ಒಟ್ಟು 2010 ಕಡೆಗಳಲ್ಲಿ , 113 ದಾಸರು , 1571 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(39ನೇ ವರ್ಷದ ವರ್ಧಂತಿ) ಭೂವರ ಭಾಗ್ಯದೇವಿಯ ಕೂಡಿ ಶುಭಕಾರಿ ಪ. ಏಕೋನ ಚತ್ವಾರಿಂಶತಿವತ್ಸರವು ಸಂತು ರಾಕುತನದೊಳೆನಗೆ ಬೇಕು ಬೇಕೆಂಬಾಶಾಪಾಶವ ಸುಡಲಾರೆ ಭೀಕರಗೊಳಿಪ ಬಗೆ ಮಾಕಳತ್ರನೆ ಸುಮ್ಮನ್ಯಾಕುಪೇಕ್ಷಿಪೆ ಕರು ಣಾಕರ ಕಡೆಗಣ್ಣಿಂದಲಿ ನೋಡು ಕಮಲಾಕ್ಷ 1 ಹಲವು ಹಂಬಲಿಸುತ ಬಳಲಿದೆ ದಿನದಿನ ಗಳಿತವಾಗಿಹ ದೇಹದಿ ಬಲವು ಕುಂದಿತು ಒಂದು ನೆಲೆಯ ಕಾಣದು ಕಳ- ವಳಿಕೆಯಿಂದಲಿ ಮನವು ಮೊಲೆಯ ಕಂದನೊಳ್ ಫಲ ಸಲುವುದೆ ಮಾತೆಗೆ ನಳಿನನಾಭನೆ ಎನ್ನ ತಪ್ಪೆಣಿಸದಿನ್ನು 2 ನಿನ್ನ ನಾಮವ ನಂಬಿ ನೆನೆವರಿಗಖಿಳಾರ್ಥ ಸನ್ನಹ ಸುಲಭನೆಂದು ಮುನ್ನಿನ ಮುನಿಗಳು ನುಡಿದ ಮಾತನು ಶ್ರುತಿ ಸನ್ನುತ ಮರೆಯಲೆಂದು ಎನ್ನ ಮನೋರಥ ಕೊಡುತ ಕರುಣಾಸಿಂಧು ಪನ್ನಗಾಚಲನಾಥ ಪಾವನಕರ ಬಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
(6) ವೀರನಗೆರೆ (ಮೈಸೂರು) ಮೂರುತಿ ಮಾರುತಿರಾಯನೆ ಸಾರಗುಣಾನ್ವಿತ ಶ್ರೀರಘುರಾಮನ ಪ್ರಿಯ ಭಕ್ತ ಪ ಭಂಜನ ಖಿಲಭವ ರಂಜಿಪ ಮಾರುತಿ ಪೊರೆಯೆನ್ನ 1 ಹರಿಪದ ಕಮಲವ ನಿರುತವು ಪೂಜಿಪ ಉರುತರ ಪದವಿಯ ಕೊಡು ನನಗೆ 2 ವೀರನಗೆರೆ ಗುರು ಮಹಾಶೂರದೊರೆ ಸಾರುತ ಮಣಿವೆನು ಮರೆಯದಿರೈ 3 ಜಾಜೀಕೇಶವ ಸನ್ನಿಧಿ ಸೇವಕ ಮೂಜಗದೊಡೆಯಾ ಪೊರೆಯಯ್ಯಾ 4
--------------
ಶಾಮಶರ್ಮರು
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಅಮ್ಮೆಂಬಳದ ಕುರ್ನಾಡು ಸೋಮನಾಥ) ಕಾಮಿತ ಫಲದಾತ ಕಟ್ಟೆಯ ಸ್ವಾಮಿ ಸೋಮನಾಥಾ ಪೂಜೆಯ ನಿರುತದಿ ಕೊಳ್ಳುವ ಪ. ಅಂಬಿಕೆಯನು ವರಿಸಿ ಗಜಚ ರ್ಮಾಂಬರವನು ಧರಿಸಿ ಶಂಬರಾರಿಯನು ಸುಲಭದಿ ಗೆಲಿದಂ- ಮ್ಮೆಂಬಳಜನರನು ನಂಬಿಸಿ ಸಲಹುವ 1 ಒಡೆಯನು ನೀನೆಂದೂ ಊರಿನ ಬಡ ಜನರುಗಳಿಂದೂ ಕೊಡುವ ಪೂಜೆಯನು ಮಡದಿಸಮೇತೀ- ಗಿಡದ ಬುಡದಿ ಕೊಂಬುಡುಪತಿಶಿಖರ 2 ದೋಷಗಳನು ತರಿವಾ ಪನ್ನಗ ಭೂಷಣನೀ ಬರುವಾ ತೋಷಪಡುವ ಸಜ್ಜನರಿಗೆ ಶೇಷಗಿ ರೀಶನು ಸಕಲಭಿಲಾಷೆಯ ಸಲಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಆ) ಲಕ್ಷ್ಮೀ ಸ್ತುತಿಗಳು ಅಮ್ಮಾ ನೀನೆಮ್ಮ ಮನೆಯಲಿಹುದಮ್ಮಾ ನಿತ್ಯ ಪ ನಮ್ಮಯ್ಯನೊಡನೆ ಸುಭಾಷಿಸುತಲಿ ಸಮ್ಮಾನದಿ ಮುಖದಿಂ ನಲಿದಾಡುತಾ ಅ.ಪ ಮಕ್ಕಳೆಂದೆಮ್ಮ ನಲಿಸುತ ಒಲಿಸುತ ಸಕ್ಕರೆ ಸಮಿಗುಂಮಿಗಲಹ ಮಾತುಗ ಳಕ್ಕರದಾಡುತ ಶುಭಸಂಪದಗಳ ನಕ್ರೂರಾರ್ಚಿತೆ ಕೊಡುತ ಮೋದದಿಂ 1 ನೀನಿರುವ ಮನೆಯು ಶೋಭಿಸುತಿಹುದು ತಾನೇತಾ ಮಂಗಳ ನೆಲೆಸಿಹುದು ಸಾನುರಾಗದಿಂ ಸರ್ವರ ಜನನಿಯೆ ನಾನಿನ್ನಾದರದ ಪ್ರೇಮಸುಪುತ್ರನು 2 ನಿತ್ಯಾರಾಧನೆಗನುಕೂಲಗಳಂ ಸತ್ಯಧರ್ಮಗಳ ಬಿಡದಾಚರಿಪುದ ಸ್ತುತ್ಪತದಿ ಸಮಾರಾಧನ ವೆಸಗುನವ ಅತ್ಯಾನಂದದ ಸೌಭಾಗ್ಯವಿತ್ತು 3 ಸವಿ ಸವಿಭಕ್ಷ್ಯಗಳನುಗೊಳಿಸುತ್ತ ಸುವಿಮಲ ಮಂಗಲ ದ್ರವ್ಯಸುಪುಷ್ಪವ ಸುವಾಸಿನಿಯರಿಗೂ ಸದಭಕ್ತರಿಗುಂ ಸುವರ್ಣಭಾಜನದೀಯುವುದಿತ್ತು 4 ಹಾಲು ಹಣ್ಣು ಮಧು ಮಧುರದ ಮನೆಯಂ ಶ್ರೀಯೋಗಗಾನ ಧ್ಯಾನದ ನೆಲೆಯ ಬಾಲರ ಲೀಲೆಯ ಲಾಲನ ಪಾಲನ ಕಾಲವೆಲ್ಲ ಸೊಗನಗೆ ಮೊಗನೆರೆಯಲಿ 5 ಭೃಗುಸುತೆ ಕ್ಷೀರಸಾಗರಜಾತೆ ಭಗವತಿ ಭಾಗ್ಯದಾತೆ ಅಮೃತ ಮಂಗಳಸುಂದರಿ ಚಂದ್ರಸಹೋದರಿ ಅಗಲದೆ ಹರಿವಕ್ಷಸ್ಥಲಸ್ಥಿತೇ 6 ಸುವರ್ಣವರ್ಣಿ ಕಮಲಸುಚರಣೆ ಭುವಿಸುರ ಪೂಜಿತೆ ಕಲ್ಪಲತೆ ಭವ ಭವಹಾರಿಣೆ ಭಕ್ತೊದ್ಧಾರಿಣೆ ದಿವಿರಾಜವರದೆ 7 ಶ್ರೀಕರ ಸಾತ್ವಿಕ ಸುಲಲಿತರಿಂದ ನಾಕಿಗರೆಂಬೊ ಬಂಧುಗಳೊಡನೆ ಜೋಕೆಯ ಮಕ್ಕಳ ವಿವಾಹಗೈದು ಸಾಕಾರ ಸಂಸಾರ ಸುಖನಿಧಿ ಎನಿಸು 8 ಚಪ್ಪರ ತೋರಣ ಮೇಲ್ಕಟ್ಟುಗಳಿಂ ದೊಪ್ಪುವ ಬಗೆಬಗೆ ರಂಗವಲಿಗಳಿಂ ದಿಪ್ಪಾಸಾಗರ ಮಂಗಳ ವಾದ್ಯಂಗ ಳಪ್ಪ ಸದೃಹವ ಮಾಡುತ ಮಮತೆಯಿಂ9 ಅಪ್ರತಿಮ ರತ್ನಪೀಠವನಿಟ್ಟು ತುಪ್ಪದ ನಂದಾದೀವಿಗೆ ಹಚ್ಚಿ ಅಪ್ರಮೇಯನೋಡನಿಪ್ಪ ನಿನ್ನ ಸುಪ್ರೀತಿಯೊಳಾಂ ಪೂಜಿಪುದೀಯತ 10 ಪರಿಮಳ ತೈಲದಭ್ಯಂಜನದಿಂ ಸುರಭೀತೊಯ ಸ್ನಾವನಗೈದು ಹರಿದ್ರಾಕುಂಕುಮ ರತ್ನ ಕಿರೀಟವು ಸರಪೀತಾಂಬರ ಕಮಲವ ಧರಿಸಿ 11 ನರುಗುಂಪಿನ ಶ್ರೀಗಂಧದ ಲೇಪ ಪರಿಪರಿ ಘಮ ಘಮ ಸುಗಂಧ ಧೂಪ ಪರಮ ಪ್ರಕಾಶದ ಮಂಗಳ ದೀಪ ಸಿರಿಹರಿ ನಿಮ್ಮಯ ದಿವ್ಯ ಸ್ವರೂಪ 12 ಬಗೆ ಬಗೆ ಭಕ್ಷ್ಯವು ಕ್ಷೀರಾಜ್ಯಗಳಂ ಹಗಲಿರುಳುಂ ಫಲತಾಂಬೂಲಗಳಂ ನಿಗಮ ಸ್ತುತಿಕೈಗೊಳ್ಳುತ ಪಿಯೆ ನೀ ನಗಲದೆ ಸವಿಯುತ ಸಂತೋಷದಿಂದ 13 ಜಯ ಜಯ ಕರ್ಪೂರಾರತಿಮಾತೆ ನಯದಿಂ ಕುಸುಮಾಂಜಲಿಯಖ್ಯಾತೆ ದಯೆಯಿಂ ಭಾವಭಯ ಹರಿಸಾಪೂತೆ ಜಯ ಜಯ ಶ್ರೀಕೇಶವ ಸಂಪ್ರೀತೆ 14 ವಿಧಿರಮಾತೇ ಶ್ರೋಣಿತ ಚರಿತೆ ಬುಧಜನಪಾಲೆ ಕೃಪಾಲಪಾಲೆ ಮುದದಿಂ ಪಾಲಿಸು ಬಾಳಿನಲಿಡುತೆ ಹೃದಯನ್ನುತೆ ಜಾಜೀಶ ಸಹಿತೆ 15 ಅಗಣಿತ ಸುಗುಣೆ ಕರುಣಾಭರಣೆ ಜಗದೋದ್ಧಾರೆ ಜಯಜಯತಾರೆ ಯುಗಪದಕೀಗಲೆ ಮುಡಿಯಿಟ್ಟಿರುವೆ ಮಗುವಾದೆನ್ನಂ ಮಡಿಲೊಳಗಿಡು ನೀಂ 16
--------------
ಶಾಮಶರ್ಮರು
(ಆ) ಶ್ರೀ ಹರಿಯ ಸ್ತುತಿ ಕೃತಿ ಆಗಿ ಹೋಗುವುದು ಜಗದೀಶನಾಕೃತಿಯು ಅಗಾಧವಿಹುದೈಯ್ಯ ಪ ಮಂದರೋದ್ಧರನಾಜ್ಞೆಯಿಂದ ಬ್ರಹ್ಮನು ತಾನು ಇಂದಿಗೆ ಸೃಷ್ಟಿ ಮಾಡುವುದಿಲ್ಲವೇನು ಇಂದೀವರಾಕ್ಷ ಮುಕುಂದನ ದಯದೀ ಪಾಂಡುನಂದನನು ಅಶ್ವಮೇಧವ ಮಾಡಲಿಲ್ಲೇ 1 ಹರಿಯ ಕೃಪೆಯಿಂದಲಿ ವರದಂಜನೇಯ ಸುತನು ಗುರು ರಾಮನಾ ಸತಿಯ ಅರಸುವುದಕ್ಕಾಗಿ ಪರಮ ದುರ್ಲಭವಾದ ಶರಧಿಯನು ಹರುಷದಲಿ ಸಿರಿನಾಮ ಸ್ಮರಿಸಿ ಹಾರಲಿಲ್ಲೇನೋ2 ಧನಭೂಮಿ ಕನ್ಯಾಗ್ರಹದಾನ ಕೊಡಲದಕೆ ಹರಿ ಅನುಕೂಲವಾದಷ್ಟೇ ಫಲಕೊಡುವನು ಮನವನೊಪ್ಪಿಸಿ ಗತಿ ಎಂದು ನೆನೆದವರಿಗೆ ಘನ ಮುಕ್ತಿಯನು ಕೊಡುವ ಹನುಮೇಶವಿಠಲ 3
--------------
ಹನುಮೇಶವಿಠಲ
(ಇ) ಆತ್ಮನಿವೇದನೆಯ ಕೃತಿಗಳು ಇದನಾದರು ಕೊಡದಿದ್ದರೆ ನಿನ್ನ ಪದಸೇವೆಗೆ ಜನರೊದಗುವರೆ ಪ ದೊರೆತನವಾಗಬೇಕೆನಲಿಲ್ಲ ಬಲು ಸಿರಿತನವನು ವಾಂಛಿಸಲಿಲ್ಲ ಪರಿಭೋಗದ ಸ್ಪøಹೆ ಎನಗಿಲ್ಲ ನಿನ್ನ ಸ್ಮರಣೆಯೊಂದಿತ್ತರೆ ಸಾಕಲ್ಲ 1 ಅನ್ನವಸ್ತ್ರವ ಕೇಳುವದಿಲ್ಲ ಒಳ್ಳೆ ಚಿನ್ನ ಬಣ್ಣವ ಕೊಡು ಎನಲಿಲ್ಲ ಹೆಣ್ಣು ಮಣ್ಣಿನೊಳಗಾಸೆ ಎನಗಿಲ್ಲ ಪರಿ ಪೂರ್ಣ ನೀನೊಲಿದರೆ ಸಾಕಲ್ಲ 2 ಸುರರ ಭೋಗದಿ ಮನವೆನಗಿಲ್ಲ ಪುಲಿ ಗಿರಿದೊರೆ ಬಲ್ಲೆ ನೀನಿದನೆಲ್ಲ 3
--------------
ವೆಂಕಟವರದಾರ್ಯರು
(ಈ) ಮಹಾಲಕ್ಷ್ಮಿ ಇಂದೀವರನಯನ ಕೃಷ್ಣಾನಂದಕಾರಿಣಿ ಪ ಎಂದೆಂದಿಗು ಹೊಂದಿ ನೀನಾನಂದ ಕೊಡುವ ಕಾರಣದಿಂದ ಅ.ಪ. ಕಾಲ ಜನಿಸಿ ಸಿಂಧುರಾಜಗೆ ಪುತ್ರಿ ಎನಿಸಿ ಚಂದಿರನಗ್ರಜೆ ಎನಿಸಿ ಸಿಂಧುಶಾಯಿ ಮಂದಿರಳೆನಿಸಿ 1 ಕಮಲ ಚರಣೆ ಕಮಲಗಂಧೆ ಕಮಲವಾಸನೆ ಕಮಲಾಕ್ಷಣೆ ಕಮಲಾಂಗಿಯೆ 2 ನರಸಿಂಹವಿಠಲನ ಹೊಂದಿದೆ ಪರಮಭಕ್ತರಘ ಕಳೆದು ಹರಿಯ ನಾಮ ಜಿಹ್ವೆಗಿತ್ತು ನಿರುತದಿ ಯುದ್ಧ... ದೇವಿ 3
