ಒಟ್ಟು 60 ಕಡೆಗಳಲ್ಲಿ , 26 ದಾಸರು , 57 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುವ್ವಿಮಟ್ಟು ಶರಣು ರಾಘವೇಂದ್ರ ಗುರುವೆ ಶರಣು ವ್ಯಾಸರಾಜ ಪ್ರಭವೆ ಶರಣು ನಾರಸಿಂಹ ಭಕ್ತ ಶರಣು ಶರಣು ಶಂಕು ಕರ್ಣನೆ ಪ ನಿರುತ ನಿಮ್ಮ ಚರಣ ಕಮಲ ಗೆರಗಿ ಎರಗಿ ಬೇಡಿ ಕೊಂಬೆ ದುರಿತ ರಾಶಿ ಭರದಿ ಹರಿಯ ಕರುಣ ಕೊಡಿಸು ಕರುಣಿಯೆ ಅ.ಪ ವಿಧಿಯ ಶಾಪ ಧರಿಸಿ ಮುದದಿ ಉದಿಸಿ ಬಂದು ದೈತ್ಯ ಕುಲದಿ ಹೃದಯ ಗತನೆ ವಿಶ್ವವ್ಯಾಪ್ತ ಪದುಮನಾಭನೆಂದು ತೋರ್ದೆಹೋ ಬುಧರ ಮಕುಟ ಭಕ್ತಿ ಶರಧಿ ಮದನ ತೇಜ ಬೋಧ ಮಧ್ವ ಚೇಲ ತ್ರಿದಶ ಮಾನ್ಯ ಪ್ರಹ್ಲಾದ ಬಾಹ್ಲೀಕ 1 ತುಳಿದು ಶೃತಿ ವಿರೋಧ ಬೋಧೆ ಸುಜನ ತತಿಯ ಸುಮತಿ ಚಲುವ ಕುವರ ನೆನಿಸಿ ಬಂದೆ ಹೋ ಬಲಿಸಿ ಕೃಷ್ಣನನ್ನು ಕುಣಿಸಿ ಬಲಿಸಿ ವಾಯು ಮತವ ಮೆರಸಿ ಒಲಿದು ನೃಪಗೆ ರಾಜ್ಯವಾಳಿ ಹಳಿದೆ ವಿಧುವ ಕೀರ್ತಿ ವಿಭವದಿ 2 ಮತ್ತೆ ಬಂದೆ ರಾಘವೇಂದ್ರ ಹತ್ತು ಆರು ಮತ್ತೆ ನಾಲ್ಕು ಮೊತ್ತ ಕಲೆಗಳೆಲ್ಲ ಬಲ್ಲ ಸತ್ಯ ಪ್ರಾಣ ಶಾಸ್ತ್ರ ಮೆಲ್ಲನೆ ಎತ್ತ ಸಾಟಿ ಕಲ್ಪವೃಕ್ಷ ನಿತ್ಯ ವಿವಿಧ ಮಹಿಮೆ ತೋರ್ಪೆ ಇತ್ತು ಪೊರೆವೆ ಜನರ ಬಿಢೆಯ ವಿತ್ತ ನೀಡು ಭೃತ್ಯಗೆ 3 ನಾರಸಿಂಹ ವೇದ ವ್ಯಾಸ ಮೂರುತೀಶ ರಾಮಚಂದ್ರ ಸೂರಿಗಮ್ಯ ಕೃಷ್ಣ ದೇವ ಸುರರು ಎಲ್ಲರು ಸೇರಿ ನಿಮ್ಮ ನಡಿಸಿ ಕಾರ್ಯ ಸೂರೆ ಗೈಸುತಿರಲು ಕೀರ್ತಿ ಪಾರವಿಲ್ಲ ಮಹಿಮೆಗೆಂಬೆ ಈರ ಪಿತನ ಕರುಣ ಭೂಷಿತ 4 ರಾಘವೇಂದ್ರ ನಿಮ್ಮ ನಾಮ ಯೋಗ್ಯ ಜಪಿಸೆ ಭಕ್ತಿಯಿಂದ ಶ್ರೀಘ್ರನಾಶ ಅಘಸಮೂಹ ಹಾಗೆ ಸಿದ್ಧಿ ವಾಂಛಿತಂಗಳು ಯೋಗ ಸಿದ್ಧಿ ಭೋಗ ಸಿಧ್ಧಿ ಯೋಗ ಪತಿಯ ಭಕ್ತಿ ಸಿಧ್ಧಿ ಬೇಗ ಪಡೆದು ಕ್ರಮದಿ ಭವದ ಬೇಗ ನೀಗಿ ಮುಕ್ತಿ ಕಾಂಬುವ 5 ದಾನ ಗೈದನಿಷ್ಟ ಪುಣ್ಯ ಸುಜನ ಶಿಷ್ಯ ತತಿಗೆ ಶ್ರೀನಿವಾಸನನ್ನು ಯಜಿಪ ದಾನ ಶೌಂಡ ನಿಮಗೆ ಸಾಟಿಯ ಕಾಣೆ ಕಾಣೆ ಸತ್ಯ ಸತ್ಯ ನಾನು ಮೂಢ ಪಾಪಿ ಕೃಪಣ ಏನು ಸೇವೆ ಮಾಡಲಾಪೆ ಕಾಯ ಬೇಕೆಂಬೆ 6 ನಿನ್ನ ನೆನೆದ ಮಾತ್ರಕಿನ್ನು ಅನ್ನ ವಸನ ಎಲ್ಲ ಸಿಧ್ಧ ಹೊನ್ನು ಹೆಣ್ಣು ಮಣ್ಣು ಮಿಷಯ ನಿನ್ನ ಕೇಳ್ವ ಜ್ಞಾನಿ ಆಹನೆ ಮನ್ನಿಸೆನ್ನ ದೋಷರಾಶಿ ನಿನ್ನ ಶಿಷ್ಯನೆಂದು ಗ್ರಹಿಸು ಮನ್ನ ಮಾಡು ಭವವ ಬೇಗ ಕಣ್ಣು ನೀಡು ಜ್ಞಾನ ದೆಂಬುವೆ 7 ಜಯ ಸುಧೀಂದ್ರ ಪ್ರೇಮ ಪುತ್ರ ಜಯ ವಿಜೀಂದ್ರವರ ಸುಪೌತ್ರ ಜಯ ಜಯೇಂದ್ರ ಕರುಣ ಪಾತ್ರ ಜಯ ಕವೀಂದ್ರ ಮಧ್ವ ಛಾತ್ರನೆ ಜಯ ಭವಾಭ್ದಿ ಪೋತ ಚರಣ ಜಯ ದಯಾಭ್ದೆ ಸುಗುಣ ಕೋಶ ಜಯ ಯತೀಂದ್ರ ಕಾಮಧೇನು ಜಯವು ಜಯವು ಜ್ಞಾನ ಭಾಸ್ಕರ 8 ಸತ್ಯಸಂಧ ಸತ್ಯ ಸ್ತಂಭ ಭೃತ್ಯ ಸತ್ಯ ವೇತ್ತ ಸತ್ಯನಾಥ ನೊಲಿ ಮೆಯಿಂದ ನಿತ್ಯ ಕಾಂಬನೆ ಸತ್ಯ ಮಾತೆ ಸಿರಿಯ ನಾಳ್ವ ಮುಕ್ತಿದಾತ ಕೃಷ್ಣವಿಠಲ ಚಿತ್ತದಲ್ಲಿ ಸುಳಿಯಲೆಂಬಭೃತ್ಯ ಬಯಕೆ ಸತ್ಯ ಮಾಡ್ಪ್ರಭೋ 9
--------------
ಕೃಷ್ಣವಿಠಲದಾಸರು
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಹನುಮ-ಭೀಮ-ಮಧ್ವ ಸ್ತೋತ್ರ ಅಪಮೃತ್ಯು ಪರಿಹರಿಸೊ ಅನಿಲದೇವಾ ಕೃಪಣ ವತ್ಸಲನೆ ಕಾಯ್ವರ ಕಾಣೆ ನಿನ್ನುಳಿದು ಪ ನಿನಗಿನ್ನು ಸಮರಾದ ಅನಿಮಿತ್ತ ಬಂಧುಗಳು ಎನಗಿಲ್ಲವಾವಾವ ಜನ್ಮದಲ್ಲಿ ಅನುದಿನ ನೀನೆಮ್ಮನುದಾಸೀನ ಮಾಡುವುದು ಅನುಚಿತವು ಜಗಕೆ ಸಜ್ಜನ ಶಿಖಾಮಣಿಯೆ 1 ಕರಣಮಾನಿಗಳು ನಿನ್ನ ಕಿಂಕರರು ಮೂಲೋಕ ದೊರೆಯು ನಿನ್ನೊಳಗಿಪ್ಪ ಸರ್ವಕಾಲ ಪರಿಸರನೆ ಈ ಭಾಗ್ಯ ದೊರೆತನಕೆ ಸರಿಯುಂಟೆ ಗುರುವರಿಯ ನೀ ದಯಾಕರನೆಂದು ಮೊರೆ ಹೊಕ್ಕೆ 2 ಭವರೋಗ ಮೋಚಕನೆ ಪವಮಾನರಾಯಾ ನಿ ನ್ನವರನು ನಾನು ಮಾಧವಪ್ರಿಯನೇ ಜವನ ಬಾಧೆಯ ಬಿಡಿಸು ಅವನಿಯೊಳು ಸುಜನರಿಗೆ ದಿವಿಜಗಣ ಮಧ್ಯದಲಿ ಪ್ರವರ ನೀನಹುದಯ್ಯ 3 ಜ್ಞಾನಾಯು ರೂಪಕನು ನೀನಹುದೋ ವಾಣಿ ಪಂ ಚಾನನಾದ್ಯಮರರಿಗೆ ಪ್ರಾಣದೇವಾ ದೀನವತ್ಸಲನೆಂದು ನಿನ್ನ ಮೊರೆ ಹೊಕ್ಕೆ ದಾನವಾರಣ್ಯ ಕೃಶಾನು ಸರ್ವದ ಎಮ್ಮ 4 ಸಾಧನ ಶರೀರವಿದು ನೀ ದಯದಿ ಕೊಟ್ಟದ್ದು ಸಾಧಾರಣವು ಅಲ್ಲ ಸಾಧುಪ್ರಿಯಾ ವೇದವದೋದಿತ ಜಗನ್ನಾಥ ವಿಠಲನ ಮೋದ ಕೊಡು ಸತತ5
--------------
ಜಗನ್ನಾಥದಾಸರು
(ಆ) ಇತರ ಹಾಡುಗಳು446ಕೃಪಣದಿ ಧನ್ಯರು ಎಂದಿಗೆ ಸುಖಿಕೃಪಣರವರುಪಕಾರಿಗಳೊ ನಿನ್ನ ವಾರಣರು ಕೃಷ್ಣಯ್ಯ ಪ.ಸಂಚಿತದ ಹೊನ್ನು ಬಂಡವಲ ಹೋಗಾಡಿಕಂಚು ಕಾಂಚನವಾಗೆ ನಿನ್ನವರುಕಿಂಚಿತ್ತು ವ್ರಯವಿಲ್ಲ ನಿಕ್ಷೇಪಾಕ್ಷಯಸಂಚಕಾರವ ಕೊಟ್ಟರೆಲ್ಲ ಮಂದಿರಕೆ 1ಅಂಗನೆತನೂಭವರಂಗದೆ ಮುಂಗೂಡೆಹಿಂಗಿ ನಿರ್ವಾಣದಿ ನಿನ್ನವರುಜಂಗುಳಿ ಧನಧಾನ್ಯ ಮಣಿಯಂತೆ ಬಚ್ಚಿಟ್ಟುಸಂಗಾತಿಯವರು ಸಂಸಾರ ಕಟ್ಟಿದರು 2ಮನ್ನಣೆನೀಗಿ ಪಾತ್ರೆ ಹುಟ್ಟು ಮಾರುತಸಣ್ಣರ ಕುಲ ಬಿಟ್ಟರು ನಿನ್ನವರುಬಣ್ಣ ಬಣ್ಣಗೆ ಉಟ್ಟು ಬಳಗ ಸಹಿತಭವವುಣ್ಣುತ ನಿನ್ನ ಮಗನ ಉದ್ಯಮದವರು 3ಹಿಂದೆ ಮುಂದಿಲ್ಲದೆ ಭಿನ್ನ ಭಿನ್ನಾತ್ಮರುನಿಂದ್ಯಾಸ್ತ್ತ್ರಕಳುಕುವ ನಿನ್ನವರುಬಂಧು ಬಲ್ಲಿದರು ಭಾಗ್ಯಾನ್ವಿತ ಚಪಲರುಎಂದೆಂದಂಜರು ಮದಮತ್ತ ಮಾನಿಸರು 4ಚೆನ್ನಿಗರಲ್ಲ ಚೆಲುವರಲ್ಲ ಜಗವ ಪಾವನ್ನ ಮಾಡುವರು ನಿನ್ನವರು ಪ್ರಸನ್ನ ವೆಂಕಟಪತಿ ನಿನ್ನ ಮದ್ದಾನೆಗಳುಕುನ್ನಿಗೂಗೆಗೆ ಕಡೆಗಾಹವೆ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಗಂಗಾಪಿತ ರಾಘವ ನಂಬಿದೆ ಶ್ಯಾಮ-ಲಾಂಗ ನಿನ್ನಯ ಪಾದವ ||ಮಂಗಳೆ ರಮಣ ಭುಜಂಗಧರಾರ್ಚಿತಾ |ನಂಗಜ ಜನಕ ಪಾಲಿಸಿಂಗಡಲೊಡೆಯನೆ ಪಶಫರ, ಕಮಠ,ಕೋಲನೃಹರಿ ಬಾಲ |ನೃಪಕುಲ ಪವನ ವ್ಯಾಲ ||ವಿಪಿನಸಂಚರಾ ಕೃಷ್ಣ ವಿಪುಳಾಬುದ್ಧಕಲ್ಕಿ |ವಪುಧರ ಅನಿರುದ್ಧಕೃಪಣವತ್ಸಲ ಸ್ವರ್ಪಾ- ||ದಪನೆಹರಿಕಾಶ್ಯಪಿಯೊಳಗೆ ಸುರ ರಿಪುಹ | ಶಿವನ ಕ |ರಿಪನ ನರಪತಿ ದ್ರುಪದ ನಂದನೆಯ ಪೊರೆದೀಶ್ವರ |ಕಪಟನಾಟಕ ಕಪಿಲ ರೂಪಿ 1ಕುರು ಕುಲೋತ್ತಮನಾಗಾರದೊಳಗೆಕ್ಷೀರ|ಸುರಿದೆ ಗೋಕುಲ ವಿಹಾರ ||ವರವಿಪ್ರಜರ ತಂದೆ ಹರಚಾಪಹನನಈ |ಶರೀರವೇ ನಿನ್ನದು ಸರಿಬಂದದನು ಮಾಡೋ ||ಕರೆಕರೆಯ ಭವಶರಧಿಯೊಳು ಬಾ- |ಯ್ದೆರೆವೆ ರಕ್ಷಿಸುವರನು ಕಾಣೆನೊಬ್ಬರ ನಿನ್ನುಳಿ- ||ದುರಗ ಶಯನನೇ ಧರಿಜವಲ್ಲಭಕರುಣಿ ಕೇಶವ2ಜನನ ಮರಣ ದೂರ ಇಂದ್ರಾನುಜ |ಮುನಿ ಗೇಯಾ ಚಲಧರ ||ವನರುಹಭವಸಂಕ್ರಂದನವಂದ್ಯ ವೀತ ಆ |ವನಿ ಮುಖ ತನ್ಮಾತ್ರಾಗುಣ ಪ್ರಾಣೇಶ ವಿಠಲ ||ಪ್ರನಮಿತಾಘ ಕಕ್ಷಾನಲ ಕಂದರ್ಪನ ಪಿತನೆ |ನಿನ್ನನುಗರೊಳಗಿಡೋ ಮಣಿಯೇ ಅನ್ಯರಿ ||ಗನಘ ಪಾಲಿಪುದನವರತ ಯನ್ನನು ಬಿಡದಲೆ 3
--------------
ಪ್ರಾಣೇಶದಾಸರು
ನಿನಗೆ ತಿಳಿದಂತೆ ಮಾಡುವದಯ್ಯ ಬೇಡೆನಲು |ಯನಗೆ ಸ್ವಾತಂತ್ರ್ಯವುಂಟೇ ||ಮನಸಿಜಪಿತ ನಿನ್ನ ಮೀರಿ, ಸಿರಿ, ವಿಧಿ,ಶರ್ವ|ತೃಣ ಮುರಿಯೆ ಶಕ್ತರಲ್ಲಾ ಹರಿಯೇ ಪಅಪಮಾನ ಮಾಡಿಸೊ ಕೋಪವನೆ ಹೆಚ್ಚಿಸೊಕೃಪಣತನದಲ್ಲಿರಿಸೊ |ಅಪಹಾಸಗೈದಿಸೋ ಡಾಂಭಿಕದವನೆನಿಸೋಉಪವಾಸದಲ್ಲೇ ಇರಿಸೊ |ಕೃಪೆಯುಳ್ಳ ನರನೆನಿಸೋ ಮಾನವೆಗ್ಗಳ ಕೊಡಿಸೊಚಪಲ ಬುದ್ಧಿಯನೆ ಕಲಿಸೊ |ಅಪರಾಧವನೆ ಹೊರಿಸೊ ಬಲು ಭಯವ ತೋರಿಸೋತ್ರಿಪುರಾಂತಕರ್ಚಿತ ಪದ ಹರಿಯೇ 1ಬೈಸು ಬೈದಾಡಿಸೊ ಬಾಂಧವರನಗಲಿಸೊಹೇಸಿಕೆಯು ಲಜ್ಜೆ ತೋರಿಸೊ |ಗ್ರಾಸವನೇ ಉಣಿಸೋ ನರರಾಲಯವ ಕಾಯಿಸೋಕ್ಲೇಶನಿತ್ಯದಲಿ ಬಡಿಸೊ |ಆಶೆಯನು ಜರಿಸು ಕೈಕಾಲುಗಳ ಕುಂಠಿಸೊದೋಷಕ್ಕೆ ಮನವಂಜಿಸೋ |ವಾಸುದೇವನೆ ನಿನ್ನ ವ್ರತವ ಮಾಡಿಸುವಂದುದೇಶ ಬಹುಕಡೆಗೆ ತಿರುಗಿಸೊ ಹರಿಯೇ2ಕವನಗಳ ಪೇಳಿಸೊಕರ್ಮಬಾಹಿರನೆನಿಸೊಭುವನದೊಳು ಭಂಡನೆನಿಸೊ |ಕವಿಸು ಅಜ್ಞಾನವನು ಸನ್ಮತಿಯ ಪ್ರೇರಿಸೊಕಿವಿ ಮಾತ್ರ ದೃಢದಲಿರಿಸೋ |ಜವನ ಸದನದ ಪೊಗಿಸೋ ಬಂಧಾನದೊಳಗಿರಿಸೊತವ ದಾಸರೊಳು ಕೂಡಿಸೊ |ದಿವಿಜರೊಲ್ಲಭ ನ್ಯಾಯವನ್ಯಾಯವನೆಮಾಡುಭವಪಂಕದೊಳು ಮುಳುಗಿಸೋ ಹರಿಯೇ 3ಹೆತ್ತವರ ಸೇವೆ ಮಾಡಿಸೊ ನೀಚರ ಬಳಿಯತೊತ್ತು ಕೆಲಸವ ಮಾಡಿಸೋ |ಚಿತ್ತ ಚಂಚಲಗೊಳಿಸೊ ವೈರಾಗ್ಯ ಪುಟ್ಟಿಸೊಉತ್ತಮರ ನೆರೆಯಲಿರಿಸೊ |ಮುತ್ತಿನಾಭರಣಿಡಿಸೊ ತಿರುಕೆಯನೆ ಬೇಡಿಸೊವಿತ್ತಸಂಗ್ರಹ ಮಾಡಿಸೊ |ಮುತ್ತೆಗೊಲಿದಿಹನೆ ವಿಷ ಕುಡಿಸೊ ಅಮೃತವುಣಿಸೊಮತ್ತೊಬ್ಬರಾರು ಗತಿಯೋ ಹರಿಯೇ 4ಸಾಲಗೊಯ್ಯನಮಾಡುಕಂಡ ಕುಲದಲಿ ತಿನಿಸುಕೀಳು ಮನುಜರ ಪೊಂದಿಸೋ |ನಾಲಿಗೆಗೆಡಕನೆನಿಸೊ ಸತ್ಯ ವಚನಿಯು ಎನಿಸೊಸ್ಥೂಲ ಪುಣ್ಯವ ಮಾಡಿಸೋ |ಕೇಳಿಸೋ ಸಚ್ಛಾಸ್ತ್ರ, ನೀತಿಯರಿಯನು ಎನಿಸೋಆಲಯದಿ ಸುಖದಲಿರಿಸೋ |ಮೂಲೋಶ ಪತಿಯೆಹರಿಕುದುರೆಯೇರಿಸೊ ಮತ್ತೆಕಾಲು ನಡಿಗೆಯಲೆ ನಡೆಸೊ ಹರಿಯೇ 5ಅರಸು ಪದವಿಯ ಕೊಡಿಸೊಕಾಷ್ಠಭಾರವ ಹೊರಿಸೊಪರದೂಷಣೆಯ ಮಾಡಿಸೊ |ಮರ್ಯಾದೆಗಳು ತಿಳಿಸು ಅತಿಮೂಢನೆಂದೆನಿಸೊನಿರುತ ರೋಗದಲಿ ಇರಿಸೋ |ಕರೆಕರೆಯ ಹಿಂಗಿಸೊ ದಿವ್ಯ ವಸನವನುಡಿಸೊಸುರಗಂಗಿ ತಡಿಯೊಳಿರಿಸೊ |ಪರಮಾತ್ಮನೆ ವಂಧ್ಯನೆನಿಸೊ ಸುತರನ್ನೆ ಕೂಡೊಮರಿಸೋ ದುರ್ವಿಷಯಗಳನೂ ಹರಿಯೆ6ಮಾಕಾಂತ ಪ್ರಾಣೇಶ ವಿಠಲ ನೀನಿತ್ತುದಕೆಶೋಕಿಸಲು ಸಲ್ಲದಯ್ಯ |ಆ ಕುಂಭೀಪಾಕ ಮೊದಲಾದ ನರಕದೊಳೆನ್ನಹಾಕಿದರೂ ಒಳಿತೆ ಜೀಯಾ |ಈ ಕಲಿಯುಗದಿಪಂಚಭೇದತಿಳಿಯದ ದೈತ್ಯರಾಕುಲದೊಳಿರಿಸಬೇಡ |ಶ್ರೀ ಕಾಳೀಕಾಂತನರ್ಚನೆ ಸರ್ವ ಕಾಲದಲಿಬೇಕುಬಿನ್ನಪಲಾಲಿಸೋ ಹರಿಯೇ 7
--------------
ಪ್ರಾಣೇಶದಾಸರು
ಪಾಲಿಸು ಪರಮಪಾವನ ಪದ್ಮಾವತೀರಮಣಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ.ನೀಲನಿಭಾಂಗನಿಖಿಲಸುರ ಮುನಿಜನಜಾಲಪಾಲಪಾಹಿಪಾರ್ಥಸಾರಥಿ ಅ.ಪ.ಮದನಜನಕ ಮಹಿಮಾಂಬುಧಿ ನಿನ್ನಪದಕಮಲವ ನಾ ಸ್ಮರಿಸದೆ ಎನ್ನಮದಮುಖತನವನು ಒದರುವದೆನ್ನಪದುಮನಾಭ ರಕ್ಷಿಸು ನೀ ಮುನ್ನಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧಉದುಭವಿಸುವುದು ನಿಜವೇ ಭಕ್ತವಾತ್ಸಲ್ಯಇದಕೆ ನೀ ಊನ ತರುವೆ ಸಾಕು ಈ ಮರವೆಒದಗಿಸು ಸರ್ವಮನಸಿನೊಳ್ ಪುದು-ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ-ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತಮಧುಸೂದನ ಮಂದರಗಿರಿಧರ ನೀ-ರದ ನಿಭ ನಿರ್ಮಲ ನಿಜರೂಪಗುಣಸದನಾಚ್ಯುತ ರವಿಕುಲದೀಪ ನಿರ-ವಧಿ ಆನಂದ ರಸಾಲಾಪಬುಧಜನೋಪಲಾಲಿತ ಲೀಲಾಯತಉದಧಿಶಾಯಿ ಮಾನದ ಮಧುಸೂದನ 1ನಾಮಸ್ಮರಣೆಯೆ ನರಕೋದ್ಧಾರನೇಮವಿಲ್ಲೆಂಬುದು ನಿನ್ನ ವಿಚಾರಸಾಮಾರ್ಥದ ಗುಣಕೆಲ್ಲನುಸಾರಪಾಮರಮನಕಿದು ಈ ಗುಣಭಾರಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊಸಾಮಗಾನಲೋಲಸುಜನಸ್ತೋಮಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬತಾಮಸಪರಿಹರಿಸಿ ಜ್ಞಾನೋದಯದ ಸದಾನಂದಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆನೀ ಮಾಡುವುದೆಲ್ಲವು ಸಹಜಗುಣಧಾಮಾಶ್ರಿತ ನಿರ್ಜರಭೂಜಸುಜನಸ್ತೋಮಾರ್ಕಾಮಿತ ವಿಭ್ರಾಜಶ್ರೀಮಚ್ಛೇಷಾಚಲ ಮಂದಿರ ಸು-ತ್ರಾಮಾರ್ಚಿತ ಸದ್ರಾಮ ಶ್ರೀರಾಮ 2ಉಡುವ ಸೀರೆಯ ಸೆಳೆಯಲು ದ್ರುಪಜೆಯಕೊಡಲಿಲ್ಲವೆ ಬಹುವಸನ ಸಂತತಿಯಹಿಡಿಯವಲಕ್ಕಿಗೆ ದ್ವಾರಕ ಪತಿಯಕಡು ಸರಾಗವಾಯ್ತಿಂದಿನ ಪರಿಯಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟಕೊಡು ದಯವಿಟ್ಟು ಮುದದಿ ಕರುಣಾವುದಧಿಕಡುಲೋಭಿತನ ಬಿಡು ಮಹರಾಯಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತಕರ್ಮವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯಒಡೆಯ ಶ್ರೀ ಲಕ್ಷ್ಮೀನಾರಾಯಣನಡುನೀರೊಳು ಕೈಬಿಡುವೆಯ ನೀತೊಡಕೊಂಡ ಬಿರುದೇನಯ್ಯ ಈಕಡು ಕೃಪಣತನ ಸಾಕಯ್ಯಪೊಡವಿಯೊಳಗೆ ಪಡುತಿರುಪತಿಯೆಂಬದೃಢಕಾರ್ಕಳದೊಡೆಯ ಶ್ರೀನಿವಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ಸ್ಥಿರವಲ್ಲೀಕಾಯಸ್ಥಿರವಲ್ಲ ಹೀಗರಿವಿದ್ದು ಹರಿಪಾದ ಮರೆವರೆ ಪ್ರಾಣಿ ಪ.ಅಟ್ಟಡಿಗೆಎರವುಉಟ್ಟುಡುಗೆಎರವುಇಟ್ಟರೆ ಸಂತತಿಸಿರಿಎರವುಕಟ್ಟೊಡೆದು ಬೆಮರಿಡಿಸಿ ಜವನವರೊಯ್ಯೆಇಟ್ಟಿರುವ ಧಾನ್ಯ ಧನವೆಲ್ಲೊ ಪ್ರಾಣಿ 1ಕೃಪಣತೆಯೊಳಗಿನ ನಿಪುಣತೆ ಬಾರದುಸ್ವಪನ ಸುಖ ಭೋಗಕೆ ಬಾರದುವಿಪಿನದಹನ ಮೃಗದಂತಾಪ್ತರು ಬರರುನೃಪನಾರಾಧನೆ ಫಲವು ಸ್ಥಿರವೆಲೊ ಪ್ರಾಣಿ 2ಹರಿಕೊಟ್ಟಾಗಲೆ ಧರ್ಮ ದೊರಕಿಸಬೇಕುಸರಕಿದ್ದು ತಿರುಕಬುದ್ಧಿಯನು ಬಿಡುಅರಿವುಳ್ಳವರ ಕೂಡಿ ಕೋಟೆಜತನಮಾಡುಮರುಗಲಿ ಬೇಡ ಮುತ್ತಿಗೆ ಬಂತು ಪ್ರಾಣಿ 3ಹವಳ ಮುತ್ತಿನಂಥ ಅವಳಿ ಮಕ್ಕಳ ನಂಬಿಕುವಲಯೇಶನ ಪ್ರಿಯಕುಲೇಶನ ಪುರದಲವಲವಿಕೆಯಲಿ ನಿರಯವಾರ್ತೆ ಜರೆವರೆ ತನ್ನವಳೆ ತನಗೆ ಓಕರಿಸುವಳೊ ಪ್ರಾಣಿ 4ಫಣಿತಲ್ಪಗೊಪ್ಪಿಸಿ ಹಣ ತೃಣ ಮಾಡದಹೆಣ ತನ್ನ ತಾನೆ ಹೊಗಳಿಕೊಂಡರೆಎನಿತುಕಾಲಕೆ ಮೆಚ್ಚ ಪ್ರಸನ್ವೆಂಕಟಪತಿಘನತಪ್ಪ ಕಾಯೆ ತನ್ನವರನು ಪ್ರಾಣಿ5
--------------
ಪ್ರಸನ್ನವೆಂಕಟದಾಸರು