ಒಟ್ಟು 78 ಕಡೆಗಳಲ್ಲಿ , 29 ದಾಸರು , 63 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಸರ್ಪಶಯನನೆಂಬೊ ದಿವ್ಯಕಲ್ಪತರು ಸೇರಿದ ದರ್ಪವೆಷ್ಷನಿಮ್ಮಿಬ್ಬರ ಧಿಮಾಕುಭಾಳೆ ನಾರಿ ಪ. ನಿರತ ದಾಸಿ ನಾನೆಂಬೋದು ಸರಸಿಜಾಕ್ಷತಾನೆ ಬಲ್ಲಅರಸು ಅರಸನ ಹುಡುಕುತಅರಸು ಅರಸರನ ಹುಡುಕುತಲೆ ಹೋಗುವದುಸರಸ ತೋರುವುದೆ ಐವರಿಗೆ ಕೇಳನಾರಿ1 ಒಬ್ಬ ರುಕ್ಮಿಣಿ ನಿನ್ನ ಮುಂದೆ ಗುಬ್ಬಿಕಾಗೆ ಹಿಂಡುಕಬ್ಬೆಕ್ಕು ಕೋಳಿ ನೆರೆದಾವಕಬ್ಬೆಕ್ಕು ಕೋಳಿ ನೆರೆದಾವ ಶ್ರೀಕೃಷ್ಣತಬ್ಬಿಬ್ಬುಕೊಂಡು ನಗುತಾನ ಕೇಳ ನಾರಿ 2 ಅತ್ತಿಗೆ ನಿನ್ನ ಮೈಗೆ ಹತ್ಯಾವ ರುದ್ರಾಕ್ಷಿನೆತ್ತಿಯ ಮ್ಯಾ¯ ಜಡದಾವ ನೆತ್ತಿಯ ಮ್ಯಾ¯ ಜಡದಾವ ಅತ್ತಿಗೆ ನಿನ್ನಹತ್ತಿಲಿದ್ದವರು ನಗುತಾರೆ ಕೇಳನಾರಿ3 ಜಾಣೆ ನಿನ್ನಂಥವಳ ಕಾಣೆ ನಾ ಜಗದೊಳುಕೋಣನ ಹೊಡೆವ ಕೌಶಲ್ಯಕೋಣನ ಹೊಡೆವೊÀ ಕೌಶಲ್ಯಕ್ಕೆ ಬೆರಗಾಗಿಸುರನಾರಿಯರು ಬಹಳೆ ನಗುತಾರೆ ಕೇಳ ನಾರಿ4 ನಿತ್ಯ ಪ್ರಕಾಶನ ಉತ್ತಮೋತ್ತಮ ಗುಣವಅತ್ಯಂತ ನೋಡಿ ಸುಖಿಸದೆಅತ್ಯಂತ ನೋಡಿ ಸುಖಿಸದೆ ಎಲೆಭಾವೆಕತ್ತಲೆಗೈದ ಬಗಿಹೇಳ ಕೇಳನಾರಿ5 ಕತ್ತಲೆಂಬುದು ನಿನ್ನ ಸುತ್ತುಮುತ್ತಲಾಗಿರೆಎತ್ತನೋಡಿದರು ಜನರಿಲ್ಲಎತ್ತನೋಡಿದರು ಜನರಿಲ್ಲ ಅವರೊಳು ಚಿತ್ತ ಸ್ವಾಸ್ಥ್ಯದ ಬಗಿ ಹೇಳ ಕೇಳನಾರಿ6 ಹರಿ ಬಲು ಪ್ರೀತಿಯಿಂದ ಉರದೊಳು ಸ್ಥಳಕೊಟ್ಟಇರಬಾರದೇನೆ ವಿನಯದಿಇರಬಾರದೇನೆ ವಿನಯದಿ ಜಗಳಾಡಿಉರಿಯ ಹೊಗುವರೆ ಉನ್ಮತ್ತೆ ಕೇಳನಾರಿ 7 ಮೂಡಲಗಿರಿಪತಿಗೆ ಜೋಡೆಂದು ನೀವಿಬ್ಬರುಮಾಡಿ ಸಹವಾಸ ಎಡಬಲಮಾಡಿ ಸಹವಾಸ ಎಡಬಲ ಹಿಡಿದಿರಿ ನೋಡಿದವರೆಲ್ಲ ನಗುವಂತೆ ಕೇಳನಾರಿ8 ಕರಿ ಮಣಿಯು ಹೋಲುವುದೆಹರಿಯ ಚಲ್ವಿಕೆಗೆ ಹವಣಿಸಿಹರಿಯ ಚಲ್ವಿಕೆಗೆ ಹವಣಿಸಿ ರಾಮೇಶಗೆಸರಿಯಾಗುವೆ ಏನೆ ಬಿಡು ಬಿಡು ಕೇಳ ನಾರಿ 9
