ಒಟ್ಟು 934 ಕಡೆಗಳಲ್ಲಿ , 58 ದಾಸರು , 715 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿ ಗುರುರಾಯಾ :ಸ್ವಾನಂದ ಚಂದ್ರೋದಯಾ ದೋರಲು ಭವತಾಪಾ :ಹೋಯಿತು ನಿಶ್ಚಯಾ ಪ ಚಿತ್ತಚಕೋರಕಿಂದು :ಬೋಧಾಮೃತವನುಣಿಸೀ ಮತ್ತಹೃದಯನೈದಿಲಿಗೆ :ಸುಖವಿತ್ತೆ ಕರುಣಿಸಿ 1 ಜ್ಞಾನಚಂದ್ರ ಕಾಂತಿಯಲ್ಲಿ :ರಾಮರಸವಿಸೀ ತಾನೇಪದ ರೂಪದಿಂದಾ :ನೆಲಿಸಿತು ಧನ್ಯಗೈಸಿ 2 ಶರಧಿ :ಹೊರಚೆಲ್ಲಿ ತೈಯಿಂದು ತಂದೆ ಮಹಿಪತಿ ಸ್ವಾಮಿ :ಕಂದನುದ್ಧರಿಸೆಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿ ಬೆಳಗುವೆನಾ :ಮಹಿಪತಿ ಗುರುವಿನಾ ದೋರುವ ಪಾದುಕಿಗೆ :ಒಪ್ಪಿಸಿ ಜೀವಪ್ರಾಣ ಪ ಜಡಜೀವತಾರಿಸಲಿ :ವಸ್ತುಗುರುರೂಪತಾಳಿ ಪೊಡವಿಲಿನ್ನು ಮಹಿಮೆದೋರಿ ನಿಂತ ವಿಶ್ವಾತ್ಮದಲ್ಲಿ 1 ಇದ್ದಲ್ಲೆ ಭಾವಿಸಲಿ ಗುರುಜ್ಞಾನದಾಕೀಲಿ ಬುದ್ಧಿಪ್ರೇರಕನಾಗಿ ಹೇಳುವನು ಮೌನದಲಿ2 ಉದ್ಧವಗಯದುರಾಯಾ ನೀಡಿದಂತೆ ನಮ್ಮಯ್ಯಾ ಮುದ್ದು ಪಾದುಕೆಯಾಕೊಟ್ಟು ಮಾಡೆಂದು ಪೂಜೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿ ಬೆಳಗುವೆನಾ | ಅಸುರವಂದ್ಯಗೆ ಕಾರುಣ್ಯ ವೇದವ್ಯಾಸ ಮುಕುಂದಗೆ ಪ ಸತ್ಯವತೀ ಸುತನಾಗ್ಯವತರಿಸಿದ | ಸತ್ಯ ಸನಾತನ ಮೂರುತಿಗೆ 1 ಅಖಿಲದೋಳಗೆ ಭಾರತ ಭಾಗವತವ ಸಕಲ ಪುರಾಣವ ರಚಿಸಿದವಗೆ 2 ತಾನಿಜಗತಿ ಪದ ದೋರಿದಗೆ 3 ಶರಣಜನರಿಷ್ಟಾರ್ಥವ ನೀಡುತ ಗುರುಮಹೀಪತಿಸುತ ಸಾರಥಿಗೆ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿಯನೆತ್ತಿರಿ ಅಚ್ಯುತನಿಗೆ ಅನಂತನಿಗೆ ಗೋವಿಂದನಿಗೆ ಪ ಕಾಲ ನಿಯಾಮಕ ಕಾಲೋತ್ಪಾದಕ ಕಾಲಾತ್ಮನಿಗೆ1 ನೊಂದು ಕೌಂಡಿಣ್ಯನು ಮುಂದೋರದಲಿರೆ ಕರವ ಪಿಡಿದಾನಂದವಿತ್ತಗೆ 2 ಸಂತತ ನಡೆಯುವರಂತರ ಬಿಡಿಸುವ- ನಂತ ಮಹಿಮ ಜಯವಂತ ಶ್ರೀಕಾಂತಗೆ 3
--------------
ಲಕ್ಷ್ಮೀನಾರಯಣರಾಯರು
ಆರೇ ಸುಳಿದವನಿಂದು|ನೀರೇ ತಂದುವನ ತೋರೇ ಪ ನೀಲಮೇಘದ ಕಾಂತಿಮೈಯ್ಯಾ|ನೋಡೇಮದನಯ್ಯಾ| ಕಾಲಲುಂದಿಗೆ ಹೆಜ್ಜೆಘಿಲು ಘಲುಕೆನುವಾ| ಮೇಲು ಪಿತಾಂಬರ ಝಳ ಝಳಿಸುವ ನವನಾರೇ 1 ಮೆರೆವ ವಡ್ಯಾಣ ಘಂಟೆಸಿರಿಯಾ|ಕವಿಹೊಗಳಲರಿಯಾ| ಬೆರಳುಂಗುರ ಕಡಗ ಕೇಯೂರಾ| ಕೌಸ್ತುಭ ಮಾಲೆಯ ಹೊರವನಾರೇ 2 ಕಡೆಗಣ್ಣನೋಟ ಪದುಮದೆಲಿಯೋ|ಮೋಹನದಾಬಲೆಯಾ| ಕುಂಡಲ ಹೊಳೆವ ಕಪೋಲಾ| ಇಡಿದನೇ ನಗೆಯ ಸುನಾಶಿಕ ಸರಳವನಾರೇ 3 ಮೃಗದ ಪಣಿಯಾಲುಂಗುರ ಗುರುಳೋ|ಕಾವನಸರಳೋ| ಝಗಝಗಿಸುವ ರನ್ನ ಮುಕುಟದ ಚೆಲುವಾ| ಬಗೆ ಬಗೆ ಸೊಬಗಿನ ನವರಸಗರೆವನಾರೇ 4 ತರುಣೀ ಮುನ್ನಿನಸುಕೃತಬಂದು|ವದಗಿ ತಾ ಇಂದು| ಗುರು ಮಹಿಪತಿ ಪ್ರಭು ಚರಣವದೋರಿ|ಮರುಳೆನ್ನಾ ಮಾಡಿದ ದೀನೋದ್ಧಾರಿವನಾರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆವ ಬಗೆಯಲಾದರು ಕರುಣದಿ ದೇವ ಕೃಪೆದೋರೋ ಪ. ಭಾವ ಭಕುತಿಯಲಿ ತೋಯಜಾಕ್ಷನೆ ನಿನ್ನ ಕಾವ ಕರುಣಿಯೆಂದು ಭಾವಿಸಿ ಕರೆವೆನು ಅ.ಪ. ವಿಪ್ರರಾಗಮವಾದರೂ ಸರಿ ಕ್ಷಿಪ್ರದೊಳವನ ಸಂಗದಿ ಅಪ್ಪಾ ನೀ ನೆರೆಯುವ ಸಪ್ಪಳಾ ತೋರುತ ಬಪ್ಪೆ ಎಂದೆನೆವೆನು ಅಪ್ಪ ತಿಮ್ಮಪ್ಪನೇ 1 ಮಕ್ಕಳೊಳಗಾದರೊ ನಿನ್ನಯ ಆಟ ಪಕ್ಕನೆ ತೋರೋ ದೇವನೆ ಚಿಕ್ಕ ಕೃಷ್ಣನೆ ನಿನ್ನ ರೂಪವ ನೆನೆಯುತ ಪರಿ 2 ಮನೆಗೆಲಸದೊಳು ನಿನ್ನಯ ಧ್ಯಾನ ತನು ಮನ ನೆನೆಯುತಲಿ ದಿನದಿನದಲಿ ಸುಖ ದುಃಖದೊಳು ಮನಸಿಜಪಿತ ನಿನ್ನ ನೆನಸುವ ಪರಿಯಲಿ 3 ಹಿರಿಯರಾಗಮವಾಗಲು ನಾನವರೊಳು ಕಿರಿಯಳಂದದಿ ಇರುವ ಪರಿ ಮನವನಿತ್ತೂ ಪೊರೆ ಕರುಣಾಳು ಕರಣ ಶುದ್ಧಳಾ ಮಾಡಿ ಕರೆ ನಿನ್ನ ಬಳಿಗೆ 4 ಕನಸಲಾದರೂ ನಿನ್ನ ಮನಸಿಜಪಿತನೆ ಮನನ ಮಾಡುತ ನೆನೆಯುವ ಘನಕೃಪೆಯಿತ್ತು ಎನ್ನ ಜನುಮ ಸಾರ್ಥಕಗೊಳೆ ಈತನು ನಿನಗರ್ಪಿಸಿಹೆ ದಿನಮಣಿ ಶ್ರೀ ಶ್ರೀನಿವಾಸ 5
--------------
