ಒಟ್ಟು 244 ಕಡೆಗಳಲ್ಲಿ , 61 ದಾಸರು , 228 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದ್ಹೇಳಲಿ ನಾನು | ಸಾಧುರಾ ಮಹಿಮೆಯನು | ಮನವ ವುನ್ಮನಮಾಡೀ | ಘನಸುಖದೊಳುಕೂಡಿ | ಆನಂದದೊಳಗಿಹನು ಪ ಬಹುಮಾತವನಾಡಾ | ಮೌನವಹಿಡಿದುಕೂಡಾ | ಸಹಜದಿ ನುಡಿವಂದಾ | ನಾಡಿದ ರದರಿಂದಾ | ಸ್ವಹಿತದ ಸುಖನೋಡಾ 1 ಅರಿಯಾನಂತಿಹನಲ್ಲಾ | ಅರಿವನು ಉಳಿದಿಲ್ಲಾ | ಅರಹು ಮರಹು ಮೀರಿ | ಕುರ್ಹುವಿನ ಮನೆಸೇರಿ | ಅರಿಸುಖ ಸಮವೆಲ್ಲಾ 2 ಸಾಧುರ ನಿಜವೆಲ್ಲಾ | ಸಾಧು ಆದವ ಬಲ್ಲಾ ಸಾಧುರ ವೇಷದಿ | ಉದರವ ಹೊರೆಯುತಾ | ಬೋಧಿಸುವದಲ್ಲಾ 3 ಆಶೆಯಂಬುದು ಬಿಟ್ಟು ವೇಷವ ಕಳೆದಿಟ್ಟು | ಲೇಸಾಗಿ ಗುರುವರ | ಮಹಿಪತಿಸ್ವಾಮಿಯಾ | ಧ್ಯಾಸದಿ ಬೆರೆತಿಹನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಕಂಡೆ ಫಂಡರಿರಾಯನ ಸಿರಿಮನ ಪ್ರಿಯನಾ ಪ ಚಂಡವಿಕ್ರಮ ಕರದಂಡ ಮುನಿಪನೊಲಿ ದಂಡಜಾಧಿಪ ಪ್ರಕಾಂಡ ಸುಪೀಠನ ಅ.ಪ. ಮಣಿಮಯ ಮಕುಟ ಮಧುಪನವಿರಪ್ಯರೇ ಪಣೆಯೊಳಿಟ್ಟ ಕಸ್ತೂರಿ ತಿ¯ಕಾ ವನÀರುಹ ಉಪಮ ಲೋಚನಯುಗ ಚಂಪಕ ಸುನಾಸ ವಕುಂಡಲವ ವಿಕಾಸವ ಕದಪಿನ ವಿಲಾಸವ ಮೊಗದ ಮಂದಹಾಸವ 1 ಕುಂದ ಕೋರಕ ದಶನಾವಳಿಯ ಬಿಂಬಾ ಅಧರ ಕಳೆಯ ಕಂಧರ ತ್ರಿವಳಿ ಪುರಂದರ ಇಭಕರ ಪೋಲುವ ಭುಜಯುಗ ವಿಶಾಲವಾ ಕರತಳರಸಾಲವ ನಖರ ಮಲ್ಲಿಕಾಸವ 2 ಅತಿವಿಸ್ತøತ ವಕ್ಷಸ್ಥಳವಾ ಸಿರಿ ಸತಿ ಸದನಾರ್ಕನಂದದಿ ಪೊಳೆವಾ ಕೌಸ್ತುಭ ದೀಧಿತಿ ವಿಲಸಿತ ವೈಜಯಂತಿಯ ಉದರ ರೋಮ ಪಂಕ್ತಿಯಾ ಕುಕ್ಷಿತ್ರಿವಳಿ ಕಾಂತಿಯಾ ನಾಭಿವಲ್ಮೀಕ ದಂತಿಹ 3 ಮುಂಬಿಸಿಲಿನಂತೆ ಕನಕ ಚೈಲಾ ಸುನಿ ತಂಬದಿ ಪೊಳೆವ ಗೋಲಿಯ ಚೀಲಾ ಕುಂಬು ಕೋಕನದ ವಿಡಂಬ ಮೇಖಲ ಕದಂಬವ ಊರು ಕದಳೀ ಜಾನುಗಳಿಂದು ಬಿಂಬನಾ ಆಚರಿಪ ವಿಡಂಬನಾ 4 ಮಾತಂಗಕರವ ಜಂಘೆಗಳ ಗುಲ್ಫ ಜಾತಿಮಣಿಕಾಂಗುಲಿ ಸಂಘಗಳ ಜ್ಯೋತಿ ಬೆಳಗೆ ಜಗನ್ನಾಥ ವಿಠಲ ನಂಘ್ರಿ ಪುಷ್ಕರಾ ಉದಿತ ಶತ ಭಾಸ್ಕರಾ ಗಭಸ್ತಿ ತಿರಸ್ಕರ ಸುಜನರಿಗೆ ಶ್ರೇಯಸ್ಕರ 5
