ಒಟ್ಟು 87 ಕಡೆಗಳಲ್ಲಿ , 29 ದಾಸರು , 79 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಶವಲ್ಲದೀ ಮನದ ದೆಸೆಯಿಂದೆ ನಾ ಬಲು ದೆಸೆಗೆಟ್ಟು ಬಳಲುವೆ ಕುಸುಮಾಕ್ಷ ಕಣ್ದೆರೆಯೊ ಪ ನಶಿಪ ಪ್ರಪಂಚ ಭ್ರಮಿಸಿ ಹಸಗೆಡಿಸಿ ನಿಜಧ್ಯಾನ ಪಶುವಿನಂತೆನ್ನನು ದಿಸೆದಿಸೆಗೆಳಿಪುದು ಅ.ಪ ಭುವಿಪರನೊಲಿಸರೆಲವದಿ ಭೂಮಿಯ ಪಡೆದೆ ಸವ ಜೋಡಿ ನೂಕಿತ್ತು ಜವದಿ ಕಟ್ಟುವುದು ಬುವಿಯೊಳು ಮಿಗಿಲೆನಿಸುವ ತೆರೆ ಮೇಲ್ಮಾಡಿ ಭವನ ರಚಿಸಿ ಕೋಟಿದ್ರವ್ಯಗಳಿಗಳುವುದು 1 ಮದುವ್ಯಾಗಿ ಪದ್ಮಿನಿಯ ವದನದೊಳ್ವದನಿಕ್ಕಿ ಮದನಕದನದಿ ಸುಖಿಸುವುದೊಂದು ಫ¼ಗಿ ಸದನ ಮುರಿದು ಸಂ ಪದವೆಲ್ಲ ತನ್ನಗೆ ಒದಗಿಬರಲೆನ್ನುವುದು 2 ತಡೆಯದೆ ವೈರಿಗಳ ಕಡುಕೋಪದಿಂ ತಂದು ಪಿಡಿದು ಕಂಬಕೆ ಕಟ್ಟಿ ಸುಡಿಸುವುದೊಡನೆ ಕಡುಗಲಿತನದಿಂದ ಪೊಡವಿಪರ ಸದೆಬಡಿದು ಪೊಡವಿ ಗೆಲಿದು ಒಂದೇ ಕೊಡೆಯಿಂದಾಳುವುದು 3 ಯಾತ್ರೆ ಮಾಡುವುದೊಮ್ಮೆ ಕ್ಷೇತ್ರದೊಳಗೆ ಕೂತು ನೇತ್ರಮಂ ಬಂಧಿಸಿ ಸ್ತೋತ್ರ ಮಾಡುವುದು ಮೂತ್ರದ್ವಾರದೆ ಬಂದ ಸೂತ್ರದ ಕಾಯಕ್ಕೆ ಧಾತ್ರಿ ಸೊನ್ನೆಂದೊಮ್ಮೆ ಖಾತ್ರಿ ಮಾಡುವುದು 4 ಯಾತರ್ಹಲವು ಪರಿಮಿತಿಯಿಲ್ಲದ್ಯೋಚಿಸಿ ಖತಿ ತಾಳಲಾರೆ ಅತಿಭ್ರಷ್ಟಮನದ ದುರ್ಮತಿ ನಿವಾರಿಸು ಗತಿ ನೀಡೆನಗೆ ಕೃಪೆಯಿಂ ಹಿತಭಕ್ತ ಶ್ರೀರಾಮ 5
--------------
ರಾಮದಾಸರು
ವಿಠಲ ಓಡಿ ಬಾರೊ ತೊಟ್ಟಿಲನೇರೊ ಪುಟ್ಟ ಕಮಲದಂಥ ಬಟ್ಟ ಮುಖವ ತೋರೊ ಪ. ಜಟ್ಟಿಯಂದದಿ ಭುಜ ತಟ್ಟಿ ಹುಂಕರಿಸುತ ಅ- ರಿಷ್ಟ ವೃಷಭನನ್ನು ಮೆಟ್ಟಿ ಮಡುಹಿದಂಥ 1 ಹೇಷಿಕ ಭೀಷಣ ಕೇಶಿಯಂಬಸುರನ ಘಾಸಿಮಾಡಿದ ತೋಳ ಬೀಸುತ ಭರದಿಂದ 2 ಮಂದಹಾಸದಿ ಶರದಿಂದು ಕಾಂತಿಯ ಗೆಲ್ವ ಸುಂದರ ಮುಖ ಪೂರ್ಣಾನಂದ ಗೋಪಿಯ ತಂದ 3 ಮೀಸಲ ನೊರೆಹಾಲ ಕಾಸಿ ಸಕ್ಕರೆ ಕೂಡಿ ವಾಸ ಚೂರ್ಣವನಿಕ್ಕಿ ಶ್ರೀಶನಿನ್ನೊಶಕೀವೆ 4 ನಿತ್ಯ ಸುಖಾಂಬುಧೆ ನಿರವಧಿ ಫಲದ ಸ- ರ್ವೋತ್ತಮ ಶೇಷಾದ್ರಿ ಶಿಖರೀಶ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಪ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪÀರು 1 ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ ಸುತ್ತ ಉರಿಯನಿಕ್ಕಿ ಮದ್ದು ಮೈಯಿಗೆ ಮುಚ್ಚಿ ಮುದದಿಂದ ಬೇಯಿಸಿ ಹದ್ದು ಕಾಗೆಗೆ ನಿನ್ನ ಯೆಡೆ ಮಾಡುವರು ಅ ಮೇಧ್ಯವ ತಿನಿಸುವರು ಅರಗಲ್ಲಿಗೆ ಉದ್ದಿ ಉರುಳ ಬಿಡುವರು ಕೆಂಡದ ಮೇಲೆ ವೊದ್ದಿಸಿ ಪರಿಪರಿ ಭಂಗವಪಡಿಸುವರು 2 ವೈತರಣಿಯೊಳಗದ್ದಿ ಅದ್ರಿಯ ಹರಿ ಮಾತು ಪೊರಡದಂತೆ ಮಾಡಿ ಮುದ್ರೆ ಬಾಯಿಗೆ ಹಾಕಿ ತೂತು ಮೈಯಿಗೆ ತಂತಿಯ ಪೋಣಿಸಿ ಪೂತಿ ಗಂಧದೊಳು ಹೊರಳಿಸಿ ತಡಿಯದೆ ಯಾತಣೆಯಿಂದ ಬಿಸುಟು ಮೊಟ್ಟೆಯ ಕಟ್ಟಿ ಮೂತರ ಕುಡಿಸುವರು ಮೀಸಿಯನು ಕಿತ್ತಿ ಘಾತಿಸಿ ನೋಡುವರು ಮಹಾ ಪಾತಕನೆಂದು ವಿಧಿಯ ಮೇಲೆ ಗುದ್ದೋರು 3 ಹೆಡತಲೆಯಿಂದ ನಾಲಿಗೆಯ ತೆಗೆದು ಕ ಕ್ಕಾಡಿ ಮಾಡಿ ನವನಾರು ಸಂದುಗಳು ಸುಟ್ಟು ಕೈಕಾಲನು ಕಟ್ಟಿಸಿ ಸಾಸವಿ ಸುಣ್ಣ ತೊಡೆದು ಬೋರಿಗೆಯಿಂದ ಬಡಿದು ಬಸಿಗೆ ಹಾಕಿ ಒಡಲೊಳು ಸೀಸವರೆದು ಮರದ ಬೇಲೆಯಲಿ ಹೊಡೆದು ಸರ್ರನೆ ಸೀಳೋರು ಕುರಿಯಂತೆ ಕಡಿದು ಈ ಬಗೆ ಮಾಡೋರು ಕೀವಿನ ಮಡುವಿನೊಳಗೆ ಇಟ್ಟು ತಲೆಮೆಟ್ಟಿ ಕುಣಿವರೊ 4 ಮೂಗನು ಕೊಯಿದು ಕವಡಿಯ ಪೋಣಿಸಿ ಚೆ ನ್ನಾಗಿ ಅತ್ತರಾಟದಲ್ಲಿ ತಲೆಕೆಳಕಾಗಿ ಜೋಲುವಂತೆ ಝೋಲಿಯ ಹೊಡೆದು ಮಾತುಗಾಲೆ ನಿನ್ನ ತೂಗಹಾಕಿ ಬಾಗಿಸಿ ಇನ್ನೊಮ್ಮೆ ಬೊಗಳೆಂದು ಕುಡಕಾಸಿ ವೇಗನೆ ಬರೆ ಇಡುವರು ದು:ಖದ ಸಾಗರ ಉಣಿಸುವರು ಬೆಕ್ಕಿನಂತೆ ಕೂಗಲು ಕೇಳಿ ಸೈರಿಸದಲೆ ಇಪ್ಪರು 5 ಘಾಯವಡೆದಲ್ಲಿ ಇರಿದು ಉಪ್ಪನೆ ತುಂಬಿ ಬಾಯಿವರಳು ಮಾಡಿ ಭತ್ತವ ಥಳಿಸಿ ಕ್ರೂ ರಾಯುಧ ಕಿವಿಗೆ ಬಿರಿಯಿಟ್ಟು ಬಂಧಿಸಿ ಖೋಯೆಂದು ಕೆಡಹಿ ಬೊಬ್ಬಿರಿಯೇ ಚಿಂದಿ ಮಾಡಿ ನಾಯಿಗಳಿಂದ ಕಚ್ಚಿಸಿ ಸೂಜೀಯ ಆಯಕ್ಕೆ ಊರುವರು ಮರಕ್ಕೆ ಕಟ್ಟಿ ಊಯಾಲೆ ಆಡುವರು ಇಪ್ಪತ್ತೆಂಟು ನಾಯಕ ನರಕದಲ್ಲಿಟ್ಟು ತೆಗೆಯುವರು6 ಪರಿ ಬಾಧಿಗೆ ಇರೆ ನರಕ ನರಕದಲ್ಲಿ ಹೂಳಿ ಉಬ್ಬಸಗೈಸಿ ಉರ ಕಾಲದಲ್ಲಿಟ್ಟು ತರುವಾಯ ತೆಗೆದು ಪಾ ಮರ ದುರುಳನೆಂದು ಮಿಡುಕಿಸಿ ಮಹಾನಿತ್ಯ ನರಕದೊಳಗೆ ನೂಕಿ ಕಡೆಗಾಣದಂತೆ ವರಲುತಿರೆ ನಗುವರು ನಿರ್ಮಲವಾದ ಮರುತ ಮತದವರು ಪ್ರತಿದಿನ ಸಿರಿಪತಿ ವಿಜಯವಿಠ್ಠಲನ ನಂಬದ ಮಿಥ್ಯಾ 7
--------------
ವಿಜಯದಾಸ
ಸುರನರ ವರಗುರು | ಸುರನರ ಪ. ಸುರನರ ವರಗುರು ನಿನ್ನಾ | ದಿವ್ಯ ಚರಣಕ್ಕೆ ಎರಗುವೆ ನಿನ್ನಾ | ಆಹ ಕರುಣದಿಂದೀಕ್ಷಿಸಿ ವರಮತಿ ಪಾಲಿಸಿ ಹರಿಯ ಶ್ರೀ ಚರಣಕ್ಕೆ ಎರಗಿಸು ಮನವನೂ ಅ.ಪ. ಹಣ್ಣೆಂದು ನುಂಗೆ ಪೋದುದಕೇ | ಓದಿ ತಣ್ಣಗೆ ಮಾಡಿದ ಮನಕೇ | ಹರಿ ಯನ್ನು ಓಲೈಸಲು ಮರಕೇ | ಅಡರಿ ಹೆಣ್ಣನ್ನೆ ತೊರೆದನು ವ್ರತಕೇ | ಆಹ ಸಣ್ಣ ರೂಪದಿ ಪುರವನ್ನು ಶೋಧಿಸಿ | ಮುಡಿ ಹೊನ್ನು ಸಲ್ಲಿಸಿ ವಾರ್ತೆಯನ್ನು ಪೇಳಿದ ಧೀರ 1 ರಕ್ಕಸಿಯೊಳು ಪ್ರೇಮದಾಟಾ | ದನುಜ ಗಿಕ್ಕಿದ ಕೂಳಿಗಾರಾಟ | ಅಣ್ಣ ತಕ್ಕೊಂಡ ಎಡೆಯಲ್ಲಿ ಊಟ | ಬಲು ಸೊಕ್ಕಿದರೊಡನೆ ಕಾದಾಟ | ಆಹ ಮಕ್ಕಳ ಕೊಯ್ದವ ನಿಕ್ಕಿದಸ್ತ್ರಕೆ ತಲೆ ಇಕ್ಕದೆ ಪುರವಾಳ್ದ ರಕ್ಕಸಾಂತಕ ದೂತ 2 ಗುರುವಿಗೆ ವರೆದು ತತ್ವಾರ್ಥ | ಮತ್ತೆ ಧರೆಯಲ್ಲಿ ಚರಿಸಿದ ವ್ಯಾಪ್ತಾ | ಮುನಿ ವರರೊಳು ಬಲು ಶ್ರೇಷ್ಠನೀತಾ | ಪೇಳ್ದ ಪರಿಶುದ್ಧ ವೇದ ಭಾವಾರ್ಥ | ಆಹ ಸುರರುಷಿ ಪೂಜಿಪ ಹರಿಗಿರಿಯಲಿ ಸತ್ಯ ವರಸೂನು ಚರಣದಿ ಗುರುಭಕ್ತಿರತ ವ್ರತ 3 ದುಡಿದು ಸ್ವಾಮಿಗೆ ಪ್ರತಿಫಲವಾ | ಬೇಡ ಕೊಂಡ ವ್ರತವಾ | ಗಿರಿ ವಡೆದನು ಕೈ ಜಾರೆ ಶತವಾ ಮಾಡಿ ಗೋಪಿ ಚಂದನವಾ | ಆಹ ಕಡಲ ತೀರದಿ ತನ್ನ ವಡೆಯನ್ನ ನಿಲ್ಲಿಸಿ ಅಡರಿದ ಹಿಮಗಿರಿ ದೃಢಕಾಯ ಹರಿಪ್ರೀಯ 4 ಎಷ್ಟು ವರ್ಣಿಸಲಳವಿವನಾ | ಮಹ ಗುಟ್ಟು ಮಂತ್ರವ ಸಾಧನವನಾ | ಮೂರು ಬಟ್ಟೆ ಮಾಡುವ ನಂಬಿದವನಾ | ಜ್ಞಾನ ಕೊಟ್ಟು ಕಾಯುವ ಕರುಣಿ ಮಾನ್ಯಾ | ಆಹ ದಿಟ್ಟ ಗೋಪಾಲಕೃಷ್ಣವಿಠ್ಠಲ ಬ್ರಹ್ಮನ ಪಟ್ಟ ಕಟ್ಟುವನೆಂದು ಘಟ್ಟಿ ಮನದಲಿಪ್ಪ 5
--------------
ಅಂಬಾಬಾಯಿ
ಹುಡುಕಿದಳೆಶೋದ ಕಂದನ ಪಿಡಿದು ದಾರೆತ್ತಿಕೊಂಡ್ಹೋದರೆನುತ ಪ ಕಂಗಳನಿಕ್ಕಿ ಕಾದಿಹ್ಯದು ಸಿಂಗರದ ಗೋಪಿರ್ಹೆಂಗಳೆಯರು ರಂಗನ ಸುಖಕವರು ಗುಂಗುಹಿಡಿದು ಕುಳಿತಿಹ್ಯರು ರಂಗುಮಂಟಪದೊಳಗೆ ಎನ್ನ ಕಂಗಳಿದರ ಕಾಣನಾವ ಅಂಗನೆಯರಡಗಿಸಿದರೆಂದು ಅಂಗಲಾಚಿ ಅಂತರಂಗದಿ 1 ಉನ್ನತೋನ್ನತ ಋಷಿಗಣರು ಪನ್ನಂಗಶಾಯಿಯ ಸನ್ನಿಧಿಲವರು ಮುನ್ನಾವ ಕಾಲದಿಂ ಕುಳಿತಿಹರು ಭಿನ್ನವಿಲ್ಲದೆ ತಪವ ಮಾಳ್ಪರು ಇನ್ನು ಕಾಣಲವರು ತಮ್ಮಿಷ್ಟ ವನ್ನು ಪೂರ ಪಡೆವನಕ ಎನ್ನ ಕಣ್ಣಿಗೆ ಹಾಕರೆಂದು ಬನ್ನಬಡುತ ತನ್ನೊಳ್ತಾನು 2 ದೂಷಣೆ ಭೂಷಣಗಳನೊದೆದ ಮೋಸ ಕ್ಲೇಶಗಳನು ತರಿದ ಆಶಾ ಪಾಶಗಳನು ಜರಿದ ಈಶನುನ್ನತ ನಿಜವ ತಿಳಿದ ಶ್ರೀಶ ಶ್ರೀರಾಮ ನಿನ್ನ ಪಾದ ದಾಸರು ಕಾಣಲು ತಮ್ಮ ಭಕ್ತಿ ಪಾಶದಿಂದ ಬಿಗಿದು ಕಟ್ಟಿ ನ್ನೇಸು ಕಾಲದಿ ಬಿಡರೆಂದರಿದು 3
--------------
ರಾಮದಾಸರು
ಆರೆನ್ನ ಉಳುಹುವರೈ ರಂಗಘೋರಾರಣ್ಯ ಭವದಿ ಸಿಕ್ಕಿದೆ ರಂಗ ಪ.ಎಂಟು ಕಾಡಾನೆ ಎಂಟು ಕಡೆಯಲಿ ನಿಂತಿವೆಗಂಟನಿಕ್ಕಿವೆ ಮೂರು ದಳ್ಳುರಿಯಸುಂಟರಗಾಳ್ಯೆಬ್ಬರಿಸಲು ಗಿಡಗಂಟಿಲಿ ಬಿದ್ದೆ ನೀನಲ್ಲದೆನ್ನ 1ಹುಲಿಯೊಂದು ಗುಡುಗುಡಿಸುತಿದೆ ಭಯಂಕರಬಲು ತೋಳೆರಡು ಕೆಕ್ಕರಿಸುತಿವೆಸಲುಗೆಯ ಕೋತಿಯೊಂದಣಕಾಡುತಲಿದೆಮೇಲೆ ಕರಡಿಯು ಹತ್ತೆಳವುತಿದೆ 2ಕಾಳುರಗನ ಕಟ್ಟು ಮೈತುಂಬ ನನ್ನನಾಲಿಗೇಳದು ನಿನ್ನ ಕರೆಯಲಿಕೆ ನಿನ್ನಾಳಟ್ಟಿ ಕರೆಸಿಕೊಳ್ಳೆಲೆ ತಂದೆ ನಾಗೋಳಿಟ್ಟೆ ಪ್ರಸನ್ನವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯಬೆಳ್ಳಕ್ಕಿಯಂತೆ ನಿನ್ನ ಧ್ಯಾನವ ಮಾಡುವೆನಯ್ಯಾ ಪಗಂಡು ಮುಳುಗಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿಮಂಡೆಶೂಲೆಯಲ್ಲದೆ ಗತಿಯು ಇಲ್ಲಮಂಡೆಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ1ಗಾಣದೆತ್ತಿನಂತೆ ಕಣ್ಣಕಟ್ಟಿ ಪ್ರದಕ್ಷಿಣೆ ಮಾಡಿಕಾಣದೆ ನಾ ತಿರುಗಿದೆ ಕಂಡುದಿಲ್ಲಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿಆಣಿಕಾರಿಕೆ ಮಾಡಿದಂಥ ಈ ಕುಯುಕ್ತಿಯು 2ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲಪೊಕ್ಕಳ ಪೂವಿನ ಶ್ರೀ ಪುರಂದರವಿಠಲನೆಮಕ್ಕಳಾಟಿಕೆಯ ಬಿಡೊ ರಕ್ಷಿಸೊ ಎನ್ನೊಡೆಯ 3
--------------
ಪುರಂದರದಾಸರು
ಕದವನಿಕ್ಕಿದಳಿದೆಕೊ ಗಯ್ಯಾಳಿ ಮೂಳಿ ಪ.ಕದವನಿಕ್ಕಿದಳಿದಕೊ ಚಿಲಕವಲ್ಲಾಡುತಿದೆ |ಒದಗಿದ ಪಾಪವು ಹೊರಗೆ ಹೋದೀತೆಂದು ಅ.ಪಭಾರತ - ರಾಮಾಯಣ ಪಂಚರಾತ್ರಾಗಮ |ಸಾರತತ್ವದ ಬಿಂದು ಕಿವಿಗೆ ಬಿದ್ದೀತೆಂದು 1ಹರಿಯ ಪಾದಾಂಬುಜಯುಗಳವ ನೆನೆವ ಭ - |ಕ್ತರ ಪಾದದರಜ ಒಳಗೆ ಬಿದ್ದೀತೆಂದು 2ಮಂಗಳ ಮೂರುತಿ ಪುರಂದರವಿಠಲನ |ತುಂಗವಿಕ್ರಮಪಾದ ಅಂಗಳ ಪೊಕ್ಕೀತೆಂದು 3
--------------
ಪುರಂದರದಾಸರು
ಕೊಂಡಾಡಲಳವೆ ಕರುಣಾನಿಧಿ ಕಾವನದಂಡ ಸಂಜಿತ ಗುರುಸತ್ಯನಾಥರ ಕೀರ್ತಿ ಪ.ಶ್ರೀ ವಾಸುದೇದ ತಾ ಭಾವಿಸಿ ಚಿತ್ತದಿಭೂವಲಯಕೆ ಸುಜನಾವಳಿಗಾಶ್ರಯವೀವೆನೆನುತ ಶುಭದೇವವೃಕ್ಷವನಟ್ಟೆಈವರ ಪರಮಹಂಸಾವಲಂಬನ ತಾಳ್ದುಶ್ರೀ ವಾಯುಮತದಿ ತತ್ವವೆ ಲಕ್ಷಿಸುವ ಪ್ರೇಕ್ಷಾವಂತರಾಗಿಹ ಜೀವಕೋಟಿಗಳ ಕೃಪಾವಲೋಕನದೊಳಿಟ್ಟ ಅಪೇಕ್ಷಿತಭಾವಾರ್ಥಗಳನೆ ಕೊಟ್ಟು ನಂಬಿದಸೇವಕರ್ಗಭಯವಿಟ್ಟ ಗುರುರಾಯನ 1ಭಾನುತೋರುವ ಮುನ್ನೆ ಸ್ನಾನವ ಮಾಡಿ ಸುಮ್ಮಾನದಿಂದಲಿ ನೇಮ ಮೌನದೊಳಿದ್ದು ಶ್ರೀಮಾನಾಥನಂಘ್ರಿಯ ಮಾನಸದಲಿ ದೃಢಧ್ಯಾನದಿಂ ಬಲಿದುಗೀರ್ವಾಣಭಾಷ್ಯಾಮೃತಪಾನವ ಜನರಿಗೆ ಸಾನುರಾಗದಲಿತ್ತುನಾನಾ ತತ್ವಾರ್ಥ ವ್ಯಾಖ್ಯಾನವ ಜನರಿಗೆತಾನಂದು ಬೋಧಿಸಿದತಾಮಸಜ್ಞಾನವನೋಡಿಸಿದ ಆ ಕಾಮಧೇನುವೆನಿಸಿ ಎಸೆದ ಗುರುರಾಯನ 2ಭೇದವರ್ಜಿತ ಮತ್ತವಾದ ಕುಂಭಿಯಕುಂಭಭೇದಕಸಿಂಗಹಲಾಧಾರಿಹರಿಸಗುಣೋದರ ಸಾಕಾರಮಾಧವಹರನುತಪಾದನೆನುತಸೂತ್ರವೇದ ಪುರಾಣದಿಸಾಧಿಸಿ ಕುತ್ಸಿತವಾದಿಗಳಪಾದಾಕ್ರಾಂತರ ಮಾಡಿ ಮೇದಿನಿಯೊಳು ಜಯನಾದಭೇರಿಯ ಹೊಯಿಸಿದ ಮುಕ್ತಿಯಸಾಧನ ತೋರಿಸಿದ ಭ್ರಷ್ಟಂಕುರೋದಯ ಮಾಣಿಸಿದ ಗುರುರಾಯನ 3ಕಾಲಕಾಲಕೆ ಧರ್ಮ ಪಾಲಿಸಿ ಯಾಚಕಜಾಲಕೆ ಮನ್ನಿಸಿ ಮೂಲ ಮಂತ್ರೋಪದೇಶಪೇಳಿ ಪೂತರ ಮಾಡಿ ಹಾಲು ಸಕ್ಕರೆ ತುಪ್ಪಹೋಳಿಗ್ಯನ್ನವನಿಕ್ಕಿ ಮೇಲೆ ದ್ರವ್ಯವನಿತ್ತುಪಾಲಿಸಿ ತಾಯಿತಂದೆಗಳ ಹಂಬಲ ಬಿಡಿಸಿ ಲೋಕದವರಿಗಭಿಲಾಷಾ ಪೂರ್ಣಾನುಕೂಲಚಿಂತಾಮಣಿಯ ಯತಿಕುಲಮೌಳಿಮಕುಟಮಣಿಯ ವಿರತಿಭಾಗ್ಯಶಾಲಿ ಸುಗುಣಖಣಿಯ ಗುರುರಾಯನ 4ಮಣ್ಣು ವನಿತೆಸತಿಹೊನ್ನಿನ ಬಯಕೆಯಘನ್ನತೆಜರಿದುಪಾವನ್ನಮಹಿಮನಾದಚೆನ್ನ ಸತ್ಯನಿಧಿ ತೀರಥನ್ನ ಕರೋದ್ಭವತನ್ನಾಕಷೆಂಬುವಭಿನ್ನವಚಂದ್ರಿಕೆಯನ್ನು ಪ್ರಕಾಶಿಸಿ ಪೂರ್ಣಚಂದ್ರಮನಂತೆಉನ್ನತ ಕಳೆಯುತ ಚಿನ್ಮಯ ವರದ ಪ್ರಸನ್ನ ವೆಂಕಟಾಧಿಪನ ಭಜಿಸಿನಿತ್ಯಧನ್ಯನೆನಿಸುತಿಪ್ಪನ ಸತ್ಯಾಭಿನವರನ್ನನ ಪೊರೆದÀಪ್ಪನ ಗುರುರಾಯನ 5
--------------
ಪ್ರಸನ್ನವೆಂಕಟದಾಸರು
ಕೋಲೆಂದು ಪಾಡಿರೆ ಬಾಲೆ ದ್ರೌಪತಿ ದೇವಿಮೇಲಾದ ಗುಣವ ಕೊಂಡಾಡಿಕೋಲಪ.ಫುಲ್ಲನಯನೆಯರ ಕರಿಯೆ ನಲ್ಲೆ ದ್ರೌಪತಿ ದೇವಿಮೆಲ್ಲನೆ ಹೆಜ್ಜೆ ನಿಕ್ಕಿದಳುಕೋಲಉಲ್ಹಾಸವಾಗೋದು ನಿಲ್ಲದೆ ನಡೆಯಮ್ಮಹಲ್ಲಿ ಮಾತಾಡಿದವಾಗ ಕೋಲ 1ಬಡನÀಡ ಬಳುಕುತ ನಡೆದಳು ದ್ರೌಪತಿಅಡಿಗಳ ಘೆಜ್ಜಿ ಫಲಕೆಂದುಕೋಲಒಡೆÉಯ ರಂಗಯ್ಯ ನಿನಗೆ ಕಡು ಪ್ರೀತಿ ಮಾಡುವನಡೆಯೆಂದು ನುಡಿದರು ಹರುಷದಿ ಜನರು 2ಚಂದ್ರವದನೆಯರು ಕರಿಯೆ ಚಂದಾಗಿ ನಡೆಯಮ್ಮಒಂದೂಅನುಮಾನ ಬ್ಯಾಡವೆಕೋಲತಂದೆ ರಾಮೇಶ ಆನಂದವ ಪಡಿಸುವಎಂದು ಕುಂತೆಮ್ಮ ನುಡಿದಳುಕೋಲ3
--------------
ಗಲಗಲಿಅವ್ವನವರು
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು