ಒಟ್ಟು 72 ಕಡೆಗಳಲ್ಲಿ , 29 ದಾಸರು , 68 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವಜನುಮ ಖೂನವರಿಯದೇನು ಏನುಕೆಡುವಿಯೋ ಏನುಕೆಡುವಿಯೋ ಜ್ಞಾನವಿಲ್ಲದೆ ಪ ನಾನಾವಿಧದಿ ಅನ್ಯರನ್ನು ಏನುಕಾರಣ ಜರೆದು ಸುಳ್ಳೆ ಹಾನಿಯಾಗಿ ಪೋಗುವಿಯೋ ಅ.ಪ ಅವನ ಸಂಪದ ನಿನಗೇನು ನಿನ್ನಪದವಿ ಅವನಿಗೇನೋ ಅವನ ಇವನ ಭವನ ಸುದ್ದಿ ನೆವನಗೈದು ದಿವನಿಶಿಯು ಸವೆಯದಾಡಿ ಭುವನಸುಖವ ಸವಿಯದೆ ಜವನ ಭವನ ಕಾಣುವಿ 1 ಶೀಲಜನರ ಸಂಗಡಾಡೋ ಮೂಲತತ್ವವಿಚಾರಮಾಡೋ ಕೀಳನಾಗಿ ಹಾಳು ಭ್ರಮೆಯೊಳು ಬಿದ್ದು ಮೂಳನಾಗಿ ಕಾಲನಾಳಿನ ದಾಳಿಗೆ ಸಿಲ್ಕಿ ಗೋಳಿನೊಳು ಬೀಳುವಿಯೊ 2 ಪಾಮರನಾಗಬೇಡೆಲವೋ ಪಾಮರ ಮನದ ಮಲವತೊಳೆಯೋ ಪ್ರೇಮ ಮೋಹಗಳನು ತುಳಿದು ಕಾಮಜನಕ ಸ್ವಾಮಿಶ್ರೀರಾಮಮಂತ್ರ ಪಠಣಮಾಡಿ ಆ ಮಹಾ ಮುಕ್ತಿ ಪಡೆದು ಬಾಳೊ 3
--------------
ರಾಮದಾಸರು
ಮಾನಿನಿ ಭೃಂಗ ಪಾಡಿ ಪಾವನವಾದ ಬಗಿಯ ಪ. ಹಿಂಡು 1 ಏಳು ಸುತ್ತಿನ ಕೋಟೆಬಾಳೆ ನಿಂಬೆÉ ದಾಳಿಂಬ ವನ ಎಲೆತೋಟದಾಳಿಂಬವನ ಎಲೆ ತೋಟದೊಳಗಿನ್ನುಸೀಳಿ ಕುಣಿಯೋ ಕಪಿಹಿಂಡು2 ಕಾಣಿ ಧರೆಮೇಲೆ3 ಆಲ ಅಶ್ವತ್ಥ ಪಲಾಶ ಬಾರಿಯ ವೃಕ್ಷಸಾಲು ಮಂಟಪವು ಸೊಬಗಿಲೆಸಾಲು ಮಂಟಪವು ಸೊಬಗಿಲೆ ರಂಗಯ್ಯವಾಲಗೈವ ವನವಿದು4 ನೀಲ ಮೇಘಶಾಮ ಬಾಲಿಕೆರಿಂದಲಿಲೀಲೆ ಮಾಡುವ ಸರೋವರಲೀಲೆ ಮಾಡುವ ಸರೋವರರಮಿಯರಸು ಲಾಲಿ ಆಡುವ ಮಣಿಗಳು5
--------------
ಗಲಗಲಿಅವ್ವನವರು
ಮೊರೆಯ ಲಾಲಿಸಬೇಕು ಮರುಗಿ ದಮ್ಮಯ್ಯಾವರದ ಸದ್ಗುರುರಾಯ ವಾಸುದೇವಾರ್ಯ ಪ *ಜನನೀಯ ಜಠರಾದಿ ಜಪಿಸಿದ ಸ್ಥಿತಿಯಾನೆನೆಯಾದೆ ಮರೆತಂಥ ನೀಚಾ ನಾನಯ್ಯಾಸನಿಹವನ ಸೇರಾದೆ ಸುಜ್ಞಾನರಡಿಯಾಕಣುಗೆಟ್ಟು ದಾರಿಯಕಾಣೆ ಗುರುರಾಯಾ 1ಕಾಮಾದಿ ರಿಪುಗಾಳ ಕೂಟದಿ ನಿಂದುಪ್ರೇಮಪಾಶದ ಕಟ್ಟು ಬಿಗಿಯಾಗಿ ಬಂದುಭೀಮಸಂಸಾರದಿ ಬಿದ್ದನಿವನೆಂದುನೀ ಮನಕೆಚ್ಚರ'ತ್ತು ಸೆಳಕೊಂಡು 2ಕೊಳಚೆಯೊಳಿಪ್ಪಾ ಸೂಕರ ವಾಸನೆಯುತೊಲಗಿ ಪೋಗಲಿಯೆಂದು ತೋರ್ಪುದೆ ಮತಿಯುಹೊಲೆದೇಹ ನಾನೆಂಬ ಹಳೆಯ ಸಂಗತಿಯುಬಲಿತಿದೆ ನೀನಿದ ಬಿಡಿಸಿ ಸನ್ಮತಿಯ 3ಸಾಲವ ತಂದು ಸ' ಸ'ಯಾಗಿ ತಿಂದೂಬಾಳುತಿರೇ ಕೊಟ್ಟವ ಬಡ್ಡಿ ಬೇಕೆಂದುಕೇಳಿ ಬಾಧಿಸಲೇತಕೆ ಕಡಗೈದೆನೆಂದುಆಲೋಚಿಪಂತೆಚ್ಚರಾುತೆನಗಿಂದು 4ಬರುವುದು ಸುಖವೆಂದು ಬಲುಯತ್ನಗೈದುಸೊರಗಿದೆನಲ್ಲದೆ ಸುಖಗಾಣೆ ನೊಂದುಕರಣಕೆಚ್ಚರವೊ ಕರುಣಿಸಲ್ಪ'ದುಕರಪಿಡಿದುಳುಹೆಂದು ಕೂಗಿದೆನಿಂದು 5ುೀ ದಯಾರಸಕೆ ನಾನೀವೆನೇನುವನುಪಾದಪದ್ಮವ ನಂಬಿ ಪಾಲಿಸೆಂಬುವನುಆದರಿಸುತ ಭಕ್ತಿಯಾನಂದವನ್ನುವೇದವೇದ್ಯನೆ ಕೊಟ್ಟು ಸಲಹು ನೀನಿನ್ನು 6ಪುಟ್ಟಿದಂದಿನಿಂದಾ ಮಡಿ ಮಡಿಯಾಗಿ ದುಡಿದುಘಟ್ಟಿಗತನವನು ಗಳಿಸಬೇಕೆಂದುಹೊಟ್ಟೆ ಹೊರಕರೊಳಾಡಿ ಹುಸಿಯನೆ ನುಡಿದುಕೆಟ್ಟು ಸುಖಗಾಣದೆ ಕೂಗಿದೆನಿಂದು 7ಸಾಕಾುತಯ್ಯಾ ಸಂಸಾರ ಕೋಟಲೆಯುನಾ ಕಾಣೆ ಸುಖವನು ನಿ'ುಷವಾದರೆಯುನೀಕರಿಸುವರಿಂದ ನಿರ್ವೇದ ಗತಿಯುಸೋಕಲು ನಿನ್ನೊಳು ಸಿಕ್ಕಿತು ಮತಿಯು 8ಧರೆಯೊಳಜ್ಞರ ನೋಡಿ ದಯದಿಂದ ಮುದದಿನರದೇಹದಾಳಿ ಚಿಕನಾಗಪುರವರದಿಒರೆದು ವೇದಾಂತರ್ಥವನು 'ಸ್ತರದಿ 1ಉದ್ಧರಿಸಿದೆ1 ವಾಸುದೇವಾರ್ಯ ಸುಖ ಪಥದಿ 9(ಈ) ಸಾಮಾಜಿಕ ಕೃತಿಗಳು
--------------
ವೆಂಕಟದಾಸರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲೀಲೆಯೊಳಾಡಿಸೊ ಹರಿ ನಿನ್ನ ಲೀಲೆಯೊಳಾಡಿಸೊ ಪ ಲೀಲೆಯೊಳಾಡಿಸೊ ಕಾಲಕಾಲದಿ ನಿನ್ನ ಶೀಲನಾಮವೆನ್ನ ನಾಲಗ್ಗೆ ಕರುಣಿಸು ಅ.ಪ ಮಂದಮತಿಯ ಹರಿಸೋ ಮನ ಗೋ ವಿಂದನೊಳೊಡಗೊಡಿಸೊ ಎಂದೆಂದಿಗು ಆ ನಂದನ ಕಂದನ ಪಾದ ಮನಮಂದಿರದಿರಿಸೊ 1 ಶೀಲಗುಣವ ಕಲಿಸೊ ಭವಗುಣ ಜಾಲವ ಪರಹರಿಸೊ ಪಾಲಿಸಿ ನಿಮ್ಮ ಧ್ಯಾನಲೋಲನೆನಿಸಿ ಯಮ ದಾಳಿ ನೀಗಿಸಿ ಭವಮಾಲೆಯ ಗೆಲಿಸೊ 2 ಮೋಸ ಮಾಯ ಹರಿಸೊ ವಿಷಯ ದಾಸೆಯ ಪರಿಹರಿಸೊ ಭಾಸುರಕೋಟಿಪ್ರಭೆ ಸಾಸಿರನಾಮದ ಶ್ರೀಶ ಶ್ರೀರಾಮ ನಿಮ್ಮದಾಸೆನಿಸೊ 3
--------------
ರಾಮದಾಸರು
ವಾರಣಾಸಿ ಕಾಶೀಪುರಾಧೀಶ್ವರಾ ಶಶಿಧರ ವಾ ಣೀಶ ಪರೇಶ ಸುರೇಶನುತ ಹರ ಪ ಶ್ರೀಶೈಲಜಾಪ್ರಿಯ ಪಾಶಾಂಕುಶಧರ ಶೇಷಾಭರಣ ಪರಮೇಶಾ ಪರಾತ್ಪರ ಅ.ಪ ಇಂದೀವರಾಕ್ಷ ಗೋವಿಂದಾದಿ ಪರಿವೃತ ನಂದೀಶನುತ ಸುರಬೃಂದಾಳಿ ವಿನುತ ಮಂದಾಕಿನೀಧರ ಮಂದಾರ ಸುಮಯುತ ಬಿಂದುಮಾಧವ ಮಾಂಗಿರೀಶರಂಜಿತ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ
ವೆಂಕಟಾದ್ರಿಯಲ್ಲಿ ಮೆರೆವ ವೆಂಕಟೇಶನು ಪ. ವೆಂಕಟೇಶನು ನಮ್ಮ ಸಂಕಟಹರನು ಮಘಮಘಿಸುವ ದಿವ್ಯ ಕಿರೀಟ ಶೋಭನು ಜಗದೊಳೀತನ ಮಹಿಮೆ ಪೊಗಳಲೊಶವೇ ನಮ್ಮ 1 ಫಾಲ ಕಮಲನೇತ್ರ ಶೋಭನು ನಾಸಿಕ ಚಂಪಪುಷ್ಪದಂತೆ ಪೊಲ್ವು ನಮ್ಮ 2 ಕಪೋಲ ಕರ್ಣಕುಂಡಲವನು ಚನ್ನ ಕರ್ಪೂರದ ಕರಡಿಗೆಯನ್ನು ಪೋಲ್ವ ವದನ ನಮ್ಮ 3 ದಂತ ದಾಳಿಂಬಬೀಜದಂತೆ ಪೊಳೆವನು ಕಂತುಪಿತನ ಮೃದುಜಿಹ್ವೆ ಶಾಂತಮೂರುತಿಯ ಕಂಡೆ 4 ಉಭಯ ಪಾಶ್ರ್ವದ ಭಾಜಕೀರ್ತಿ ಅಭಯಹಸ್ತವು ದೇವ ಉಭಯ ಪಾಶ್ರ್ವದಿ ಶ್ರೀ ಭೂಸಹಿತ ಭಕ್ತರಿಗಭಯ ಕೊಡುವೊ 5 ಕಮಲ ಹಾರಶೋಭನು ಶ್ರೀ ಕೃಷ್ಣಂಗೆ ಸಾಲಿಗ್ರಾಮ ಹಾರ ಮೆರೆವೋದ ಕಂಡೆ 6 ಥಳ ಥಳಿಸುವಂಥ ದಿವ್ಯ ಥಳಕಿನ ಹಾರ ಬೆಳಕಾದ ರತ್ನದ ಪದಕ ವಲಿವ ಏಕಾವಳಿಯ ಕಂಡೆ 7 ಮೆರೆವ ಪೀತಾಂಬರ ವಡ್ವಾಣ್ಯ ಕರಡಿ ಕಂಜರಿಗೆ ಶಲ್ಯ ಶರಧಿ ಗಂಭೀರನ ಕಂಡೆ 8 ಕಂತುಪಿತ ತನ್ನ ಏಕಾಂತ ಭಕ್ತರ ಶಾಂತ ನೋಟದಿಂದ ನೋಡಿ ಭ್ರಾಂತಿ ಬಿಡಿಸಿ ಪೊರೆವೊದ ಕಂಡೆ 9 ಭಕ್ತರನ್ನು ಪೊರೆವ ಬಿರುದಿನ ಪಾಡಗ ಧರಿಸಿ ದಿವ್ಯ ಅಶಕ್ತಜನ ಪೋಷ ಶ್ರೀ ಶ್ರೀನಿವಾಸ ದೊರೆಯ ಕಂಡೆ 10
--------------
ಸರಸ್ವತಿ ಬಾಯಿ
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಹೆಚ್ಚಿನ ಗೋಜ್ಯಾಕೆಲೆ ಹುಚ್ಚು ತಿಳಿ ಮುಚ್ಚಿಕೊಂಡಿದೆ ನಿನ್ನ ಭವಕಿಚ್ಚು ಪ ಹುಚ್ಚು ಮತಿಯ ನೀಗಿ ಅಚ್ಯುತನಂಘ್ರಿಯ ಮೆಚ್ಚಿಸಿ ಮೆಲಿ ಅನುಭವದ್ಹುಚ್ಚು ಅ.ಪ ಕೀಳನಾಗದೆ ನೀ ನಿಜವ ತಿಳಿ ನಿನ್ನ ಕಾ ಲೊಳು ಬಿದ್ದಾದ ಸಂಕೋಲಿ ನಾಳೆಗೆ ಬರುತಾದ ಕಾಲನ ದಾಳಿಯು ತಾಳದೆಳಿತಾರ ಜಡಿದ್ವಜ್ರದ ಕೀಲಿ 1 ಹಂದಿಯ ಜನುಮಕೆ ಬೀಳಬೇಡ ಬೇಡಿ ಮಂದರ ನಿಲಯನ ಹೊಂದಿ ಭಜಿಸಿ ಆನಂದಪಡಿ 2 ದೂರದಿಂದ ಬಂದಿದ್ದಿ ಹೌಹಾರಿ ತ್ವರ ವ್ಯಾ ಪಾರ ಮಾಡಿಕೊಳ್ಳೊ ಭರ್ಜರಿ ಸಾರ ಮೋಕ್ಷಾಧಿಪ ಧೀರ ಶ್ರೀರಾಮನ ಪಾದ ವಾರಿಜ ನಂಬಿ ಹೊಡಿ ಜಯಭೇರಿ 3
--------------
ರಾಮದಾಸರು
ಏನೊ ರಂಗ ನಿನ್ನ ವನಿತೆಯೊಳಪರಾಧಧ್ಯಾನಿಸಲು ದೊರಕೊಂಬುದೆನೀನಗಲಬೇಡ ತರಳೆಗಭಯವ ಕೊಟ್ಟುಮೌನದಲಿ ನಡೆಯೊ ಮನೆಗೆ ಬೇಗ ಪ.ಸ್ಮರನ ದಾಳಿಗೆ ಕಂದಿ ಕುಂದಿ ಬಳ್ಕಡಿಯಿಡುತವಿರಹಾಗ್ನಿಗನ್ನತೊರೆದು ಸ್ಮರಿಸುವಳುನಿರುತ ನಿನ್ನಯ ಗುಣಾವಳಿಗಳನುಕರಿಸೋತರಳೆಯ ಕೂಡೊ ಕೋಪ ಬೇಡೊ ನೋಡೊ 1ಪರಮಪುರುಷ ನೀ ಅವಳ ಜರಿದ ಕಾರಣಸೋಮಕಿರಣ ವಿಷಸಮ ಝಳದಪರಿತೋರಿ ಬಳಲುವಳು ಸಖಿಭೃಂಗ ಕಳಕಕೆತರಳೆ ಕೂಡೊ ಕೋಪ ಬೇಡೊ ನೋಡೊ 2ನಲ್ಲ ನಿನ್ನ ಸಂಗ ಬಯಕೆಗೆ ಕಣ್ಣ ತೇಲಿಸುವಳಲ್ಲೊ ತೊದಲ್ಲು ನುಡಿವಳಲ್ಲೊಮೆಲ್ಲನೆದೆ ನೋಡಿ ಸುಯಿಗರೆವಳು ಖಗಾಂಕಜನಬಿಲ್ಲಿಗೆಬಲಿಕೊಡಲಿ ಬಾರೊ ತೋರೊ3ಪಯನಿಧಿ ಒಡೆಯನ್ಯಾಕೆ ಬಾರನೆಂದವಳು ತನ್ನಯ ಸುದತಿಯರ ಬೈವಳುನಯನಧsರವಿರಸಿ ಕಂಬನಿದುಂಬುವಳು ಗಡಪ್ರಿಯಳರಸೆಜಾರವಿರಸಹರಿಸೊ4ನಿನ್ನ ನಂಬಿದಳಿಗಿಂತಾಗುತಿರೆ ಸುಮ್ಮನಿಹೆಎನ್ನ ಹೇಯ ಬಾರದೆನಲುಉನ್ನತ ಹಯವನೇರಿ ಬಂದವಳ ನೆರೆದ ಪ್ರಸನ್ನ ವೆಂಕಟನಾಯಕರಸಿಕ5
--------------
ಪ್ರಸನ್ನವೆಂಕಟದಾಸರು
ಕೇಳು ಶ್ರೀ ಕೃಷ್ಣ ಕಥೆಯ ಬಾಳು ವೈಷ್ಣವರಪಾಳಿಕೆ ಭಕುತಿಯಿಂದಾಳಾಗಿ ಎಲೆ ಮನುಜ ಪ.ಖೂಳರೊಳು ಮಾತಾಡದೇಳು ಹರಿಭಟರಡಿಗೆಬೀಳು ಭಗವಜ್ಜನರ ಮ್ಯಾಳದೆದುರಿನಲಿಹೇಳು ಕೀರ್ತನೆ ನಾಮದೋಳಿಗಳ ತನುಮನದಿಊಳಿಗಮಾಡುಬಿಡದಾಳು ಕರಣಗಳ1ಕೂಳು ಕಾಸಿನ ಸವಿಗೆ ಕೀಳು ಮಾನಿಸರ ಹೊಗಳಿಕೋಳು ಬಂಧನ ಹೋಗದಿರು ಮನದಾಳಿಗೊಳಗಾಗಿಏಳೆರಡು ಭುವನಗಳ ಆಳುವ ಪಿತನಗುಣದೇಳಿಗೆಗೆ ಹರುಷವಂ ತಾಳು ಅನ್ಯವ ಮರೆದು 2ಗಾಳಿಯಸೊಡರುದೇಹ ನಾಳೆಗೆನ್ನದೆ ಸುಧೆಯಮೇಳೈಸಿಕೊಂಡು ಭವವೇಳಿಲಿಸು ನೀಜಾಳು ಭಾಷ್ಯಗಳಗತಿಹಾಳೆಂದು ಗುರುಮಧ್ವಹೇಳಿದಂತಿರುತಲಿ ದಯಾಳು ಪ್ರಸನ್ವೆಂಕಟನ 3
--------------
ಪ್ರಸನ್ನವೆಂಕಟದಾಸರು
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು