ಒಟ್ಟು 7317 ಕಡೆಗಳಲ್ಲಿ , 130 ದಾಸರು , 4853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
ಶರಣು ಶ್ರೀದೇವದೇವಾದಿ ಸದ್ಗುರುನಾಥ ಶರಣು ಸುರಮುನಿಜನರ ಪ್ರಾಣ ಜೀವನದಾತ ಶರಣು ಪರಬ್ರಹ್ಮ ಪರಮಾನಂದ ಭರಿತ ಸಿರಿ ಅರಸ ಕರುಣಾಳು ಶ್ರೀನಾಥ ಶರಣು 1 ವೇದ ಆಗೋಚರಾನಾದಿ ಗುರು ಅನಂತ ಸಾಧುಜನ ಸಹಕಾರ ಸಂತತ ಸದೋದಿತ ಸದ್ಬ್ರಹ್ಮ ಆನಂದ ಗುಣತ್ರಯ ವಿರಹಿತ ಆದಿ ಅನಾದಿ ಅವಿನಾಶ ಗುರುನಾಥ 2 ಸಂಜೀವ ಸದ್ಗುರುನಾಥ ಶಕ್ತನಹುದಖಿಳದೊಳು ಸಕಳಾರ್ಥಪೂರಿತ ಯುಕ್ತನಹುದಯ್ಯ ಶಕ್ತಿಯು ಗುರುಸಮರ್ಥ ಮುಕ್ತಿದಾಯಕ ಮಹಿಪತಿ ಪ್ರಾಣನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶರಣೆಂಬೆ ನಾ ಶರ್ವಾಣಿ ವರನ | ಸಿರಿಪತಿ ಶಾಙ್ರ್ಗಧರನ ವರಸಿಂಧು ನಗರದೊಳು |ಸ್ಥಿರ ಭೋಗಗೊಂಬ ಸಂಗಮನ ಪ ಬಾಲೇಂದು ಮುಡಿದ ಭಸಿತಾಂಗ | ಕಾಳಿಗರ್ಧಾಂಗಾ |ಪಾಲಿಸಿ ಕೊಡುವರೆ ದೊರೆಯ ಪೇಳಲಿಕಿನ್ನಾರನೈದಾರೆ |ಭಾಲಾಕ್ಷನ ಲೀಲಾ ವಿಲಾಸ ಭೋಳಾ ದೇವೇಶ | ಕಾಲಿ ಗೆರಗಿ ಬ್ರಹ್ಮಾದಿಕರು ಕಾಲಾಂತಕನ ವರ ಪಡೆವರು |ನೀಲಕಂಧರನ ನಿಗಮೋದ್ಧಾರನ ಸ್ಥೂಲ ಶರೀರನ ಸುಖಸಂಚಾರನ ಶೀಲಕ ದೂರನ | ಶಾಂತಾಕಾರನ |ಮಾಲಾಧರನ ಮಹಾ ಗುರುಹರನ1 ಕಳೇವರ ತಾಪ ಪಾವಕ ನೇತ್ರನ ಸುರಮುನಿ ಸ್ತೋತ್ರನ ಸುಂದರ ಗಾತ್ರನ ನರಹರಿ ಮಿತ್ರನಹಿಗಳ ಸೂತ್ರನ ಶಿರಕರ ಪಾತ್ರನ ಶಿವಸ್ವತಂತ್ರನ 2 ಅಮಿತ ಭಕ್ತರು ಇಳೆಯೋಳ್ ಇಹರು ನಮಿಸಲು ಸಲಹಿಕಾವನು |ಅಮರರ ಹೊರೆವನ ಅಧಿಕ ಪ್ರಭಾವನ ತಿಮಿರವ ಕಳೆವನ ತೀರದಲಿವನ ಹಿಮಸುತೆ ಜೀವನ ಹಿಡಿದಿಹ ತ್ರಿಭುವನನ | ಶ್ರಮಗಳನಳಿವನ ಶಂಕರ ಭೀಮಾ ಶಂಕರನ 3
--------------
ಭೀಮಾಶಂಕರ
ಶಿಶುವಿನ ಯಾತಕ ದೂರವಿರೆ| ನಿಶಿದಿನ ನೋಡಲು ಮಾತವರಿದವಾ| ಮರಳನೆ ಮಾಡುವರೆ ಪ ಅತಿ ಮೋಹದಿಂದಲಿ ಮೊಲೆಯನು| ಬಾಯೊಳಗಿಟ್ಟರೆ ಸೇವಿಸನು| ಮಿಲೆ ಯಿಲ್ಲದ ಪಾಲ್ಮೊಸರನು| ಕುಡಿಯಲು ತಕ್ಕವನೆ 1 ಪರಿಪರಿಯಿಂದಲಿ ಮುಂದಕೆ ಕರೆದರೆ|ಸರಕನೆ ಹೆಜ್ಜಿಡನು| ಹರಿ ನಿಮ್ಮುಡುಗೆಯ ಸೆಳೆದು ಕೊಳುತಲಿ| ಮರವನೆ ಏರುವನೆ 2 ಸುರಜನ ಪಾಲಕ ಮಹಿಪತಿ ನಂದನ|ಜೀವನ ಮೂರುತಿಯಾ| ಕುರುಪಿಡಬಹುದೆನೆ ಮಾನವನೆಂದು| ಲೀಲೆಯ ದೋರುತಿಹ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೃತಿನಾಥ ಸ್ಮøತಿಯಿತ್ತು ಸತತ ಪೊರೆಯೋಗತಿ ಗೋತ್ರ ನೀನೆಂದು | ಸತತ ತುತಿಸುವೆನೋ ಪ ನಿಚ್ಚ ಸೇವೆಯ ಕೊಳ್ಳೋ 1 ಪತಿ ಸಖನೇ |ನ್ಯೂನಾತಿರೇಕಗಳ | ನೀನಾಗಿ ಮನ್ನಿಸುತಮಾನನಿಧಿ ಗುಣಪೂರ್ಣ | ನೀನೆನ್ನ ಪೊರೆಯೋ 2 ಭಾವದಲಿ ನೀನಿರಲು | ಅವ ಭಯವಿಲ್ಲೆನಗೆಶ್ರೀವರನೆ ಸರ್ವೇಶ | ಸರ್ವಜ್ಞ ಮೂರ್ತೇ |ಕಾವ ಕರುಣಿಯೆ ಗುರು | ಗೋವಿಂದ ವಿಠಲ ಬಾಗೋವತ್ಸ ಧ್ವನಿ ಕೇಳಿ | ಧಾವಿಸುವ ಪರಿಯಂತೆ 3
--------------
ಗುರುಗೋವಿಂದವಿಠಲರು
ಶ್ರೀ ಗಣಪತಿಗೆ ವಂದಿಸಿ ಕೆಳದಿಯ ಪುರದಭೋಗಮಂದಿರ ರಾಮೇಶ್ವರನ ರಂಭೋಗಮಂದಿರ ರಾಮೇಶ್ವರನ ಸನ್ನುತಿಸುತರಾಗದಿ ಪಾಡಿ ಪೊಗಳುವೆ ರಂ1 ವಾಣಿ ಪುಸ್ತಕ ವೀಣಾಪಾಣಿ ಪನ್ನಗನಿಭವೇಣಿ ಕಲ್ಯಾಣಿ ಶುಕ ರಂ-ವಾಣಿ ಶುಕವಾಣಿ ಬೊಮ್ಮನರಾಣಿ ಸನ್ಮತಿಯ ಕರುಣಿಸು ರಂ 2 ಧೃವ ಅಟ್ಠ ರೂಪಕ ಏಕತಾಳವು ಝಂಪೆತ್ರಿವಡೆ ತಾಳಗಳೊಡಂಬಡಲು ರಂ-ತ್ರಿವಡೆ ತಾಳಗಳೊಡಂಬಡೆ ಹೊಸ ಹರೆಯದಯುವತಿಯರೊಲಿದು ಹಾಡಿದರು ರಂ 3 ಗಂಗಾಧರ ಜಯ ಗೌರೀಪ್ರಿಯ ಜಯಅಂಗಜಹರ ಜಯವೆನುತ ರಂ-ಜಯವೆನುತಲಂಗನೆಯರುಪೊಂಗೋಲ ಪೊಯಿದು ಪಾಡಿದರು ರಂ 4 ಕಪ್ಪುಗೊರಳ ಜಯ ಸರ್ಪಭೂಷಣ ಜಯಮುಪ್ಪುರವನು ಜಯಿಸಿದವನೆ ರಂ-ಜಯಿಸಿದನೆ ಜಯವೆಂದುಒಪ್ಪದೆ ಪಾಡುತಾಡಿದರೆ ರಂ5 ದಿಮಿದಿಮಿ ದಿಮಿಕೀಟ ತಕಕಿಟನ ಕಕಿಟಕ್ರಮದಿ ನರ್ತಿಸುತಬಲೆಯರು ರಂ-ಅಬಲೆಯರು ಚಿನ್ನದ ಕೋಲಪ್ರಮುದದೊಳಾಡುತೊಪ್ಪಿದರು ರಂ6 ಅಚ್ಚ ಮುತ್ತಿನ ನಿಚ್ಚಳ ಸುಲಿಪಲ್ಲಒಚ್ಚೇರೆಗಣ್ಣು ಬಾಲೆಯರು ರಂ-ಬಾಲೆಯರು ಸಂಭ್ರಮದಿ ಮೈಮೆಚ್ಚುತ ಕೋಲನಾಡಿದರು ರಂ 7 ಭೃಂಗ ಕುಂತಳದ ಮತಂಗಜ ಗಮನದರಂಗುದುಟಿಯ ರಮಣೆಯರು ರಂರಮಣಿಯರು ಸೊಬಗನಾಂತುಹೆಂಗಳು ಪಾಡುತೊಪ್ಪಿದರು ರಂ8 ಜಲಜಗಂಧದ ನಳಿತೋಳ್ಗಳ ರಿಂಕಿದನೆಲೆಮೊಲೆಗಳ ತುಂಬಿಗುರುಳ ರಂಕರುಳ ಪದ್ಮಿನಿಯರುಚಳಕದಿ ಪಾಡುತಾಡಿದರು ರಂ9 ಪೊಂಬೊಗರಿಯ ತೆರದಿ ತುಂಬಿದ ಕುಚಗಳಬಿಂಬಾಧರದ ಕಂಬುಗಳದ ರಂಬಿಂಬಾಧರದ ಕಂಬುಗಳದ ಪದ್ಮಿನಿಯರುಸಂಭ್ರಮದಿಂದ ಪಾಡಿದರು10 ತೆಳುವಸುರಿನ ಕೊಬ್ಬಿದ ಕುಚಯುಗಳದಕಲಹಂಸಗತಿಯ ಮೋಹನದ ರಂಮೋಹನದ ಚಿತ್ತಿನಿಯರುಒಲಪಿನಂ ಪಾಡುತಾಡಿದರು ರಂ11 ಚಿನ್ನದ ಲತೆಯಂತೆ ಚೆನ್ನಾಗಿ ಬಳುಕುವಸನ್ನುತಾಂಗದ ಶಂಖರವದ ರಂರವದ ಶಂಖಿನಿಯರುಚೆನ್ನಾಗಿ ಪಾಡುತಾಡಿದರು ರಂ 12 ಅಪಳ್ಗಣ್ಣ ಮಂದಗತಿಯ ಮದಗಂಧದಶರೀರದ ಕೊಬ್ಬಿದ ಕೊರಳ ರಂಕೊರಳಿನ ಹಸ್ತಿನಿ(ಯರು)ತರುಣಿಯರೊಲಿದು ಪಾಡಿದರು ರಂ 13 ಸಿರಿಮೊಗದೊಳು ಬೆಮರೊಗೆಯೆ ಮೇಲುದುಜಾರೆ ಕರದ ಕಂಕಣ ಝಣರೆನಲು ರಂಕರದ ಕಂಕಣ ಝಣಝಣಝಣಝಣರೆನೆತರಳೆಯರ್ಪಾಡುತಾಡಿದರು ರಂ14 ದುಂಡುಮುತ್ತಿನ ಹಾರವಲುಗಲು ವಜ್ರದಕುಂಡಲಗಳು ನರ್ತಿಸಲು ರಂನರ್ತಿಸಲಂಗನೆಯರತಂಡ ಸಂಭ್ರಮದೊಳಾಡಿದರು ರಂ 15 ಕರುಣಸಾಗರ ಜಯ ಕರಿಚರ್ಮಾಂಬರ ಜಯವರದ ರಾಮೇಶ ಜಯವೆಂದು ರಂ-ವರದ ರಾಮೇಶ್ವರ ಪಾರ್ವತಿ ಜಯವೆಂದುಹರುಷದಿ ಕೋಲನಾಡಿದರು 16
--------------
ಕೆಳದಿ ವೆಂಕಣ್ಣ ಕವಿ
ಶ್ರೀ ಗಣಪತಿಯ ಪದಾಬ್ಜಕೆ ನಮಿಸಿರಾಗದಿಂದಲಿ ಶಾರದೆಯ ಸ್ಮರಿಸಿನಾಗಭೂಷಣ ಪದಾಬ್ಜಯುಗಕೆ ತಲೆವಾಗಿ ಬಾಲೆಯರಾಶೀರ್ವಾದದ ಪದಗಳರಾಗದಿ ಪಾಡಿ ಪೊಗಳುವೆ 1 ಸಾಲಿ ಸೀರೆಯನುಟ್ಟು ಸರಮುತ್ತ ಕಟ್ಟುಬಾಲಕಿಯರೊಳು ಕಟ್ಟಾಣಿ ನೀನಾಗುಮೇಲೆನೀ ಅಷ್ಟಪುತ್ರರನು ಪಡೆದು ಸುಖಿಬಾಳು ಸ್ತ್ರೀಯರಿಗೆಲ್ಲಾ ದೊರೆಯಾಗಿರುಶ್ರೀ ಮೈಲಾರಲಿಂಗನ ಕೃಪೆಯಿಂದಾ2 ಪಲ್ಲಕ್ಕಿಯ ಸಾನಂದದೊಳೇರುಹಲ್ಲಣಿಸಿದ ಕರಿತುರಗವನೇರುಎಲ್ಲಾಭರಣವನಿಟ್ಟು ಸುಖದಿ ಪ್ರಾಣದೊಲ್ಲಭಸಹಿತ ಸಂತೋಷದೊಳಿರು ಶ್ರೀಕೊಲ್ಲೂರ ಮೂಕಾಂಬೆಯ ಕೃಪೆಯಿಂದಾ 3 ಚಂದ್ರಕಸ್ತುರಿಯ ತಿಲಕಗಳನಿಟ್ಟುಚಂದದಿ ಕುಂಕುಮ ರೇಖೆಯನಿಟ್ಟುಇಂದೀವರನೇತ್ರಕೆ ಕಪ್ಪಿಟ್ಟು ಆಚಂದ್ರಾರ್ಕವು ಸುಖಬಾಳು ಶೃಂಗೇರಿಯಚಂದ್ರಮೌಳೀಶನ ಕೃಪೆಯಿಂದಾ4 ಅರಿಶಿನ ಚೂರ್ಣವನು ಲೇಪಿಸುತಪರಿಮಳಗಂಧವ ಪಸರಿಸಿಕೊಳುತಕರಿಯಮಣಿಯ ಮುತ್ತಿನ ಸರಗಳನಿಟ್ಟುಪರಮಸಂತೋಷದೊಳಿರು ಶ್ರೀ ಹಂಪೆಯವಿರೂಪಾಕ್ಷನ ಕೃಪೆಯಿಂದ 5 ಪರಿಮಳಿಸುವ ಪುಷ್ಪಸರಗಳ ಮುಡಿದುಗುರುಹಿರಿಯರ ಆಶೀರ್ವಾದವ ಪಡೆದುಹರುಷದಿ ಪುತ್ರಪೌತ್ರರ ಸಲಹುತ ಪತಿಚರಣಸೇವೆಯ ಮಾಡಿ ಸುಖಮಿರು ಕುಕ್ಕೆಯವರ ಸುಬ್ರಹ್ಮಣ್ಯನ ಕೃಪೆಯಿಂದ 6 ಸರಸ್ವತಿಯಂತೆ ವಿದ್ಯಾವಂತೆಯಾಗುಸಿರಿಯಂತೆ ಸೌಭಾಗ್ಯವಂತೆ ನೀನಾಗುಅರುಂಧತಿಯಂತೆ ಪತಿವ್ರತೆಯಾಗುತಪರಮಾನಂದದೊಳಿರು ಶ್ರೀ ಕೆಳದಿಯಪುರದ ರಾಮೇಶನ ಕೃಪೆಯಿಂದ 7
--------------
ಕೆಳದಿ ವೆಂಕಣ್ಣ ಕವಿ
ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸರ್ವತಂತ್ರ ಸ್ವತಂತ್ರ | ನಿರ್ವಿಕಾರನೆ ದೇವ ಅವ್ವ ಲಕುಮಿಗು ಪ್ರೇರಕ ಪ ದುರ್ವಿಭಾವ್ಯನೆ ಜಗಕೆ | ದರ್ವಿ ಜೀವನ ಕಾವಹವಣೆ ನಿನದಲ್ಲೇ ಸ್ವಾಮಿ ಅ.ಪ. ಕಾಯ ರಕ್ಷಿಸಿದೇ 1 ಕಾಯ ವೈರಿ ಪತಿ ನೀನೆ | ಜಾಯೆಯಿಂದೊಡಗೂಡಿಗೇಯ ಸಂಕರುಷಣನೆ | ಆಯತನ ಪೊರೆದೇ 2 ಸಾಯಮಭಿಧಾನದ | ಸವನ ಮೂರಲಿ ದಿವ್ಯಗಾಯಿತ್ರಿ ದ್ವಯ ಮಾತೃಕಾ |ಆಯತನದೊಳಗಿದ್ದು | ಆದಿತ್ಯ ದೇವಕಿಂಆಯುರ್ಹವಿಷವ ಗೊಳ್ಳುತಾ |ಜೀಯ ನೀ ಪೊರೆಯುತಿರೆ | ಧಾತು ಸಪ್ತಕ ತನುವಧಾರ್ಯವಾಗಿಹುದೊ | ದ್ಯುಮ್ನ |ಗೇಯ ಗುರು ಗೋವಿಂದ | ವಿಠಲನೆ ತವ ಪದಕೆಕಾಯ ಇದನರ್ಪಿಸುವ | ದೇಯ ಕೊಡು ಸತತ 3
--------------
ಗುರುಗೋವಿಂದವಿಠಲರು
ಸಾಕು ನರಹರಿ ಭವದ ಬವಣಿಂ ದ್ಯಾಕÉ ಬಳಲಿಸುವೆ ಹರಿ ಹರಿ ಶ್ರೀಕಮಲಾಪತಿ ಶರಣ ಜನರೊಳ- ಗ್ಹಾಕಿ ಪೊರೆಯೆನ್ನ್ಹರಿ ಹರಿ ಪ ದೊರೆಯೆ ನೀನಿರಲನ್ಯರಿಗೆ ಬಾಯಿ ತೆರೆಯಲ್ಯಾಕಿನ್ನ ್ಹರಿ ಹರಿ ಪರಮ ಆಪ್ತ ನೀನಿರಲು ಕಾಣದೆ ಪÀರರಿಗೆ ಆಲ್ಪರಿದ್ದರಿಹರಿ1 ಪುತ್ಥಳಿ ಮನೆಯಲೆ ಇರಲು ಹಿತ್ತಾಳೆ ಬಯಸುವೆನ್ಹರಿಹರಿ ಬಿಟ್ಟು ನಿನ್ನೀಗನ್ಯ ವಿಷಯದಿಂ ದ್ದುಟ್ಟುವುದೆ ಸುಖ ಹರಿಹರಿ 2 ಬೇಡಿದ್ವರಗಳ ಕೊಡುವೊ ಭೀ- ಮೇಶ ಕೃಷ್ಣ ನೀನಿರಲ್ಹರಿಹರಿ ನೋಡಿ ಸುಖಿಸದೆ ಬಿಟ್ಟು ಕನ್ನಡಿ ಗೋಡೆಗಡರುವೆನ್ಹರಿಹರಿ 3
--------------
ಹರಪನಹಳ್ಳಿಭೀಮವ್ವ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಹ್ಯಾಗೆ ಸದ್ಗತಿ ಆಗುವುದೆನಗೆ ಯೋಗಿಗಳ ಒಡೆಯ ಹರಿಯೆ ಈಗಾಗಲೆ ತಿಳಿಸಿ ಸಾಗುವಂತೆ ಸಾಧನ ಬ್ಯಾಗ ಮಾಡಿಕೊ ನಾಗತಲ್ಪನೆ ಪ ಮೇಲಧಿಕಾರಿಯು ಕೊಂಡಾಡಲು ಕುಲ ಉದ್ಧಾರವೆಂದು ಹಿಗ್ಗುವೆ ಕಲುಷ ಕಂಡಾಗÀಲು ಅಳುತ ಧರೆಗೆ ಇಳಿವೆನೊ ನಾನು 1 ಶಿಕ್ಷ ರಕ್ಷ ಸಧ್ಯಕ್ಷ ಲಕ್ಷ್ಮೀಪತಿಯೆಂದರಿಯದೆ ಕುಕ್ಷಿ ಭರಣಕೆ ಯೋಚಿಸುವೆ ಪಕ್ಷಿವಾಹನನಲ್ಲಿ ಲಕ್ಷ್ಯವಿಲ್ಲದೆ ಬಕ ಪಕ್ಷಿಯಂತೆ ಧೇನಿಸುವೆ ನಾ 2 ನಷ್ಟ ದೇಹ ಪುಷ್ಟಿಗಾಗಿ ದುಷ್ಟರಿಗೆ ಎನ್ನ ಕಷ್ಟ ಪೇಳಲು ದೃಷ್ಟಿಸಿ ನೋಡಿದರೆ ಬೆಟ್ಟ ಮೇಲಿದ್ದಂತೆ ಕಂ ಗೆಟ್ಟು ಮೊರೆಯಿಸುವೆ 3 ಒಂದು ಲಾಭವಿಲ್ಲದೆ ಮಂದಿ ನೆರಹಿ ಸಂದಿಗೊಂದ್ಹರಿದ್ಯಾಡಿ ಸಂದು ಹೋಯಿತÀು ಹೊತ್ತಯೆಂದು ಆಸ್ಥಾನಕೆ ಮಿಂದು ಬ್ಯಾಗನ್ನ ತಿಂದೋಡುವೆನೊ 4 ಮಾನನೀರ ಚೆಲ್ವಿಕೆಗೆ ಮನಸೋತು ನೆನೆನೆನೆದು ಬೆಂಡಾಗುವೆ ಹೀನರಾ ಕೂಡಿಕೊಂಡು ದೀನರಾ ಬಾಯಿಬಡಿದು ಧನ ಸಾಧಿಸಿದ್ದು ಕೊನೆಗೆ ಸಾಯುವ ನರಗೆ 5 ಉದಯದಲೆದ್ದು ನದಿಗೆ ಪೋಗಿ ನಾ ಮುದದಿಂದ ಮಿಂದು ಉದಯಾರ್ಕಗಘ್ಯ ಒದಗೀಸಿ ಕೊಡದ ಮದಡನಾಗಿದ್ದವಗೆ 6 ವರ ಸುದರ್ಶನ ಗ್ರಂಥಗಳ ಗುರುಗಳಲ್ಲಿ ನಿರುತ ಪಠಿಸಲಿಲ್ಲ ಭಾಗವತ ಪುರಾಣಗಳು ಪರಮ ಭಕ್ತೀಲಿ ಕೇಳಲಿಲ್ಲ 7 ಭಾವ ಶುದ್ಧಿಯಿಂದ ದೇವತಾರ್ಚನೆ ಆವ ಕಾಲಕು ಮಾಡಲಿಲ್ಲ ಪವನಸಖ ಮಖದೊಳಾಹುತಿನಿತ್ತು ಕವಿಗಳಿಗನ್ನ ಕೊಟ್ಟವನಲ್ಲ 8 ಧ್ಯಾನ ಮಾಡುವುದನ್ನು ಮೌನಿಗಳ ಕೇಳಿ ಮನನ ಮಾಡಲಿಲ್ಲ ಪಾದ ಕನಸಿನಲಾದರೂ ಒಮ್ಮೆ ನೋಡಲಿಲ್ಲ 9
--------------
ವಿಜಯ ರಾಮಚಂದ್ರವಿಠಲ
(ದೇವತಾಕಕ್ಷೆ) (ಅ) ಶ್ರೀಹರಿ 5 ಅನಂತಗಿರಿ ಯಾತ್ರೆ ಮಾಡಿ ಜನರು ಅನಂತ ಜನುಮದ ಪಾಪ ಸಂಹರವು ಪ ಇಲ್ಲಿ ಕುರುರಾಯ ಜನ್ಮಾಂತರದು ಪಾಪ ನಿಲ್ಲದೆ ಮಾಡಿದಾ ನಡತಿಯಿಂದಾ ಎಲ್ಲ ಕಾಲದಲಿ ದರಿದ್ರನಾಗಿದ್ದು ಶ್ರೀ ವಲ್ಲಭನ ಒಲಿಸಿ ಮುದಂಬರೀಷ ನೃಪನಾದಾ 1 ನೃಪತಿ ದುರ್ಮತಿಯಲಿ ಮಂಡಲದೊಳಗಿರಲು ಸರ್ಪ ಕಚ್ಚಿ ಕಂಡು ಗೃಧ್ರವು ಅವನ ಉಂಗುಷ್ಟ ಭವನಾಶಿ ಕುಂಡದಲಿ ಬಿಸುಡೆ ದಶರಥ ಭೂಪತಿಯಾದಾ2 ಹೇಳಲಳವೆ ಇನ್ನು ಈ ಕ್ಷೇತ್ರದÀ ಮಹಿಮೆ ಕೇಳಿದಾಕ್ಷಣ ಮುಕ್ತಿ ಸಿದ್ಧವಕ್ಕೂ ಶ್ರೀಲೋಲ ನರಸಿಂಹ ವಿಜಯವಿಠ್ಠಲರೇಯೇನ ವಾಲಗವ ಕೈಕೊಂಡ ಮನುಜಂಗೆ ಬಲು ಸಾಧ್ಯ 3
--------------
ವಿಜಯದಾಸ