ಒಟ್ಟು 118 ಕಡೆಗಳಲ್ಲಿ , 49 ದಾಸರು , 108 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲು ದೊಡ್ಡಸ್ವಾಮಿ ಮೂಲೋಕದೊಡಿಯ ನಮ್ಮ ಧ್ರುವ ಅನಂತಕೋಟಿ ಬ್ರಹ್ಮಾಂಡ ಅನುದಿನನಾಳುತ ಪ್ರಚಂಡ ತಾನೆ ಆಗ್ಯಾನೆ ಅಖಂಡ ಘನಗುರು ಮಾರ್ತಾಂಡ 1 ವಿಭೀಷಣಗೆ ಸ್ಥಿರಕೊಟ್ಟ ದುಷ್ಟರ ಜನರ ಕುಟ್ಟಿ ನಿಷ್ಠುರ ನಿಜಶ್ರೇಷ್ಠ 2 ಶಿಷ್ಟರಜನರಿಗಭಯವ ನಿಜನೋಡಿ ಮುಟ್ಟಿ ಮುದ್ರಿಸಿ ದಯಮಾಡಿ ಪೃಷ್ಠದಲಿ ನೋಡಿ 3 ಗ್ರಾಸವು ತಂದಿಪ್ಪ ಚಿತ್ಪ್ರಕಾಶದ ಸ್ವರೂಪ ಭಕ್ತರ ಪಾಲಿಪ 4 ನಾಮದೊಲವಿಲೆ ತನುನಿಜಭಾಗ್ಯ ಸ್ವಾಮಿಸೇವೆಗೆ ಮಾಡಿದ ಯೋಗ್ಯ ಪ್ರೇಮದಂತಾಭೋಗ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರೆ ಸಖಿ ವಾರಿಜ ಮುಖಿ ಬಾರೆ ಬಾರೆ ಸಖಿ ಬಾರೆ ಕೋಪಿಸೋರೆ ಹೀಗೆ ಯಾರುಪದೇಶವುಮುರಾರಿಯ ಮುಖ್ಯ ಬಲರಾಮನ ಸಖಿಯೆಬಾರೆ ಬಾರೆ ವಾರಿಜ ಮುಖಿಯೆ ಪ. ಪುಟ್ಟ ಸುಭದ್ರಾ ನಿನಗೆ ಸಿಟ್ಯಾಕ ಒದಗಿತಇಟ್ಟ ಮುದ್ರಿಗಳು ತಡವಾಗಿಇಟ್ಟ ಮುದ್ರಿಗಳು ತಡವಾಗಿ ಮುಯ್ಯವಇಷ್ಟು ಹೊತ್ತನಾಗೆ ತರಬಹುದೆ 1 ಕೇಳೆ ಸುಭದ್ರಾ ಮುಯ್ಯಾ ಕಾಳ ರಾತ್ರಿಲೆ ತಂದುಭಾಳ ಕೋಪಿಸುವ ಬಗಿ ಹೇಳಭಾಳ ಕೋಪಿಸುವ ಬಗಿ ಹೇಳ ಮುತ್ತಿನ ತೋಳುತಾಯಿತವ ಕೊಡುವೆನ 2 ಧಿಟ್ಟ ಸುಭದ್ರಾ ಮುಯ್ಯಾ ಇಷ್ಟೊತ್ತ್ತಿನಾಗ ತಂದು ಸಿಟ್ಟು ಮಾಡಿದ ಬಗಿ ಹೇಳಸಿಟ್ಟು ಮಾಡಿದ ಬಗಿ ಹೇಳ ಮುತ್ತಿನ ಕಟ್ಟಾಣಿ ಕೊಡುವೆ ನಿನಗಿನ್ನು3 ಲೋಕನಾಯಕಿ ಕೃಷ್ಣ್ಣಿ ಕೋಪವ್ಯಾ ಕೊದಗಿತಹಾಕಿದ ಮುದ್ರಿ ತಡವಾಗಿ ಹಾಕಿದ ಮುದ್ರಿ ತಡವಾಗಿ ಮುಯ್ಯವ ಈ ಕಾಲದೊಳಗೆ ತರಬಹುದೆ4 ಕೆಂಡದಂಥವಳ ಗುಣ ಕಂಡೇವ ಸಭೆಯೊಳು ಚಂಡಿತನವನೆ ಬಿಡು ಕೃಷ್ಣಿಚಂಡಿತನವನೆ ಬಿಡು ಕೃಷ್ಣಿ ಮುತ್ತಿನ ದಂಡೆ ಕೊಡುವೆ ಬಿಡುಕೋಪ5 ಬೆಂಕಿಯಂಥವಳ ಗುಣ ಶಕ್ಯವೆ ವರ್ಣಿಸಲು ಶಂಕರಾದ್ಯರಿಗೆ ವಶವಲ್ಲಶಂಕರಾದ್ಯರಿಗೆ ವಶವಲ್ಲ ಮುತ್ತಿನ ವಂಕಿಯ ಕೊಡುವೆ ನಿನಗಿನ್ನು 6 ಸತಿಯು ಸುಭದ್ರೆ ನೀನು ಯತಿಯ ಬೆನ್ಹತ್ತಿದಾಗ ಅತಿಭೀತಿ ಎಲ್ಲಿ ಅಡಗಿತ್ತಅತಿಭೀತಿ ಎಲ್ಲಿ ಅಡಗಿತ್ತ ನಾವುನಿನ್ನ ಪತಿವ್ರತ ತನವ ಅರಿವೆನೆ7 ಮಿತ್ರೆಯರು ನಾವೆಲ್ಲ ತುಪ್ಪಅನ್ನವನುಂಡುಪುತ್ರರ ಸಹಿತ ಸುಖನಿದ್ರೆಪುತ್ರರ ಸಹಿತ ಸುಖನಿದ್ರೆ ಗೈವಾಗ ಮತ್ತ ನೀ ಮುಯ್ಯ ತರಬಹುದೆ8 ಲೋಲ ರಾಮೇಶನು ಹಾಲು ಅನ್ನವನುಂಡುಬಾಲರ ಸಹಿತ ಸುಖನಿದ್ರೆಬಾಲರ ಸಹಿತ ಸುಖನಿದ್ರೆ ಗೈವಾಗಮ್ಯಾಲೆ ಮುಯ್ಯ ತರಬಹುದೆ9
--------------
ಗಲಗಲಿಅವ್ವನವರು
ಬೀಗಮುದ್ರೆಗಳಹವು ಬಹು ಬಾಗಿಲುಗಳಾಗಿಸಾಗರಾತ್ಮಜೆಯರಸ ಸುಖದಿ ಪವಡಿಸಲು ಪಪುರದ ಮುಂಭಾಗದಲಿ ಹೊಳೆವ ದ್ವಾರಗಳೈದುಹೊರಗುಭಯಪಾಶ್ರ್ವದಲಿ ಹೊಂದಿರುವವೆರಡುತೆರೆದು ಮುಚ್ಚುತಲಿರುವ ತತ್ಪಶ್ಚಿಮದಲೆರಡುಗುರಿಕಾರರೊಳಸರಿದು ಗೋಪ್ಯರಾಗುವರಿಂತು 1ಮೊದಲ ಜಾವದಲಿವನು ಮುಚ್ಚಿ ಮುದ್ರಿಸುತಿಹರುಹುದುಗಿದೊಳ ದ್ವಾರಗಳ ಹಾಗೆ ತೆರೆದಿಹರುಅದರೊಳರಸೆಡೆಯಾಡಿಯಾ ಭೋಗವನುಭವಿಸಿಕದಲಂತಃಪುರಕೆ ಕಡು ಮುದ್ರಿಸುವರು 2ಅಂತರದೊಳಿಹ ದ್ವಾರವವು ನಾಲ್ಕು ಬಳಿಕಲ್ಲಿಅಂತರಿಸದಧಿಪತಿಗಳವರು ನಾಲುವರುಸಂತತವು ಕಾದಿರುತ ಸರಿವರೊಳಮುಖವಾಗಿನಿಂತು ದೊರೆಯೊಡನಿವರ್ಗೆ ನಿದ್ರೆಯಾಗುವದಿಂತು 3ದ್ವಾರ ನಾಲ್ಕರೊಳೊಂದೆ ದೊಡ್ಡದದರಲಿ ದೊರೆಯುಸೇರಿ ನಿರತವು ತಾನು ಸಂಚರಿಪನಾಗಿಮೂರುಳಿದ ದ್ವಾರಗಳು ಮುಖ್ಯವಹುದಾದಡೆಯುತೋರುವೊಂದು ದ್ವಾರದಲಿ ತಾವೇಕವಾಗಿಹವು 4ಸಣ್ಣ ದ್ವಾರಗಳಿನ್ನು ಸಾವಿರಗಳುಂಟೊಳಗೆಕಣ್ಣಿ ಯೊಂದಿವಕೆಲ್ಲ ಕಟ್ಟಿರುವದದನುಪಿಣ್ಣವಾಗಿಯೆ ದೊರೆಯು ಪಿಡಿದೆಚ್ಚರದೊಳಿದ್ದುಕಣ್ಣಾಗಿ ತಾ ಕಾಯ್ವ ಕೋಟೆುದನೊಳಗಿದ್ದು 5ಯೋಗನಿದ್ರೆಯದೆಂದಡಿದು ಪರಮ ಪುರುಷನಿಗೆರಾಗವಿಲ್ಲದೆ ದೇವರಾಜಿಯಲಿ ನಿಂದುಭೋಗವನ್ನಿವರ್ಗೆಲ್ಲ ಬಹಿರಂಗದೊಳಗಿತ್ತುಭೋಗಾವಸಾನದಲಿ ಬಳಿಕೊಟ್ಟುಗೂಡಿಸಲು 6ಏಕನದ್ವಯನಮಲನೀಶ್ವರನು ಪರದಲ್ಲಿಪ್ರಾಕೃತದ ಪದ್ಧತಿಯ ಪರಿಪಾಲಿಸುತಲುಲೋಕೇಶ ತಿರುಪತಿಯ ಲೋಲ ವೆಂಕಟರಮಣನೀ ಕಳೇಬರದಲಿರಲಿಂದಿರೆಯನೊಳಕೊಂಡು 7ಓಂ ಸರ್ವಗ್ರಹರೂಪಿಣೇ ನಮಃ
