ಒಟ್ಟು 12527 ಕಡೆಗಳಲ್ಲಿ , 133 ದಾಸರು , 6731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪರಿಯ ಪೂಜೆಗಳ ಕರಿವರದಗರ್ಪಿಸಲು |ಪರಿಪೂರ್ಣ ತಾನವನಕರವಪಿಡಿದು ||ಸರಿಸಿಜಾಕ್ಷನು ತ್ವರದಿ ಸಾರೂಪ್ಯವನ್ನಿತ್ತು |ಮರುತನಂತರ್ಗತನು ಹರುಷದಲಿ ಪೊರೆವ 2ತೊಂಡರಾ ಮನೆಗಳಲಿ [ತೊಂಡು ಗೆಲಸವ ಗೈವ] |ಪಾಂಡವರ ಮನೆಯಲ್ಲಿ ಕುದುರೆಗಳ ತೊಳೆದ ||ಅಂಡಜಾಸನ ನಮ್ಮಪುರಂದರವಿಠಲನು |ತೊಂಡರಿಗೆ ತೊಂಡನಾದಹಿಂಡುದೈವದ ಗಂಡ 3
--------------
ಪುರಂದರದಾಸರು
ಪವಡಿಸು ಪರಮಾತ್ಮನೆ ಸ್ವಾಮಿಭವರೋಗ ವೈದ್ಯನೆ ಭಕ್ತರ ಪ್ರಿಯನೆ ಪಕುಂದಣದಿ ರಚಿಸಿದ ಸೆಜ್ಜೆಯ ಮನೆಯಲಿಇಂದ್ರನೀಲ ಮಣಿವiಂಟಪದಿ ||ಚಂದ್ರಕಾಂತಿಯ ಠಾಣದೀವಿಗೆ ಹೊಳೆಯಲುಸಿಂಧುಶಯನ ಆನಂದದಿಂದಲಿ 1ತೂಗುಮಂಚದಿ ಹಂಸತೂಲದ ಹಾಸಿಗೆನಾಗಸಂಪಿಗೆಯ ಹೂವಿನ ಒರಗು ||ಸಾಗರಸುತೆಯ ಸಮ್ಮೇಳದಲಿ ನಿಜಭೋಗವ ಪಡುತ ಓಲಾಡುತಿರು 2ಸದ್ದಡಗಿತು ಗಡಿಯಾರ ಸಾರಿತು ಬೇಗಮುದ್ರೆಗಳಾಗಿವೆ ಬಾಗಿಲಿಗೆ ||ತಿದ್ದಿದಧವಳ ಶಂಖಗಳ ನಾದದಿಂದಪದ್ಮನಾಭ ಶ್ರೀ ಪುರಂದರವಿಠಲ3
--------------
ಪುರಂದರದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಪಾಪಿ ಬಲ್ಲನೆ ಪರರ ಸುಖ - ದುಃಖದಿಂಗಿತವಕೋಪಿ ಬಲ್ಲನೆ ದಯಾದಾಕ್ಷಿಣ್ಯವ ಪ.ಹೇನು ಬಲ್ಲುದೆ ಮುಡಿದ ಹೂವಿನಾ ಪರಿಮಳವಶ್ವಾನ ಬಲ್ಲುದೆ ರಾಗಭೇದಂಗಳಮೀನು ಬಲ್ಲುದೇ ನೀರು ಚವುಳು - ಸವಿಯೆಂಬುದನುಹೀನ ಬಲ್ಲನೆ ತನಗೆ ಉಪಕಾರ ಮಾಡಿದುದ? 1ಕತ್ತೆ ಬಲ್ಲುದೆ ತಾನು ಹೊತ್ತಿರುವ ನಿಧಿಯನ್ನುಮೃತ್ಯು ಬಲ್ಲುದೆ ದಯಾ - ದಾಕ್ಷಿಣ್ಯವತೊತ್ತು ಬಲ್ಲಳೆ ಹೀನ - ಮಾನದಭಿಮಾನವನುಮತ್ತೆ ಬಲ್ಲುದೆ ಬೆಕ್ಕು ಮನೆಯ ಮೀಸಲನು? 2ಹೇಡಿ ತಾ ಬಲ್ಲನೇ ರಣರಂಗ ಧೀರವನುಕೋಡಗವು ಬಲ್ಲುದೇ ರತ್ನದಾಭರಣಬೇಡದುದನೀವ ಪುರಂದರವಿಠಲನಲ್ಲದೆನಾಡ ದೈವಗಲೆಲ್ಲ ಕೂಡಬಲ್ಲುದೇ? 3