ಸರಸ್ವತಿ ಬಾಯಿ
ಆವದಿದು ಜ್ಞಾನ ಪ ಆವದಿದು ಜ್ಞಾನಾ ಬಲ್ಲವಿಕೆ ಜಾಣಾ | ಭಾವದುಗಮ ವರಿಯದೆವೆ ಜರಿದಿ ನಿಜ ಖೂನಾ 1 ಅರಹು ಆಗಲೆಂದು ಕುರುಹ ದೋರಿದೊಂದು | ಕುರುಹವಿಡದ ಕೊಡ ತಿರುಗಿ ಅರಹು ಮರದಿಂದ 2 ಕಲಿತು_ವಾಡುದು ಸೊಲ್ಲಾ ಗುಣಕ ಬಾಹುದಲ್ಲಾ | ಕಳೆದು ಅನುಮಾನ ಶಾಂತಿ ಸುಖವ ಪಡೆಯಲಿಲ್ಲಾ 3 ಅರಿಯದಿದ್ದರ ಕೀಲು ಸಾಧು ಸಂತರು ಕೇಳು | ಗರುವತನವ ನೀಗಿ ಯಲ್ಲರ ಕಿರಿಯನಾಗಿ ಬಾಳು 4 ಸಾರಥಿ | ಹೊಂದಿದವರ ನೋಡಿ ಕೊಡುವ ಮತಿ ಸ್ಫೂರ್ಥಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವಬಂಧುಗಳೆಲೋ ಜೀವ ವಿಚಾರಿಸೋ ಕಾವ ಸಮರ್ಥದೇವ ಹರಿಯಲ್ಲದೆ ಪ ಮಾಯಮೋಹವ ನೀಗಿ ಕಾಯಶುದ್ಧಲಿ ಮನ ಪಾದ ದಿವ್ಯಭಕ್ತಿಲಿ ಭಜಿಸೊ ಅ.ಪ ಜನನಿ ಬಂದಹಳೆಂಬೆ ಜನನಿರ್ದಳಾಧ್ರುವಗೆ ಜನಕನ ತೊಡೆಯಿಂದ ಕನಿಕರಿಲ್ಲದೆ ಮಲ- ಜನನಿ ನೂಕಲು ಕಂದ ವನಕ್ಹೊರಟು ಪೋಗಲು ಜನನಿ ಸಲಹಿದಳೆನೋ ವನಜಾಕ್ಷನಲ್ಲದೆ 1 ಸತಿಹಿತದವಳೆನುವೆ ಸತಿಯಿರ್ದು ಸುಗ್ರೀವ ಖತಿಪಟ್ಟಾಗ್ರಜನಿಂ ವ್ಯಥೆಯಿಂದುಸುರ ಬಿಡಲು ಸತಿಬಂದು ಪತಿಯನ್ನು ಹಿತದಿ ಕರೆದೊಯ್ದಳೆ ಹಿತದ ಬಂಧುಗಳಿವರೇ ಕ್ಷಿತಿಪತಿಯಲ್ಲದೆ 2 ಸುತರ ಬಲವಿಹುದೆನುವೆ ಸುತರತಿ ಬಲಾನ್ವಿತರು ಜಿತಮಾರನಿಗಿರೆ ಉರಿಹಸ್ತ ವರವಿತ್ತು ಗತಿದೋರದಿರುತಿರೆ ಸುತರು ನೆರವಾದರೆ ಗತಿ ರಮಾಪತಿಯೆನೆ ಹಿತದಿಂ ಮೊರೆಕಾಯ್ದ 3 ಬಂಧುಗಳತಿಶಯದ ವೃಂದನೆರೆದು ಇರ ಲಂದು ಕರಿಮಕರಿಕೆಯಿಂದ ಬಂಧನ ಪಡಲ ವಂದು ಬೆಂಬಲಗೊಟ್ಟು ಬಂಧನವ ಬಿಡಿಸಿದುವೆ ತಂದೆಯಾ ಶ್ರಿ ಮುಕ್ಕುಂದನಲ್ಲದಲೆ 4 ಹರಿಯೆ ಪರದೈವವೋ ಹರಿಯೆ ಪರಲೋಕವು ಹರಿಯೇ ಸ್ಥಿರಸುಖವು ಹರಿಯೆ ವರ ಮುಕ್ತಿಯೋ ಹರಿಯೆಂದು ಅಜಮಿಳ ನರಕಯಾತನೆ ಗೆದ್ದ ಪಾದ 5
--------------
ರಾಮದಾಸರು
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು