ಒಟ್ಟು 79 ಕಡೆಗಳಲ್ಲಿ , 35 ದಾಸರು , 76 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾವನ ಮನೆಯೊಳಗೆ ಇರಬಹುದೆ ಕೋವಿದರು ಪ ಹರಣ ನೀಡಲು ಬಹುದುಬೇವ ಕಿಚ್ಚನು ಹಿಡಿದು ನುಂಗಬಹುದುಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ1 ಪರರ ಸೇರಲು ಬಹುದು ಪತಿತರಲ್ಲಿರಬಹುದುಕೊರಳ ಘಾತಕಂಗೆ ಶಿರ ಒಪ್ಪಿಸಬಹುದುತರುಣಿಯಳ ತೌರು ಮನೆಯಲಿ ಇರುವುದಕಿಂತತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು 2 ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದುಹೇವವನಿಕ್ಕಿ ಚೂರ್ಣವ ಮಾಡಲುಆವಾಗ ನೋಡಿದರು ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3 ಬಂದೊಂದು ತಿಂಗಳೊಳು ಬಹುಮಾನ ನಡತೆಗಳುಬಂದೆರಡು ತಿಂಗಳೊಳಗೆ ಹಿತವಾದವುಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವುಸಂದೇಹವೇಕೆ ಸಂಸಾರಿಗಳಿಗೆ4 ಈ ಪರಿಯಲುಂಬಂಥ ಅಳಿಯ ಭೋಜನಕಿಂತಗೋಪಾಳ ಲೇಸು ಅಭಿಮಾನಿಗಳಿಗೆಶ್ರೀಪತಿ ನೆಲೆಯಾದಿಕೇಶವನ ಚರಣ ಸ-ಮೀಪದಲಿ ವಾಸಿಪುದೆ ವಾಸಿ ಮನವೆ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಮೂರ್ಖ ಬಲ್ಲನೆ ಸತ್ಯಸುಜ್ಞಾನಿ ನಡೆಯ ತಾರ್ಕಿ ಬಲ್ಲನೆ ಪರಸಾಧನದ ಬಗೆಯ ಪ ಕತ್ತೆ ಬಲ್ಲುದೆ ಹೊತ್ತ ಮುತ್ತುರತ್ನದ ಬೆಲೆಯ ತೊತ್ತು ಬಲ್ಲುದೆ ಮಹ ಉತ್ತಮರ ನಡೆಯ ಮಿಥ್ಯ ಬಲ್ಲನೆ ಶರಣಸತ್ಸುಜನರ ನೆಲೆಯ ಮೃತ್ಯು ಬಲ್ಲುದೆ ಹೊತ್ತು ಗೊತ್ತಿನ ಪರಿಯ 1 ಸೂಶೆಬಲ್ಲಳೆ ಸತಿಯ ಶೀಲವ್ರತನೇಮಗಳ ಕೋಳಿ ಬಲ್ಲುದೆ ಮರಿಗೆ ಮೊಲೆಹಾಲುಣಿಸಿ ಸಲಹೋದ ಕೇಳಬಲ್ಲನೆ ಕಿವುಡ ಆಲಿಸಿ ಏಕಾಂತವನು ಹೇಳಬಲ್ಲನೆ ಮೂಕ ಕೇಳಿ ಹರಿಚರಿತ 2 ಭ್ರಷ್ಟಬಲ್ಲನೆ ಸುಗುಣ ಶಿಷ್ಟ ಸಂತರ ಸಂಗ ದುಷ್ಟಬಲ್ಲನೆ ಪರರ ಕಷ್ಟನಷ್ಟಗಳ ಹುಟ್ಟುಗುರುಡ ಬಲ್ಲನೆ ಮುಂದಿಟ್ಟ ಗಂಟಿನ ವಿವರ ಕೆಟ್ಟಭವಿಬಲ್ಲನೆ ತತ್ತ್ವಕಟ್ಟಳೆಯ ಗುಟ್ಟು 3 ಕುರಿಯು ಬಲ್ಲುದೆ ತನ್ನ ಕೊರಲು ಕೊಯ್ಯವರೆಂದು ಮರುಳ ಬಲ್ಲನೆ ದೊರೆತ ನರಜನುಮ ಸಮಯ ನರಕದ ಹುಳ ಬಲ್ಲುದೆ ಕಾಳೋರಗನ ಹರಿದಾಟ ತಿರುಕ ಬಲ್ಲನೆ ಅರಸರ ಮನೆಯ ಸುದ್ದಿ 4 ಕಾಮಿಗಳು ಬಲ್ಲರೆ ನೇಮನಿತ್ಯದ ನಿಜವ ತಾಮಸರು ಬಲ್ಲರೆ ಸಾಮ ದಾನ ಗುಣವ ಪಾಮರರು ಬಲ್ಲರೆ ಭೂಮಿಯೊಳಧಿಕ ಮಮ ಸ್ವಾಮಿ ಶ್ರೀರಾಮನ ನಾಮಮಹಾತ್ಮೆಯನು 5
--------------
ರಾಮದಾಸರು
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಮೃಡ ಫಣೀಂದ್ರವೀಂದ್ರ ವಂದ್ಯ ಕಡಲಶಯನ ಶ್ರೀನಿವಾಸ ಒಡೆಯನಾಜ್ಞೆಯಿಂದಲೆನಗೆ ಪ. ಜೀವಗಣಪತೆ ಸರ್ವದೇವತಾಗತೆ ಪಾವನಾತ್ಮ ಪದ್ಮ ಸಮಕರಾವಲಂಬಿತ್ತು ಬೇಗ 1 ಮೂರು ತಾಪವಾ ಹತ್ರ ಸೇರದಂದದಿ ಅದರ ಬೇರ ಕಡಿದು ಭಕ್ತಿಸಾರ ಧಾರದಿಂದ ದೃಢವ ಮಾಡಿ 2 ಕೈಟಭಾರಿಯ ಪುರದ ಭಾಟದಾರಿಯ ಬೇಟ ಜಲಟ ಕುಕ್ಕುಟಗಳ ನೋಟಾಪಾಟದೊಡನೆ ತೋರಿ 3 ಹರಿಯ ದೊರೆತನ ಕರುಣಿಕಾಗ್ರಣಿ ಕಮಲ ಕರವ ಎನ್ನ ಶಿರದೊಳಿಕ್ಕಿ 4 ನಿನ್ನ ಕರುಣವು ನಿಯತವಾಗಲು ಪನ್ನಗಾಚಲೇಂದ್ರ ದಯದಿ ತನ್ನ ದಾಸನೆಂದು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ಶ್ರೀನಿವಾಸ ನಿನ್ನ ಕರುಣಾ ಏನೆಂದು ಸ್ತುತಿಪೆ ಪ. ಮಾನವರೊಳಗತಿ ಹೀನಬುದ್ಧಿಯಲಿ ಏನೊಂದು ಮಾರ್ಗ ಕಾಣದೆ ಬಹು ಬಳಲಿ ನಾನಾ ಚಿಂತೆಗಳಿಂದ ಧ್ಯಾನಿಪ ಸಮಯದಿ ತಾನಾಗಿ ಕರುಣಿಸಿ ಮಾನ ಪಾಲಿಸಿದಿ 1 ಹುಣಾರುವೆನ್ನನು ನಾನಾ ತರದೊಳು ಮಾನಹಾನಿಯ ಮಾಡಿ ಮರಳಿ ಬಾಧಿಸಲು ತಾನೆಂದು ಪೇಳುವರಿಲ್ಲದಂತಿರಲು ನೀನೆ ಬಂದೊದಗಿ ರಕ್ಷಿಸಿದೆ ಕೃಪಾಳು 2 ತದನಂತರದಲಿ ಕಷ್ಟದ ಬಾಧೆ ಸಹಿಸದೆ ಮದರಾಶಿಯೆಂಬ ಪಟ್ಟಣಕೆ ನಾ ಸರಿದೆ ಸದರವಲ್ಲೆಂದು ತಿಳಿದು ನಿನಗೊದರೆ ವಿಧಿಪಿತ ನೀನಲ್ಯು ಪ್ರೇರಿಸಿ ಪೊರೆದೆ 3 ಸಿರಿವರ ನಿನ್ನಯ ಪರಮ ಮಂಗಳಮೂರ್ತಿ ಹರುಷದಿಂದಲಿ ನೋಡಿ ಬರಲು ನಾನಿಲ್ಲಿ ದೊರೆತನದಲಿ ಮಾನಿತಪದಲ್ಲಿ ಇರಿಸಿ ನಿರಂತರ ಕಾವುದ ಬಲ್ಲಿ4 ಶರಣಾಗತ ರಕ್ಷಾಕರನೆ ಮಂದಿರದ ವರನಾಗಿ ಸಲಹುವ ದೊರೆ ನಿನ್ನ ಬಿರುದ ತರಳ ಬುದ್ಧಿಯೊಳೆಂತು ವರ್ಣಿಪೆ ವರದ ಕರುಣಾ ಸಾಗರ ವೆಂಕಟಾದ್ರಿಯೊಳ್ಮೆರೆದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಸಂಜೀವನೌಷಧ ಸುಲಭದಿ ದೊರೆತಮ್ಯಾ- ಲಂಜುವದ್ಯಾಕಿನ್ನು ಕುಂಜರ ವರದಾಯಿ ಕುಬ್ಜೆಗೊಲಿದ ನಮ್ಮ ಕಂಜನಾಭನ ಪಾದಕಂಜರ ನೆನವೆಂಬ ಪ. ಕಲಾನಿಯಮವಿಲ್ಲ ಕುಡಿದರೆ ಖೈಂಯಲ್ಲ ನಾಲಿಗೆ ತುದಿಯೊಳಗಿರುವುದೆಲ್ಲಾ ಸಾಲಾಗಿ ನಿಲುವುದು ಸರಿಯಾದ ವ್ರಯದಿಂದ ಪಾಲಗಡಲನಾಥ ಪಾಲಿಸಿ ಕುಡಿಸುವ 1 ವ್ಯತ್ಯಾಸದಿಂದಲಪಥ್ಯವಾಗದು ಭ್ರಮೆ ಪಿತ್ತಶಾಂತಿಯನೀವುದು ತುತ್ತು ತುತ್ತಿಗೆ ನಮ್ಮ ಸತ್ಯವರನ ಪೆಸ- ರೆತ್ತಲು ಭವರೋಗ ಕತ್ತರಿಸುವ ದಿವ್ಯ 2 ಅಡವಿಯೊಳಗೆ ಪೋಗಿ ಕಡಿದು ತರುವುದಲ್ಲ ಅಡಿಗೆಗಿಕ್ಕುವ ಪಾಕ ಮಾಳ್ಪುದಲ್ಲ ಕುಡಿದು ನೋಡಿದರತಿ ಕಡುಮಧುರವು ನಮ್ಮ ಒಡೆಯ ವೆಂಕಟರಾಜನಡಿಗಳ ನೆನೆವೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಲಹಯ್ಯಾ ಲಕ್ಷೀರಮಣ ಸರುವದ ನಮ್ಮನು ನೀ ಪ ಊರೊಳಗಿರಲಿ ಊರು ಬಿಟ್ಟಿರಲಿ ದಾರಿಯ ಬಿಟ್ಟು ನಾ ಸಂಚರಿಸುತಿರಲಿ ಮಾರಮಣ ಮುರಾರಿ ನಿನ್ನಯ ಪಾದ ವಾರಿಜನ ನಂಬಿ ಸೇರಿದ ಭಕುತರ 1 ಸಿರಿಯೆನಗಿರಲಿ ಎಡರೆನಗಿರಲಿ ಮರುಳುತನವೆನಗೇ ಆವರಿಸಿರಲಿ ನರಹರಿ ನಿನ್ನಯ ಚರಣದ ಮಹಿಮೆಯ ಪರಿಪರಿಯಿಂದ ಪೊಗಳುವ ಮತಿಯಿತ್ತು 2 ದೊರೆತನ ಬರಲಿ ತಿರುಕನು ಆಗಲಿ ಬಂದೆ ಡಂಭದೊಳು ತಿರುಗುತಲಿರಲಿ ಕರಿವರದ ಶ್ರೀ ರಂಗೇಶವಿಠಲ ನಿನಮರೆಯದೆ ಹರುಷದಿ ನೆನೆವಂತೆ ಮಾಡಿ3
--------------
ರಂಗೇಶವಿಠಲದಾಸರು
ಸಂಸಾರ ಸಾಗರವನುತ್ತರಿಸುವಡೆಕಂಸಾರಿ ನಾಮವೊಂದೇ ಸಾಕು ಮರುಳೆ ಪ ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದುಸತತ ವ್ರತವ ಮಾಡುವೆನೆಂಬ ಹಮ್ಮು ಬೇಡಶ್ರುತಿಸ್ಮøತಿಯರಿತು ನಡೆವೆನೆಂಬ ಚೇಷ್ಟೆಯು ಬೇಡರತಿಪತಿಪಿತನ ನಾಮವೊಂದೆ ಸಾಕು ಮರುಳೆ 1 ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡವನಜನಾಭನ ನಾಮ ನೆನೆ ಕಂಡ್ಯ ಮರುಳೆ 2 ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ-ತಾರ್ಥನಾದೆನೆಂಬುವ ಹೆಮ್ಮೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಸುಖವನು ಸರ್ವದ ಬಯಸಲದೇನೆಂದು ನೀ ತಿಳಿದಿಹೆಯಣ್ಣಾ ಪ ಸುಖ ಬೇಕಾದರದರ ಗೂಢದ ನೆಲೆಯ ನೀ ಕಂಡ್ಹಿಡಿಯಣ್ಣಾ ಅ.ಪ. ಸಕ್ಕರೆ ತುಪ್ಪ ಹಾಲ್ಮೊಸರಿನೂಟವು ಸುಖವಹುದೇನಣ್ಣ ಬೊಕ್ಕಸ ಬರಿದಾಗದಲೆ ಸದಾ ರೊಕ್ಕ ತುಂಬಿಹುದೇನಣ್ಣ ಅಕ್ಕಪಕ್ಕದ ರೂಪವತಿಯರ ಕಣ್ಣೋಟದೊಳೇನಿದೆಯಣ್ಣ ಚಿಕ್ಕತನದ ಚಲ್ಲಾಟಗಳೋ ನಿರತನಾಗಿಹುದೇನಣ್ಣ 1 ಚರ ಸ್ಥಿರ ಸ್ವತ್ತುಗಳ ನೀ ಗಳಿಸಿ ಧನಿಕನೆನಿಸುವುದೇನಣ್ಣ ದೊರೆತನ ಬಯಸಿ ನೀ ದರ್ಪವ ತೋರುತ ಬಾಳುವುದೇನಣ್ಣ ಪರಿಪರಿ ಬಣ್ಣದ ಪಾವುಡ ಧರಿಸಿ ನೀ ಮೆರೆಯುವುದೇನಣ್ಣ ಕರಿ ತುರಗ ರಥ ಪಲ್ಲಕ್ಕಿಯಲಿ ಕುಳಿತು ಚರಿಸುವುದೇನಣ್ಣ 2 ಪರಿ ಸುಖಗಳೆಲ್ಲವು ತಪ್ಪಲು ನೀನಳುವಿಯೇತಕ್ಕಣ್ಣ ತಾಪತ್ರಯಂಗಳಂಕುರಿಸಲಿಕವೆಲ್ಲವು ಬೀಜಗಳೆ ಅಣ್ಣ ಪಾಪ ರಾಸಿ ಬೆಳೆಯಲಿವೆ ಮೂಲ ಕಾರಣವೆಂದರಿಯಣ್ಣ ಆಪತ್ತುಗಳು ಬಿಡದೆ ಬಂದಡರಿ ಬಹುತಾಪಗೊಳಿಪವಣ್ಣ3 ಈ ಸುಖಗಳೆಲ್ಲವು ಬಹುಕಾಲವಿರವು ಶಾಶ್ವತವಲ್ಲಣ್ಣ ಆಸೆಯ ತೋರಿಸಿ ನಿನ್ನನು ಬಹುಮೋಸಗೊಳಿಪವು ಕೇಳಣ್ಣ ಹೇಸಿಕೆಗಿಂತವು ಕಡೆಯಾಗಿಹವೆಂದು ದೃಢದಿ ನಂಬಿರಣ್ಣ ಸಾಸಿರ ನಾಮದ ರಮೇಶನ ಸ್ಮರಿಸಲು ಬೇಸರ ಬೇಡಣ್ಣ 4 ಕಟ್ಟಿಕೊಂಡ್ಹೋದ ಬುತ್ತಿಯು ತಾನೆಷ್ಟು ದಿನವಿದ್ದೀತಣ್ಣ ಎಷ್ಟು ಹೇಳಿದರೇನಿ ಫಲವು ನಿನ್ನಲಿ ನೀನೆ ತಿಳಿಯಣ್ಣ ಗುಟ್ಟಿನಲಿ ಮನಮುಟ್ಟಿ ಯೋಚಿಸಲದುವೆ ಬಯಲಾಗುವುದಣ್ಣ ದಿಟ್ಟ ರಂಗೇಶವಿಠಲನ ನಾಮವೊಂದೇ ನಿಜ ಸುಖವಣ್ಣ 5
--------------
ರಂಗೇಶವಿಠಲದಾಸರು
ಸುಖಿಯಾದೆನು ಶ್ರೀ ಪಾದಾ ಹೊಂದಿ ಗುರುವಿನಾ ಪ ಸರಿತ ಮಹಾನದಿಯೊಳು ಬೆರೆತಂತೆ | ನೆರೆ ಕೀಟಕ ಭೃಂಗಿ ಬೆರೆಸಿದಂತೆ 1 ಬಡವಗ ನಿಧಾನವ ದೊರೆತಂತೆ | ಪೊಡವಿ ಬೆಳೆಗೆ ಘನ ಮಳೆಗರೆದಂತೇ ಜಡ ಮತಿಗೇ ಶಾರದೆ ಒಲಿದಂತೆ 2 ತಂದೆ ಮಹೀಪತಿ ಕಂದಗ ವಲಿದು | ಛಂದದಿ ಭಕುತಿಯ ದಾರಿಗೆ ತಂದು | ಬಂದದ ಸಾರ್ಥಕ ಮಾಡಿದೆ ನಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಗುಣಗಣಾನ್ವಿತೆಯೇ ಪ. ಸಖಿಯೇ ಸರೋಜಮುಖಿಯೇ ಅ.ಪ. ಶಶಿಮುಖಿ ನೀ ಬಾ ಸುಮಕೋಮಲೆ ನೀ ಬಾ ಬಾ ದಶರಥ ಸುತನ ಮ ಹಿಮೆಯಿದೆಂದು ಪೊಗಳುವ ಬಳಿಸಂದು 1 ಚಿನ್ನದ ಕೋಲಂ ರನ್ನದ ಕೋಲಂ ನನ್ನಿಯಿಂದಲಿ ಪಿಡಿದು ಚೆನ್ನಿಗನೋವಿಂದು ಚೆನ್ನಿಗ ನೊಲವಿಂ[ನ್ನೊ]ಳಗಾಯ್ತೆಂದೆನ್ನುವ ನಲಿನಲಿದು2 ಮೆರೆವಳು ಮೋಹಿನಿಯೋಲ್ ದೊರೆತುದು ನಮಗೀ ಶರದಾಗಮ ಮಿಂದರರೇ ಸುಗ್ಗಿಯ ಸಮಯಂ3
--------------
ನಂಜನಗೂಡು ತಿರುಮಲಾಂಬಾ
ಹನುಮ-ಭೀಮ-ಮಧ್ವ ಸ್ತೋತ್ರ ಅಪಮೃತ್ಯು ಪರಿಹರಿಸೊ ಅನಿಲದೇವಾ ಕೃಪಣ ವತ್ಸಲನೆ ಕಾಯ್ವರ ಕಾಣೆ ನಿನ್ನುಳಿದು ಪ ನಿನಗಿನ್ನು ಸಮರಾದ ಅನಿಮಿತ್ತ ಬಂಧುಗಳು ಎನಗಿಲ್ಲವಾವಾವ ಜನ್ಮದಲ್ಲಿ ಅನುದಿನ ನೀನೆಮ್ಮನುದಾಸೀನ ಮಾಡುವುದು ಅನುಚಿತವು ಜಗಕೆ ಸಜ್ಜನ ಶಿಖಾಮಣಿಯೆ 1 ಕರಣಮಾನಿಗಳು ನಿನ್ನ ಕಿಂಕರರು ಮೂಲೋಕ ದೊರೆಯು ನಿನ್ನೊಳಗಿಪ್ಪ ಸರ್ವಕಾಲ ಪರಿಸರನೆ ಈ ಭಾಗ್ಯ ದೊರೆತನಕೆ ಸರಿಯುಂಟೆ ಗುರುವರಿಯ ನೀ ದಯಾಕರನೆಂದು ಮೊರೆ ಹೊಕ್ಕೆ 2 ಭವರೋಗ ಮೋಚಕನೆ ಪವಮಾನರಾಯಾ ನಿ ನ್ನವರನು ನಾನು ಮಾಧವಪ್ರಿಯನೇ ಜವನ ಬಾಧೆಯ ಬಿಡಿಸು ಅವನಿಯೊಳು ಸುಜನರಿಗೆ ದಿವಿಜಗಣ ಮಧ್ಯದಲಿ ಪ್ರವರ ನೀನಹುದಯ್ಯ 3 ಜ್ಞಾನಾಯು ರೂಪಕನು ನೀನಹುದೋ ವಾಣಿ ಪಂ ಚಾನನಾದ್ಯಮರರಿಗೆ ಪ್ರಾಣದೇವಾ ದೀನವತ್ಸಲನೆಂದು ನಿನ್ನ ಮೊರೆ ಹೊಕ್ಕೆ ದಾನವಾರಣ್ಯ ಕೃಶಾನು ಸರ್ವದ ಎಮ್ಮ 4 ಸಾಧನ ಶರೀರವಿದು ನೀ ದಯದಿ ಕೊಟ್ಟದ್ದು ಸಾಧಾರಣವು ಅಲ್ಲ ಸಾಧುಪ್ರಿಯಾ ವೇದವದೋದಿತ ಜಗನ್ನಾಥ ವಿಠಲನ ಮೋದ ಕೊಡು ಸತತ5
--------------
ಜಗನ್ನಾಥದಾಸರು