ಒಟ್ಟು 106 ಕಡೆಗಳಲ್ಲಿ , 46 ದಾಸರು , 102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆ ಕೃಪಾಳು ಶ್ರೀ ಚನ್ನಕೇಶವನೇ ಜ್ಞಾನಿಗಳನ್ನು ಕಾವ ಸನಕವಂದಿತನೆ ಪ ಶರಣರ ಪೊರೆಯುವ ಪ್ರಣವ ಸ್ವರೂಪನೆ ಸ್ಮರಿಸುವ ದಾಸರ ಮರೆಯ ಬೇಡಯ್ಯ ಅ.ಪ. ದೀನರ ಸಲಹುವ ಭಕ್ರವತ್ಸಲನೇ ಮಾನಿನಿ ದ್ರೌಪದಿ ಮಾನ ಕಾಯ್ದವನೇ ಮೌನದಿಂದಲಿ ನಿಂನ ಧ್ಯಾನ ತತ್ವರನಾದೇ ಪನ್ನಗಶಯನನೇ ಸಲಹೊ ಕರುಣದಲೀ1 ಸನ್ನುತ ಹರಿ ನಿಂನ ಕೀರ್ತನೆ ಪಾಡುವೆ ಜಾನ್ಹಕಿ ರಮಣ ಶ್ರೀ ಕಾಕುತ್ಸ್ಥರಾಮಾ ಹೀನನ ಮಾತನ್ನು ನಲಿಯುತ್ತ ಕೇಳಿ ನೀ ಸಾನುರಾಗದಿ ಕಾಯಾ ಧೇನು ಪಾಲಕನೇ2 ಪಂಕಜನೇತ್ರ ಶ್ರೀ ಪರಮ ಪಾವನನೇ ಲಂಕೇಶನಿಗೆ ಯಮನಾದ ಶ್ರೀಧರನೇ ಶಂಕೆಯಿಲ್ಲದೆ ಕಾಯೊ ದೂರ್ವಾಪುರೇಶನೆ ಅಮಿತ ಸದ್ಗುಣಿಯೇ 3
--------------
ಕರ್ಕಿ ಕೇಶವದಾಸ
ನೆನಿಯಬಾರದೆ ಮನವೆ ಹರಿಯ ನಾಮವ ನೆನವು ಸೆಲೆಗೊಳ್ಳಲಿಕ್ಕೆ ಘನಪದವನೀವ ಸ್ವಾಮಿ ಧ್ರುವ ಅಂತು ಇಂತು ಎಂತು ಎನದೆ ತಂತು ಪಿಡಿದು ತನುವಿನೊಳು ಪಾದ 1 ಶ್ರವಣ ಕೀರ್ತನೆ ಮೊದಲಾದ ನವವಿಧ ಭಕುತಿಯಿಂದ ಸವಿದು ಸವಿದು ಸವಿದುಂಬ ಸಾರವಾದ ದಿವ್ಯನಾಮ 2 ಧನ್ಯ ಧನ್ಯನಾಗೊ ಮನವೆ ನೆನೆದು ಪತಿತಪಾವನನಾಮ ಧನ್ಯಗುರುವಿನ ದಿವ್ಯನಾಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆಯ ಬಾರದೆ ಮನವೆ ಪರಮಪಾವನನ ಪ ಸಾಕಾರದಿಂದ ಸರ್ವವನು ರಕ್ಷಿಪನಜೋಕೆಯಲಿ ತನ್ನ ನೆನೆವವರ ಪಾಲಿಪನ - ಅ-ನೇಕ ಮೂರುತಿ ಸೂರ್ಯನಾರಾಯಣನ 1 ಬ್ರಹ್ಮಾಂಡ ಕೋಟಿ ತಿಮಿರವ ಗೆಲುವವನಒಮ್ಮೆ ನೆನೆಯಲು ಪ್ರಸನ್ನನಾದವನಧರ್ಮಕ್ಕೆ ಸಾಕ್ಷಾತ್ ರೂಪಾಗಿ ತೋರುವನನಿರ್ಮಲಾತ್ಮಕವಾಗಿ ಥಳಥಳಿಸುವವನ 2 ಹರಗೆ ನಯನವಾಗಿ ಮಕುಟವ ಬೆಳಗುವನತರುಣಿಯೈವರ ಲಜ್ಜೆ ಕಾಯ್ದವನದುರಿತಕೋಟಿಗಳನುದ್ಧರಿಸುವವನಪರಬ್ರಹ್ಮ ಕಾಗಿನೆಲೆಯಾದಿಕೇಶವನಮರೆಯದೆ ಭಜಿಪರ ಕಾಯುವವನ 3
--------------
ಕನಕದಾಸ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಾತ್ಪರ ಪರಮ ಪಾವನನೆ ಪರಾಕು ಫಣಿಶಯನ ಪಾಪಘ್ನ ಪ. ಸುರಾಸುರಾರ್ಚಿತ ಪುರಾಣಪುರುಷೇ- ಷ್ಟರ ನಿರಾಮಯ ಮುರಾರಿ ಶ್ರೀಹರಿ ಅ.ಪ. ನಯವೀತಭಯ ಪಾರ್ಥಪ್ರಿಯ ಸರ್ವ ನಿಯಾಮಕ ಚಿನ್ಮಯ ದಯಾವಂತ ಜಯಾಕಾಂತ ಹಯಾಸ್ಯ ಪಯೋಬ್ಧಿಶಯನ ವಿಯಾನ 1 ರಮಾರಮಣ ನಮಸ್ತೇ ನಿರುಪಮ ಮಹಿಮ ಮಮಾಪರಾಧ ಕ್ಷಮಾ ಕುರು ವಿ- ರಾಮ ನಿಯಮ ಪದುಮದಳನಯನ 2 ಗುಣಾರ್ಣವ ಶರಣಾಗತಭರಣ ನಿ- ರ್ಗುಣ ಶ್ರೀ ಲಕ್ಷ್ಮೀನಾರಾಯಣ ಪ್ರಾಣ ಸುತ್ರಾಣ ದೇವ ಗಣಾಗ್ರಣಿಯಾನಂದ ಗೋವಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾದವನು ನಂಬಿದೆನೊ ಪರಮಪುರುಷಾ ಪಾವನನ ಮಾಡೆನ್ನ ಶ್ರೀರಂಗನಾಥ ಪ ಪಾದ ಪಾದ ಬಲಿಯ ಪಾದ ಪಾದ 1 ಪಾದ ಪಾದ ಪಾದ ಪಾದ 2 ಪಾದ ಪಾದ ಪಾದ 3 ಪಾದ ಪಾದ ಪಾದ ಪಾದ 4 ದುರುಳ ಕಂಸಾಸುರನ ಎದೆಯ ತುಳಿದ ಪಾದ ಮುಚುಕುಂದಗೆ ಮುಕ್ತಿಯನಿತ್ತ ಪಾದ ಕಿಚ್ಚು ಬಳಸಲು ಪರ್ವತವನೆತ್ತಿದ ಪಾದ5 ಶಿಲೆಯಾದ ಆಹಲ್ಯೆಯನು ಕಾಯ್ದ ಪಾದ ಪಾದ ಹರನ ಧನುವನು ಮುರಿದು ಜಾನಕಿಯ ತಂದ ಪಾದ ಪಾದ 6 ಪಾದ ಪಾದ ಸೇತುಬಂಧನ ಮಾಡಿ ಸೀತೆಯನು ತಂದ ಪಾದ ಪಾದ 7 ಪಾದ ಪಾದ ಪಾದ 8 ರಾಜಸೂಯಾಗದಲಿ ಪೂಜೆಗೊಂಡ ಪಾದ ಪಾದ ದಂತವಕ್ರಾದಿಗಳನು ಸೆಳೆದುಕೊಂಡ ಪಾದ ಪಾದ 9 ಕÀುರುಪಾಂಡವರಿಗೆ ಸಂಧಿಗೈತಂದ ಪಾದ ವಿದುರನಾ ಮನೆಯಲ್ಲಿ ಭೋಜನಗೈದ ಪಾದ ಪಾದ ದುರುಳ ದುರ್ಯೋಧನನ ಉರುಳಿಸಿದ ಶ್ರೀಪಾದ 10 ರಣದೊಳಗೆ ಅರ್ಜುನಗೆ ಸಾರಥಿಯಾದ ಪಾದ ದೊರೆ ಧರ್ಮಾದಿಗಳ [ನು] ಒಲಿದ ಪಾದ ಪಾದ ಪಾದ 11 ಪಾದ ಇಕ್ಷ್ವಾಕು ಶ್ರೀರಾಮರಾರಾಧಿಸಿದ ಪಾದ ಧರ್ಮವರ್ಮಾದಿ ಚೋಳೇಂದ್ರ ಪೂಜಿತ ಪಾದ ಪಾದ 12 ತೊಂಡಮಾನ್ ಚಕ್ರವರ್ತಿಗೊಲಿದು ಬಂದ ಪಾದ ಶೇಷಾದ್ರಿಗಿರಿಯಲ್ಲಿ ನೆಲೆಸಿರ್ಪ ಪಾದ ಪಾದ ಪಾದ 13 ಅಜನ ಯಜ್ಞಕುಂಡದೊಳಗುದಿಸಿ ಬಂದ ಪಾದ ಪಾದ ವ್ಯಾಧರೂಪಿನಲ್ಲಿ ನಡೆತಂದ ಶ್ರೀಪಾದ ಪಾದ 14 ಪಾದ ಯಾದವಾಗಿರಿಯಲ್ಲಿ ನೆಲೆಸಿರ್ಪ ಪಾದ ವರಸಂಧಿಗೃಹದಲ್ಲಿ ವಾಸವಾಗಿಹ ಪಾದ ಪಾದ 15 ಕರುಣದಿಂದರ್ಜುನಿಗೆ ಸಾರಥಿಯಾದ ಪಾದ ಕೈರವಿಣೀ ತೀರದಲಿ ನೆಲೆಸಿರ್ಪ ಪಾದಾ ರುಕ್ಮಿಣೀ ಬಲಭದ್ರರೊಡನೆ ಒಪ್ಪಿದ ಪಾದ ಕರುಣ ವೆಂಕಟಕೃಷ್ಣನೆಂಬೊ ಬಿರುದರಳ್ಳ ಪಾದಾ 16
--------------
ಯದುಗಿರಿಯಮ್ಮ
ಪೊರಿಯದಲಿರುವರೇನು ಶ್ರೀಹರಿ ನೀನು ಪ ನಿರುತ ನಿನ್ನನಾನು ಸ್ಮರಿಸುತಲಿರುವೆನು ಕೌಸ್ತುಭ ಭೂಷಾ ಹರುಷದಿ ಮಂಜುಭಾಷಾ 1 ಭವಾರ್ಣವ ಪಾರಗಾಣಿಸೋ ದೇವಾ ಸಾರಸದಲನೇತ್ರ ನೀರದ ನಿಭಗಾತ್ರ 2 ದಿನಕರ ಕೋಟಿ ತೇಜ ಘನ ಗರುಡಧ್ವಜ ವನಧಿ ಕನ್ಯಾಧವ 3 ವರಗಿರಿಧರ ಕರುಣಾಕರ ಶುಭವದನ ಶರಣರ ಕಾಯುವಂತಹ ಬಿರುದು ನಿನ್ನದೊ ಅನಂತ 4 ಪರಮ ಪಾವನನಾದ ತರುಳ ಪ್ರಹ್ಲಾದಗೊಲಿದ ನರಹರಿ `ಹೆನ್ನೆಯ ಪುರನಿಲಯ ಪ್ರಮೇಯ 5
--------------
ಹೆನ್ನೆರಂಗದಾಸರು
ಬನ್ನವನಾ ನೀಗಿದೆ ಜವದಿ ಧನ್ಯನಾದೆ ಶ್ರೀ ಗುರುವೆ ಧನ್ಯನಾದೆ ಸದ್ಗುರುವೇ ಧನ್ಯನಾದೆ ಪ ಭವಸಾಗರವಾ ದಾಟಿದೆ ಜವನ ಬಾಧೆಯ ನೀಗಿದೆ ಜೀವಭಾವವು ಸಟಿಯೆಂದೆನಿಸಿ ದೇವನಾದೆ ಪಾವನನೆ ಧನ್ಯನಾದೆ 1 ಅರಿತೆನೆನ್ನಯ ನಿಜರೂಪವನಾ ದುರಿತವ ನೀಗಿದೆ ಅರಿವಿನ ಬಲದಿ ದೊರಕಿತು ಮುಕುತಿ ಧನ್ಯನಹುದು ನಾ ನೀನೆ ನಾನೈ ಶಂಕರನೇ ಧನ್ಯನಾದೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಿಡಿ ಬಿಡಿ ಸಂದೇಹವನು ಪೊಡವಿ ಮನುಜರೆಲ್ಲಒಡೆಯನೊಬ್ಬನೆ ಜಗಕೆ ರಂಗವಿಠಲ ಪ ಹರಿಹರವಿರಿಂಚರೊಳು ಪರದೈವವಾರೆಂದುಪರಮ ಮುನಿಗಳು ವಿವಾದವನು ಮಾಡೆಸರಸಿಜಾತನ ಸುತನ ಭೃಗುವನಟ್ಟಲು ಪೋದಅರಿದು ಬಹೆನೆಂದು ಪದ್ಮಜನ ಸಭೆಗೆ1 ಮುನಿವರನು ಕಂಡು ಪದ್ಮಜಗೆ ವಂದಿಸದಿರಲುವನಜಭವ ಕೋಪವನು ಮಾಡಿ ಜರಿಯೆಮುನಿ ಪರಮ ತತ್ತ್ವ ಇವನಲ್ಲವೆಂದೆನೆ ಕನಲಿಮನಸಿಜವೈರಿಯ ಲೋಕಕೆ ಪೋದನು 2 ಹರ ಕಂಡು ಭೃಗುಮುನಿ ಬರಲು ತನ್ನನುಜನೆಂದುಭರವಸೆಯಲೆದ್ದು ತಕ್ಕೈಸ ಪÉÇೀಗೆ ಜರಿದು ಹರನನು ಮುಟ್ಟದಿರೆ ಶಂಕರನು ಕನಲಿಕರೆದ ಶೂಲವ ಜಡಿದು ಕೊಲಲುಬಗೆದ 3 ಹರನ ಕೋಪವ ಕಂಡು ಗಿರಿಜೆ ಚರಣವ ಪಿಡಿದುಕರುಣಿ ಮುನಿಯನು ಕಾಯಬÉೀಕೆಂದೆನಲುಮರಣ ಭಯದಿಂದ ನಿರ್ಮುಕ್ತನಾಗಿ ಮುನಿವರನು ಸರಸಿಜನಯ್ಯನಿಪ್ಪ ವೈಕುಂಠಕೆ ಪೋದನು 4 ಅಲ್ಲಿ ಮಹಲಕ್ಷುಮಿಯ ತೊಡೆಯಲ್ಲಿ ಪವಡಿಸಿ ಇರಲುಫುಲ್ಲನಾಭನ ಚರಣದಿಂದಲೊದೆಯೆಮೆಲ್ಲನೆ ಪಾದವ ಪಿಡಿದು ಮುನಿವರಗೆ ಪೊಡಮಟ್ಟುಇಲ್ಲಿ ಬಿಜಯಂಗೈಸಬೇಕೆಂದನು 5 ಪರಮ ಮುನಿ ನಿಮ್ಮ ಪದ ಸೋಂಕಲು ಪಾವನನಾದೆಚರಣರಜ ಪರಮ ಪಾವನ ಸುಲಭವೆಸಿರಿಗೆ ನೆಲೆವನೆಯಾದೆ ಪದಸಂಗದಿಂದಲೆನೆಪರಮ ಹರುಷದಲಿ ಮುನಿತನುವ ಮರೆದ 6 ಪರತತ್ವವನು ಕಂಡು ಬಂದು ಮುನಿವರನಂದುಒರೆಯೆ ಋಷಿವರರಿಗವರವರ ಪರಿಯಅರಿದರಾ ಮುನಿವರರು ಹರಿಯೆ ಪರದೈವವೆಂದುನೆರೆ ತಿಳಿದು ಭಜಿಸಿ ನರಹರಿಯ ಹರಿಯ 7 ಸುರರು ಕಡೆಯೆ ಕಡಲೊಳಗಿರ್ದಮಡದಿ ಮಹಾಲಕ್ಷುಮಿ ಅವತರಿಸಿ ಬರಲುಮೃಡ ಕಮಲಜ ಸುರಮುಖ್ಯರನು ಜರಿದು ಸಿಂಧುವಿನದಡದಲ್ಲಿ ಹರಿಯ ವರಿಸಿದಳು ವರನೆಂದು 8 ಕರಿಪತಿಯ ಸರಸಿಯೊಳು ಮೊಸಳೆ ಪಿಡಿಯಲು ಭರದಿಪರಮ ಪುರುಷ ಜಗತ್ಪತಿಯೆನಲುಗರುಡವಾಹನನಾಗಿ ಹರಿ ಬಂದವನ ಕಾಯ್ದಪರದೈವವಾರು ಜಗದೊಳಗೆ ಪೇಳಾ9 ರಾಜಸೂಯವ ಧರ್ಮಸುತ ಮಾಡೆ ಅವನಗ್ರ-ಪೂಜೆಗರುಹರು ಸುರರೊಳಾರೆಂದೆನಲುಭಾಜನನು ಸದ್ಗುಣನು ಕೃಷ್ಣನೊಬ್ಬನೆಯೆಂದುರಾಜಸಭೆಯಲಿ ದೇವವ್ರತ ನುಡಿದನು 10 ಗಂಗೆ ಈತನ ಪಾದಸಂಗದಿ ಪಾವನವೆನಲುಗಂಗಾಧರನು ಪರಮ ದಾಸನೆನಲುಮಂಗಳಾತ್ಮಕ ವಿಶ್ವಜನ್ಮಾದಿ ಕಾರಣನುರಂಗವಿಠಲರೇಯನ ನೆರೆನಂಬಿರೋ 11
--------------
ಶ್ರೀಪಾದರಾಜರು
ಭಗವನ್ನಾಮವನಾಡು ಅಡಿಗಡಿ| ಗಾಡು ಅಡಿಗಡಿಗಾಡು ಅಡಿಗಡಿ ಪ ಭಗವನ್ನಾಮದ ಸುಧೆಯನು ಸೇವಿಸಿ | ಸೊಗದಿಂ ನಲಿನಲಿದಾಡು ಅಡಿಗಡಿ ಅ.ಪ ಪಾಪವ ನೀಗಿ ಪಾವನನಾಗಿ| ಶ್ರೀಪತಿಯನು ಕೂಡ್ಯಾಡು ಅಡಿಗಡಿ 1 ಪಾಮರಗೋಲಿದಾ ರಾಮನ ನಾಮವ | ಪ್ರೇಮದಿ ಮನದೊಳಗಾಡು ಅಡಿಗಡಿ 2 ತರುಣಿಯ ಸೀರೆಗೆ ಅಕ್ಷಯವಿತ್ತ | ಕೃಷ್ಣನ ನಾಮವನಾಡು ಅಡಿಗಡಿ3 ದಾಸಜನರ ಮನದಾಸೆಯ ಸಲಿಸುವ | ವಾಸುದೇವನ ಕೂಡ್ಯಾಡು ಅಡಿಗಡಿ 4 ಇಂಗಿತವೀಯುವ ಮಂಗಳಮಹಿಮ | ರಂಗನ ನಾಮವ ನಾಡು ಅಡಿಗಡಿ 5 ಮರಣಕಾಲದೊಳಜಾಮಿಳಗೊಲಿದಾ | ನಾರಾಯಣ ನೊಡನಾಡು ಅಡಿಗಡಿ 6 ವೆಂಕಟರಮಣನ ಸಂಕಟಹರಣನ | ಕಿಂಕರನಾಗಿ ನೀನಾಡು ಅಡಿಗಡಿ 7
--------------
ವೆಂಕಟ್‍ರಾವ್
ಭಜನೆಯೊಳಿರುವದೆ ಜನ್ಮಕೆ ಯೋಗ್ಯ ಪ ಭಜನೆಯಿಂದ ಪೂಜಿಸುತಾನಂದದಿ 1 ಸ್ತೋತ್ರಗೈದು ಹರಿ ಕೀರ್ತನೆಯಿಂದಲಿ 2 ಹಾದಿ ಬಿಟ್ಟು ಗುರು ಬೋಧೆಯ ಮನನದಿ 3 ಸತಿ ನಾಥನೆ ಪತಿತ ಪಾವನನೆಂದೆಣಿಸುತ 4 ಯೋಗಾಧೀಶ ಸದಾನಂದನಾಗಲು 5
--------------
ಸದಾನಂದರು
ಭವ ಪರಿಹಾರ ಪಾವನನಾಮ ಪ ಕಮಲಜ ಜನಕಾ ಕಾಮಿತ ಫಲದಾಯಕಾ ಅಮಿತ ಪರಮಾನಂದ ಆದಿಮೂರುತಿ ಗೋವಿಂದಾ 1 ಸಕಲಗುಣ ಪರಿಪೂರ್ಣ ಶಾಶ್ವತ ಸಂಪನ್ನ ಮುಕುತಿ ರಾಮಕೃಷ್ಣ...............ರುತಿ ಮೋಹನಾ 2 ಸುಂದರರೂಪಾ ಸುಗುಣ ಪ್ರತಾಪ ಇಂದಿರೆ ರಮಣ ಶ್ರಿತ ಜನ ಪೋಷಣ 3 ದಶ ಅವತಾರಾ ದೈತ್ಯ ಸಂಹಾರಾ ಪಶುಪತಿ ಪಾಲಕಾ ಪಾವನೋದಕ ಜನಕಾ 4 ಹರಿ `ಹೆನ್ನ ವಿಠಲಾ ' ಅಧಿಕ ಸುಶೀಲಾ ಪರಮ ಭಕ್ತ ವಿಲಾಸಾ ಪಾಲಿತ ಜಗದೀಶಾ 5
--------------
ಹೆನ್ನೆರಂಗದಾಸರು
ಮನ್ಮಥನಯ್ಯನ ಮನದಲಿ ಸ್ಮರಿಸಿರೊ ಮನ್ಮಥ ನಾಮ ಸಂವತ್ಸರದಿ ಪ ಸುಮ್ಮನೆ ಕಾಲವ ಕಳೆಯುವದೇತಕೆ ಬ್ರಹ್ಮನಪಿತ ನಂಘ್ರಿಗಳ ಭಜಿಸುತ ಅ.ಪ ಬಂಧು ಬಳಗ ಮಂದಿಮಕ್ಕಳೆಲ್ಲರು ಕೂಡಿ ಒಂದೆ ಸ್ಥಳದಿ ಭಜನೆಯಮಾಡಿ ಇಂದಿರಾರಮಣನ ಚಂದದಿ ಪೊಗಳಲು ಬಂದ ದುರಿತಗಳ ಪೊಂದಿಸನೆಂದೆಂದು 1 ಮಾಕಮಲಾಸನ ಲೋಕದ ಜನರಿಗೆ ತಾಕಾಣಿಸಿ ಕೊಳ್ಳದೆ ಇಹನು ಶ್ರೀಕರ ಸಲಹೆಂದು ಏಕ ಭಕುತಿಯಲಿ ಲೋಕವಂದ್ಯನ ಸ್ತುತಿಗೆ ನೂಕುವ ಅಘಗಳ 2 ಅತಿಶಯದಿಂದಲಿ ಸತಿಸುತರೆಲ್ಲರು ಪತಿತಪಾವನನ ಕೊಂಡಾಡುತಲಿ ಗತಿ ನೀನಲ್ಲದೆ ಮತ್ತೆ ಹಿತರ್ಯಾರಿಲ್ಲವೆನೆ ಸತತ ಸುಕ್ಷೇಮವಿತ್ತು ಪಾಲಿಸುವಂಥ 3 ಶ್ರಮವ ಪರಿಹರಿಸೆಂದು ನಮಿಸಿಬೇಡುವ ಭಕ್ತ ಜನರನು ಸಂತೈಸುತಲಿಹನು ಹನುಮ ಭೀಮ ಮಧ್ವಮುನಿಗಳ ಸೇವಿಪ ಮನುಜರ ಮನೋರಥಗಳನೆ ಪೂರೈಸುವೊ 4 ವತ್ಸರ ಆದಿಯಲಿ ಅಕ್ಷರೇಡ್ಯನ ಪಾದ ಕ್ಷಿಪ್ರದಿಂದಲಿ ಸೇವಿಪ ನರನ ಭಕ್ತವತ್ಸಲ ತನ್ನ ಭಕ್ತರ ಸಂಗದೊಳಿಟ್ಟು ಸಂತೈಸುವ ಸತ್ಯಸಂಕಲ್ಪ ಶ್ರೀ5 ತಾಳ ತಂಬೂರಿ ಸುಸ್ವರಗಳಿಂದಲಿ ಬಹು ನೇಮದಿಂದಲಿ ಸರುವರು ಕೂಡಿ ಗಾನಲೋಲನ ಭಜನೆಯ ಮಾಡುತ ಸತ್ಯ ಸ್ವಾಮಿಯ ಗುಣಗಳ ಪೊಗಳುವ ಸುಜನರು 6 ಸಡಗರದಿಂದಲಿ ಕಡಲೊಡೆಯನ ಗುಣ ಪೊಗಳುತ ಹಿಗ್ಗುತ ಅಡಿಗಡಿಗೆ ಕಡಲ ಶಯನ ಕಮಲನಾಭ ವಿಠ್ಠಲನೆಂದು ತೊಡರು ಬಿಡಿಸುವ ಶ್ರೀ 7
--------------
ನಿಡಗುರುಕಿ ಜೀವೂಬಾಯಿ