ಒಟ್ಟು 258 ಕಡೆಗಳಲ್ಲಿ , 62 ದಾಸರು , 248 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನ್ನಡ ಮಂತ್ರ ವಾಸುದೇವ ಲಕ್ಷ್ಮೀಪತಿ ಜಗಜನ್ಮಾದಿ ಕಾರಣ ನಾರಾಯಣ ನರಕಾಂತಕ ನಾರದಪ್ರಿಯ ನರಸಖನಾದ ನಾರಸಿಂಹಮೂರ್ತಿಗೆ ನಮಸ್ಕಾರಗಳು ಗೋಕುಲದರಸು ಯಾದವಶಿರೋಮಣಿಯೆನ್ನ ಬಿನ್ನಪವ ಲಾಲಿಸಿ ಕೇಳಯ್ಯ ಕೃಷ್ಣ ಕಾಮ ಕ್ರೋಧ ಮದ ಮತ್ಸರ ದುರ್ಬುದ್ಧಿ ದುರಾಚಾರ ದುರ್ವಿಷಯಗಳ ಮೋಹ ಲೋಭಗಳ ಮರೆಸಿ ಮುಂದೆ ಬಿರುದಿನಿಂದ ಭಕÀ್ತಜನ ಬಂಧು ನೀ ದಯಾಸಿಂಧು ನಾ ಬೇಡಿಕೊಂಬುವೆನು ಬಂದು ಸಜ್ಜನರಕ್ಷಕ ದುರ್ಜನಶಿಕ್ಷಕ ಅರ್ಜುನ ಸಾರಥಿಯಾದ ನಿತ್ಯ ಮುಕ್ತ ದ್ವಾರಾವತೀ ಮಧ್ವಮುನಿಗೊಲಿದಂಥ ಮೂರ್ಜಗಾಧೀಶ ಉದ್ಧಾರ ಮಾಡಯ್ಯ ಉರಗಾದ್ರಿವಾಸ ಪದ್ಮಾವತೀಕಾಂತ ಶ್ರೀ ವೆಂಕಟೇಶ ಜ್ಞಾನಭಕ್ತಿ ಘನ ವೈರಾಗ್ಯ ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ಶ್ರೇಷ್ಠವಾದ ಸಂತಾನ ಸಕÀಲಾಭೀಷ್ಟಗಳ ಕೊಡುವನೆಂದು ನಾ ಬೇಡಿಕೊಂಬುವೆನು ಬಂದು ಎನ್ನಬಾರ ಎನ್ನ ಪರಿವಾರ ನಿನ್ನಗೊಪ್ಪಿಸುವೆನು ಮನ್ಮಥನಪಿತ ಎನಗೆ ಇನ್ನು ಧರ್ಮಾರ್ಥ ಕಾಮಿತ ಫಲಗಳನು ಸನ್ಮಾನದಲಿ ಕೊಟ್ಟು ಮನ್ನಿಸಿ ನೀಡೆನಗೆ ಮಂಗಳವ ಅನುದಿನದಿ ಸುಜ್ಞಾನಿಗಳೊಡೆಯ ಸುರರಿಂದ್ವಂದಿತವಾದ ನಿನ್ನ ಪದ್ಮಪಾದಗಳಿಗೆ ಬಿದ್ದೆ ್ಹೀಳಿಕÉೂಂಬುವೆನು
--------------
ಹರಪನಹಳ್ಳಿಭೀಮವ್ವ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಪ ಕಾಲ ವಿಪರೀತದಿ ಅ ಅತ್ತೆಯ ಸೊಸೆ ಬಯ್ವಳು - ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ - ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ 1 ನಿತ್ಯ ನೇಮವು ನಿಂತಿತು - ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು 2 ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ ಕ್ರೋಧಗಳುಅನ್ಯಾಯದಿಂದ ಅರ್ಥವ ಗಳಿಸುವರುತನ್ನ ಕಾಂತನ ಬಿಟ್ಟು ಸ್ತ್ರೀಯರುಅನ್ಯರಿಗೆ ಮನವೆರಗಿ ಮೋಹಿಪರುಬಣ್ಣಗೆಟ್ಟಿತು ವರ್ಣ ತಪ್ಪಿತು ಪ್ರ-ಸನ್ನ ಶ್ರೀ ನೆಲೆಯಾದಿಕೇಶವನೆ 3
--------------
ಕನಕದಾಸ
ಕಲ್ಲು ನಾಯೇನೋ ಕೈವಲ್ಯದಾಯಕನೆ ಕಲ್ಲು ಕರುಣದಿಂದ್ಹೆಣ್ಣಾಗಿರಲುದ್ಧಾರ ಕೇಳೊ ಪ (ಉಡಬಲ್ಲೆ ಉಣಬಲ್ಲೆ) ಉತ್ತಮ ಸಂಗ ಬಿಡಬಲ್ಲೆ ನಡೆಯಬಲ್ಲೆನೋ ದುರ್ಮಾರ್ಗದಿಂದ ಕಡುಕೋಪದಿಂದ ಕಠಿಣ ಮಾತನಾಡಲು ಬಲ್ಲೆ ಕಡಲಶಯನನ್ನ ನಾಮ ನುಡಿಯಲೊಂದರಿಯೆನೊ 1 ಕಾಮಕ್ರೋಧವ ಬಲ್ಲೆ ಮತ್ಸರ ಮದ ಲೋಭ ಮೋಹ ಬಲ್ಲೆನೊ ಬಾಂಧವ ಭವದಿ ಪಾದದಿ ಭಕುತಿ ಪರಮಾದರೊಂದರಿಯೆನೊ 2 ನಿಷ್ಠುರಾಡುತ ಜನರ ನಿಂದಿಸುವುದು ಬಲ್ಲೆ ಕಷ್ಟದಾರಿದ್ರ್ಯ ಒಲ್ಲೆನ್ನಬಲ್ಲೆ ದುಷ್ಟ ಅಲ್ಪರಿಗೆ ಬಾಯ್ ತೆರೆಯಬಲ್ಲೆ ಭೀಮೇಶ- ಕಷ್ಟ ನಿನದಯ ಬೇಡಿಕೊಂಬೋದೊಂದರಿಯೆನೊ 3
--------------
ಹರಪನಹಳ್ಳಿಭೀಮವ್ವ
ಕಾಡುತಲಿಹ್ಯದು ಬೆಡಗಿನ ಕೋಡಗ ಬಡವರಿಗಳವಲ್ಲ ಪೊಡವಿಯಲಿ ಧ್ರುವ ಮಾಯದ ಮುಖವದು ಮೋಹದ ನಾಸಿಕ ಮಾಯಮಕರ ಕಿವಿಕಣ್ಣುಗಳು ಹ್ಯಾವ ಹೆಮ್ಮೆಯ ಹುಬ್ಬು ಕಪಿಕಣ್ಣಯೆವೆಗಳು ಬಾಯಿ ನಾಲಿಗೆ ಹಲ್ಲು ಬಯಕಿಗಳು 1 ಗಾತ್ರ ಸರ್ವಾಂಗವು ದುರುಳ ದುರ್ಬುದ್ಧಿಯ ಬೆರಳುಗಳು ಎರಡು ತುಟಿಗಳೆಂಬ ನಿಂದೆ ದೂಷಣಗಳು ಕೊರಳು ಕುತ್ತಿಗೆ ದುಷ್ಕರ್ಮಗಳು 2 ಹಣಿಯು ದಾಡಿಯು ಗಲ್ಲ ಪ್ರಪಂಚ ಶೋಭಿತ ಕಣ್ಣಭಾವಗಳಿವು ಚಂಚಲವು ಬಣ್ಣಬಣ್ಣದಿ ಕುಣಿದಾಡುವ ಕಪಿ ಗುಣ ಏನೆಂದ್ಹೇಳಲಿ ಕಪಿ ವಿವರಣ£ 3 ಉದರಬೆನ್ನುಗಳಿವು ಸ್ವಾರ್ಥಬುದ್ಧಿಗಳು ಮದಮತ್ಸರಗಳೆಂಬ ಕೈಗಳು ಪಾದ ಕಾಲುಗಳಿವು ಕಾಮಕ್ರೋಧಗಳು ಮೇದಿನಿಯೊಳು ಕುಣಿದಾಡುವದು 4 ಆಶಿಯೇ ಪಂಜವು ವಾಸನೆ ಬಾಲವು ಮೋಸಮೂಕರ ಗುಣಕೇಶಗಳು ಏಸು ಮಂದಿಯ ಕಪಿ ಘಾಸಿಯ ಮಾಡಿತು ಮೋಸಗೈಸಿತು ಭವಪಾಶದಲಿ 5 ಅಶನ ವ್ಯವಸನ ತೃಷಿ ಕಪಿಗಿದು ಭೂಷಣ ಮೀಸಲಾಗಿಡಿಸಿತು ಸುವಾಸದ ಹಸಗೆಡಿಸುದು ಯತಿ ಮುನಿಗಳ ತಪಸವು ಮುಸುಕಿತು ಮೋಸವು ಕಪಿಯಿಂದಲಿ 6 ಕಂಡದ್ದು ಬೇಡುತಾ ಅಂಡಲಿಯುತಿಹುದು ಮಂಡಲದೊಳು ತಾ ಕಾಡುತಲಿ ಪಿಂಡ ಬ್ರಹ್ಮಾಂಡದಿ ಲಂಭಿಸುತಿಹದು ಹಿಡದು ಬಿಡದು ಮುಷ್ಟಿಬಿರುದುಗಳು 7 ಪಂಡತನದಿ ಬಲು ಪುಂಡನಾಗಿಹದು ಹಂಡೀಗತನದಲಿ ಬಾಳುವದು ಭಂಡಿನಾ ಅಟಿಗೆ ಗಂಡಾಗಿಹುದು ಕಂಡಕಡಿಗೆ ಹರಿಡಾಡುತಲಿ 8 ಮೂಢಮಹಿಪತಿಯ ಕಾಡುವ ಕಪಿಗಿನ್ನು ಜಡಸೀದ ಗುರುಜ್ಞಾನ ಸಂಕೋಲಿಯು ಕಾಡುವ ಕಪಿಕೈಯ ಬಿಡಿಸಿದ ಗುರು ಎನ್ನ ಕಡೆಯ ಮಾಡಿದ ಬ್ರಾಹ್ಮಣ ಜನ್ಮಲಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಮ ಕ್ರೋಧವನು ಬಿಡು ತಾಮಸಗುಣವ ಸುಡು ಪ ರಾಮನಾಮ ಜಪಿಸಿ ರಾಜಯೋಗದಲ್ಲಿ ಸೇರು ಅ.ಪ ಜ್ಞಾನಭಕ್ತಿ ವೈರಾಗ್ಯವೆಂಬಾನಂದದಿ ಮಗ್ನನಾಗಿ ಹೀನದುರ್ವಿಷಯಗಳೇನು ಕೋರದಿರೆಲವೊ1 ತತ್ವೋಪದೇಶವ ತೋರು ಸಾತ್ವಿಕರೊಳಗೆ ಸೇರು ಮಾನವ ನೀ 2 ಸಿರಿ ಚರಣಗಳ ಭಜಿಸಿ ಪರಮ ಸುಖಿಯಾಗೆಲೋ 3
--------------
ಗುರುರಾಮವಿಠಲ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಸಿದ್ದೇಶಾ ಪ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ ಅಂಕುರವಿಲ್ಲಾ 1 ಸಾಧು ಜನಸಂಗ ಮಾಡೀ ನಿಜ ಬೋಧಾಮೃತ ಸವಿಯಲಿಲ್ಲಾ ವಾದ ಗುಣ ಹಿಂಗಲಿಲ್ಲಾ ಕಾಮ, ಕ್ರೋಧ ಸುಳಿಯಲಿ ಬಿದ್ದೆ2 ಪಂಥ ಪರಮಾರ್ಥದೋರೋ ಶ್ರೀ ಕಾಂತ ಗುರು ಮಹಿಪತಿ ಸುಖವ ನೀಡಬೇಕು ಸಿದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಲ ಕಳೆಯುವಿ ನಮ್ಮ ಐಕೂರಾರ್ಯರ ಸುವಾಕು ಕೇಳದೆ ಜೀವಿ ಪ ಮರುತಾಗಮ ಮರ್ಮವರಿಯದವರಿಗೆಲ್ಲಾ | ವರ ಭಾಗವತ ಗೀತಾ ಹರಿಕಥಾ ಮೃತ ತತ್ವ | ಯರಡೊಂದು ಕಾಲ ಕೃಪೆ ನೆಳಲಾಶ್ರಯಿಸದೆ 1 ಹರಿಮೂರ್ತಿ ಹರಿವ್ಯಾಪ್ತಿ ಹರಿಸತ್ಯ ಸುಚರಿತ್ರೆ | ಹರಿದಾಸರುಕ್ತಿ | ಹಿರಿದು ಕಿರಿದು ಭೇದ ನೆರೆ | ಸುರಹಸ್ಯವನರುಹಿ ಕಗ್ಗತ್ತಲೆ ಹರಿಸುವರಿವರೆ ನರ ನೀನಂಬದೆ2 ಮದಡ ಜನರಿಗೆಲ್ಲ ಪದಸುಳಾದಿಗಳನು | ಚತುರತನದಲಿಂದ | ವಿಧ ವಿಧ ವಿವರಿಸಿ | ಸದಮಲ ಸುಜ್ಞಾನ | ವದಗಿಸುವಂಥ ಈ ಬುಧರುಪದೇಶ ಮುದದಿ ಪಡೆಯದೆ 3 ಆಶೆ ಕ್ರೋಧಂಗಳ ಜಯಿಸುತ ಮನದಿಂದ ಕ್ಲೇಶಮೋದ ಸಮ ತಿಳಿದಿಹರೋ | ಯೇಸೇಸು ಕಾಲಕ್ಕೆ ಭೂಸುರೋತ್ತಮ ರಾದ | ಈ ಸುಗುಣರ ಸಹವಾಸ ದೊರೆವುದೆ 4 ಶ್ರೀ ಮುಖವಾಣಿಯು ಸಾಮಾನ್ಯವಲ್ಲವೋ ನೇಮದಿಂ ಕೇಳ್ವರ | ಶಾಮಸುಂದರ ಸುಧಾಮನಿಗೊಲಿದಂತೆ | ಪ್ರೇಮದಿಂ ಸಲಹುವ ನೀ ಮನದಲಿ ತಿಳಿ 5
--------------
ಶಾಮಸುಂದರ ವಿಠಲ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯ ಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು-ಣೇಕ್ಷಣದಲಿ ನಿರೀಕ್ಷಿಸೆಮ್ಮನು3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು- ಣೇಕ್ಷಣದಲಿ ನಿರೀಕ್ಷಿಸೆಮ್ಮನು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕುಣಿ ಕುಣಿಯಲೋ ಬಾಲಗೋಪಾಲ ಪ ಗೋಪಾಲ ನೀರದ ನೀರ ಅ.ಪ ಯಮುನಾ ತೀರದಿ ಹಿಮಕಿರಣನು ತಾ ಮಮತೆಯ ತೋರಲು ಬೆಳಗುತಿಹ ಘಮಘಮಿಸುವ ಈ ಸುಮಗಳು ಸೂಸಿರೆ ಪ್ರಮದೆಯರೆಲ್ಲರ ಪ್ರೇಮಾಂಗಣದಲಿ 1 ಗಂಧವ ಮಾರುತ ಬೀರುತಲಿರುವನು ಇಂದಿರೆ ಕೊಳಲಿನ ರೂಪದಲಿ ಚಂದದಿ ನಾದವ ತುಂಬಲು ಪರಮಾ ನಂದವು ಮಾನಸ ಮಂದಿರದಲಿ ನೀ 2 ಕಾಯವು ರೋಮಾಂಚಿತವಾಯ್ತೊ ಮಾಯಾವಾದವೊ ಮೋಹಗಳು ತಾಯಿ ಮಡಿಲು ಸೇರಿದ ಶಿಶುವಂದದಿ ಹಾಯವೆನಿಸಿತೊ ಜೀವನ ಯಾತ್ರೆಯು 3 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಬಿಡಿಸೊ ಸ್ವಾಮಿ ನಿನ್ನಯ ಪಾದಯುಗಳವೆ ಕ್ಷೇಮವೆನ್ನಿಸೊ ಸಾರಾಸಾರ ವಿವೇಕದಿ ಮೋಕ್ಷದ ಕೋರಿಕೆ ಪುಟ್ಟಿಸೊ ಭವ ಪಾರ ಸೇರಿಸೋ 4 ಸಾರದ ಕರುಣಕೆ ಕಾರಣ ಬಿಂಬದ ಮೂರುತಿ ದರುಶನವು ಭಾರತಿ ರಮಣನ ಮಂಗಳಶಾಸ್ತ್ರ ವಿಚಾರವೆ ಕಾರಣವು ಭಕುತ ಜನ ಪ್ರಸನ್ನ ಲಕುಮಿರಮಣ ಎನ್ನು ತಕಿಟ ತಕಿಟ ಎಂದು 5
--------------
ವಿದ್ಯಾಪ್ರಸನ್ನತೀರ್ಥರು
ಕೃಷ್ಣ ಕಲಿಯ ಕಾಯ್ದ ಕರುಣಿ ಜಿಷ್ಣುಸಖನೆ ಕೃಷ್ಣನೆ ಪ. ಕೃಷ್ಣ ಪೊರೆಯೊ ಎನ್ನ ವಿಷಯತೃಷ್ಣೆಯಿಂ ಸಾಯಲೆ ದಮ್ಮಯ್ಯ ಅ.ಪ. ಹಿಂದೆ ಮಾಡಿದ ಕರ್ಮದಡವಿಯೊಂದಿಗೆ ಸವರುವೆನೊ ಗೋ-ವಿಂದ ನಿನ್ನ ಕರುಣಸುಧೆ ಇನ್ನೆಂದು ಪಡೆದು ಸುಖಿಪೆನೊಇಂದು ಮಾಡಿದ ಅಘಗಳು ಬಲು ದಂದುಗಕೊಳಗಾದೆ ನೀನುಕುಂದು ಕುಜನದೂರ ನಿನ್ನ ಕಂದನೆಂದು ಸಲಹೊ ತಂದೆ1 ಕಾಮವೆನ್ನ ಕಮಲನಾಭ ಸೀಮೆಗಾಣಲಿಯ್ಯದೊ ನಿ-ಸ್ಸೀಮಮಹಿಮ ಕ್ರೋಧ ಎನ್ನ ಸಾಮವ ನಡುಗಿಸುತಿದೆಭ್ರಮಿತನಾದೆ ಬಲುಪ್ರೇಮವ ತಪ್ಪಿಸಿ ಸುರಕ್ತಾನು ಹೆ ದೈವ ಎನ್ನಆ ಮಹಾಭಯವ ನಿವಾರಿಸೊ2 ಅನುದಿನ 3
--------------
ವಾದಿರಾಜ
ಕೃಷ್ಣ ಕೃಷ್ಣ ಬಾಂಧವ ಸೃಷ್ಟ್ಯಾದಷ್ಟ ಕರ್ತ ಭವ ನಷ್ಟವಗೈಸೋದು ಅಷ್ಟರೊಳಗೆ ಹರಿ ವಿಷ್ಣು ಸರ್ವೋತ್ತಮ ಇಷ್ಟೆ ಪೇಳುವದಕೆ ನಿಷ್ಟಿಯನೀಯೊ ಪ ಈ ಸುದಿನವಾರಭ್ಯ ಕ್ಲೇಶದೊಳಗೆ ಬಿದ್ದಾ ಯಾಸ ಬಡುತಲಿದ್ದೆ ಲೇಶವಾದರು ಸುಖ ಲೇಶಗಾಣದಿರಲು ಏಸು ಜನ್ಮದ ಪುಣ್ಯ ಸೂಸಿತೋ ನಿನ್ನಯ ದರುಶನ ಲಾಭವಾಗೆ ದೇಶದೊಳಗೆ ನಿನ್ನ ದಾಸರ ದಾಸನೆನಿಸಿಕೊಂಬ ಈ ಸುಲಭ ವೊಂದಿಸನುದಿನ ದು ರಾಶೆಯ ಬಿಡಿಸೆಂದು ನಾಶರಹಿತ ಗುಣರಾಶಿ ರಮೇಶ 1 ವೇದಪರಾಯಣ ಸಾಧುಗಳರಸಾ ವಿ ನೋದಿಗಾ ಪಳ್ಳಿಗನೆ ಆದಿದೈವವೆ ತೀರ್ಥ ಪಾದ ಜಗತ್ಯೆಂತ ಭೇದಾ ಶೃಂಗಾರ ವೇಣು ನಾದ ಸನಕಾದಿ ಮುನಿವಂದಿತಾ ಮಾಧವ ಮಹಿಧರ ಯಾದವ ಕರುಣ ಪ ಯೋಧದಿ ಎನ್ನಪರಾಧವನೆಣಿಸದೆ ಸಾಧನ ಕೆಡಿಸುವ ಕ್ರೋಧವ ಬಿಡಿಸಾರಾಧನೆ ತಿಳಿಯದು ಭೂದೇವರೊಡಿಯಾ 2 ಕರವಾ ಬಿಡದಿರೆನ್ನ ಕರಣ ಶುದ್ಧವ ಮಾಡು ಕರದ ಮಾತಿಗೆ ಭಯಂಕರವ ಓಡಿಸಿ ಮಂದ ಕರಿಯ ಕಾಯಿದ ಶುಭಕರ ಕಾಳಿ ಮಥನ ಸಂ ನಿತ್ಯ ಕರ ಪತಿ ಕುಲ ರತುನಾ ಕರಕೆ ಉಡುಪ ಮಕರಧ್ವಜಪಿತ ತೋರಿಸೊ ಭಜಕರರೊಳಗಿಡುವುದು 3
--------------
ವಿಜಯದಾಸ
ಕೆರೆಯನು ದಾಟಲು ಅರಿಯದ ಜನ ಭವ ಶರಧಿಯ ದಾಟುವರೇ ಶ್ರೀ ನರಹರೆ ಪ ಕರವ ಪಿಡಿಯದಿರೆ ತೊರೆಯ ಸೇರಲಳವೆ ಈ ಧರೆಯೊಳು ಅ.ಪ ಹಲವು ಜನ್ಮಗಳಲಿ ಗಳಿಸಿದ ಅಘಗಳ ಅಲೆಗಳೊಳಗೆ ಸಿಲುಕಿ ಸಂತತ ಮುಳುಗಿ ಮುಳುಗುತ ಕಟುಜಲಗಳ ಕುಡಿಯುತ ನಳಿನನಾಭ ನಿನ್ನೊಲಮೆಯಿಂದಲ್ಲದೆ1 ಕಾಮ ಕ್ರೋಧ ಮದ ಲೋಭ ಮೋಹ ಮತ್ಸರಗಳೆಂಬ ವಿವಿಧ ಜಲಚರ ನಕ್ರ ತಿಮಿಂಗಿಲವಿರಲಾಗಿ ಕಾಮಜನಕ ನಿನ್ನ ಪ್ರೇಮವÀ ಪೊಂದದೆ 2 ಚೂರ್ಣಗಳಾದುವು ವಿವಿಧ ನಾವೆಗಳೀ ಅರ್ಣವದಲಿ ಸಿಲುಕಿ ಸುಲಭದಿ ಪೂರ್ಣ ಪ್ರಮತಿಗಳ ಮತವನರಿತು ಇನ್ನ ಪೂರ್ಣ ಪ್ರಸನ್ನತೆ ನಾವೆಯಿಂದಲ್ಲವೆ 3
--------------
ವಿದ್ಯಾಪ್ರಸನ್ನತೀರ್ಥರು