ಒಟ್ಟು 94 ಕಡೆಗಳಲ್ಲಿ , 29 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸ್ವತಿ ಕಮಲಭವನ ಪ್ರಿಯ ರಾಣಿ ಪ ಅಂತರಂಗದ ತಂತಿಯ ಮಿಡಿಸೌನಿಂತು ಜಿಹ್ವೆಯಲಿ ಹರಿ ಗುಣ ನುಡಿಸೌಕಂತುಜನಕನ ದಯವನು ಕೊಡಿಸೌಸಂತತ ಶಾರದೆ ವೀಣಾ ಪಾಣಿ 1 ಪನ್ನಗ ವೇಣಿ 2 ಪ್ರೇರೆರಿಸರ್ಥಗರ್ಭದ ನುಡಿಗಳನುತೋರಿಸು ಪದ್ಯವ ರಚಿಪ ರೀತಿಯನುಚಾರು ಚರಣಗಳಿಗೆರಗುವೆ ಗದುಗಿನವೀರನಾರಾಯಣನ ಸೊಸೆಯೆ ಸುವಾಣಿ 3
--------------
ವೀರನಾರಾಯಣ
ಸಾವಧಾನೊ ಜೀವ ಭವಸಂತತಂಜೀವನ್ಮುಕ್ತಿ ಸಾಧನ ಸಂತತೋದ್ಧರಂ ಪಆಶಾ ಪಿಶಾಚಿ ಕಾಮ ವಧೂಯ ಕಷ್ಟತರಪಾಶ್ಯಾಕಾವೃತಿಂ ಪರಿಭೂಯಚಈಶಣತ್ರಯ ಮೂಲ ಮುತ್ಪಾಟ್ಯಚೌಥನಿಷ್ಕೋಶಾಸಿವಜ್ವಲಣ ಸರ್ವ ವಿಷಯೋಝ್ಝಿತಃ 1ಏಕಾಗ್ರತಾಮಾಕಲಯ್ಯ ಕೂಟಸ್ಥಾತ್ಮನಾಕಲಿತ ಚಿಂತಯಾನ್ಯದ್ವಿಲಾಪ್ಯಶೋಕ ಮೋಹಾದಿ ಪರಿಹೃತ್ಯಸುಪ ಬ್ರಹ್ಮಾಕಾರ ತಾಮನುಭವನ್ನಿತ್ಯ ಮುಕ್ತಯೋ 2ತಾಪತ್ರಯಂತ್ಯಜನ್ ತದಹಮಿತ್ಯಾನಂದರೂಪಿಣ ನಿತ್ಯತೃಪ್ತಿಂ ಪ್ರಪದ್ಯೆವ್ಯಾಪಕಾತ್ಮ ಭವ ನಿಜಾದ್ವೈತ ಬೋಧತೋಗೋಪಾಲಾರ್ಯ ದಯಯಾತೀವ ಧನ್ಯಃ 3
--------------
ಗೋಪಾಲಾರ್ಯರು
ಸೀಸ ಪದ್ಯ ರಘುನಾಯಕ ನಿನ್ನ ರಾತ್ರಿ ಹಗಲು ನೆನೆವೆ ರಾಘವಾ ಕೈಪಿಡಿದು ಸಲಹನ್ನನು ಪ ಸೀತಾ ಮನೋಹರಾ | ಶ್ರೀ ರಾಮಚಂದಿರಾ ಪಾತಕಾಮೃಗವಳಿದು | ಪರಮಧೀರಾ 1 ಶಬರಿ ಫಲಗಳ ತಿಂದು | ಶಾಶ್ವತಾ ಫಲವಿತ್ತು ಅಗಣಿತಾಗುಣಧಾಮ | ಆನಂದ ರಾಮ 2 ಸೇತು ಮಾರ್ಗದೊಳಿಂದ | ಆತ ರಾವಣನ ಕೊಂದ ಸೀತೆಯನು ತಂದ ಪ್ರಖ್ಯಾತಮಹಿಮಾ 3 ಲೋಕದೊಳು ನೇಮ ನಿನ್ನ | ಪಾಪಹರ ನಾಮ ವಾಲ್ಮೀಕಿ ಜಪಿಸಿದಾ ಶ್ರೀ ರಾಮನಾಮ 4 ಶ್ರೀ ಕಾಂತ ನರಸಿಂಹ ವಿಠಲಾ | ಸ್ವೀಕರಿಸೈಗಂಧವಾದೇವ 5
--------------
ಓರಬಾಯಿ ಲಕ್ಷ್ಮೀದೇವಮ್ಮ
ಸೀಸಪದ್ಯ ಧರಣಿ ಮೊರೆಯನು ಕೇಳಿ ಸರಸಿಜಾಸನ ಸಕಲ ಸುರರ ಸಹಿತದಿ ಶರಧಿಶಯನಗÀರುಹೆ ವಸುದೇವ ದೇವಕಿ ಸುತನೆನಸಿ ಅಜನಯ್ಯ ವಸುಮತಿಯಲವತರಿಸಿ ಲೀಲೆಯಿಂದ ದುರುಳ ದೈತ್ಯರ ಸದೆದು ಪರಿಪಾಲಿಸಿದ ಸಾಧು ಸುಜನರನ್ನು ನಿಜಭಕ್ತ ಪಾಂಡವರ ನೆಂಟನೆಂದೆನಿಸಿ ಭೂ ಭುಜ ಸುಯೋಧನ ಮುಖ್ಯ ದುರುಳರನ್ನು ಸದೆಬಡಿಸಿದಾ ಬಳಿಕ ಮದದಿ ಕೊಬ್ಬಿದ ಯದು ಬಳಗವನು ವಿಪ್ರಶಾಪದಿಂದ ಕೊಲಿಸಿ ಪದುಮಸಂಭವಜನಕ ಕರಿಗಿರೀಶನು ತನ್ನ ಸದನಕ್ಕೈದಿದ ಸರ್ವವ್ಯಾಪ್ತ ಸರ್ವೇಶ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಪ್ರಳಯ ರುದ್ರನ ಕೋಪಕ್ಕೆಮ್ಮಡಿಯ ಕೋಪದಿಂ ದ ಲಘು ಶಾಪವ ಮುನಿಯು ಕೊಟ್ಟರಂಜೆ ಕಡುಕಷ್ಟ ಕೋಟಲೆಯು ದುಃಖ ದಾರಿದ್ರಗಳು ಒಡನೊಡನೆ ಬಂದೊದಗೆ ನಡುಗೆ ನಾನು ಶರಭ ವೃಶ್ಚಿಕ ಸರ್ಪ ಮೊದಲಾದ ಬಲು ಕ್ರೂರ ಪ್ರಾಣಿಗಳ ಬಾಧೆಗಂಜೆ ಅಸಿಧಾರೆಗಂಜೆ ಇನ್ನಸು ಪೋಗುವುದಕಂಜೆ ವಸುಧೀಶರಾಗ್ರಹಕೆ ಲವಲೇಶವಂಜೆ ಉರಿಗಂಜೆ ಸೆರೆಗಂಜೆ ಹರಣದ ಭಯಕಂಜೆ ಕರಿಗಿರೀಶನ ಕರುಣವೊಂದಿರಲು ಎನಗೆ ಒರೆದ ವಚನಕೆ ಅನೃತ ಸಂಘಟಿಸಲದಕೆ ನೆರೆ ಅಂಜುವೆನು ನಾನು ಇನ್ನೊಂದಕಂಜೆ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಗತವು ಸ್ವಾಗತವು | ಯತಿವರ್ಯರೇಯೋಗೀಶ ಶ್ರೀಕೃಷ್ಣ | ಮೂತ್ರ್ಯುಪಾಸಕರೇ ಪ ವಿಶ್ವಭಿಧರಂತಸ್ಥ | ವಿಶ್ವರೂಪಿಯ ಹರಿಯವಿಶ್ವಸರ್ಜನ ಸ್ಥಿತೀ | ವಿಶ್ವಸಂಹರವಾ |ವಿಶ್ವತೊಮುಖವಾಗಿ | ಗುಣ ಕ್ರಿಯವ ಕೊಂಡಾಡೆವಿಶ್ವೇಶ ತೀರ್ಥರೆಂದುರು | ಕೀರ್ತಿಯುಕ್ತರೇ 1 ಬೋಧ | ಸಿದ್ಧ ಪಡಿಸಿದರೇ 2 ಶರಣ ಜನರಭಿಲಾಷೆ | ನಿರುತ ಪಾಲಿಸಿ ಪೊರೆವಸರಳ ಹೃದಯರೆ ನಿಮ್ಮ | ಚರಣದ್ವಂದ್ವಗಳಾ |ವರ ರಜವ ಶಿರದಲ್ಲಿ | ಧರಿಸುತ್ತ ಧನ್ಯನೆಹೆಮರಳಿ ಮಮಕುಲವೆಲ್ಲ | ಉದ್ಧಾರವಾಯ್ತು 3 ಕಾಲ | ಸೀಮೆ ಮೀರಿದ ಸಮಯನೇಮ ಮೀರದೆ ವೈಶ್ವ | ಹೋಮಾದಿ ಶೇಷಾ |ಪ್ರೇಮದಿಂ ವಿದ್ಯಾರ್ಥಿ | ಸ್ತೋಮ ಕುಣಿಸುತ ನಿತ್ಯಸಾಮ ಸನ್ನುತನ ನಿ | ಷ್ಕಾಮ ಭಜಿಸುವರೇ 4 ಕಾಣ್ವೋಪ ನಿಷದರ್ಥ | ಕನ್ನಡ ಸುಪದ್ಯದಲಿಇನ್ನು ರಚಿಸಿರ್ಪುದಕೆ | ಮುನ್ನುಡಿಯನಿತ್ತೂ |ಅನ್ನಂತ ಗುಣ ಗುರೂ | ಗೋವಿಂದ ವಿಠ್ಠಲನನನ್ನೆಯಿಂ ಭಜಿಸೆ ಪ್ರ | ಸನ್ನ ಮಾರ್ಗದರೇ 5
--------------
ಗುರುಗೋವಿಂದವಿಠಲರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹೇಳುವುದು ಬೇಡ | ಜನರ ನುಡಿ ಕೇಳದಿರಲೋ ಮೂಢ ಪ ಶ್ರೀಲೋಲನ ಕಿಂಕರರ ಬಾಗಿಲಲಿ ಬೀಳುನಾಯಿಯಂದದಲಿ ಕೆಲಕಾಲ ಅ.ಪ ದ್ರವ್ಯದಾಸೆಗಾಗಿ | ನಾರಕೀ ಭವಿತವ್ಯರಲ್ಲಿಗೆ ಹೋಗಿ ಕಾವ್ಯನಾಟಕ ಸ್ತುತಿ ಪದ್ಯಗಳನು 1 ನಾನು ಯೋಗ್ಯನೆನ್ನುತ | ತೋರಿಸಿ ಮಾನವಾಗಿದಿರದಲ್ಲಿ ನಿನಗೆ ದುರಭಿ- ಮಾನಿಯಾಗಿ ನೀ ಕೆಡುವೆಯೊ ನಿಜ ನಿಜ 2 ಕೊಂಚ ಬೇಡಬೇಕು ವಂಚನೆಯಿಲ್ಲದೆ ಭಜಿಸು ರಹಸ್ಯವ 3
--------------
ಗುರುರಾಮವಿಠಲ
(ಅ) ಶ್ರೀಹರಿಸ್ತುತಿ87ಎಷ್ಟು ಆನಂದವೊ ಶ್ರೀಹರಿಯ ಭಜನೆ ಪದುಷ್ಟತರ ದೋಷಗಳು ಬಳಲುವಕಷ್ಟಗಳ ಪರಿಹರಿಸಿ ಸರ್ವೋತ್ಕøಷ್ಟ ಪದವಿಯ ಕೊಡುವ ಲಕ್ಷ್ಮೀಇಷ್ಟನಾರಾಯಣನ ಭಜನೆ 1ಪದ್ಮದಳನಯನ ಪ್ರತಿಷ್ಠೆಯಪದ್ಮಶಾಲಿಯ ಭಕ್ತರೆಲ್ಲರುಪದ್ಮನಾಭನ ಪ್ರೀತಿಮಾಡಿ ಸುಭದ್ರಸಂಪದ್ಯುಕ್ತರಾದರು 2ಮಂದಿರವು ಕಟ್ಟಿಸಿಯು ಪರಮಾನಂದದಿಂ ಉತ್ಸವವು ನಡಿಸಿದರೆಂದು ಕೇಳಿದ ಭಾಗ್ಯಶಾಲಿಗಳುಇಂದಿರೇಶನ ಕೃಪೆಯ ಪಡೆದರು 3ಅಂಬುಜೋದರದಾಸರೆಲ್ಲರುತಂಬುರೆಯು ಕರತಾಳವಾದ್ಯವಿಜೃಂಭಿಸಿ ಹರಿಸ್ಮರಣೆಯ ಮಾಡುತಸಂಭ್ರಮದಿ ಬಂದವರು ನೋಡಲು 4ವಾಸುಕೀನಗರೇಶ ದಾಸರದಾಸರಾಗಿಯು ತುಲಸಿರಾಮದಾಸ ಪರಮೋಲ್ಲಾಸದಿಂ ಶ್ರೀವಾಸುದೇವನ ಚರಣನಂಬಿದೆ 5
--------------
ತುಳಸೀರಾಮದಾಸರು
139-2ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಜಯದಾಸರಲಿ ಗೋಪಾಲದಾಸರಲಿನಿಜ ಗುರುಭಕ್ತಿ ವರ್ಧಿಸಿ ಹರಿದಾಸನಿಜಪಂಥದಿ ತನ್ನ ಸೇರಿಸೆ ಅನುಗ್ರಹಿಸೆನಿಜಭಾವದಲಿ ಆಚಾರ್ಯ ಬೇಡಿದರು 1ನರಸಿಂಹ ದಾಸರಾಗಿಹ ತಂದೆಮುಖದಿಂದವರಗಾಯತ್ರಿ ಮಂತ್ರ ಉಪದಿಷ್ಟರಾಗಿವರದೇಂದ್ರರಲಿ ಮೂಲಟೀಕಾದಿ ಗ್ರಂಥಗಳುಮಂತ್ರೋಪದೇಶವು ಕೊಂಡವರು ಮೊದಲೇ 2ಶ್ರೀನಿವಾಸಾಚಾರ್ಯರ ಕೋರಿಕೆಯಮನ್ನಣೆಮಾಡಿದರು ದಾಸಾರ್ಯರುಘನಮಹಾಸಚ್ಛಾಸ್ತ್ರ ತತ್ತ್ವ ವಿಷಯಗಳಕನ್ನಡಮಾತಲ್ಲಿ ಬೋಧಿಸಿದರು 3ಪ್ರಣವಹರಿ ಜಾಗ್ರದಾದ್ಯವಸ್ಥಾ ಪ್ರಣಯನಕೃಷ್ಣರಾಮ ನಾರಸಿಂಹವರಾಹವಿಷ್ಣು ಪರಂಜ್ಯೋತಿ ಪರಂಬ್ರಹ್ಮವಾಸುದೇವಏನೆಂಬೆ ಶ್ರೀಶ ಗುಣಕ್ರಿಯಾ ರೂಪಮಹಿಮೆ 4ಗಾಯತ್ರಿ ನಾಮಆಮ್ನಾಯಗಾಯನ ಮಾಡಿದಯದಿ ಜಗವೆಲ್ಲ ರಕ್ಷಿಸುವ ಸ್ವಾಮಿಹಯಗ್ರೀವ ಗಾಯತ್ರಿ ಮಂತ್ರ ಪ್ರತಿಪಾದ್ಯನುನಾರಾಯಣವಾಸುದೇವವೈಕುಂಠ5ತ್ರಾತಹಯ ಶೀರ್ಷನೆ ಗಾಯತ್ರಿ ನಾಮನುಭೂತಪೂರ್ಣ ವಾಗ್ವಶಿ ಶರೀರವ್ಯಾಪ್ತಪೃಥ್ವಿ ಆಶ್ರಯ ಪ್ರಾಣಾಧಾರ ಹೃದಯನುತ್ರಿಧಾಮ ಪಾದತ್ರಯ ಜಗತ್ಪಾದ ಸದೃಶ 6ಜ್ಞಾನ ಸುಖಬಲಪೂರ್ಣ ಸರ್ವ ಆಧಾರನುದಿನಪತೇಜಃ ಪುಂಜಚೇಷ್ಟಕ ಸ್ಫೂರ್ತಿದನುವನಜಜಾಂಡದ ಸರ್ವಕರ್ತನೂ ದೇವಭಜನೀಯ ಧ್ಯಾತವ್ಯ ಶ್ರೀ ನಾರಾಯಣನು 7ವರ್ಣಗಳು ನಿತ್ಯವು ವರ್ಣಾಭಿಮಾನಿಗಳೊಳ್ವರ್ಣಪ್ರತಿಪಾದ್ಯಹರಿ ಶ್ರೀ ಸಹ ಇಹನುಪೂರ್ಣ ಸುಗುಣಾರ್ಣವನುನಿರ್ದೋಷಸರ್ವಜಗತ್ಜನ್ಮಾದಿ ಕರ್ತನು ನಿಗಮೈಕವೇದ್ಯ 8ಶಬ್ದಗಳು ಸರ್ವವೂ ಮುಖ್ಯ ವೃತ್ತಿಯಲಿಮಾಧವನ್ನಲ್ಲಿಯೇ ವಾಚಕವಾಗಿವೆಯುವೈದಿಕ ಶಬ್ದಗಳು ಹರಿಗೇವೆ ಅನ್ವಯವುಸಂಸ್ತುತ್ಯ ದ್ರಷ್ಟವ್ಯ ಅನುಪಮೈಕಾತ್ಮ 9ಸತ್ಯಜ್ಞಾನಾನಂತಆನಂದಮಯಹರಿಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯವ್ಯಾಪ್ತನು ಸರ್ವತ್ರ ಸರ್ವದಾ ಸರ್ವಕ್ಕೂಆಧಾರ ಅಕ್ಷರನು ಕ್ಷರಾಕ್ಷರೋತ್ತಮನು 10ರಾಜಿಸುತಿಹ ನಮ್ಮ ದೇಹಾಖ್ಯ ರಥದಲ್ಲಿರಾಜರಾಜೇಶ್ವರನು ಶ್ರೀ ಹ್ರೀ ಸಮೇತಯುವರಾಜ ವಾಯುದೇವನ ಸೇವೆಕೊಳ್ಳುತಿಹರಾಜೀವೇಕ್ಷಣಹರಿಪ್ರಾಣನಾಮ11ಪ್ರಸ್ಥಾನತ್ರಯ ವೈದಿಕಶಾಸ್ತ್ರ ವಿಷಯಗಳುಇತಿಹಾಸಭಾಷಾತ್ರಯಪುರಾಣಗಳುಪ್ರತಿರಹಿತ ಸರ್ವೋತ್ತಮ ಸ್ವಾಮಿ ಶ್ರೀಶನ್ನಚಿಂತಿಸಿ ಕಾಣಲುಬಗೆ ತೋರಿಸುತಿವೆ 12ಆಚರಿಸಿ ಜ್ಞಾನ ಪೂರ್ವಕವಿಹಿತಕರ್ಮಅಚ್ಚಭಕ್ತಿಯಿಂದ ಚಿಂತಿಸಿ ಸ್ತುತಿಸೆಅಚ್ಚುತ ಸ್ವತಂತ್ರನು ಮುಖ್ಯ ಕಾರಣ ವಿಷ್ಣುಪ್ರೋಚ್ಯ ಸುಖವೀವನು ತೋರಿತಾ ಒಲಿದು 13ಮಧ್ವಮತ ಸಿದ್ಧಾಂತ ಪದ್ಧತಿ ಅನುಸರಸಿಸದನು ಸಂಧಾನ ಭಕ್ತಿ ಉನ್ನಾಹದಿಮಾಧವನ ಗುಣಕ್ರಿಯಾ ರೂಪಗಳ ಕೊಂಡಾಡಿಪದವಾಕ್ಯ ಶ್ಲೋಕ ಪದ್ಯಗಳ ನುಡಿಯುವುದು 14ಒಂದೊಂದು ಕೀರ್ತನೆ ಪದ್ಯ ಗ್ರಂಥಗಳಲ್ಲೂಇಂದಿರೇಶನು ತತ್ತತ್ ಪ್ರತಿಪಾದ್ಯ ಇಹನುಪದ್ಯ ಕೀರ್ತನೆ ಗ್ರಂಥ ವಿಷಯ ಶ್ರೀಹರಿಯಮಂತ್ರ ಚಿಂತಿಸಿ ಅರ್ಪಿಸಬೇಕು ರಚನೆ 15ಬೃಹತೀ ಸಹಸ್ರಸ್ವರ ವ್ಯಂಜನಾಕ್ಷರ ವಾಚ್ಯಶ್ರೀಹರಿಅಹರ್ನಿಶಿಕಾಯುವ ದಯಾಳುಅಹರಹ ಸದುಪಾಸ್ಯ ಬ್ರಹ್ಮ ಶಿವ ಈಡ್ಯನುದೇಹ ಒಳಹೊರಗಿಪ್ಪ ಸರ್ವಾಂತರ್ಯಾಮಿ 16ಸ್ವತಃ ಅವ್ಯಕ್ತನು ಸರ್ವದಾ ಸರ್ವತ್ರಸ್ವತಂತ್ರ ಪೂರ್ಣಜ್ಞಾನ ಆನಂದರೂಪಸ್ವಪ್ರಯತ್ನದಿ ಅಲ್ಲ ಮುಮುಕ್ಷುಗಳಿಗಪರೋಕ್ಷಮೋದಮಯ ಶ್ರೀಹರಿಯ ಪ್ರಸಾದದಿಂದಲೇ 17ಜ್ಞಾನಿಗೆ ಪ್ರತ್ಯಕ್ಷ ಹರಿಯ ಅವ್ಯಕ್ತತ್ವಅನ್ಯರಿಗೆ ವೇದ್ಯ ಸೂಕ್ಷ್ಮತ್ವಾನುಮಾನದಿತನ್ಮಾತ್ರ ತೇಜಸ್ಸು ಭೌತಿಕವು ಎಂಬಂಥಅಗ್ನಿಯ ಸೂಕ್ಷ್ಮತ್ವ ಸ್ಥೂಲತ್ವವೋಲ್ಲ 18ಎಲ್ಲೆಲ್ಲೂ ಎಂದೆಂದೂ ಏಕಪ್ರಕಾರದಲ್ಲಿಳಾಳಕನು ಅವ್ಯಕ್ತರೂಪ ಇರುತಿಹನುಇಲ್ಲ ಇವಗೆ ಎಂದೂ ಎಲ್ಲೂ ಪ್ರಾಕೃತರೂಪಒಲಿದು ಕಾಣುವ ತನ್ನ ಇಚ್ಛೆಯಿಂದಲೇ 19ಮೂಲರೂಪದಿ ಸೂಕ್ಷ್ಮತ್ವ ಅವತಾರಗಳಲಿಸ್ಥೂಲತ್ವವೆಂಬುವ ವಿಶೇಷವು ಇಲ್ಲಇಳೆಯಲ್ಲಿ ಕೃಷ್ಣಾದಿ ರೂಪಗಳ ಕಂಡದ್ದುಮಾಲೋಲನಿಚ್ಛೆಯೇ ಪುರುಷಯತ್ನದಿ ಅಲ್ಲ 20ಅರೂಪಮ ಕ್ಷರಂಬ್ರಹ್ಮ ಸದಾವ್ಯಕ್ತಂಆತ್ಮಾವರೇ ದ್ರಷ್ಟವ್ಯ ಎಂದುಈ ರೀತಿ ಅವ್ಯಕ್ತತ್ವ ಅಪರೋಕ್ಷತ್ವಎರಡು ಪೇಳುವಶ್ರುತಿವಿರೋಧವು ಇಲ್ಲ21ಆರಾಧನಾದಿ ಪ್ರಯತ್ನಕ್ಕೂ ಅವ್ಯಕ್ತಉರುಸುಖಮಯಅಪ್ರಾಕೃತಅವಿಕಾರಿಪರಮಪುರುಷ ಹರಿಯ ಇಚ್ಛಾಪ್ರಸಾದದಿಂಅಪರೋಕ್ಷಮೋಕ್ಷಗಳು ಲಭ್ಯಯೋಗ್ಯರಿಗೆ22ವನಜನಾಭನರೂಪಗುಣಮಹಿಮೆಕೇಳಿಅನುಭವಕೆ ಬರುವಂಥ ಮನನ ಸುಧ್ಯಾನಅನಘಹರಿಯಲಿ ಭಕ್ತಿ ಸುಖಬಾಷ್ಪ ಸುರಿಸೆತನ್ನಿಚ್ಚೆಯಿಂದಲೆ ಅಪರೋಕ್ಷವೀವ 23ಬ್ರಹ್ಮಪುರವನರುಹವೇಷ್ಮವ್ಯೋಮಸ್ಥದೇಹ ಸರ್ವಾಂಗಸ್ಥ ಸರ್ವನಾಡಿಸ್ಥಬಹಿರಂತರ ಸರ್ವಮೂರ್ತಾ ಮೂರ್ತಸ್ಥಮಹಾಮಹಿಮ ಹರಿಯು ಸರ್ವತ್ರ ಪ್ರಸಿದ್ಧ 24ಸರ್ವತ್ರ ವ್ಯಾಪ್ತನು ಸತ್ತಾದಿ ದಾತನುಸರ್ವದೊಳು ಸದಾಪೂರ್ಣಅಖಿಳಸಚ್ಛಕ್ತಸರ್ವೇಶ ಸರ್ವಾಧಾರನಾಗಿಹ ಸ್ವಾಮಿದೇವಿ ಲಕ್ಷ್ಮೀರಮಣ ವಿಷ್ಣು ನರಸಿಂಹ 25ಉಗ್ರವೀರನು ಮಹಾವಿಷ್ಣು ತೇಜಃಪುಂಜಸುಪ್ರಕಾಶಿಪ ಸರ್ವತೋಮುಖ ನೃಸಿಂಹಅರಿಗಳಿಗೆ ಭೀಷಣನು ಭಕ್ತರಿಗೆ ಇಷ್ಟಪ್ರದಸಂರಕ್ಷಕ ನಮೋ ಮೃತ್ಯುಗೇ ಮೃತ್ಯು 26ಪ್ರೋದ್ಯರವಿನಿಭದೀಪ್ತ ವರ್ತುಲ ನೇತ್ರತ್ರಯಹಸ್ತದ್ವಯ ಆಜಾನು ಮಹಾಲಕ್ಷ್ಮಿಯುತನುಸುದರ್ಶಿನಿ ಶಂಖಿಯುತ ಕೋಟ್ಯಾರ್ಕಾಮಿತತೇಜಉತ್ಕøಷ್ಟಅಖಿಳಸಚ್ಛಕ್ತ ನರಸಿಂಹ27ಇಂಥಾ ವಿಷಯಗಳ ಜಿಜ್ಞಾಸ ಉಪದೇಶಹಿತಮಾತ ಗೋಪಾಲದಾಸಾರ್ಯರಿಂದಮುದದಿಂದ ಶ್ರೀನಿವಾಸ ಆಚಾರ್ಯರು ಕೊಂಡುಪಾದಕೆರಗಿಹರಿಅಂಕಿತ ಬೇಡಿದರು28ವಾರಿಜಾಸನ ಪಿತನ ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 29- ತೃತೀಯ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
--------------
ಪ್ರಸನ್ನವೆಂಕಟದಾಸರು