ಒಟ್ಟು 73 ಕಡೆಗಳಲ್ಲಿ , 31 ದಾಸರು , 72 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾರ್ಗವೇ ಕಾಣಿಸದು ವೈಕುಂಠಕೆ ಪೇರ್ಗಿರಿಗಳ ದಾಂಟಲಾರ್ಗಳವೋ ಕಾಣೆ ಪ ಭೋರ್ಗರೆವುದು ಬಲಮಾರ್ಗದಿ ಜಲನಿಧಿ ಕಾರ್ಗಡಲು ಎಡ ಮಾರ್ಗದಿ ಕಗ್ಗತ್ತಲೆ ಅ.ಪ ಹಿಂದೆ ಮೃಗಂಗಳ ಸಂದಣಿಯಾರ್ಭಟ ದಿಂದ ಮನದ ದೈರ್ಯಕುಂದಿದುದಕಟ ಮ ಹಾಂಧಕೂಪದೊಳೆನ್ನ ಎದೆ ಕುಸಿದು ಬಂಧಿಸಿತೆನ್ನ ಕಾವ ಬಂಧುಗಳಿಲ್ಲ 1 ಕೂಪದಿ ಕ್ರಿಮಿಗಳು ಕೋಪಿಸಿ ತನುವನು ಈ ಪರಿಯೆಲ್ಲವು ತಾಪತ್ರಯಂಗಳ ಧೂಪ ದೀಪಗಳ ಪಾಪದ ಫಲವೋ 2 ದಡವನು ಕಾಣದೆ ತಡಬಡಿಸುವೆನೋ ಮೃಡನು ತಾ ಮಾಂಗಿರಿಯೊಡೆಯ ಶ್ರೀರಂಗ ಕಡುಪಾತಕಿಯ ಕೈಹಿಡಿದೆತ್ತಿ ಕೃಪೆಯಿಂದ ತಡಿಗೆ ಸೇರಿಸಿ ನಿನ್ನ ಅಡಿಯಪಿಡಿಸೋ ದೇವಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುದ್ದು ವೆಂಕಟ ವಿಠಲ | ಬುದ್ಧಿ ಪ್ರೇರಕನೇ ಪ ಉದ್ವೇಗ ಕಳೆದು ಸ | ದ್ವಿದ್ಯ ಪ್ರದನಾಗೋ ಅ.ಪ. ಭವ ಕೂಪದಿಂದೆತ್ತಿಓದಿ ಕರೆದ್ಯೊದುದನ | ಭಾವುಕಗೆ ತಿಳಿಪೇ 1 ಮಾನವ ಮನದಿ | ಶಂಕಿಸುತ್ತಿರಲೂಕೊಂಕುಗಳ ಪರಿಹರಿಪ | ವೆಂಕಟೇಶ ನಾನುಅಂಕನವ ದಯೆಗೈಸಿ | ಸಂಕಟವ ಕಳೆದಾ 2 ಸೃಷ್ಟಿ ಸ್ಥಿತಿ ಸಂಹಾರ | ಅಷ್ಟ ಕರ್ತೃಕ ಹರಿಯೆಪುಷ್ಠತವ ಮಹಿಮೆಗಳ | ಶಿಷ್ಟನಿಗೆ ತೋರೀಕಷ್ಟಗಳ ಪರಿಹರಿಸಿ | ಸುಷ್ಠು ಪಾಲಿಪುದಿವನಜಿಷ್ಣು ಸಖ ಭ್ರಾಜಿಷ್ಣು | ಕೃಷ್ಣ ಮೂರುತಿಯೇ 3 ಭವ ಬಂಧ ಕಳೆಯೋಮಧ್ವಶಾಸ್ತ್ರದಿ ಮನವು | ಸುವಿಚಾರಗೈವ ಪರಿಶ್ರೀ ವರನೆ ಕೃಪೆಗೈದು | ತತ್ವಗಳ ತಿಳಿಸೋ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ
ವ್ಯಾಸರಾಯರು ಗೋಪಾಲಕೃಷ್ಣನ ಭಕ್ತಿಯಿಂದಲಿ ಭಜಿಸುವ ನಮ್ಮ ಗುರು ವ್ಯಾಸಮುನಿರಾಯ ಪ. ಹೇಸಿ ವಿಷಯಗಳಿಗೆ ಮೋಸ ಹೋದೆನು ನಾನು ಭಿಲಾಷೆಗಳ ಪೂರೈಸೊ ಅ.ಪ. ಹಿಂದೇಳ ಜನ್ಮಗಳು ಬಂದು ಪೋದವಯ್ಯಾ ಇಂದು ವಸುಧಿಯೊಳಗೆ ಬಂದೆನಯ್ಯಾ ಭವದೊಳಗೆ ನೊಂದೆನಯ್ಯಾ ಬಹಳ ಬೆಂದೆನಯ್ಯ ಅಘಕೂಪದೊಳು ಬಿದ್ದೆನಯ್ಯ ಉದ್ಧರಿಸು ಜೀಯ್ಯಾ 1 ವಂದಿಸುವೆನು ನಿಮಗೆ ನವವೃಂದ ವನದಲಿ ಇರುವೋರು ಇಂದಿರೇಶನ ನೋಡುವೋರು ಆನಂದಪಡುವೋರು ಸಿಂಧುಶಯನ ತಂದು ತೋರಿಸೋ ಇಂದು ನಿಮ್ಮಯ ಪಾದವೊಂದೆ ಭಜಿಪೆ ತಂದೆ ಮಾಡೆಲೊ ಸತ್ಕøಪೆ 2 ಯೆಷ್ಟು ಜನುಮದ ಪುಣ್ಯ ಫಲಿಸಿತು ಎನಗೆ ವೈಷ್ಣವಾ ಜನ್ಮ ದೊರಕಿತು ಕೊನೆಗೆ ದುಷ್ಟ ಸಂಗವಾ ದೂರದಿ ಮಾಡಯ್ಯ ಶಿಷ್ಟ ಜನ ಸಂಗದೊಳಗೆನ್ನಿಡಯ್ಯಾ ಅಭೀಷ್ಟಗಳ ನೀಡಯ್ಯ ಕಾಳಿಮರ್ಧನ ಕೃಷ್ಣನ ತೋರಿಸಯಾ ಪಾಲಿಸಯ್ಯಾ 3
--------------
ಕಳಸದ ಸುಂದರಮ್ಮ
ಶಂಕರ ದೇವನಾಲಂಕಾರ ಶಯನ ಶಂಖ ನೃಪನ ಪಾಲಾ ಶಂಖಾದಿ ಸೂದನ ಶಂಕೆಯಿಲ್ಲದೆ ತಾಯಿ ಸಂಕಲೆ ಕಡಿದ ಶಶಾಂಕಕೋಟಿ ಪ್ರಭಾವ ಸಂಕರುಷಣ ದೇವ ಶಂಖಾರಿಧರನೆ 1 ಕಂಬದಿ ಬಂದಚ್ಯುತನೆ ಗೊಲ್ಲರ ಸಲಹಿದ ಗೋವರ್ಧನಧರ ಪುಲ್ಲ ಲೋಚನನೆ2 ಅಖಿಳ ಅಸುರರ ಶಕುತಿಯ ಅಪಹರಿಸಿದ ಅದಿತಿ ರುಕ್ಮಿಣಿಯೊಡನೆ ವಿಹಾರ ಸಕಲ ಸುರರೊಡೆಯ ಸಾಮಗಾಯನಲೋಲ ಶಕುಜನಕನೆ3 ಶಾಮಲ ಶರೀರ ವರ್ಣ ವಿನುತ ರೋಮ ರೋಮ ಕೂಪದಿ ಆನಂದ ಭರಿತ ದಾಮೋದರ ವಿಶ್ವದಾನಿಗಳರಸನೇ ಸಾಮಜವರದ 4 ಸನ್ನುತ ಚರಣ ಅನಿರುದ್ಧ ದೇವನೆ ಅಸುರ ಸಂಹರಣಾ ಕನಕಗರ್ಭಾದಿ ಸುರಕಟಕ ಪಾಲಕನೆ ವನಜ ಜಾಂಡವ ಪೆತ್ತ ವೈಕುಂಠ ಪುರಾಧೀಶ 5 ಫಣಿ ಫಣ ಮರ್ದನ ಪ್ರಣವ ಪ್ರತಿಪಾದ್ಯ ಪ್ರ ಸನ್ನವದನಾ ರಣರಂಗ ಭೀಮಾ ಭಕುತ ಜನ ಮೋದನಾ ಅಣು ಸ್ಥೂಲದಲಿ ಗಮನ 6 ಶ್ವೇತವಾಹನನ ಸಮರದಿ ಕಾಯಿದಾ ಅಖಿಳ ಜೀವ ಭೇದಾ ದರ ಪರಮ ಸುಮೋದಾ ಭೀತಿರಹಿತ ಕಲ್ಪಭೂಜನೆನಿಪ ಜಗನ್ನಾಥವಿಠ್ಠಲನೆ 7
--------------
ಜಗನ್ನಾಥದಾಸರು
ಶತ್ರುಭಯ ಪರಿಹರಿಸೊ ಭೂತರಾಜ ಪ ಭವಕೆ ಭೀಕರ ಭಾವಿ ಭೀಮನ ಭಜಿಪ ಭೋಜಾ ಸುತೇಜಾ ಅ.ಪ. ಇಂದು ನೀನೆ ನಾನೆಂದು ಕಮರಿ ಕೂಪದಿ ನೊಂದೆನೊ ಭಾವಿ ನಂದಿವಾಹನ ಮಂಗಳ ಪ್ರದ ನೀಲಕಂಠಾ 1 ಇಲ್ಲೆಲ್ಲಿ ಸರ್ವಸ್ಥಳದಲ್ಲಿ ವ್ಯಾಪ್ತವಾಗಿಹ ನಿನ್ನ ಲೋಲ ಮೂರುತಿಯ ನೆನೆವೆ ಫಾಲನಯನಾ ಪಾಲಿಗೇ ಪಾಲನೆಂತೆಂದು ಕಾಲಮೀರದೆ ಚಲಿಸದೆಲೆ ಬಾರೊ ಗರಳಧಾರಿ 2 ಶ್ರೀಕೃಷ್ಣದಾಸನೆ ನಿನ್ನ ಇಷ್ಟನೆಂತೆಂದು ಮನಮುಟ್ಟಿ ಭಜಿಸುವೆನೊ ಚಾರುದೇಷ್ಣೆಪಾಲಾ ದಿಟ್ಟ ಗುರು ಕೃಷ್ಣವಂದಿತ ತಂದೆ-ವರದಗೋಪಾಲವಿಠ್ಠಲನ ಸಹಜ ಬಂದು 3
--------------
ತಂದೆವರದಗೋಪಾಲವಿಠಲರು
ಶಾರದೇಂದುಮುಖಿ ನೀರಜನಯನಳೆ ಬಾರೆಲೆ ಬಾಗಿಲ ತೆಗಿಯಲೆ ಭಾಮೆ ಪ ಯಾರಯ್ಯ ಬಾಗಿಲ ಹೊರಗೆ ನಿಂತಿರುವನು ಜಾರ ಪುರುಷನಂತೆ ತೋರುವೆ ನೀನು ಅ.ಪ ಜಾರನಾದರೆ ನಿಂಗೆ ಜಾರನಲ್ಲವೆ ಮೀನಾ ಕಾರ ಧರಿಸಿರುವ ಹರಿಯಲೆ ಭಾಮೆ ಮೀನನಾದರೇ ಬಲು ಮೌನದಲಿರದಂತೆ ಮಾನವರಂತೆ ಮಾತು ಯಾವುದೋ ನಿನಗೆ 1 ಮಂದರಗಿರಿಯ ಬೆನ್ನಿಂದ ಧರಿಸಿರುವ ಅಂದ ಕೂರ್ಮನಲ್ಲವೇನೆ ಭಾಮೆ ಕೂರ್ಮ ನೀನಾದರೆ ಕೂಪದೊಳಿರುವುದೆ ಧರ್ಮವೆಂಬುವುದನು ಮರೆತೆಯಾ ನೀನು 2 ನೀಲವೇಣಿಯೆ ಕೇಳೆ ಕೋಲರೂಪದಿ ಬಂದು ಕ್ಷಿತಿ ತಂದೆನೆ ಭಾಮೆ ಪೋತರೂಪನೇ ನಿಜ ಧಾತ್ರಿಯ ಭೇದಿಸಿ ಗಾತ್ರ ರಕ್ಷಣೆ ಮಾಡು ಹೋಗೆಲೊ 3 ಸ್ತಂಭ ಭೇದಿಸಿ ರಿಪು ಡಿಂಭನ ಕಾಯಲು ಜಂಭದಿ ಖಳನನು ಕೊಂದೆನೇ ಭಾಮೆ ಸ್ಥಂಭ ಭೇದಿಸಿದ ನಾ ನಂಬುವುದಿಲ್ಲವೊ ಡಂಭದಿ ಬಾಗಿಲು ಭೇದಿಸಿ ಬಾರೊ 4 ವಾಮನನೆಂದು ವಟುರೂಪದಿ ಬಂದು ಸಾರ್ವ ಭೌಮನಲ್ಲಿ ಭೂಮಿ ಬೇಡಿದೆ, ಭಾಮೆ ವಟುರೂಪನಾದರೆ ಕುಟಿಲಾಕ್ಷಿಯರಲಿಂಥ ಚಾಟುವಚನಗಳು ಯಾಕೆಲೊ 5 ದುರುಳನೃಪರ ಪರಿಹರಿಸಿದ ಭೃಗುಮುನಿ ವರಕುಲಜಾತ ಶ್ರೀ ರಾಮನೇ ಭಾಮೆ ಮುನಿವರಸುತನಾಗಿ ಸ್ವನಿಯಮಗಳ ಬಿಟ್ಟು ವನಿತೆಯರಲ್ಲಿಂಥಾ ಸರಸವೆ ನಿನಗೆ 6 ದಶರಥ ನೃಪತಿಯ ಮನೆಯೊಳವತರಿಸಿ ದಶಶಿರರನು ಕೊಂದ ರಾಮನೆ ಭಾಮೆ ಪರ ಕಾಮಿನಿಯರೊಳಿಂಥಾ ಪ್ರೇಮ ಮಾಡುವುದುಂಟೆ ಯೋಚಿಸೊ ನೀನು 7 ನೀರಜಾಕ್ಷಿ ಕೇಳೆ ಜಾರಚೋರತೆಯಲ್ಲಿ ಸಿರಿ ಕೃಷ್ಣನೇ ಭಾಮೆ ಚೋರನಾದ ಮೇಲೆ ಸೇರಿಸುವುದು ಹೇಗೆ ಭಾರಿ ಆಭರಣಗಳಿರುವುವೊ 8 ಮುಗ್ಧೆ ಕೇಳೆ ಇದಬದ್ಧವಲ್ಲದೆ ಅತಿ ಶುದ್ಧನಾದ ಬುದ್ಧರೂಪನೆ ಬುದ್ಧರೂಪನೆ ನಿನ್ನ ನಡತೆಯ ಕೇಳಲು ಶುದ್ಧಿಯು ಲೋಕಪ್ರಸಿದ್ಧವು9 ಸರಸಿಜಮುಖಿ ವರತುರಗವನೇರಿದ ನೃಪರ ಗೆಲ್ವ ಕಲ್ಕಿಯೇ ಭಾಮೆ ದುರುಳ ಜನರು ಇಲ್ಲಿ ಸೇರುವುದಿಲ್ಲವೊ ತರಳೆಯರಲಿ ದುಷ್ಟ ಕಾರ್ಯವೇ ಪೋಗೊ10 ಪರಿ ಸರಸವನಾಡುವ ನಾಮಗಿರಿ ನರಹರಿ ರೂಪ ರಮಾ ರಮೇಶರು ವಿಹರಿಪ ಬಗೆಯನು ಸ್ಮರಿಸುವ ಸುಜನರ ಪರಮಪುರುಷ ಹರಿ ಪೊರೆವುದು ನಿಜ 11
--------------
ವಿದ್ಯಾರತ್ನಾಕರತೀರ್ಥರು
ಶುಕಮುನಿ ಕರ್ಣಾಧಾರನ ಕೂಡಿ ಅನುಗತ ಭವಸಿಂಧು ಭಯವ ದೂಡಿ ಪ. ಅಂತಪಾರವೆಂದಿಗಿಲ್ಲವು ನಾನಾ ಭ್ರಾಂತಿ ಸುಳಿಗಳು ತುಂಬಿರುವವು ಚಿಂತಾಪರಾಕ್ರಾಂತಿಯಳವು ಪೋಕ ತಿಮಿರ ಬಾಧೆ ಬಹಳವು ಅಂತರಂಗದಿ ಲಕ್ಷ್ಮೀಕಾಂತನೆಂಬ ನಾವೆ ಯಂತಾದರು ತಂದು ಪಂತರಗೊಳಿಸುವ 1 ಸ್ವರ್ಗಾದಿ ಸುಖವೆಂದು ದ್ವೀಪವು ನಾನಾ ಕರ್ಮ ಕಲಾಪವು ನಿರ್ಗಮಗೊಳುವ ಸಂತಾಪವು ವೈರಿ ಜನಿತ ಮತಿಲೋಪವು ಇಂತು ದೀರ್ಘವಾದ ದುಃಖ ವರ್ಗ ತಪ್ಪಿಸಿ ಶ್ರೀ ಭೂ ದುರ್ಗಾವರ ಸಂಸರ್ಗವಿತ್ತು ಕಾವ 2 ತಾನೆ ಕರ್ತುವೆಂದು ಪೇಳದೆ ಮೋಹ ಧಾನೀ ಕೂಪದ ಮಧ್ಯ ಬೀಳದೆ ಹೀನ ಕರ್ಮಗಳನ್ನು ಬೆಳಸದೆ ಸವ ಮಾನ ಜನ ವಿರೋಧ ಮಾಡದೆ ದೀನಬಂಧು ಸರ್ವದಾನವಾರಿ ಲಕ್ಷ್ಮಿ ಪ್ರಾಣನಾಯಕ ವೆಂಕಟೇಶನ ನೆನೆಯಿಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಕರಗ್ರಹ ಎನ್ನ ಸಾಕಲಾರದÉ ಹೀಗೆ ನೂಕಿ ಬಿಡುವುದು ನ್ಯಾಯವೆ ಪ. ಬೇಕೆಂದು ನಿನ್ನ ಪದ ನಾ ಕಾಣ ಬಂದರೆ ಈ ಕಪಟತನವು ಸರಿಯೆ ಹರಿಯೆ ಅ.ಪ. ಎಲ್ಲರನು ಸಲಹಿದಂತೆನ್ನ ನೀ ಸಲಹೆನ ನಿಲ್ಲದೆ ನೀರ ಪೊಗುವೆ ಸೊಲ್ಲು ಸೊಲ್ಲಿಗೆ ನಿನ್ನ ಸ್ತುತಿಪೆನೊ ಬಾರೆನಲು ಕಲ್ಲಡೀ ಅವಿತುಕೊಳುವೆ ಖುಲ್ಲನಲ್ಲವೊ ನಾನು ತಲ್ಲಣಿಪೆ ಪೊರೆ ಎನಲು ಹಲ್ಲು ಕೋರೆಯ ತೋರುವೆ ಎಲ್ಲಿ ಹೋಗಲೊ ನಾನು ಇಲ್ಲವೊ ಇನ್ನೊಬ್ಬ ಸೊಲ್ಲು ಕೇಳುವರನರಿಯೆ | ದೊರೆಯೆ 1 ತಡಬಡಿಸುತಿಹೆನೆನ್ನ ಪಿಡಿದು ಕೈ ಸಲಹೆನಲು ಘುಡು ಘುಡಿಸಿಕೊಂಡು ಬರುವೆ ಬಡವನೋ ನಾನು ನಿನ್ನಡಿಯನೇ ನೀಡೆನಲು ಹುಡುಗತನದಲಿ ಬೇಡುವೆ ತಡೆಯಲಾರೆನೊ ಭವದ ದಡವ ಸೇರಿಸು ಎನಲು ಕೊಡಲಿಯ ಪಿಡಿದು ಬರುವೆ ಕಡು ಬವಣೆ ಬಿಡಿಸೆಂದು ಅಡಿಗಡಿಗೆ ಎರಗಲು ಅಡವಿ ಅಡವಿಯ ತಿರುಗುವೆ | ಥರವೇ 2 ಹತ್ತು ನಾಲ್ಕು ಲೋಕಕೆ ತೆತ್ತಿಗನೊ ನೀನೆನಲು ಮುತ್ತ್ಯದೊರೆ ಎಂದೆನ್ನುವೆ ಸುತ್ತಿರುವ ಆವರಣ ಮತ್ತೆ ನೀ ಛೇದಿಸೆನೆ ಬತ್ತಲೆ ನೀ ನಿಲ್ಲುವೆ ಭೃತ್ಯ ನಾ ನಿನಗೆನಲು ಹತ್ತಿ ಕುದುರೆಯ ಓಡುವೆ ನಿತ್ಯ ಮೂರುತಿ ನಿನ್ನ ಕೃತ್ಯವೇ ಹೀಗಿರಲು ಮತ್ತಿನ್ನ ಹ್ಯಾಗೆ ಪೊರೆವೆ | ಕರೆವೆ 3 ದÉೂರೆಯು ನೀ ಜಗಕೆಂದು ಸುರರೆಲ್ಲ ನುಡಿಯುವರೊ ಅರಿಯೆ ನಾನದರ ಮಹಿಮೆ ಸಿರಿಗೊಡೆಯನಾದರೆ ಪೊರೆಯದೆಲೆ ಎನ್ನನು ಕರೆಕರೆಗೊಳಿಸುವರೆ ತಿರಿಯ ಬರಲಿಲ್ಲ ನಾ ಸಿರಿಯ ನೀಡೆಂದೆನುತ ಉರುತರದ ಭಯವೇತಕೆ ಚರಣ ಧ್ಯಾನವನಿತ್ತು ಪರಮ ಭಕ್ತರೊಳಿಡಿಸಿ ದೊರೆಯೆ ನೀ ಸಲಹ ಬೇಕೋ | ಸಾಕೋ4 ಆಪಾರ ಮಹಿಮನೆ ಆರ್ತಜನ ರಕ್ಷಕ ಪಾಪಿ ನಾನಿಹೆನೋ ಈಗ ನೀ ಪಿಡಿದು ಪೊರೆಯದಿರೆ ಕಾಪಾಡುವವರ್ಯಾರೊ ಶ್ರೀ ಪತಿಯೆ ನೀನೆ ತೋರೊ ತಾಪಪಡಲಾರೆ ಭವಕೂಪದೊಳು ಬಿದ್ದಿಹೆನು ನೀ ಕೃಪಾದಿಂದೀಕ್ಷಿಸೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಕಾಪಾಡುವವರನರಿಯೆ ದೊರೆಯೆ 5
--------------
ಅಂಬಾಬಾಯಿ
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು