ಒಟ್ಟು 153 ಕಡೆಗಳಲ್ಲಿ , 51 ದಾಸರು , 132 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ಪ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು 1 ನಿತ್ಯ ನಿನ್ನ ನಂಬಿದೆ ಬೆಚ್ಚಿಸಲಾರೆ ಬಲು ಅರ್ಚನೆ ಬಗೆಯಿಂದ ಮುಚ್ಚಿದಾವರ್ಕ ದೇಹ ಬಿಚ್ಚಿಯಿಟ್ಟು ದೇವಾ ಅಚ್ಚನಾಗ್ರಹದಿಂದ ಅಚ್ಯುತಾ ಶರಣೆಂದು ಅಚ್ಯುತಾ ಅಚ್ಯುತಾ ಚಚ್ಚರಾ ನಾಮಗಳುಚ್ಚರಿಸುವ ಧ್ಯಾನ ಬಿಚ್ಚದೆ ಒದಗಲಿ ಇಚ್ಛಾಕ ಮೂರುತಿ 2 ಧನ್ಯ ಸ್ವಾಮಿ ಕಾಸಾರಾಪುಣ್ಯ ಕಾನನವಾಸಾರಣ್ಯಗಳೆಲ್ಲಾದಿ ಅಲ್ಲ ನಿನ್ನ ಭಕ್ತರ ಕುಲಕೆ ಮಾನ್ಯರಹಿತನೆ ತಾ- ಮದನ ಲಾ- ವಣ್ಯ ಕ್ಷೀರವಾರಿಧಿ ಕನ್ಯ ಭೂ ಸತಿಪತಿ ಶೂನ್ಯ ನೀನೆಲೊ ದುರಿತಾ- ಸಿರಿ ವಿಜಯವಿಠ್ಠಲ ಹಿ- ರಣ್ಯೋದರ ಪಿತ ಸನ್ಯಾಯದಿಂದಲಿ 3
--------------
ವಿಜಯದಾಸ
ನಿನಗೇನು ಕಡಿಮೆ ಪೇಳೈ ಎನಗೆಲೊ ರಂಗಾ ಪ ಕ್ಷೀರಾಬ್ಧಿ ನಿನ್ನದು ಸಂಸಾರಾಬ್ಧಿ ಎನ್ನದಯ್ಯ ಮೂರೇಳವತಾರ ನಿನಗೆ ನೂರೆಂಟು ಎನಗೇ1 ನಿನಗೆ ಸುರಮುನಿಗಣ ಎನಗೆ ಭೂಸುರಗಣ ನಿನಗೆ ಸತ್ವದ ಗುಣ ಎನಗಾಸೆ ದ್ವಿಗುಣ2 ಜಗವು ಉದರವೆಂದು ಬಗೆದು ಪೋಪೆನೀ ಜಗದ ಸರ್ವಾರ್ಥವ ಮಿಗೆ ಬಯಸುವೆನಾ 3 ನಿನಗೆ ಭಕ್ತರೆ ಪ್ರಿಯ ಎನಗೆ ಮುಕ್ತಿಯೆ ದೈವ ನಿನಗೆ ರಕ್ಷಣೆನಾಮಾ ಎನಗೆ ಭಕ್ಷಣೆ ಕಾರ್ಯಾ 4 ವರಷಡ್ಗುಣವು ನಿನಗೆ ಅರಿಷಡ್ವರ್ಗವು ಯನಗೆ ದುರಿತ ತೃಪ್ತತೆ ಯೆನಗೆ 5 ನಿನಗೆ ನಾನೆಂಬುದಿಲ್ಲ ಎನಗೆ ನಾನೆಂಬುದುಂಟು ರಂಗನಾಥ ಶ್ರೀಶ ತುಂಗವಿಕ್ರಮ ನೀ 6 ಕ್ಷಮಿಸೆನ್ನಪರಾಧವ ವಿಮಲಾಂಗ ಮಾಧವ ಕಮಲಾಕ್ಷ ಪೊರೆದೇವ ರಾಮದಾಸನುತಾ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನಗೇನು ಘನವೇನು ವನಜಾಕ್ಷ ವೆಂಕಟೇಶ ಮನಕೆ ಬೇಕಾದುದ ಇತ್ತು ರಕ್ಷಿಸುವರೆ ಪ ದೇಶ ನಿನ್ನದು ಬಹುಕೋಶ ನಿನ್ನದು ಜಗ ದೀಶ ನಿನ್ನನು ಭಾಗ್ಯಲಕುಮಿ ಸೇವಿಸುವಳು ಆಸೆಯಿಂದಲಿ ನಿನ್ನ ಚರಣವ ಮೊರೆಹೊಕ್ಕೆ ದೋಷವ ಕಳೆದು ಎನ್ನ ಲೇಸಿತ್ತು ಸಲಹಯ್ಯ 1 ಅಣುವಾಗಲೂ ಬಲ್ಲೆ ಮಹತ್ತಾಗಲೂ ಬಲ್ಲೆ ಅಣುಮಹತ್ತಿನೊಳಗೆ ಗುಣವ ತೋರಲು ಬಲ್ಲೆ ಕ್ಷಣಕೆ ಮುನಿಯ ಬಲ್ಲೆ ಆ ಕ್ಷಣಕೆ ರಕ್ಷಿಸಬಲ್ಲೆ ಗುಣಗಳವಗುಣಗಳ ನೋಡದೆ ಸಲಹಯ್ಯ 2 ಬಟ್ಟೆನು ಕೈಯ ಮುಟ್ಟಿ ರಕ್ಷಿಪರಿಲ್ಲ ಬೆಟ್ಟದೊಡೆಯ ಮನದಭೀಷ್ಟವೆಲ್ಲವನಿತ್ತು ದೃಷ್ಟಿಯಿಂದಲೆ ನೋಡಿ ಒಟ್ಟೈಸಿ ಸಲಹಯ್ಯ 3 ತಂದೆ ತಾಯಿಗಳಿಲ್ಲ ಬಂಧು ಬಾಂಧವರಿಲ್ಲ ಕುಂದು ಹೆಚ್ಚಿಯೆ ನಿರ್ಬಂಧ ಬಡಿಸುತಿದೆ ಮಂದರಾದ್ರಿಯ ಗೋವಿಂದ ನಿನ್ನಯ ಪಾದ ದ್ವಂದ್ವವ ತೋರಿಸಿ ಚಂದದಿ ಸಲಹಯ್ಯ 4 ಮನದ ಸಂಕಲ್ಪಕೆ ಅನುಗುಣವಾಗಿಯೆ ಘನವಿತ್ತು ಕರೆದೊಯ್ದು ವಿನಯದಿ ಮನ್ನಿಸಿ ಮನೆಗೆ ಕಳುಹು ನಮ್ಮ ವರಾಹತಿಮ್ಮಪ್ಪನೆ ತನು ಮನದೊಳಗನುದಿನದಿನ ಸಲಹಯ್ಯ 5
--------------
ವರಹತಿಮ್ಮಪ್ಪ
ನೀನೆ ಜಗದಾನಂದದಾಯಕ ರಂಗಾ ದೀನರಕ್ಷಕ ನೀನೊಬ್ಬನೇ ರಂಗಾ ಪ ಎನ್ನಂಥ ಶರಣಾರ್ಥಿ ಎಷ್ಟಾದರುಂಟಯ್ಯ ನಿನ್ನಂಥ ದಾತಾರ ಇನ್ನುಂಟೆ ರಂಗಾ ಅ.ಪ ಬಾಲನ ಪೊರೆದವನಾರಯ್ಯಾ ಪಾಂಚಾಲಿಗೆ ಒಲಿದವನಾರಯ್ಯ ಬಲುದೀನನು ನಾನೊಬ್ಬನಹುದಯ್ಯ1 ಮಾನ ನಿನ್ನದು ಪ್ರಾಣ ನಿನ್ನದು ಸ್ಮರನಯ್ಯ ನಾನು ನಿನ್ನವನೋ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀರ ತರಂಗಿಣಿ ತೀರ ನಾರಸಿಂಹ ಪ ಸಾರಿದೆನೊ ತವಪಾದ ಪಂಕಜ ತೋರು ಮನದಲಿ ತವಕದಿ ಅ ನಾರದನುತ ಚಿಚ್ಛರೀರವ ಶ್ರೀ ಭೂದು ರ್ಗಾರಮಣ ದುರಿತಾರಿ ಬ್ರಹ್ಮ ಸ ಮೀರ ಮುಖ ವಿಬುಧಾರ್ಚಿತ ಚಾರು ಚರಣಯುಗ ಕ್ಷೀರಾಬ್ಧಿ ಶಯನ ಮ ದ್ಭಾರ ನಿನ್ನದು ಮೂರು ಲೋಕದ ಸೂರಿಗಮ್ಯ ಸುಖಾತ್ಮಕ 1 ವೇದವೇದ್ಯ ಸಂಸಾರೋದಧಿ ತಾರಕ ಛೇದ ಭೇದ ವಿಷಾದವೇ ಮೊದ ಶ್ರೀದ ಶ್ರೀಶ ಅನಂತ ಆಪ್ತಕಾಮ ಬಾದರಾಯಣ ಭಕ್ತವರ ಪ್ರ ಹ್ಲಾದಪೋಷಕ ಪಾಹಿ ಮಾಂ 2 ಹೋತಹೃದ್ಯ ಜಗನ್ನಾಥವಿಠಲ ನಿನ್ನ ಮಾತು ಮಾತಿಗೆ ಸ್ಮರಿಸುತಿಹ ಸ ಚ್ಚೇತನರನು ನೀ ಸರ್ವದಾ ವೀತಶೋಕ ಭವಭೀತಿ ಬಿಡಿಸಿ ತವ ದೂತರೊಳಗಿಡು ಮಾತರಿಶ್ವಗ ಭೂತಭಾವನ ಭವ್ಯದ3
--------------
ಜಗನ್ನಾಥದಾಸರು
ನೀರಜದಳನಯನಾ ಅನ್ಯನಲ್ಲ ನಾ ನಿನ್ನ ದಾಸನುಯಂದು ಚಿನ್ಮಯ ಮೂರುತಿ ಶ್ರೀನಿವಾಸಹರೆ ಪ ಪಂಕಜೋದ್ಭವನಾ ಪಡೆದಂಥಾ ವೆಂಕಟಗಿರಿನಿಲಯ ವೇಣುನಾದಪ್ರೀಯಾ ಬಿಂಕಾದಿ ಶರಣರ ಪೊರೆದಂಥಾ ಚಕ್ರಧರ ಶೌರಿ ಮಹಾನುಭಾವ ಬಿಂಕದಾನವರಳಿದ ಬಲವಂತಾ ಶಂಕೆಯಿಲ್ಲದೆ ನಿಮ್ಮ ಸ್ಮರಿಸುವ ದಾಸರ ಕಿಂಕರ ಕಿಂಕರ ಕಿಂಕರನೆಂದು ಇನ್ನು 1 ವಾಸುಕಿಶಯನ ಶ್ರೀ ವಸುದೇವನಂದನ ಭೂಸರವಂದ್ಯ ಪುರಾಣ ಪುರುಷ ಈಶ ಜಗತ್ರಯ -----ರಾಜವರದಾ ಭೂಸುತೋನಾಯಕ ಭೂರಮಣಾ ಸಾಸಿರನಾಮದ ಸರ್ವೇಶನೆ ಕೃಷ್ಣಾ ಭೂಸೂರ ಕೀರ್ತಿ ಪ್ರಕಾಶನಾದ ಕೇಶವ ಗೋವಿಂದ ಕರುಣಿಸಿ ಕಾಯೋ ಎನ್ನ ಪಾದ ವೈಕುಂಠಾಧೀಶ 2 ಅಂಡಜಗಮನ ಭೂಮಂಡಲ ನಾಯಕ ಪುಂಡರೀಕಾ ವರದ ಪರಮಾತ್ಮನೆ ಚಂಡ ಪ್ರಚಂಡ ವೇದಾಂತ ರಹಸ್ಯನಾದ ಉದ್ದಂಡ ದೇವಾ ಕೊಂಡಾಡುವರ ನಿಮ್ಮ ಕರುಣಿಸಿ ಕೈಹಿಡಿದು ಕಾಯ್ವ ಭಾರವುಳ್ಳ ಘನನು ನೀನೂ ಪತಿ ` ಹೆನ್ನ ವಿಠ್ಠಲ' ನಿನ್ನಂದು ಸೇರಿದ ಅವರ ಹರುಷದಿ ಸಲಹೋ ಇನ್ನೂ 3
--------------
ಹೆನ್ನೆರಂಗದಾಸರು
ಪಂಡರಿನಾಥ ಪಾವನ ಸುಚರಿತ ಪ ಪಾಂಡವಪ್ರಿಯದೂತ ಶರಣರ ಕಾದುಕೊಂಡಿಹ ಖ್ಯಾತ ದಾತಅ.ಪ. ಮಾತಾಪಿತನು ಭ್ರಾತನು ಹಿತನು ನಾಥನು ಜ್ಞಾತನು ಸಂತಾರಕನು ಮತಿಯೂ ನೀನೆ ಗತಿಯೂ ನೀನೆ ಕಾತರ ವ್ಯಾತರದು ಬೀತುದು ದೇವ 1 ತನುಮನಧನಗಳ ನಿನಗರ್ಪಿಸಿದೆ ಎನಿತಾದರು ಇಡು ಅನುಮಾನಿಸಿದೆ ಜನರ ನಿಂದನೆ ಮೇಣಾನಂದನೆ ಮಾನ ಅವಮಾನ ನಿನ್ನದು ದೇವ 2 ಚಿಂತೆಯ ಮರೆದೆ ಭ್ರಾಂತಿಯ ತೊರೆದೆ ಸಂತರ ಚರಣವನಾಂತೆ ದೃಢದೆ ಸ್ವಾಂತವು ಮೋದವಾಂತುದು ಶ್ರೀದ ಸಂತತ ಶ್ರೀಕಾಂತ ನಿಶ್ಚಿತ ದೇವ 3
--------------
ಲಕ್ಷ್ಮೀನಾರಯಣರಾಯರು
ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ 1 ಘನ ದಯದಲಿ ಸಮರ್ಥ ಅನುಭವಕೆ ಸುತತ್ವಾರ್ಥ 2 ಸಾಹ್ಯಸಾನುಕೂಲದಾಗರ ಮಹಿಮೆ ನಿನ್ನದು ಅಪಾರ ಸ್ವಸುಖದ ಸಾಗರ ಮಹಿಪತಿಯ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಹೀ ಪಾಹೀ ಪರ್ವತರಾಜ ಕುಮಾರೀ ಪ ತ್ರಾಹಿ - ತ್ರಾಹಿ - ತಾಯಿ ತವ ಪದಯುಗಳಕೆದೇಹ ಮಮತೆ ಕಳೆ ದಕ್ಷ ಕುಮಾರೀ ಅ.ಪ. ಗೌರಿ ಮೃಡಾಣಿಯೆ ಬಲು ಪ್ರಖ್ಯಾತೆಸುರಪತಿ ಷಣ್ಮುಖ ಗಣಪತಿ ಮಾತೆ1 ತನು ನಿನ್ನದು ತಾಯಿ ಮನದಭಿಮಾನಿಯೆಹೊನ್ನು ಮಣ್ಣಿನಲಿ ಸಮ ಮನವೀಯೇ 2 ಅಸಮನೆನ್ನುತ ಗುರು ಗೋವಿಂದ ವಿಠಲನಬಿಸರು ಹಾಂಬಕೆ ನೀ ತುತಿಸುವೆ ಪ್ರತಿಕ್ಷಣ 3
--------------
ಗುರುಗೋವಿಂದವಿಠಲರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಪಿಡಿಯೆನ್ನ ಕೈಯ ಬಿಡಬೇಡೆನ್ನಯ್ಯ ಮೃಡನ ಭಕ್ತರ ಒಡೆಯ ಪಂಢರಿರಾಯ ಪ ಘೋರ ಬಡುವೆ ಸಂಸಾರಶರಧಿಯೊಳು ಮೀರಿತು ಈ ಬಾಧೆ ಸೈರಿಸೆ ಮಹರಾಯ 1 ಹಲವು ವಿಧದಿ ಕಷ್ಟಕ್ಕೊಳಗಾಗಿ ಅತಿಶಯ ಬಳಲುವ ಬಾಲನ ಉಳಿಸಿಕೊ ಮಹರಾಯ 2 ಬರುವ ಸಂಕಟದೆನ್ನ ಪಾರುಮಾಡುವಂಥ ಭಾರನಿನ್ನದು ಸರ್ವಧೀರ ಶ್ರೀರಾಮಯ್ಯ 3
--------------
ರಾಮದಾಸರು
ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪ್ರಾಣಲಿಂಗ ಲಕ್ಷ್ಮಣನ ಮಂಗೀಶಾ ಪುಣ್ಯ ಸ್ಥಾಣು ಸರ್ವಾತ್ಮಕ ನೀನೆ ಮಂಗೀಶಾ ಮಾಣದೆನ್ನ ಕೈಪಿಡಿದು ಮಂಗೀಶಾ ಇನ್ಯಾ ರ್ಕಾಣೆ ನಿನಗೆ ಸಮನಾಗಿ ಮಂಗೀಶಾ ಪ ಆದಿಗನಾಗಿ ಸಿದ್ಧ ಮಂಗೀಶಾ ನಿನ್ನ ಶೋಧಿಸಿ ಕಂಡವರುಂಟೆ ಮಂಗೀಶಾ ವೇದ ಉಪನಿಷದ ನೀನೇ ಮಂಗೀಶಾ ನಿನ್ನ ಪಾದವ ನೆರೆನಂಬಿರುವೆ ಮಂಗೀಶಾ 1 ರಾಮನ ವಂಶವನೊಲಿದು ಮಂಗೀಶಾ ಬಹು ಪ್ರೇಮದಿಂದ ಸಲಹಿದಯ್ಯಾ ಮಂಗೀಶಾ ನಾಮಕ್ಕೆ ಲಕ್ಷ್ಮಣ ಎನ್ನ ಮಂಗೀಶಾ ನೀನೇ ಸ್ವಾಮಿಯೆಂದು ನಂಬಿದೆನು ಮಂಗೀಶಾ 2 ನಿನ್ನ ಬಲದಿಂದ ಸರ್ವ ಮಂಗೀಶಾ ಸುಖ ವನ್ನು ಪಡೆದೆನು ನಾನು ಮಂಗೀಶಾ ಇನ್ನು ನಿನ್ನೊಳು ಕೂಡಿಸಿಕೊ ಮಂಗೀಶಾ ಮುಂದೆ ಬೆನ್ನನು ರಕ್ಷಿಸಿ ಕಾಯೋ ಮಂಗೀಶ 3 ಯಾರಿಗುಸುರಲಿ ನಾನು ಮಂಗೀಶಾ ಸರ್ವ ಭಾರಕರ್ತೃ ನೀ ಸಲಹೋ ಮಂಗೀಶಾ ದಾರಿಯ ತೋರಿಸೋ ಎನಗೆ ಮಂಗೀಶಾ ನಿನ್ನ ಸೇರಿ ಬದುಕುವೆ ನಾನು ಮಂಗೀಶಾ 4 ಏನೇನರಿಯೆನೆಲೊ ನಾನು ಮಂಗೀಶಾ ನಿನ್ನ ಧ್ಯಾನಿಸಲೊಂದೆ ಬಲ್ಲೆ ಮಂಗೀಶಾ ಹಾನಿ ವೃದ್ಧಿನಿನ್ನದು ಶ್ರೀ ಮಂಗೀಶಾ ಎನ್ನ ಮಾನಾಭಿಮಾನದ ಕರ್ತೃ ಮಂಗೀಶಾ 5 ಅರಿಕೆ ಇಲ್ಲದುಂಟೆ ನಿನಗೆ ಮಂಗೀಶಾ ದುಷ್ಟ ಅರಿಗಳ ಮಾಯಾಜಾಲವು ಮಂಗೀಶಾ ಸ್ಮರನ ದಹಿಸಿದಂತೆ ನೀನು ಮಂಗೀಶಾ ಅವರ ನುರುಹಿ ತೋರೋ ಎನ್ನೊಡೆಯ ಮಂಗೀಶಾ 6 ಬರದು ಬಿನ್ನವಿಸಿದೆ ನಾನು ಮಂಗೀಶಾ ಚಿತ್ತ ವಿರಲಿ ಅಣುಗನ ಮೇಲೆ ಮಂಗೀಶಾ ಸ್ಥಿರದಿ ಕುಶಸ್ಥಲವಾಸಿ ಮಂಗೀಶಾ ಶ್ರೀ ಗುರು ವಿಮಲಾನಂದ ಚೆಲುವ ಮಂಗೀಶಾ 7
--------------
ಭಟಕಳ ಅಪ್ಪಯ್ಯ