ಒಟ್ಟು 69 ಕಡೆಗಳಲ್ಲಿ , 29 ದಾಸರು , 58 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಕರ ನೀನೆ ಗತಿಯಲ್ಲದೆ ಬ್ಯಾರಾಕರವಿಲ್ಲ ಕೃಪಾಕರನೆ ದುರಿತ ನಿರಾಕರಿಸಯ್ಯ ಪರಾಪರನೆ ಪ. ರಾಜಿಕ ದೈಹಿಕ ದೈವಿಕರೆಲ್ಲ ಮ- ಹೋಜಸ ನಿನ್ನೊಶವಾಗಿಹವು ಪೂಜಿಸದೆನ್ನ ಸಭಾಜಿಸು ಮಂಗಲ ಭಾಜನ ಶತ್ರು ಪರಾಜಯ ಮಾಡಿಸು 1 ಹಲವಂಗದಿ ನಾ ಬಳಲುವ ಚಿಂತೆಯು ತಿಳಿಯದೆ ಚಿನ್ಮಯ ಜಲಜ ಸುಲಭದಿ ಸಂಪತ್ಫಲಗಳ ವರ್ಧಿಸಿ ನೆಲೆದೋರೆನ್ನೊಳು ಸುಕಟಾ 2 ರೋಗಭಯಂಗಳ ನೀಗುತ ಭಕ್ತಮ- ನೋಗತ ಫಲಸಂಯೋಗಗಳ ಬೇಗದಿ ನೀಡು ಕರಾಗತ ಮಾಡು ಸು- ನಾಗ ಗಿರೀಂದ್ರ ಸರಾಗ. . . . . . 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಲೋಲ ಶ್ರೀನರಸಿಂಹ ಬಲಗೋಂಬೆನು ನಿನ್ನ ಪ. ಸಾರರಹಿತವಹ ಘೋರತರ ಸಂಸಾರದಿ ತೊಳಲುತ ಗಾರುಗೊಂಡಿಹೆನೈ ಶ್ರೀಲೋಲ ಅ.ಪ. ಚಿಣ್ಣನು ತಾ ಬಣ್ಣಿಸಿ ಕರೆಯೆ ಮನಕದ ತಂದು ಅನ್ಯದೈವಗಳ ಮರೆದು ತನ್ನನೆ ನೆನೆವ ಚಿಣ್ಣನಿಗಾಗಿ ಕಂಬದಿ ಬಂದು ಘನ್ನ ರೋಷದಿ ದೈತ್ಯನ ಸೆಳೆದು ಕುನ್ನಿಯ ಮುಡಿಯನು ಪಿಡಿದೆತ್ತಿ ಜಡಿದು ತನ್ನ ತೊಡೆಯೊಳಗಿರಿಸಿ ಖಳನುರ ವನ್ನು ಬಗೆದು ಕರುಳನು ಕೊರಳೊಳು ಧರಿಸಿದ 1 ಘೋರರೂಪಕೆ ನಡುಗುತಲಂದು ಸುರಗಣನಿಂದು ಶರಣೆಂದಾಕಂದನ ಕರೆದು ಪರಮಾದರದಿಂ ಶ್ರೀದೇವಿಯನೊಡಗೊಂಡು ಪರತರಾಭಯ ಹಸ್ತವ ನೀಡಿ ಸರಸದಿ ಕರೆದಾದರಗೂಡಿ ತರಳನೆ ಭಕ್ತಾಗ್ರೇ ಸರ ನೆನ್ನಿಸಿ ನೆರೆಸುಖಿಸೆಂದೊದವಿದ 2 ಚಾರು ಚರಿತ ಪ್ರಹ್ಲಾದನ ಆಲಿಸಿ ನಲವಿಂ ಸಾರಿತನ್ನನೇ ನೆನೆವರನೆಂದೆಂದು ಕೋರಿಕೆಗಳ ಸಲ್ಲಿಸಿ ಸಲಹುವನೆಂದು ಸಾರೆಬಂದಿಹೆ ನಿನ್ನೆಡೆಗಿಂದು ಸಾರಸಾಕ್ಷನೆ ನೀ ಕೃಪೆದೋರೆಂದು ಕೋರಿಭಜಿಪೆ ಶ್ರೀಶೇಷಗಿರಿವರ ದಯಾಸಿಂಧು 3
--------------
ನಂಜನಗೂಡು ತಿರುಮಲಾಂಬಾ
ಸಂಪ್ರದಾಯದ ಹಾಡುಗಳು ಅವಳೊಡನೆ ಮುನಿವ ಬಗೆಯೇನೋ ಪೇಳೋ ಪ ಸಿರಿಮುಡಿಗೆ ಸಂಪಿಗೆಯ ಕೊರಳ್ಗೆ ಕಸ್ತೂರಿಯನುವರಫಾಲದೆಡೆಗೆ ಕುಂಕುಮ ರೇಖೆಯಧರಿಸಿ ಪಾಟೀರ ಕರ್ದಮವನಂಗಕೆ ತಿವುರಿಕರದಿ ವೀಣೆಯ ಪಿಡಿದು ನಲಿದು ಪಾಡುವಳು1 ವರರತ್ನ ಕಂಕಣವು ಬಾಹು ಭೂಷಣವಾಯ್ತುಮಿರುಪಮುದ್ರಿಕೆ ಸ್ವರ್ಣ ಕಟಕವಾಯ್ತುಕರದ ಕೊನೆಯೊಳಗೆ ದೋರೆಯವನಿಟ್ಟಳು ತನ್ನಬೆರಳ್ಗೆ ವೈಢೂರ್ಯದುಂಗುರವ ಧರಿಸಿದಳು 2 ಸುರರ ದಾನವರ ತೌರವರನಾಕಾಶವನುಉರಗತತಿಯನು ಕುಂಭಸಂಭವನನು ಹರನಹರಸುತರ ಸುರಗಿರಿಯ ಕೋಪಿಸಿ ಕೆಳದಿಪುರದ ರಾಮೇಶ ನಿನ್ನ ಬರವ ಹಾರೈಸುವಳು 3
--------------
ಕೆಳದಿ ವೆಂಕಣ್ಣ ಕವಿ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುಬ್ರಹ್ಮಣ್ಯ ಇನ್ನೂ ದಯೆದೋರೆಯ ಪ ಕರ್ಮ ಬೆನ್ನ ಪಿಡಿಯುತೀಗ-ಲೆನ್ನ ಕಾಡುತಲಿದೆ ನಿನ್ನಾಶ್ರಯವ ಗೈದೆ ಅ ಅನುದಿನ ಕೊರಗುವೆ ಅನಪತ್ಯಕೋಸುಗ ಕೊನೆಗಾಣಿಸೆಂದು ನಾ ಮಣಿಯುತ ಬೇಡುವೆ 1 ಬಲವೆಲ್ಲಿ ಕುಗ್ಗಿತು ಗೆಲವೆಲ್ಲಿ ನಿಂತಿತು ಛಲ ಬಿಟ್ಟು ಎನ್ನನೀ ಸಲಹೆಂದು ಬೇಡುವೆ 2 ಲೇಶವು ಸುಖವಿಲ್ಲ ಘಾಸಿಯಾದೆನು ಪಾವಂ-ಜೇಶನೆ ತವಪದ ದಾಸರ ಮೇಲೆ ನೀ | ಇನ್ನೂ 3
--------------
ಬೆಳ್ಳೆ ದಾಸಪ್ಪಯ್ಯ
ಹಿಡಿಯೊರಂಗಯ್ಯ ಉಡುಗೊರೆಕೊಡುವೆವೊ ಕೃಷ್ಣಯ್ಯಭಿಡೆ ಬ್ಯಾಡೊ ಬೆತ್ತಲಿದ್ದಿಇದೇನು ಸಡಗರ ರಂಗಯ್ಯ ಪ. ನೀಲ ದೊಡ್ಯಾಣನಿಟ್ಟುಮ್ಯಾಲೆ ಉಂಗುರವು ಮೊದಲಾಗಿಮ್ಯಾಲೆ ಉಂಗುರವು ಮೊದಲಾಗಿ ತಂದೆವಬಾಲ ಕೃಷ್ಣಯ್ಯನ ಜನಕಗೆ ಉಡುಗೊರೆ 1 ಶೌರಿ ಕೃಷ್ಣಯ್ಯನ ಜನನಿಗೆಶೌರಿ ಕೃಷ್ಣಯ್ಯನ ಜನನಿ ದೇವಕಿಗೆಕುವರಿಯರು ಕೊಟ್ಟ ಉಡುಗೊರೆ2 ಹಲವು ಸೂರ್ಯರ ಬೆಳಕು ಗೆಲವೊ ಪಿತಾಂಬರ ಬೆಲೆಯಿಲ್ಲದಂಥ ಮುಕುಟವುಬೆಲೆಯಿಲ್ಲದಂಥ ಮುಕುಟ ಮುತ್ತಿನ ಹಾರ ಬಲರಾಮನಿಗೆ ಉಡುಗೊರೆ3 ಬಿಳಿ ಬಣ್ಣದ ಸೀರೆರನ್ನ ಮಾಣಿಕದಾಭರಣಹೊನ್ನೋಲೆ ಕೊಪ್ಪು ನಡುವಿಟ್ಟುಹೊನ್ನೋಲೆ ಕೊಪ್ಪು ನಡುವಿಟ್ಟು ತಂದೆವ ಕನ್ನೆ ರೇವತಿಗೆ ಉಡುಗೊರೆ 4 ಸಕಲಾತಿ ಸೀರೆ ದೋರೆ ಕಂಕಣ ಸರಿಗೆ ಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ರಾಮೇಶನನೂರು ಮಂದಿಗೆ ಉಡುಗೊರೆ 5
--------------
ಗಲಗಲಿಅವ್ವನವರು
(ಬಪ್ಪನಾಡಿನ ದೇವಿಯನ್ನು ಕುರಿತು)ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆ ಪ.ದಯಮಾಡೆ ಕೇವಲ ಭಯವಿಹ್ವಲನಲ್ಲಿದಯಸಾಗರೆ ಸೌಭಾಗ್ಯಸಂಪದವನ್ನು ಅ.ಪ.ವೇದಾಂತವೇದ್ಯೆ ನಿಖಿಳಜಗದಾದಿವಿನೋದೆಭೂಧರಾತ್ಮಜೆ ಸರ್ವಾಧಾರಶಕ್ತಿ ಕಲಾಧರೆಮಧುರಬಿಂಬಾಧರೆ ನಿನ್ನಯಪಾದವನು ಮರೆಹೊಕ್ಕೆ ಮನಸಿನ ಭೇದವನುಪರಿಹರಿಸಿ ಸರ್ವಾಪ-ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆಗಂಭೀರೆ ಮೇರು ನಿತಂಬೆಸಿಂಹಮಧ್ಯೆಲಂಬೋದರಪರಿರಂಭಕರಾಂಬುಜೆಕುಂಭಿಕುಂಭಪಯೋಜೆ ಶೋಭಿಪ ಕಂಬುಕಂಠಿಮುಖೇಂದುಪದ್ಮ ದ-ಳಾಂಬಕಿ ಎನಗಿಂಬುದೋರೆರೋಲಂಬಕುಂತಳೆಶುಂಭಮರ್ದಿನಿ2ಸಿಂಧೂರನಯನೆ ನಿಖಿಲಾಮರವಂದಿತಚರಣೆಸುಂದರಾಂಗಿ ಸುಮಗಂಧಿವಿಬುಧಮುನಿವೃಂದಸೇವಿತೆನಿತ್ಯಾನಂದಪ್ರಕಾಶಿನಿಅಂಧಕಾಸುರವೈರಿಹೃದಯಾನಂದಪಾರಾವಾರಪೂರ್ಣಮಿ-ಚಂದ್ರೆ ಸದ್ಗುಣಸಾಂದ್ರೆಸುರಥನರೇಂದ್ರವರದೆ ಮೃಗೇಂದ್ರವಾಹಿನಿ 3ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆನಿಜದಿ ನಿನ್ನಯ ಪಾದಂಬುಜವ ನಂಬಿದೆ ತ್ರಿಜಗವಂದಿತೆಮಹಾಗಜಗೌರಿ ಶಂಕರಿತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ-ವ್ರಜವಿದಾರಿ ಮುನೀಂದ್ರ ಮನನೀರಜದಿವಾಕರೆ ಮಾನಿತೋದ್ಧರೆ 4ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರಸರ್ಪಶಯನ ಲಕ್ಷ್ಮೀನಾರಾಯಣಪ್ರೀತಿಯಪ್ಪಂತೆ ದಯೆ ಗೈಯೆಜಗದಾದಿಮಾಯೆಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ-ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಣ್ಣು ಮುಚ್ಚೆನ್ನಾ ಆಡಿಸೆಸಣ್ಣವರನ್ನು ಹೊರಗಡಗಿಸೆ ಪಗಟ್ಟಿ ಹುಡುಗರು ಅವರೆಲ್ಲಮಟ್ಟ ಮಾಯಾಗಿ ಹೋದರು ||ಥಟ್ಟನೆದ್ದು ಯನ್ನ ಕೈಯವರಮುಟ್ಟಿಸದಿರೆ ಬಿಡೆ ನಿನ್ನ 1ಪಾಯಿಸ ಹೋಳಿಗೆ ಮಾಡಿಬಾಯಿಗೆ ಕೈದೋರೆಗೋಪಿ||ನಾಯೆರುವಿನೆ ನಿನ್ನ ತಲೆಗೆನೀ ಯೆರಕೊಳ್ಳ ಒಲ್ಲೆನೆನ್ನೆ 2ಅಣ್ಣನ ರಂಬಿಸಿ ಕರೆದುಹಣ್ಣುಗಳವಗೆ ಕೊಡಬೇಡೆ ||ಚಿನ್ನದ ಗೊಂಬೆ ಬಾ ಎಂದುಬಣ್ಣ ಬಣ್ಣದಲೆನ್ನ ಕರೆಯ 3ನೀ ಹಾರ ಮಗನೆಂದುಕೇಳಿಮೇದಿನಿಯೊಳು ನಾ ಹೆಚ್ಚೆನ್ನೆ ||ಹೋದಬಾರಿಹೊಟ್ಟಿಗೆಮಾರಿಹೋದಳೂ ನಿಮ್ಮಮ್ಮನೆನೆ 4ಯನಗೆ ಪಾಪ ನೀನಾಗಿತಿನಲಿಕ್ಕಪ್ಪಚ್ಚಿ ಬೇಡೇ ||ಮಣಿಗುಂಡೆನಗೆ ಕೊಡುಯೆಂದುಮುನಸುಗುಟ್ಟೆನ್ನನು ಕಾಡೇ 5ದೃಷ್ಟಿ ತಾಕಿತು ಮಗಗೆಂದುಕಟ್ಟಿಸೆ ಯಂತ್ರ ಇನ್ನೊಮ್ಮೆ ||ಕೊಟ್ಟು ಅಮ್ಮಿಯ ರಂಬಿಸಿತೊಟ್ಟಿಲೊಳಗಿಟ್ಟು ತೂಗೇ 6ಏನು ಪುಣ್ಯ ಮಾಡಿದೆನೋಕ್ಷೋಣಿಗೆ ಹತಾರ್ಥವಾಗಿ ||ಪ್ರಾಣೇಶ ವಿಠಲನು ನಿನ್ನತಾನೇ ಕೊಟ್ಟನು ಯನಗೆನ್ನ 7
--------------
ಪ್ರಾಣೇಶದಾಸರು
ನಲಿನಲಿದು ಬಾ ತ್ರಿಜಗದಾಂಬೆ ಪ.ಮಾನಸದೊಳು ಸುಜ್ಞಾನಬೋಧಳಾಗಿಆತನದೇವಕದಂಬೆ ಅ.ಪ.ವಿದ್ಯಾ ಬುದ್ಧಿ ವಿನಯ ಮಂಗಳಗಳಸಾಧ್ವಿ ನಿನ್ನಲಿ ಬೇಡಿಕೊಂಬೆ 1ನಲಿದೆನ್ನಯ ಜಿಹ್ವಾಗ್ರದಿ ನೆಲಸುತಸುಲಭದೋರೆಯೆ ಸುಲಲಿತವ ಶಿವೆ 2ಧೀರ ಲಕ್ಷ್ಮೀನಾರಾಯಣಾಶ್ರಿತೆ-ಪರಮೇಷ್ಠಿಪರಿರಂಭೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಕ್ತವತ್ಸಲನಹುದೊ ವೆಂಕಟರೇಯಭಕ್ತವತ್ಸಲನಹುದೊ ಪ.ಕರಿಯ ಮೊರೆಯನರಿದು ಸಿರಿಯಜರಿದುಗರುಡನ ಕರೆಯದೆ ಭರದೊಳರಿಯಿಂದರಿ ಬಾಯ ಮುರಿಗೆಯ ಹರಿದ್ಯೆಂದುನಾರದಾದ್ಯರು ನಿನ್ನ ಬಿರುದು ಸಾರುವರೊ 1ಅಂಬುಜಾಂಬಕನಂಬಿದೆನೆಂಬೆ ದಯಾಂಬುಧಿಹರಿನಿನ್ನಿಂಬುದೋರೆ ನಲವಿಲಂಬಲದಿ ಕಂಬದಿ ಬಿಂಬಿಸಿ ಡಂಬನಡಿಂಬವ ಬಿಗಿದೆ ಪೀತಾಂಬರಧರನೆ 2ಚಿನ್ನ ತನ್ನ ತಾತನ್ನ ಜರಿದವನನ್ನವನುಣ್ಣದೆ ನಿನ್ನ ಬಣ್ಣಿಸಲವನುನ್ನತ ಭಕುತಿಗೆ ಮನ್ನಿಸಿ ಪೊರೆದೆ ಪ್ರಸನ್ನವೆಂಕಟರನ್ನ ಮೋಹನ್ನ 3
--------------
ಪ್ರಸನ್ನವೆಂಕಟದಾಸರು
ವಿಜಯನ ಸತಿಯಿಂದ ಫಲವಾಯ್ತು-ಅದು |ಗಜೇಂದ್ರನಿಂದ ದೋರೆ ಹಣ್ಣಾಯ್ತು ||ದ್ವಿಜಶುಕಮುನಿಯಿಂದೆ ಫಲ ಪಕ್ವವಾಯಿತು |ಅಜಾಮಿಳ ತಾನುಂಡು ರಸ ಸವಿದ 2ಕಾಮಿತ ಫಲವೀವ ನಾಮವೊಂದಿರಲಾಗಿ |ಹೋಮ ನೇಮ ಜಪತಪವೇಕೆ ||ಸ್ವಾಮಿ ಶ್ರೀ ಪುರಂದರವಿಠಲ ರಾಯನ |ನೇಮದಿಂದಲಿ ನೀ ನೆನೆ ಮನವೆ 3
--------------
ಪುರಂದರದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ವಾದಿರಾಜ ಸಲಹೆನ್ನ ರಾಜಸೇವಕರಿಗಮರಭೂಜರಾಜಪ.ಪಾವನ ಸುಕೀರ್ತಿ ಚಂದ್ರಿಕೆಯಿಂದ ಥಳಥಳಿಸಿಭೂವಲಯಕಾಹ್ಲಾದವನಿತ್ತೆ ರಾಜ ಅ.ಪ.ಚತುರ ಹಯಗ್ರೀವ ವಹಿಸಿ ಹೊಳೆವ ದಶಮತಿಶಾಸ್ತ್ರ್ತರಥವ ನಿರ್ಮಿಸಿಶ್ರುತಿಪಂಚರಾತ್ರವನ್ನು ವಾಜಿಗೈದುಋತು ಭೇದಶರ ಒಗ್ಗೂಡಿಸಿನ್ನೆಸೆದುಕ್ಷಿತಿಯರ ದುರ್ವಾದಿಗಳ ಜೈಸಿದೆ ಅಪ್ರತಿಮಹಾರಥಿಕನೆನಿಸುವ ಚಕ್ರವರ್ತಿ ರಾಜ1ಬೇಕಾದ ಪುರುಷಾರ್ಥವ ಕೊಡುವಗುಣಶಾಖೆಗಳ ಸೊಬಗುದೋರೆಶ್ರೀಕರ ಗ್ರಂಥರಚನೆಗಳ ವನೇಕ ಪತ್ರದವುಗಳಿರೆಆ ಕರುಣ ಲೋಚನ ಕುಸುಮರಸವನುಂಡುಝೇಂಕರಿಪಕವಿಮಧು ಮಕರಂದ ರಾಜಿಸುವ ರಾಜ2ಸಾರಾರ್ಥ ಚೋರ ಕುಲದಗಲ ಭೇದಿಸಿ ಸಂಚಾರ ಧರೆಯೊಳಗಿಡಿಸಿಈರಮತಸದ್ವನದಿಹಪಂಡಿತಚಕೋರಗಳ ನಲಿನಲಿಸಿದೆಧೀರ ವಾಗೀಶಕರವಾರಿಧಿಭವ ವಾದಿವಂದ್ಯವಾರಿನಿಧಿ ನಂದಕರ ಪ್ರಸನ್ವೆಂಕಟಪ್ರಿಯ 3
--------------
ಪ್ರಸನ್ನವೆಂಕಟದಾಸರು