ಒಟ್ಟು 87 ಕಡೆಗಳಲ್ಲಿ , 32 ದಾಸರು , 85 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೇಮವಿಲ್ಲದ ಹೋಮವೇತಕೆರಾಮನಾಮವಿರದ ಮಂತ್ರವೇತಕೆ ಪ ನೀರ ಮುಣುಗಲು ಏಕೆ ನಾರಿಯಳ ಬಿಡಲೇಕೆವಾರಕೊಂದುಪವಾಸ ಮಾಡಲೇಕೆನಾರಸಿಂಹನ ದಿವ್ಯನಾಮವನು ನೆನೆದರೆಘೋರ ಪಾತಕವೆಲ್ಲ ತೊಲಗಿ ಹೋಗುವುದು 1 ಅಂಬರವ ತೊರೆಯಲೇಕೆ ತಾಂಬೂಲ ಬಿಡಲೇಕೆಡಂಭಕದ ವೃತ್ತಿಯಲಿ ಇರಲೇತಕೆಅಂಬುಜನಾಭನನು ಭಾವದಲಿ ನೆನೆದರೆಇಂಬುಂಟು ವೈಕುಂಠವೆಂಬ ಪುರದೊಳಗೆ 2 ಬಂಧದೊಳಗೆ ಬಿದ್ದು ಹರಿಯನೆ ನೆನೆಯುತಿರೆಬೆಂದು ಹೋಗುವುವು ದುರಿತಂಗಳೆಲ್ಲಬಂದ ದುಃಖಗಳೆಲ್ಲ ನಿಲ್ಲದಲೆ ಕಳೆಯುವವುಚೆಂದಾಗಿ ನೆಲೆಯಾದಿಕೇಶವನ ನೆನೆಯೆ3
--------------
ಕನಕದಾಸ
ಪಡಕೋ ನೀನ್ಹಿಡಕೋ ರಂಗ ಶಾಯಿನಾಮವ ಕಡಕೋ ನೀ ದುಡಕೋ ನಿಖಿಲೇಶನ ಪ್ರೇಮ ಪ ಜನಮೆಚ್ಚಿ ವಂದಿಸಲು ನಿನಗೆ ಬಂದದ್ದೇನೋ ಜನದೂಷಿಸಳಿದರೆ ನಿನಗೆ ಕುಂದೇನೋ ಮನಮೆಚ್ಚಿ ನಡೆದು ಬಿಡದನುದಿನದಿ ಗಳಿಸುವಿ ನೀ ಚಿನುಮಯ ಮನುಮುನಿವಿನಮಿತರ ಧ್ಯಾನ 1 ಅಹುದೆಂದು ಇಹ್ಯದವರು ಭವಬಂಧ ತೊಲಗಿಪರೆ ಸಹಿಸದೆ ಅಲ್ಲೆಂದು ಭವಕೆ ನೂಕುವರೆ ಕುಹುಕಿಗಳ ಎದೆಮೆಟ್ಟೆ ಸಹಿಸಿಬಂದ ನಿಂದೆಗಳ ಪಡಿ ದೃಢದಿ ಅಹಿಶಾಯೆ ಅಡಿಭಕ್ತಿ 2 ದೂಷಣ ಭೂಷಣನುಮೇಷ ಸಮಭಾವಿಸಿ ನಾಶನೆನಿಸುವ ಜಗದ ವಾಸನೆಯ ಕಡಿದು ದಾಸಜನರೊಡೆಯ ಮಮಶ್ರೀಶ ಶ್ರೀರಾಮನಡಿ ಧ್ಯಾಸದೊಳಗಿಟ್ಟುಪಡಿ ಲೇಸೆನಿಪ ಮುಕ್ತಿ 3
--------------
ರಾಮದಾಸರು
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪಾದ ಮುಖ್ಯ ಪ್ರಾಣ ನಂಬಿದೆ ನಿನ್ನಯ ಪಾದ* ಪ ನಂಬಿದೆ ನಿನ್ನಯ ಪಾದಾಡಂಬರ ತೊಲಗಿಸಿಡಿಂಬದೊಳಗೆ ಹರಿಯ ಬಿಂಬ ಮೊಳೆವಂತೆ ಮಾಡೋ ಅ.ಪ. ಇಪ್ಪತ್ತು ಒಂದು ಸಾವಿರ ಐದೊಂದು ನೂರು ಅಪ್ರತಿ ಹಂಸಮಂತರ ತಪ್ಪದೆ ದಿನದಿನ ಒಪ್ಪದಿಂದಲಿ ಜಪಿಸಿತಪ್ಪಿಸೋ ಭವವ ಸಮೀಪದ ಜೀವಗೆ ||ಅಪ್ಪನಂದದಿ ಪುಣ್ಯವಪ್ಪಂತೆ ಕರುಣಿಸೊಕಪ್ಪು ವರ್ಣನ ಕೂಡೊಪ್ಪಿಸಿ ಪಾಲಿಸೊ 1 ಸೂತ್ರ ಮಾರುತಉತ್ತರ ಲಾಲಿಸೋ ಉತ್ಕøಮಣದಲ್ಲಿನೆತ್ತಿಯ ದ್ವಾರದಿಂದಲೆತ್ತ ಪೋಗಲೀಸದೆ ||ತತ್ತುವರೊಳು ಜೀವೋತ್ತಮನೆ ಸತ್-ಚಿತ್ತೆನಗೆ ಕೊಡು ಉತ್ತರ ಧರಿಸೊ (ಲಾಲಿಸೋ) 2 ಕಂತು ಜನಕನಲ್ಲಿಮಂತ್ರಿಯೆನಿಸಿ ಸರ್ವರಂತರ್ಯಾಮಿ ಆಗಿ ||ನಿಂತು ನಾನಾ ಬಗೆ ತಂತು ನಡಿಸುವ ಹಂತಕಾರಿ ಗುಣವಂತ ಬಲಾಢ್ಯ 3 ಕಾಯ ಪರಮೇಷ್ಠಿ ಸಂಚಿತಾಗಾಮಿ ಓಡಿಸಿಕೊಂಚ ಮಾಡೋ ಪ್ರಾರಬ್ಧ ವಂಚನೆಗೈಸದೆ ||ಅಂಚಂಚಿಗೆ ಪರಪಂಚವ ಓಡಿಸಿ ಪಂಚವಕ್ತ್ರ ಹರಿಮಂಚದ ಗುರುವೆ 4 ಜಾಗರ ಮೂರುತಿ 5
--------------
ಗುರುವಿಜಯವಿಠ್ಠಲರು
ಪಾದ ಮುಖ್ಯ ಪ್ರಾಣಾ ನಂಬಿದೇ ನಿನ್ನಯ ಪಾದಾ ಡಂಬರ ತೊಲಗಿಸಿ ಡಿಂಬದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ಪ ಇಪ್ಪತ್ತು ಒಂದು ಸಾವಿರ ಐದೊಂದು ನೂರು ಅಪ್ರತಿಹಂಸಮಂತ್ರ ತಪ್ಪದೆ ದಿನದಿನ ಒಪ್ಪದಿಂದಲಿ ಭಜಿಸಿ ತಪ್ಪಿಸೋ ಭವವಾ ಸ ಮೀಪದ ಜೀವ ಕೊ ಅಪ್ಪನಂದದಿ ಪುಣ್ಯ ವಪ್ಪಂತೆ ಕರುಣಿಸೊ ಕಪ್ಪುವರ್ಣನ ಕೂಡಪ್ಪಿಸಿ ಪಾಲಿಸೋ 1 ಹತ್ತೇಳು ಎರಡಾಯುತ ನಾಡಿಯೊಳು ಉತ್ತರÀ ಪಾಲಿಸೋ ಉತ್ಕ್ರಮಣದಲ್ಲಿ ನೆತ್ತಿಯದ್ವಾರದಿಂದ ಎತ್ತಮರಿಯಲೀ ಸದದೆ ತತ್ತುವರೊಳು ಜೀವೋ ತ್ತಮನೆ ಸತ್ ಚಿತ್ ಎನಗೆ ಕೊಡು ಉತ್ತರ ಧರಿಸೋ 2 ಅಂತರಂಗದಿ ಉಸುರಾ ಹೊರಗೆ ಬಿಟ್ಟು ಅಂತರಂಗಕ್ಕೆ ಸೇರುವ ಪಂಥದೊಳು ನೀನೆ ನಿಂತು ನಾನಾಬಗೆ ತಂತು ನಡಿಸುವ ಹೊಂತಕಾರಿ ಗುಣವಂತ ಬಲಾಢ್ಯ 3 ಪಂಚಪರಣ ರೂಪನೆ ಸತ್ವ ಕಾಯಾ ಪಂಚೇಂದ್ರಿಯಗಳ ಲೋಪನೆ ಪರಮೇಷ್ಟಿ ಸಂಚಿತಾಗಾಮಿ ಬಿಡಿಸಿ ಕೊಂಚ ಮಾಡೋ ಪ್ರಾರಬ್ಧ ವಂಚನೆ ನೆನೆದೊ ಅಂಚಗಂಚಿಗೆ ಪರಪಂಚವೆ ಓಡಿಸಿ ಪಂಚವಕ್ತ್ರ ಹರಿ ಮಂಚದ ಗುರುವೇ 4 ಯೋಗಾಸನದೊಳಿಪ್ಪ ಯಂತ್ರೋದ್ಧಾರಾ ಭಾಗವತರಪ್ಪಾ ಯೋಗಿಗಳೀಶಾ ವ್ಯಾಸಾ ಯೋಗಿಗೊಲಿದ ವ್ಯಾಸಾ ಶ್ರೀ ತುಂಗಭದ್ರಾ ವಾಸಾ ಬಾಗುವೆ ಕೊಡು ಲೇಸಾ ಜಾಗರ ಮೂರುತಿ5
--------------
ವಿಜಯದಾಸ
ಪೊಡೆದಾ ದೈವವೇ | ಅವರೆ ಕುಸುಮ ವಿರಚೇ ಶಿವ ದೀಪದಿಂವೆಗ್ಗಳವೇನೊ ನಿನಗೆ | 1 ಶಿರವನೆ ತರಿಸಿ ತೊಲಗಿದ ಪದಾರ್ಥದಿಂದೇನಯ್ಯಾ | ಹಂಸ ಕು ಬೇರ ನಿನ್ನವರಾಗಿದೆ | ಬರಿದೆಯಲಾ ಯೆನ್ನ ಸುವರ್ಣ ಪುಷ್ಪವೆ | ಪರಿಪರಿಗಾಯನ ನಾರದಾದ್ಯರು ಪಾಡೆ ಪೊಗಳಬಲ್ಲನೆ ನಿನ್ನನಗಣಿತ ಸ್ತೋ ನಿನಗೆರಗಿ ಕೈಮುಗಿವೆನೊ ತರಳತನದಲ್ಲಿ ನಾನು2
--------------
ವಿಜಯದಾಸ
ಬಿಡಬೇಡೋ ರಂಗಾ ಬಿಡಬೇಡೋಕಡುಮೋಹಕದ ಕೊಳಲನೂದುವದನು ಪ ಬಿಡುವೆಯಾದರೆ ಮನಕಡು ತವಕದೊಳುತಡವರಿಸುವುದೊಲೆಡೆಯನು ನೋಡೋ ಅ.ಪ. ಕಿವಿಯೊಳು ನಾದವು ಅಮೃತವ ಸುರಿಯೆಸವಿಯುಣ್ಣುತಲೀ ಮನ ಮೈಮುರಿಯೆತಳಮಳಿಸುವದು ನಡುವೆ ನಿನಗಿದು ಸರಿಯೆಹೊರಗಿನ ಭಾವದ ಪವಣವನರಿಯೆ 1 ಕೊಳಲನೂದುತಿರಲಾನಂದೊಳುಮುಳುಗಿರಲಾಗ ಕಣ್ಣಮುಂದಸುಳಿದಾಡುವ ನಿನ್ನ ಮೂರುತಿ ಚಂದತೊಲಗಿ ಪೋಗುವದೊ ಗೋಪಿಯ ಕಂದ 2 ಮಧುರವೋ ನಿನ್ನ ಕೊಳಲು ಗಾಯನಇದರೊಳಿಲ್ಲವೊ ಲವ ಅನುಮಾನಮೊದಲು ಮುರಳಿಯ ಹಿಡಿಹಿಡಿ ಜಾಣಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಬಿಡಿಸೊ ಬಂಧನ ಕ್ಲೇಶವ ಬಿಗಿಯುತಲಿದೆ ಪ ನಾನು ಬಿಟ್ಟರು ಎನ್ನ ಕಂಬಳಿ ಬಿಡದಿದೆ ಅ.ಪ ಎಲ್ಲವ ಬಿಟ್ಟು ನಾ ಬಂದೆನೆಂದರಿತೆನೊ ಎಲ್ಲವು ಎನ್ನನು ಬಿಡಲಿಲ್ಲವೊ ಕಲ್ಲು ಎದೆಯ ಪೊತ್ತ ಮಲ್ಲನೆಂದರಿತೆನೊ ಹುಲ್ಲೆಯ ಮರಿಯಂತೆ ನಡುಗುವಂತಾಯಿತೊ 1 ಮಿಕ್ಕ ವಿಷಯಗಳ ಬೇಡ ಬೇಡೆನ್ನುತ ಹೊಕ್ಕರು ಮೂಲೆ ಮೂಲೆಗಳನ್ನು ದಿಕ್ಕು ದಿಕ್ಕುಗಳಿಂದ ಸೆಳೆಯುತಲಿರುವುದು ಅಕ್ಕರೆ ತೊಲಗಿತು ಶುಷ್ಕವಾಯಿತು ಮನವು 2 ಲೋಕ ರಕ್ಷಕನು ನೀನೆಂಬುದನರಿತರು ವ್ಯಾಕುಲವೇತಕೆ ಪ್ರತಿ ಕ್ಷಣವು ತಾ ಕಾಣದ ನರ ವರವÀ ಕೊಡಲುಬಹುದೆ ಏಕಾಂತ ಭಕುತ ಪ್ರಸನ್ನನೆ ಕರುಣದಿ 3
--------------
ವಿದ್ಯಾಪ್ರಸನ್ನತೀರ್ಥರು
ಭಕುತೋದ್ಧಾರ ಪರಿಭವದ್ವೈದ್ಯ ನಿಖಿಲಬ್ರಹ್ಮಾಂಡ ಸುಸೂತ್ರ ಸಿರಿಬಾಧ್ಯ ನಿಖಿಲವ್ಯಾಪಕ ನಿಖಿಲರಕ್ಷ ಭಕುತರಾತ್ಮಕ ಭಕುತಪಕ್ಷ ಪ್ರಕಟರಕ್ಕಸಕುಲ ನಿರ್ಮೂಲನೆ ಮುಕುಟಮಾನಸ ಮನದಿ ಭಜಿಪರ ಮುಕುತಿದಾಯಕ ಮಣಿವೆನೈ ಮಹ ಮುಕುತಿಸಂಪದ ಕರುಣಿಸಭವ ಪ ಕಲ್ಪನೆಯಿಂದೊಂದೆತ್ರಯವೆನಿಸಿ ಕಲ್ಪ ಕಲಿಸಿ ಕಲ್ಪನೆಯಿಂದ ನಾಲ್ಕುಘೋಷ ರಚಿಸಿ ಕಲ್ಪನಿಲ್ಲದೆ ಕಲ್ಪಕಲ್ಪದರರ್ಹೊಗಳಿಸಿ ಕಲ್ಪಿತದಿ ನೆಲಸಿ ಕಲ್ಪಿತದಿ ಸಂಕಲ್ಪ ತೋರಿಸಿ ಕಲ್ಪಿತದಿಂ ಸಂಕಲ್ಪ ಮುಳುಗಿಸಿ ಕಲ್ಪ ಕಲ್ಪಾಂತರದಿ ಉದಿಸಿ ಕಲ್ಪತಕೆ ನೀ ಬೇರೆಯೆನಿಸಿ ಕಲ್ಪನದೊಳು ಕಲ್ಪ ಕೂಡಿಸಿ ಕಲ್ಪನಕೆ ಮಹಪ್ರಳಯವೆನಿಸಿ ಕಲ್ಪನೆಯನು ಮತ್ತು ತಿರುಗಿಸಿ ಕಲ್ಪಿಸಿದಿ ಪುನ:ಸಫಲವೆನಿಸಿ ಕಲ್ಪನೆಯನು ಪೊಗಳಲಿನ್ನಾವ ಕಲ್ಪನಕೆ ತುಸು ಶಕ್ಯವಲ್ಲವು ಕಲ್ಪ ಕಲ್ಪಾಂತರದಿ ಎನ್ನನು ಕಲ್ಪಿಸದಿರು ಕಲ್ಪತರುವೆ 1 ಕಲ್ಪಿಸಿದೆ ಕೋಟಿ ತ್ರಿದಶತ್ರಯೆನಿಸಿ ಕಲ್ಪ ಕಲ್ಪಕೆ ಕಲ್ಪಿತೀಯುವ ಮಂತ್ರ ಕಲ್ಪಿಸಿ ಕಲ್ಪಿಸಿದಿಯೊ ಕಲ್ಪ ಕಲ್ಪದಿ ಐದು ಮೇಲೆನಿಸಿ ಕಲ್ಪಸಾರೆನಿಸಿ ಕಲ್ಪನೆ ಮಹತಾರಕೆನಿಸಿ ಕಲ್ಪನೆ ಘನಗಾಯತ್ರೆನಿಸಿ ಕಲ್ಪನೆಯಲಿ ಸ್ಥೂಲವೆನಿಸಿ ಕಲ್ಪನೆ ಬಹುಸೂಕ್ಷ್ಮವೆನಿಸಿ ಕಲ್ಪನೆಯ ಮಹಕಾರಣೆನಿಸಿ ಕಲ್ಪನದಿ ಈ ಕಲ್ಪವಿರಿಸಿ ಕಲ್ಪನಕೆ ನೀನೆ ಸೂತ್ರನೆನಿಸಿ ಕಲ್ಪನಕೆ ನೀನೆ ಚೈತನ್ಯನೆನಿಸಿ ಕಲ್ಪ ಕುಣಿಸುವಿ ಕಲ್ಪನಿಲ್ಲದ ಕಲ್ಪದ ನೆಲೆಬುಡ ನೀನೆನ್ನಯ ಕಲ್ಪನೆಯೊಳುದಯನಾಗಿ ಕಲ್ಪನೆಯ ಕಡೆಗಾಣಿಸಭವ 2 ಕಲ್ಪ ಕಲ್ಪಕೆ ಆಚೆ ನೀನೆನಿಸಿ ಕಲ್ಪ ನಿರ್ಮಿಸಿ ಕಲ್ಪ ಕಲ್ಪದಿ ನೀನೆ ಆವರಿಸಿ ಕಲ್ಪ ನಡೆಸಿ ಕಲ್ಪ ಕಲ್ಪದಮೂಲ ನೀನೆನಿಸಿ ಕಲ್ಪದಿಂ ನುಡಿಸಿ ಕಲ್ಪದಲಿ ಮಿಥ್ಯಕಲ್ಪ ಪುಟ್ಟಿಸಿ ಕಲ್ಪದಲಿ ನಿಜಕಲ್ಪ ಸೃಷ್ಟಿಸಿ ಕಲ್ಪದಿಂ ತ್ರಿಕಲ್ಪ ರಕ್ಷಿಸಿ ಕಲ್ಪದಿಂ ಕಲ್ಪಕ್ಕೆ ಶಿಕ್ಷಿಸಿ ಕಲ್ಪವೇ ಮಹ ಮಾಯವೆನಿಸಿ ಕಲ್ಪದಿಂದಲೇ ಅದನು ಗೆಲಿಸಿ ಕಲ್ಪದಿಂ ಕಲ್ಪವನು ಬೆಳಗಿಸಿ ಕಲ್ಪದಿಂ ಕಲ್ಪವನು ತೊಲಗಿಸಿ ಕಲ್ಪನರಿಯುವ ಕಲ್ಪಕೆ ಮಹ ಕಲ್ಪನಿದು ಬಹು ಸುಲಭವೆನಿಸಿ ಕಲ್ಪಿತದಿಂ ರಕ್ಷಿಸುವ ಮಮ ಕಲ್ಪನಿಲ್ಲದವರ ಶ್ರೀರಾಮ 3
--------------
ರಾಮದಾಸರು
ಭಜಿಪ ಭಕ್ತರ ಭಾವ ಪರಿಪೂರ್ಣ ಬಾಗಿ ಭಜಿಸುವೆ ಬಾರೊ ದಯಾಸದನ ಪ ಪಾದಸೇವೆಯ ಕರುಣಿಸಿ ಪರ ಸಾಧನದ ಮಹದ್ಹಾದಿ ತೋರಿಸಿ ಬಾಧಿಸುವ ಭವಬಾಧೆ ತೊಲಗಿಸಿ ವೇದವಿದ್ಯವ ಬೋಧಿಸಭವ 1 ನಿತ್ಯ ನಿಮ್ಮ ಗುರ್ತುತೋರಿಪ ತತ್ವದರ್ಥವ ತುರ್ತುಪಾಲಿಸು ಕರ್ತುವೇದ 2 ಭಕ್ತವತ್ಸಲನೆಂಬ ಬಿರುದು ಸತ್ಯವಾಗಿ ಹೊತ್ತುಕೊಂಡಿಹಿ ಭಕ್ತನಿಷ್ಟವ ಚಿತ್ತೈಸೊಡನೆ ಮುಕ್ತಿಪದ ನೀಡಾತ್ಮರಾಮ 3
--------------
ರಾಮದಾಸರು
ಭ್ರಷ್ಟನಾದೆನಲ್ಲಾ ಶ್ರೀಹರಿ ಪೂಜೆ ಮಾಡಲಿಲ್ಲಾ ಸೃಷ್ಟಿಗೀಶ ಕಡು ಕಷ್ಟವ ತೊಲಗಿಸಿ ಶಿಷ್ಟದಾಗದೊಳು ನಿಷ್ಠೆಯಗೊಳಿಸಿದ ಪ ದುಷ್ಟ ವಿಷಯ ಪಾದೋದಿ ಜಲದಿನಾ [?] ಕಷ್ಟದಿಂದೀಸಿನೆಷ್ಟು ಹೈರಾಣಾದೆ 1 ಸುತ ವ್ಯಾಮೋಹದಿ ಮತಿಯ ಶಿಲುಕಿ ಹರಿ ಪಥವೆಂಬುದನ ಗತಿ ಗಹನಪ್ಪುದು 2 ಶರಣವತ್ಸಲೆಂಬ ಬಿರುದನಾಂತ ಶ್ರೀ ನರಸಿಂಹವಿಠ್ಠಲ ಪೊರೆ ಎನ್ನ ಕರುಣದಿ 3
--------------
ನರಸಿಂಹವಿಠಲರು
ಮಧ್ವ ಸರೋವರದ ಸ್ನಾನವ ಮಾಡಿರೊ ಬುದ್ಧಿವಂತರು ಕೇಳಿ ಇದರ ಮಹಾತ್ಮೆಯನು ಪ ತ್ರೇತಾಯುಗದಲ್ಲಿ ವರುಣತೀರ್ಥ ಕ್ಷಿತಿಯೊಳಗೆ ದ್ವಾಪರದಿ ಚಂದ್ರ ಪುಷ್ಕರಣಿ ಉ- ನ್ನತ ಕಲಿಯುಗದಲ್ಲಿ ಮಹಾ ತೀರಿಥ 1 ಸುರನದೀ ಮಿಕ್ಕಾದ ಸ್ಥಾನದಲಿ ಸೇವೆ ವಿ- ಸ್ತರವಾಗಿ ಕೊಳುತಿಪ್ಪಳು ಉಪೇಕ್ಷದಿ ಧರೆಯೊಳಗೆ ಇಲ್ಲಿ ಗುರು ಮಧ್ವಮುನಿ ಸರ್ವಾರ್ಥ ನಿರುತದಲ್ಲಿ ತೀವ್ರಗತಿ ಕೊಡುವಳೂ2 ಸಕಲ ವೇದಶಾಸ್ತ್ರ ಓದಿದವನಾದರೂ ಶಕುತಿವಂತನಾಗಿ ಇದ್ದನಾಗೆ ಸುಖ ತೀರ್ಥ ಸರೋವರದ ಸ್ನಾನ ಮಾಡದಿರಲು ಶಕಲ ಮತಿಯಲಿ ಮಹಾನರಕ ಭುಂಜಿಸುವಾ 3 ಮಜ್ಜನ ತಂದು ಕೊಡುವದು ನರಗೆ ಮಿಂದ ಫಲವೊ ಎಂದೆಂದಿಗೆ ಇಲ್ಲಿ ಬಿಡದೆ ವಾಸವಾದ ಮಂದಿಗಳ ಪುಣ್ಯ ಪ್ರತಾಪ ಎಣಿಸುವರಾರು 4 ಛೇದಿಸುವದಕೆ ಇದೇ ಸ್ನಾನವೆನ್ನಿ ಮೋದ ಮೂರುತಿ ನಮ್ಮ ವಿಜಯವಿಠ್ಠಲ ಕೃಷ್ಣ ಭೇದಾರ್ಥ ಮತಿಕೊಟ್ಟ ಭೇದವನು ತೊಲಗಿಸುವಾ5
--------------
ವಿಜಯದಾಸ