ಒಟ್ಟು 196 ಕಡೆಗಳಲ್ಲಿ , 49 ದಾಸರು , 183 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತತ್ವದರ್ಶನದಲ್ಲಿ ಮಂತ್ರಮಹಿಮೆ ಸ್ವಾಮಿಗರ್ಪಿಸೋ ಮಾನವಾ ಪ ಕಾಮಿತಾರ್ಥವ ಬೇಡದೆ ಶತ ಸಾಮಜಾಪತಿ ನೆನೆವ ಮಂತ್ರ ಅ.ಪ ದಿವಿಜರನಿಶ ಪಠಿಪ ಮಂತ್ರ ಜವನ ಭಟರ ಸದೆದ ಮಂತ್ರ 1 ಲಲನೆಪಾಂಚಾಲಿ ಹೇಳಿದ ಮಂತ್ರ ಬಲಿಗೆ ವರವನಿತ್ತ ಮಂತ್ರ 2 ಸಾರಸಭವನುಲಿದ ಮಂತ್ರ ಘೋರದುರಿತನಾಶಕ ಮಂತ್ರ ಸಂ ಸಾರಜಲಧಿ ದಾಟಿಪ ಮಂತ್ರ 3 ಉಸುರಲಳವೆ ಪರಮ ಮಂತ್ರ 4 ನರನ ಪಾಲಿಪೊಂದು ಮಂತ್ರ 5 ಸಿರಿಗೋವಿಂದನೆಂಬ ಮಂತ್ರ ಮಂಗಳಕರ ರಂಗಮಂತ್ರ ಗಂಗಾಜನಕನೇಂಬೀ ಮಂತ್ರ ಶೃಂಗಾರಾಬ್ಧಿ ಸೋಮಮಂತ್ರ ಮಾಂಗಿರೀಶನೆಂಬ ಮಂತ್ರ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಿಳಿವುದನ್ನಮಯ ಕೋಶಗಳನು ಇಳೆಯೊಳಚ್ಯುತನ ದಾಸರು ನಿತ್ಯದಲಿ ಪ ಮೇದಿನಿ ಸಲಿಲನ್ನಮಯ ವಿಹಾಯಸ ವಾಯು ಮುಖ್ಯಪ್ರಾಣ ಮನೋಮಯಕೆ ಆದುದು ಮನ ಅಹಂಕಾರ ವಿಜ್ಞಾನಮಯ ವೇದ್ಯ ತತ್ತ್ವಾನಂದ ಮಯಕೆ ಅವ್ಯಕ್ತವನು1 ಕೃತಿ ಸಂಕರು ವಾಸುದೇವ ಮಾಯಾ ಘನ ಸುಲಕ್ಷಣ ಲಕ್ಷ್ಮೀ ನಾರಾಯಣರು ಮುಖ್ಯ ರೆನಿಸುವರು ಪಂಚಕೋಶದಲಿ ಎಂದೆಂದೂ 2 ಪ್ರಾಣಾಪಾನ ವ್ಯಾನೋದಾನ ಸಮಾನ ಪಂ ಚಾನಿಲರೂ ಅಲ್ಲಿಹರು ಮತ್ತು ದಾನವಾದಿಗಳಿಹರು ಭೂತ ಮಾತ್ರ ಕರ್ಮ ಜ್ಞಾನೇಂದ್ರಿಯಗಳು ತನ್ನಿಷ್ಟವಾಗಿಹವಲ್ಲಿ 3 ಅಬುಜ ಭವಾಂಡ ಪಿಂಡಾಂಡಕ್ಕೆ ಈ ತತ್ತ್ವ ಒಂಬತ್ತು ಆವರಣವೆಂದೆನಿಪವು ಕಂಬುಪಾಣಿಯ ರೂಪ ಲಕ್ಷ್ಮೀ ರೂಪವು ಪಂಚ ಇಂಬುಗೊಂಡಿಹವು ಚಿಂತಿಪುದು ಭೂಸುರರು 4 ಭೂಶನೇಶ್ವರ ವರುಣ ಸುರನದಿಗಳನ್ನಮಯ ಕೋಶದೊಳಗಿರುತಿಹರು ಪ್ರಾಣಮಯದಿ ಮೇಷವಾಹನ ಪ್ರವಹವಾಯು ಪ್ರಾವಹಿ ಮಹಾ ಕಾಶಾಧಿಪತಿ ಗಣಪರಧಿಪರೆಂದೆನಿಸುವರು 5 ಕಾಮೇಂದ್ರ ಶಿವ ರತೀಂದ್ರಾಣಿ ಪಾರ್ವತಿ ಮುಖ್ಯ ಈ ಮನೋಮಯಕಧಿಪರೆನಿಸುತಿಹರು ತಾಮರಸಭವ ವಾಯು ವಾಣಿ ಭಾರತಿ ಮುಖ್ಯ ಸ್ವಾಮಿಗಳೆನಿಸುವರು ವಿಜ್ಞಾನಕೋಶದಲಿ 6 ಆನಂದಮಯ ಕೋಶಕಭಿಮಾನಿ ಶ್ರೀನಿವಾಸನು ಪಂಚರೂಪಾತ್ಮಕಾ ಈ ನಿರ್ಜರರೊಳಿದ್ದು ತತ್ತದಾಹ್ವಯನಾಗಿ ಪಾನೀಯಜಾಂಡದೊಳಿಪ್ಪ ಕರುಣೀ 7 ಪೃಥಿವಿ ಗಂಧ ಘ್ರಾಣೋಪಸ್ಥಪ್ಪುರ ಸಂಜೀವಾ ಪ್ರಥಮ ಕೋಶದಿ ವಾಯು ಅಷ್ಟತತ್ತ್ವ ದ್ವಿತೀಯ ಕೋಶದಿ ತೇಜರೂಪ ಚಕ್ಷುಪಾದ ಪ್ರಥಮಾಂಗ ಸ್ಪರ್ಶ ತ್ವಕು ಪಾಣಿ ತತ್ವಗಳಿಹವು 8 ಆಕಾಶ ಶಬ್ದ ಶ್ರೋತ್ರವು ಪಿಂತೆ ಪೇಳ್ದಷ್ಟು ವಾಕು ಪ್ರಾಣಾದಿ ತತ್ತ್ವ ದ್ವಾದಶ ಕಾಮ ಶ್ರೀ ಕಂಠ ತತ್ವ ಮನ ಮನೋಮಯದಿ ವಿಜ್ಞಾನ ಕಮಲ ಭವ ನಂದ ಮಯತೆ ಅವ್ಯಕ್ತವನು 9 ಸ್ಥೂಲ ದೇಹಕೆ ಇನಿತು ಲಿಂಗ ತನುವಿನಲಿ ತತ್ತ ್ವ ಜಾಲ ಸೂಕ್ಷ್ಮಗಳಿಹವು ಗುಣ ಭೇದದಿ ಪೇಳುವೆನು ಅವ್ಯಕ್ತ ಮಹದಹಂಕಾರ ಮನ ಮೇಳೈಸಿಹವು ಸತ್ವಪರಿ ಭೇದದಲಿ 10 ರಜೋಪರಿಚ್ಛೇದದಲಿ ಜ್ಞಾನ ಕರ್ಮೇಂದ್ರಿಯವು ರಜನೀ ಗುಣದ ಮಾತ್ರ ಭೂತ ಇಹವು ಯಜಿಸು ಈ ತತ್ತ್ವ ಮಾನಿ ದಿವಿಜರನರಿತು ವೃಜಿನವರ್ಜಿತನಾಗಿ ಸುಪದವೈದುವಿ ಮನುಜ11 ಭೂಮ್ಯಭ್ರನ್ನ ಮಯನಳನೀಳಾಗಸ ಪ್ರಾಣ ಮಯ ಮ ನೋಮಯ ಮಹಾ ಅವ್ಯಕ್ತ ಸಮ್ಯಗಾನಂದ ವಿಜ್ಞಾನಮಯನೆನಿಸಿ ಗುರು ಸಮೀರನೊಳಗಿದ್ದು ಪಾಲಿಸುವ ಜಗವಾ 12 ಪಂಚಕೋಶದ ವಿವರ ತಿಳಿದ ಮಹಾತ್ಮರಿಗೆ ಕಿಂಚಿತಾದರು ದೋಷ ಬರಲರಿಯದು ಮಾರ್ಗಣ ಪಿತ ಜಗನ್ನಾಥ ವಿಠಲನು ಸಂಚತಾಗಾಮಿ ಕರ್ಮಗಳ ಫಲ ಬಿಡಿಸುವನು 13
--------------
ಜಗನ್ನಾಥದಾಸರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ದಾಸವರವರದ ವಿಠಲ | ಸಲಹೊ ಇವಳಾ ಪ ಈಶಾದಿ ದಿವಿಜೇಡ್ಯ | ವಾಸವಾನುಜನೇ ಅ.ಪ. ಕ್ಲೇಶನಾಶನನೆ ಮ | ಧ್ವೇಶ ನಿನ್ನಡಿ ದಾಸ್ಯಆಶಿಸೂವಳ ಬಿಡದೆ | ಶ್ರೀಶ ಕೈಪಿಡಿದೂದೋಷರಾಶಿಯ ಕಳೆದು | ಪೋಷಿಸಲು ಬಿನ್ನವಿಪೆಹೇಸದಾಶಿವ ವಂದ್ಯ | ಮೇಶ ಮಹಿದಾಸಾ 1 ಪತಿಸೇವೆ ಗುರುಸೇವೆ | ಹಿತದಿಂದ ಮಾಳ್ಪಂಥಮತಿಯನೆ ಕರುಣಿಸುತ | ಕ್ಷಿತಿರಮಣ ನಿನ್ನಾಸ್ಮøತಿಯ ಕೊಡು ಸತತ ಸಂ | ಸೃತಿಯನೇ ಕಳೆಯಲ್ಕೆಗತಿಗೋತ್ರ ನೀನಾಗಿ | ಪಥದೋರೊ ಹರಿಯೇ 2 ಏಕಮೇವನೆ ದೇವ | ಪ್ರಾಕ್ಕು ಕರ್ಮವ ಕಳೆದುನೀ ಕೊಡುತ ಸುಜ್ಞಾನ | ಭಕುತಿ ವೈರಾಗ್ಯಕಾಕು ಸಂಗವ ಕೊಡದೆ | ನೀಕೊಟ್ಟು ಸತ್ಸಂಗಮಾಕಳತ್ರನೆ ಸಲಹೊ | ಈಕೆ ಕೈ ಪಿಡಿದೂ 3 ಖೇಚರೋತ್ತಮ ವಾಹ | ಕೀಚಕಾರಿ ಪ್ರಿಯನೆಮೋಚಕೇಚ್ಛೆಲಿ ಸವ್ಯ | ಸಾಚಿಸಖಕೃಷ್ಣಾ |ವಾಚಾಮಗೋಚರನೆ | ನೀಚೋಚ್ಚ ತರತಮವವಾಚಿಸುತ ಇವಳಲ್ಲಿ | ಮೋಕ್ಷಪ್ರದನಾಗೋ 4 ದೇವವರ ಭವ್ಯಾತ್ಮ | ಭಾವಕೊಲಿಯುವ ಹರಿಯೆನೀವೊಲಿಯದಿನ್ನಿಲ್ಲ | ಆವ ಈ ಜಗದೀ |ಕಾವುದಿವಳನು ಎಂದು | ಭಾವದಲಿ ಭಿನ್ನೈಪೆಭಾವುಕರ ಪಾಲ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಿವಿಜ ಪ ಓ ಗುರುಮಾನ್ಯ ಕಾಮಿತ ನೀರಜ ತ್ಯಾಗಿ ಶುಭಾಂಗ ಭಾಸ್ಕರತೇಜ ಅ.ಪ ಕಂಗಳ ನೀಡಿದೆ ಚರಣವ ತೋರಿದೆ ಬಂಗಾರವ ನೀ ಪಡೆದೆ | ಪಂಗುತಾ ನಡೆಯಲಾದ ಮಂಗನ ಸಿಂಗಗೈದೆ | ಇಂಗಿತಜ್ಞನೀನೆಲೆ ಮಾಂಗಿರಿರಂಗನ ಪ್ರೇಮದಿಂದರ್ಚಿಸುವ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೇವ ದೇವ ದೇವ ದಿವಿಜರೊಡಿಯನೆ ಭಾವ ಪೂರ್ವಕ ವಿಧದಿ ಭಜಿಸುವೆನು ನಾನು ಪ ನಂದಗೋಪಿಯ ಕಂದನಾದ ಸುಂದರಾಂಗನೆ ಸಿಂಧುಶಯನ ಮಂದರಧರ ಇಂದಿರೇಶನೆ ಎಂದು ನಿನ್ನ ಪೊಂದಿದವರನಂದ ಪೊರೆವನೆ 1 ಹೆಂಗಳೆರ ಸಂಗವುಳ್ಳ ಮಂಗಳಾಂಗನೆ ಶೃಂಗಾರಾಂಗ ರಮಾಸಂಗವುಳ್ಳ ರಂಗನೆ ಗಂಗಾಜನಕ ನೀರಜಾಂಬಕ ಗಾನಲೋಲನೆ ಮಂಗಳಕರದಿಂದ ಲಭಯಂಗಳೀವನೆ 2 ರನ್ನೆ ಸೀತೆಯನ್ನು ವೈದವನ್ನ ತರಿದನೆ ನಿನ್ನವರಿವರೆನ್ನುವವರನ್ನು ಕಾಯ್ವನೆ ಪನ್ನಗಶಯನನಾದ ಚೆನ್ನ ನೀವನೆ ಘನ್ನ ' ಶ್ರೀ ಹೆನ್ನೆವಿಠಲ’ ನನ್ನ ಕಾರುಣಿ 3
--------------
ಹೆನ್ನೆರಂಗದಾಸರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ
ನಂದ ಕುಮಾರ ಇಂದುಕುಲ ತಿಲಕ ಪ ಎಂದಿಗು ನಿನ್ನಯ ಸುಂದರ ಚರಣವ ವಂದಿಸಿ ನಲಿಯುವ ನಂದವೆನಗೆ ಕೊಡೊ ಅ.ಪ ಧನಕನಕಗಳನು ದಿನ ದಿನ ಗಳಿಸುವ ಅನುರಾಗಗಳನು ಕೊನೆಗಾಣಿಸೊ ದೇವ ವನಜಸಂಭವಪಿತ ಕನಸಿನಲ್ಲಿಯೂ ನಿನ್ನ ಮನನದಿ ಹಿಗ್ಗುವ ಮನವ ಎನಗೆ ಕೊಡೆಲೊ 1 ಭಯವಿಲ್ಲದೆ ದೋಷಮಯದ ನೋಟಗಳನು ಬಯಸುವ ಮತಿಯನು ಲಯಮಾಡೋ ದೇವ ಮಾಧವ ಎನ್ನ ನಯನಗಳಿಗೆ ನಿನ್ನ ಪ್ರಿಯ ರೂಪದ ಪರಿಚಯವ ಮಾಡಿಸೊ ಸದಾ 2 ಕಾಲವ ಕಳೆಯಲು ಆಲಸವಿಲ್ಲದೆ ಪೇಳಬಾರದ ನುಡಿ ಚಾಲನು ತೊಲಗಿಸೊ ಬಾಲ ಗೋಪಾಲ ಎನ್ನ ನಾಲಿಗೆಯಲಿ ನಿನ್ನ ಲೀಲೆಗಳನು ಸದಾ ಲಾಲಿಸಿ ಪೊಗಳಿಸೊ 3 ಪರಿಪರಿ ಭೋಗಕೆ ಪರಿದಾಡುತ ಸದಾ ಪರರ ಸೇವಿಸುತಿಹ ಕರಗಳ ನಿಲ್ಲಿಸೊ ಮುರಳೀಧರ ಕೃಷ್ಣ ಕರುಣದಿಂದಲಿ ಎನ್ನ ಕರಗಳಿಗೆ ನಿನ್ನ ವರಸೇವೆಯ ನೀಡೊ 4 ಭುವಿಯಲಿ ದುರುಳರ ಸವಿನುಡಿಗಳಿಗತಿ ಕಿವಿಗೊಟ್ಟು ಕೇಳುವ ಲವಲವಿಕೆಯ ಬಿಡಿಸೊ ದಿವಿಜರೊಡೆಯ ಎನ್ನ ಕಿವಿಯೊಳಗೆ ನಿನ್ನ ನವ ನವ ಚರಿತೆಯ ಸವಿರಸ ಸುರಿಸೆಲೊ 5 ಮಾಧವನನು ಮರೆತು ಪಾದಗಳಿಂದಲಿ ಮೇದಿನಿ ತಿರುಗುವ ಮೋದವೆನಗೆ ಬೇಡ ಯಾದವಪತಿ ನಿನ್ನ ಪಾದದರುಶನದ ವಿ ನೋದಕ್ಕೆ ಸುತ್ತಲು ಆದರ ಪೊಂದಿಸೊ 6 ಭಿನ್ನ ಅಂಗಗಳಿಂದ ಎನ್ನ ಕರ್ಮಗಳನು ನಿನ್ನ ಸೇವೆಯೆಂದು ಬಿನ್ನೈಸುವೆ ದೇವ ಎನ್ನ ದುರಿತಗಳ ಭಿನ್ನ ಮಾಡುತಲಿ ಪ್ರ ಸನ್ನನಾಗಿ ಎನಗೆ ಸನ್ಮತಿ ದಯಮಾಡೊ 7
--------------
ವಿದ್ಯಾಪ್ರಸನ್ನತೀರ್ಥರು
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