ಒಟ್ಟು 370 ಕಡೆಗಳಲ್ಲಿ , 60 ದಾಸರು , 342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಋಗ್ವೇದ ಪ್ರಿಯ ವಿಠಲ | ಸದ್ಗುಣಾರ್ಣವನೇ ಪ ಋಗ್ವಿನುತ ನೀನಾಗಿ | ಈಕೆಯನು ಪೊರೆಯೋ ಅ.ಪ. ವೇದಾಧಿಕಾರವನು | ನೀ ದಯದಿ ತ್ಯಜಿಸದೆಮೋದದಿಂ ತೋರಿ | ಋಗ್ವೇದ ವಾಚಿಸಿದೇ |ಮೋದ ಮುನಿ ಮತದಲ್ಲಿ | ಸಾಧಿಸಿವಳಲಿ ದೀಕ್ಷೆಭೇದ ಪಂಚಕ ತಿಳಿಸಿ | ಉದ್ಧರಿಸೊ ಇವಳಾ 1 ಹರಿದಾಸ್ಯ ಕಷ್ಟವೆನೆ | ಹಿರಿಯರ ಮತವಿಹುದುತರಳೆ ಆದ ಕಾಂಕ್ಷಿಪಳು | ಪೂರ್ವ ಪುಣ್ಯದಲೀಮುರವೈರಿ ನೀನಾಗಿ ಕರುಣಿಸುತ ತವದಾಸ್ಯಪರಿಹರಿಸು ಭವನೋವ | ಕಾರುಣ್ಯಮೂರ್ತೇ 2 ಭವ | ಮೋಚನವ ಗೈಯ್ಯೋ 3 ಲೌಕಿಕವು ವೈದಿಕವು | ಸಕಲವರ್ಣಾತ್ಮಕನೆವಾಕು ಸಕಲವು ತವ ಆ | ಲೌಕಿಕದ ಮಹಿಮಾವಾಕಾಗಿ ವರ್ತಿಸುತ | ಬೇಕಾದ ವರ ನೀಡಿನೋಕ ನೀಯನೆ ಕಾಯೊ | ಈಕೆಯನು ಹರಿಯೇ 4 ಭಾವಿ ಮರುತರ ಪ್ರೀಯ | ಆವಾವ ಕಾಲಕ್ಕುದೇವ ತವ ಸ್ಮøತಿಯಿತ್ತು | ಕಾವುದೀಕೆಯನೂನೋವು ಸುಖಗಳ ಸಮತೆ | ಭಾವದಲಿ ಅನುಭವಿಪಭಾವ ಕೊಡುವುದು ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಋಣವ ಮಾಡಿದ ಪಾಪ ರುಜುವಾಗಲೀಸದುಹಣ ಹೊನ್ನಕೊಡೆ ಪುಣ್ಯಹೃದಯರು ಒಲಿದು ಪನಿತ್ಯ ಕರ್ಮವು ತಾನೆ ನಿಂತಿತು ಸೂತಕಸುತ್ತಿಕೊಂಡಿರೆ ಮನಸಿಗೆ ತೀರುವನಕಾ 1ರಾಮಾಯಣ ಪಾರಾಯಣ ನಿಂತಿತೂುೀ ಮಹಾಚಿಂತೆ ತಾನಿದಿರಿಡೆ ಬಲಿತೂ 2ಧನವ ಸಂಗ್ರ'ಸಲು ತಿರಿದುಕೊಂಬವನಲ್ಲಕಣುಗೆಡಿಸಲು ಬಂದ ಕಪಟ'ದಲ್ಲ 3ಪರಲೋಕ ಹಾನಿಯ ಭಯದಿಂದ ಬಂದೆನುಕರ'ಡಿದೆನ್ನನು ಕಾಯಬೇಕಿನ್ನೂ 4ನಿಷ್ಕøತಿುಲ್ಲದ ನೀಚ ಪಾತಕ'ದು'ಷ ಸಹಸ್ರದಿಂ ನಾಶವಾಗುವದು 5ುೀ ದುಃಖವಭಿಮಾನದಿಂ ಬಂದುದಿದನೀಗಬೀದಿಯೊಳರಸುವೆ ಬಿಡುವಂತೆ ಬೇಗ 6ದುಡ್ಡು ದುಗ್ಗಾಣಿಯಾದರು ಸಾಕು ಬೇಗದಿಅಡ್ಡಿಯ ಮಾಡದಪ್ಪಣೆಗೊಡಿ ದಯದಿ 7ಬೇಳುವೆಯನು ಮಾಡಿ ಬೆದರಿಸುವವನಲ್ಲಶ್ರೀಲಕ್ಷ್ಮೀಪತಿ ಬಲ್ಲ ಸದ್ಗುರು ಬಲ್ಲ8ಕಾಶಿಗೆ ಹೋಗಬೇಕಾಗಿದೆ ುೀ ಕೊಳೆನಾಶವಾಗದೆ ಗಂಗೆ ನನಗೆ ತೋರುವಳೆ 9ನೀಕರಿಸುವರಿಂದ ನಿರ್ವೇದ ದೊರಕಿತು ಹಾಳಾದುದುುೀ ಕಲುಷವದೆಂದಿಗಳಿವದೊ ತೊಳದು 10ಚಿಕ್ಕನಾಗಪುರದಿ ವಾಸುದೇವಾರ್ಯಗುರುಪಕ್ಕನಪ್ಪಣೆಯ ಕೊಟ್ಟ ಕಾರಣ ಬಂದೆ 11
--------------
ತಿಮ್ಮಪ್ಪದಾಸರು
ಎಂಥ ಕೆಲಸಮಾಡಿ ಬಂದನೇ ಗೋಪ್ಯಮ್ಮ ನಿನ ಮಗ|| ಎಂಥ ಕೆಲಸ ಮಾಡಿ ಬಂದ ಕಾಂತ ಮಯೊಳಿಲ್ಲದಾಗ ಚಿಂತೆಲೇಶವಿಲ್ಲದೆ ಬಂದು ಚಿದುಗ ಬುದ್ಧಿತೋರಿ ಆಗ ಪ ಮಲಗಿ ಇರಲು | ಹೊಡಕೊಂಡು ಯಾರು ಹೋದರಂದನೆ ಈ ಮಾತು ಕೇಳಿ ಗಂಡ ಆಕಳ ಹುಡುಕ ಹೋದನೆ ಸುತ್ತಿ ಗಂಡನೆಂದು ಕೂಡೆಂದೆನ್ನ 1 ಬಟ್ಟೆ ಬಿಡಿಸಿ ಭಯವಿಲ್ಲವೆಂದನಮ್ಮ ಮಾನವುಳ್ಳ ಸ್ತ್ರೀಯರ ಸಂಗ ಸ್ನಾನಕ್ಕಾಗಿ ನದಿಗೆ ಹೋಗಿ ಸ್ನಾನಮಾಡೊ ನೀರೊಳು ನಿಂತೆನೆ ಆವೇಳೇ ಬಂದು ಕಾಣದ್ಹಾಗೆ ಶೀರಿ ತೆಗೆದನೆ ನಾನು ಕಾಣದೆ ಉಡಲು ಹೋದೆ ಕಾನನದೊಳು ಕೈಯ್ಯ ಪಿಡಿದು ಏನು ಮಾನ ಕಳದನಮ್ಮಾ 2 ಹೆಂಗಳೆರು ಎಲ್ಲ ಕೂಡಿ ಗಂಗಾಕ್ರೀಡೆನಾಡೋ ವೇಳೆ ಅಂಗವಸ್ತ್ರÀವನೆಲ್ಲ ತೆಗೆದನೆ ತೆಗೆದು ಮರದ ಟೊಂಗೆನೇರಿ ಕಾಡುತಿಹನೆ ಭಂಗ ಅಂಗವ್ರತವೆಲ್ಲ ಕೆಡಿಸಿರಂಗ ' ಹೆನ್ನೆ ವಿಠಲ’ ಶ್ರೀರಂಗಧಾಮನೆನೆಯಿರೆ 3
--------------
ಹೆನ್ನೆರಂಗದಾಸರು
ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1 ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2 ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3
--------------
ಕನಕದಾಸ
ಎನ್ನ ನುಡಿ ಪುಸಿಯಲ್ಲ ಈ ಜಗದೊಳು ಪ ಅರವಿಂದವಿಲ್ಲದಿಹ ಕೊಳವು ತಾ ಕಂಗಳವುಹರಿಣಾಂಕನಿಲ್ಲದಿಹ ಇರುಳು ಮರುಳುಸ್ವರಭೇದವಿಲ್ಲದಿಹ ಸಂಗೀತವಿಂಗೀತಸರಸವಿಲ್ಲದಿಹ ಸತಿಯ ಭೋಗ ತನುರೋಗ 1 ಪಂಥ ಪಾಡುಗಳನರಿಯದ ಬಂಟನವ ತುಂಟಅಂತರವರಿಯದಾ ವೇಶಿ ಹೇಸಿದಂತಿಯಿಲ್ಲದ ಅರಸು ಮುರಿದ ಕಾಲಿನ ಗೊರಸುಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನಿ2 ಮಾಗಿಯಲಿ ಸತಿಯನಗಲಿದ ಕಾಂತನವ ಭ್ರಾಂತಪೂಗಣೆಯ ಗೆಲಿಯದಿಹ ನರ ಗೋಖುರಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ 3
--------------
ಕನಕದಾಸ
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎಲೆ ಎಲೆ ಎಲೆ ಮುದಿಮೂಳಿ ನಿನ್ನ ಕಲ್ಮಷ ಇನ್ನು ತೊಳಿವಲ್ಲಿ ಪ ತಿಳಿಯದೆ ಸುಮ್ಮನೆ ಕಳಕೊಂಡಿ ವಯವೆಲ್ಲ ಸುಳ್ಳೆ ಸುಳ್ಳಿಗಾಗಿ ಹೋಗಿ ಮೃತ್ಯುಕೈಲಿ ಅ.ಪ ಹಿಡಿದಿದ್ದಿ ಸುಡುಗಾಡ ಪಥವ ಇನ್ನು ಬಿಡವಲ್ಲಿ ಮಾಯಮತವ ಹೆಡತಲೆಮೃತ್ಯು ನಾಳೆ ಅಡರಿ ಪಿಡಿದು ನಿನ್ನ ಕೆಡ ಕೆಡವಿ ಒದೆವಾಗ ಬಿಡಿಸೊರಾರವ್ವ 1 ಇನತು ನಾಚಿಕಿಲ್ಲ ರೋಗಿ ನೀನು ತಿಣಿತಿಣಿಕಾದಿ ಮುದಿಗೂಗಿ ಕನಿಕರಿಲ್ಲದೆ ಯಮನ ಠೊಣಪರ್ಹಿಡಿದು ನಿನ್ನ ಹೊಗೆರ್ಹೊಣಿಕಿಲ್ಹೇರುವಾಗ ನಿನಗ್ಯಾರೆ ಕಾಗಿ 2 ಹಣವೆಷ್ಟಿರಲು ನಿನ್ನದಲ್ಲ ನಾಳೆ ಮನೆಮಾರು ಬರದು ಹಿಂಬಲ ಮಣಿಕಟ್ಟೆಲವು ಮುರಿದ್ಹಣಿಯುವಾಗ ನಿನ್ನ ತನುಜನುಜರು ಯಾರು ಹಣಿಕ್ಹಾಕುವರಿಲ್ಲ 3 ಎಷ್ಟು ನಿನ್ನಗೆ ಬಡೆದಿದಮ್ಮಾ ನಿನ್ನ ಖೊಟ್ಟಿ ಕಡೆಯಿಲ್ಲಮ್ಮ ಉಟ್ಟ ಸೀರೆಯ ಬಿಡಿಸಿ ಕೊಂಡೊಯ್ದು ನಿನ್ನ ಸುಟ್ಟು ಸುರೆಹೊಯ್ವಾಗ ಆಟ ನೋಡಮ್ಮ 4 ಭಿನ್ನ ಭೇದಗಳನ್ನು ಕಡಿ ನಿನ್ನ ಒಡಲೊಳು ತಿಳಕೊಂಡುನೋಡಿ ಧನ್ಯ ಶ್ರೀರಾಮನ ಉನ್ನತ ಚರಣ ಇನ್ನಾದರು ಮನಮುಟ್ಟಿ ನೆನೆಕಂಡ್ಯ ಖೋಡಿ 5
--------------
ರಾಮದಾಸರು
ಎಲ್ಲಡಗಿದನೊ ಹರಿ ಎನ್ನಯ ಧೊರಿ ಪ ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ ಮಲ್ಲಮರ್ದನ ಪುಲ್ಲಲೋಚನ ಹರಿಅ ಪ ಶರಣೆಂದವರ ಕಾಯ್ವ ಕರುಣಾ ಸಮುದ್ರನು ಕರುಣನ ಅರಿಯದೆ ಹರಿಣಾಂಕ ನಿಭವಕ್ತ್ರ 1 ಕರಿರಾಜನ ಮೊರೆ ಕೇಳಿ ತ್ವರಿತದಿಂದ ಗರುಡನೇರಿ ಬಂದ ಗರ್ವರಹಿತ ದೇವ 2 ವರ ಭುಜದಲಿ ಶಂಖ ಚಕ್ರವ ಧರಿಸಿದ ಪರಮೇಷ್ಠಿ ಜನಕನು 3 ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ 4 ಹಿಂಡು ಗೋಪಾಲರನು ಕಂಡು ಕಾವ ವಿಷಯಕ್ಕಾಗಿ ಕಮಲಲೋಚನ ಹರಿ5 ಇನ ಚಂದ್ರ ನಿಭವಕ್ತ್ರ ಕನಕಾಂಬರಧರ ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ 6 ಗಜ ಧ್ರುವ ಬಲಿ ಪಾಂಚಾಲಿ ವರದನೆಂಬ ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ7
--------------
ವಿಜಯದಾಸ
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ಪ ಯೋನಿ ಮುಖ ಮಾರ್ಗವಿಡಿದುಭೂತಳಕೆ ಬಂದ ಹದನೇನ ತೀರಿಸಿಕೊಂಡೆಜಾತಿ ಯಾವುದು ನಿನ್ನ ಹೆಸರೇನು ಮರುಳೆ1 ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನುಹಿಂದೆ ನೆರವಾಗಿ ನಿಂತಾಪ್ತರುಂಟೆಒಂದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರುನಿಂದು ಮಾತಾಡು ಬರಿದೆ ಬಳಲಿದೆ ಮರುಳೆ 2 ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡುಇರುವ ಮಂದಿರವಾವುದದನೆನಗೆ ಪೇಳೊಧರೆಯೊಳಗೆ ವರಕಾಗಿನೆಲೆಯಾದಿಕೇಶವನಸಿರಿ ಚರಣಕಮಲವನು ನೆರೆನಂಬಿ ಸುಖಿಸೊ3
--------------
ಕನಕದಾಸ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1 ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2 ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3 ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4 ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5
--------------
ಕನಕದಾಸ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಮಾತ್ರ ನಿಂದಲ್ಲದ್ದು ಹರಿ ಸೃಷ್ಟಿಯೊಳಗೆ ಎನ್ನ ಹುಟ್ಟಿಸಿದ್ದು ಪ ನಷ್ಟದೇಹ ಕೊಟ್ಟು ದುಷ್ಟ ಬವಣೆಯಿಂದ ಕಷ್ಟದೊಳಗೆ ಎನ್ನ ನೂಕಿದ್ದುಅ.ಪ ಉಳಿದ ಪಾಪಶೇಷ ಕಳೆಯದಲೆ ಎನ್ನ ಇಳೆಯವಾಸಕ್ಯಾಕೆಳೆಸಿದಲೇ ನಳಿನನಾಭ ನಿನ್ನ ಬಳಿ ಇದೆ ನ್ಯಾಯವೆ ಕಳವಳಪಡಲು ನಾನೊಳಿತೇನು ನಿನಗೆ 1 ಎಷ್ಟು ರೀತಿ ಕಷ್ಟ ತಡಿಬೇಕೊ ಇ ನ್ನೆಷ್ಟುದಿನ ಹೀಗೆ ಕಳೀಬೇಕೊ ಕರ್ಮ ಎನ್ನದಿರಲಿಕ್ಕಾಗಿನು ಶಿಷ್ಟಜನುಮ ಮತ್ತು ಕೊಟ್ಟ್ಯಾಕೊ 2 ಭಕ್ತವತ್ಸಲನೆಂಬ ಬಿರುದೇನೋ ನಿನ್ನ ಭಕ್ತರ ಅಭಿಮಾನ ತೊರೆದೇನೊ ಭಕ್ತರಿಗೀತೆರ ಮೃತ್ಯುಬಾಧೆಯೇನು ಮುಕ್ತಿದಾಯಕ ಜಗತ್ಕರ್ತ ಶ್ರೀರಾಮನೆ 3
--------------
ರಾಮದಾಸರು
ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