--------------
ಜಗನ್ನಾಥದಾಸರು
ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರೆಯೆ ಯಶೋದ ಕೃಷ್ಣನ ಕರೆಯೆ ಪ ನರಹರಿಯೆ ನಂದಗೋಪನ ಮರೆಯೆ ಮಾತಲಿ ಮಹಾ ದೊರೆಯೆ ಇವನ ಗುಣ- ವರಿಯೆವು ನೋಡಲಾಶ್ಚರ್ಯವಾಗೋದು ನಿ- ನ್ನರಮನೆಗೀತನ ಕರೆಯೆ 1 ನೋಡೆ ಈತಗೆ ಇನ್ಯಾರೀಡೇ ಕೋಪವ ಮಾಡಬ್ಯಾಡೆ ಮಾತಿಗೆ ಮಾತ- ನಾಡಿಂದಿರಾಪತಿ ಗಾಡಿಕಾರನೆಂದಾಡಿಕೊಂಬೆವೆ ನಮ್ಮ ಕಾಡುವೋದುಚಿತವೆ 2 ಬಾಲಗೋಪಾಲ ಕೃಷ್ಣ ಲೀಲೆಮಾಡುವೊ ದೊಡ್ಡಿ ್ವ ಶಾಲ ಉದರಕ್ಕೆ ಬೆಣ್ಣೆ ಪಾಲುಕುಡಿದು ನಮ್ಮಾಲಯದೊಳು ಬಂದು ಕಾಲಂದಿಗೆ ಧ್ವನಿ ಆಲಿಸಿ ಕೃಷ್ಣನ 3 ರೂಪನೋಡಿದರೆ ಸಣ್ಣ ಪೋರನೆನಿಸುವ ಅಪಾರಮಹಿಮ ಕೃಷ್ಣನ ವ್ಯಾಪಾರವ ನಾನಾಪರಿಯಿಂದಲಿ ಗೋಪನ ಮುಂದ್ಹೇ- ಳೀಪುರ ಬಿಡುವೆವೆ 4 ತುರುವ ಕಾಯುತ ಭಾಳಾತುರ ವಾರಿಜಾಕ್ಷ ನಮ್ಮ ತುರುವ ಪಿಡಿದು ನಿಂತ ತುರುವ ಭಾರಕೆ ಸೀರೆ ಜರಿದು ಬೀಳುತಲೆ ಸರಿಜನರೊಳು ಮಾನ ತೊರೆದಂತಾಯಿತು 5 ಕಾಂತರಿದ್ದಂಥ ಏಕಾಂತದೊಳಗೆ ಬಂದು ನಿಂತರಿಬ್ಬರೊಳಗ- ಭೃಂತರ ತಿಳಿಯದೆ ಭ್ರಾಂತಳಾದೆ ಎನ್ನ ಕಾಂತನೋ ಇವ ಶ್ರೀಕಾಂತನೊ ತಿಳಿಯದು 6 ನಂದನಂದನ ನಿನ್ನ ಕಂದ ಮಾಡುವೋದು ಬಾ- ಯಿಂದ ಹೇಳಿದರೆನ್ನ ಬಂಧು ಜನರು ಭೀಮೇಶಕೃಷ್ಣಗೆ - ನ್ನೊ ್ಹಂದಿಸಿಬಿಡುವೋರು ಸಂದೇಹವಿಲ್ಲದೆ 7
--------------
ಹರಪನಹಳ್ಳಿಭೀಮವ್ವ
ಕಾಡುತಲಿಹ್ಯದು ಬೆಡಗಿನ ಕೋಡಗ ಬಡವರಿಗಳವಲ್ಲ ಪೊಡವಿಯಲಿ ಧ್ರುವ ಮಾಯದ ಮುಖವದು ಮೋಹದ ನಾಸಿಕ ಮಾಯಮಕರ ಕಿವಿಕಣ್ಣುಗಳು ಹ್ಯಾವ ಹೆಮ್ಮೆಯ ಹುಬ್ಬು ಕಪಿಕಣ್ಣಯೆವೆಗಳು ಬಾಯಿ ನಾಲಿಗೆ ಹಲ್ಲು ಬಯಕಿಗಳು 1 ಗಾತ್ರ ಸರ್ವಾಂಗವು ದುರುಳ ದುರ್ಬುದ್ಧಿಯ ಬೆರಳುಗಳು ಎರಡು ತುಟಿಗಳೆಂಬ ನಿಂದೆ ದೂಷಣಗಳು ಕೊರಳು ಕುತ್ತಿಗೆ ದುಷ್ಕರ್ಮಗಳು 2 ಹಣಿಯು ದಾಡಿಯು ಗಲ್ಲ ಪ್ರಪಂಚ ಶೋಭಿತ ಕಣ್ಣಭಾವಗಳಿವು ಚಂಚಲವು ಬಣ್ಣಬಣ್ಣದಿ ಕುಣಿದಾಡುವ ಕಪಿ ಗುಣ ಏನೆಂದ್ಹೇಳಲಿ ಕಪಿ ವಿವರಣ£ 3 ಉದರಬೆನ್ನುಗಳಿವು ಸ್ವಾರ್ಥಬುದ್ಧಿಗಳು ಮದಮತ್ಸರಗಳೆಂಬ ಕೈಗಳು ಪಾದ ಕಾಲುಗಳಿವು ಕಾಮಕ್ರೋಧಗಳು ಮೇದಿನಿಯೊಳು ಕುಣಿದಾಡುವದು 4 ಆಶಿಯೇ ಪಂಜವು ವಾಸನೆ ಬಾಲವು ಮೋಸಮೂಕರ ಗುಣಕೇಶಗಳು ಏಸು ಮಂದಿಯ ಕಪಿ ಘಾಸಿಯ ಮಾಡಿತು ಮೋಸಗೈಸಿತು ಭವಪಾಶದಲಿ 5 ಅಶನ ವ್ಯವಸನ ತೃಷಿ ಕಪಿಗಿದು ಭೂಷಣ ಮೀಸಲಾಗಿಡಿಸಿತು ಸುವಾಸದ ಹಸಗೆಡಿಸುದು ಯತಿ ಮುನಿಗಳ ತಪಸವು ಮುಸುಕಿತು ಮೋಸವು ಕಪಿಯಿಂದಲಿ 6 ಕಂಡದ್ದು ಬೇಡುತಾ ಅಂಡಲಿಯುತಿಹುದು ಮಂಡಲದೊಳು ತಾ ಕಾಡುತಲಿ ಪಿಂಡ ಬ್ರಹ್ಮಾಂಡದಿ ಲಂಭಿಸುತಿಹದು ಹಿಡದು ಬಿಡದು ಮುಷ್ಟಿಬಿರುದುಗಳು 7 ಪಂಡತನದಿ ಬಲು ಪುಂಡನಾಗಿಹದು ಹಂಡೀಗತನದಲಿ ಬಾಳುವದು ಭಂಡಿನಾ ಅಟಿಗೆ ಗಂಡಾಗಿಹುದು ಕಂಡಕಡಿಗೆ ಹರಿಡಾಡುತಲಿ 8 ಮೂಢಮಹಿಪತಿಯ ಕಾಡುವ ಕಪಿಗಿನ್ನು ಜಡಸೀದ ಗುರುಜ್ಞಾನ ಸಂಕೋಲಿಯು ಕಾಡುವ ಕಪಿಕೈಯ ಬಿಡಿಸಿದ ಗುರು ಎನ್ನ ಕಡೆಯ ಮಾಡಿದ ಬ್ರಾಹ್ಮಣ ಜನ್ಮಲಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಿಸುವೆ ನಿಜವಾಗಿ ಚನ್ನಕೇಶವನ ಪ ಸಡಗರದಿ ನಿಂತಿಹನು ವರ ದೂರ್ವಾಪುರದಲ್ಲಿ ಪೊಡವಿಯೊಳು ದಾಸರಿಗೆ ವಲಿಯಬೇಕೆಂದು ಬಿಡದೆ ನೋಡಿರಿ ಹರಿಯ ಕಾಯಕಾಂತಿಯ ನೀಗ ಕಡು ಶ್ಯಾಮ ವರ್ಣದಲಿ ಯೆಸೆಯತ್ತಲಿಹುದು 1 ಮೇಲಿನ ಬಲ ಹಸ್ತದಲ್ಲಿ ಶಂಖವ ನೋಡು ಕೆಳಗಿನ ಬಲ ಹಸ್ತದಲ್ಲಿ ಪದ್ಮವನೂ ಮೇಲಿನ ಯಡ ಹಸ್ತದಲ್ಲಿ ಚಕ್ರವ ನೋಡು ಕೆಳಗಿನ ಯಡ ಹಸ್ತದಲ್ಲಿ ಗದೆಯನ್ನೂ 2 ಸೊಂಟದಲಿ ವಡ್ಯಾಣ ಕಿರುಗೆಜ್ಜೆಗಳ ನೋಡು ಕಂಠದಲಿ ಹಲವು ವಿಧದಾಭರಣಗಳನೂ ಕೌಸ್ತುಭ ನೋಡು ಬಂಟರನು ಸಲಹುವ ಪಾದಯುಗ್ಮವನೂ 3 ಸೂರ್ಯ ಚಂದ್ರಮಂತೆ ಇಳೆಯೊಳಗೆ ರಮಣೀಯವಾಗಿ ಶೋಭಿವವು ಬಲಯಡದ ಶ್ರೋತೃಗಳ ಕುಂಡಲವ ನೋಡು 4 ಉದರ ಮಧ್ಯದೊಳಿಪ್ಪ ನಾಭಿಕಮಲವ ನೋಡು ಮದನಪಿತ ಶ್ರೀಹರಿಯ ತುಲಸಿ ಮಾಲೆಯನೂ ಸದನ ಪೀಠವನುಟ್ಟ ಪಿಂತಾಂಬರವÀ ನೋಡು ಮೃದು ಪಣೆಯೊಳಿಟ್ಟಿರುವ ಶ್ರೇಷ್ಠ ತಿಲಕವನೂ 5 ಚಿನ್ಮಯ ರೂಪವ ಮೌಕ್ತಿಕದ ಸರಗಳನು ಕಂಣಿಗೆಯುವ ಪುಷ್ಪಮಾಲೆಗಳ ನೋಡು ಸನ್ನುತನು ಭಕ್ತರನು ಪೊರೆವ ಮೂರ್ತಿಯ ಬಿಡದೆ ಮನ್ನಿಸುತ ಭಜಕರನು ಕಾವ ರಂಗನನೂ 6
--------------
ಕರ್ಕಿ ಕೇಶವದಾಸ
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲಬೆರಳು ಬಾಯೊಳೇತಕೊ ರಂಗಯ್ಯ ನಿನ್ನ ಪ ಸಾಲದಾಯ್ತೆ ಭಕ್ತರಿತ್ತ ಕಾಲೋಚಿತ ಶಾಲ್ಯನ್ನವುಹಾಲೋಗರ ಭಕ್ಷ್ಯಗಳು ಅ.ಪ. ಆಲದೆಲೆಯ ಮೇಲೆ ಮಲಗಿರೆ ಚೆಲುವ ನಿನ್ನಕಾಲುಚಾಚಲನುವೆ ಇಲ್ಲವೆಬಾಲನಿನ್ನ ನಾಭಿಕಮಲ ಕಾಲಿವಾಲಿದಲ್ಲಿ ಗಂಗೆಜಲವ ಬಿಡುತಲಿರುವೆಯೇನು 1 ಹಸಿವೆ ಬಹಳವಾಗಿರುವದೆ ನಿನ್ನಮ್ಮ ಆಯಶೋದೆ ನಿನಗೆ ಮೊಲೆಯನುಣಿಸಳೆನಿಶಾಚರಿ ಪೂತನಿಯ ಮೊಲೆಯವಿಷವನುಂಡ ಕಾರಣದಲಿ ನೀರಡಿಸುತಲಿರುವೆಯೇನು 2 ಪದದಿಂದಲಿ ಬರುವ ಗಂಗೆಯ ಉದಕದಿಂದಉದರದೊಳಿಹ ಜೀವರಾಶಿಯಮುದದಿಂದುದ್ಧರಿಸಲೆಂದುಪದುಮಾಕ್ಷನೆ ಜುರುಜುರು ನೀ ಚೀಪಲಿರುವೆಯೇನು ಹೇಳು 3 ಹಸುಳ ನಿನ್ನ ಪದದೊಳಿಡುತಿಹ ಭಕ್ತರ ಭಕ್ತಿರಸವ ಸವಿದು ನೋಡುತಿರುವೆಯಾಪೆಸರನೆತ್ತ ಗದುಗಿನ ಶ್ರೀ ವೀರನಾರಾಯಣನೆದಯವ ತೋರಿ ಹೇಳು ಬೇಡುತಿಹೆನು 4
--------------
ವೀರನಾರಾಯಣ
ಕೇಳು ಮನವೇ ನೀನು | ಅನವರತಾ | ಬಾಳು ಹಿರಿಯ ನಂಬಿರು ತಾ ಪ ಸದ್ಗುರು ದಯ ಪಡೆದು | ಭವದಲಿ ಪಡಿ ಭಾಗ್ಯದಲಿ 1 ಹಲವು ಹಂಬಲ ತ್ಯಜಿಸಿ | ದೃಢದಿಂದ | ಬಲಗೊಳ್ಳುಗುರು ಪದದ್ವಂದ್ವ 2 ಉದರ ಕುದಿಯಗಾಗಿ | ಕಂಡವನಾ | ವದಕೆರಗಲು ಬಹದೇನಾ 3 ಇಂದು ಸುಖಿಸು ಹೊಂದಿ ಕೃಷ್ಣಯ್ಯನ | ಸನ್ನುತ ಮಹಿಪತಿ ಚರಣಾ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು