ಒಟ್ಟು 337 ಕಡೆಗಳಲ್ಲಿ , 67 ದಾಸರು , 322 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೊ ಕರುಣಿಸೊ ಗುರುವೆಂಕಟೇಶ ಕರುಣಿಸೆನ್ನ ನೀ ನೋಡೊ ಪರಮ ಪುರುಷ ಧ್ರುವ ಬಿನ್ನಹವ ಪಾಲಿಸೊ ಚಿನುಮಯ ರೂಪ ಉನ್ನತ ಮಹಿಮ ನೀ ಘನ್ನ ಗುರು ಕೃಪ 1 ಅನಾಥ ಬಂಧು ನೀ ಶರಣ ರಕ್ಷಕ ಅನಂತ ಕೋಟಿ ಬ್ರಹ್ಮಾಂಡ ನಾಯಕ 2 ವಾಸುದೇವ ಚಿದ್ರೂಪ ದೇಶಿಕರದೇವ ಭಾಸಿ ಪಾಲಿಪ 3 ವಂದಿತ ತ್ರೈಲೋಕ್ಯ ವೇದಾಂತ ಮಹಿಮ ಇಂದಿರಾಪತಿ ಘನಗುರುಬ್ರಹ್ಮ 4 ಶ್ರೀನಾಥ ನೀನಲ್ಲದೆ ನನಗಾರು ಇಲ್ಲ ನೀನೆ ಸಕಲಪೂರ್ಣ ಭಕ್ತವತ್ಸಲ 5 ಮತಿಹೀನನವಗುಣ ನೋಡದಿರೆನ್ನ ಕ್ಷಿತಿಯೊಳು ಸದ್ಗೈಸೊ ಪತಿತಪಾವನ 6 ದೀನನಾಥ ನೀ ಬಂದು ಮನದೊಳು ನಿಂದು ಮನ್ನಿಸಿ ದಯಬೀರೊ ಘನಕೃಪಾಸಿಂಧು7 ವಿಶ್ವವ್ಯಾಪಕ ಸಾಧುಹೃದಯನಿವಾಸ ದಾಸ ಮಹಿಪತಿ ಪ್ರಾಣ ಹೊರಿಯೊ ಪ್ರಾಣೇಶ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಷ್ಟಗಳ ಪರಿಹರಿಸೊ ಶ್ರೇಷ್ಠ ಮಾರುತಿಯೇ ಭ್ರಷ್ಟನಾದೆನು ಭಂಡ ಸಂಸಾರದಲ್ಲೀ ಪ ಸ್ವಾರ್ಥವೆನ್ನುವ ದುಃಖ ಸಾಗರದಿ ಮುಳುಗಿದ್ದು ಸ್ವಾರ್ಥಕೋಸುಗ ಹೀನ ಕೃತ್ಯಗಳ ಗÉೈದೂ ಅರ್ಥವನು ಗಳಿಸುತ್ತ ತುಂಬಿದೆನು ಈ ವಡಲ ವ್ಯರ್ಥವಾಯಿತು ಜನ್ಮ ಸಾರ್ಥವನು ಮಾಡೋ1 ನಿರುತದೀ ಧರ್ಮ ಕರ್ಮಗಳ ತೊಲಗಿದೆನು ಭವದಿ ಸುಖವೆಲ್ಲವೂ ಮಾಯವಾಯಿತು ದೇವಾ ಶರಣರಿಗೆ ತಂದೆ ನೀನೆಂದು ಮೊರೆಹೊಕ್ಕೇ 2 ಪರಹಿತವ ಬಯಸದಲೆ ಕೇಡು ಬಗೆದೆನು ನಿತ್ಯ ಪರಸತಿಯಪೇಕ್ಷಿಯಲಿ ನಿರುತನಾಗಿದ್ದೇ ಅರಿತೆನೀಗಲೆ ನಾನು ಸರ್ವ ನಶ್ವರವೆಂದು ನರಹರಿಯ ನೀರೆರೆಯೊ ಈ ಬಾಡು ಶಶಿಗೇ 3 ಭಕ್ತವತ್ಸಲನೆಂಬ ಬಿರುದ ಪೊತ್ತಿಹೆ ನೀನು ಭಕ್ತಿಯಲಿ ನಾ ನಿಂನ ಸೇವೆ ಮಾಡುವೆನು ಭಕ್ತದಾಯಕಯಂನ ಹಸಿವೆ ತೃಷೆಗಳ ನೀಗಿ ಮುಕ್ತಿಯನು ನೀಡೆನಗೆ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಪ ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ 1 ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ 2 ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ3
--------------
ಕನಕದಾಸ
ಕಾಮಿನೀಮಣಿ ರಾಮಭಾಮಿನಿ ಪ ಸೋಮಬಿಂಬ ವದನೆಯೆ ಸೀತೆಯೆ ಅ.ಪ. ಪಾವಮಾನಿ ಮನೋವಾರಿಜಾಶ್ರಿತೆ ದೇವತಾವಳೀ ದೇವಸನ್ನುತೆ ದೇವಬೃಂದ ವಂದಿತೆ ಸನ್ನುತೆ 1 ಭಕ್ತವತ್ಸಲೆಯೆ ಶಕ್ತಿರೂಪೆಯೆ ಮಾರ್ಗವಿಶದೆಯೆ ಮಾತೆಯೆ 2 ವರಧೇನುಪುರಿ ಪರಮೇಶ್ವರಿ ವರದಾಯಿನಿ ವರಲೋಕಪಾಲೆ ಕರುಣಾಕರೆ ವರರಾಮ ಜಾಯೆ ಪರಿಪಾಲಿತಾಶ್ರಿತೆ ಸುರನುತೆ 3
--------------
ಬೇಟೆರಾಯ ದೀಕ್ಷಿತರು
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾವ ದೇವರು ನೀನೆ ಎನ್ನ ಕೈ ಪಿಡಿಯೋ ದೇವ ಹರಿ ತವಪಾದ ಮರೆಹೊಕ್ಕೆ ಕಾಯೊ ಪ ತರಳ ಪ್ರಹ್ಲಾದನಂ ಸಂಕಟದಿ ರಕ್ಷಿಸಿದಿ ಮರೆ ಬಿದ್ದ ಅಸುರನಿಗೆ ಸ್ಥಿರಪಟ್ಟ ಕೊಟ್ಟಿ ಕಂಟಕ ಭರದಿ ನೆರವಾಗಿ ತರಿದಯ್ಯ ತರುಣಿಯ ಮೊರೆ ಕೇಳಿ ಅಕ್ಷಯವನಿತ್ತಿ 1 ಶಿಲೆಯರೂಪದಿ ಬಿದ್ದ ಸತಿಯನುದ್ಧರಿಸಿದಿ ಕುಲಗೆಟ್ಟ ಅಜಮಿಳನ ಅಂತ್ಯದಲಿ ಕಾಯ್ದಿ ಒಲಿದು ನಭೋರಾಜನಂ ಶಾಪದಿಂದುಳಿಸಿದಿ ಅಳಿಯದ ಪದವಿ ನೀಡಿ ಧ್ರುವರಾಜನ್ಪೊರೆದಿ 2 ಭಕ್ತವತ್ಸಲನೆಂಬ ಬಿರುದಗಳ ಪೊತ್ತಿರುವಿ ಭಕ್ತನಿಗೆ ಬರುವ ನಿಖಿಲಾಪತ್ತುಗಳನು ಕತ್ತರಿಸಿ ಹಿತವಾದಭಕ್ತಿಯನು ಕರುಣಿಸಿ ನಿತ್ಯನಿರ್ಮಲಸುಖವ ನೀಡು ಶ್ರೀರಾಮ 3
--------------
ರಾಮದಾಸರು
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃತ್ತಿಕೋತ್ಸವ ಗೀತೆ ಕೃತ್ತಿಕೋತ್ಸವ ನೋಡುವ ಬಾರೆ ನ ಮ್ಮಾರ್ತಿಯ ಪರಿಹರಿಪನು ನೀರೆ ಪ. ಬಹುಚಂದದಿ [ನಿಂದ]1 ಚಂದಂದಾಭರಣ ತೊಟ್ಟನೆ ಅರ್ತಿಯಿಂದಲೆ ತಾ ಪೊರಟಾನೆ 2 ಮಹಾಧ್ಯಾನದ ಮೇಲಿರಿಸಿ ಭಕ್ತವತ್ಸಲನಾಲಯಕೆಲ್ಲ 3 ಯಾರದಿಂದಲೆ ಶ್ರೀರಂಗನೇರಿ ಚಕ್ರಮೂರುತಿಯಮಂಟಪದಲ್ಲಿ 4 ಪಂದ (?)ವನಿತ್ತಾನೆ ಮುದದಿ ಲಕ್ಷ್ಮಿಗೆ ಸೇವೆ ಕೊಟ್ಟಾನೆ 5 ಆಳುಗಳ ಕೈಲಿತ್ತು ಪೊರೆದಾನೆ ಭಕ್ತರ ಹಸ್ತದಲಿ ಚಿತ್ತೈಸಿದನೆ 6 ಇಂದಿರೆರಮಣ ಗೋವಿಂದನೆ ಭವಬಂಧನಂಗಳನೆಲ್ಲ ಕಳೆವನೆ 7 ಅರ್ತಿಯಿಂದಲೆ ನೋಡಿದವರಿಗೆ ಮುಕ್ತಿಯ ಕೊಡುವನು ಸತ್ಯವಿದು 8
--------------
ಯದುಗಿರಿಯಮ್ಮ
ಕೃಷ್ಣ ಕೃಪಾಲ ಕರುಣಾದಾಯಕ ಕರುಣಾದಾಯಕ ದುಷ್ಟಮರ್ದನ ಶಿಷ್ಟಜನಪಾಲಕ ಧ್ರುವ ಮಾಧವ ಮಧುಸೂದನ ಮಧುಸೂದನ ಪಂಕಜನಾಭ ಪತಿತಪಾವನ ಶಂಖಚಕ್ರಧರ ಸಂಕರುಷಣ ಸಂಕುರಷಣ ಪತಿ ರಾಜೀವನಯನ 1 ಕಸ್ತೂರಿತಿಲಕ ಕೌಸ್ತುಭಭೂಷಣ ಕೌಸ್ತುಭಭೂಷಣ ಮಸ್ತಕ ಮುಗುಟ ಮದನಮೋಹನ ಭಕ್ತವತ್ಸಲ ಹರಿ ನಾರಾಯಣ ನಾರಾಯಣ ವಸ್ತುಪರಾತ್ಪರ ನಿಜನಿರ್ಗುಣ 2 ಗರುಡಗಮನ ಉರಗಶಯನ ಉರಗಶಯನ ಸುರಬ್ರಹ್ಮಾದಿ ವಂದಿತಚರಣ ಕರುಣಾನಂದ ಪರಿಪೂರಣ ಪರಿಪೂರಣ ತರಳ ಮಹಿಪತಿ ಜೀವಜೀವನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣರಾಯ ತಾ ಬಂದಾ ಕೃಷ್ಣರಾಯ ತಾ ಬಂದಾ ಗೋಕುಲದಿಂದಾ ಬಿಡಿಸ್ಯಾನು ಬಂಧಾ ಪ ಶಂಖ ಚಕ್ರ ದೋರ್ದಂಡ ಶಂಖ ಚಕ್ರದೋರ್ದಂಡ ಉದ್ದಂಡ ಖಲಕಂಡ ಕೃಷ್ಣರಾಯಾ 1 ಆನಂದ ಗುಣಪರಿಪೂರ್ಣ ಆನಂದ ಗುಣಪರಿಪೂರ್ಣ ವಪ್ಪುವಾಭರಣ ಲಿಂಗಸಂಪೂರ್ಣ ಭಕ್ತಜನ ಕರುಣಾ ಕೃಷ್ಣರಾಯಾ 2 ಶರಣಜನ ಪರಿಪಾಲಾ ಶರಣಜನ ಪರಿಪಾಲಾ ಗಾನವಿಲೋಲ ಭಕ್ತವತ್ಸಲ ನರಸಿಂಹವಿಠಲ ಕೃಷ್ಣರಾಯಾ 3
--------------
ನರಸಿಂಹವಿಠಲರು
ಕೇಶವ ಜಗದೀಶ ಸಾಸಿರಭಾಸುರಕೋಟಿಸಂಕಾಶ ವಾಸವಾದಿಗಳ ವಂದ್ಯ ಸೀತಾಪತೆ 1 ನಾರಾಯಣ ಸಕಲವೇದಪಾರಾಯಣ ಕೃಷ್ಣ ನಾರದಾದಿಗಳ ವಂದ್ಯ ಸೀತಾಪತೆ 2 ಮಾಧವ ಮಂಗಳಗಾತ್ರ ವೇದವನ್ನೆ ಕದ್ದು ಒಯ್ದ ಆ ಖಳನ ಕೊಂದೆ ಸೀತಾಪತೆ 3 ಗೋವಿಂದ ಗೋಕುಲಬಾಲ ಗೋಪಿಯರ ಮನೋಹರ ಆದಿ ಕೂರ್ಮಾವತಾರ ಸೀತಾಪತೆ 4 ವಿಷ್ಣುವೆ ಯತಿಗಳ ವಂದ್ಯ ಅಷ್ಟಲಕ್ಷ್ಮಿಯರ ನಾಥ ದಿಟ್ಟ ವÀರಾಹರೂಪನಾದ ಸೀತಾಪತೆ 5 ವೈರಿ ಯದುಕುಲಕ್ಕೆ ತಿಲಕನಾದ ಚೆಲುವನಾದ ಹರಿ ನೀನೆ ಸೀತಾಪತೆ 6 ತ್ರಿವಿಕ್ರಮರೂಪನಾಗಿ ತ್ರಿಜಗವನ್ನೆ ಪಾಲಿಸಿದ ವಾಮನರೂಪಿ ನೀನೆ ಸೀತಾಪತೆ7 ವಾಮನರೂಪವ ತಾಳಿ ಆ ಮಹಾಬಲಿಯನ್ನೆ ತುಳಿದು ನೇಮದಿ ಕ್ಷತ್ರೇರ ಕೊಂದ ಸೀತಾಪತೆ 8 ಶ್ರೀಧರ ನೀನೆಂದೆನಿಸಿ ಶೋಷಿಸಿ ಖಳg Àನೆಲ್ಲ ಜಾನಕಿಯ ತÀಂದ ರಾಮ ಸೀತಾಪತೆ 9 ಹೃಷೀಕೇಶ ನೀನೆಂದು ಋಷಿಗಳು ಸ್ತುತಿಯ ಮಾಡಿ ವಸುದೇವಸುತ ಕೃಷ್ಣ ಸೀತಾಪತೆ 10 ಬುದ್ಧಾವತಾರ ಕೃಷ್ಣ ಸೀತಾಪತೆ 11 ದಾಮೋದರನೆಂದು ನಿಮ್ಮ ದೇವತೆಗಳೆಲ್ಲ ಕರೆಯೆ ಆ ಮಹಾ ಕಲ್ಕ್ಯ್ಕನಾದ ಸೀತಾಪತೆ 12 ಸಂಕರುಷಣ ದೇವ ನಿಮ್ಮ ಕಿಂಕರರು ನಾವೆಲ್ಲರಯ್ಯ ಪಂಕಜಾಸನವಂದ್ಯ ರಾಮ ಸೀತಾಪತೆ 1 3 ವಾಸುದೇವ ನಿಮ್ಮ ಪಾದಕ್ಕೆ ವಂದನೆಯ ಮಾಡುವೆನಯ್ಯ ದೋಷರಾಶಿ ನಾಶಮಾಡು ಸೀತಾಪತೆ 1 4 ಸುರರು ಎದ್ದು ನಿನ್ನೆ ಪೊಗಳುತ್ತಿರೆ ಉದ್ಧಾರ ಮಾಡಿದ ದೇವ ಸೀತಾಪತೆ 15 ಅನುದಿನ ನಿನ್ನ ಕರೆಯೆ ಅನಿಮಿತ್ತಬಂಧು ಕೃಷ್ಣ ಸೀತಾಪತೆ 16 ಮನೋಹರುಷ ನೀಡಿದ ರಾಮ ಸೀತಾಪತೆ 17 ಅಧೋಕ್ಷಜ ಲೋಕಗಳಿಗೆ ಆಧಾರಭೂತನಾ ಗಿರುವೆ ವೇದವೇದ್ಯರಾಮ ಸೀತಾಪತೆ 18 ಬೋಧನೆಯನ್ನು ಮಾಡಿದ ಸೀತಾಪತೆ 19 ಅಚ್ಯುತ ವಿಶ್ವಾಮಿತ್ರ ಅತಿಶಯ ಯಾಗವ ಕಾಯ್ದ ಭಕ್ತವತ್ಸಲ ರಾಮ ಸೀತಾಪತೆ 20 ಜನಾರ್ದನರೂಪನಾಗಿ ಜಾನಕಿಯ ತಂದ ಜಾಹ್ನವೀಜನಕ ರಾಮ ಸೀತಾಪತೆ 21 ಉಪೇಂದ್ರನೆ ಉದ್ಧÀವಗೆ ಉಪದೇಶವನೆ ಮಾಡಿ ಅಪರಿಮಿತಪದವಿ ಕೊಟ್ಟ ಸೀತಾಪತೆ 22 ಕಾಲ ತಪವ ಮಾಡಿ ಚರಿಸುವರಿಗೆ ಮೋಕ್ಷವಿತ್ತೆ ಸೀತಾಪತೆ 2 3 ರÀಕ್ಷಿಸಯ್ಯ ಕೃಷ್ಣ ರಾಮ ರಕ್ಷಿಸಯ್ಯ ಹಯವದನ ಪಕ್ಷಿವಾಹನ ರಾಮ ಸೀತಾಪತೆ 24
--------------
ವಾದಿರಾಜ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈಯ ಮುಗಿವೆ ಗುರುರಾಯ ಶರಣು ಜಗ- ದಯ್ಯನೆ ಬಾಹುಲೇಯ ಪ. ಒಯ್ಯನೆ ಬಿನ್ನಪ ಗೈಯುವೆ ಕರುಣಾಳು ಧೈರ್ಯ ಸಾಹಸ ಗುಣಧುರ್ಯನೆ ಜಯ ಜಯ ಅ.ಪ. ವ್ಯರ್ಥ ಜನ್ಮವಾಯಿತು ಹರಿಯ ಸ್ಮರಣೆ ಉತ್ತಮೋತ್ತಮ ಗುಣವ ಪಾಲಿಸು ಭಕ್ತವತ್ಸಲ ಭಯನಿವಾರಣ ಸತ್ಯಮಾರ್ಗದಿ ನಡೆಸು ಶಂಕರ- ಪುತ್ರ ಪುಣ್ಯಚರಿತ್ರಭರ್ತನೆ 1 ತಾಮಸಗುಣಗಳು ಪರಿಹರಿಸು ನಿ- ಸ್ಸೀಮ ಮಹಿಮನೆ ನೀನು ಶ್ರೀ ಮನೋರಮನಿಷ್ಠೆ ಸಜ್ಜನ- ಸ್ತೋಮಸಂಗವನಿತ್ತು ದುರ್ಜನ- ಸೀಮೆಯೊಳು ಪೊಕ್ಕಿಸದಿರೆನ್ನ ಸು- ಧಾ ಮಯೂಖಾಸ್ಯನೆ ಮಹೇಶನೆ 2 ಭೂಮಿಗಧಿಕವೆನಿಪ ಪಾವಂಜಾಖ್ಯ ಗ್ರಾಮಾಧಿಪತಿ ನಿಷ್ಪಾಪ ಯೋಗಿ ಲ- ಲಾಮ ಲಕ್ಷ್ಮೀನಾರಾಯಣನ ಮ- ಹಾಮಹಿಮೆಯನು ಪೊಗಳಿ ಹಿಗ್ಗುವ ಕೋಮಲಾಂಗ ಸುಮಂಗಲಪ್ರದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೈಯ ಮುಗಿವೆ ಗುರುರಾಯ ಶರಣು ಜಗ- ದಯ್ಯನೆ ಬಾಹುಲೇಯ ಪ. ಒಯ್ಯನೆ ಬಿನ್ನಪ ಗೈಯುವೆ ಕರುಣಾಳು ಧೈರ್ಯ ಸಾಹಸ ಗುಣಧುರ್ಯನೆ ಜಯ ಜಯಅ.ಪ. ವ್ಯರ್ಥ ಜನ್ಮವಾಯಿತು ಹರಿಯ ಸ್ಮರಣೆ ಉತ್ತಮೋತ್ತಮ ಗುಣವ ಪಾಲಿಸು ಭಕ್ತವತ್ಸಲ ಭಯನಿವಾರಣ ಸತ್ಯಮಾರ್ಗದಿ ನಡೆಸು ಶಂಕರ- ಪುತ್ರ ಪುಣ್ಯಚರಿತ್ರಭರ್ತನೆ 1 ತಾಮಸಗುಣಗಳು ಪರಿಹರಿಸು ನಿ- ಸ್ಸೀಮ ಮಹಿಮನೆ ನೀನು ಶ್ರೀ ಮನೋರಮನಿಷ್ಠೆ ಸಜ್ಜನ- ಸ್ತೋಮಸಂಗವನಿತ್ತು ದುರ್ಜನ- ಸೀಮೆಯೊಳು ಪೊಕ್ಕಿಸದಿರೆನ್ನ ಸು- ಧಾ ಮಯೂಖಾಸ್ಯನೆ ಮಹೇಶನೆ 2 ಭೂಮಿಗಧಿಕವೆನಿಪ ಪಾವಂಜಾಖ್ಯ ಗ್ರಾಮಾಧಿಪತಿ ನಿಷ್ಪಾಪ ಯೋಗಿ ಲ- ಲಾಮ ಲಕ್ಷ್ಮೀನಾರಾಯಣನ ಮ- ಹಾಮಹಿಮೆಯನು ಪೊಗಳಿ ಹಿಗ್ಗುವ ಕೋಮಲಾಂಗ ಸುಮಂಗಲಪ್ರದ 3
--------------
ತುಪಾಕಿ ವೆಂಕಟರಮಣಾಚಾರ್ಯ