ಒಟ್ಟು 114 ಕಡೆಗಳಲ್ಲಿ , 40 ದಾಸರು , 109 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು
ನೀಲಕಂಠನ ಸುತಗಭಿನಮಿಸಿ ಆದಿಬ್ರಹ್ಮನ ಸತಿಯಳ ಭಜಿಸಿ ನೀಲವರ್ಣನು ಲಕ್ಷ್ಮೀಲೋಲನ ದಯದಿಂದ ಪಾಲಿಸಿದರೆ ಪಾಡಿ ಪೊಗಳುವೆನು ಪ ಜಯ ಜಯ ಭೀಮ ಭಾರತಿಗೆ ಜಯ ಜಯ ಧರ್ಮ ಭೀಮಾರ್ಜುನರಿಗೆ ಜಯ ದ್ರೌಪದಿ ನಕುಲ ಸಾದೇವಗೆ .......... ........... ............ 1 ಉಕ್ಕುವೊಯೆಣ್ಣೆಯೊಳಗೆ ನೋಡಿ ಕೊಟ್ಟೇನೆನುತ ಪರಮುತ್ಸವದಿಂದಲಿ ಪೃಥಿವಿರಾಯರಿಗ್ವಾಲೆ ಬರೆದ ರಾಯ 2 ದಿಕ್ಕು ದಿಕ್ಕಿನ ರಾಜರು ಬರಲು ಕೃಷ್ಣ್ಣೆಸ್ವಯಂವರ ನೋಡಬೇಕೆನುತ ವಿಪ್ರವೇಷವÀ ಧರಿಸಿ ಹೆತ್ತಮ್ಮನ ಸಹಿತಾಗಿ ಸತ್ಯಪಾಂಡವರು ಬಂದರು ಬ್ಯಾಗ 3 ಬಲವಂತ ರಾಯರೆಲ್ಲರು ತಾವು ಬಲುಮೆಯಿಂದಲಿ ಧನುವೆತ್ತಿ ಬೀಳೆ ಹಲಧರನನುಜ ತಾ ಚೆಲುವ ಪಾರ್ಥನ ನೋಡಿ ಬಲವಕೊಟ್ಟನು ಭೀಮಾರ್ಜುನಗೆ 4 ಸಾದೇವನನುಜ ಸುಂದರ ಪಾರ್ಥ ಆದಿಮೂರುತಿಯ ಪಾದಕ್ಕೆ ನಮಿಸಿ ಕಾದಯೆಣ್ಣೆಯ ನೋಡಿ ಕಟ್ಟಿದ ಮೀನವ ತಾ ಧನುವೆತ್ತಿ ಹೊಡೆದನಾಗ 5 ಚೆಲ್ಲೆಗಂಗಳ ದ್ರೌಪದಿದೇವಿ ವಲ್ಲಭ ಪಾರ್ಥಗೊಲಿದು ಬ್ಯಾಗ ಮಲ್ಲಮರ್ದನಸಖನಲ್ಲಿ ನಡೆದು ಬಂದು ಮಲ್ಲಿಗೆ ಮಾಲೆ ಹಾಕಿದಳಾಗ 6 ವಿಪ್ರ ಕ್ಷತ್ರಿಯರೊ ದಾವಕುಲವೊ ನೆಲೆ ಕಾಣದಲೆ ಮಾಜದೆ ನಿಮ್ಮ ಮರ್ಮಗಳ್ಹೇಳಬೇಕೆಂದು ಕೇಳುತ್ತಿದ್ದನು ಕಂಗೆಡುತ ರಾಯ 7 ಮಚ್ಛಯೆಸೆಯಲು ಮಗಳ ನಾನು ಕೊಟ್ಟೇನೆನುತ ನಿಶ್ಚಯವ ಮಾಡಿ ಇಷ್ಟುವಿಚಾರದಿಂದೀಗೇನು ಫಲವೆಂದು ಸತ್ಯಧರ್ಮಜ ನುಡಿದನು ನಗುತ 8 ಕೇಳುತ ಕುಂತಿಸುತರುಯೆಂದು ಭಾಳ ಸಂಭ್ರಮದಿ ಪಾದವ ತೊಳೆಯೆ ಕಾಲ ನೀಡಲು ಕಂಡು ತಾ ಜಾರಿ ಹಿಂದಕ್ಕೆ ಸರಿದ ರಾಜ9 ಸತ್ಯವತಿಯ ಸುತರ್ಹೇಳುತಿರೆ ಮತ್ತಾಗೆರೆದನು ಮಗಳ ಧಾರೆ ಮುತ್ತು ಮಾಣಿಕ್ಯದ ಮಂಗಳಸೂತ್ರವ ಕಟ್ಟಿ ಕೊಟ್ಟನೈವರಿಗೆ ದ್ರೌಪದಿಯನಾಗ 10 ಲಾಜಾಹೋಮವು ಭೂಮಾನಂತರದಿ ಮೂರ್ಜಗದೊಡೆಯ ಕೃಷ್ಣನ ಸಹಿತ ರಾಜಾಧಿರಾಜರೈವರು ಕುಳಿತಿರೆ ಕೃಷ್ಣ ರಾಜ ಧರ್ಮರ ವಾಮಭಾಗದಲಿ 11 ರುಕ್ಮಿಣಿದೇವಿ ಪಾರ್ವತಿ ಗಂಗಾ ಸತ್ಯಭಾಮೇರ ಸಹಿತಾಗಿ ಬಂದು ಸತ್ಯ ಪಾಂಡವರಿಗೂಟಣಿ (ಉರುಟಣೆ?) ಮಾಡಬೇಕೆಂದು ಕೃಷ್ಣೆ ನೀಯೇಳೆಯೇಳೆನುತಿದ್ದರು 12 ಕಂಜನೈಯ್ಯನು ಕಡೆನೋಟದಲಿ ತಂಗಿ ಕೃಷ್ಣೆಯ ಮುಖವನು ನೋಡಿ ಅಂಜದಲ್ಹೇಳುತಲೈವರ ಗುಣಗಳ ಹಂಗೀಸೂಟಾಣಿ ಮಾಡಬೇಕೆಂದನು 13 ಕನ್ನೆ ದ್ರೌಪದಿ ಅರಿಷಿಣ ಪಿಡಿದು ತನ್ನ ಪತಿಗೆ ಎದುರಾಗಿ ನಿಂತು ಸುಮ್ಮನೆ ರಾಜ್ಯವ ಬಿಟ್ಟು ವನವನಾ ತಿರುಗೋ ಧsÀರ್ಮರೇ ನಿಮ್ಮ ಮುಖ ತೋರಿರೆಂದಳು 14 ಕಂಕಭಟ್ಟೆನಿಸುವೊ ದೊರೆಗಳಿಗೆ ಕುಂಕುಮ ಹಚ್ಚುವೆ ಕುಶಲದಿಂದ ಪಂಚಾಂಗ ಪಠಿಸುವ ಪಾಣಿಯ ಪಿಡಿದು ನಾ ಮುಂಚೆ ಗಂಧವ ಹಚ್ಚುವೆನೆಂದಳು 15 ಯಿಟ್ಟಸತಿಯ ಅನುಜರನೆಲ್ಲ ಗಟ್ಟಿ ಹೃದಯಕ್ಕೆ ಬುಕ್ಕಿ ್ಹಟ್ಟು ಪರಿಮಳ ಹಚ್ಚಿ ಅಚ್ಚ ಮಲ್ಲಿಗೆ ಹಾರ ಹಾಕುವೆನೆಂದಳು 16 ಶಾಂತಧರ್ಮರ ಚರಣಕ್ಕೆ ಎರಗಿ ಮಂತ್ರಿಭೀಮನ ಮುಂಭಾಗದಲಿ ಕಾಂತರ ಮುಖಕ್ಕೆ ಹಚ್ಚುವೆನೆಂದಳು 17 ಬಂದೇಕಚಕ್ರನಗರದಲ್ಲಿ ಬಂಡಿಲನ್ನವನುಂಡು ¨ಕಾಸುರನ ತುಂಡು ಮಾಡ್ಯವನ ತೋರಣ ಕಟ್ಟಿದ ತೋಳಿಗೆ ಗಂಧವ ಹಚ್ಚೇನೆಂದಳು ನಗುತ 18 ಇಟ್ಟ ವಿಷದ ಲಡ್ಡಿಗೆಯ ಮೆದ್ದು ಭಿಕ್ಷÀದನ್ನವು ಬರಿಯಾಗದಲೆ ಹುಟ್ಟುಹಿಡಿದು ಅಟ್ಟುಂಬೋ ಪುರುಷರಿಗೆ ಬು- ಕ್ಕಿ ್ಹಟ್ಟು ಪರಿಮಳ ಹಾಕುವೆನೆಂದಳು 19 ಕಪಿಗಳೊಳಗೆ ಶ್ರೇಷ್ಠರುಯೆನಿಸಿ ಅತಿ ಬ್ಯಾಗದಿಂದ ಕೌರವರ ಕುಲ ಹತವ ಮಾಡ್ಯತಿಯಾಗೋ ಪತಿಗೆ ಮಾಲೆಯ ಹಾಕಿ ಅತಿ ಭಕ್ತಿಲಿಂದೆರಗಿದಳಾಗ 20 ಸರಸಿಜಮುಖಿ ದ್ರೌಪದಿದೇವಿ ಅರಸು ಅರ್ಜುನಗೆದುರಾಗಿ ನಿಂತು ಅರಿಷಿಣ ಕುಂಕುಮ ಪಿಡಿದು ಸ್ತ್ರೀರೂಪವ ಧರಿಸುವ ನಿಮ್ಮ ಮುಖ ತೋ(ರಿ)ರೆಂದಳು 21 ತಂದು ಗಜವ ತೋ
--------------
ಹರಪನಹಳ್ಳಿಭೀಮವ್ವ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ಪರಮಯೋಗಿಯ ನೋಡಿರೊ ನೀವೆಲ್ಲರು | ಪರಮಯೋಗಿಯ ನೋಡಿರೊ || ಪರಮಯೋಗಿಯ ನೋಡಿ ಪ್ರೀತಿವಂತರಾಗಿ | ನಿರಯವ ಕಳೆದು ಆನಂದ ಬೇಡುವರೆಲ್ಲ ಪ ವಾನರ ವೇಷವಾಗಿ ಪರ್ವತ ಸೇರಿದಾ | ಭಾನುನಂದನ ಮನೋಬಯಕಿಯ ಸಲ್ಲಿಸಿ || ಏನೆಂಬೆ ಬಲು ಒಂದು ರೂಪವಾಗಿ ತೋರಿ | ತಾನೆ ತನ್ನೊಳಗೆದ್ದು ದುರುಳರ ಮೋಹಿಸಿದಾ 1 ವಿಷವನುಂಡು ಮೂರು ಲೋಕದೊಳಗೆ ಮೆರೆದು | ಅಸುರ ಬಕನ ಸೀಳಿ ಧರಿಗೆ ಬಿಸುಟು | ಶಶಿಮುಖಿಯಳ ಪ್ರೀತಿಬಡಿಸಿ ಅರ್ಜುನಗೊಲಿದು | ಶಶಿಕುಲದಲಿ ಪುಟ್ಟಿ ದುರ್ಜನ ಸಂತಾಪಬಡಿಸಿ2 ಯತಿಯಾಗಿ ಜನಿಸಿ ಸುವಾಕ್ಯವ ಬಯಸಿ | ಮತಿಹೀನ ಜನರ ಶಾಸ್ತ್ರವ ಖಂಡಿಸಿ || ತುತಿಸಿದ ಭಕ್ತರ್ಗೆ ಗತಿಯ ಕೊಡುವ ಪ್ರಾಣ- ನಿತ್ಯ ಪರಮ 3
--------------
ವಿಜಯದಾಸ
ಪುಂಡನಾದೆನು ನಾನು ಭಂಡ ಮನುಜಾ ಕಂಡವರಲ್ಲಿಯುಂಡು ಎಂಜಲವನು ಪ ಪುಂಡರೀಕಾಕ್ಷ ಶ್ರೀ ಕೃಷ್ಣಗರ್ಪಿಸದೆಡೆ- ಯುಂಡರದು ಬುಧರರಿವರೆಂಜಲಂದು ತುಂಡ ಜನರಿಂಧನ್ನ ಮುದ್ದು ಮೆರೆದರು ಕೊಬ್ಬಿ ಕಂಡಿವರೊಳಾದರದಿ ಸವಿಯಗೊಂಡನು ದೇವಾ 1 ಲಿಂಗಭವನೈಯ್ಯ ನಿನ್ನೊಲಿಮೆ ಮರೆಯನು ನಾನು ಮಂಗಳಾಂಗಿಯ ಮೊರೆ ಕೇಳ್ದು ಭರದಿ ಭಂಗ ಬಹುದೆಂದು ಕಾನನದಿ ಎಂಜಲನುಂಡು ಅಂಗರಕ್ಷಕನಾಗಿ ಪಾಂಡವರ ಪೊರೆದಿ ಧೊರಿಯೆ 2 ಸರಸಿಜಾಕ್ಷನೆ ನಿನ್ನ ಕರುಣಪಾತ್ರನು ನಾನು ಅರಿಯದುಡಿದನು ತೀಕ್ಷಮಿಪುದೀಗ (?) ಸುರನಿರಲಿ ನರನಿರಲಿ ಪತಿತನಾದವನಿರಲಿ ಸರಿಯಾಗಿ ಕರುಣಿಸುವಿ ನರಸಿಂಹವಿಠಲ 3
--------------
ನರಸಿಂಹವಿಠಲರು
ಪುಷ್ಪಧರಿಸುವ ಉತ್ಸವಗೀತೆ ಪುಷ್ಪವನ್ನುಧರಿಸುವ ಉತ್ಸವ ನೋಡುವ ಬನ್ನಿ ಭಕ್ತವತ್ಸಲನರಾಣಿ ರಂಗನಾಯಕಿಗಿಂದು ಪ. ವೈಶಾಖಮಾಸದಲಿ ಕೃಷ್ಣಪಕ್ಷದಲಿ ಲಕ್ಷ್ಮೀಗೆ ಪುಷ್ಪವನ್ನು ಧರಿಸುವ ಅರ್ತಿಯ ನೋಡುವ ಬನ್ನಿ 1 ವಿಧವಿಧದ ಪುಷ್ಪವ ಮುಡಿಸಿ[ದರು] ಮದನನಮಾತೆಯ ಶಿರಸಿಗೆ 2 ಪಂಕಜನಾಭನರಾಣಿ ಪರಮಕಲ್ಯಾಣಿ ನೀಲವೇಣಿ ಪಂಕಜಪಾಣಿ ಕೀರವಾಣಿ ಸುಶೋಣೀ 3 ಸುರರು ಅಸುರರು ಕೂಡಿ ಶರಧಿಮಥನವ ಮಾಡೆ ಭರದಿಂದ ಉದಿಸಿಬಂದ ವರಲಕ್ಷ್ಮೀದೇವಿಗಿಂದು 4 ಜಯವಿಜಯರಿಗಾಗಿ ಜನಿಸಿ ತಾ ಭೂಮಿಯಲಿ [ಗೆದ್ದ] ಇಂದು 5 ಸೃಷ್ಟಿಭಾರವನಿಳುಹಲೆಂದು ಕೃಷ್ಣಮೂರುತಿ ಜನಿಸಿ [ಒಲಿದ] ಭೀಷ್ಮಕನುದರದಿ ಬಂದ ರುಕ್ಮಿಣೀದೇವಿಗೆ ಇಂದು6 ಮಲ್ಲೆ ಮಲ್ಲಿಗೆ ವಕುಳ ಮಂದಾರ ಪಾರಿಜಾತ[ವ] ಫುಲ್ಲನಾಭನರಾಣಿಗೆ ಲೋಲಾಕ್ಷಿಯರು ಮುಡಿಸಿದರು 7 ತಾಳೆ ಚಂಪಕ ಕಮಲಮಾಲೆ ಸುರಗಿ ಜಾಜಿಯ ನೀಲವರ್ಣನರಾಣಿಗೆ ಲೋಲಾಕ್ಷಿಯರು ಮುಡಿಸಿದರು 8 ಮರುಗ ದವನ ಪಚ್ಚೆತೆನೆಯು ಸುಗಂಧರಾಜವ ಪರಮ ಸುರರು ತಂದು ಮುಡಿಸುವರು 9 ವಸಂತೋತ್ಸವಕೆಂದು ವಸುಧೀಶನರಸಿ ತಾನು ಕುಶಲದಿಂದಲೆ ಬಂ[ದಳಾವ]ಸಂತಮಂಟಪಕಿಂದು 10 ರತ್ನದ ಕೆಂಪಿನ ಕಿರೀಟವಿಟ್ಟು ತಿದ್ದಿದ ಕಸ್ತೂರಿಬಟ್ಟು ಮುತ್ತುಸುತ್ತಿದ ಮೂಗಿನಬಟ್ಟು ಹರಿದ್ರಾವಸ್ತ್ರವನುಟ್ಟು 11 ಕರ್ಪೂರದ ಚೂರ್ಣದಿ ಮಿಂದು ಭಕ್ತರಿಟ್ಟ ನೈವೇದ್ಯವನುಂಡು [ತಾ]ಪೊರಟಳು ಮಿತ್ರೆಯರ ಕೋಲಾಟವ ನೋಡುತ್ತ ತನ್ನರಮನೆಗೆ 12 ಹುಟ್ಟಿದಮನೆ ಕ್ಷೀರಾಬ್ಧಿ ಹೊಕ್ಕಮನೆ ಶ್ರೀವೈಕುಂಠವ ಬಿಟ್ಟು ಭಕ್ತರ ಸಲಹುವೆನೆಂದು ಬಂದ ವೆಂಕಟರಂಗನರಸಿಗೆ 13
--------------
ಯದುಗಿರಿಯಮ್ಮ
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಾರೆ ಸಖಿ ವಾರಿಜ ಮುಖಿ ಬಾರೆ ಬಾರೆ ಸಖಿ ಬಾರೆ ಕೋಪಿಸೋರೆ ಹೀಗೆ ಯಾರುಪದೇಶವುಮುರಾರಿಯ ಮುಖ್ಯ ಬಲರಾಮನ ಸಖಿಯೆಬಾರೆ ಬಾರೆ ವಾರಿಜ ಮುಖಿಯೆ ಪ. ಪುಟ್ಟ ಸುಭದ್ರಾ ನಿನಗೆ ಸಿಟ್ಯಾಕ ಒದಗಿತಇಟ್ಟ ಮುದ್ರಿಗಳು ತಡವಾಗಿಇಟ್ಟ ಮುದ್ರಿಗಳು ತಡವಾಗಿ ಮುಯ್ಯವಇಷ್ಟು ಹೊತ್ತನಾಗೆ ತರಬಹುದೆ 1 ಕೇಳೆ ಸುಭದ್ರಾ ಮುಯ್ಯಾ ಕಾಳ ರಾತ್ರಿಲೆ ತಂದುಭಾಳ ಕೋಪಿಸುವ ಬಗಿ ಹೇಳಭಾಳ ಕೋಪಿಸುವ ಬಗಿ ಹೇಳ ಮುತ್ತಿನ ತೋಳುತಾಯಿತವ ಕೊಡುವೆನ 2 ಧಿಟ್ಟ ಸುಭದ್ರಾ ಮುಯ್ಯಾ ಇಷ್ಟೊತ್ತ್ತಿನಾಗ ತಂದು ಸಿಟ್ಟು ಮಾಡಿದ ಬಗಿ ಹೇಳಸಿಟ್ಟು ಮಾಡಿದ ಬಗಿ ಹೇಳ ಮುತ್ತಿನ ಕಟ್ಟಾಣಿ ಕೊಡುವೆ ನಿನಗಿನ್ನು3 ಲೋಕನಾಯಕಿ ಕೃಷ್ಣ್ಣಿ ಕೋಪವ್ಯಾ ಕೊದಗಿತಹಾಕಿದ ಮುದ್ರಿ ತಡವಾಗಿ ಹಾಕಿದ ಮುದ್ರಿ ತಡವಾಗಿ ಮುಯ್ಯವ ಈ ಕಾಲದೊಳಗೆ ತರಬಹುದೆ4 ಕೆಂಡದಂಥವಳ ಗುಣ ಕಂಡೇವ ಸಭೆಯೊಳು ಚಂಡಿತನವನೆ ಬಿಡು ಕೃಷ್ಣಿಚಂಡಿತನವನೆ ಬಿಡು ಕೃಷ್ಣಿ ಮುತ್ತಿನ ದಂಡೆ ಕೊಡುವೆ ಬಿಡುಕೋಪ5 ಬೆಂಕಿಯಂಥವಳ ಗುಣ ಶಕ್ಯವೆ ವರ್ಣಿಸಲು ಶಂಕರಾದ್ಯರಿಗೆ ವಶವಲ್ಲಶಂಕರಾದ್ಯರಿಗೆ ವಶವಲ್ಲ ಮುತ್ತಿನ ವಂಕಿಯ ಕೊಡುವೆ ನಿನಗಿನ್ನು 6 ಸತಿಯು ಸುಭದ್ರೆ ನೀನು ಯತಿಯ ಬೆನ್ಹತ್ತಿದಾಗ ಅತಿಭೀತಿ ಎಲ್ಲಿ ಅಡಗಿತ್ತಅತಿಭೀತಿ ಎಲ್ಲಿ ಅಡಗಿತ್ತ ನಾವುನಿನ್ನ ಪತಿವ್ರತ ತನವ ಅರಿವೆನೆ7 ಮಿತ್ರೆಯರು ನಾವೆಲ್ಲ ತುಪ್ಪಅನ್ನವನುಂಡುಪುತ್ರರ ಸಹಿತ ಸುಖನಿದ್ರೆಪುತ್ರರ ಸಹಿತ ಸುಖನಿದ್ರೆ ಗೈವಾಗ ಮತ್ತ ನೀ ಮುಯ್ಯ ತರಬಹುದೆ8 ಲೋಲ ರಾಮೇಶನು ಹಾಲು ಅನ್ನವನುಂಡುಬಾಲರ ಸಹಿತ ಸುಖನಿದ್ರೆಬಾಲರ ಸಹಿತ ಸುಖನಿದ್ರೆ ಗೈವಾಗಮ್ಯಾಲೆ ಮುಯ್ಯ ತರಬಹುದೆ9
--------------
ಗಲಗಲಿಅವ್ವನವರು
ಬಾಲಕನೆಂದೆತ್ತಿಕೊಂಡೆನೆ - ಗೋಪಾಲಕೃಷ್ಣನಬಾಲಕನೆಂದೆತ್ತಿಕೊಂಡೆನೆ ಪ ಬಾಲಕನೆಂದೆತ್ತಿಕೊಂಡರೆ - ವಾರೆ ಮಾಡಿ ಮೋರೆ ನೋಡಿಶ್ರೀಲತಾಂಗಿಯರ ಲೋಲ - ಮಾರನಾಟವಾಡಿ ಪೋದನೆ ಅ ಹೊತ್ತರೆದ್ದು ಮನೆಗೆ ಬಂದನೆ - ಯಶೋದೆ ಕೇಳೆ ಎತ್ತಿಕೊಂಡು ಮುತ್ತುಕೊಟ್ಟೆನೆಎತ್ತಿಕೊಂಡು ಮುತ್ತು ಕೊಟ್ಟರೆಮುತ್ತಿನ್ಹಾರ ಕೊರಳಿಗ್ಹಾಕಿಚಿತ್ತಜಾತ ಕೇಳಿಯಲ್ಲಿಬತ್ತಲೆ ನಿಂದೆತ್ತು ಎಂದನೆ1 ಗಂಡನಂತೆ ಮನೆಗೆ ಬಂದನೆ - ಯಶೋದೆ ಕೇಳೆಮಿಂಡನಂತೆ ಕಣ್ಣು ಹೊಡೆದನೆಪುಂಡಪೋಕರನ್ನು ಮೀರಿದುಂಡು ಕುಚಗಳನ್ನು ಪಿಡಿದುದಿಂಡುರುಳಿಸಿ ಒಂದುಸರಲಿಬಂಡನುಂಡು ಹಾರಿ ಪೋದನೆ 2 ಏಸು ಮೋಸ ಕಲಿತ ಜಾಣನೆ - ಯಶೋದೆ ಕೇಳೆವಾಸುದೇವ ಮಾಯಕಾರನೆಹಾಸುಮಂಚದ ಹಾಸುಗೆಯಲಿತೋಷದಿಂದ ಬಾಚಿ ಸೆಳೆದುಶೇಷನನ್ನು ಪೂಜಿಸೆಂದಶ್ರೀಶ ಬಾಡದಾದಿ ಕೇಶವ 3
--------------
ಕನಕದಾಸ
ಬುಗುರಿ ಆಡೋ ತಮ್ಮ ಬುಗುರಿ ಆಡೊ ಪ ಬಗೆ ಬಗೆ ಜನುಮದಿ ತಿರುಗಿ ತಿರುಗಿ ಬಂದೊದಗತನದನುಭವ ಪರಿಕಿಸಿ ನೋಡೊ ಅ.ಪ. ತನುವೆಂಬುದೆ ಕೊರಡಿನ ತುಂಡುದಿನದ ಕರ್ಮವೆ ಕೊನೇರು ದುಂಡುಮನವೆಂಬುವ ಮೊಳೆಯನು ಚುಚ್ಚಿಕೊಂಡುಘನ ಹರುಷದಿ ಕರದಲಿ ಕೊಂಡು 1 ಭವವೆಂಬುದೆ ನಿನ್ನ ಜಾಳಿಗೆ ನೋಡೋತವಕದಿ ಬಿಡದಲೆ ಬಿಗಿಗಿಸುತ್ತ್ಯಾಡೋಸವಿಯನುಂಡು ನೀ ಹರಿಯನು ಬೇಡೊಜವದಲಿ ಝಾಡಿಸಿ ಭರದಿ ಬೀಸಾಡೊ 2 ಧರೆಯ ಗದುಗಿನ ವೀರನಾರಾಯಣನಚರಣದಿ ಮೊಳೆಯೂರಿ ತಿರುಗುತಲಾಡೊಕರಣಗಳಳೆದು ಏಕ ಚಿತ್ತದಿಸ್ಮರಿಸುತ ನಿಂತು ನಿದ್ದೆಮಾಡೊ 3
--------------
ವೀರನಾರಾಯಣ
ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಭಜಿಸಿರೊ ಭವಭಂಜನ ಹರಿಯಾ ರಜತ ಪೀಠ ಪುರದಿ ರಾಜಿಪ ದೊರೆಯಾ ಪ. ಮುಷ್ಟಿ ಪೃಥುಕವನ್ನು ಕೊಟ್ಟ ಕುಚೇಲಗೆ ಶ್ರೇಷ್ಠ ಭಾಗ್ಯವನಿತ್ತ ಸಿರಿವರನಾ ಅಷ್ಟಮಠೀಯರು ಮುಟ್ಟಿ ಪೂಜಿಸುವಂಥ ವಿಠಲನಿಂದ ಸರ್ವಾಭೀಷ್ಟವ ಪಡೆಯಿರಿ 1 ಯುಕ್ತಿಯನರಿಯದ ಭಕ್ತರಿಗಿಹಪರ ಭುಕ್ತಿ ಮುಕ್ತಿದನೆಂಬ ಬಹು ಬಿರುದಾ ವ್ಯಕ್ತ ಮಾಡುತ ಕಡು ರಿಕ್ತಜನರ ರಕ್ಷಾ ಸಕ್ತನಾಗಿಹ ಭೈಷ್ಮೀನಕ್ತ ಮಾನಸನನ್ನು 2 ನಿತ್ಯ ಮಧ್ವ ಸರಸಿಯೊಳಗೆ ಮಿಂದು ಉರಗ ಗಿರೀಶ ಸತ್ಯ ವರನ ಮೂರ್ತಿಯ ಕಂಡು ಸುರವರ ಪ್ರಾರ್ಥನೆಯ ವರ ಪ್ರಸಾದವನುಂಡು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭುವನದೊಳಿವನೆ ಶೂರ ಪ ಭವಬಂಧಗಳ ನಿನ್ನ | ಕುವರನೆ ಬಿಡಿಸುವ ಅ.ಪ ಮಕ್ಕಳ ಕೂಡಿಕೊಂಡು | ನಮ್ಮನೆಗಿವ-| ನೊಕ್ಕಲಿಕ್ಕುವನು ಬಂದು || ಪಕ್ಕನೆ ಓಡುವ | ಸಿಕ್ಕನು ಯೆಮಗಿವ 1 ಒರಗಿದ ಮಕ್ಕಳ | ಕರೆದು ಡಬ್ಬಿಸುವನು 2 ಹಿಂಡಿದ ಪಾಲ್ಮೊಸರು || ಚೆಂಡಾಟದೊಳು ನೆಲ-| ನುಂಡುಂಡು ಕೆಸರಾಯ್ತು 3 ನಿಲುತ ಪಾತ್ರವ ಕೊಂಡು | ಮೆಲುವ ನಾಟಕಧಾರಿ 4 ಬೆಳಗನ್ನು ಮೇಳವಿಸೆ || ಕಳೆದು ತರಿಸುವ ನಾವಿ | ನ್ನುಳಿ (ವು)ಪಾಯವ ಕಾಣೆ 5 ದೊರೆಯದಿದ್ದರೆ ಬೈವನು | ಮನೆಗೆ ಕಿಚ್ಚ-| ನ್ನಿರಿಸುವೆನೆನ್ನುವನು || ವೊರಳೊಳು ವಿಷ್ಠಿಸಿ | ಮರೆಯೊಳಡಗುವ6 ನಿಲದೀಗ ತರಿಸಲ್ಲ(ದೆ) || ಸುಲಿಗೆÉಗಾರಗೆ ತಕ್ಕ | ಬಲುಮೆಯೊಳ್ ಬುದ್ಧ್ದಿಯ-| ನೊಲಿದು ಪೇಳುತಲೆಮ್ಮ | ಕುಲವನುದ್ಧರಿಸವ್ವ 7 ಎಂದು ನಾನಾ ತೆರದಿ | ನಾರಿಯರು ಗೋ-| ವಿಂದನನತಿ ಮುದದಿ || ಗೋಪಿ ಪರಿ ಚಾಡಿ8 ತಕ್ಕ ಪದ್ಧತಿ ಧಾತ್ರಿಗೆ || ಬೆಕ್ಕಸಗೊಳದಿರಿ ಅಕ್ಕು ಸದಾನಂದ 9
--------------
ಸದಾನಂದರು