--------------
ನರಸಿಂಹವಿಠಲರು
(ಉ) ಕ್ಷೇತ್ರವರ್ಣನೆ (1) ಮೇಲುಕೋಟೆ ಹರಿಯೇ ದೈವಶಿಖಾಮಣಿ ಹರಿಯೇ ಸದ್ಭಕ್ತ ಬಂಧು ಹರಿಯೇ ಪೂಜ್ಯಂ ಹರಿಪೂಜೆಯೆ ಪಾಪಕ್ಷಯ ಹರಿಪೂಜೆಯೆ ಪರಮಪುಣ್ಯದಾಲಯಮದರಿಂ ಕಂದ ಹೃದಯದೊಳರ್ಚಿಸುವೆ ಪ ಪರಮಸುಗತಿಯನು ಬೇಡುವೆಸಂತತ- ಮರೆಯದೆ ಪಾಲಿಸು ವರಗಳನು ಅ.ಪ ಹರುಷದಿ ಪರಮನೆ ನೀನೆಂದು ಉರುತರ ಸೌಖ್ಯಗಳನು ಕೊಡುವ 1 ಮನ್ನಿಸಿಭಕ್ತರಪೊರೆಯುವಧೀರನೆ ಅನ್ಯರಕಾಣೆನುನಾನಿನ್ನು ನಿನ್ನನೆ ನಂಬಿದೆ ನರಹರಿಮೂರ್ತಿಯೆ ಇಂದೀ ಸಂಸೃತಿ ಜಾರಿಸುವ 2 ಲೋಕದ ವಾಸನೆ ಶಾಸ್ತ್ರದವಾಸನೆ- ಸಾಕೈದೇಹದ ವಾಸನೆಯ ಈ ಕಡುವಾಸನೆ ಹೆಚ್ಚಿಸುತ 3 ಮಂಗಳ ಯದುಗಿರಿವಾಸ ಪರಮಗುರು ರಂಗನೆ ನಿಜಕೃಪೆದೋರುತಲಿ ಮಂಗಳಶಾಸನ ಗೈವುತ ಸಜ್ಜನ ಸಂಗದೊಳೆನ್ನನು ಸೇರಿಸುವ 4
--------------
ರಂಗದಾಸರು
(ಉ) ರುದ್ರದೇವರು ನಮೋ ಪಾರ್ವತೀಪತಿ ನುತಜನಪರ ನಮೋ ವಿರೂಪಾಕ್ಷ ಪ ರಮಾರಮಣನಲ್ಲಮಲ ಭಕುತಿ ಕೊಡು ನಮೋ ವಿಶಾಲಾಕ್ಷ ಅ.ಪ ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತ ರಕ್ಷಫಾಲನೇತ್ರ ಕಪಾಲ ರುಂಡಮಣಿ ಮಾಲಾಧೃತ ವಕ್ಷಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷಶ್ರೀ ಲಕುಮೀಶನ ಓಲೈಸುವ ಭಕ್ತಾವಳಿಗಳ ಪಕ್ಷ 1 ವಾಸವನುತ ಹರಿದಾಸ ಈಶ ಕೈಲಾಸವಾಸ ದೇವದಾಶರಥಿಯ ಔಪಾಸಕ ಸುಜನರ ಪೋಷಿಪ ಪ್ರಭಾವಭಾಸಿಸುತಿಹುದಶೇಷ ಜೀವರಿಗೆ ಈಶನೆಂಬ ಭಾವಶ್ರೀಶನಲ್ಲಿ ಕೀಲಿಸು ಮನವ ಗಿರಿಜೇಶ ಮಹಾದೇವ 2 ಮೃತ್ಯುಂಜಯ ನಿನ್ನುತ್ತಮ ಪದಯುಗ ಭೃತ್ಯನೊ ಸರ್ವತ್ರಹತ್ತಿರ ಕರೆದು ಅಪತ್ಯನಂದದಿ ಪೊರೆಯುತ್ತಿರೊ ತ್ರಿನೇತ್ರತೆತ್ತಿಗನಂತೆÉ ಕಾಯುತ್ತಿಹ ಬಾಣನ ಸತ್ಯದಿ ಸುಚರಿತ್ರಕರ್ತೃ ಉಡುಪಿ ಸರ್ವೋತ್ತಮ ಕೃಷ್ಣನ ಪೌತೃ ಕೃಪಾಪಾತ್ರ3
--------------
ವ್ಯಾಸರಾಯರು
(ಊ) ಲೋಕನೀತಿ ಹರೇ ಪಾಹಿ ಮಾಂ ಸದಾ ಪ ಭವದೊಳೆನ್ನ ಬಳಲಿಸಲಿ ತವ ಹಿತವೇನಿಹುದಿದರೊಳು ತವಕದಿಂದ ಕೊಡು ದಯಾಳು ನವವಿಧ ಭಕುತಿ ನಿನ್ನೊಳು 1 ಲೋಕ ಪಾಲಕನೆಂಬೊ ಬಿರುದು ಈ ಕಾಲಕೆ ತೋರೊ ಒಲಿದು ಸಾಕಲಾರೆನೆನಲು ಬಿಡದು ನೀ ಕರುಣಿಸು ದÀಯಾಸಿಂಧು 2 ಧೀರ ಶ್ರೀ ಹನುಮೇಶವಿಠಲಾ ಮೀರಿದ ಕಾರ್ಯವು ಇದಲ್ಲಾ ಸಾರ ಮಾರ್ಗ ತೋರಿ ಸುಫಲಾ ಮಾರಜನಕ ಕೊಡು ಗೋಪಾಲ 3
--------------
ಹನುಮೇಶವಿಠಲ
(ಎ) ಹರಿದಾಸವರ್ಗ ಏನು ಸುಖವೊ ಎಂಥಾ ಸುಖವೊ ಹರಿಯಧ್ಯಾನ ಮಾಡುವರ ಸಂಗ ಪ ತಂಬೂರಿ ಮೀಟುತ ದ್ವಯಅಂಬಕದಿ ಬಾಷ್ಪ ಬಿಂದುತುಂಬಿ ಆನಂದದಿಂದಸಂಭ್ರಮವಾಗಿಹರ ಸಂಗ 1 ಗೆಜ್ಜೆಯ ಕಾಲಲ್ಲಿ ಕಟ್ಟಿಲಜ್ಜೆಬಿಟ್ಟು ಹರಿಯ ನಾಮಗರ್ಜನೆ ಮಾಡುತ್ತ ಅಘ-ವರ್ಜಿತರಾಗಿಪ್ಪರ ಸಂಗ 2 ಪುಷ್ಪದಿ ಸುಗಂಧ ಹ್ಯಾಗೆಇಪ್ಪುದೊ ತದ್ವತು ಜಗ-ದಪ್ಪ ಬ್ರಹ್ಮಾದಿಗಳೊಳಗಿಪ್ಪನೆನ್ನುವರ ಸಂಗ 3 ತುಚ್ಛ ವಿಷಯವ ತೊರೆದುನಿಶ್ಚಲ ಭಕುತಿಯಿಂದಅಚ್ಯುತಾನಂತನ ಪಾದಮೆಚ್ಚಿಸಿದವರ ಸಂಗ4 ದರ್ವಿಯಂತೆ ಜೀವವನ್ನುಸರ್ವತ್ರ ತಿಳಿದು ಶೇಷಪರ್ವತವಾಸನ ಕಂಡುಉರ್ವಿಯೋಳಿಹರ ಸಂಗ 5 ನಡೆವುದು ನುಡಿವುದುಕೊಡುವುದು ಕೊಂಬುವುದುಒಡೆಯನ ಪ್ರೇರಣೆಯೆಂದುನುಡಿದು ಹಿಗ್ಗುವರ ಸಂಗ 6 ಸಿರಿ ಕೃಷ್ಣ-ಗಿಷ್ಟರಾಗಿಪ್ಪರ ಸಂಗ7
--------------
ವ್ಯಾಸರಾಯರು
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