ಒಟ್ಟು 160 ಕಡೆಗಳಲ್ಲಿ , 51 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನಿ ಧನೀ ದಯದೋರೊ ಬ್ಯಾಗೆನ್ನ ಅನಾಥ ರಕ್ಷಕ ಬೇರ್ಯಾರೊ ಪ. ಜಲಜನಾಭ ನಿನ್ನಲಿ ಮನವಿರಿಸಲು ಸುಲಭವು ಮೋಕ್ಷಾಂತದ ಫಲವು ಎಂದು ತಿಳಿದುದು ನೀಯರಿದಿರೆ ದೀನನ ಇಂಥ ಫಲದಲಿ ತಳಮಳಗೊಳಿಸುವದ್ಯಾತಕೆ 1 ಆರಿಗೊರೆವದೀ ಕ್ರೂರವೇದನೆಯನ್ನು ಸೈರಿಸಲಾರೆನು ಸರ್ವೇಶ ಕಂಸಾರಿ ನೀ ಗತಿ ಎಂದು ಚೀರುವೆ ಚಿನ್ಮಯ ತ್ರಿಗುಣೇಶ 2 ಘೋರಾಪದ್ಗಣ ವಾರುಧಿಯೊಳಗೀಸ- ಲಾರದೆ ಮುಳುಗಿದೆ ಮಾರಮಣ ಪಾರಗಾಣಿಸದಿರೆ ದೂರು ನಿನಗೆ ಬಂದು ಸೇರದೆ ಬಿಡದು ವೆಂಕಟರಮಣ3
--------------
ತುಪಾಕಿ ವೆಂಕಟರಮಣಾಚಾರ್ಯ
ಧರ್ಮದ ನೀತಿಯ ಅರಿತೇನು ಮರ್ಮದ ರೀತಿಯ ತಿಳಿದೇನು ಪ ಧರ್ಮಕರ್ಮಗಳು ಹರಿಗರ್ಪಣವೆಂದು ನಿರ್ಮಲಚಿತ್ತದಿ ಧ್ಯಾನಿಸದವನು ಅ.ಪ ಗಂಗಾಸ್ನಾನವ ಮಾಡಿದರೇನು ಅಂಗುಲಿಯೂರುವ ಯೋಗದೊಳೇನು ಪಂಗನಾಮ ಬೂದಿಯ ಬಳಿದೇನು ರಂಗನ ಸ್ಮರಿಸದ ಮನವಿದ್ದೇನು 1 ದೇಶ ದೇಶಂಗಳ ತಿರುಗಿದರೇನು ಆಶೆಯ ಬಿಡದ ಕಾಷಾಯದಿಂದೇನು ಕಾಶಿರಾಮೇಶ್ವರಕೋಡಿದರೇನು ಶ್ರೀಶನನಾಮವೇ ಗತಿಯೆನದವನು 2 ಚಿತ್ತದಿ [ನೆನೆದರೆ] ಹರಿ ಕಿರಿದೇ ಸತ್ತು ಹುಟ್ಟುವುದೇ ಜಗದೊಳು ಹಿರಿದೇ ಎತ್ತೆತ್ತಲು ಹರಿಯಿಹನೆನಬಾರದೇ ಕರ್ತಶ್ರೀ ಮಾಂಗಿರಿರಂಗನ ನೆನೆಯದೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಧ್ಯಾನಕೆ ಮನವಿಲ್ಲ ಸುರಪಾನಕೆ ಕೊನೆಯಿಲ್ಲ ಪ ದಾನಧರ್ಮಕೆ ಕೈಯಿಲ್ಲ ಜ್ಞಾನದ ಸೊಲ್ಲಿಗೆ ಸ್ಥಳವಿಲ್ಲ 1 ಜೀವಕೆ ಅರಿವಿನ ಅರಿವಾಯ್ತಲ್ಲ ದೀವಿಗೆ ಆರಿ ಕತ್ತಲೆಯಹುದೆಲ್ಲ 2 ಚಿಂತೆಯಿಂದ ತುಂಬಿತು ಸಕಲಾಂಗ ಸಂತವಿಸೋ ಎನ್ನ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾಯಿ ಕಚ್ಚೀತೆಚ್ಚರಿಕೆ ಎಲೋ ಡಾವಿಟ್ಟು ಬರುತಾದೆಚ್ಚರಿಕೆ ಪ ನೋವು ತೀರದೀ ನಾಯಿ ಕಚ್ಚಲು ಕೇವಲ ವಿಷವುಳ್ಳ ಹೇಯನಾಯಿ ಅ.ಪ ಮೆಚ್ಚು ಮದ್ದಿಕ್ಕುವುದು ಅಚ್ಚರೋಗದ ನಾಯಿ ಮುಚ್ಚುಮನೆ ಮುರಿವುದು ಲುಚ್ಚನಾಯಿ ಸಾಚ್ಯನೆಂದು ನಂಬಿ ನೆಚ್ಚಿದವರ ಮೇಲೆ ಕಚ್ಚಿ ಬಿಚ್ಚುವುದೊಂದ್ಹುಚ್ಚು ನಾಯಿ 1 ಸೂಳೆನ್ನ ಹೋಗುವುದು ಮೂಳನಾಯಿ ಶೀಲ ತೊರೆವುದೊಂದು ಜೂಲುನಾಯಿ ಕೀಳರಿಂ ತಲೆಗೂಡಿ ಹಾಳ್ಹರಟ್ಹೊಡೆವುದು ಕೂಳ ಕಾಣದಂಥ ಹಾಳೂರನಾಯಿ 2 ಉಂಡುಂಡು ಮಲಗ್ವುದು ಸುಂಡಿನಾಯಿ ಕಂಡಂತೆ ತಿರಗುವ ದಂಡನಾಯಿ ಹೆಂಡ್ತಿನ್ನ ಬಿಟ್ಟು ಪರರ್ಹೆಂಡರಿಗೊಲಿವುದು ಉಂಡೊಗೆದೆಂಜಲ ನೆಕ್ಕುವ ನಾಯಿ 3 ಬಡವರ ಬಡಿವುದು ಬಡಕನಾಯಿ ಕಡುಗರ್ವದಿರುವುದು ತುಡುಗ ನಾಯಿ ದೃಢಯುತರನು ಕಂಡು ಬಿಡುನುಡಿಯಾಡ್ವುದು ಸುಡುಗಾಡೋಳ್ಬಿದ್ದಸ್ತಿ ಕಡಿಯುವ ನಾಯಿ 4 ವಿಚಾರನರಿಯದ್ದು ಬೇಬಿಟ್ಟಿನಾಯಿ ಅಚಾರಮನವಿಲ್ಲದ್ಹರಕುನಾಯಿ ಊಚಸ್ಥಾನದಿ ಕೂತು ನಾಚದೆ ಮೋರಿಚ್ಛೆ ವಾಚ ಪೇಳ್ವುದೊಂದು ನೀಚನಾಯಿ 5 ಆಸೆ ಪೇಳುವುದೊಂದು ಮೋಸದ ನಾಯಿ ಶಾಶ್ವತ ತಿಳಿಯದ್ದು ಪಾಶದ ನಾಯಿ ಈಶನ ದಾಸರ ದೂಷಿಪುದು ಹೊಲೆ ದಾಸರಮನೆಮುಂದಿನ್ಹೇಸಿನಾಯಿ6 ಕೋಪವ ತೊರೆಯದ್ದು ತಿರುಕನಾಯಿ ಪಾಪಕ್ಕೆ ಅಂಜದ್ದೀ ನರಕಿನಾಯಿ ಭೂಪ ಶ್ರೀರಾಮನ ಜ್ಞಾಪಕಕೆ ತರುವೆನು ಕೂಪದಿ ಉರುಳುವ ಪಾಪಿನಾಯಿ 7
--------------
ರಾಮದಾಸರು
ನಿನ್ನವ ನಾನೆಂದು ಸಿರಿನಲ್ಲಾ ರಕ್ಷಿಸೋ | ಎನ್ನವಗುಣಗಳ ಎಣಿಸದೆ ದಯದಿಂದ ಪ ನಿನ್ನ ಮೂರುತಿಯ ಬೆಳಗವದೋರಿಸಿ | ನಿನ್ನ ಪಾದಾಂಬುಜ ಪರಿಮಳ ಸುಳಿಸಿ | ನಿನ್ನ ನಾಮಾಮೃತ ಸವಿಸವಿ ಉಣಿಸಿ1 ನಿನ್ನ ಪೂಜಿಸಿಕೊಂಡು ಕರಗಳಿಂದ | ಚೆನ್ನಾಗಿ ಪ್ರದಕ್ಷಿಣೆಯಾ ಪಾದಗಳಿಂದ | ಕಾಯ ನಮನದಿಂದ - ಎನ್ನ ಮನವಿಟ್ಟು ನಿನ್ನ ನೆನುವಿನಿಂದಾ2 ಅನುದಿನ ಕೊಟ್ಟು ನಿನ್ನ ದಾಸರ ಸಂಗ | ಕೊನೆದೇಳದಿರಲೆನ್ನಾ ವಿಶ್ರಾಮದಂಗ | ನೀನಾಗಿರು ತುಂಬಿಯೆನ್ನಾ ಬಾಹ್ಯಾಂತರಂಗ | ಘನಗುರು ಮಹಿಪತಿ ಪ್ರಭುಶ್ರೀರಂಗ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನವರ ಸಂಗ ಎಂತಹದಯ್ಯಾ ಅನಂತ ಜನ್ಮದ ಪಾಪ ಪುಂಜರ ನಾನು ಪ ಬಾರೆ ಸುಜನರ ಮನಕೆ ತಾರೆ ಗಂಗೋದಕವ ಸೇರೆ ನಿನ್ನಡಿಗಳಲಿ ಸಾರೆ ಉತ್ತಮರ ಕೀರ್ತಿ ಬೀರೆ ನಿನ್ನಯ ಮಹಿಮೆ ಕೋರೆ ನಿರ್ಮಳ ದಾರಿಯಾ ನೀರೆಯರ ಶಶಿಬಿಂಬ ಮೋರೆ ಬಣ್ಣಕೆ ಮೆಚ್ಚಿ ಕಾರ್ಯ ಕಾರಣ ಜರಿದು ಭಾರಿ ತಿರುಗವನಿಗೆ1 ಏಕಾದಶಿ ದಿನ ಬೇಕೆಂದು ಮನವಿಟ್ಟು ಪಾಕನ್ನ ಮಾಡಿಸುವನೊ ನೇಕಪರಿ ಮಾಡಿಸುವನೊ ಪೋಕತನದಲ್ಲಿ ವಿವೇಕ ರÀಹಿತನಾಗಿ ಗೋಕುಲವ ಹಳಿದು ಕೋ ವಾರೆವಿದ್ದವನಿಗೆ2 ಪರರ ವಡವೆಯ ನೋಡಿ ಧರಿಸಲಾರದೆ ಮನ ಮರಗಿ ನಿಷ್ಠುರನಾಡಿ ಇರಳು ಹಗಲೂತ್ತ- ಮರ ಬೈದು ಪಾಪಕ್ಕೆ ಗುರಿಯಾಗಿ ನಸುನಗುತ ಪಿರಿದು ದುರ್ವಿಷಯದೊಳು ಹೊರಳಿ ಹಕ್ಕಲನಾಗಿ ಮರಳಿ ಜನಗಳಲ್ಲಿ ಜನಮವಾಗುವನಿಗೆ 3 ಅತಿಥಿ ಅಭ್ಯಾಗತರ ಕಂಡು ಸ್ಮರಿಸದೆ ಮತಿಹೀನವಾಗಿ ಭ- ಕುತಿ ಲೇಸ ತಾ ತಾ ಕೊಂಬೆನಯ್ಯಾ ಆರನಾರನಾದರು ಕರಿಯೆ ಚತುರೋಕ್ತಿಯಲಿ ನೆನೆಸಿ ಪ್ರತಿ ಯಾರು ನಿನಗೆಂದು ಗರ್ವದಲ್ಲಿದ್ದವನಿಗೆ 4 ಆದಿಯಲಿ ಬಂದದ್ದು ಅಂತ್ಯದಲಿ ಪೋಗುವ ಹಾದಿಯನು ತಿಳಿತಿಳಿದು ಕ್ರೋಧವನು ಬಿಡದೆ ಕಾದುವೆನು ಹಲ್ಲು ಕಡಿದು ಸಾಧುಗಳ ನೋಡದಲೆ ವೇದಾರ್ಥಗಳ ಓದಿ ಶೋಧಿಸಿ ಕೇಳಿ ವಾದವನು ಮಾಡಿ ಸಂಪಾದಿಸುವ ದುರ್ಧರನಿಗೆ5 ದುರ್ಧನಕೆ ಕೈಕೊಡುವೆ | ಮೊದಲೆ ಕನಸಿನೊಳಗಾದರೂ ಗುಣಿಸುವೆ ಪರರ ಹಿಂಸೆಯನು ಬಿಡೆ ಕ್ಷಣವಾದರು ತನುವಿನ ಕ್ಲೇಶದಲಿ ದಿನವ ಹಾಕಿದೆ ವ್ಯರ್ಥ ದಣಿದಣಿದು ಈ ಪರಿಯನು ಮಾಡಿದವನಿಗೆ 6 ಹುಟ್ಟಿದಾರಭ್ಯವಾಗಿ ಶಿಷ್ಟಾಚಾರವ ತೊರೆದು ಕೆಟ್ಟ ಬಾಳಿದೆ ಧರಣೀಲೀ ಸುಟ್ಟ ಸಂಸಾರದೊಳು ಸಟಿಯಾಡಿ ಗುಟ್ಟಗುಂದಿದೆ ವಿಜಯವಿಠ್ಠಲ ನಿನ್ನ ನೆರೆ ಮರೆದು ಕೆಟ್ಟು ನರಕಕ್ಕೆ ಮನಮುಟ್ಟಿ ಬೀಳುವವನಿಗೆ 7
--------------
ವಿಜಯದಾಸ
ನಿಲ್ಲದೋ ನಿಲ್ಲದೋ ಮನವಿದು ಸಲ್ಲದೋ ಸಲ್ಲದೋ ಪ ಸ್ನಾನ ಸಂಧ್ಯಾದಿ ಮೌನ ವಿಡದು ಅನು | ಷ್ಠಾನ ಜಪವ ಮಾಡಲಿ ಕುಳಿತರೆ | ತಾನಾಗ ಹೊರಡುತಲಿ ತಿರಗÀುತ | ನಾನಾ ದುರ್ವಿಷಯದಲಿ ತಂದು ಮಹಾನಿದ್ರೆ ಒಡ್ಡುತಲಿ1 ಘಾಸಿ ಬಡುವರೆಂಬ | ದೀ ಶಾಸ್ತ್ರಗಳ ಬಲ್ಲದು ಸದ್ಗುಣ | ಧ್ಯಾಸ ವೆಂದಿಗು ಮಾಡದು ದುವ್ರ್ಯತ್ತಿ | ಹೇಸದಾ ಚರಿಸುವದು2 ಆವಗತಿಯೋ ಯೆನಗಾವ ಜನುಮವೋ | ಆವಬವಣೆಯಂಬುದು ತಿಳಿಯದು | ದೇವನೇ ಸಲಹುವದು ಮನ | ವಿವೇಕದಿ ತಿದ್ದುವದು | ಗುರು ಮಹಿಪತಿ ಸುತಗೊಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ನೆನೆವವಗೆ ಹರಿಯುಂಟು ನೆನೆಯದವಗೆ ಮದ ವೆಂಟು ಪ ನೆನೆವ ಮನವಿರಲುಂಟು ಮುನಿಸುತನ ನಂಟು ಅ.ಪ ನೆನೆವ ಧೃವನೂ ಗೆದ್ದ ಶುಕಮಹಾಮುನಿಗೆದ್ದ ನೆನೆವ ಹನುಮನೂ ಗೆದ್ದ ಶರಭಂಗ ಮುನಿಗೆದ್ದ ನೆನೆವ ಗಜಪತಿಗೆದ್ದ ವಾಲಿತನಯನೂ ಗೆದ್ದ ಕನಕದಾಸನು ಗೆದ್ದ ಇದು ಸರ್ವಸಿದ್ಧ 1 ಧುರದಿ ರಾವಣ ಬಿದ್ದ ವರವಿಭೀಷಣ ಗೆದ್ದ ದುರುಳ ಕಶಿಪೂ ಬಿದ್ದ ಪ್ರಹ್ಲಾದ ಶಿಶುಗೆದ್ದ ಹಿರಿಯವಾಲಿಯುಬಿದ್ದ ಸುಗ್ರೀವ ಗೆದ್ದ 2 ಸುಲಭನೊ ಮಾಂಗಿರಿಯ ರಂಗ ಜಗದಾನಂದ ಫಲವ ಕೊಟ್ಟಳಿಗೊಲಿದ ವಿಷಧರೆಯ ಸದೆದ ಬಲು ಮೆರೆದ ಕೌರವನ ಕುಲವಿನಾಶವ ಗೈದ ಚೆಲುವ ಮಾಂಗಿರಿರಂಗ ಶರಣರಿಗೆ ವರದ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೆಲಿಗೆ ಬಾರದು ಗುರುವೇ ಮನವಿದು ಪ ಒಳ್ಳೆಯವರಾ ನಡೆ ಕಂಡು | ಎಳ್ಳನಿತು ನಾಚದು | ಖುಳ್ಳರ ಮನದಲ್ಲಿ ಬೆರೆಸುವದು 1 ಚರಟ ಮಾತುಗಳಲ್ಲಿ ಹರುಷವ ಬಡುವರು | ಪರಮ ಸದ್ಭೋಧದಲ್ಲಿ ತೊಳಗುವದು 2 ಏನ ಹೇಳಿದರೇನು ಜ್ಞಾನವ ಕೊಳ್ಳದು | ತಾನೆ ತನ್ನಿಚ್ಛೆಯಲಿ ತಿರುಗುವದು 3 ಸ್ಥಿರವಾಗುವ ಪರಿಯಲಿ ಕರುಣವ ಮಾಡುವುದು | ಸರಣೆ ಸರಪಳಿ ನಿಕ್ಕಿ ನಿಲಿಸುವುದು 4 ಸನ್ನುತ ಮಹಿಪತಿ ಚಿನ್ನನ ಹೊರೆವದು | ಧನ್ಯಗೈಸಲು ಮನವ ತಿದ್ದುವದು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೆ ಅಡ್ಡ ಬಂದ ಗ್ರಹಚಾರಮಾಡೆ ಪಾಪವ ಮನ ಆತ್ಮಂಗೆಂಬುದು ಪ ಕಳ್ಳ ಕನ್ನದಿ ಸಾಯೆ ಡೊಳ್ಳುಕೋಮಟಿಗನತಳ್ಳಿ ಶೂಲಕೆ ಏರಿಸು ಎಂಬ ಗಾದೆಜಳ್ಳು ಮನವಿದು ನಿಲದೆ ಪಾಪವನು ಮಾಡಿದರೆಆ ಪಾಪ ಆತ್ಮಗೆ ಎಂದು ಊಹಿಸುವರು 1 ಕೋಳ ಹಾಕೆಂಬ ಗಾದೆಮೂಢ ಮನವಿದು ತಾನು ಪಾಪವನು ಮಾಡಿದರೆಆಡಲೇನದ ಆತ್ಮಗೆಂದು ಊಹಿಸುವರು 2 ಮನವು ಎಂಬುದು ಆತ್ಮನಿಂದ ಸಂಚರಿಪುದುಮನವು ಆತ್ಮನೊಳು ಲಯವು ಅಹುದುಮನವು ಮೊದಲಿಗೆ ಸುಳ್ಳು ಪಾಪಗಳಿಹವೆಲ್ಲಿಮನಕುಗೋಚರ ಚಿದಾನಂದ ಶುದ್ಧಾತ್ಮನು3
--------------
ಚಿದಾನಂದ ಅವಧೂತರು
ಪಂಕಜಾಸನ ವಂದ್ಯ | ವೆಂಕಟಾದ್ರಿ ವಿಠಲ ತವಕಿಂಕತನ ವಿತ್ತವಗೆ | ಸಂಕಟವ ಕಳೆಯೊ ಪ ಮಂಕುಹರಿಸುಜ್ಞಾನ | ದಂಕುರಕೆ ಮನಮಾಡಿಬಿಂಕದಿಂ ಪೊರೆಇವನ | ಅಕಳಂಕ ಮಹಿಮಾ ಅ.ಪ. ಸತ್ಯಶೌಚಾಚಾರ | ಕೃತ್ಯದಲಿ ಮನವಿರಿಸುನಿತ್ಯತವ ಮಹಿಮಗಳ | ಸುತ್ತಿಇರಲಿ ಇವಗೇನಿತ್ಯನೂತನ ಮಹಿಮ | ತತ್ವಗಳ ತಿಳಿಸುತ್ತಭೃತ್ಯವತ್ಸಲ ಕಾಯೋ | ಮೃತ್ಯುಹರದೇವಾ 1 ತತ್ವಾರ್ಥ ತಿರುಳುಗಳೆ | ಚಿತ್ರಿಸುವ ಕಲೆವೃದ್ಧಿವಿಸ್ತರೀಸಿವನಲ್ಲಿ | ನಿಸ್ತುಲಾತ್ಮಕನೇ |ಅರ್ಥಕಾಮಸುರೂಪ | ಪೊತ್ತುಪೊರೆಯುವ ದೇವಾಪ್ರತ್ಯೇಕ ಪ್ರಾರ್ಥನೆಯ | ಕೃತ್ಯವೇಕಿನ್ನು 2 ನಾನು ನನ್ನದು ಎಂಬ | ಹೀನಮತಿಕಳೆದಿನ್ನುನೀನು ನೀನೇ ಎಂಬ | ಜ್ಞಾನಮಹಬರಲೀ |ಪ್ರಾಣ ಪ್ರಾಣನೆ ಜಗ | ತ್ರಾಣನಹುದೆಂಬ ಸುಜ್ಞಾನ ಪಾಲಿಸಿ ಪೊರೆಯೋ | ಮನಿಮಧ್ವ ವರದಾ 3 ಮೀನಾಂಕ ಜನಕಾಮಾನಮೇಯಾನುಭವ | ಸಾನು ಕೂಲಿಸುವಕೋನೇರಿವಾಸ ಕಾರುಣ್ಯ | ತೋರಿವಗೇ4 ಗೋವತ್ಸದನಿ ಕೇಳಿ | ಆವುಧಾನಿಸುವಂತೆನೀವೊಲಿದು ಕಾಪಾಡು | ಬಾವುಕರ ಪಾಲಾ |ಪೂವಿಲ್ಲನಯ್ಯಗುರು | ಗೋವಿಂದ ವಿಠಲತವಪಾವನವ ಪದ ತೋರೆ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು