ಒಟ್ಟು 213 ಕಡೆಗಳಲ್ಲಿ , 50 ದಾಸರು , 189 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೌತುಕವು ನೋಡಿ ಮಹಾ ಗುರುನಾಮಮಹಿಮೆಯು ಬಯಲು ವಿದ್ಯವು ಕೇಳಿ ಭಾವಿಕರೆಲ್ಲ ಧ್ರುವ ಶೂನ್ಯ ಮಂಡಲದಿ ನಿಶ್ಯೂನ್ಯ ಬೀಜದ ವೃಕ್ಷ ಮಾನ್ಯಮೋನದಲಿ ಬೆಳೆಯುತಿಹ ವೃಕ್ಷ ನೋಡಿ 1 ಬಯಲು ಭಾವದ ಪುಷ್ಪ ನಿರ್ಬೈಲ ಸಾಫಲವು ಸುವಾಸನೆಯ ಗೊಂಚಲವು ಜಡಿವೃತ ದಿವ್ಯಾಮೃತ ಫಲವು ಸವಿಯು ಸೇವಿಸುವದಕೆ ಹೊಯಲುವಾದರು ಮಹಾಮಹಿಮರಿದು ನೋಡಿ2 ತಾಯಿ ಇಲ್ಲದ ಶಿಶುವು ಕಾಯವಿಲ್ಲದೆ ಬಂದು ಕೈಯವಿಲ್ಲದೆ ಕೊಂಡು ಸೇವಿಸುವದು ಬಾಯಿ ಇಲ್ಲದ ನುಂಗವದು ಕಂಡು ಮಹಿಪತಿಯು ಕೈಯ ಮುಗಿದನು ಗುರುವಿಗೆ ತ್ರಾಹಿಯೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಳಿಸಿಕೊಳ್ಳಿರೊ ಸಾಧು ಸಜ್ಜನರ ಸಂಗವ ಗಳಿಗಿಯೊಳು ದೋರಿಕೊಡುವರು ಅಂತರಂಗವ ಧ್ರುವ ಹೊಟ್ಟಿಗೆ ಮೊಟ್ಟಿಗೆ ಕಟ್ಟು ಹೋಗಬ್ಯಾಡಿರೊ ಹುಟ್ಟಿಬಂದ ಮ್ಯಾಲೆ ಹರಿನಾಮ ಘಟ್ಟಗೊಳ್ಳಿರೊ ಗುಟ್ಟಲಿದ್ದ ವಸ್ತು ನೀವು ಮುಟ್ಟಿ ಮನಗಾಣಿರೊ ಕೆಟ್ಟ ಗುಣಕಾಗಿ ಬಿದ್ದು ಸಿಟ್ಟು ಹಿಡಿಯಬ್ಯಾಡಿರೊ 1 ಹೊನ್ನಿಗೆ ಹೆಣ್ಣಿಗೆ ಬಾಯಿ ತೆರಿಯಬ್ಯಾಡಿರೊ ಕಣ್ಣಗೆಟ್ಟು ಹೋಗಿ ನೀವು ದಣ್ಣನೆ ದಣಿಯಬ್ಯಾಡಿರೊ ಹೆಣ್ಣಿಗಾಗಿ ರಾವಣೇನು ಪಡೆದುಕೊಂಡ ಕಾಣಿರೊ ಹೊನ್ನಿಗಾಗಿ ವಾಲಿ ಏನು ಸುಖವ ಪಡೆದ ನೋಡಿರೊ 2 ಉರ್ವಿಯೊಳು ಬಂದು ನೀವು ಗರ್ವಹಿಡಿಯ ಬ್ಯಾಡಿರೊ ಕೌರವೇಶ ಮಣ್ಣಿಗೆ ಗರ್ವಹಿಡಿದು ಕೆಟ್ಟ ನೋಡಿರೊ ಅರ್ವಪಥವ ಬಿಟ್ಟು ಮರ್ವಿಗ್ಹೋಗಬ್ಯಾಡಿರೊ ಸರ್ವಸಾರಾಯ ಸುಖ ಹರಿಯ ಭಕ್ತಿ ಮಾಡಿರೊ 3 ಕಾಮ ಕಳವಳಿಗಿನ್ನು ಕುಣಿದು ಕೆಡಬ್ಯಾಡಿರೊ ನೇಮದಿಂದ ಸ್ವಾಮಿ ಶ್ರೀಪಾದ ಬೆರೆದು ಕೂಡಿರೊ ನಾಮರೂಪಕವಗಿ ಬಿದ್ದು ಹಮ್ಮು ಹಿಡಿಯಬ್ಯಾಡಿರೊ ತಾಮಸೆಂಬ ದೈತ್ಯನ ಸುಟ್ಟು ಹೋಮಮಾಡಿರೊ 4 ಭವ ಬಂಧವಾದ ದುಸ್ತರ ಹೋಳಿಯಾಡಬೇಕು ಒಂದೆ ಸೀಳಿ ಮದಮತ್ಸರ ಹೇಳಿಕೊಟ್ಟ ಗುರುವಿನ ಕೊಂಡಾಡಬೇಕು ಎಚ್ಚರ ಬೋಧ ಶ್ಯಾಸ್ತರ 5 ಲೋಕವೆಲ್ಲ ಬಂದು ಹೊನ್ನ ಹೆಣ್ಣು ಮಣ್ಣಿಗಾಯಿತು ಬೇಕಾದ ವಸ್ತು ಬಿಟ್ಟು ಪೋಕುಬುದ್ಧಿಗ್ಹೋಯಿತು ಸುಖ ಸೂರೆಗೊಳ್ಳದೆ ತೇಕಿ ದಣಿದುಹೋಯಿತು ಏಕವಾಗಿ ನೋಡಲು ದೈಥಯ್ಯಗೊಟ್ಟಿತು 6 ಮಹಿಪತಿಯ ಸ್ವಾಮಿಯ ನೆನೆದು ಒಮ್ಮೆ ನೋಡಿರೊ ಇಹಪರಸುಖ ಸೂರ್ಯಾಡಿ ನಲಿದಾಡಿರೊ ಮಹಾಮಹಿಮೆದೋರುತದೆ ಮಯ್ಯ ಮರಿಯಬ್ಯಾಡಿರೊತ್ರಾಹಿತ್ರಾಹಿ ಎಂದು ಮನಗಂಡು ಕುಣಿದಾಡಿರೊ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರಾಜಾ ಗುರು ಸಾರ್ವಭೌಮ ಪ ಗುರುರಾಜಾ ಗುರಸಾರ್ವಭೌಮ ನಿನ್ನಯ ಪಾದ ಸರಸಿಜಯುಗಕಭಿ ನಮಿಸುವೇ ಅ.ಪ ಕರುಣ ಸಾಗರನೆಂದು ಚರಣವ ನಂಬಿದೆ ಶರಣನ ಪಾಲಿಸು ಕರುಣಿಯೇ 1 ಅನ್ಯರ ಭಜಿಸದೆ ನಿನ್ನನ್ನೆ ಭಜಿಸುವೆ ಎನ್ನ ಮರೆವೊದಿದು ನ್ಯಾಯವೇ 2 ಪರಮ ಪುರುಷನೆ ನಿನ್ನನು ಚರನೆನಿಸಿ ಧರೆಯೋಳು ನರರÀನ್ನ ಬೇಡೊದು ಘನತೆಯೆ 3 ಸುರನು ಮನೆಯಲ್ಲಿ ಸ್ಥಿರವಾಗಿ ಇರಲಿನು ತಿರಕ ತಕ್ರಕೆ ಬಾಯಿ ತೆರೆವೋರೇ 4 ಬೇಡಿದ ಮನೋರಥ ನೀಡುವ - ನೀನಿರೆ ಬೇಡೆನೆ ನರರನ್ನ ನೀಡೆಂದೂ 5 ಸಂತತ ಎನ ಕಾರ್ಯ ವಂತರಿಲ್ಲದೆ ನೀ - ನಿಂತು ಮಾಡುವದು ಪುಶಿಯಲ್ಲ 6 ಕಾಲಕ್ಕೆ ಸುಖದುಃಖ - ಮೇಲಾಗಿ ಬರುತಿರೆ ಪೇಳಿ ಎನ್ನನು ನೀ ಪಾಲಿಸುವಿ 7 ನಿನ್ನ ಸೇವಿಪರಿಗೆ ಇನ್ನುಂಟೆ ಭಯ ಶೋಕ ಉನ್ನತ ಸುಖದೊಳಗಿರುವರೋ 8 ಭವ ಬನ್ನ ಬಡುವದಿದು ಎನ್ನಪರಾಧವದೇನಯ್ಯಾ 9 ಕುಚ್ಛಿತ ಜನರನ್ನ - ತುಚ್ಛ ಮಾಡದÀಲವರ ಇಚ್ಛೆಕಾರ್ಯವ ಮಾಡಿ ಸಲಿಸುವಿ 10 ಜನನಿ ಪುತ್ರಗೆ ವಿಷsÀ - ವಿನಯದಿ ನೀಡಲು ಜನಕ ತನಯನ ತಾ ಮಾರಲು 11 ವಸುಧೀಶ ವೃತ್ತಿಯ - ಕಸಕೊಂಡ ವಾರ್ತೆಯ ವ್ಯಸನದಿ ಆರಿಗೆ ಉಸರೋದೋ12 ಇದರಂತೆ ನೀ ಮಾಡು - ವದು ಏನು ನ್ಯಾಯವೊ ಪದುಮನಾಭನ ಪ್ರಿಯ ಗುರುರಾಯ 13 ಮೂಕ ಬಧಿರ ಕುರುಡಾ - ನೇಕ ಜನಕೆ ಕಾರ್ಯವಿ - ವೇಕ ಮಾಡಿ ನೀ ಸಲಹಿದಿ 14 ಬಂದು ಬೇಡಿದ - ಮಹ - ವಂಧ್ಯಜನರಿಗೆ ಸು - ಕಂದರ ನೀನಿತ್ತು ಸಲಹುವೀ 15 ಭೂತಾದಿ ಬಾಧವ - ನೀತರಿದು ಸುಖಗಳ ವ್ರಾತವ ಸಲಿಸೀ ಪಾಲಿಸುವಿ 16 ಹಿಂದಿನ ಮಹಿಮ - ದಿಂದೇನು ಎನಗಯ್ಯ ಇಂದು ಮಹಾ ಮಹಿಮೆ - ತೋರಿಸೋ 17 ಯಾತಕೆ ಈ ತೆರ ಮಾಡಿದೀ 18 ಎಲ್ಲೆಲ್ಲಿ ನಾ ಪೋದ - ರಲ್ಲಲ್ಲೆ ನೀ ಬಂದು ಎಲ್ಲ ಕಾರ್ಯಗಳನ್ನು ಮಾಡಿದೀ 19 ಇತರರಿಗಸಾಧ್ಯ ಅತಿಶಯ ಚರ್ಯವ ಯತನಿಲ್ಲದಲೆ ನೀ ಮಾಡಿದಿ 20 ಪೇಳಲೆನ್ನೋಶವಲ್ಲ ಭಾಳ - ನಿನ್ನಯ ಚರ್ಯ ಕೀಳುಮಾನವ ನಾ ಬಲ್ಲೇನೆ 21 ಜ್ಞಾನಿಗಳರಸನೆ ಮೌನಿ ಶಿರೋಮಣಿ ಧ್ಯಾನವ ಸಂತತ ನೀಡಯ್ಯಾ 22 ಸಂತತ ಎನ ಮನೊ - ಅಂತರದಲಿ ನೀ ನಿಂತು ಪಾಲಿಸೊ ಎನ್ನ ಮಹರಾಯಾ 23 ಎಂತೆಂಥ ಭಯ - ಬರೆ - ನಿಂತು ತಳೆದ್ಯೊ ದಯ - ವಂತ ನಿನಗೆಣೆಗಾಣೆನಯ್ಯಾ 24 ನಿನ್ನಲ್ಲಿ ಹರಿ ದಯ - ಉನ್ನತ ಇರಲಿನ್ನು ಎನ್ನಲ್ಲಿ ನಿನ ದಯ ಇರಲಯ್ಯ 25 ದಾತಗುರು ಜಗನ್ನಾಥ ವಿಠಲ ನಿನ್ನ ಮಾತು ಲಾಲಿಸಿದಂತೆ ಪೊರೆ ಎನ್ನಾ 26
--------------
ಗುರುಜಗನ್ನಾಥದಾಸರು
ಗುರುವೆಂದರವಗೆ ಪರಮಸುಖ ಭವಾರ್ಣವ ದುಃಖ ಧ್ರುವ ಗುರು ಎಂದ್ಹಾಂಗ ಬಾಯಿಲಿ ಅರಿಯಬೇಕು ಮನದಲಿ ದೋರುವದಾನಂದ ಲೀಲಿ ಗುರು ಕೃಪೆಯಲಿ 1 ಅರ್ತರೊಂದೆ ಸಾಕು ಪೂರ್ಣ ಕರ್ತು ಸದ್ಗುರು ಚರಣ ಮತ್ರ್ಯದೊಳಿದೆ ನಿಧಾನ ಸಾರ್ಥಕಗುಣ 2 ನರನೆಂದು ಮರೆದೀಗ ಗುರು ನಿಜಾಗುವ ಬ್ಯಾಗ ಸೆರಗು ಮಹಿಪತಿಗೆ ದೋರಿತು ಈಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ
ಗೋಪಿ ಪ ತನ್ನ ಬಳಿಗೆ ಬಾರೆನ್ನುತಲೋಡಿದ ಅ.ಪ ನೊರೆ ನೊರೆ ಹಾಲನು ಸುರಿಸುರಿದು ತನ್ನ ಕಿರು ಬೆರಳಾಡಿಸಿ ಕೊರಳನು ಕೊಂಕಿಸಿ ಪರಿ ಹಾಸ್ಯ ಕುಚೋದ್ಯವ ಮಾಡುತ ಮುರಳಿಯನೂದಿ ಬಾರೆನ್ನುತ ಬಂದನೆ1 ಬೆಣ್ಣೆಯ ಕದ್ದು ಕೈ ಸುಣ್ಣವಾಯಿತು ಎಂದು ಕಣ್ಣು ಬಾಯಿಗಳಿಂದ ಸನ್ನೆಯ ಮಾಡಿ ಹಣ್ಣನು ತಿನ್ನುವೆ ಎನ್ನುತಲೋಡಿದ ಚಿಣ್ಣನು ಮಾಂಗಿರಿರಂಗನು ನೋಡೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಛೀ ಯಾತರ ಜನ್ಮಾ | ನಾಯಿಗಿಂದತ್ತಾಧಮ ಪ ಛೀ ಯಾತರ ಜನ್ಮಾ ನಾಯಿ ಹಿಂದತ್ತಾಧಮ ಬಾಯಿ ಬಡಕನಾಗಿ ಮಯ್ಯ ಮರೆವರೇ ನಿಮ್ಮಾ ಅ.ಪ ಸಾಧುರಾನುಸರಿಸಿ | ಬೋಧನಾಮೃತ ಸೇವಿಸಿ | ಹಾದಿವಿಡಿದು ಗತಿ ಸಾಧಿಸಿ | ಘಾಸಿ 1 ಬುದ್ಧಿ ತನಗ ಇಲ್ಲಾ | ತಿದ್ದಿದರ ಕೇಳಲಿಲ್ಲಾ | ಇದ್ದೆರಡಾದಿನದೊಳು | ಸದ್ಯ ಸೌಖ್ಯ ಕಳೆದೆಲ್ಲಾ | 2 ಕಲ್ಲು ಕಟೆಯ ಬಹುದು | ಬಿಲ್ಲು ಮಣಿಸಬಹುದು | ನಿಲ್ಲದೇ ವನಕಿ ತುಂಡಾ | ಸಲ್ಲದಂತೆ ನೀನಾಗುದು 3 ಮರಹುಟ್ಟಿ ಮರ ಬಿದ್ದಾ | ತೆರನಾದೋ ಅಪ್ರಬುದ್ಧಾ | ತಿರುಗಿ ನೋಡಿನ್ನಾರೆ | ಚ್ಚರಿತು ನೀ ಮದದಿಂದ 4 ಗುರು ಮಹೀಪತಿಜನಾ ಧರಿಸಿರೋ ಸದ್ವಚನಾ ಸರಿಕರ ಕಂಡು ಹ್ಯಾವಾ ವರಿಸದೆ ಇಹುದೇನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋ ಜೋ ಶ್ರೀಹರಿ ಮಲಗೊ ಜೋಗುಳ ಪಾಡಿ ಪಾಡಿ ತೂಗುವೆ ಮುದದಿಪ ಯೋಗಿಗಳರಸನೆ ಸಾಗರಶಯನನೆ ಭಾಗವತರಪ್ರಿಯ ಬಾಗಿ ಸ್ತುತಿಪರೊ ನಿನ್ನ ಅ.ಪ ಹರ ಬ್ರಹ್ಮಾದಿಗಳು ಕೂಡಿ ನಿನ್ನನು ಪರಿಪರಿ ವಿಧದಲಿ ಕೊಂಡಾಡಿ ಸುರರು ಗಂಧರ್ವರು ವರಋಷಿಗಳು ಕೂಡಿ ಪರಮ ಸಂಭ್ರಮದಿಂದ ಹರಿ ನಿನ್ನ ಸ್ತುತಿಪರು 1 ಗೋಕುಲದ ನಾರಿಯರು ಗೋವಿಂದ ನಿನಗೆ ಬೇಕಾದ ಪಾಲ್ಮೊಸರು ಜೋಕೆಯಿಂದಲಿ ಹೊಸ ಬೆಣ್ಣೆ ತಂದಿಹೆವೆಂದು ಅ- ನೇಕ ಬಗೆಯಲಿ ಸ್ತುತಿ ಮಾಡಿ ಬೇಡುತಲಿರುವರು 2 ದಿಟ್ಟ ಗೋಪಾಲ ಕಯ್ಯೊಳಗೊಂದು ಪುಟ್ಟ ಬಚ್ಚೆಯ ಪಿಡಿದು ಅಚ್ಚುತ ನಿನಗೀವೆವೆಂದು ಬಾಗಿಲೋಳ್ ನಿಂದು ಪುಟ್ಟ ಮಕ್ಕಳು ಬಾಯಿಬಿಟ್ಟು ಪ್ರಾರ್ಥಿಸುವರು 3 ಇನಕೋಟಿ ಪ್ರಭೆ ನಾಚಿಪ ಮುಖ ಕಮಲದ ದನುಜದಲ್ಲಣ ನಿನ್ನನು ಸನಕಾದಿಗಳು ಸ್ತುತಿಮಾಡಿ ಮೈ ಮರೆತರೊ ವನಿತೆಯರೋಕುಳಿಗಳನಾಡಿ ನರ್ತಿಸುವರೊ 4 ನಿದ್ರೆ ಮಾಡಿದರೆ ನೀನು ಈ ಜಗವೆಲ್ಲ ಉದ್ಧಾರವಾಗುವುದೇನು ನಿದ್ರೆ ಸಾಕೇಳೆಂದು ದುರ್ಗಾದೇವಿಯರು ಸ್ತುತಿಸೆ ಮುದ್ದು ಕೃಷ್ಣನೆ ಭಕ್ತರುದ್ಧಾರಕರ್ತನೆ5 ಹಯ ಮುಖ ಹರಿ ಮತ್ಸ್ಯನೆ ಕೂರ್ಮನೆ ವರಹ ಹಯಗ್ರೀವ ನರಸಿಂಹನೆ ಜಯವಟು ಭೃಗು ರಾಮಕೃಷ್ಣ ಬುದ್ಧನÉ ಕಲ್ಕಿ ಜಯ ನಾನಾ ರೂಪನÉ ಜಯವೆಂದು ಪೊಗಳ್ವರೊ6 ನವನೀತ ಚೋರನೆಂದು ನಾರಿಯರೆಲ್ಲ ನವವಿಧ ನುಡಿ ನುಡಿವರೊ ಭುವನ ಮೋಹನಸ್ವಾಮಿ ಸುಮನಸ ವಂದ್ಯನೆಕವಿ ಜನರಪ್ರಿಯ ಶ್ರೀ ಕಮಲನಾಭ ವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಜ್ಞಾನಾಮೃತ ಭುಜಿಸು ಜೀವ ಮಾನವಜನುಮದ ಗುರಿಯಿದು ಪ ಶುದ್ಧಮನದ ಪಾತ್ರೆಯಲ್ಲಿ ಸದ್ಗುರುವಿನ ಬೋಧದನ್ನ ಶುದ್ಧ ಚೈತನ್ಯಾತ್ಮ ನೀನೆ ಬದ್ಧಜೀವನಲ್ಲವೆಂಬ 1 ಶಿವರೂಪನು ಸಚ್ಚಿದಾತ್ಮ ಭವಬಂಧನವೆನ್ನೊಳಿಲ್ಲ ಆವಿನಾಶಿಯೆ ನಾನು ಎಂಬ ಸುವಿಚಾರದ ಬಾಯಿಯಿಂದ 2 ಸದ್ ರೂಪದ ಆರೋಗ್ಯ ಚಿದ್ ರೂಪದ ಪರಮ ಭಾಗ್ಯ ಆನಂದದ ನಿಧಿಯಾಗುವಿ ಬೋಧ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತಾತ್ಸಾರಕಿದು ಕಾಲವಲ್ಲ ರಂಗಯ್ಯ ಶ್ರೀ- ವತ್ಸಲಾಂಛನ ಸುಖ ಚಿನ್ಮಯನೆ ವತ್ಸನ ಧ್ವನಿ ಕೇಳಿ ಒದಗುವ ಗೋವಂತೆ ಭೃತ್ಯರ ಸಲಹುವ ಬಿರುದುಳ್ಳ ನರಸಿಂಹ ಪ. ಹುಚ್ಚಾಗೆಲ್ಲರ ಕಚ್ಚುವ ನಾಯಂತೆ ತುಚ್ಛವಾದ ಬಗುಳುಚ್ಚರಿಸಿ ಇಚ್ಛಾನುಸಾರದಿಂದಿರುವ ಹೂಣನ ಬಾಯಿ ಮುಚ್ಚಿಸಿ ಮೂಲೆಯೊಳ್ಮುರಿದೊತ್ತು ಮುರಹರ 1 ನಿನ್ನ ಸೇವೆಯನ್ನು ನಿರುತದಿ ನಡೆಸುತ ಅನ್ಯರ ಲಕ್ಷಿಸದಿರಲೆನ್ನನು ಭಿನ್ನ ಭಾವದಿ ಭೀತಿ ಬಡಿಸುವ ದುಷ್ಟನ ಇನ್ನುಪೇಕ್ಷಿಸಿ ಸುಮ್ಮನಿರುವೆ ಯಾತಕೆ ಸ್ವಾಮಿ 2 ದುಷ್ಟ ಹಿರಣ್ಯಚರ್ಮಾದಿದಮನ ನಿನ- ಗೆಷ್ಟೆಂದು ಪೇಳಲಿ ವಿಧಿಜನಕ ಸೃಷ್ಟಿಗೊಡೆಯ ವೆಂಕಟೇಶನ ಹೂಣನ ಮಾಧವ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ ಬಲಿರಾಯ ಬಲು ದಾನವನು ಮಾಡುತಿರಲಾಗಿ ಇಳಿಯ ಸುರÀವೇಷವನು ಧರಿಸಿ ಪೋಗಿ ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು ನಿಗಮ ಕುಲದಾತಾರಾ 1 ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ ಗೋಪಾಲತತಿ ವಡನೆ ವಡನಾಡುತ ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2 ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ ಇಂದೆನ್ನ ಹೃತ್ಕಮಲದೊಳಗೆ ಬಂದೂ ನಿಂದು ಮನೆಮನೆ ತಿರದುಂಬುವ ನೀನಲ್ಲವೆ ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ
ತಿಳಿಯದಾಯಿತು ವಯಸು ಕಳೆದು ಹೋಯಿತು ಪ ಕಳವಳಿಸುತ ಕಡೆಗಾಣದೆ ಬಳಲಿ ತೊಳಲಿ ಪಾಪ ಹೆಚ್ಚಿ ಅ.ಪ ಸತಿಸುತರೆಂಬ ಬಲೆಗೆ ಸಿಲುಕಿ ಅತಿಶಯ ಮೋಹದಲಿ ಮುಳುಗಿ ಪಥಿಕರಾಡುವಂತೆ ನಡೆದು ಪತಿತನಾಗಿ ನಿಜದ ಮರ್ಮಾ 1 ಕೆಲದಿನ ಆಟದಿ ಲಲನೆಯರ ಕೂಟದಿ ಹಲವು ವಿದ್ಯೆಯ ಕಲಿತು ಪರರ ಒಲಿಸಿ ಸ್ತ್ರೋತ್ರಮಾಡಿ ಬೇಡಿ ಫಲವ ಕಾಣಲಿಲ್ಲ ಕೊನೆಗೆ ಹಲುಬಿ ಹಲುಬಿ ಬಾಯಿನೊಂದು 2 ನೀತಿ ಹೇಳುತಾ ಪರರ ನಿಂದೆಗೆಯ್ಯುತಾ ಗುರುಮುಖದಲಿ ಪರಮತತ್ವ 3 ಮತ್ತನಾಗುತ ದುರಾಸಕ್ತನೆನಿಸುತ ನಿತ್ಯಕರ್ಮವನ್ನು ತೊರೆದು ಸತ್ಯಶಮದಮಗಳ ಮರೆದು ಚಿತ್ತದಲಿ ನಿರ್ಮಲನಾಗದೆ ಚಿಂತಿಸುತಲಿ ನಿಜದ ನೆಲೆಯ 4 ಗುರುರಾಮವಿಠಲನ ಶ್ರೀಚರಣಕಮಲ ಸ್ಮರಣೆಗೈದು ಹೊರಗು ಒಳಗು ಒಂದೆ ವಿಧದಿ ಚರಿಸಿ ಸೌಖ್ಯಪಡೆವ ಬಗೆಯ 5
--------------
ಗುರುರಾಮವಿಠಲ
ತುರುಕರಿಲ್ಲದ ಮನೆ ದಿರದಿಮ್ಮನೆ ಪ ತುರಕರ ನೋಡದ ಕಣ್ಣು ಶಿಖಿಗರಿಗಣ್ಣು ಕರ್ಣ ತುರಕರುವಿನುಚ್ಛಿಷ್ಟ ಉಣ್ಣ ಬಾಯಿ ವಿಷಗಾಯಿ 1 ಜಿಹ್ವೆ ಅಧಮನ ಗುಂಹೆ ತುರಕರನೊದೆವ ಕಾಲು ಯಮನ ಪಾಲು 2 ತುರಕರ ಪ್ರಸಾದ ಉಣ್ಣದ ಹೊಟ್ಟೆ ಗೂಗಿನ ಮೊಟ್ಟೆ ತುರಕರನ ಚಿಂತಿಸದ ಮನ ಗಾರ್ಧಭ ಗಮನ ತುರಕರ ಕಾಯ್ದ ವಿಜಯವಿಠ್ಠಲರೇಯ ತುರಕರ ಕರುಣ ಪಡೆಯದವನು ಶುದ್ಧ ಶವನು3
--------------
ವಿಜಯದಾಸ