--------------
ಗಲಗಲಿಅವ್ವನವರು
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು
ತಂಬೂರಿ ಮಾಡಿಸಿ ತರಲಿಲ್ಲವಮ್ಮನಮ್ಮ ರಂಭೆ ದ್ರೌಪತಿ ಕೋಪ ‌ಘನವಾಯಿತಮ್ಮ ಪ.ಮೂಡಲಗಿರಿವಾಸ ನಾಡು ನಾಡಿನ ಜವಳಿಬೇಡಿದ ಪರಿಯು ತರಿಸಿದನಮ್ಮಬೇಡಿದಪರಿತರಿಸಿದನು ಧರ್ಮನನೋಡ ಬಂದವರಿಗೆ ಉಡುಗೊರೆಕೆಲದಿ1ಚಂದದ ಜವಳಿ ಕಂದರಿಗೊಸ್ತವುಇಂದಿರಾರಮಣ ತರಿಸಿದನಮ್ಮಇಂದಿರಾರಮಣ ತರಿಸಿದನಮ್ಮ ಧರ್ಮನಬಂದ ಜನಕೆಲ್ಲ ಉಡುಗೊರೆಕೆಲದಿ2ಲೆಕ್ಕವಿಲ್ಲದ ಜವಳಿ ಮಕ್ಕಳಿಗೊಸ್ತವುಲಕ್ಕುಮಿರಮಣ ತರಿಸಿದನಮ್ಮಲಕ್ಕುಮಿರಮಣ ತರಿಸಿದನಮ್ಮ ಧರ್ಮನಮಿಕ್ಕ ಜನಕೆಲ್ಲ ಉಡುಗೊರೆಕೆಲದಿ3ಏಸುರತ್ನದಹೇರುವಾಸುದೇವನು ತರಿಸಿರಾಶಿ ಸುರುವಿದ ಸಭೆಯೊಳುಕೆಲದಿರಾಶಿ ಸುರುವಿದ ಸಭೆಯೊಳು ಧರ್ಮನಆಸು ಜನಕೆಲ್ಲ ಉಡುಗೊರೆಕೆಲದಿ4ಫುಲ್ಲನಾಭನು ದ್ರವ್ಯ ಚಲ್ಲಿದ ಸಭೆಯೊಳುಎಲ್ಲ ನಾರಿಯರು ಬಳಕೊಳ್ಳಿರಮ್ಮಎಲ್ಲ ನಾರಿಯರು ಬಳಕೊಳ್ಳಿರಮ್ಮ ಎನುತಲೆಚಲ್ವ ರಾಮೇಶ ನಗುತಿಹನಮ್ಮ 5
--------------
ಗಲಗಲಿಅವ್ವನವರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ತುತ್ತೂರಿಮೌರಿತಾಳ ದಂಡಿಗೆ ಮದ್ದಲೆ |ಉತ್ತಮ ಶಂಖದ ನಾದಗಳಿಂದ ||ಸುತ್ತಮುತ್ತಿ ನಾರಿಯರು ತಾಥೈಯೆಂದು |ಅರ್ತಿಯಿಂದ ಕುಣಿಸುವರುಪರವಸ್ತುತತ್ಥೈಹಿಡಿದು 2ಕಾಮಿನಿಯರೆಲ್ಲ ನೆರೆದು ಕಂದನೊಡನಾಟವಾಡಿ |ಪ್ರೇಮದಿಂದ ಬಿಗಿಬಿಗಿದಪ್ಪಿ ಮುದ್ದಾಡಿ ||ಕಾಮಿತ ಫಲವೀವ ಭಕುತಜನರೊಡೆಯ |ಸ್ವಾಮಿ ಶ್ರೀ ಪುರಂದರವಿಠಲರಾಯನ 3
--------------
ಪುರಂದರದಾಸರು
ದೊರೆಗಳಿಗೆ ಯದುಪತಿ ಗರವು ಹಮ್ಮನೆ ಬಿಟ್ಟುಬರಬೇಕು ಎಂದು ಹಸೆಮೇಲೆಹಸೆಮೇಲೆ ಹರುಷದಲೆಮುದದಿ ಪಾಂಡವರು ಬರಬೇಕು ಪ.ನೂರು ಸೂರ್ಯನ ಬೆಳಕಿನಥೋರ ಮುತ್ತಿನ ಹಸೆಗೆವೀರಪಾಂಡವರು ಬರಬೇಕುಬರಬೇಕು ಎನುತಲೆನಾರಿ ರುಕ್ಮಿಣಿಯು ಕರೆದಳು 1ಮತ್ತೆ ಸೂರ್ಯನ ಬೆಳಕಿಲಿವಿಸ್ತರಿಸಿದಹಸೆಮ್ಯಾಲೆಚಿತ್ತೈಸಬೇಕು ಐವರುಚಿತ್ತೈಸಬೇಕು ಐವರು ಎನುತಲಿಸತ್ಯಭಾಮೆಯು ಕರೆದಳು 2ಥೋರ ಮುತ್ತಿನ ಹಸೆಗೆಚಾರುರತ್ನವ ರಚಿಸಿವೀರ ಪಾಂಡವರÀ ಕರೆದರುವೀರ ಪಾಂಡವರÀ ಕರೆದರುಆರು ನಾರಿಯರು ಹರುಷದಿ 3ಹದಿನಾರು ಸಾವಿರ ಚದುರೆಯರುಹರುಷದಿ ಅದ್ಬುತವಾಗಿಬೆಳಗೋಹಸೆ ಮೇಲೆಅದ್ಬುತ ಬೆಳಗೊ ಹಸೆಮೇಲೆಮುದದಿ ಪಾಂಡವರ ಕರೆದರು 4ವೀರ ರಾಮೇಶನ ತಂಗಿಯರುಪೋರಬುದ್ಧಿಯಬಿಟ್ಟುನಾರಿಯರು ಬನ್ನಿರಿಹಸೆಮ್ಯಾಲೆಹಸೆಮ್ಯಾಲೆ ಹರುಷದಿನೂರು ನಾರಿಯರು ಕರೆದರು 5
--------------
ಗಲಗಲಿಅವ್ವನವರು
ನಾಳೆ ಬರುವೆನೆಂದು ಹೇಳಿ ಮಧುರೆಗೆ ಪೋದ ಬ-ಹಳದಿನವಾಯಿತಲ್ಲೊ ಉದ್ಧವ ಪ.ಕೇಳಿದ್ಯಾ ನೀಬಾಹವೇಳೆಯಲಿ ಕೃಷ್ಣನಆಲೋಚನೆಯೊಳಿದ್ದೆವೊ ಅ.ಪ.ಪಳ್ಳಿವಾಸಿಗಳು ನಾವು ಪರಿಪರಿ ಅಲಂಕರಿಸಿ ಒಲಿಸಿಕೊಂಬುದನರಿಯೆವೊಗೊಲ್ಲ ಸತಿಯರು ಸದಾ ಗೋರಕ್ಷಕರು ಮೈಯ ಹೊಲೆತೊಳೆಯಲರಿಯೆವೊಬಲ್ಲಿದನ ಸಹವಾಸ ಮಾಡ್ಯವನ ಮಹಿಮೆಯನೆಲ್ಲ ತಿಳುಹಿಸಿಕೊಂಡೆವೊಚಲ್ಲೆಗಂಗಳ ಚಪಲೆಯರು ಮಧುರೆ ನಾರಿಯರ ಒಲಪಿಗೆ ನಾವೆದುರೇನೊ ? 1ಚೊಕ್ಕನಾದನಿತ್ಯತೃಪ್ತನಿಗೆ ಬೆಣ್ಣೆ ಕಳವಿಕ್ಕಿದೆವಲ್ಲವೊಸಿಕ್ಕಿಸಿಕೊಂಡು ರಾಸಕ್ರೀಡೆಯೊಳವಗೆ ಸೊಕ್ಕಿನುಕ್ತಿಯ ನುಡಿದೆವೊಕಕ್ಕುಲಾತಿಲಿ ಕಾಮಾಸಕ್ತರಿಗಿವ ನಮಗೆ ದಕ್ಕಿದನು ಎಂತಿದ್ದೆವೊವಕ್ರಗತಿಯಾಗಿ ಅಕ್ರೂರ ಬಂದ್ಯೆಮ್ಮ ಚಕ್ರಧರನಗಲಿಸಿದನೊ 2ಧೀರಸ್ವರಮಣದೋಷದೂರನ್ನ ಅಲ್ಪ ಬಹುಜಾರನೆಂದರಿತೆವಲ್ಲೊಆರಾರ ಮನಕಿನ್ನು ತೋರದವನ ನಮ್ಮ ಓರಗೆಯವನೆಂದರಿದೆವೊಮುರಾರಿಅಜಪರಿವಾರದೊಡೆಯನ ನಾವು ಪೋರನೆಂದಾಡಿಸಿದೆವೊನಾರಿಯರು ನಾವಲ್ಪ ದಾರಿದ್ರ್ಯ ದಷ್ಟರಿಗೆ ಶ್ರೀರಮಣನೆಂತೊದಗುವನೊ 3ನಿಧಿಯ ಬದಿಲಿದ್ದರು ವಿಧಿಸುವುದನರಿಯದೆ ಮದಡೆಯರಾದೆವೊಮದನನಾಟಕೆ ಮನವಿಕ್ಕಿ ಅವನಿಂದೊಂದು ತತ್ವ ತಿಳಿಯಲಿಲ್ಲೊಚದುರೆಯರು ನಮ್ಮ ಬಿಟ್ಟು ಕದಲನಿವನೆಂತೆಂಬ ಮದದಿ ಮೋಸಹೋದೆವೊಮಧುರೆಯಿಂದೆಮ್ಮ ತಮ್ಮ ಹೃದಯದೊಳಿಪ್ಪನೆಂದುಚದುರ ಪೇಳಿಹನಂತೆಲೊ 4ಮತಿ ತಪ್ಪಿದೆವೊ ನಾವು ಸತಿಯರೆಲ್ಲೊಂದಾಗಿ ರಥವ ನಿಲಿಸದೆ ಹೋದೆವೊಹಿತರಾರು ನಮಗೆಸಾರಥಿನಿನ್ನ ಸಹಾಯ ದೊರೆತರೆತನವ ಮಾಳ್ಪೆವೊಪಥವ ತೋರಿಸೊ ನಮಗೆ ಮುಂದೆಮ್ಮ ಚೆಲ್ವ ಶ್ರೀಪತಿಯು ಬಂದೊದಗುವಂತೆಗತಿಯಾರೊ ಅವನ್ಹೊರತು ಗೋಪಾಲವಿಠಲ ಅಚ್ಯುತನ ಮಹಿಮೆ ಕಾಣೆವೊ 5
--------------
ಗೋಪಾಲದಾಸರು
ಪೋಗದಿರಲೊ ರಂಗ-ಬಾಗಿಲಿಂದಾಚೆಗೆ |ಭಾಗವತರು ಕಂಡರೆತ್ತಿಕೊಂಡೊಯ್ವರೊ ಪಸುರಮುನಿಗಳು ತಮ್ಮ ಹೃದಯಗಹ್ವರದಲಿ |ಪರಮಾತ್ಮ ನಿನ್ನ ಕಾಣದರಸುವರೊ ||ದೊರಕದ ವಸ್ತುವು ದೊರೆಕಿತು ತಮಗೆಂದು |ಹರುಷದಿಂದ ನಿನ್ನ ಕೆರೆದೆತ್ತಿಕೊಂಬರೊ 1ಅಗಣಿತಗುಣ ನಿನ್ನ ಜಗದ ನಾರಿಯರೆಲ್ಲ |ಹಗರಣಮಾಳ್ಪರೊ ಗೋಪಾಲನೆ ||ಮಗುಗಳ ಮಾಣಿಕ್ಯ ತಗುಲಿತು ಕರೆತಂದು |ಮಿಗಿಲು ವೇಗದಿ ಬಂದು ಬಿಗಿದಪ್ಪಿಕೊಂಬರೊ 2ದಿಟ್ಟ ನಾರಿಯರು ತಮ್ಮಿಷ್ಟವ ಸಲಿಸೆಂದು |ಅಟ್ಟಟ್ಟಿ ಬೆಂಬತ್ತಿ ತಿರುಗುವರೊ ||ಸೃಷ್ಟೀಶ ಪುರಂದರವಿಠಲ ರಾಯನೆ |ಇಷ್ಟಿಷ್ಟು ಬೆಣ್ಣೆಯ ಕೊಡುವೆನೊ ರಂಗಯ್ಯ 3
--------------
ಪುರಂದರದಾಸರು
ಬಂದರದಕೊ ಬಲರಾಮ ಮುಕುಂದರುಬಂದರಕೊಭಾವೆಕೆಲೆಯುತ ನಲಿಯುತಪ.ನೀರಜಸಖನುದಯಾಗದ ಮುನ್ನ ಝೇಂಕಾರದೊಳಳಿ ಮೊತ್ತವೇಳದ ಮುನ್ನಸಾರಸಕೀರಮಯೂರಸ್ವನದ ಮುನ್ನನಾರಿಯರು ಮೊಸರ ಮಥಿಸುವುದರಿತು 1ನವ ನವನೀತಕೆ ಮಚ್ಚಿ ಮನವಿಟ್ಟುತವಕದಿ ಗೋಡೆಯ ಧುಮುಕುತಲಿಯುವತಿ ಗೊಲ್ಲತಿಯರ ಮರುಳು ಮಾಡುವರು ಸಣ್ಣವರೊಳು ತಾಳ ಮೇಳದ ಅಬ್ಬರದಲಿ 2ಸಾರಗೋರಸ ಚೋರರು ಗೋಪಿಮಕ್ಕಳುಸೂರಿಡುವರು ಮನೆ ಮೀಸಲನುಸಾರಿಸಾರಿಗೆ ಪ್ರಸನ್ವೆಂಕಟ ಕೃಷ್ಣರಚಾರುಒಡ್ಯಾಣಘಂಟಾರವವನಾಲಿಸವ್ವ3
--------------
ಪ್ರಸನ್ನವೆಂಕಟದಾಸರು
ಬಾರೊ ಬಾರೊ ಕೃಷ್ಣಬಾರೊ ಬಾರಯ್ಯಚಾರುನವರತ್ನದ ಹಸೆಯ ಏರು ಬಾರಯ್ಯಪ.ನಾರುವ ಮೈಯವನೆ ನೀರು ಬಿಟ್ಟು ಬಾರಯ್ಯಭಾರಹೊರೆಸೋದಿಲ್ಲ ಹಸೆಯ ಏರು ಬಾರಯ್ಯಕ್ವಾರಿ ಮಸೆದು ಕೋಪಿಸಬ್ಯಾಡದಾರಿಗಾಲ ಪರಿಯಬ್ಯಾಡಭಾರಕೊಡಲಿ ಧರಿಸಿ ನೀನು ಭೋರಾಡ ಬ್ಯಾಡ1ಮಡದಿಯ ಹಂಬಲದಿ ಅಡವಿ ಹಿಡಿಯ ಬ್ಯಾಡಯ್ಯತುಡುಗತನದಿ ಹಾಲು ಮೊಸರು ಕುಡಿಯ ಬ್ಯಾಡಯ್ಯಒಡವೆ ವಸ್ತ್ರ ಕಾಣೆ ನಿನಗೆ ಹಿಡಿದೇಜಿಎಲ್ಲವೂ ಕೃಷ್ಣಬಡಿವಾರಸಾಕೊನಿನ್ನ ಸಡಗರ ರಂಗಯ್ಯ 2ಅರ್ಥಿಲೆ ಪುರುಷ ರಾಮೇಶ ಮತ್ತೆ ಬಾರಯ್ಯಜಾರವೃತ್ತಿಗಳ ಜರೆದು ಹಸೆಯ ಹತ್ತ ಬಾರಯ್ಯಮಿತ್ರಿ ರುಕ್ಮಿಣಿ ಸತ್ಯಭಾವೆಯರುಮತ್ತೆ ಉಳಿದ ನಾರಿಯರು ಅತ್ಯಂತ ಶೋಭಿಸುತಲೆಮುತ್ತಿನ ಹಸೆಯ ಏರು ಬಾರಯ್ಯ ಕೃಷ್ಣ ಬಾರೊ ಬಾರೊ 3
--------------
ಗಲಗಲಿಅವ್ವನವರು