ಒಟ್ಟು 333 ಕಡೆಗಳಲ್ಲಿ , 72 ದಾಸರು , 299 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏನು ಮಾಡಿದೆ ಮೂಢಮನುಜಾಮಾನವ ಜನುಮದಿ ಬಂದೀ ಜಗದೀ ಪ ದೇಶದ ಸೇವೆಗೆ ತನು ನೀಡಿದೆಯಾಭಾಷೆಯ ಏಳ್ಗೆಗೆ ಮನ ಮಾಡಿದೆಯಾಕಾಸಿಗಾಗಿ ವಂಚಿಸಿ ನಿನ್ನೊಡಲಿನಪೋಷಣೆಗಾಗಿ ದುಡಿದೆಯಲ್ಲದೆ 1 ಆರ್ತರ ದುಃಖವನೀಡಾಡಿದೆಯಾಸ್ವಾರ್ಥದ ಹಂಬಲ ಬಿಟ್ಟು ನಡೆದೆಯಾಪೂರ್ತಿಯಾಗಿ ಜನಹಿತ ನೋಡಿದೆಯಾಧೂರ್ತತನವ ಬರಿದೆ ತೋರಿದೆಯಲ್ಲದೆ 2 ಮದಮತ್ಸರಗಳ ನೆಲಕೆ ಬಡೆದೆಯಾಹೃದಯ ನಿರ್ಮಲಗೊಳಿಸಿ ನುಡಿದೆಯಾಮುದದಿ ಗದುಗಿನ ವೀರನಾರಾಯಣನಪದವನೊಮ್ಮೆಯಾದರೂ ಸ್ಮರಿಸಿದೆಯಾ 3
--------------
ವೀರನಾರಾಯಣ
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏನೆಂದು ಸ್ತುತಿಸಲಿ ದೇವ ರಂಗಯ್ಯ ನಿನ್ನ ಜಾಣ- ತನವ ನೀನೆ ಬಲ್ಲೆ ಶ್ರೀ ರಂಗಯ್ಯ ಪ. ಮತ್ಸ್ಯನಾಗಿ ಶ್ರುತಿಯ ತಂದೆ ರಂಗಯ್ಯ ನೀನು ಕುತ್ಸಿತ ತಮನ ಕೊಂದೆ ರಂಗಯ್ಯ ಸ್ವಚ್ಛ ಕೂರುಮನಾದೆ ರಂಗಯ್ಯ ಭಕ್ತ ರಿಚ್ಛೆಯ ಪಾಲಿಸಿದೆ ಶ್ರೀ ರಂಗಯ್ಯ1 ಆದಿವರಾಹ ನೀನಾದೆ ರಂಗಯ್ಯ ನೀನು ಪೋದ ಮೇದಿನಿಯ ತಂದೆ ರಂಗಯ್ಯ ಭೇದಿಸಿ ಕಂಬದಿ ಬಂದೆ ರಂಗಯ್ಯ ಪ್ರ- ಹ್ಲಾದನ ಕಾಯ್ದೆ ಶ್ರೀ ರಂಗಯ್ಯ 2 ಬಲಿಯನ್ನು ವಂಚಿಸಿದಂಥ ರಂಗಯ್ಯ ನೀನು ನೆಲವ ಓರಡಿ ಮಾಡ್ದೆ ರಂಗಯ್ಯ ಬಲವಂತ ಭಾರ್ಗವನಾದೆ ರಂಗಯ್ಯ ನೀನು ಛಲದಿ ಕ್ಷತ್ರಿಯರ ಗೆದ್ದೆ ರಂಗಯ್ಯ 3 ಜಲಧಿಯನು ಕಟ್ಟಿದೆ ರಂಗಯ್ಯ ಹತ್ತು- ತಲೆಯವನ ಕುಟ್ಟಿದೆ ರಂಗಯ್ಯ ಮಲೆತ ಮಾವನ ಕೊಂದೆ ರಂಗಯ್ಯ ಯದು- ಕುಲವನುದ್ಧರಿಸಿದೆ ಶ್ರೀ ರಂಗಯ್ಯ 4 ಸತಿಯರ ಮೋಹಿಸಿದೆ ನೀನು ರಂಗಯ್ಯ ಬಲು ಚತುರ ಬೌದ್ಧನಾದೆ ರಂಗಯ್ಯ ಖತಿಯಿಂದ ಹಯವೇರಿದೆ ರಂಗಯ್ಯ ದು- ರ್ಮತಿಯ ಕಲಿಯ ಕೊಂದೆ ಶ್ರೀ ರಂಗಯ್ಯ 5 ತ್ರಿಭುವನದೊಳಧಿಕÀ ರಂಗಯ್ಯ ನೀನು ವಿಭೀಷಣನಿಗೆ ಪ್ರಸನ್ನ ರಂಗಯ್ಯ ನೀ- ನಭಯವಿತ್ತೆನ್ನ ಕಾಯೊ ಶ್ರೀ ರಂಗಯ್ಯ 6 ವಾದಿರಾಜಗೊಲಿದೆ ರಂಗಯ್ಯ ನೀನು ಮೋದಿ ಹಯವದನನಾದೆ ರಂಗಯ್ಯ ಸಾಧಿಸಿ ಖಳರ ಕೊಂದೆ ರಂಗಯ್ಯ ವಿ- ನೋದÀದಿ ವೇದವ ತಂದೆ ಶ್ರೀ ರಂಗಯ್ಯ 7
--------------
ವಾದಿರಾಜ
ಏನೆಂದುಸರಲಿ ನಾ ನೆರೆ ಸಂತರಾ | ಸ್ವಾನುಭವಗಳನುವಾಗೀ ಮಾನಿಸಿರೋಳುಸಲೆ ಮಾನಿಸ ಸ್ಥಿತಿಯಲಿ ತಾನಿಹ ಉನ್ಮನಿಯಾಗಿ ಪ ಕಾಮವು ಹರಿಪದ ತಾಮರಸವ ನಿ | ಷ್ಕಾಮದ ಭಕುತಿಗಳಲ್ಲಿ | ಆ ಮಹಾ ಕೋಪವು ಈ ಮನಸಿನ ಗುಣ | ನೇಮಿಸಿ ಶೀಕ್ಷಿಸುವಲ್ಲಿ | ಆ ಮೋಹ ಲೋಭವು ಯಾಮವಳಿಯದಾ | ನಾಮ ಕೀರ್ತನೆಯಲ್ಲಿ | ತಾ ಮರೆಯದ ಅತಿ ವ್ಯಾಮೋಹ ತನ್ನಯ | ಪ್ರೇಮದ ಕಿಂಕರರಲ್ಲಿ 1 ಮದವತಿ ಇಂದ್ರಾದಿ ಪದಗಳ ಸಿದ್ದಿಗೆ | ಳಿದಿರಡೆ ಕಣ್ಣೆತ್ತೆ ಲೆಕ್ಕಿಸರು | ವದಗಿಹ ಮತ್ಸರ ಕುದಿವಹಂಕಾರದ | ಮೊದಲಿಗೆ ತಲೆಯತ್ತಿಸಗುಡರು | ಇದರೊಳು ಸುಖದು:ಖ ಉದಿಸಲು ಹರಿಯಾ | ಜ್ಞದೆಗತಿಗಡ ಸಮಗಂಡಿಹರು | ಉದಕದಲಿ ಕಮಲದ ಎಲೆಯಂದದಿ | ಚದುರತೆಯಿಂದಲಿ ವರ್ತಿಪರು 2 ಜಲದೊಳು ಕಬ್ಬಿಣಸಲೆ ಮುದ್ದಿಯ ನೆರೆ | ನಿಲಿಸದೆ ನಿಲ್ಲದೆ ಮುಣಗುವದು | ಪರಿ | ನಳನಳಿಸುತ ತೇಲುತಲಿಹುದು | ಕಳೆವರ ವೃತ್ತಿಯ ಕಳೆ ಸುವೃತ್ತಿಯ ಮಾಡಿ | ಬೆಳಗಿನ ಘನದೊಳು ಮನ ಬೆರೆದು | ನಲವರು ಮಹಿಪತಿ ವಲುಮೆಯ ಪಡೆಯದ | ಹುಲು ಮನುಜರಿಗಿದು ಭೇದಿಸದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೋ ಪ್ರಾಣಿ ಪ ಏನೋ ಪ್ರಾಣಿ ಮುಂದಗಣೀ | ಹೀನಗುಣಗಳ ಶ್ರೇಣಿ | ತಾ ನಳಿಯಂದದಿ ಮಾಣಿ ನೀ ನುಡಿನಮ್ರತವಾಣಿ | ಸ್ವಾನಂದ ಜನ್ಮಕ ಬಂದೆನಿಸಿ ಕೊಂಬುದು | ವಿಹಿದುತ್ತಮ ಜ್ಞಾನಿ 1 ಕೇಳು ಕೇಳಿಧಾಂಗ ಬಲು ಹೇಳಿದಾಂಗ ಮೇಳು | ತಿಳಿಗುರು ಭಕ್ತಿಯ ಮೇಲು ಬಲು ವಿವೇಕವ ತಾಳು | ಛಲದ ಮದಮತ್ಸರ ಶೀಳು ತಳಿಮನ ದುರ್ವತ್ತಿಗಳು | ಇಳಯೊಳು ಶ್ರೀ ಗುರುಪಾದಕ ನಂಬಿ | ವಿಡಿಯೋ ಪಂಥವಾ ಸೇರು 2 ಜರಿ ಹಂ ಮಮತೆಯ ದೂರಾ ಸರಿ ನಗಿ ಆರಿ ಮಿತ್ರರಾ | ಮರೆಯೋ ನಿಂದೆಯ ಪರರಾ ತೋರದೇ ವಾಗ್ವಿಸ್ತಾರಾ | ಪರಿ ನುಡಿಯಲಿ | ಮಹಿಪತಿಸುತ ಪ್ರಭು ಉದಾರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಟಕಟಾ ಕಂಡೆವಲ್ಲಾ ಕುಟಿಲವರ್ತನ ಕೆಲಕೆಲವು ಈ ಕಲಿಯುಗದೀ ಪ ಮಳೆಯಿಲ್ಲ ಬಂದರಿಳೆ ಬೆಳೆಯದು ಬೆಳೆಯೆ ಧರಣಿ ಹುಲಿಸಿಲ್ಲ ಹುಲಿಸಾದರಿಲ್ಲಾ ಪ್ರಜೆಗೇ ಸಲುವಕೋರಲ್ಪವನು ಬಿಡರು ರಾಜರುಗಳ ಹಾ ವಳಿಯಲುಳುಹಿಲ್ಲ ಇನ್ನೆಂತು ಕೃಷಿಕರಿಗೇ 1 ಧನವಗಳಿಸಿಯೆ ಪಡುವುದನ್ಯಾಯವೇ ಮೊದಲು ಮನವರಿತು ಪಾತಕಂಗಳ ಮಾಡುತಿಹರೂ ಇನಿತು ಗಳಿಸಿದ ಕೃತ್ಯದರ್ಥಕ್ಕೆ ಚೋರರು ಜನಪರೊಡೆಯರು ಬಯಲಮಮತೆಗಳ ಬಿಡರೂ 2 ಕಕ್ಕುಲತೆ ಪರನಿಂದೆ ರಾ ಕ್ಷಸಕೃತ್ಯ ಹಿಂಸೆ ಮತ್ಸರ ಅನಾಚಾರಾ ಕುಹಕ ಕುಟಿಲ ಕುಮದ ಸ್ವಾಮಿದ್ರೋಹ ವಸುಮತಿಯ ಸುರರ ವಧೆ ಘನವಾಯಿತಲ್ಲಾ 3 ತೊಡುವೊಡವೆಗಳ ಬೇಡಲೊಡನೆರಡು ಕಂಗಳಲಿ ಕಿಡಿಸೂಸಿ ಬಾಯಿ ನೊರೆಸುತ್ತಿ ಘರ್ಜಿಸುತಾ ಜಡಿವ ಕೋಪದಿ ಮಧುಪರಂತೆ ಜರೆವೀ ಬಾಯಿ ಬಡುಕರೇ ಮೇದಿನಿಗೆ ಹೊರೆಯಾದರಲ್ಲಾ 4 ರಸನಬಿಡುವರು ಕಸವಪಿಡಿವರೊರೆಯನು ಪಿಡಿದು ಬಿಸುಡುವರಲಗ ಪರುಸವನು ಬಿಟ್ಟು ಕಲ್ಲಾ ಒಸೆದು ಬಿಡುವರು ಶ್ರೀ ವೈಕುಂಠಕೇಶವನಿರಲು ನುಸಿ ದೈವಗಳ ಭಜಿಸಿ ಹಸಗೆಡುತಲಿಹರೂ 5
--------------
ಬೇಲೂರು ವೈಕುಂಠದಾಸರು
ಕನ್ನಡ ಮಂತ್ರ ವಾಸುದೇವ ಲಕ್ಷ್ಮೀಪತಿ ಜಗಜನ್ಮಾದಿ ಕಾರಣ ನಾರಾಯಣ ನರಕಾಂತಕ ನಾರದಪ್ರಿಯ ನರಸಖನಾದ ನಾರಸಿಂಹಮೂರ್ತಿಗೆ ನಮಸ್ಕಾರಗಳು ಗೋಕುಲದರಸು ಯಾದವಶಿರೋಮಣಿಯೆನ್ನ ಬಿನ್ನಪವ ಲಾಲಿಸಿ ಕೇಳಯ್ಯ ಕೃಷ್ಣ ಕಾಮ ಕ್ರೋಧ ಮದ ಮತ್ಸರ ದುರ್ಬುದ್ಧಿ ದುರಾಚಾರ ದುರ್ವಿಷಯಗಳ ಮೋಹ ಲೋಭಗಳ ಮರೆಸಿ ಮುಂದೆ ಬಿರುದಿನಿಂದ ಭಕÀ್ತಜನ ಬಂಧು ನೀ ದಯಾಸಿಂಧು ನಾ ಬೇಡಿಕೊಂಬುವೆನು ಬಂದು ಸಜ್ಜನರಕ್ಷಕ ದುರ್ಜನಶಿಕ್ಷಕ ಅರ್ಜುನ ಸಾರಥಿಯಾದ ನಿತ್ಯ ಮುಕ್ತ ದ್ವಾರಾವತೀ ಮಧ್ವಮುನಿಗೊಲಿದಂಥ ಮೂರ್ಜಗಾಧೀಶ ಉದ್ಧಾರ ಮಾಡಯ್ಯ ಉರಗಾದ್ರಿವಾಸ ಪದ್ಮಾವತೀಕಾಂತ ಶ್ರೀ ವೆಂಕಟೇಶ ಜ್ಞಾನಭಕ್ತಿ ಘನ ವೈರಾಗ್ಯ ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ಶ್ರೇಷ್ಠವಾದ ಸಂತಾನ ಸಕÀಲಾಭೀಷ್ಟಗಳ ಕೊಡುವನೆಂದು ನಾ ಬೇಡಿಕೊಂಬುವೆನು ಬಂದು ಎನ್ನಬಾರ ಎನ್ನ ಪರಿವಾರ ನಿನ್ನಗೊಪ್ಪಿಸುವೆನು ಮನ್ಮಥನಪಿತ ಎನಗೆ ಇನ್ನು ಧರ್ಮಾರ್ಥ ಕಾಮಿತ ಫಲಗಳನು ಸನ್ಮಾನದಲಿ ಕೊಟ್ಟು ಮನ್ನಿಸಿ ನೀಡೆನಗೆ ಮಂಗಳವ ಅನುದಿನದಿ ಸುಜ್ಞಾನಿಗಳೊಡೆಯ ಸುರರಿಂದ್ವಂದಿತವಾದ ನಿನ್ನ ಪದ್ಮಪಾದಗಳಿಗೆ ಬಿದ್ದೆ ್ಹೀಳಿಕÉೂಂಬುವೆನು
--------------
ಹರಪನಹಳ್ಳಿಭೀಮವ್ವ
ಕರೆತಾರೆಲೆ ರಂಗನ ಪ ಕರೆದು ತಾರೆಲೆ ಕರುಣನಿಧಿಯನು ಕರೆದು ತಾ ಕಾಲಲ್ಲಿ ಗಂಗೆಯ ಸುರಿದ ಬಾಲ ಬ್ರಹ್ಮಚಾರಿಯ ಅ.ಪ ಮತ್ಸ್ಯಾವತಾರನನು ಮುದದಿ ಮಂದರಗಿರಿಯನೆತ್ತಿದ ಸುರರಿಗಮೃತವನಿತ್ತ ಕೂರ್ಮನ ಧರೆಯನುದ್ಧರಿಸಿದ ವರಾಹನ ತರುಣಿ ನೀನೀಗ ತಂದು ತೋರೆಲೆ 1 ಭಕ್ತ ನಿಧಿಯಾದ ನರಸಿಂಹನ ಧರೆಯ ನೀರಡಿ ಅಳೆದ ವಾಮನ ದೊರೆಯ ನಾನಿನ್ನೆಂದು ಕಾಂಬೆನೆ ಭರದಿ ಭಾರ್ಗವನಾದ ರಾಮನ ತರುಣಿ ತ್ವರಿತದಿ ತಂದು ತೋರೆಲೆ2 ದಧಿಘೃತ ಮೆದ್ದವನ ದುರುಳ ತ್ರಿಪುರರ ಗೆಲಿದ ಬೌದ್ಧನ ಸುದತಿ ನೀನೀಗ ತಂದು ತೋರೆಲೆ 3
--------------
ವ್ಯಾಸರಾಯರು
ಕಲಯ ರಘುವಂಶಾಬ್ಧಿಸೋಮಂ ಕಲ್ಯಾಣರಾಮಂ ಸಲಲಿತ ಗುಣಾಭಿರಾಮಂ ಸಕಲದಾನವವಿರಾಮಂ ಪ ಹರಿಹಯ ಸನ್ನುತಮಂಬುಜನೇತ್ರಂ ಪರಮಪವಿತ್ರಂ ಬಾನುಜ [ಸಖ]ಮಿತ್ರಂ 1 ಕಮನೀಯಾನನ ಕಾಂಚನಚಲಂ ದ್ಯುಮಣಿಕುಲಂ ರಣದೋರ್ಬಲಶೀಲಂ 2 ಹನುಮತ್ಸೇವಿತ ಆಹವಭೀಮಂ ಘನ [ಕೋಸಲಪುರ] ಕಲ್ಯಾಣರಾಮಂ 3
--------------
ಕೋಸಲ ಪುರೀಶರ
ಕಲಿ ಹೆಚ್ಚಿ ಬಂದಿತಲ್ಲ, ರಂಗಯ್ಯ ಕಾಯೆನ್ನ ಸಿರಿಯ ನಲ್ಲ ಪ ಕಾಲ ವಿಪರೀತದಿ ಅ ಅತ್ತೆಯ ಸೊಸೆ ಬಯ್ವಳು - ಪುತ್ರರು ತಮ್ಮಹೆತ್ತ ತಾಯಿಯ ಬಿಡುವರುಉತ್ತಮ ಗರತಿಗೆ ಅಪವಾದ - ಅವಿವೇಕಿಗಳುಎತ್ತ ನೋಡಲು ಹೆಚ್ಚಿ ಹೆದರಿಸಿತುನ್ಮತ್ತತನದಲಿ ಮನೆಯ ರಚಿಸುವರುಭಕ್ತಿಯೆಂಬುದ ಬಯಸದಿರುವರುಕತ್ತಲಾಯಿತು ಕಲಿಯ ಮಹಿಮೆ 1 ನಿತ್ಯ ನೇಮವು ನಿಂತಿತು - ಹೋಯಿತಲ್ಪಜಾತಿಗೈಶ್ವರ್ಯ ಭೋಗಭಾಗ್ಯಧಾತರಾದವರಿಗೆ ಧಾರಣೆ ಪಾರಣೆಜಾತಿನೀತಿಗಳೆಲ್ಲ ಒಂದಾಗಿಪಾತಕದಿ ಮನವೆರಗಿ ಮೋಹಿಸುತಮಾತಾಪಿತೃ ಗುರು ದೈವ ದ್ರೋಹದಿಭೂತಳವು ನಡ ನಡುಗುತಿಹುದು 2 ಬಿನ್ನಣ ಮಾತುಗಳು ಮತ್ತೆ ಮತ್ತೆಘನ್ನ ಮತ್ಸರ ಕ್ರೋಧಗಳುಅನ್ಯಾಯದಿಂದ ಅರ್ಥವ ಗಳಿಸುವರುತನ್ನ ಕಾಂತನ ಬಿಟ್ಟು ಸ್ತ್ರೀಯರುಅನ್ಯರಿಗೆ ಮನವೆರಗಿ ಮೋಹಿಪರುಬಣ್ಣಗೆಟ್ಟಿತು ವರ್ಣ ತಪ್ಪಿತು ಪ್ರ-ಸನ್ನ ಶ್ರೀ ನೆಲೆಯಾದಿಕೇಶವನೆ 3
--------------
ಕನಕದಾಸ
ಕಲಿಮುಖ್ಯ ದೈತ್ಯರನು ಸ್ಮರಿಸಿ ಬಿಡದೆ ಕಲುಷವರ್ಜಿತ ಭಾಗವತರು ಮರೆಯದಲೆ ಪ ಮಲಮೂತ್ರಗಳ ವಿಸರ್ಜನೆ ಗೈವಾಗ ಎಂ ಜಲ ಕೈ ಬಾಯ್ದೊಳೆದು ಉಗುಳುವಾಗ ಹುಳಿ ಬೀಜ ಕವಡೆ ಪಗಡೆಗಳಾಡುವಾಗ ಮ ಕ್ಕಳನಾಡಿಸುತಲಿ ವಿಸ್ಮರಣೆಯಿಂದಿರುವಾಗ 1 ಸಂಧಿಕಾಲದಲಿ ಸತಿಯೊಡನೆ ಪವಡಿಸಿದಾಗ ನಿಂದ್ಯ ಕರ್ಮಗಳನಾಚರಿಸುವಾಗ ತಂದೆ ತಾಯಿಗಳ ದಿನ ಮರೆತು ಒಟ್ಟಾಗ ಕ ರ್ಮೇಧಿ ಭಿಕ್ಷಕೆ ಬರಲು ಇಲ್ಲೆಂಬುವಾಗ 2 ಮಾಸೋಕ್ತ ಧರ್ಮವನು ತೊರೆದಾಗ ವಿಪ್ರಗೋ ಗ್ರಾಸಗಳ ಕೊಡದೆ ಭುಂಜಿಸುವಗಲೇ ಮೀಸಲು ಮಡಿ ಮೈಲಿಗೆಗಳ ನೋಡದಲೆ ದು ಷ್ಯಾಸೆಯಲಿ ನೀಚರಾಲಯದಲುಂಬಾಗ 3 ಪ್ರಾಯ ಧನ ಮದದಿಂದ ಹೇಯ ವಿಷಯಗಳು ಪಾ ದೇಯವೆಂದರಿದು ಭುಂಜಿಸುವಾಗಲು ಜಾಯಾತ್ಮ ದೇಹಾದಿಗಳು ತನ್ನದೆಂಬಾಗ ಮಾಯವಾದಿಯ ಉಕುತಿ ಮನಕೆ ತಂದಾಗ 4 ಮತಿವಮತರೊಡನೆ ಮತ್ಸರ ಪುಟ್ಟಿದಾಗವ ರ್ಪಿತ ಪದಾರ್ಥಗಳ ಭುಂಜಿಸುವಾಗಲು ಮೃತ ವತ್ಸ ಗೋವಿನ ಚಲಮಂಬಾಗ ಶ್ರೀ ಪತಿ ಜಗನ್ನಾಥವಿಠಲನ ಸ್ಮøತಿ ಬಿಟ್ಟಾಗ 5
--------------
ಜಗನ್ನಾಥದಾಸರು
ಕಲ್ಲು ನಾಯೇನೋ ಕೈವಲ್ಯದಾಯಕನೆ ಕಲ್ಲು ಕರುಣದಿಂದ್ಹೆಣ್ಣಾಗಿರಲುದ್ಧಾರ ಕೇಳೊ ಪ (ಉಡಬಲ್ಲೆ ಉಣಬಲ್ಲೆ) ಉತ್ತಮ ಸಂಗ ಬಿಡಬಲ್ಲೆ ನಡೆಯಬಲ್ಲೆನೋ ದುರ್ಮಾರ್ಗದಿಂದ ಕಡುಕೋಪದಿಂದ ಕಠಿಣ ಮಾತನಾಡಲು ಬಲ್ಲೆ ಕಡಲಶಯನನ್ನ ನಾಮ ನುಡಿಯಲೊಂದರಿಯೆನೊ 1 ಕಾಮಕ್ರೋಧವ ಬಲ್ಲೆ ಮತ್ಸರ ಮದ ಲೋಭ ಮೋಹ ಬಲ್ಲೆನೊ ಬಾಂಧವ ಭವದಿ ಪಾದದಿ ಭಕುತಿ ಪರಮಾದರೊಂದರಿಯೆನೊ 2 ನಿಷ್ಠುರಾಡುತ ಜನರ ನಿಂದಿಸುವುದು ಬಲ್ಲೆ ಕಷ್ಟದಾರಿದ್ರ್ಯ ಒಲ್ಲೆನ್ನಬಲ್ಲೆ ದುಷ್ಟ ಅಲ್ಪರಿಗೆ ಬಾಯ್ ತೆರೆಯಬಲ್ಲೆ ಭೀಮೇಶ- ಕಷ್ಟ ನಿನದಯ ಬೇಡಿಕೊಂಬೋದೊಂದರಿಯೆನೊ 3
--------------
ಹರಪನಹಳ್ಳಿಭೀಮವ್ವ
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ಕಳದೇವಲ್ಲ ಕೈಗೆ ನಿಲುಕಿದ ನಿಧಾನ |ತಿಳಿದು ಬಿಟ್ಟೆವಲ್ಲ ಸ್ವರ್ಗದ ಸೋಪಾನ || ಅಳಿದೆವಲ್ಲ ಆತ್ಮಲೋಕದ ವಿಮಾನ |ಸಲೆಯೆಂಬ ಸಮಯ ತುಂಬಿತಲ್ಸಮಾನಾ ಪ ಮದ್ದು ಮೇಯಿದಂತೆ ಚಿಂತೆಗಳಿದ್ದು ಸೊರಗಿ |ಕದ್ದು ಕಳ್ಳನಂತೆ ಲೋಕದೊಳು ತಿರುಗಿಬಿದ್ದು ಬೈಸಿಕೊಂಡೆ ಧನಿಕರಲಿ ಮರುಗಿ |ಹದ್ದು ಕಾಗೆಯಂತೆ ಕೂಳ ತಿಂದು ಒರಗಿ1 ಜನದ ಮನದ ನಾಚಿಕೆಗಳೆಲ್ಲ ಬಿಟ್ಟು |ಕನಸಿನಂಥ ವಿಷಯ ಸವಿಗೆ ಸೋಂಕಿ ಕೆಟ್ಟು |ಜನಿಸಿದವರ ಕೂಡ ಮತ್ಸರವ ತೊಟ್ಟು |ಶುನಕನಂತೆ ಬೊಗಳಿ ಬೊಗಳಿ ಗೋಳಿಟ್ಟು 2 ಉಕ್ಕಿ ಸೊಕ್ಕಿ ಸಾಧು ಸಜ್ಜನರ ದೂರಿ |ನಕ್ಕು ನುಡಿದು ಅವರ ದೋಷಗಳ ಬೀರಿ |ಝಕ್ಕಿಸಲರಿಯಾದವರ ಮಾತುಗಳ ಮೀರಿ |ರುಕ್ಮದಾಶೆ ಹಿಡಿಯದೆ ಹೇಡಿತನವ ತೋರಿ 3
--------------
ರುಕ್ಮಾಂಗದರು