--------------
ಪುರಂದರದಾಸರು
ಪಾಪಿಗೇತಕೆ ಪರಮಾತ್ಮಬೋಧ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕೋಪಿಗೇತಕೆ ಸುಗುಣ - ಶಾಂತ ಬುದ್ಧಿ ಪ.ಹಂದಿಗೆ ಗಂಧವೇಕೆ ಅಂಧಕೆ ಕನ್ನಡಿಯೇಕೆಮಂದಮತಿ ಮನುಜರಿಗೆ ಮಂತ್ರವೇಕೆತಂದೆ - ತಾಯಂದಿರಿಗೆಕುಂದು ತರುವ ಮಗಳೇಕೆನಿಂದುವಾದಿಸುವಂಥ ಸತಿಯು ತಾನೇಕೆ1ಕತ್ತೆಗಮ್ರತವೇಕೆ ಎತ್ತಿಗೆ ಕರೆಹವೇಕೆತೊತ್ತಿಗೆ ಛತ್ರದ ನೆರಳೇತಕೆಕುತ್ತಿಗೆ ಕೊಯ್ಯುವನ ಸೊಗಸು ಮಾತುಗಳೇಕೆಸತ್ಯವಿಲ್ಲದೆ ನುಡಿವ ಯೋಗಿಯೇಕೆ 2ಷಂಡಗೆ ಹೆಂಡತಿಯೇಕೆ ತೊಂಡಿರಿಗೆ ಖಂಡೆಯುವೇಕೆಮುಂಡೆಮೋಳಿಗೆ ಮುತ್ತಿನ ದಂಡೆಯೇಕೆಮಂಡಳದೊಳಗೆ ಶ್ರೀ ಪುರಂದರವಿಠಲನಕಂಡು ಭಜಿಸದ ಮನುಜರಿದ್ದೇತಕೆ 3
--------------
ಪುರಂದರದಾಸರು
ಪಾಪೋಸು ಹೋದುವಲ್ಲ - ಸ್ವಾಮಿ ಎನ್ನ -ಪಾಪೋಸು ಹೋದುವಲ್ಲ................... ಪ.ಅಪಾರ ಜನುಮದಿ ಆರ್ಚನೆಯ ಮಾಡಿದ ..........ಅಪಉರಗಾದ್ರಿಯಲಿ ಸ್ವಾಮಿ ಪುಷ್ಕರಣಿ ಮೊದಲಾದ |ಪರಿಪರಿ ತೀರ್ಥ ಸ್ನಾನಗಳ ಮಾಡೆ ||ಹರಿದಾಸರ ಕೊಡಿ ಶ್ರೀನಿವಾಸನ ಸಂ -ದರುಶನದಲ್ಲಿ ಮೈಮರೆದಿದ್ದೆನೊ ಎನ್ನ 1ಪರಮ ಭಾಗವತರು ಹರಿಕಥೆ ಪೇಳಲು |ಪರಮ ಭಕುತಿಯಲಿ ಕೇಳುತಿದ್ದೆ ||ಪರಮ ಪಾಪಿಷ್ಠರ ಪಾಲಿಗೆ ಪೋದವು |ಪರಮಾತ್ಮನ ಮನಸಿಗೆ ಬಂತು ಹೀಗೆ ............. 2ಮಾಯೆ ಒಲಿದು ಎನಗೆ ತಂದು ಕೊಟ್ಟದ್ದಳು |ದಾಯಾದಿಗಳು ನೋಡಿ ಸಹಿಸಲಿಲ್ಲ ||ಮಾಯಾ ರಮಣ ನೋಡಿ ಪುರಂದರವಿಠಲಮಾಯೆಯಿಂದ ಮಟ್ಟಮಾಯವಾದವು ಈಗ 3
--------------
ಪುರಂದರದಾಸರು
ಪಾರ್ವತಿ ಜಗದ್ಭರಿತೇ ಮಹೇಶ್ವರಿ |ಶರ್ವನಂಗನೆ ಖ್ಯಾತೆ ಪಸರ್ವ ಸ್ವತಂತ್ರೆಶರ್ವಾಣಿಕಾಳಾಹಿವೇಣಿ |ಸರ್ವಜನರ ಮದ | ಗರ್ವ ನಿವಾರಿಣಿ ಅ. ಪಸೃಷ್ಟಿಪಾಲಿನಿ ಗೌರೀ ಸರ್ವೇಶ್ವರಿ |ದುಷ್ಟಮರ್ದನ ಕಾರಿ |ಇಷ್ಟದಾಯಕಿಭವ| ಕಷ್ಟನಿವಾರಿಣಿಶಿಷ್ಟಪಾಲಿನಿ ಬೆಟ್ಟದ ಕಲಿಗೆ ಭವಾನಿಯೆ 1ಅಘನಾಶಿನಿ ದೇವೀ ಕಾತ್ಯಾಯಿನಿ |ಸುಗುಣರ ಸಂಜೀವಿ |ನಗೆಮೊಗವನು ತೋರಿ | ಸುಗುಣನೆಂದಿನಿಸೆನ್ನ |ಅಗಲಬೇಡವೋ ತಾಯೇ ಮುಗಿವೆನು ಕರವಾ 2ಪರಮಪಾವನೆ ನಿನ್ನಾ | ಭಕ್ತಿಯೊಳೀಗಾ |ಸ್ಮರಿಸಲರಿಯೆ ಮುನ್ನಾ |ತರಳಷಣ್ಮುಖನಂತೆ |ಪರಸಿ ರಕ್ಷಿಸೆ ಎನ್ನ | ಭರದಿ ಗೋವಿಂದನದಾಸನಿಗೊಲಿದು ||ಪಾರ್ವತಿ|| 3
--------------
ಗೋವಿಂದದಾಸ
ಪಾರ್ವತೀ ಪತಿಪಾಹಿ ಹರಹರ ಪಪಾರ್ವತೀಪತಿ ನೀನೊಲಿದು ಮನಸಿನೊಳುತೋರ್ವದು ಕೇಶವನ | ಹರಹರ ||ಅ. ಪ||ವಿಜಯನಿನ್ನೊಳಗಂದು ವಿಜಯಿಸಲಸ್ತ್ರವ |ತ್ರಿಜಗವರಿಯ ಕೊಟ್ಟ ||ಮಜ ಭಾಪುರೆಅಂಬುಜಸುತ ನಂದನ |ಗಜಚರ್ಮಾಂಬರನೆ | ಹರಹರ 1ಜಾತವೇದಸಶಶಿತರಣಿನಯನ |ಮಾತರಿಶ್ವತನಯ ||ಭೂತ ಗಣಪ ಗುಣವ್ರಾತ ನಿನ್ನವರೊಳು |ಪ್ರೀತಿಯಿಂದಲೆ ಕೂಡಿಸು | ಹರಹರ 2ಕ್ಷಿತಿಧರ ಶರ ಮನ್ಮಥಪುರಹರಣ| ಪ್ರಮಥಾಧಿಪ ಹರಿಣಾಂಕ ||ನತಿಸುವೆ ನಿನ್ನನು ಪ್ರತಿದಿನದಲಿ | ಸನ್ಮತಿ ಕರುಣಿಸು ತ್ವರಿಯಾ || ಹರಹರ3ಸುರಸೇವಿತ ಪದ ಅರವಿಂದಅನಘ|ಮುರರಿಪುಸುಖಕಪರ್ದಿ||ಚರಣವ ನಂಬಿದವರ ಭಯವಾರಿದ |ಮರುತಕುಶನಂದನನೆ || ಹರಹರ4ಖಟವಪಾಣಿಖಳಆಟವಿವಹ್ನಿಧೂ |ರ್ಜಟ ಹರ ಪ್ರಾಣೇಶ ||ವಿಠಲನ ಭಜನೆಯು ಘಟಿಕ ತಪ್ಪದಲೆ |ಘಟನೆ ಮಾಡಿಸುವುದೋ || ಹರಹರ 5
--------------
ಪ್ರಾಣೇಶದಾಸರು
ಪಾಲಯಮಾಂ ಶ್ರೀಭಾರ್ಗವಿಲಕ್ಷ್ಮೀಭಕ್ತವಾತ್ಸಲ್ಯನಿಧಿ ಹೇ ಜನನಿ ಪಫಾಲಲೋಚನಬ್ರಹ್ಮಾದ್ಯಮರಪೂಜಿತಪಾದಪದ್ಮಯುಗಳ ಸೌಭಾಗ್ಯ ಪ್ರದಾಯನಿ ಅ.ಪಚಂದ್ರರೂಪಿಣಿಚಂದ್ರಾಭರಣಾಲಂಕೃತಸೌಂದರ್ಯಚಂದ್ರಮುಖಿಇಂದ್ರವರಜ ಹೃನ್ಮಂದಿರ ವಾಸಿನಿವಿಶ್ವಕುಟುಂಬಿಇಂದಿರೆಸತತಂ1ಧಾತ್ರಿ ತುಲಸಿರಾಮದಾಸಾವನಶೀಲದಾರಿದ್ರ್ಯಾಪಹಾರಿಣೀಅತ್ರೀಮಹಾಋಷ್ಯಾಪತ್ಯಸಹೋದರಿಅಹಿಗಿರಿ ಶಿಖರಾನಂದನಿಲಯ ನಿತ್ಯ2
--------------
ತುಳಸೀರಾಮದಾಸರು
ಪಾಲಯಾಲ್ಮೇಲಮಂಗಪ್ರಿಯ ಪರಮಗೇಹಖಳಜಾಲಕೋಲಾಹಲಗೋಕುಲ ಗೋಪಾಲಬಾಲಲೀಲಾಲೋಲಲೋಲಚೆನ್ನಪ.ಆದಿಪೋತ್ರಾವತಾರ ಅಮಿತ ಸುಗುಣೋದಾರಭೂಧರಭೂಪವೈರಿ ಭ್ರಾತಶೌರಿಕುದಶಾಸ್ಯವಿದಾರ ದಯೋದಧಿ ಶ್ರೀಪಾದಾರಾಧಕಾಧಾರಮರ ಪಾದಪಾಧಿಪಾಧಿಪ 1ಆನತಘ ವಿದಾರ ಅಂಬುಧರಸುಂದರಏಣಾಂಕರವಿಕಾಶ ಯದುಕುಲೇಶವನಜನಯನಮಾಮನೋಹರಮುನಿಧ್ಯಾನಮೌನಗಾನ ಲೀನ ಮಾನುಷಮೃಗ ನಮೋ 2ಪನ್ನಗರಾರಾತಿಗಮ್ಮಪಾರಾವಾರಮಹಿಮಘನ್ನಜೀವಾತಿದೂರ ಗೋಸಂಗೋಚರಮನ್ಮಥ ಗಣ್ಯಲಾವಣ್ಯ ಕಾರುಣ್ಯಧಿ ಸ್ವರ್ಣವರ್ಣಚಿನ್ಮಯ ಪ್ರಸನ್ನವೆಂಕಟೇಶ ಮಾಂ 3
--------------
ಪ್ರಸನ್ನವೆಂಕಟದಾಸರು
ಪಾಲಿಸಂಬುಧಿಶಾಯಿ ವ್ಯಾಳಕಶಿಪುಶಾಯಿಪಾಲಿಸು ವಾರಿಧಿüಕೂಲದಿ ದರ್ಭಶಾಯಿ ಮೂಲ ವಟಪತ್ರಶಾಯಿ ಪ.ವೇದೋದ್ಧಾರ ದಯಾಳು ಭೂಧರಧರ ದಯಾಳುಮೇದಿನಿಅಂತರ್ಮಾಲಾದಂಡಶುಭಕುಠಾರಧಾರಿಯೆ ದಯಾಳುಕೋದಂಡಧರ ದಯಾಳುಸ್ವಾದವೇಣುಧರ ದಯಾಳು ಸಮಾಧಿ ವ್ರತಧರ ಧರ್ಮಾಧರ ವಿಶ್ವಾಧರಮಾಧವನಿತ್ಯದÀಯಾಳು1ಪಂಚಜನನವೈರಿವಂಚಕಾಸುರವೈರಿಕಾಂಚನನೇತ್ರಕ ಯದುಪತಿ ಬಲಿಮದಚಂಚಲ ಖಳವೈರಿಪಂಚದ್ವಯಾಸ್ಯನವೈರಿಪಂಚಪಾರ್ಥಾರಿತವೈರಿಪಂಚಬಾಣಾರಿವೈರಿ ಪಂಚಪಾತಕವೈರಿ ಸಂಚಿತಘಕೆವೈರಿ2ಸರನಿಕೇತನಿವಾಸ ಗಿರಿತಳ ಸನ್ನಿವಾಸ ವರಸ್ವಾಮಿಪುಷ್ಕರಸಿರಿಅಹೋಬಲ ನೃಪಾಗರ ತ್ರಿಜಗನಿವಾಸಸರಯೂತೀರ ನಿವಾಸ ಶರಧಿಮಂದಿರವಾಸಸುರವಿರೋಧಿಸದನಪರಮಶಂಬಲವಾಸ ಪರಸನ್ನವೆಂಕಟವಾಸ3
--------------
ಪ್ರಸನ್ನವೆಂಕಟದಾಸರು
ಪಾಲಿಸಯ್ಯ ಪವನನಯ್ಯಕಾಲಕಾಲಕೆ ಹೃದಯಾಲಯದೊಳು ನಿನ್ನಶ್ರೀಶ ಸಂಸಾರವೆಂಬೊ ಸೂಸುವ ಶರಧಿಯೊ-ಮೂರು ಗುಣಗಳಿಂದ ಮೂರು ತಾಪಗಳಿಂದಕರುಣಾಸಾಗರ ನಿನ್ನ ಸ್ಮರಣೆ ಮಾತ್ರದಿ ಸಕಲ
--------------
ಗೋಪಾಲದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