ಒಟ್ಟು 459 ಕಡೆಗಳಲ್ಲಿ , 61 ದಾಸರು , 419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಉಪಕೃತಿ ಎನ್ನದಲ್ಲ ನರಹರಿ ಕೃಪೆ ಕಾರಣವಿದಕೆಲ್ಲ ಪ ಅಪರಾಧಗಳನು ಮನ್ನಿಸಿ ಪೊರೆಯುವ ವಿಪುಲ ಕೃಪಾನಿಧಿ ಹರಿಯಲ್ಲದೆಲೆ ಅÀ.ಪ. ಜೀವ ಪರಾಧೀನ ಸ್ವತಂತ್ರ ರಾ ಜೀವದಳನಯನ ಸರ್ವೋತ್ತಮ ಪ್ರಭು ಕರಿಗಿರೀಶನೆ ಜಗ ಜೀವನ ಪಾವನ ಪ್ರೇರಕನಲ್ಲದೆ 1
--------------
ವರಾವಾಣಿರಾಮರಾಯದಾಸರು
ಎಂತು ದೊರೆವುದೋ ಇಂತು ನರದೇಹ ಮುಂದೆ ಬಾಹ ದಿನ್ನೆಂದಿಗೆ ಇಚಿದು ಕರುಣಿಸಿ ಸಲಹುಯನ್ನ ಮು| ಕುಂದ ನಿನ್ನಂಘ್ರಿಗಳ ತೋರಿಸಿ 1 ಮೊದಲೇ ದುರ್ಲಭ ಮನುಷ್ಯಾಂಗವು ಅದರೊಳುತ್ತಮ ವರ್ಣದಿ ಉದಿಸಿ ಭಗವಂತಾಂಘ್ರಿ ದರುಶನ ವದಗಿ ಗತಿಗೈದಿಸುವ ಜನುಮವು 2 ಗುರುಹಿರಿಯರೆಂದೆರಿಸಿ ಅವರನು ಸ್ಮರಿಸಿ ಭಕ್ತಿಗೆ ಸೇರಿಸಿ ಮರೆಸಿ ಅನ್ಯವ ಬೆರೆಸಿ ನಿಜದೊಳು ತರಿಸಿ ತಾರಿಸುತಿಹ ಜನುಮವು 3 ಹರಿಯ ಲಾಂಛನ ಪೌಂಡ್ರವು ಕೊರಳು ತುಳಸಿಯ ಮಾಲೆಯಾ ಧರಿಸಿದಂಡಿಗೆ ವಿಡಿದು ಮಾಧವ ಚರಿತ ಪಾಡುತ ನಲಿವ ಜನುಮವು 4 ತನ್ನವರ ಪರಿಚಾರಕೆನಿಸುವ ಘನ್ನ ಬಿರದಿಗೆ ಪಾಲಿಸೀ ಸನ್ನುತನೆ ಗುರುಮಹಿಪತಿ ಪ್ರಭು ನಿನ್ನ ವಲುಮಿಂದಾದರಾಗಲಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಮಹಿಮರು ನೋಡಿ - ಶ್ರೀ ರಾಘವೇಂದ್ರರು ಎಂಥಾ ಮಹಿಮರೋ ಪ ಕೊನೆಗಾಣೆನಿವರ ಅದಭುತ ಮಹಿಮೆಯನ್ನು ಅ.ಪ. ವರ ಮಂತ್ರಾಲಯದೊಳು ಬಂದು ನಿಂದಿಹರು 1 ನಿಮ್ಮ ಸ್ತುತಿಸಿ ಕೊಂಡಾಡುತಿಹರು 2 ಒಂದೇ ಮನದಿಂದ ಒಂದು ಪ್ರದಕ್ಷಿಣೆ ನಮಿಸಲು ಭವಬಂಧಗಳ ಬಿಡಿಸಿ ಆನಂದದಿ ಸಹಲುವರು 3 ಮೊದಲು ನಿಮ್ಮ ಸೇವಿಸೆ ಪಾವನಗೊಳುವರು4 ಪೀಡೆ ಪಿಶಾಚಿಗಳಿಂದ ಪೀಡಿತರಾಗುತ ನಿಮ್ಮಡಿಗೆರಗಲು ಕಡುದಯ ಮಾಡುವಿರಿ5 ಶ್ರೀರಾಘವೇಂದ್ರಾಯ ನಮಃ ಎಂಬ ದಿವ್ಯನಾಮವ ಪಠಿಸಲು ಪ್ರಭುಗಳು ಪಾವನ ಮಾಡುವರು 6 ಧರೆಯೊಳು ನಿಮ್ಮ ಸರಿಯಾರಿಹರೊ ಪ್ರಭು ಗುರುಸಾರ್ವಭೌಮರು | ಶ್ರೀ ರಾಘವೇಂದ್ರರು7
--------------
ರಾಧಾಬಾಯಿ
ಎಂಥಾ ಮೋಹನನೇ ನೋಡಮ್ಮಯ್ಯಾ| ಸಂತತ ತೃಪ್ತನು ಬಾಲಕನಾದಾ|ಅ- ನಂತ ಚರಿತೆಯಾ ದೋರುವ ಕೃಷ್ಣ ಪ ಮೂಡಣ ದೇಶಕೆ ಪಡರಲು ಗೋಪಿಯು| ತಡೆಯದೆ ದುಮುಧುಮು ಧುಮುಕೆನುತ| ಕಡೆಯಲು ಧುಡು ಧುಡು ಧುಡುನಡೆಯುತ ಬಂದು| ಪಿಡಿದೆನ್ನ ಸೆರಗ ಬೆಣ್ಣೆ ಬೇಡುವಾ ಕೃಷ್ಣ 1 ಸಮಗೆಳೆಯರ ಸಂಗಡ ಧ್ವನಿವೇಣಿಯ| ಉಮಟೆಸುತಲಿ ಧಿಗಿಧಿಗಿಲೆನುತಾ| ಧಿಮಿಕಿಟ ಧಿರಕಿಟ ತಿರುಕಿಟವೆಂಬೋ| ಕ್ರಮದಿ ವಾದ್ಯವ ಬಾರಿಸುವಾ ಕೃಷ್ಣ 2 ಗುರು ಮಹೀಪತಿ ಪ್ರಭುವಿನ ಪದರಜ| ದೊರಕದು ಅಜಭವ ಮುಖ್ಯರಿಗೆ! ಹರುಷದಿ ತೋಳ್‍ದೊಡೆ ಮೇಲೆ ಓಡಾಡುವಾ| ಧರೆಯೊಳು ಯಶೋಧೆ ಸುಕೃತವೆಂತೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದೆಂದಿಗೂ ನಾ ಬಿಡೆ ನಿನ್ನ ಚರಣಾ ಬಂದೆನ್ನ ಕಾಯೊ ಶ್ರೀ ವೇಂಕಟರಮಣಾ ಪ ಪಟ್ಟಿ ಪೀತಾಂಬರ ತೊಟ್ಟ ಮುತ್ತಿನ ಹಾರಾ ವೈಜಯಂತಿ ಸುಂದರ ವದನ ಶುಭಾಂಗ ಮನೋಹರಾ ಮಕರ ಕುಂಡಲಧರ ಮೋಹನ ರೂಪಾ1 ನಿತ್ಯ ಕಲ್ಯಾಣನೆ ನಿಗಮ ಗೋಚರನೆ ಅಕಳಂಕ ಚರಿತನೆ ಸಕಲರಪಾಲಿಪ ಅನಂತ ರೂಪಾ ಶ್ರೀ ವೆಂಕಟೇಶಾ2 ಪರಮ ಕಲ್ಯಾಣ ಗುಣಾರ್ಣವನೇ ದುರಿತ ವಿದೂರನೆ ಪರಮದಯಾ ನಿಧೆ ವರಗಿರಿವಾಸಾ 3 ಘಾಸಿ ಗೊಂಡಿಹೆ ಭರದಿ ಕ್ಲೇಶ ಪಾಶಂಗಳ ಪರಿಹರಿಸಯ್ಯಾ ವಾಸುದೇವನೆ ನಿಮ್ಮ ನಾಮ ಸ್ಮರಿಸುವಂತೆ ನಿತ್ಯ ಪಾಲಿಸು ಪ್ರಭುವೆ4 ಸುರಮುನಿ ವಂದ್ಯನೇ ಸುರನರ ಸೇವ್ಯನೇ ಶರಣರ ಪಾಲಿಪ ಸರ್ವೋತ್ತಮನೇ ತಿರುಪತಿವಾಸನೆ ತಿರುಮಲೆ ಶ್ರೀಶನೇ ಶೇಶಗಿರೀಶನೆ ಶ್ರೀ ವೇಂಕಟವಿಠಲನೇ 5
--------------
ರಾಧಾಬಾಯಿ
ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1 ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2 ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗಿನ್ಯಾತರ ಹಂಗೇನು | ಘನ ಗುರು ತಾನಾದ ಶ್ರಯಧೇನು ಪ ಸುರಲೋಕ ಪದವಿಯ ಸುಖದಿಚ್ಛೆಯಾತಕ | ಪರಗತಿ ದಾಯಕ ದೊರಕಿರಲಿಕ್ಕೆ 1 ರಿದ್ದಿ ಶಿದ್ದಿಗಳೆಂಬ ಮಾತಿನ ಗೊಡವಿಲ್ಲಾ | ಪಾದ ಕಮಲಾ 2 ಹಂಬಲಿಸೆನು ಯೋಗ ಭೋಗ ಮುಕ್ತಿಯ ನಾಲಕು | ಅಂಬುಜಾಕ್ಷನ ಸೇವೆಲಿರುವುದೇ ಸಾಕು 3 ತಂದೆ ಮಹೀಪತಿ ಪ್ರಭು ದಯದಿಂದಲಿ | ಕಂದಗ ವಿಶ್ರಾಂತಿ ಇದಿರಿಟ್ಟಿರಲಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎನ್ನನ್ನು ನೀ ಮರೆವರೆ | ಮೋಹನ್ನ ದೈವತರನ್ನ ವಿಠಲರಾಯಾ ಪ ಚಿನ್ನದಾಸೆಗೆ ತಿರುಗುವೆ | ನಿರಂತರ ನಿನ್ನ ಚರಣಕೆರಗುವೆಮನ್ನಿಸೆನ್ನಯ ಬಿನ್ನಹವನ್ನು ದೇವಾ 1 ಬಲ್ಲವರಿಗೆ ನಾನರಿಯೆನು ಪ್ರಭುವೆ | ನೀನಲ್ಲದನ್ಯರಿಗೆಕರೆಯೆನು | ಇಲ್ಲಿದೆಲ್ಲ ಒಲ್ಲೆನಿಸೋ ದೇವಾ 2 ತಂದೆ ತಾಯೆಂದು ನಂಬಿದೆ ರುಕ್ಮೇಶನ ಹೊಂದಿ ಮುದದಿಂದತುಂಬಿದೆ | ಕಂದನೆಂದು ಬಂದು ಬಿಡಿಸೊ ದೇವಾ 3
--------------
ರುಕ್ಮಾಂಗದರು
ಎಲ್ಲಿರುವೆ ಬಾರಯ್ಯದೇವ ಬಲ್ಲಿದ ನೀನೆ ಅನಾಥಜನಜೀವ ಪ ಪುಲ್ಲನಾಭ ನೋಡೆನ್ನ ಪರಿಭವದ ದು:ಖವನು ನಿಲ್ಲದೆ ದಯಮಾಡು ಬೇಗದೊಳಭವ ಅ.ಪ ಕ್ಷಣಕ್ಷಣಕೆ ಒದಗುತಿಹ್ಯ ದಣಿವು ಬೇನ್ಯಾಪತ್ತು ಅನುಪಮ ಬಡತನದ ಘನ ಘನ ವಿಪತ್ತು ದಿನದಿನ ಪರರನು ಮಣಿದುಬೇಡುವ ಹೊತ್ತು ಇನಿತೆಲ್ಲ ಕನಿಕರದಿ ನೀನೆ ಕಳೆಯಭವ 1 ಕನಕ ವಸ್ತ್ರಾಭರಣ ವನಿತೆಗ್ಹಾಕುವ ಚಿಂತೆ ಧನಧಾನ್ಯವಿಲ್ಲೆಂಬ ಎಣಿಕಿಲ್ಲದ ಚಿಂತೆ ಮನಕೆ ತುಸುಗೊಡದ ರಿಣಬಾಧದ್ದತಿ ಚಿಂತೆ ವನಜಾಕ್ಷ ಕೃಪೆಯಿತ್ತು ನೀನೆ ಬಿಡಿಸಯ್ಯ 2 ಧರೆಯಸುಖೆನಗಿಲ್ಲೆಂಬ ಪರಿಪರಿಯು ಉರಿ ತಾಪ ಪರರಸೇವೆಯ ಮಾಡ್ವ ಪರಮ ಪರಿತಾಪ ಜರಜರಕೆ ಬಂದು ಆವರಿಸುವುವು ಮಹಪಾಪ ಪರಹರಿಸೆಲವೋ ಶ್ರೀರಾಮಪ್ರಭು ಭೂಪ 3
--------------
ರಾಮದಾಸರು
ಎಷ್ಟು ಪೊಗಳಿದರೇನೀ ಭ್ರಷ್ಟಮಾನವರು ಪಾದ ಪ ಸ್ವಾಭಿಮಾನ ನೀಗಿ ದೇಹಾಭಿಮಾನ ತೊರೆಯದೆ ಪ್ರಭುನಿನ್ನ ನಿಜಲೀಲೆ ಸೊಬಗು ತಿಳಿಯುವುದೆ 1 ಭ್ರಷ್ಟ ಭ್ರಾಂತಿಗಳಳಿದು ದುಷ್ಟನಡೆ ನೀಗದೆ ಶಿಷ್ಟರೊಡೆಯ ನಿನ್ನ ನಿಜಗುಟ್ಟು ತಿಳಿಯುವುದೆ 2 ವಿಷಯವಾಸನೆ ನೀಗಿ ಹಸನುಮಾಡದೆ ಮನವ ಶ್ರೀಶ ಶ್ರೀರಾಮ ನಿನ್ನ ದಾಸತ್ವಬಹುದೆ3
--------------
ರಾಮದಾಸರು
ಏನ ಬೇಡಲಿ ನಾನು ಏನ ನೀಡುವೆಯೋ ನೀನು ನೀನೆನ್ನ ಪ್ರಭುವಾಗಿರೆ ಹೇಳೋ ರಂಗ ಪ ನಾನಿನ್ನ ವಂದಿಸಿ ಧ್ಯಾನವ ಗೈವಾಗ ಏನನೀ ಕೊಡಲಾರೆ ಹೇಳೋ ರಂಗಯ್ಯಅ.ಪ ಕರಣಕಾರಣ ನೀನು ಕೊರಡಬೊಂಬೆಯು ನಾನು ಕರವ ಪಿಡಿದು ಎನ್ನ ನಡೆಸುವೆ ನೀನು ಕಾನನ ಸಿರಿ ಸುಖ ಭೋಗವು ಸ್ಥಿರವಲ್ಲ ಹರಿ ನಿನ್ನ ಚರಣಸೇವೆಯೆ ಸಾಕೋ 1 ಬೇಡಿ ಬೇಡಿ ನಿನ್ನ ಕಾಡುವ ಮನವೀಯಬೇಡಯ್ಯ ನೀಡಯ್ಯ ಮಂಗಳನಾಮಂಗಳ ಪಾಡಿ ಕೊಂಡಾಡುತ ನಾಡೆ ವಂದನೆಗೈವ ರೂಢಿ ಒಂದಿರಲಿ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್