ಒಟ್ಟು 80 ಕಡೆಗಳಲ್ಲಿ , 27 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ವೇಣುಗೋಪಾಲ ಶುಕಮುನಿಯ ಬಿಂಬ ಪ ಧ್ಯಾನ ಪಾಲಿಸು ನಿನ್ನದೀನಭವದಿ ನೆಲಸಿ ಅ.ಪ. ಜ್ಞಾನ ಮನ ದಶ ಕರಣ ಪ್ರಾಣ ಪಂಚಕರಲ್ಲಿ ಭಾನುತೇಜನೆ ನೆಲಿಸಿ ತಿಳಿಸದಲೆ ನಾನಾ ಬಗೆಯಲಿ ದಣಿಸಿ ನೀನಾಟ ಆಡುತಿಹೆ ಮರವೆ ಬಿಡಿಸಿ ಪೊರೆಯೊ 1 ಕೋಟಿ ಸೂಂiÀರ್iರ ಕಾಂತಿ ಧಿಕ್ಕರಿಪ ಚಿನ್ಮಯನೆ ಮಾಟ ಮಾಡದೆ ನಿನ್ನ ಲೀಲೆ ತೋರೊ ನಾಸಿಕ ಶ್ರವಣ ತನುಮನದಿ ಸಾಯುಜ್ಯ ಬೇಟೆಯಲಿ ಇದ್ದೆನ್ನ ಕಣ್ಣು ಕಟ್ಟುವುದ್ಯಾಕೆ 2 ಶತಕೋಟಿ ಬ್ರಹ್ಮಾಂಡ ಗತ ಜೀವಗಣಕಮೃತ ಸತತ ಪಾಲಿಪ ಕರುಣ ನಿನದಲ್ಲವೇನೊ ಹಿತಮಾಡು ಜಯೇಶವಿಠಲನೆ ಮದ್ಭಿಂಬ ಪ್ರತಿಬಿಂಬ ಭಾವದಲಿ ಬೆಳೆಸೆನ್ನ ಉದ್ಧರಿಸೊ 3
--------------
ಜಯೇಶವಿಠಲ
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀರಂಗೇಶವಿಠಲ | ಪೊರೆಯೆನ್ನ ಹೃದಯಾ- ಧಾರನೆ ಮಾಲೋಲ | ಸ್ಮರಕೋಟಿ ಸುಂದರಾ- ಕಾರ ನತಜನಪಾಲ | ಅರಿಮಸ್ತಕ ಶೂಲ ಪ ಆರು ಅರಿಗಳ ಗೆಲಿಸಿಯೆನ್ನಿಂ- ದಾರು ಎರಡನು ಮುರಿಸಿ ನಿನ್ನೊಳು ಆರು ಮೂರನೆಯಿತ್ತು ಸರ್ವದ ಪಾರುಗೈಯ್ಯಬೇಕೆಂಬೆ ದೇವ ಅ.ಪ. ಆನೆಗೊಂದಿ ನಿವಾಸ | ಭಕುತರ ನಿರಂತರ ಮಾನದಿಂ ಪೊರೆವ ಶ್ರೀಶ | ಎಂದೆಂದಿಗು ನಾನಿನ್ನ ದಾಸರ ದಾಸ | ನೆಂದು ಕರುಣಿಸು ನೀನೆನಗೆ ಲೇಸ | ಭಾನುಕೋಟಿ ಪ್ರಕಾಶ ಮಾನ ಅವಮಾನಗಳು ನಿನ್ನಾ- ಧೀನವೆಂದೇ ನಂಬಿಕೊಂಡಿಹ ದೀನನೆನ್ನನು ದೂರ ನೋಡದೆ ಸಾನುರಾಗದಿ ಪೊರೆವುದೈಯ್ಯಾ ನಳಿನಭವ ಅಂಡದೊಳಗೆ ದಾನಿ ನೀನಲ್ಲದನ್ಯರುಂಟೆ ಏನ ಬೇಡೆನು ನಿನ್ನ ಬಳಿಯಲಿ ಜ್ಞಾನ ಭಕುತಿ ವೈರಾಗ್ಯವಲ್ಲದೆ1 ವರಾಹ ಜನ ತಾಪ | ತ್ರಯ ದೂರ ವಾಮನ ಮಾನವೇಂದ್ರರ ಪ್ರತಾಪ | ವಡಗಿಸಿದೆ ಪ್ರಬಲ ದಾನವೇಂದ್ರನ ಶಾಪ | ನೀನೆ ಕಳೆದೆಯೊ ಶ್ರೀಪಾ ವಾನರ ಬಲ ನೆರಹಿಕೊಂಡು ನೀನು ರಾವಣನನ್ನು ಕೊಂದು ಮಾನಿನಿಯ ಪೊರೆದು ಶರಣಗೆ ನಿ ದಾನ ಮಾಡದೆ ಪಟ್ಟಗಟ್ಟಿದೆ ದಾನವಾಂತಕನೆಂಬ ನಾಮವ- ನ್ಯೂನವಿಲ್ಲದೆ ಪರಸತಿಯರಭಿ ಮಾನ ಕಳುಪಿದ ಜಾಣ ಕಲ್ಕಿಯೆ 2 ಸೂರಿಜನ ಪರಿಪಾಲ ಸದ್ಗುಣಗಣನಿಲಯ ಘೋರರಕ್ಕಸಕಾಲ | ವರಶೇಷತಲ್ಪವ ನೇರಿ ನಿರುಪಮ ಬಾಲ | ನಂದದಿ ನಿರುತ ನೀ ತೋರುತಿರುವೆಯೊ ಲೀಲ | ಶ್ರೀ ರಂಗೇಶವಿಠಲ ಮಾರ ಜನಕನೆ ಮಂಗಳಾಂಗನೆ ಕ್ರೂರ ಕುಲವನದಾವ ಅನಲನೆ ಭೂರಿ ಕರುಣವ ಬೀರಿ ಎನ್ನಸು ಭಾರ ನಿನ್ನದು ವಾರಿಜಾಕ್ಷನೆ ಎನ್ನ ಹೃದಯದಿ ಚಾರು ಬಿಂಬವ ಸಾರಿ ಬೇಡುವೆ ಬಾರಿ ಬಾರಿಗೆ ಶರಧಿ ಬಡಬನೆ3
--------------
ರಂಗೇಶವಿಠಲದಾಸರು
ಸತ್ಯ ಸಂಕಲ್ಪ ನೀನಹುದೆಲೊ ಜಗದೊಳು ಭೃತ್ಯವತ್ಸಲ ಹರಿಯೆ ಪ. ನಿತ್ಯ ತೃಪ್ತನೆ ವ್ಯಾಪ್ತ ಜಗದಿ ಹರಿಯೆ ದೊರೆಯೆ ಅ.ಪ. ಜನನ ಮರಣ ವಿದೂರನೆ ದೇವಕಿ ತನಯ ರುಕ್ಮಿಣೀಶ ಘನಭವ ವನಧಿಯ ದಾಟಿಸಿ ಸಲಹೋ ವನಜ ನಯನ ದೇವ ಸತತದಿ 1 ಕಮಲಾಕ್ಷ ಕಮಲೇಶ ಕಮಲಪಾಣಿ ಪದ ಕಮಲವೆನಗೆ ತೋರೊ ಕಮಲನಾಭ ಹೃತ್ಕಮಲದಿ ನಿಲ್ಲೊ ಕಮಲಮುಖನೆ ದೇವ ಶ್ರೀಹರಿ 2 ಭಕ್ತಕಮಲ ಬಂಧು ವ್ಯಾಪ್ತ ದಯಾಸಿಂಧು ಉತ್ತಮನೆ ನೀನೆಂದು ಎತ್ತ ನೋಡಲು ಸುರರೆತ್ತಿ ಕೈ ಪೊಗಳಲು ಮತ್ತೆ ನಿನಗೆ ಸರಿಯೆ ಜಗದೊಳು 3 ಶ್ರೀನಿವಾಸನೆ ಕಾಯೊ ಮಾನನಿಧಿಯೆ ಎನ್ನ ಹೀನ ಕರ್ಮವ ಕಳೆಯೊ ಶ್ರೀನಿಧಿ ದ್ರೌಪದಿ ಮಾನ ಕಾಯ್ದನೆ ಗಾನಲೋಲ ಕೃಷ್ಣ ನರಹರಿ 4 ಸಂಕರ್ಷಣನೆ ಮನ ಪಂಕಜದಲಿ ನಿಂತು ಶಂಕಿಸದಲೆ ಕಾಯೊ ಪಂಕಜಮುಖ ಹರಿ ಗೋಪಾ- ಲಕೃಷ್ಣವಿಠ್ಠಲ ಶಂಖ ಚಕ್ರಧರನೆ ಪೊರೆಯೊ ನೀ5
--------------
ಅಂಬಾಬಾಯಿ
ಸಿರಿವರನೆ ಮರೆಬಿದ್ದೆ ಶರಣಾಗತಪ್ರೇಮಿ ಪರಿಭವದ ಕಿರಿಕಿರಿಯ ಪರಿಹರಿಸು ಸ್ವಾಮಿ ಪ ಅಡಿಗಡಿಗೆ ರಿಣಕೊಟ್ಟ ಒಡೆಯರತಿಕಿರಿಕಿರಿಯು ಇಡತೊಡಲಿಕ್ಕಿಲ್ಲೆಂಬ ಮಡದಿಕಿರಿಕಿರಿಯು ಎಡಬಿಡದೆ ಹಸೆತೃಷೆಯ ಕಡುತರದಕಿರಿಕಿರಿಯು ಕಡೆಹಾಯ್ಸು ಕಡುಬೇಗ ತಡೀಲಾರೆನಭವ 1 ಮಾಡುಣಲು ಕಿರಿಕಿರಿಯು ಬೇಡುಣಲು ಕಿರಿಕಿರಿಯು ನಾಡ ನಾಡ ತಿರುಗಲು ಕಡುಕಿರಿಕಿರಿಯು ಗೂಢದೊತ್ತಟ್ಟಿರಲು ಬಡತನದ ಕಿರಿಕಿರಿಯು ಖೋಡಿ ಕಿರಿಕಿರಿ ಬೇಡ ದೂರಮಾಡಭವ 2 ಕಿರಿಕಿರಿಲ್ಲದ ನಿನ್ನ ಚರಣದಾಸರ ನೆರೆಯು ಕರುಣಿಸಿ ನಿರುತದಿಂ ಪರಿಪಾಲಿಸಭವ ಶಿರಬಾಗ್ವೆ ಚರಣಕ್ಕೆ ನೀನೆ ಪರದೈವೆನಗೆ ತರಳನರಕೆಯ ಕೇಳು ವರದ ಶ್ರೀರಾಮ 3
--------------
ರಾಮದಾಸರು
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
(ಈ) ಶಾಂತಭಾವ81ಆವ ನರನ ಬಂಡಿಯ ಬೋವನುದೇವ ಬಿಡದೆ ನಮ್ಮನು ಕಾವನು ಪ.ನಾಕಪತಿಯ ಮುದವಳಿಯಲು ಕೋಪದಿನಾಕು ಮೂರುದಿನ ಮಳೆಗರೆಯಲುಆ ಕಮಲಾಕ್ಷ ಕರುಣದಿ ಗಿರಿಯನೆತ್ತಿಗೋಕುಲವಿಸರ ಭಯವ ಕಳೆದಹರಿ1ದುಷ್ಟ ಸುಯೋಧನನನುಜ ಸಭೆಯೊಳು ಯುಧಿಷ್ಠಿರ ಸತಿಯ ಲಜ್ಜೆಯಕೆಡಿಸೆಕಷ್ಟಿಸಿ ದ್ವಾರಕೆಕೃಷ್ಣ ಪೊರೆಯೆನಲುಶಿಷ್ಟಳಿಗಂಬರವಿತ್ತಭಿಮಾನಿ 2ಅಹ:ಪತಿಯ ಸುತ ಬವರದೊಳಗೆ ಸಿತವಾಹನನ ಶಿರ ಕೆಡೆಯೆಸೆಯೆಮಹಾಮಹಿಮ ರಥವಿಳೆಗೊತ್ತಿ ಭಕ್ತನಸ್ನೇಹದಿ ತಲೆಯನುಳುಹಿದ ದಯಾನಿಧಿ 3ಕಲಶಜಭವ ವೈರಾಟೆಯ ಬಸುರಿಗೆನಳಿನಭವಾಸ್ತ್ತ್ರವ ಬಿಡೆ ಕಂಡುಅಳುಕದವೋಲರಿಯಿಂದ ನಿವಾರಿಸಿಸುಲಭದಿ ಮಗುವ ಸಲಹಿದ ಸರ್ವೋತ್ತಮ 4ತನ್ನ ನಂಬಿದರಿಗಿನಿತು ಕುಂದಾದರೆತನ್ನದೆಂದರಿದಾವ ಕಾಲದಲಿಮನ್ನಿಸಿ ಪೊರೆಉರಗಾದ್ರಿಯೊಳೆಸೆವ ಪ್ರಸನ್ನ ವೆಂಕಟ ಭೂವರಾಹಾನಂತರೂಪ 5
--------------
ಪ್ರಸನ್ನವೆಂಕಟದಾಸರು
ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಆನೆ ಬಂತಾನೆ ಬಂತಾನೆ ಬಂತಮ್ಮದಾನವಕದಳಿಯಕಾನನಮುರಿವ ಮದ್ದಾನೆ ಬಂತಮ್ಮಪ.ಉಂಗುರುಗುರುಳು ನೀಲಾಂಗ ಚೆಲ್ವಾನೆಕಂಗಳುಹೊಳೆವೊ ವ್ಯಾಘ್ರಾಂಗುಲಿಯಾನೆಬಂಗಾರದಣುಗಂಟೆ ಶೃಂಗಾರದಾನೆಮಂಗಳತಿಲಕದ ರಂಗನೆಂಬಾನೆ 1ಅಲೆದೊಲೆದಾಡುವ ಎಳೆಮರಿಯಾನೆಕೆಳದಿ ಗೋಪಿಯರೊಳು ಗೆಳೆತನದಾನೆಘಳಿಲು ಫಳಿಲು ರವದಿ ಸುಳಿದಾಡುವಾನೆಮಲೆತವರೆದೆ ತುಳಿದಾಡುವಾನೆ 2ನಳಿನಭವರಿಗೆ ತಾ ನಿಲುಕದ ಆನೆಹಲವು ಕವಿಗಳಿಗೆ ಸಿಲುಕದೀ ಆನೆನಲವಿಂದ ಭಕ್ತರ ಸಲಹುವ ಆನೆಸಲೆ ಪ್ರಸನ್ವೆಂಕಟನಿಲಯನೆಂಬಾನೆ 3
--------------
ಪ್ರಸನ್ನವೆಂಕಟದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಕಣ್ಣಾರೆ ಕಂಡೆನಚ್ಯುತನ-ಕಂಚಿಪುಣ್ಯ ಕೋಟಿ ಕರಿರಾಜವರದನ ಪವರಮಣಿ ಮುಕುಟಮಸ್ತಕನ ಸುರ-ವರಸನಕಾದಿ ವಂದಿತ ಪಾದಯುಗನ ||ತರುಣಿ ಲಕ್ಷ್ಮೀ ಮನೋಹರನ-ಪೀತಾಂಬರದುಡಿಗೆಯಲಿ ರಂಜಿಸುವ ವಿಗ್ರಹನ 1ಕಸ್ತೂರಿ ಪೆರೆನೊಸಲವನ ತೋರಮುತ್ತಿನ ಹಾರ ಪದಕವ ಧರಿಸಿದನ ||ಎತ್ತಿದಭಯ ಹಸ್ತದವನ ತನ್ನಭಕ್ತರ ಸ್ತುತಿಗೆ ಹಾರಯಿಸಿ ಹಿಗ್ಗುವನ 2ನೀಲಮೇಘಶ್ಯಾಮಲನ ದೇವಲೋಲಮಕರಕುಂಡಲಧರಿಸಿಹನ ||ಮೂಲೋಕದೊಳಗೆ ಚೆನ್ನಿಗನ ಕಮಲಾಲಯಾಪತಿ ವೈಕುಂಠವಲ್ಲಭನ 3ಭಾನುಕೋಟಿ ತೇಜದವನಭವಕಾನನರಾಶಿಗೆಹವ್ಯವಾಹನನ ||ದಾನವರೆದೆಯ ತಲ್ಲಣನ ಮುನಿಮಾನಸೆಹಂಸನೆಂದೆನಿಸಿ ಮೆರೆವನ4ತುಂಗಚತುರ್ಭುಜದವನಶುಭಮಂಗಳ ರೇಖೆ ಅಂಗಾಲಲೊಪ್ಪುವನ ||ಶೃಂಗಾರ ಹಾರ ಕಂಧರನ ದೇವಗಂಗೆಯ ಪಿತಪುರಂದರವಿಠಲನ5
--------------
ಪುರಂದರದಾಸರು
ಕಾಯೆ ಭಾರತೀ ನಿನ್ನ ಆರಾಧಿಸುವೆ ಯನ್ನ |ಮಾಯಾಮಂದಿರನವರ ಕಿಂಕರನು ಯೆನಿಸೇ ಪವ್ಯೋಮಜ ರಮಣಿನಳಿನಭವಜಾತೆಕೃತಿಪುತ್ರೆ |ಸಾಮಜಗಮನೆ ಉರಗವೇಣಿ ಕಾಳೀ ||ಸೋಮಮುಖಿ ಬೇರೊರಸಿ ಯನ್ನ ದುರ್ಮತಿಯಳಿದು |ರಾಮಧ್ಯಾನದಲಿ ಮನ ನಿಲ್ಲಿಸುವದನಿಶ 1ಲೋಕನಾಯಿಕೆ ಶೈಲಜಾಪತಿ ಮುಖ ಪೂಜಿತಳೆ |ನೀ ಕರುಣದಲಿ ನೋಡಿಕರವಪಿಡಿಯೇ ||ಕಾಕುಮನುಜರ ಸಂಗವನು ಕೊಡದೆಯೊಂದಿನಕು |ಲೌಕಿಕವ ಸಂಪಾದಿಸಿಸಬೇಡವಮ್ಮ 2ಕೃಷ್ಣೆ ನಳನಂದಿನಿ ದ್ರುಪದ ತನುಜೆ ಶಿವಕನ್ಯೆ |ದುಷ್ಟ ಜನ ಗಿರಿಕುಲಿಶೆ ಸ್ವರ್ಣಗಾತ್ರೆ ||ಕೊಟ್ಟ ಮಾತಿಗೆ ತಪ್ಪದಲೆ ಕಾಯ್ವ ಪ್ರಾಣೇಶ |ವಿಠಲನ ಚರಣಯುಗ ಸರಸೀರುಹ ಭೃಂಗೆ3
--------------
ಪ್ರಾಣೇಶದಾಸರು
ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣಜಯ ಪಾವನ ದಿವ್ಯಚರಣ ಪ.ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯಪೂರ್ವಾಮರಪುರದಹನ ಪೂರ್ಣಗುಣಗಣ 1ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣಲಕುಮಿನಾರಾಯಣಶರಣ ಬಕವಿದಾರಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು