ಒಟ್ಟು 252 ಕಡೆಗಳಲ್ಲಿ , 57 ದಾಸರು , 208 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೆಲವ ನೀಡೆನಗೆ ಇಹ್ಯದ ಗೆಲವ ನೀಡೆನಗೆ ಪ ಗೆಲವ ನೀಡಿಯೆನ್ನ ಮಲಿನಬಿಡಿಸಿ ನಿನ್ನ ವರ ದಿವ್ಯಪಾದನಳಿನದೊಲುಮೆಯಿತ್ತು ಅ.ಪ ಎಡರು ಆವರಿಸಿದ ಕಾಲದಿ ದೈರ್ಯವ ದಯಮಾಡೊ ಸಡಗರಸಿರಿ ಬಂದ ಕಾಲದಿ ಶಾಂತಿ ವಿನಯ ಕೊಡೊ ಕಡುಜವ್ವನದಲಿ ದುಡುಕನುಕೊಡದಿರು ಪಿಡಿದು ನೇಮವನು ಬಿಡದ ಛಲವನಿತ್ತು 1 ಧರಣಿಯ ಸುಖಕಾಗಿ ಎನ್ನಿಂ ಪುಸಿಯ ನುಡಿಸದಿರೋ ಹರಣಪೋದರು ಪರರಿಗೆ ದೇಹಿಯೆನಿಸದಿರೋ ಪರಮಹರುಷದಿಂದ ಹರಿಶರಣರು ಮೆಚ್ಚಿ ಶಿರವದೂಗುವಂಥ ನಿರುತವರ್ತನೆಯಿತ್ತು 2 ಸತತದಿ ಕರ್ಣಕ್ಕೆ ಹರಿಕಥೆ ಕೀರ್ತನೆ ಕರುಣಿಸೊ ಪತಿತಪಾವನವೆನಿಪ ಭಜನಾನಂದವ ಪಾಲಿಸೊ ಕ್ಷಿತಿಯೋಳಧಿಕ ಸದುಗತಿ ಮೋಕ್ಷಾಧಿ ಪತಿ ಶ್ರೀರಾಮ ನಿಮ್ಮ ಪಾದಭಕ್ತಿಯಿತ್ತು 3
--------------
ರಾಮದಾಸರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ಚನ್ನಕೇಶವ ನಿನ್ನ ಭಜನೆಯೊಂದುಳಿದು ನಾ ನನ್ಯರ ನಂಬೆನು ಸಲಹಯ್ಯ ಹರಿಯೇ ಪ ತರಳಾ ಧೃವನಂತೆ ತಪಸ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಸರಸ ಜಾಂಬುಕಿಯಂತೆ ಸೇವೆಯನರಿಯೆನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೇ 1 ದಾಸ ಕನಕನಂತೆ ಭಕ್ತಿಯ ನರಿಯೆನು ವಾಸುಕಿಯಂತೆ ನಾ ಯಾಚನೆಯರಿಯೇ ದಾಸ ಮಾರುತಿಯಂತೆ ದಾನತ್ವವರಿಯೆನು ವಾಸವನಂತೆ ನಾ ಕೀರ್ತನೆಯರಿಯೇ 2 ಹರಿಯ ಲೀಲೆಗಳನ್ನು ಒಂದಿಷ್ಟನರಿಯೆನು ಹರಿ ಪೂಜೆ ಸೇವೆಯ ಸ್ಮರಣೆಯನರಿಯೇ ಹರಿಯ ಮನೆ ಘಂಟೆಯ ಬಾರಿಸಲರಿಯೆನು ಸಿರಿ ಚನ್ನಕೇಶವ ಮಹಿಮೆಯನರಿಯೇ 3
--------------
ಕರ್ಕಿ ಕೇಶವದಾಸ
ಜುೀಂದ್ರಾಜುೀಂದ್ರಾಸುಜನ ಭಜಕಮನ ಚಕೋರಚಂದ್ರಾ ಪಶೈವಾದ್ವೈತದಪ್ಪಯ್ಯ ದೀಕ್ಷಿತರ ಸದ್ದು ಅಡಗಿಸಿದ'ದ್ಯಾ - ಸಮುದ್ರು 1ಎಮ್ಮೆ ಬಸವನ ಹೆಮ್ಮೆ ಮುರಿದುಆ ಕುಂಭೇಶ್ವರನನು ಒಲಿಸಿದ ಧೀರಾ 2ವ್ಯಾಸ ಮುನಿಕುವರ 'ಷ್ಣುತೀರ್ಥ ನೀಕೃಷ್ರ್ಣಾರ್ಪಣವೆಂದರು ಶ್ರೀಮಠಕೆ 3ರಾಶಿ ರಾಶಿ ಗ್ರಂಥಗಳ 'ರಚಿಸಿದದೇಶಕಾರ್ಯ 'ದ್ವಾಂಸರ ಪ್ರೀಯಾ 4ಮೂಲ ವೇಣುಗೋಪಾಲಕೃಷ್ಣ ನಿನ್ನಮೂಲರಾಮನ ಸೇವೆಗೆ ಕಳಿಸಿದ 5ಸರ್ವಕಲೆಗಳಲಿ ಪರಿಪೂರ್ಣನು ನೀ ಸರ್ವಶಾಸ್ತ್ರ ಸಂಪನ್ನ ಪ್ರಸನ್ನ 6ಶೈವಾದ್ವೈತರ ಗೆದ್ದು ಓಡಿಸಿಕಾವೇರಿತಟ ಪಾವನ ಮಾಡಿದಿ 7ಮಧ್ವ-ಮತಾಬ್ಧಿಗೆ ಪೂರ್ಣ ಸುಚಂದ್ರಾವಾದಿತಿ'ುರಮಾರ್ತಂಡ ಪ್ರಚಂಡಾ 8ತಾಪತ್ರಯ ಪರಿಹರಿಸಿ ಕೈಪಿಡಿಯೋಭೂಪತಿ'ಠ್ಠಲನ ಭಕ್ತಿವರ್ಯಾ 9ಶ್ರೀ ರಾಘವೇಂದ್ರರ ಸ್ತುತಿಪರ ಕೀರ್ತನೆಗಳು
--------------
ಭೂಪತಿ ವಿಠಲರು
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ಪ ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 1 ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ 2 ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ತಾತ್ವಿಕ ಹಿನ್ನೆಲೆಯ ಕೀರ್ತನೆಗಳು ಅದಕೋ ವೈರಾಗ್ಯ ಅದಕೋ ವೈರಾಗ್ಯಅದಕೋ ವೈರಾಗ್ಯ ಕೇಳದಕೋ ವೈರಾಗ್ಯ ಪ ಸತಿಸುತ ಭಾಗ್ಯವ ಸರ್ವವ ತ್ಯಜಿಸಿಯೆಮತಿಬ್ರಹ್ಮವಾದುದೆ ಅದಕೋ ವೈರಾಗ್ಯ1 ಅನ್ನೋದಕ ವಸ್ತ್ರ ಅಪೇಕ್ಷೆ ಅಡಗಿಯೆಚಿನ್ಮಾತ್ರನಾದುದೆ ಅದಕೋ ವೈರಾಗ್ಯ2 ದೂಷಣಭೂಷಣವೆರಡಕ್ಕೆ ಹೊಂದದೆವಾಸನ ಕ್ಷಯವಿರೆ ಅದಕೋ ವೈರಾಗ್ಯ 3 ಇಹಪರ ಭೋಗವ ತೊರೆದಿಹ ಭಾವವೆಮಹಾಶಿವನಾದುದೆ ಅದಕೋ ವೈರಾಗ್ಯ 4 ಇರುಳು ಹಗಲು ಚಿದಾನಂದ ಸದ್ಗುರುವಾಗಿಶರೀರವ ಕಳೆದುದೆ ಅದಕೋ ವೈರಾಗ್ಯ5
--------------
ಚಿದಾನಂದ ಅವಧೂತರು
ತೆರಳಿದರು ವ್ಯಾಸತತ್ವಜ್ಞರಿಂದು ಪುರುಷೋತ್ತಮನ ಗುಣಗಳರುಪಿ ಸುಜನರಿಗೆ ಪ ವರ ರೌದ್ರಿನಾಮ ಸಂವತ್ಸರದ ಶ್ರಾವಣ ಪರಪಕ್ಷ ಅಷ್ಟಮಿ ಭಾನುವಾರ ಭರಣಿ ನಕ್ಷತ್ರ ಪ್ರಾತಃಕಾಲದಲಿ ಸೋಮ ಪಾದ ಸನ್ನಿಧಿಗೆ 1 ಭಾಗವತ ಮೊದ ಲಾದ ಶಾಸ್ತ್ರಗಳ ಕೀರ್ತನೆಗೈಯುತಾ ಪಾದೋದಕವ ಶಿರದಿ ಧರಿಸುತಿಪ್ಪ ವರಘತಿ ರೋಧಾನಗೈಸಿ ಪರಗತಿ ಮಾರ್ಗವನು ತೋರಿ 2 ಸೋಜಿಗವಿದಲ್ಲ ಸಜ್ಜನರನುದ್ಧರಿಸುವುದು ನೈಜ ಜಗನ್ನಾಥ ವಿಠ್ಠಲನ ಪಾದ ರಾಜೀವಯುಗಳ ನಿವ್ರ್ಯಾಜದಲಿ ಭಜಿಪ ಪ್ರ ಯೋಜನನೊರೆದಿತರ ವ್ಯಾಪಾರ ತೊರೆದು 3
--------------
ಜಗನ್ನಾಥದಾಸರು
ಥರವಲ್ಲ ಸ್ವಾಮಿ ಥರವಲ್ಲ ಪ. ಥರವಲ್ಲ ಸ್ವಾಮಿ ಈ ತೆರನ ಮಾಡುವುದು ಕರುಣ ಸಾಗರನೆಂಬ ಬಿರುದಿನ್ನು ನಿಲದು ಅ.ಪ. ಊರೊಳಗಿಹ ಜನರೆಲ್ಲರು ಕೂಡಿ ವಾರಿಜಾಕ್ಷನ ದಾಸನೆಂದು ಕೊಂಡಾಡಿ ಸಾರಿಸಾರಿಗೆ ನಿನ್ನ ಕೀರ್ತನೆ ಮಾಡಿ ಪೋರ ಪೇಚಾಡುವನೆಂಬರು ಕೂಡಿ1 ಪಾರಾಯಣದ ಪುಸ್ತಕವ ಕಟ್ಟಿಟ್ಟು ವಾರಿಜನಾಭ ನಿನ್ನಯ ಪೂಜೆ ಬಿಟ್ಟು ಕಾರಿ ಕೆಮ್ಮುತ ಬಿದ್ದಿರುವ ದೊಡ್ಡ ಗುಟ್ಟು ಯಾರ ಮೇಲಿನ್ನು ತೋರಿಸಲೆನ್ನ ಸಿಟ್ಟು 2 ಮೋಹ ಪಾಶದಿ ಮುಸುಕಿ ಕಟ್ಟಿದರೆ ಬಹ ಪಾತಕಗಳಿಗೆಲ್ಲ ನಾನಿದಿರೆ ನೀ ಹದಿನಾಲ್ಕು ಲೋಕೇಶನೆಂದೊದರೆ ದೇಹವ ಬಳಲಿಸಿದರೆ ನಾನೇನ್ಹೆದರೆ 3 ನಂಬಿರೊ ಭಕ್ತ ಕುಟುಂಬಿಯನೆಂದು ಅಂಬುಜಸಂಭವನ್ಯಾಕೆಂದನಂದು ಹಂಬಲಿಸಿದರು ನೀ ದಯದೋರದಿಂದು ಬೊಂಬೆಯೆ ಸರಿಯೆಂದು ಜನರೆಂಬೊ ಕುಂದು 4 ಸರ್ವದೋಷಹರ ಸಾಗರಜೇಶ ನಿರ್ವೇದದಿಂದ ನಾ ನುಡಿದೆನಾಕ್ರೋಶ ಸರ್ವಕಾಲಕು ಸಲಹುವ ನೀನೆ ಶ್ರೀಶ ಶರ್ವಾದಿ ವಂದ್ಯ ಶೇಷಾಚಲವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯಮಾಡೆನಗೇ ಕೃಷ್ಣದಯ ತೋರನಗೇ ರಂಗ ದಯ ಮಾಡೆನಗೆ ಶ್ರೀ ಚನ್ನಕೇಶವನೇ ಪ ಧರಣಿ ಪಾಲಕನಂತೆ ಮೃತವ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಕರಿರಾಜನಂತೆ ನಾ ಮರೆಹೊಕ್ಕಲರಿಯೆನು ತರಳ ಧೃವನಂತೆ ತಪ ಮಾಡಲರಿಯೇ 1 ಪರೀಕ್ಷಿತನಂತೆ ಶ್ರವಣವ ಮಾಡಲರಿಯೆನು ವರಶುಕರಂತೆ ಕೀರ್ತನೆ ಮಾಡಲರಿಯೇ ತರಳ ಪ್ರಲ್ಹಾದನಂದದಿ ಸ್ಮರಿಸಲರಿಯೆನು ಚರಣವ ರಮೆಯಂತೆ ನಾ ಭಜಿಸಲರಿಯೇ 2 ಹರಿಯನ ಕ್ರೂರನಂತೇ ನಮಿಸಲರಿಯೆನು ಹರಿಯ ಪೃಥುವಿನಂತೆ ಪೂಜಿಸಲರಿಯೇ ಮರುತಜನಂತೆ ನಾ ದಾಸ್ಯತ್ವವರಿಯನು ನರನಂತೆ ಮಿತ್ರತ್ವ ಪಡೆಯಲಿಕ್ಕರಿಯೇ 3 ಆತ್ಮವ ಬಲಿಯಂತೆ ಅರ್ಪಿಸಲರಿಯೆನು ನಿತ್ಯವು ನರಕದಿ ಮುಳುಗಿ ನಾನಿರುವೇ ಮತ್ಸ್ಯಾದಿ ದಶರೂಪವೆತ್ತಿದ ರಂಗನೆ ಬೃತ್ಯರ ಸಲಹಯ್ಯ ಸ್ವಾಮಿ ದೂರ್ವೇಶಾ 4
--------------
ಕರ್ಕಿ ಕೇಶವದಾಸ
ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಪ ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ 1 ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ 2 ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ ದಾಸಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ 3
--------------
ಕನಕದಾಸ
ದಾಸ ದಾಸರು ಪೇಳುತಿಹರಲ್ಲಾ ಕೇಶವಾ ಎಂದು ತಾಸು ತಾಸಿಗೆ ಪೇಳುತಿಹರಲ್ಲಾ ಪ ರಾಮನೆಂಬರು ನಿಮಿಷ ನಿಮಿಷಕೆ ನೇಮದಿಂದಲಿ ಹರಿಯ ಭಜಿಪರು ರಾಮನಾಮವ ಹಲವು ವಿಧದಲಿ ಪ್ರೇಮದಿಂದಲಿ ಸ್ಮರಿಸುತಿಹರು 1 ಮಾತು ಮಾತಿಗೆ ಕೃಷ್ಣಯೆಂಬರು ನೀತಿ ನೀತಿಗೆ ವಿಠಲಯೆಂಬರು ಸೇತು ಬಂಧನ ಸ್ವಾಮಿ ನಾಮವ ನಿತ್ಯ ನುಡಿಯಲಿ ನೆನೆಯುತಿಹರು 2 ಕಾಲ ಕಾಲಕೆ ಶೇಷಶಾಯಿಯ ನೀಲರೂಪನ ನಾಮ ಸವಿಯುತ ಮೂರ್ತಿ ಕೀರ್ತನೆ ವೇಳೆ ವೇಳೆಗೆ ಮಾಡುತ 3 ನಿತ್ಯ ಮಾರ್ಗದಿ ನಾವೆ ರೂಪವ ಧರಿಸಿ ಭವದೊಳು ರಾವಣಾಂತ ಕನಡಿಯ ಸೇರುವ 4
--------------
ಕರ್ಕಿ ಕೇಶವದಾಸ
ದಾಸನಾಗುವೆ ಭಜಿಪ ಭಕ್ತಿಯನು ನೀಡೆನ್ನ ನಾನೇನೂ ಮಾಡಲಾರೆ ರಂಗಯ್ಯ ನೀನೆನ್ನ ಸಲಹ ಬೇಕು ಪ ಗಾನಲೋಲನ ನಾಮ ಭಜನೆಯೊಂದುಳಿದು ನಾ ನನ್ಯರೀತಿಯ ಕಾಣೆ ಸಲಹಯ್ಯ ಹರಿಯೇ ಅ.ಪ. ತರಳಾ ಧ್ರವನಂತೆ ತಪನ ನಾನರಿಯನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಹರಿದಾಸರಂತೆ ದಾಸತ್ವ ನಾನರಿಯೆನು ಪರಮ ಸೇವಕರಂತೆ ಸೇವೆಯ ನರಿಯೇ 1 ಅಸುರನಂದನನಂತೆ ಕೀರ್ತನೆಯರಿಯೆನು ವಸುಧೀಶನಂತೆ ನಾ ವ್ರತಗಳನರಿಯೇ ವಸುಮತಿಯಂತೆ ನಾ ಯಾಚನೆಯರಿಯೆನು ಋಷಿ ವೃಂದದಂತೆ ನಾ ಭಕ್ತಿಯನರಿಯೇ 2 ಸಿರಿಯಂತೆ ನಿನ್ನನು ಸೇವಿಸಲರಿಯನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೆ ಸುರಮುನಿಯಂತೆ ನಾ ಗಾಯನವರಿಯೆನು ಸಿರಿ ಚನ್ನಕೇಶವ ಭಜನೆಯನರಿವೇ 3
--------------
ಕರ್ಕಿ ಕೇಶವದಾಸ
ದಾಸರ ಭಾಗ್ಯವಿದು ಪ ತಂದೆ ಮುದ್ದು ಮೋಹನ ದಾಸರ ಭಾಗ್ಯವಿದು ಅ.ಪ. ಕರಿಗಿರಿ ನರಹರಿ ಸಂದರ್ಶನವು | ನರಹರಿ ಭಕುತರ ವಿಹಿತದಸೇವೆ |ಪರಿಪರಿ ಗೈಯ್ಯುತ ಹಿಗ್ಗುತ ನಾನು | ಧರಿಸಿರುವಂಕಿತ ಭಾಗ್ಯವು ಎಲ್ಲಾ 1 ಉರುಗಾದ್ರಿವಾಸನ ಶರಣರ ಕೂಡೆ | ಸರಸದಿ ಕೇಳುತ ಹರಿ ಮಹಿಮೆಯನುಉರುತರ ಸುಖಸಂತೋಷದಿ ಕೀರ್ತನೆ | ಹಿರಿದಾಗಿ ಪಾಡುತ ನರ್ತಿಪುದೆಲ್ಲ2 ಭವನಿಧಿ ದಾಟಿಪ ಹವಣೆಯು ಎನಿಸುವ | ಭುವನ ಮೋಹನನ | ಗುಣರೂಪಗಳನವನವ ಕೀರ್ತನೆ ಸ್ತವನದಲಿ ಗುರು | ಗೋವಿಂದ ವಿಠಲ ನುಡಿಸುವುದೆಲ್ಲಾ 3
--------------
ಗುರುಗೋವಿಂದವಿಠಲರು
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