ಒಟ್ಟು 50 ಕಡೆಗಳಲ್ಲಿ , 33 ದಾಸರು , 49 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ವೃಂದಾವನದಲಿ ನಿಂತ ಸುಯತಿವರನ್ಯಾರೇ ಪೆÉೀಳಮ್ಮಯ್ಯ ಪವಂದಿಪ ಜನರಿಗೆ ನಂದ ಕೊಡುವೊ ರಾಘ -ವೇಂದ್ರ ಮುನಿವರನೀತ ನೋಡಮ್ಮ ಅ.ಪಇಂದಿರೆ ರಮಣನ ಛಂದದಿ ಭಜಿಸ್ಯಾ-ನಂದದಲಿಹನ್ಯಾರೇ ಪೇಳಮ್ಮಯ್ಯಾನಂದತೀರ್ಥಮತ ಸಿಂಧುವರಕೆ ಬಾಲ -ಚಂದಿರನೆನಿಸಿಹನ್ಯಾರೇ ಪೇಳಮ್ಮಯ್ಯಮಂದಜನವಹರಿ ಕಂದುಗೊರಳರವೃಂದದಿ ಶೋಬಿಪನ್ಯಾರೆ ಪೇಳಮ್ಮಯ್ಯಹಿಂದೆ ವ್ಯಾಸಮುನಿ ಎಂದು ಕರೆಸಿದ ರಾಘ -ವೇಂದ್ರ ಗುರುವರ - ನೀತ ನೋಡಮ್ಮ 1ನತಿಸುವ ಜನರಿಗೆ ಸತಿಸುತರನು ಬಲುಹಿತದಲಿ ನೀಡುವನ್ಯಾರೇ ಪೇಳಮ್ಮಯ್ಯಪ್ರತಿದಿನ ತನ್ನನು ಮತಿಪೂರ್ವಕ ಬಲುತುತಿಪರ ಪಾಲಿಪನ್ಯಾರೇ ಪೇಳಮ್ಮಯ್ಯಮತಿಯುತಪಂಡಿತ ತತಿಯಭಿಲಾಷವಸತತ ಪೂರ್ತಿಪನ್ಯಾರೇ ಪೇಳಮ್ಮಯ್ಯಕ್ಷಿತಿಸುರರಿಗೆ ಸದ್ಗತಿದಾಯಕ ಮಹಯತಿಕುಲವರ ಗುರುರಾಯ ಕಾಣಮ್ಮ 2ಮಾತೆಯು ಸುತರಲಿ ಪ್ರೀತಿಗೊಳಿಸುವತಾತನ - ತೆರದಿಹನ್ಯಾರೇ ಪೇಳಮ್ಮಯ್ಯಪ್ರೇತನಾಥ ಮಹ ಭೂತಗಣಗಳಭೀತಿಯ ಬಿಡಿಸುವನ್ಯಾರೆ ಪೇಳಮ್ಮಯ್ಯಭೂತಳ ಜನಕೃತಪಾತಕಕಾನನವೀತಿಹೋತ್ರತೆರನ್ಯಾರೇ ಪೇಳಮ್ಮಯ್ಯದಾತಗುರು ಜಗನ್ನಾಥವಿಠಲ ನಿಜದೂತ ಜನಕ ಮಹದಾತನೀತಮ್ಮ 3
--------------
ಗುರುಜಗನ್ನಾಥದಾಸರು
ಶಂಭೊ ಪಾಲಿಸೊ ನೀ ಎನ್ನ ಜಗ -ದಂಬಾರಮಣ ಮುಕ್ಕಣ್ಣಾ ಪಕುಂಭಿಣಿಕೃತರಥ ಜಂಭಾರಿನುತಪಾದ -ಅಂಬುಜಮನ್ಮನೊ ಅಂಬುಜದಲಿ ತೋರೊಅ.ಪನಂದಿವಾಹನ ತ್ರಿಶೂಲಿ ಶತಾ -ಸಿಂಧುಜಾತಾರ್ಧ ಮೌಲಿಯೆಕಂದುಕಂಧರ ನಿನ್ನಪಾದ-ಇಂದಿರೇಶನ ತೋರಿಸಯ್ಯಾ 1ಮನೋಮಾನಿಯೇಮಾರಾರಿಎನ್ನಯ ದು-ಕನಕಗರ್ಭನಭೃಕುಟಿ- ಜನುಮ ನಿನ್ನಯಪಾದ-ವನಜಯುಗ್ಮದಿ ಎನ್ನ - ತನುವು ನೀಡುವೆ ದೇವಾಮನಸು ಪಾಲಿಸೊ ಪವನತನಯನೆ 2ನಿಟಿಲಾಕ್ಷಸುರÀಗಂಗಾಧರನೆ- ಪಂಪಾ-ಭಟಜನರೊಳು ನೀನು - ದ್ಧಟನೆನಿಸಿದ ದೇವಾಧಿಟನೆ ಎನಭವಅಟದವಾನಲಭಟಜನಾಗ್ರಣಿ ಥಟನೆ ಪಾಲಿಸೊ 3
--------------
ಗುರುಜಗನ್ನಾಥದಾಸರು
ಹರಿಹರಿಧ್ಯಾನಿಸೊ ಲಕ್ಷ್ಮೀವರನ ಧ್ಯಾನಿಸೊಪಉರಗಶಯನನಾಗಿಘೋರಶರಧಿಯನ್ನು ಮಧಿಸಿರುವಸುರರಿಗಮೃತವೆರೆದ ನಮ್ಮ ಗರುಡಗಮನ ತಾನುಅ.ಪದಂಡಧರಗೆ ಸಿಲುಕಿ ನರಕ ಕೊಂಡದಲ್ಲಿ ಮುಳುಗಲ್ಯಾಕೆಪುಂಡರೀಕನಯನ ಪಾಂಡುರಂಗನೆನ್ನದೇಶುಂಡಲಾಪುರಾದಿ ಪಾಲ ಪಾಂಡುಪುತ್ರ ಧರ್ಮರಾಯಕಂಡು ನಮಿಸಿ ಪೂಜೆಗೈದ ಅಂಡಜವಾಹನನೆಂದು1ಬಾಯಬಡಿಕನಾಗಿ ಸರ್ವ ನ್ಯಾಯ ತಪ್ಪಿ ಮಾತನಾಡಿಕಾಯಬೆಳೆಸಿ ತಿರುಗಿ ಬಂದೆ ಸಾಯಲಾ ಕಥೆವಾಯುತನಯ ವಂದ್ಯಚರಣಕಾಯಜಛೆಂದೆರಗಿದವಗೆಆಯುಧವರೇಣ್ಯ ಸರ್ವಸಹಾಯವ ಮಾಡುವಾ2ಕಂದ ಅಬಲ ವೃದ್ಧರೆಂದು ಬಂಧು ಜನರು ಭಾಗ ಕಿರಿದುಕಂದುಕುಂದುರೋಗಿ ಸ್ತ್ರೀಯರೆಂದು ಭೇದವೊಇಂದಿರೇಶಗಿಲ್ಲ ನರರು ಒಂದೇ ಮನದಿ ಧ್ಯಾನಿಸಿದರೆಸುಂದರಾಂಗಮೂರ್ತಿಗೋವಿಂದ ಪೊರೆಯುವಾ3
--------------
ಗೋವಿಂದದಾಸ