾದ ಕಾಷಾಯ ಪೊದ್ದಿಹನಾ | ಸಂತತ ಗುರುಧರ್ಮ ಭಿಕ್ಷೆಯನುಂಡು | ವಿಶ್ರಾಂತಿಯ ಮಠ ಹಿಡಿದ ವಿರಕ್ತಗೆ 4 ಶರಣನೆನುತಾ ಅನ್ಯರ ಶರಣರ ಮಾಡೀ | ಶರಣ ತಾನೆಂಬ ವೃತ್ತಿಯನುಳಿದು | ದ್ಧರಿಸಿದ ಮೂರ್ತಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಕೃಷ್ಣವೇಣಿ ಶರಣು ಪುಣ್ಯಾಭರಣಿ ಶರಣು ಇಹಪರದಾಯಿನೀ ಪ ಸರ್ವವ್ಯಾಪಕನಿರಂಜನನೆನಿಪ ಶ್ರೀವಿಷ್ಣು ಉರ್ವಿಯೊಳು ದ್ರವರೂಪದೀ ಹರ್ವಿತಿಹಸಂದೇಹವಿಲ್ಲದಕೆ ಭಕುತಿಯಲಿ ಅರ್ವವನೆ ಗತಿಯ ಪಡದಾ ಮುದದಿ 1 ಅಚ್ಯುತನು ಕೃಷ್ಣನದಿ ಹರಿವುತಿಹನೆಂದು ಮೆಚ್ಚಿವೇಣಿಯ ನಾಮದಿ ನಿಚ್ಚ ಸತ್ಸಂಗವೆಂದರಿತು ಕೂಡಿದ ಶಿವನು ಸಚ್ಚರಿತನಾಮಮಹಿಮಾನೇಮಾ 2 ನಿನ್ನ ಪೂರೆಲುದಿತ ಪವನದಿ ದುರಿತವೋಡಿದವು ಇನ್ನು ಮಿಂದವನ ಗತಿಯಾ ಬಣ್ಣಿಸುವ ನಾವನೆಲೆ ಜನನೀತಾರಿಸುಯನ್ನ ಮನ್ನಿಸು ಗುರುವಿನಾಸುತನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಜಾನನನೆ ಶರಣು ಲಂಬೋದರನೆ ಶರಣು ಪಾರ್ವತಿ ಪುತ್ರ ಶುಭಗಾತ್ರ ಪ ಆದಿಯಲಿ ನಿನ್ನ ಪಾದಭಜನೆಯ ಮಾಡೆ ಸಾದರದಿ ಸಲಹುವೆ ಮೋದವಿತ್ತು ಮೇದಿನಿಯಲಿ ನಿನ್ನಾರಾಧನೆಯ ಮಾಡದವ ನ- ರಾಧಮನೆನಿಸುವನಿದು ಪುಸಿಯಲ್ಲ 1 ಆಖುವಾಹನನೆ ನೀ ಕಳೆ ವಿಘ್ನಗಳ ಸಾಕು ಲಾಲಿಸೆನ್ನ ಏಕದಂತ ಮಣಿ ಭೂಷಣ ಕಾಕುಜನ ಕುಠಾರ ಲೋಕೈಕ ವೀರ 2 ಸಿತಿಕಂಠ ವರಪುತ್ರ ಪ್ರತಿ ವಾಸರವು ನಾ ನುತಿಸಿ ಬೇಡುವೆ ನಿನ್ನ ಸತಿರಹಿತನೇ ಸಿರಿ ರಂಗೇಶವಿಠಲನ ಅತಿಪ್ರೀತಿಯಿಂದ ಭಜಿಪ ಮತಿಯ ನೀಡೋ 3
--------------
ರಂಗೇಶವಿಠಲದಾಸರು
ಶರಣು ಬಂದೆನೊ ಹರಿಯೆ ಶರಣು ಬಂದೆನೊ ಪ ಕರುಣದಿ ನೋಡೆನ್ನ ಸಲಹು ಎಂದೆನೊ ಅ.ಪ. ಜನನ ಮರಣ ಸುಳಿಗಳಲಿ ತೊನೆದು ಬಳಲಿ ನೊಂದೆನೊಘನಭವದಲಿ ಮೂರುತಾಪಗಳಲಿ ಸಿಲುಕಿ ಬೆಂದೆನೊ 1 ಧನಕೆ ಮೆಚ್ಚಿ ನಿನ್ನ ಮರೆತು ಕಹಿಯ ಫಲವ ತಿಂದೆನೊಅನುದಿನ ಘನ ಚಿಂತೆಯಿಂದ ಮನದ ಶಾಂತಿ ಹೊಂದೆನೊ 2 ವನಿತೆ ಸುತರು ಪೊರೆವರೆಂಬ ಭ್ರಮದೊಳಾತ್ಮ ಕೊಂದೆನೊಕೊನೆಗೆ ಗದುಗು ವೀರನಾರಾಯಣನೆ ಗತಿಯೆಂದೆನೊ 3
--------------
ವೀರನಾರಾಯಣ
ಶರಣು ಶಂಕರಿ ಪ ಣಾರವಿಂದಕೆ ನಮೋ ಅ.ಪ ಪೊರೆಯೆ ನೀನೆ ಸ್ಥಿರಸುಖದೊಳು 1 ಕೆಟ್ಟೆವಲ್ಲವೇ ಭವಾನಿ 2 ಮಾಯಾ ಕಾಯ್ದು (ನೀ) ಆದರಿಸವ್ವ 3 ಕಾಂತೆ ಸಲಹೆಮ್ಮನು 4 ಮಣಿದು ಪ್ರಾರ್ಥಿಸುವೆನು 5 ನಿರ್ವಾರಿಸಲುಸುರಿದೆವು 6 ಜಾಯೆ ನಮೋ ಸರ್ವೇಶ್ವರಿ 7
--------------
ಸದಾನಂದರು
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಪ ಶರಣುಮತ್ಸ್ಯನೆ ಕೂರ್ಮಕ್ರೋಡನರಹರಿ ವಟುಭಾರ್ಗವಶರಣುರಾಘವ ಕೃಷ್ಣ ಬುದ್ಧಶರಣು ಕಲ್ಕಿ ರೂಪನೆ1 ನಂಬಿದೆ ನಾನಿನ್ನ ಕೇಶವನಾರಾಯಣನೇ ಮಾಧವಅಂಬುಜಾಕ್ಷ ಗೋವಿಂದ ವಿಷ್ಣುಸಂಭ್ರಮದಿ ಮಧುಸೂದನ2 ಕರುಣದಲಿ ರಕ್ಷಿಸು ತ್ರಿವಿಕ್ರಮಕಲಿತ ವಾಮನ ಶ್ರೀಧರಪರಮಪಾವನ ಹೃಷೀಕೇಶನೆಪದ್ಮನಾಭ ದಾಮೋದರ 3 ಅನಿರುದ್ಧ ಅಧೋಕ್ಷಜ 4 ಶ್ರುತಿಗಗೋಚರ ನಾರಸಿಂಹಾ-ಚ್ಯುತ ಜನಾರ್ದನುಪೇಂದ್ರನೆಚತುರವಿಂಶತಿ ನಾಮದಲ್ಲಿಹಚತುರ ಹರಿ ಶ್ರೀಕೃಷ್ಣನೆ 5
--------------
ವ್ಯಾಸರಾಯರು
ಶರಣು ಶರಣು ಲಿಂಗಾ | ಶರಣು ಶ್ರೀ ಭಸಿತಾಂಗಾ | ಶರಣು ಗಗನ ಗಂಗಾಧರ ಗೋರಾಜ ತುರಂಗ | ಗುರುಕುಲೋತ್ತುಂಗಾ ಪ ಪುರಹರ | ಸಂತರ ಮನೋಹರ | ಅಂತಕನ ಗೆದ್ದೆ | ದಂತಿ ಚರ್ಮವ ಪೊದ್ದೆ | ಕಂತು ಮುನಿಯ ಗೆಲಿದೆ ಮಂತ್ರಿವಂದಿತ ಶೀಲ | ಸಂತತಿಗಳ ಪಾಲ | ಅಂತರಂಗದಲೆನ್ನ ಗ್ರಂಥಿಯ ಹರಿಸಿ ನಿರಂತರ ಸಂತರಿಸೋ 1 ಶುಕ ಯತಿಯೆ | ವನದೊಳು ರಾಯನ | ವನುತಿಯ ಮಾಡಿದ | ಘನ ಶೌರ್ಯನ ಶಿವನೆ || ಸನಕಾದಿಗಳ ಪರಿಯ | ಅನುದಿನದಲಿ ಗಿರಿಯ | ಫಣಿಭೂಷಣ ಶಂಭೋ 2 ಅಹಂಕಾರಾತ್ಮನೆ ಶರ್ವ | ಮಹಾಕೇಶ ವಿಷಗ್ರೀವ | ಬಹುದೂರ ಕೂಟ | ಮಹಿಧರ ನಿವಾಸನೆ | ಮಹಿಧರ ತೀರದಿ || ಮಹಿಮೆಯ ಬೀರುತ್ತ | ರಹಸ್ಯದಲಿ ಮೆರೆವ | ಶ್ರೀಹರಿ ವಿಜಯವಿಠ್ಠಲ ಸವೋತ್ತಮ | ನಹುದೆಂದು ಧೇನಿಪನೆ3
--------------
ವಿಜಯದಾಸ
ಶರಣು ಶರಣು ಶರಣು ದೇವಾಧಿಗಳೊಂದಿತ ನಹುದು ಸ್ವಾಮಿ ಗಣನಾಥ ಶರಣು ಧ್ರುವ ಅಖಿಳ ಭವನದೊಳು ಪೂಜಿತ ಭಕುತ ಜನಕೆ ನೀ ಸಾಕ್ಷಾತ ಶಕುತನಹುದಯ್ಯ ಪ್ರಖ್ಯಾತ 1 ಶುದ್ಧ ಬುದ್ಧರ ಸಹಕಾರ ಬುದ್ಧಿನೀವ ಘನ ಉದಾರ ರಿದ್ಧಿ ಗ್ಯಾಗೀಹ್ಯ ನೀ ಆಧಾರ ಸಿದ್ಧಿದಾಯಕ ವಿಘ್ನಹರ 2 ಜನಕೆ ಮಾಡುವೆ ದೋಷನಾಶ ಅನುದಿನವೆ ಮತಿ ಪ್ರಕಾಶ ದೀನ ಮಹಿಪತಿಯ ಮನೋಭಾವಪೂರಿತಗಣಾಧೀಶ ಶರಣು ಶರಣು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು