ಒಟ್ಟು 2228 ಕಡೆಗಳಲ್ಲಿ , 112 ದಾಸರು , 1537 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಆ) ಶ್ರೀಹರಿಯ ಗುಣಗಾನ ಇದು ಬಲು ಸುಖಕಾಣೆ ಕೇಳಿದಕೆಣೆಗಾಣೆ ಪ ಒದಗಿ ಬರುವ ಮೃತ್ಯುವ ಪರಿಹರಿಸುವ ಪದುಮನಾಭನ ಪದಪದುಮಕ್ಕೆರಗುವ ಅ.ಪ ಚಂಚಲ ಸಿರಿಗಾಗಿ ಲೋಕ ಪ್ರ- ಪಂಚಕೆ ಬೆರಗಾಗಿ ಸಂಚಿತ ಕರ್ಮವ ಕಳೆಯದೆ ಕಾರ್ಯವು ಮಿಂಚಿದ ಬಳಿಕಾಯಾಸಕ್ಕಿಂತಲು1 ಚಿಂತೆಯೆಲ್ಲವ ಕಳೆದು ಮನದಿ ನಿ- ಶ್ಚಿಂತೆಯಾಗಿ ನಲಿದು ಅಂತರಂಗದಿ ಲಕ್ಷ್ಮೀಕಾಂತನ ತುತಿಸುತ ಸಂತೋಷ ಶರಧಿಯಳೋಲ್ಯಾಡುವುದು 2 ಶರಣ ಜನರ ಪೊರೆವ, ದ್ವಾರಕಾ-ಪುರವರದಲಿ ತಾನಿರುತಿರುವಪರಮ ಪುರುಷ ನಮ್ಮ ಸಿರಿಕೃಷ್ಣರಾಯನಮುರಳಿಧರನ ಸೇವಿಸಿ ಸುಖಿಯಾಗುವ.3
--------------
ವ್ಯಾಸರಾಯರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಆರೋಹಣ ಕ್ರಮದಲ್ಲಿ ದಾಸ-ಗುರು-ದೇವತಾನಮನ) ಅಕ್ಕ ನೋಡೆ ನಾನಾ ನಿನ್ನ ದಯದಿಂದ ಗುರು ರಂಗವಲಿದದಾಸರ ಕನುಷಿನೊಳಗುಳ್ಳ ರಕ್ಕಸರಿಗೆಲ್ಲ ಕಕ್ಕಸವಾಗುತಿದೆ ದಕ್ಕಲಾರದು ಇನ್ನು ರೊಕ್ಕ ರೊಕ್ಕಕ್ಕೆ ಸಿಕ್ಕಿ ಬಲುಪರಿಯಿಂದ ಸೊಕ್ಕಿ ಧಕ್ಕೆ ತಿನ್ನುತ ಇದ್ದು ಶಕ್ಕುತಿಯಿಲ್ಲದೆ ಯನಗೆ ಪುಕ್ಕಟೆ ಸಿಕ್ಕಿತುಯೆನ್ನ ಕಕ್ಕನು ಇವರಕ್ಕಮುಕ್ಕಿ ಮಹ ಪಕ್ಕಿವಾಹನ ತಂದೆವರದಗೋಪಾಲವಿಠಲನ ತೋರುವಾ 1 ವತ್ಸರ ಇಂದಿರೆ ಕರ್ತು ನಾನಲ್ಲ ಚಂದ್ರ ಪುರಕೆ ಪೋಗು ಭಾಗಣ್ಣನೆಂಬುವನುಂಟು ಶಿರಿ ಅರಸ ವರದಗೋಪಾಲವಿಠಲನ ದಯದಿಂದಾ ಬಂದು ಸೇರಿದರು 2 ಅಪರೋಕ್ಷ ಪಾಲಿಸಿ ಮಂತ್ರಗಳುಪದೇಶಿಸಿ ಚರಣಂಗಳ ಲಯ ಮಾಡಿಸಿ ನಿರುತದಿ ಪಾಲಸಾಗರಶಾಯಿ ತಂದೆವರದಗೋಪಾಲವಿಠಲನ ನಿಲ್ಲಿಸಿ ಕೊಟ್ಟುಬಿಡದೆ3 ವಾಸವ ಮಾಡುತ ದಾಸರ ಪೋಷಿಸಬೇಕೆನುತ ಆಶೆಯುಕ್ತ ದೋಷರಹಿತಭಾವಿ ವಾಯುಪದಸ್ಥ ಸ್ವಾದಿರಾಜರ ಆಜ್ಞಾವ ಧರಿಸಿ ಶೇರಿ ಅರಸನ ಮಹಿಮೆಯ ಶೋಧಿಸಿ ಭಾಗವತಾದಿ ಶಾಸ್ತ್ರ ಅರ್ಥಸಮ್ಮತ ಕವನದಿ ರಚಿಸಿ ಹರಿಕಥಾಮೃತಾಖ್ಯ ಗುಣಸಾಗರ ಸಾರವೆಂದು ನಾಮವೆನಿರ್ಮಿಸಿ ಕುಮತವ ಭೇದಿಸಿ ಹಾನಿ ವೃದ್ಧಿಯ ಭೇದಿಸಿ ನೀತಿ ಹಿತನ ದ್ವಾರ ಜಗನ್ನಾಥವಿಠಲನೆಂಬೊ ಪೆಸರು ಪಡೆದು ತೀರ್ಥಕ್ಷೇತ್ರಾದಿಯಾಟಿಸಿ ಗಾತ್ರವ ಘೋಟಿಸಿಸೂತ್ರವ ಮೀಟುತ ಪಾತ್ರರ ಸಂಗಡ ಚಿತ್ರವೇಷವ ಧರಿಸಿ ವರ್ತನೆಗ್ಯಯ್ಯುತ ಸೂತ್ರನಾಮಕ ಕೃಷ್ಣನಂತರ್ಯಾಮಿ ಸೂತ್ರವಂದಿತ ತಂದೆವರದಗೋಪಾಲವಿಠಲನ ಭಜಿಸಿ ಮಹಪದವೈದ 4 ಆನಂದ ಆನಂದ ಮಹಾಸಾಗರದೊಳಗೆ ಮುಳುಗಿ ಶಿಂಧುಶಯನ ಅರವಿಂದನಯನನ ಪೊಂದಿ ಮಹ ಪೊಂಗೊಳಲನೂದುತ ಜಗಂಗಳ ಪೋಗುತ ಗಂಗಾಜನಕ ಹರಿ ಗೋವಿಂದನಾಶ್ರಯಿಸಿ ದ್ವಂದ್ವಾವ ಭಜಿಸುತ ಮಂಗಳ ಮೂರುತಿ ಸ್ವಪನದಿ ಬಂದು ನಂದಾದಿ ಕವನ ಪೇಳಿ ಪವಿತ್ರನ ಮಾಡಿದಿ ಭಾವಿ ಭಾರತಿ ವರನ ಮಹಿಮೆಗೆಣೆಯುಂಟೆ ಹನುಮ ಭೀಮ ಮಧ್ವಾತ್ಮಕ ರೂಪಧಾರಿಗುರುರಾಜಾಂತರ್ಗತ ತಂದೆವರದಗೋಪಾಲವಿಠಲನು ಬಂದು ವದಗಿದ ವಾಸನಾಮಯದಿ 5 ಜತೆ :ಪಾತಕ ಪೋಯಿತು ಪೂತಾತ್ಮಕನ ಸೇವಿಪ ಜಗನ್ನಾಥರಾಯನ ಕಂಡೇ ಹರಿರೂಪಧಾರಿ ಗುರು ತಂದೆವರದಗೋಪಾಲವಿಠಲನ ದಯದಿಂದಾ 6
--------------
ಗುರುತಂದೆವರದಗೋಪಾಲವಿಠಲರು
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
(ಈ) ಆತ್ಮನಿವೇದನಾ ಕೃತಿಗಳು ಅಕಟಕಟ ಬಹಳ ಬಡತನವಡಸಿದುದೆ ನಿನಗೆ ಅಕಳಂಕ ಚರಿತ ಹರಿಯೆ ಪ ಪ್ರಕಟತನದಿಂ ಗೋದಾನಕ್ಕೆ ಕೈನೀಡುವರೇ ಸುಖಮಯ ಶರೀರ ಚನ್ನರಾಯಾ ಅ.ಪ ಹಿಂದೆ ಯಜ್ಞದಲಿ ಬಲಿಯಿತ್ತ ಭೂದಾನಕ್ಕೆ ದಂದಿಗೆ ಸಾಲದಾಯಿತೆ ಅಂದು ಕರ್ಣನು ಕೊಟ್ಟ ದಾನವನು ನೀ ಪಿಡಿದು ದಂದಿಗೆ ಸಾಲದಾಯಿತೆ ಇಂದು ನಿನ್ನಯ ದಾಸಾನುದಾಸನು ಕೊಟ್ಟ ಗೋದಾನ ದೊಂದೊಂದು ಗೋಗಳಿಗೆಛಂದದಲಿ ನಿಂದು ದಾನವ ಕೊಂಡೆಯಾ ಸ್ವಾಮಿ 1 ಉರದೊಳಗೆ ಅನವರತ ವಾಸವಾಗಿರುತಿಪ್ಪ ಶರಧಿಸುತೆ ಕೈಬಿಟ್ಟಳೇ ಬೆರೆತು ಪೋದುದೇ ಪಾಲ್ಗಡಲು ಮುನಿಸಿಕೊಂಡು ಬರಡಾಯಿತೇ ಕಾಮಧೇನೂ ತಿರುಕ ಹಾರುವನಂತೆ ಪರಿಪರಿಯ ದಾನಕ್ಕೆ ಭರದಿ ಕೈ ಒಡ್ಡುತಿಹರೆ ಪುರುಷೋತ್ತಮನೆಂಬ ಅಭಿಮಾನವಿನಿತಿಲ್ಲದೇ ದೂರಿಗೊಳಗಾಗಬಹುದೆ ಸ್ವಾಮಿ 2 ಇತ್ತ ದಾನದ ಗೋವುಗಳನೆಲ್ಲ ಗುಡಿಯೊಳಗೆ ಮೊತ್ತದಿಂ ಕೂಡಿಕೊಂಡೂ ಒತ್ತಿ ಮುದ್ರೆಯನು ನಾಮವನಿಟ್ಟು ಬಾಲಗಳಿ ಗೆತ್ತಿ ಘಂಟೆಗಳ ಕಟ್ಟೀ ಅರ್ಥಿಯಿಂ ತೋರಿಸಿ ಯೆನ್ನ ಕುಲಕೋಟಿಗಳಿ ಗಿತ್ತೆ ಸುರಪದವನು ಕರ್ತುೃ ವೈಕುಂಠ ವೇಲಾಪುರಾಧೀಶ್ವರನೇ ಭೃತ್ಯನ್ನ ಕಾಯೊ ಸತತ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
(ಉ) ಆತ್ಮನಿವೇದನೆ ಪಾಲಿಸಯ್ಯಾ ಪ ಎನ್ನ ಜೀಯಾ ಅ.ಪ. ದಾನಕ್ಕೆ ಲೋಭ ಅಡ್ಡಾಯಿತೋ ಮಾನಕ್ಕೆ ಕೋಪಬೀಜವಂಕುರಿಸಿತೋ ಶ್ವಾನನಂದದಿ ಬಾಳಾಯ್ತೋ 1 ಮೃಗ ತಲೆ ಸಿಕ್ಕುತೊಳಲುವ ತೆರದಿ ಮಾಯಾ ಬಿದ್ದೆನೊ ಭರದಿ 2 ದುರಿತವ ತರಿದು ಕಾಪಾಡೋ ಕರವ ಬಿಡಬ್ಯಾಡೊ 3
--------------
ಹನುಮೇಶವಿಠಲ
(ಊ) ಯತಿವರರು ಶ್ರೀ ಜಯತೀರ್ಥರು ಎದುರಾರೊ ಗುರುವೆ ಸಮರಾರೊ ಪ ಮದನ ಗೋಪಾಲನ ಪ್ರಿಯ ಜಯರಾಯ ಅ.ಪ ಕಡು ಗರ್ಜಿಸುವ ಕೇಸರಿಯಂತೆ ನಿಮ್ಮ ವಾದಗಡಣೆಯ ಕೇಳುತ ನುಡಿ ಮುಂದೋಡದೆಗಡಗಡ ನಡುಗುತ ಮಾಯ್ಗೋ ಮಾಯ್ಗಳುಅಡವಿಯೋಳಡÀÀಗೋರು ನಿಮ್ಮ ಭೀತಿಯಲಿ 1 ಕುಟಿಲ ಮತಗಳೆಂಬೊ ಚಟುಲಂಧಕಾರಕ್ಕೆಪಟುತರ ತತ್ವ ಪ್ರಕಾಶಿಕೆಂತೆಂಬಚಟುಲಾ ತಪದಿಂದ ಖಂಡಿಸಿ ತೇಜೋ-ತ್ಕಟದಿ ಮೆರೆದೆ ಬುಧಕಟಕಾಬ್ಜ ಮಿತ್ರ2 ಅಮಿತ ದ್ವಿಜಾವಳಿ ಕುಮುದಗಳರಳಿಸಿವಿಮತರ ಮುಖ ಕಮಲಂಗಳ ಬಾಡಿಸಿಸ್ವಮತರÀ ಹೃತ್ಸಂತಾಪಗಳೋಡಿಸಿವಿಮಲ ಸುಕೀರ್ತಿಯ ಪಡೆದೆಯೊ ಚಂದ್ರ 3 ವೇದ ಶಾಸ್ತ್ರಗಳೆಂಬೊ ಶೃಂಗಗಳಿಂದ ಸು-ಧಾದಿ ಗ್ರಂಥಗಳೆಂಬೊ ಸ್ತನದಿಂದೊಪ್ಪುತ ತತ್ವಬೋಧನೆಯೆಂಬ ದುಗ್ಧ ಶಿಷ್ಯವತ್ಸಂಗಳಿಗೆಆದರದಲಿ ಕೊಟ್ಟ ಯತಿಸುರಧೇನು 4 ವ್ಯಾಸ ಸೂತ್ರಗಳೆಂಬ ಮಂದರವನು ವೇದರಾಸಿಯೆಂಬ ವಾರಾಶಿಯೊಳಿಟ್ಟುಶ್ರೀ ಸರ್ವಜ್ಞರ ವಾಕ್ಯ ಪಾಶದಿ ಸುತ್ತಿಭಾಸುರ ನ್ಯಾಯಸುಧಾ ಪಡೆದೆ ಯತೀಂದ್ರ5 ವನಜನಾಭನ ಗುಣಮಣಿಗಳು ಸರ್ವಜ್ಞಮುನಿಕೃತ ಗ್ರಂಥಗಳವನಿಯೊಳಡಗಿರೆ ಸ-ಜ್ಜನರಿಗೆ ಟೀಕಾಂಜನದಿಂದ ತೋರಿಸಿಘನ ಸುಖಸಾಧನ ಮಾಡಿದ್ಯೊ ಧೀರ 6 ಅರ್ಥಿಮಂದಾರ ವೇದಾರ್ಥ ವಿಚಾರ ಸ-ಮರ್ಥ ಶ್ರೀಕೃಷ್ಣ ಪಾದಾಂಬುಜಲೋಲ ಪ್ರ-ತ್ಯರ್ಥಿ ಮತ್ತೇಭಕಂಠೀರವಕ್ಷೋಭ್ಯ-ತೀರ್ಥಕರ ಜಾತ ಜಯತೀರ್ಥ ಯತೀಂದ್ರ 7
--------------
ವ್ಯಾಸರಾಯರು
(ಎ) ಭೀಮ ಸೋಮ ರಣರಂಗ ಭೀಮಾ ಆ ಮಹಾದುರಿತ ಭಾರ ಹರ ಪ ಧರ್ಮನಂದನನೊಡನೆ ಜನಿಸಿ ಬಂದು ದುರ್ಮತಿಗಳಾ ಕೂಡ ನಿರ್ಮತ್ಸರಾದಲ್ಲಿರದೆ ನಿರುತ ಛಾತ್ರಾ ಕರ್ಮದಲ್ಲಿ ಮರೆದೆ ಧರ್ಮಕ ಹಿತರೊಂದು ನಿರ್ಮಿತದರಗಿನ ಅರ್ಮನೆ ಮಾಡಿರೆ ಮರ್ಮ ತಿಳಿದು ದಾಟಿ ನಿರ್ಮಳಾ ಮನೋಹರಾ ಪೇರ್ಮಿವುಳ್ಳವನೆ1 ಬಕನ ಸರ್ರನೆ ಸೀಳಿ ಬಿಸಾಟಿ ಪಾಂಚಾಲಕನ ಸಭಾದÀ ಮೌಳಿ ಅಕಟ ತೊಲಗಿಸಿ ಗೆಲಿದು ನೆರೆದ ಕಾ ಮುಕರ ಬಿಂಕವ ಹಳಿದು ಬಕ ವಿರೋಧಿಯ ಭಕುತಿಯಿಂದಲಿ ಬಲು ಸುಖ ಬಡಿಸುತ ಕು ಹಕ ಮಾಗಧÀನ ರಣಮುಖಕಾಹುತಿಯಿತ್ತು ವಿಕಳತನದ ಕೀಚರ ಕಿಮ್ಮೀರ ಲಿಕಿಲಿಕಿ ಮಾಡಿದ2 ಗುರುವಿನ ರಥವೆ ತೆಗೆದು ಗಗನಕ್ಕೆ ಭರದಿಂದಲಿ ಬಗೆದು ಅರಿಗಳ ಶಿರಗಳ ತರಿ ತರಿದವನಿಗೆ ಧುರ ಧರದೊಳು ಹರಿಶರ ಬಿಡಲಂಜದೆ ಎರಗದಲಿಪ್ಪ ಭ ಳಿರೆ ಪರಾಕ್ರಮ ವರ ವೃಕೋದರ3 ಕರಿ ತೀಕ್ಷಣ ಕಬ್ಬು ತುಡಕಿದಂದದಿ ಪಿಡಿದವನ ಇಬ್ಬಗದು ಉದರದ ಕೊಬ್ಬು ಹರಿಸಿ ಕರು ಳಬ್ಬರದಲಿ ಸತಿಗೆ ಉಬ್ಬಿಗೆ ತೀರಿಸಿ ಇಬ್ಬಲದವರನ ಯೆಬ್ಬಟಲು ಸುರರಭ್ಬೆಭ್ಬೆನುತಿರೆ ಬೊಬ್ಬಾಟಕೆ ಜಗ ಸುಬ್ಬನ ಸೂರೆ 4 ಕುರುಪ ಜಲದೊಳಗೆ ಅಡಗಿರಲು ವೈರಿಯ ತೊಡೆ ಮುರಿದು ನಿರ್ಭಯದಿಂದಲಿ ತುರಗಧ್ವರದಲಿ ಮೆರೆದೆ ದೋಷರಾಶಿ ವಿರಹಿತ ಕಾಮನೆ ಸುರಮಣಿ ಜಗದಂ ವಿಠ್ಠಲರಿವ ಭಾರತ ಮಲ್ಲ ಮರುತಾವತಾರ 5
--------------
ವಿಜಯದಾಸ
(ಏ) ವಿಶೇಷ ಸಂದರ್ಭದ ಹಾಡುಗಳು ಬರಗಾಲ ಮತ್ತು ಯುದ್ಧವನ್ನು ಕುರಿತು ನಿರ್ದಯನಾಗಬೇಡವೋ ಭಗವಂತ ದುರ್ದಿನ ದೂರಮಾಡೋ ದೇಶಕ್ಕೆ ಪ್ರಶಾಂತ ಪ ಮಳೆಗಾಲ ಮರೆತುಹೋಗಿ ಬೇಸಗೆ ಬೆಳೆದು ಬಂದು ನೆಲವೆಲ್ಲ ದುರ್ಭಿಕ್ಷ ತಾಂಡವವಾಡುತಿದೇ 1 ಕೆರೆಕಟ್ಟೆತೊರೆಭಾವಿ ಹೊಳೆಯಲ್ಲಿ ನೀರಿಲ್ಲ ಧರೆಯಲ್ಲಿ ತೃಣವಿಲ್ಲ ಬರಿಗಾಡಾಯ್ತೋ 2 ಹೊಲಗದ್ದೆ ತೋಟಗಳ ಬೆಳೆಯೆಲ್ಲ ಒಣಗಿತು ಫಲವಿಲ್ಲ ಜನವೆಲ್ಲ ಗೋಳಾಡುತಿಹರೋ 3 ಅನ್ನಾಹಾರಗಳಿಲ್ಲ ಗೋಗಳಿಗೆ ಗ್ರಾಸವಿಲ್ಲ ಚಿನ್ನದಂಥ ಮಕ್ಕಳೆಲ್ಲ ಉಣಿಸಿಲ್ಲದಿಹರೋ4 ಧನಿಕರ್ಗೆ ಧನದಾಸೆ ಬಡವರ್ಗೆ ಕೂಳಿಲ್ಲ ದಿನಕಳೆವುದು ಕಷ್ಟವಾಗಿ ಬರಗಾಲ ಬಂತೋ 5 ಕಳವು ಕೊಲೆಯು ದಂಗೆ ದಾರಿದರೋಡೆಯು ಉಳಿಗಾಲ ಬರಲಿಲ್ಲ ಯುದ್ಧದ ಭಯವು6 ಒಂದೊಂಬತ್ತಾರೈದು ಹತ್ತು ಹನ್ನೊಂದರ ಮಧ್ಯೆ ಬಂದು ಜಗದ ಕುತ್ತು ಕತ್ತಿಯಂತೆ ಕಂಡಿತು 7 ಬೆಳಗುಪೂರ್ವ ಆಶ್ವಿಜ ಕಾರ್ತಿಕದೆ ಧೂಮಕೇತು ಇಳೆಗಂಡಕಳೆ ಯಮದ್ವಾರವ ಮುಚ್ಚಿ 8 ಅವಿಶ್ವಾಸದ ವಿಶ್ವವಸುವ ಪರಾಭವದಿಂ ಪ್ರೀತಿತೋರಿ ಭಂಗ ಹರಿಸೋ 9 ಪಾಕಿ-ಚೀನಾ ಪತನಗೈದು ಜೋಕೆಯಿಂ ಭಾರತವ ರಕ್ಷಿಸಿ ಲೋಕಕ್ಕೆ ಕ್ಷಾಮಹರಿಸಿ ಕ್ಷೇಮಕೊಟ್ಟು ಪೊರೆಯೋ10 ನಗೆಯಿಲ್ಲ ಸಂತೋಷ ಸುದ್ಧಿ ಕೇಳುತಲಿಲ್ಲ ಮಿಗಿಲಾಗಿ ಜನರೆಲ್ಲ ಸೊರಗಿ ಸುತ್ತುವರೋ11 ಕನ್ನಡದ ನಾಡಿಗೆ ಹೊನ್ನಿನ ಬಿರುದಿದೆ ಖಿನ್ನತೆ ತಾರದೆ ಉನ್ನತಿ ಕಾಪಾಡು 12 ಮುಂದೆಮಗೆ ಗತಿಯೇನು ಬಾಳುವಬಗೆಯೆಂತು ಬಂಧು ನೀನಿದ್ದುಕೊಂಡು ಅನ್ಯಾಯವಾಗಿದೆ13 ತಂದೆ ತಾಯಿಯು ನೀನು ಹೊಂದಿದ ಬಳಗ ನೀನು ಕುಂದಿಲ್ಲದೆಮ್ಮನ್ನು ಕಾವ ಪ್ರಭು ನೀನು 14 ಸುವೃಷ್ಟಿ ಸಸ್ಯವೃದ್ಧಿ ಜೀವನ ಸಮೃದ್ಧಿಯು ಸುವೃತ್ತಿ ಕರುಣಿಸಿ ಪೊರೆ ಜಾಜಿಶ್ರೀಶ 15
--------------
ಶಾಮಶರ್ಮರು
(ಖ) ಶತಸ್ಥಮರುತುಗಳು ಮರುತಗಳ ನಾಮವನು ಉದಯದಲಿಯೆದ್ದು | ದುರಿತ ಪರಿಹಾರವಾಗುವುದು ಪ ಪ್ರಾಣ ಅಪಾನನು ವ್ಯಾನ ಉದಾನ ಸ | ಮಾನ ಮತ್ತೆ ನಾಗ ಕೈಕಲಕೂರ್ಮ || ಏನೆಂಬೆ ದೇವದತ್ತನು ಧನಂಜಯ ಪ್ರವಾ | ಹನನು ವಿವಹ ಸಂಯಾ ಸಂವಾಹನೆಂದು 1 ಶೀಲ ಪರಾವಹ ಉದ್ವಹ ವಾಹಶಂಕು | ಕಾಲ ಶ್ವಾಸ ಅನಳ ಅನಿಲಪ್ರತಿಯೂ || ಬಾಲ ಕುಮುದಾಕಾಂತ ಶುಚಿಶ್ವೇತ ಅಜಿತಗುರು | ಮೇಲಾಗಿ ಸಂಸಾರ ಪ್ರವರ್ತಕ ಕಿಲರನ್ನ 2 ತರುವಾಯ ಅಜಿತ ಸಂಯನು ಕಪಿ ಜಡದೇವ | ಮರಳೆ ಮಂಡುಕ ಸತತ ಸಿದ್ಧ ರಕ್ತಾ || ಸರಸ ಕೃಷ್ಣ ಪಿಕಶುಕ ಯತಿ ಭೀಮಹನು | ಮರಿಯದಲೆ ಪಿಂಗ ಅಹಂಪ್ರಾಣ ಕಂಪನ 3 ಇವರ ಸಹಿತವಾಗಿ ಸೂತ್ರನಾಮಕ ಮೂಲ | ಪವಮಾನನೊಡನೆ ಗಣಣೆಯನು ಮಾಡಿ || ತವಕದಿಂದಲಿ ತಾರತಮ್ಯವನೆ ತಿಳಿದು | ನಿತ್ಯ 4 ಇವನೆ ಪಠಿಸಿದರೆ ಜನ್ಮ ಜನುಮದ ಪಾಪ | ಉದರಿ ಪೋಗುವದು ಲೇಶ ಉಳಿಯದೆ || ಪಮಮನಾಭ ನಮ್ಮ ವಿಜಯವಿಠ್ಠಲರೇಯನ | ಪದವ ಭಜಿಸುವದಕ್ಕೆ ಙÁ್ಞನವೇ ಪುಟ್ಟವದು 5
--------------
ವಿಜಯದಾಸ
(ಧರ್ಮಸ್ಥಳ ಮಂಜುನಾಥನನ್ನು ನೆನೆದು) ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥ ಲೋಕೇಶ ಮಾಡು ನಿರ್ಭಯ ಪ. ಪಾಕಹಪ್ರಮುಖದಿವೌಕಸಮುನಿಜನಾ- ನೀಕವಂದಿತಪದಕೋಕನದ ಕೋವಿದ ಅ.ಪ. ಪಾಪಾತ್ಮಪಾಪಸಂಭವ ನಾನೆಂಬುವದಕಾ- ಕ್ಷೇಪವೇನಿಲ್ಲೋ ಮಾಧವ ಶ್ರೀಪರಮೇಶ್ವರ ಕೋಪಕಲುಷಹರ ತಾಪತ್ರಯಶಮನಾಪದ್ಭಾಂಧವ ಗೋಪತುರಂಗ ಮಹಾಪುರುಷ ಗಿರೀಶ 1 ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ- ನಾಮ ಪಾಪವಿಮೋಚನ ವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮ ಕಾಮಾರಿ ನಿನ್ನ ನಾ ಮರೆಹೊಕ್ಕೆನು ಹೇ ವiಹಾದೇವ ಸೋಮಚೂಡಾಮಣಿ 2 ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ- ಬ್ರಹ್ಮ ಸುಜ್ಞಾನದಾಯಕ ನಿತ್ಯ ಸತ್ಕರ್ಮಪ್ರೇರಕ ಗಜ- ಚರ್ಮಾಂಬರಧರ ದುರ್ಮತಿಪ್ರಹರ ಭರ್ಮಗರ್ಭಜ ಭವಾರ್ಣವತಾರಕ 3 ಕಪ್ಪ ಕಾಣಿಕೆಗಳನು ತರಿಸುವರ- ಣ್ಣಪ್ಪದೈವವೆ ದೂತನು ತಪ್ಪದೆ ಚಂದಯ ಹೆಗ್ಗಡೆಯರ ಮನದೊ ಳಿಪ್ಪ ದಧಿಮಥನ ತುಪ್ಪದಂತೆಸೆವ ಕರ್ಪೂರಗೌರ ಸರ್ಪವಿಭೂಷಣ 4 ಪೊಡವಿಗಧಿಕವಾಗಿಹ ಕುಡುಮಪುರ- ಕ್ಕೊಡೆಯ ಭಕ್ತಭಯಾಪಹ ಕಡಲಶಯನ ಲಕ್ಷ್ಮೀನಾರಾಯಣಗತಿ- ಬಿಡೆಯದವನು ನಿನ್ನಡಿಗೆರಗುವೆ ವರ ಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಾಂಡ ಪುರಾಣದ ಕರುಣಾಕರ ಸ್ತೋತ್ರದ ಅನುವಾದ) ಶ್ರೀ ರಮಣನೆ ನಮೋ ಎಂದು ನುತಿ ಪೇಳ್ವೆನಿಂದು ಪ. ನಿನ್ನನು ದೂಡದಿರನ್ಯರ ಬಳಿಗೆ ಪಾದ ಕಾಪಾಡು ದೇಹವ ದಾಢ್ರ್ಯದೊಳಗೆ 1 ಈಶನು ನೀ ಎನಗೆಂದಿಗು ನಿನ್ನ ದಾಸನಾದುದರಿಂದ ಪೋಷಕರನು ಕೃಪೆಯಿಂದ 2 ಎನ್ನ ಭರಣಕನ್ಯರಸಡ್ಯೆಯೇನು ಕಂಬುರುಹಾಕ್ಷಾಶ್ರಿತ ಕಾಮಧೇನು 3 ಫಣಿರಾಜಶಯನ ಶ್ರೀಕಾಂತ ಎನಗೆ ಸಿದ್ಧಾಂತ 4 ಕಲ್ಕಿರುವ ಸ್ವಾಪಲ್ಕಿವರದ ನಿನ್ನ ಶುಲ್ಕದಾಸಗೆ ಭಯವಿಲ್ಲ ಫಲ್ಕಸ ಪಾವನ ಮನದಿ ನೀಯಿರಲನ್ಯ ಕಲ್ಕಗಳುಂಟೆ ಭೂನಲ್ಲ 5 ಹೆಚ್ಚಾದರ್ಥಗಳುಂಟೆ ಪೇಳು ತಡಮಾಳ್ಪದಾಶ್ಚರ್ಯ ಕೇಳು ದಯಾಳು 6 ತಾಯೆ ತನ್ನಣುಗಗೆ ಗರವನಿಕ್ಕೆ ಬೇರೆ ಕಾಯುವರುಂಟೆ ಬೇಗದಲಿ ಲೋಕದಲಿ 7 ದಾತ ಪರಿತ್ರಾತ ಜ್ಞಾತದಯಾನ್ವಿತನೆಂದು ಪಾಲಿಸು ಗುಣಸಿಂಧು 8 ನೀ ನಿರ್ವಹಿಸುವಿಯೆಂದು ತಿಳಿದೆ ಎನ್ನಯ ವಾರ್ತೆಗೊಳದೆ9 ನೀ ಬಿಡದಿರು ಹರಿಯೆ ಸರ್ವಾರ್ಥದಾಯಕ ಎನ್ನ ದೊರೆಯೆ 10 ಎಂದು ಪೇಳ್ದೆದು ಶ್ರುತಿ ನಿಂದು ಭವ ಬೇಗ ಓಡಿ ಬಂದು 11 ಎನ್ನೊಳ್ಯಾಕೆ ನಿರ್ದಯವು ಬೇಗ ಪರಿಹರಿಸಾಧ್ಯಾತ್ಮಿಕಾರ್ತಿ 12 ಶಕುತಿಯದ್ಭುತವಲ್ಲ ಸ್ವಾಮಿ ಬಹುದು ಸುಪ್ರೇಮಿ 13 ಪಂಡಿತಜನರು ಲೋಕದಲಿ ಪುಂಡರೀಕಾಕ್ಷ ನೀನರಿವಿ 14 ದಯೆದೋರು ಭೃಂಗಾಳಕಾಂತ ದಿನಕಾಂತ ದಯೆದೋರೊ ಬೇಗ ನಿಶ್ಚಿಂತಾ 15 ಕರಗಳ ಮುಗಿದು ಸ್ವೀಕರಿಪುದು ಬುಧುರರಿದು. 16
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು) ಪಿಡಿಯೆನ್ನ ಕೈಯ ಜಗನ್ಮಯ ಪಿಡಿಯೆನ್ನ ಕೈಯ ಪ. ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿ ದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ. ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯ ಕಾಮುಕಪರದಾರಭ್ರಾಮಕತಾಮಸ- ಧಾಮನ ಕಪಟವಿಶ್ರಾಮ ಕುಧೀಮನ ವ್ಯೋಮಕೇಶ ಭಗತ್ಪದಾಶ್ರಿತನ ಮಮಕಾರದಲಿ ಪಾಲಿಸು ಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1 ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನ ಮೆಟ್ಟಿದ ನೆಲಮುನಿಯುವನ ಕೃತಘ್ನ ಕ- ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನ ತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ- ದೃಷ್ಟಿಯಿಂದಲಿ ನೋಡು ಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2 ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನ ಅತ್ಯಂತ ಪಾಪಿ ಕುಚಿತ್ತ ಮದಾಂಧನು- ನ್ಮತ್ತ ಮಾತಂಗವಿರಕ್ತಿವಿಹೀನನ ಎತ್ತಿ ಎನ್ನತ್ತಿತ್ತ ನೋಡದೆ ಮತ್ತೆ ಕಾವ ಸಮರ್ಥರಾರೈ ಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3 ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡ ಗುಣಗಣನಿಧಿ ಲಕ್ಷ್ಮೀನಾರಾಯಣಸಖ ದಣಿಯಲೊಲ್ಲೆ ದಯಮಾಡೆನಗೀಗಲೆ ಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲ ಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ 4
--------------
ತುಪಾಕಿ ವೆಂಕಟರಮಣಾಚಾರ್ಯ