ಒಟ್ಟು 536 ಕಡೆಗಳಲ್ಲಿ , 47 ದಾಸರು , 437 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ನಿನಗೆ ಧರ್ಮವೇ ಇಂದಿರೇಶ ಬದಿಗ ನೀನಾಗಿದ್ದು ಭೀತಿ ಪಡಿಸುವುದು ಪ ನಿನ್ನ ಗುಣಗಳ ತುತಿಸಿ ನಿನ್ನನ್ನೇ ಹಾರೈಸಿ ನಿನ್ನವರ ಪ್ರೀತಿಯನು ಸಂಪಾದಿಸಿ ಅನ್ಯರನು ಲೆಕ್ಕಿಸದೆ ಚೆನ್ನಾಗಿ ಬಾಳುವ ಮಾನ್ನವರನ ಈ ಪರಿಯ ಬನ್ನಬಡಿಸುವುದು 1 ದುರುಳನಲ್ಲವೊ ನಿನ್ನ ಚರಣ ಸೇವಕರವನೊ ಪರಿಪಾಲಿಸುವುದು ನಿನ್ನ ಪರಮ ಧರ್ಮ ಗುರುಗಳಂತರ್ಯಾಮಿ ಕರಮುಗಿದು ಬಿನ್ನೈಪೆ ಶರಣ ರಕ್ಷಕನೆಂಬೊ ಬಿರಿದು ಸುಳ್ಳಾಗುತಿದೆ 2 ಶೋಕನಾಶಕ ವಿಗತಶೋಕನೆಂಬೋ ನಾಮ ನಾ ಕೇಳಿ ಮೊರೆಹೊಕ್ಕೆ ಲೋಕಬಂಧು ನಿ ರಾಕರಿಸದೆಮ್ಮ ನೀ ಸಾಕಬೇಕನುದಿನವು ವಾಕು ಮನ್ನಿಪುದು ಲೋಕೈಕ ರಕ್ಷಾಮಣಿಯೆ 3 ಗುಣವೆ ನಿನಗಿದು ಬರಿದೆ ದಣಿಸುವುದು ಶರಣರನು ಪ್ರಣತಾರ್ತಿಹರ ವಿಭೀಷಣ ಪಾಲಕ ಕ್ಷಣಕನಂತಪರಾಧವೆಣಿಸುವರೆ ಕಡೆಯುಂಟೆ ಮಣಿದು ಬಿನ್ನಹ ಮಾಳ್ಪೆ ದನುಜದಲ್ಲಣನೆ 4 ನಮೋ ನಮೋ ಬ್ರಹ್ಮಣ್ಯ ದೇವರ ದೇವ ದುರಿತ ನಮೋ ನಮೋ ಕಾರುಣ್ಯ ಶೀಲ ಸಜ್ಜನ ಪಾಲಾ ನಮೋ ನಮೋ ಜಗನ್ನಾಥವಿಠಲ ವಿಖ್ಯಾತ 5
--------------
ಜಗನ್ನಾಥದಾಸರು
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇನ್ನೇನು ಭಯವಿಲ್ಲನಿನಗೆ ಪಾದ ಭಜಿಸೊ ಮನದೊಳಗೆ ಪ ಬನ್ನಗೊಳಿಸುವಾ ವ್ಯಾಧಿ ಮುನ್ನೆ ಬಾರದೋ ಮಗುವೇ ಅ.ಪ ಕರ್ಮ ಶೇಷದಲಿಂದ ಈ ವಿಧದ ವ್ಯಾಧಿ ಸಂಭವಿಸಿತಲ್ಲಾ ಪಾದ ಸೇವೆ ಸತ್ಕಾರದಿಂದಲೇ ತಾವಕÀನು ನೀನೆಂದು ಗುರುರಾಯ ಪೊರೆವಾ 1 ಏನು ಕರುಣವೊ ಗುರುವರಗೆ ನಿನ್ನಲಿ ನೀನೇನು ಧನ್ಯನೋ ಈ ಲೋಕದಲ್ಲೀ ದೀನಭಾವವನೋಡಿ ದೀನವತ್ಸಲಬಂದು ತಾನೆ ಕರುಣದಿ ಪೊರೆದಮೇಲೇ2 ಅರಿಯದಿಹ ನರರಿಗಾಶ್ಚರ್ಯ ತೋರಲೋಸುಗದಿ ಮರೆಯದಂತೆ ಮನಕೆ ಕುರುಹು ಮಾಡಿ ಧರೆಯೊಳಗೀ ಗುರುವರಗೆ ಸರಿಯಿಲ್ಲ ಗುರುಜಗನ್ನಾಥ ವಿಠಲ ತಾನೇ ಬಲ್ಲಾ 3
--------------
ಗುರುಜಗನ್ನಾಥದಾಸರು
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈತನೆ ಗತಿಯೆಂದು ನಂಬಿದೆನೆ ನಾ ನೀತನಂಥ ನಿಷ್ಕರುಣನ ಕಾಣೆ ಪಾತಕಹರ ಅ ನಾಥರಕ್ಷಕ ಮಹದಾತ ಪರಮಭಕ್ತ ಪ್ರೀತನೆಂಬುದ ಕೇಳಿ ಪ ಮರುಳಾಗಿವನ ಬೆನ್ಹತ್ತಿದೆನೆ ಮನೆ ಮಾರುಗಳೆಲ್ಲವ ತೊರೆದೆನೆ ಕರುಣವಿಲ್ಲ ತುಸು ಹೊರಳಿ ನೋಡುವಲ್ಲ ತಿರುತಿರುಗಿ ಮನಕರಗಿ ಸಾಕಾಯಿತು 1 ಜಾತಿಹೀನನೆಂಬುವೆನೇನೆ ಲೋಕ ನಾಥನಿಗೆ ಕುಲ ಅದೇನೆ ಈತನ ಹೊರ್ತು ಮತ್ತಾರಾಸೆನಗಿಲ್ಲ ನೀತಿಯೆ ಈತಗೆ ಜಾತಿಭೇದವೆಂಬ 2 ಹೊಲೆಯರ ಮನೆಯಲ್ಲುಂಡನೆ ಇವ ಗೊಲ್ಲರ ಕುಲದಲ್ಹುಟ್ಟಿದನೆ ಗೊಲ್ಲರ ನಲ್ಲೆಯರಲ್ಲಿ ಹೋಗಿ ಈತ ಗುಲ್ಲುಮಾಡಿ ಬೆಣ್ಣೆಗಳ್ಳನೆನಿಸಿಕೊಂಡ 3 ಪಾತರದವಳಲ್ಲಿಗ್ಹೋದನೆ ತಾ ನೀತಿವಂತನ ಕಟ್ಟೊಡ್ಹೆಸಿದನೆ ನೀತಿವಂತರು ಕೇಳಿರೀತನ ರೀತಿಯ ದಾತ ಜಗನ್ನಾಥ 4 ನಿಲ್ಲದು ಮನ ಘಳಿಗಿವನಲಿ ನಾ ಸಲ್ಲದ್ಹಾಂಗ್ಹೋದೆ ಮತ್ತೆಲ್ಲ್ಹೋಗಲಿ ಬಲ್ಲಿದ ಶ್ರೀರಾಮನೆಲ್ಲ್ಹೋದರು ಬಿಡೆ ಕಲ್ಲೆದೆಯವಗಾಗಿ ಪ್ರಾಣಹೋಗಲಿನ್ನು 5
--------------
ರಾಮದಾಸರು
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂಥಾದಯವಂತನೋ ಸಂತಾರನಾಥನೋ ಪ ಕಂತೂ ಜನಕಾನ ಪ್ರಿಯ್ಯಾನೋ ಆ - ನಂತಾ ನಂತಾ ಮಹಿಮನೋ ಅ.ಪ ರಮ್ಯಾ ಗುಣಾ ಪೂರ್ಣನೋ - ಆ - ಗಮ್ಯಾ ಸಚ್ಚರಿತಾನೋ ನಮ್ಯಾನತರಾ ಪೊರೆವಾನೋ - ಈತ ನಮ್ಯಲ್ಲಾರ ಸಲಹೋನೋ 1 ಪ್ರಾಣಾವೇಶಾಯುತನೋ - ಜಗ - ತ್ರಾಣಾ ತಾನಾಗಿಹನೋ ಕ್ಷ್ಯೋಣೀಯೋಳ್ವಿಖÁ್ಯತಾನೋ - ಎನ್ನ ಪ್ರಾಣಾUಳಿಗೆ ನಾಥನೋ 2 ಕರುಣಾಶಾಲಿ ಎನಿಪಾನೋ - ತನ್ನ ಚರಣಾ ಸೇವಾ ನೀಡುವನೋ ಶರಣಾಬ್ಜ - ತರಣೀ ಸÀಮನೋ - ಅಂತಃ ಕರಣಾದಲ್ಲಿರುವಾನೋ 3 ಜನನೀ ಜನಕಾರೆನಿಪನೋ - ಸಕಲ ಜನರೀಗೆ ಸಮ್ಮತನೋ ಜನುಮಾ ಜನುಮದಲೀತನೋ - ನಿಶ್ಚಯ ಎನಗೆ ತಾತನೋ 4 ಭೂತಾಳದೊಳು ವಿಖ್ಯಾತನೋ ನಿಜ - ದಾತಾ ಜನರಿಗೆ ಪ್ರೀತನೋ ನೀತಾ ಗುರು ಜಗನ್ನಾಥಾ ವಿಠಲ - ಪ್ರೀತಿಯ ತಾಪೊಂದಿಹನೋ 5
--------------
ಗುರುಜಗನ್ನಾಥದಾಸರು
ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎದ್ದು ಬರುತಾರೆ ನೋಡೆ ತಾ - ವೆದ್ದು ಬರುತಾರೆ ನೋಡೆ ಪ ಮುದ್ದು ಬೃಂದಾವನ ಮಧ್ಯದೊಳಗಿದ್ದು ತಿದ್ದಿ ಹಚ್ಚಿದ ನಾಮ - ಮುದ್ರೆಗಳೊಪ್ಪುತೀಗ ಅ.ಪ ಗಳದೊಳು ಶ್ರೀ ತುಳಸಿ ನಳಿನಾಕ್ಷಿ ಮಾಲೆಯು ಚಲುವ ಮುಖದೊಳು ಪೊಳೆವೊ ದಂತಗಳಿಂದ 1 ಹೃದಯ ಸದನದಲ್ಲಿ ಪದುಮನಾಭನ ಭಜಿಸಿ ನಿತ್ಯ ಸದಮಲ ರೂಪತಾಳಿ 2 ದಾತ ಗುರು ಜಗನ್ನಾಥವಿಠಲನ್ನ ಪ್ರೀತಿಯ ಬಡಿಸುತ ದೂತರ ಪೊರೆಯುತ 3
--------------
ಗುರುಜಗನ್ನಾಥದಾಸರು
ಎಲ್ಲಿ ಪೋದ ಶಿರಿನಲ್ಲತಾ ನೆಲ್ಲಿ ಪೋದ ಶಿರಿನಲ್ಲ ಪ ಎಲ್ಲಿ ಪೋದ ಪದಪಲ್ಲವಭಜಿಪರ ನಲ್ಲೆ ಬಿಟ್ಟು ಪರನಲ್ಲೇರಿಗೊಲಿದು ತಾ ಅ.ಪ ಸತಿ ಸುತ ಮುನಿಕಿಂತತಿಹಿತ ಪ್ರೀಯರು ಮತಿವಂತರೆ ಎನಗತಿ ಎಂಬುವ ತಾ 1 ಸಕಲಭಾಗ್ಯ ಪರಸುಖವೆಂಬುವ ತಾ 2 ಕಟ್ಟು ಕಾವಲಿ ಪರರಟ್ಟುಳಿ ಇಲ್ಲವೊ ಬಿಟ್ಟರೆ ಭಕುತರು ಕಟ್ಟೋರು ಎಂಬುವ 3 ಎಲ್ಲಿರಿಗತಿ ನಾ ಬಲ್ಲಿದ ಎನಪಾದ ಪಲ್ಲವ ಭಜಕರು ಬಲ್ಲಿದರೆಂಬುವ 4 ದಾತಗುರು ಜಗನ್ನಾಥವಿಠಲ ನೀ ರೀತಿಯ ಪೇಳಿದ ದೂತ ಪಾಲಕ ತಾ 5
--------------
ಗುರುಜಗನ್ನಾಥದಾಸರು
ಏಸೇಸು ಕÀಲ್ಪ್ಪಕ್ಕು ಈಶನು ನೀನಯ್ಯಾ ಆಸಾಸು ಕಲ್ಪಕ್ಕು ದಾಸನು ಇವನಯ್ಯಾ ಉದಾಸೀನ ಮಾಡದೆ ಪೋಷಿಸಬೇಕಯ್ಯ ವಾಸನ ನೀ ಮಾಡಿ ವಾಸನ ಮಯರೂಪÀ ಸೋಸಿಲಿ ತೋರಿಸಿ ದಾಸನ ಮಾಡಿಕೊ ಆಸೆ ಬಿಡಿಸಿ ವಿಶೇಷ ಭಕುತಿ ಜ್ಞಾನ ಲೇಸಾಗಿ ನೀನಿತ್ತು ಶ್ರೀಶಗುರು ಜಗನ್ನಾಥ ವಿಠಲ ವರ- ಪರಿ ಪರಿ ದೇಶದಲ್ಲಿ ಮೆರಿಸಿ ಆಶೆಯ ಪೂರ್ತಿಸು ವಾಸವನನುಜಾ
--------------
ವರದೇಶವಿಠಲ
ಏಳು ಪೀಠಕೇ ನಳಿನದಳಾಂಬಕೇ ಜಗನ್ನುತೆ ಪ. ಬಾಲೇಂದುನಿಭ ಫಾ¯ ಶ್ರಿತಪರಿಪಾಲೇ ಕೋಮಲೇ ಅ.ಪ ಕುಂದರದನೆ ಮಂದಗಾಮಿನೀ ವಂದಿತಾಮರ ವೃಂದಾರ ವೃಂದಾನಂದಪ್ರದೇ 1 ತೋರಮುತ್ತಿನ ಚಾರುಪೀಠಕೆ ಸಾರಿಬಾ ವರ ಸಾರಸಾನನೇ ನಾರೀಮಣಿಯರೆ ಸಾರಿಕರುವರು ಮೀರಿದಾನಂದದಿಂದ 2 ಶೇಷಶೈಲ ನಿವಾಸಿನೀ ನತ ಪೋಷಿಣೀ ಜಯಶ್ರೀ ರಮಾಮಣಿ ಯಾಸಾ ಸಾರಸನೇತ್ರೇ ಕಮಲಾವಾಸೇ ದಯೆತೋರಿಸೇ 3
--------------
ನಂಜನಗೂಡು ತಿರುಮಲಾಂಬಾ
ಏಳುಪೀಠಕೆ ನಳಿನಸಂಭವೆ ಜಗನ್ನುತೆ ಪ ಬಾಲೇಂದು ನಿಭಫಾಲೆ ಶ್ರೀತಪರಿಪಾಲೆ ಕೋಮಲೆ ಅ.ಪ. ಸಿಂಧುನಂದನೆ ಇಂದುಸೋದರಿ ಕುಂದರದನೆ ಮಂದಗಾಮಿನಿ ವಂದಿತಾಖಿಲವೃಂದಾರಕ ವೃಂದಾನಂದಪ್ರದೆ 1 ತೋರಮುತ್ತಿನ ಚಾರುಪೀಠಕೆ ಸಾರುಬೇಗನೆ ಸಾರಸಾನನೆ ನಾರೀರನ್ನೆಯರು ಸಾರಿಕರೆವರು ಮೀರದಾನಂದದಿಂ 2 ಶೇಷಶೈಲನಿವಾಸಿನೀ ನತಪೋಷದಾಯಿನಿ ಶ್ರೀರಮಾಮಣಿ ಯಾಸಾಸಾರಸನೇತ್ರೆ ಕಮಲಾವಾಸೇ ದಯೆತೋರಿಸೆ 3
--------------
ನಂಜನಗೂಡು ತಿರುಮಲಾಂಬಾ