--------------
ತಿಮ್ಮಪ್ಪದಾಸರು
ಬೆಳಗಿರೇ ಆರತಿಯ ಮುತ್ತೈದೆರೆಲ್ಲರೂ ಕೂಡಿಬೆಳಗಿರೇಆರತಿಯ ಪ ಶ್ರೀ ಗುರು ಗಣಪತಿ ಚರಣಾರವಿಂದಕೆ ಬಾಗಿ ಮಣಿದು ಶಾರದಾಂಬಿಕೆ ಅಮ್ಮನ ಆಗಮೋಕ್ತದಿ ಪೂಜಿಸುವೆ ಚರಿತವನೀಗಳು ಕರುಣಿಸುತಿಹ ವಿಘ್ನರಾಜಗೆ ಮೊದಲ ಆರತಿಯ ಬೆಳಗಿರೆ 1 ಸರಸಿಜೋದ್ಭವನ ರಾಣಿ ಕಲ್ಯಾಣಿ ವಿದ್ಯೆಗಧಿಕಾರಿ ಸುರವಂದ್ಯೆ ಸುಪ್ರದಾಯಕಿ ಶಾರದಾಂಬಿಕೆಗೆ 2 ಶಾರದಾಂಬಿಕೆಗೆ ಹರಳಿನಾರತಿಯ ಬೆಳಗಿರೆ 3 ಬಿರು ಮುಗುಳಿನ ಚಂಪಕದಂತೆ ನಾಸಿಕ ಕದಪು ಕನ್ನಡಿಯವೇಲ್ ಲೋಕಮಾತೆಗೆ ಪರಿಮಳ ದಾರತಿ ಬೆಳಗಿರೆ 4 ಮರೆಯಲು ಗರಳಸ್ವರವು ಕೋಗಿಲೆಯಂತೆ ನಳಿದೋಳೆರಡು ಬೆರಳು ಸಂಪಿಗೆಯ ಸರಳಿರುವಂತೆ ಮೆರೆವ ಈ ಶಾರದಾಂಬಿಕೆಗೆ ಹವಳದಾರತಿ ಬೆಳಗಿರೆ 5 ಕಿರುಬಸುರಿನ ಸುಳಿನಾಭಿ ಇಟ್ಟ ವೋಲೆ ತ್ರಿವಳಿಯ ಹರಿಮಧ್ಯ ನಡುವಿಗೆ ಉಟ್ಟ ಪೀತಾಂಬರದ ಶ್ರೀ ಶಾರದಾಂಬಿಕೆಗೆ ಬಟ್ಟಲಾರತಿ ಬೆಳಗಿರೆ 6 ಮಂದಗಮನೆ ಜಗದ್ವಂದ್ಯೆಗೆರಗಿ ನಾ ಮುಂದೆ ಪೇಳುವ ಪರಿಪರಿ ವಸ್ತ್ರ ಭೂಷಣದಿಂದ ಮೆರೆವ ಮಣಿ ಮಕುಟ ಫಣಿಗೆ ಶ್ರೀಗಂಧ ಕುಂಕುಮವಿಟ್ಟ ಶಾರದಾಂಬಿಕೆಗೆ ಕುಂದಣ ದಾರತಿ ಬೆಳಗಿರೆ 7 ಪುತ್ಥಳಿ ಹಾರಹೀರಾವಳಿ ಮುತ್ತಿನಸರ ಚಿನ್ನದಸರ ಚಕ್ರಸರ ಜ್ವಲಿಸುತ್ತಲಿರುವ ಮೆರೆವ ಶ್ರೀ ಶಾರದಾಂಬಿಕೆಗೆ ಮುತ್ತಿನಾರತಿ ಬೆಳಗಿರೆ 8 ರತ್ನದಸರ ಪದಕದಸರವು ಏಕಾವಳಿಸರ ಕೊರಳೊಳಗಳ ನಳಿನ ದಾರತಿ ಬೆಳಗಿರೆ 9 ಹರಳು ಮೌಕ್ತಿಕದಿಂದ ಮೆರೆವ ಮೂಗುತಿ ಚಂದ್ರನ ಹರಳು ಚೌಲಿಯ ತುಂಬುಪರಿಮಳಿಸುವ ಪೂವು ಕರಿ ಮಣಿ ಹರಳಿನಾರತಿ ಬೆಳಗಿರೆ 10 ಮೆರೆವಚೂಡವು ಕೈ ಚಳಕಿಗೆ ಕೆತ್ತಿದ ಹರಳಿನ ವಡ್ಯಾಣ ನಡುವಿಗೆ ಅಳವಟ್ಟು ರೂಢಿಸಿ ಬಕುತರ ಪಾಲಿಪ ಶಾರದಾ ದೇವಿಗೆ ಆರತಿ ಬೆಳಗಿರೆ 11 ಥರಥರ ನವರತ್ನ ಖಚಿತದಿಂದೊಪ್ಪುವ ಕರವೆರಡರ ಭುಜ ಕೀರ್ತಿ ವಜ್ರದೊಳ್ ಬಿರಿದ ತೋಳ್ ಬಳೆವಾಲೆ ಶಾರದಾದೇವಿಗಾರತಿ ಬೆಳಗಿರೆ 12 ಚಿನ್ನದ ಕಿರುಗೆಜ್ಜೆ ಅಂದಿಗೆ ಗಿಲಿಗಿಲಿರೆನ್ನಲು ಹಾರ ಹೊಯ್ದೊಡರು ಬಿರಿಚೊಕ್ಕ ಚಿನ್ನದ ಸರಪಳಿ ಭಾರಿಗಳ ನೆಳೆವ ಸುಪ್ರಸಂಗನೆಗಾರತಿಯ ಬೆಳಗಿರೆ 13 ಪಿಲ್ಲಿಯುಕಿರು ಬೆರಳಲಿ ಮಿಂಚಿನಂತಿಹುದಿಲ್ಲಹರಳು ಮಂಚಿಕೆ ಕೊಡೆ ಹೊಳೆಯುವ ಚೆಲುವ ಕಾಲುಂಗರ ವರ ವೀರ ಮುದ್ರಿಕೆಯಲಿ ಒಪ್ಪುತಲಿಹ ಶಾರದಾಂಬಿಕೆಗೆ ಮಲ್ಲಿಗೆ ಯಾರತಿಯ ಬೆಳಗಿರೆ 14 ಭಾರಕೆ ಶಾರದೆ ಒಲಿಯುತ ದೇಹದ ಕಾಂತಿ ಯಿಂದ ದಿಕ್ಕನು ಮುತ್ತೀನಾರತಿಯ ಬೆಳಗಿರೆ 15 ಕರುಣಾಂಬೆ ಕಾಶ್ಮೀರ ಪುರವರಧೀಶ್ವರಿ ಪರಮಹಂಸವರ್ಯ ಪರಿ ಪರಿ ರುದ್ರನ ಪೋಲ್ವ ನಿಶದದುತಿ ಮೂರ್ತಿ ಪರಿಪರಿ ಆರತಿಯ ಬೆಳಗಿರೆ 16 ಪುಷ್ಪ ಧೂಪ ದೀಪಗಳಿಂದ ಸಡಗgದಿಂದಲಿ ಸಮರ್ಪಿಸಿ ಜಯ ಜಗದರೂಪೆ ರಕ್ಷಿಸು ಮಾತಾಯೆ ಕರುಣಿಸು ಎಂದು ಕಡು ಬೆಡಗಿನ ಆರತಿಯ ಬೆಳಗಿರೆ 17 ಕಡುಬು ಕಜ್ಜಾಯ ಪಾಯಸಕ್ಷೀರ ದಧಿಘೃತತಡೆಯಿಲ್ಲ ತುಂಬಿ ದೇವಿಗೆ ಕರಿಯ ಕಬ್ಬಿನ ಕೋಲು ಆರತಿಯ ಬೆಳಗಿರೆ 18 ಹರಿವಾಣ ನೇವೇದ್ಯಜಗನ್ಮಾತೆ ತಾಬೂಲವನಿತ್ತು ಶರಣೆಂದು ನೂತರದಾರತಿಯ ಬೆಳಗಿರೆ 19 ತಮ್ಮಟೆ ಭೇರಿ ಬುರುಗು ಶಂಖ ಮೃದಂಗವು ನೀಲದಾರತಿಯ ಬೆಳಗಿರೆ 20 ಭೋರಿಡುವವಾದ್ಯವು ಉಡುಕು ಕೊಳಲು ತಂಬೂರಿ ತಾಳಗಳಿಂದ ಸ್ವರವೆತ್ತಿಪಾಡಿ ಆರತಿಯ ಎತ್ತಿರೆ 21 ಬೇಡುತ ಪೂಮಳೆಗರೆಯುತ ಹೊಡೆದು ಕೊಂಡಾಡಿ ವಂದಿಸಿದರು ಶಾರದಾಂಬಿಕೆಗೆ ಹೂವಿನಾರತಿಯ ಎತ್ತಿರೆ 22 ವರದಾಂಬೆ ಶಾರದಾಂಬಿಕೆಯನು ಪೂಜಿಸಿದವರಿಗೆ ಪರಿಪರಿ ವಿದ್ಯವ ಕರುಣಿಸೆ ನರರಿಗೆ ಇಷ್ಟಾರ್ಥದ ವರವಿತ್ತು ಕೊಡುವಳು ಮರಕತದಾರತಿ ಬೆಳಗಿರೆ 23 ಹಿರಿಯಮಗನ ರಾಣಿ ಶಾರದಾಂಬಿಕೆಯ ಸುರಮುನಿ ಜನರಿಗಿಷ್ಟಾರ್ಥವ ವರವಿತ್ತು ಮಂಗಳಾರತಿಯ ಬೆಳಗಿರೆ 24
--------------
ಕವಿ ಪರಮದೇವದಾಸರು
ಭಾರತೀ ರಮಣ ಸುರವಿನುತ ಚರಣ ಶಾರದಾ ಪುರ ಶರಣ ಪ ನೂರು ಯೋಜನಮಿರ್ದವಾರಿಧಿ ಲಂಘಿಸಿ ಬೇಗ ಧಾರುಣಿ ಸುತೆಯ ಕಂಡು ದೂರ ನಮಿಸಿ ಸಾರಿ ಮುದ್ರಿಕೆಯ ನಿತ್ತು ತೋರಿರಾಕ್ಷಸಗೆ ಭಯ ಶ್ರೀರಾಮಗೆ ಬಂದು ಕ್ಷೇಮ ವಾರುತಿಯ ಪೇಳಿದಂಥ 1 ಇಂದು ಕುಲದಲ್ಲಿ ಪಾಂಡುನಂದನನೆನಿಸಿ ಜರಾ ಸಂಧ ಮುಖರನು ಗದೆಯಿಂದವರಸಿ ಅಂದುರಣದಲ್ಲಿ ಕರುವೃಂದವ ಮಥಿಸಿ ಆ ನಂದ ಕಂದನೊಲಿಮೆಯ ಛಂದದಿ ಪಡೆದು ಗುರು 2 ಮೇದಿನಿ ಮೋದ ತೀರ್ಥರೆಂದೆನಿಸಿ ವಾದದಿಂದಲಿ ವಾದಿ ಮತ್ತ ವಾರಣ ಮೃಗಾಧಿಪರೆನಿಸಿ ಪಂಚ ಬೇಧ ಬೋಧಿಸುವ ಶಾಸ್ತ್ರ ಸಾದರದಿ ವಿರಚಿಸಿದ 3 ಕಾಲಕಾಲದಲಿ ದ್ವಿಜರಾಲಯದಿ ಬಂದು ನಿನ್ನ ಬಾಲವನಿತೆರ ಸಹ ಶೇವಿಸುವರು ಪಾಲಿಕಿ ಉತ್ಸವದಲ್ಲಿ ಶೇರುವದು ಪೌರಜನ ಪಾಲಿಸಬೇಕಯ್ಯ ಪಾಂಚಾಲಿರಮಣನೆ ನಮೊ 4 ಭವ ಕೂ ಪಾರ ನಾವಿಕನೆ ಎಂದು ಪ್ರಾರ್ಥಿಸುತಲಿ ಸೇರಿದ ಸಜ್ಜನರಘ ದೂರಮಾಡಿ ಪೊರೆವಂಥಕಾರ್ಪರ ನಿಲಯ ಸಿರಿನಾರಸಿಂಹ ನೊಲಿಸಿದ 5
--------------
ಕಾರ್ಪರ ನರಹರಿದಾಸರು
ಮಂಗಳ ಮುಖ್ಯಪ್ರಾಣೇಶಗೆ ಜಯ ಮಂಗಳ ಮೂಜಗವಂದಿತಗೆ ಪ. ಅಂಜನೆತನಯಂಗೆ ಮಾಪ್ರತಿ ಮಹಿಮಂಗೆ ಕಂಜನಾಭನ ಕಾರ್ಯದನುಕೂಲಗೆ ರಂಜಿಪ ಹನುಮಗೆ ಮಂಗಳ 1 ಆ ಮಹಗಡಲ ಲಂಘಿಸಿ ಹೋಗಿ ಲಂಕೆಯ ಧಮಧುಮ ಮಾಡಿ ವನವ ಕಿತ್ತು ರಾಮ ಮುದ್ರಿಕೆ ಜಾನಕಿಗೆ ತಂದಿತ್ತÀ ಹೇಮಾದ್ರಿ ಹನುಮಗೆ ಮಂಗಳ 2 ಸುತ್ತ ಸಾಗರ ಮಧÀ್ಯದಲ್ಲಿ ಲಂಕೆಯ ಮುತ್ತಿ ವನಜಾಕ್ಷಿಯ ಮುಂದೆ ಬಂದು ಹತ್ತು ತಲೆಯ ರಾವಣನೈಶ್ವರ್ಯವನಳಿದಗೆ ಖ್ಯಾತ ಹನುಮಗೆ ಮಂಗಳ 3 ಜಾತಿ ಬಂಧುಗಳ ಒಡಗೊಂಡು ಸಮುದ್ರದ ಸೇತುವ ಕಟ್ಟಿ ಸಾಹಸದಿಂದಲಿ ಸೀತಾಪತಿಯ ಬಲವ ನಡೆಸಿದ ಪ್ರ ಖ್ಯಾತ ಹನುಮಗೆ ಮಂಗಳ 4 ಈ ಕಾಡಕಪಿಯಲ್ಲ ನಿಮ್ಮ ಸೇವಕನೆಂದು ಬೇಡವೆಂದು ಸೀತೆಯ ಭಯಬಿಡಿಸಿ ಚೂಡಾರತ್ನ ಶ್ರೀ ರಾಮರಿಗಿತ್ತ ಬಂಟ ಕೊಂಡಾಡಿಸಿಕೊಂಬಗೆ ಮಂಗಳ 5 ಬಲ್ಲಿದ ರಾವಣೇಶ್ವರನ ಮಾರ್ಬಲವನು ಕಲ್ಲು ಮರದೊಳಿಟ್ಟು ಕೆಡಹಿದಗೆ ಜಲ್ಲುಕ ದೈತ್ಯರಿಗೆಲ್ಲ ಎದೆಯ ಶೂಲವಗಿದ ಧಲ್ಲ ಹನುಮಗೆ ಮಂಗಳ 6 ಬಲು ದೈತ್ಯರನೆಲ್ಲ ಗೆಲಿದು ಮುದ್ದೇನಹಳ್ಳಿಲಿ ಸ್ಥಿರವಾಗಿ ನಿಂದು ಭಕ್ತರ ಹೊರೆವ ಹೆಳವನಕಟ್ಟೆ ವೆಂಕಟೇಶನ ದೂತ ಚಲದಂಗ ಹನುಮಗೆ ಮಂಗಳ 7
--------------
ಹೆಳವನಕಟ್ಟೆ ಗಿರಿಯಮ್ಮ
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆಯದೆ ಸಲಹೆನ್ನನು ಯಾದವಗಿರಿ- ದೊರೆ ಮಂಗರಾಯ ನೀನು ಸರ್ವಜೀವೋತ್ತಮನೆ ನಿನ್ನನು ಮರೆಯಹೊಕ್ಕೆನು ಮಾರುತಾತ್ಮಜ ಕರೆದು ಭಕÀುತರಿಗ್ವರವ ನೀಡುವೊ ಭಾರತೀಶ ಪ ಸೀತಾವಲ್ಲಭ ರಾಮರ ಪಾದಾಂಬುಜ ದೂತನೆಂದೆನಿಸಿದೆಯೊ ಮಾತೆಗಿಟ್ಟ ಮುದ್ರಿಕೆಯನು ಘಾತಕ ರಾವಣನ ಪುರಕೆ ಕಾರ್ತೀಕದುತ್ಸವ ಮಾಡಿ ಮಂಗ- ಳಾರ್ತಿ ಬೆಳಗಿದೆ ಬಾಲದಿಂದ 1 ಬಕ ಹಿಡಿಂಬಕ ಕೀಚಕ ಕಿಮ್ಮೀರ ಮಾಗಧ ಮುಖ್ಯ ಪ್ರಮುಖರನು ಸಕಲ ಅನುಜರ ಸಹಿತ ದುರ್ಯೋಧನನ ಪ್ರಾಣವ ಸೆಳೆದÀು ಬ್ಯಾಗನೆ ನಕುಲ ಧರ್ಮಜನಾ ಸಾದೇವ ದ್ರೌಪದಿಗೆ ಸುಖ ಸಂತೋಷ ನೀಡಿದೆ 2 ಮಧ್ಯಗೇಹರಲ್ಲಿ ಜನಿಸಿ ಸುಜನರಿಗೆ ಶುದ್ಧಶಾಸ್ತ್ರವ ಬೋಧಿಸಿ ಗೆದÀ್ದು ಮಾಯಾವಾದಿಗಳ ವಾದಪ್ರ- ಸಿದ್ಧನೆನಿಸಿದೆ ಮಧ್ವಮುನಿ ಮುದ್ದು ಭೀಮೇಶಕೃಷ್ಣನ ಪ್ರ- ಸಿದ್ಧಿ ಮಾಡಿದೆ ಪರಮ ಗುರುವೆ 3
--------------
ಹರಪನಹಳ್ಳಿಭೀಮವ್ವ
ಮಾರುತೀ ನಮ್ಮಗುರು ಮೂರುತೀ ಪ ಮಾರುತಿ ಕರುಣಿಸು ಜ್ಞಾನಾ ಎನ್ನ ಸೇರಿದ ಸತತ ಅಜ್ಞಾನಾ ಆಹ ದೂರ ಓಡಿಸಿ ಹರಿ ಆರಾಧನೆ ಇತ್ತು ಪಥ ಸರ್ವಾಧಾರ ಉದಾರನೆ ಅ.ಪ. ದ್ವಿತೀಯ ಯುಗದಲ್ಲವತರಿಸಿ ಸೀತಾ ಅತಿ ವೇಗದಿಂದ ಉತ್ತರಿಸಿ ರವಿ ಸುತಗೊಲಿದವನುದ್ಧರಿಸಿ ಆಹಾ ಕ್ಷಿತಿಜದೇವಿಯಳನು ಸ್ತುತಿಸಿ ಮುದ್ರಿಕೆಯಿತ್ತು ದಿವಿಜರ ಸದೆದ ಭಾರತಿಯ ರಮಣನೆ 1 ಕುರುಕುಲದಲ್ಲಿ ಉದ್ಭವಿಸಿ ಬಲು ಗರಳ ಪದಾರ್ಥವ ಸಲಿಸಿ ಚೆಲ್ವ ತರಣಿ ರೂಪವನೆ ಸಿಂಗರಿಸಿ ನೀಚ ತರ ಕೀಚಕನ ಸಂಹರಿಸಿ ಆಹ ಜರೆಯ ಸುತನ ಸೀಳಿ ಧರಣಿಪಾಲಕರನ್ನು ಸೆರೆಯ ಬಿಡಿಸಿ ಕಾಯ್ದ ಪರಮ ಸಮರ್ಥನೆ 2 ಭೂತಳದೊಳಗೆ ಯತಿಯ ರೂಪ ನೀ ತಾಳಿದೆಯೋ ಶುಭಕಾಯ ಮಾಯಿ ವ್ರಾತ ಗೆಲಿದೆ ಮಧ್ವರಾಯಾ ಕಾಯ ಜಾತ ಜನಕಗತಿ ಪ್ರೀಯಾ ಆಹಾ ಭೂತನಾಥನೆ ಪರಮಾತುಮನೆಂಬ ಪಾತಕರರಿ ಜಗನ್ನಾಥವಿಠಲನ ದೂತ 3
--------------
ಜಗನ್ನಾಥದಾಸರು
ಮುಚ್ಚದಿರೆಲೊ ಮುರಾರಿ ಕಣ್ಣ ಪ ಮಂಗಳಕರ ಮಕರಂದ ಸೂಸುತಲಿರೆ ಕಂಗೊಳಿಸುವರೂ ಕಯ್ಯೂರಿ ಕೃಷ್ಣ 1 ಮುತ್ತಿನ ಹಾರಾ ಪದಕ ಮುದ್ರಿಕೆಯು ಒತ್ತುತಲಿಹವೊ ಬೆರಳೂರಿ 2 ಸುಲಭರರಸ ಕೇಳು ಶ್ರೀದವಿಠಲನ ಶೌರಿ 3
--------------
ಶ್ರೀದವಿಠಲರು
ಮೂರ್ತಿಧ್ಯಾನ ಕಮಲಜ ಹೃತ್ಸರೋವರ ಕಂಜವೆಂಸಾ ಮನುಜ ಹೃದ್ವ್ಯೋಮದಿ ಮಿಂಚಿನಂತೆಸೆವಾ ಧ್ವಜವಜ್ರ ಪದುಮ ಪತಾಕಾಂಕುಶ ವಹ ನಿಜಕಾಂತಿಯಲರುಣಾಬ್ಜದಂತೆಸೆವಾ ಪದತಳದ ಮೇಲೆ ಥಳಥಳಿಸುತಲಿಹ ಪದುಮಭವಾಂಡ ಭೇದನದಕ್ಷವೆನಿಸುವಾ ಸುರವಾಹಿನಿಗೆ ತೌರುಮನೆ ತಾನಹ ದುರುಳ ಶಕಟತನುಚೂರ್ಣೀಕೃತವಹ ಪಾರ್ಥಶರೀರ ರಕ್ಷಣಕರ್ತೃತಾನಹ ಪಾತಕ ಪರಿಹರವಹ ಉಂಗುಟದಿಂ ಭುವನಗಳತಿಗಳ ಹಿಂಗಿಪ ನಖಪಂಕ್ತಿಗಳ ಕಿರಣಗಳಾ ವೀರಮುದ್ರಿಕೆಯ ಮಂಟಿಕೆಯಕಾಂತಿಗಳಾ ವೋರಂತೆ ಪೆರ್ಚಿಹ ಪಾದಾಂಗುಲಿಗಳಾ ತೊಳಪ ಕಡೆಯ ಪೆಂಡೆಯದ ತೊಡವು ಗಳ ವೈಕುಂಠಗಿರಿ ವೇಂಕಟೇಶ ನಿನ್ನಾ | ಚರಣಸೇವೆಯನೇ ಕರುಣಿಸಯ್ಯಾ
--------------
ಬೇಲೂರು ವೈಕುಂಠದಾಸರು
ಮೃಡ ಶಂಭೋ | ಪ ಅದ್ರಿಧರ ಪ್ರಿಯ ಅದ್ರಿ ಕೃತಾಲಯ | ಅದ್ರಿಜಾಮಾತಾದ್ರಿ ರಿಪುನುತ | ಪತಿ ಪಾಪಾದ್ರಿ ಕುಲಿಶಕನ | ಕಾದ್ರಿಶರಾಸನ ಮುದ್ರಿತ ಪಾಣೇ1 ಉನ್ನತದಿಂದಲಿ ಮನ್ಮಥ ಬರಲುದ | ಹನ್ಮಾಡಿದ ಷಣ್ಮುಖ ಜನಕನೆ | ಸನ್ನುತ ಲೀಲಾ | ಜನ್ಮರಹಿತ ಘನ ಚಿನ್ಮಯ ರೂಪಾ || 2 ಬರಿಸಿದೆ ಗಂಗೆಯ ನಿರಿಸಿದೆ ಜಡೆಯೊಳು | ಧರಿಸಿದೆ ಚಂದ್ರನ ಮೆರೆಸಿದೆ ಭಕ್ತರ | ಗುರುಮಹೀಪತಿ ಯಂಕುರಿಸಿದ ಬಾಲನ | ಸಿರಸದಲಿಡು ನಿಜ ಪರಸದ ಕೈಯಾ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಂತ್ರೋದ್ಧಾರಕ ರಾಯರ ಸ್ಮರಣೆಯ ಮಾಡಿ ಅಂತರಾತ್ಮನ ದಾಸರ ಪ ಸಂತತ ಮನದಿ ನಿಶ್ಚಿಂತೆಯೊಳ್ ಸ್ಮರಿಸಲು ಸಂತಾಪಗಳ ಕಳೆದು ಚಿಂತಿತಾರ್ಥವನೀವ ಅ.ಪ ಶರಧಿಯ ನೆರೆದಾಟಿದ ಕಾಲುವೆಯಂತೆ ನಲಿದು ಲಂಕೆಯ ಸಾರಿದ ಬಲಶಾಲಿ ಲಂಕಿಣಿಯು ಪುರವ ಕಾಯುವ ಶ್ರಮ ಹರಿಸಿ ಸೂಕ್ಷ್ಮದ ರೂಪ ಧರಿಸಿ ಪುರವ ಪೊಕ್ಕು ಪರಿಪರಿ ಕೋಟೆಗಳಿರವನೆ ಕಾಣುತ ಕರಿ ಹಯ ರಥ ಶಾಲೆಗಳ ಪರಿಕಿಸುತ ಖಳನರಮನೆ ಪೊಕ್ಕರು ಫಲವಿಲ್ಲದೆ ಕಡೆಗೆ ಅಶೋಕ ವನದೊಳು ಚರಿಸಿದ1 ವನದ ಮಧ್ಯದೊಳಿರಲು ರಕ್ಕಸ ಬಹು ಘನತೆಯಿಂದಲಿ ಬರಲು ಬಣಗು ದೈತ್ಯನ ತೃಣಕೆಣೆಮಾಡಿ ನುಡಿಯಲು ಪವನ ತನಯ ನೋಡಿ ಮನದಿ ಸ್ತೋತ್ರವ ಮಾಡಿ ಮನದೊಳು ಶ್ರೀ ರಘುವರನನು ಧ್ಯಾನಿಸಿ ಘನ ಮುದ್ರಿಕೆ ಮುಂದಿಡಲಾ ಜಾನಕಿ ನಯನಂಗಳ ಕಂಬನಿಗರೆಯುತ ಮುಂದಿಹ ಹನುಮನೊಳಿಂತೆನೆ ಲಾಲಿಸಿದ 2 ಯಾವ ರಾಯರ ದೂತನೋ ಪೇಳಯ್ಯ ಬಲು ಸಾವಧಾನದಿ ಮಾತನು ಶ್ರೀರಾಮಚಂದ್ರ ನಿನ್ನ ಸೇರಿ ಮಿತ್ರತ್ವಮಾಡೆ ಕಾರಣವೇನುಂಟು ಸಾವಧಾನದಿ ಪೇಳು ಯಾರನುಮತಿಯಿಂದೀ ಪುರ ಪೊಕ್ಕೆಯೊ ಯಾರಿಗಾಗಿ ಈ ವಾನರ ರೂಪವು ಪೋರನಂತೆ ಕಾಣುವಿ ನಿನ್ನ ವಚನವು ಬಾರದು ಮನಕೆಂದೆನಲು ಮಾತಾಡಿದ 3 ಜನಕ ಜಾತೆಯೆ ಲಾಲಿಸು ದೈತ್ಯರ ಸದೆ ಬಡಿಯುವನೆಂದು ಭಾವಿಸು ಇನಕುಲ ತಿಲಕನ ಚರಣಸೇವೆಯು ಮಾಡೆ ಜಲಜಾಕ್ಷನಾಜ್ಞದಿಂದ ಭುವಿಯೊಳು ವಾನರ- ಕುಲದೊಳಗವತರಿಸುವ ಶತ ಸಂಖ್ಯೆಯೊಳಿರುತಿರೆ ಗಿರಿವನಚರಿಸುವ ಸಮಯದಿ ಜಲಜಾಕ್ಷಿಯನರಸುತ ರಾಘವಬರೆ ಚರಣಾಂಬುಜಗಳಿಗೆರಗಿದೆವೆಂದೆನಲು 4 ಜಲಜಾಕ್ಷಿ ನಿಮ್ಮ ಕಾಣದೆ ಮನದೊಳಗೊಂದು ಘನವಾದ ಚಿಂತೆ ತಾಳಿದೆ ಜನಕ ಜಾತೆಯ ಪಾದಾಂಬುಜವ ಕಾಣದೆ ಮರಳಿ ಪುರವ ಸಾರುವದೆಂತು ರವಿಸುತನಾಜ್ಞೆ ಮೀರ- ಲರಿಯದೆ ಈ ಉಪವನದೊಳಗರಸುವ ಸಮಯದಿ ಶ್ರೀವರನಿಯಮಿಸಿ ಪೇಳಿದ ಪರಿಯನು ತಿಳಿಯುತ ಪರಮಾನಂದದಿ ರಘುವರನ್ವಾರ್ತೆಯ ಲಗುಬಗೆ ಪೇಳಿದ 5 ಕುರುಹು ಕೊಡಮ್ಮ ಜಾನಕಿ ಮನಸಿನ ಚಿಂತೆ ಬಿಡುಬೇಗ ಭದ್ರದಾಯಕಿ ಕ್ಷಣದೊಳ್ ಶ್ರೀರಾಮನೊಳು ಇನಿತೆಲ್ಲವನು ಪೇಳಿ ಕ್ಷಣದಿ ರಕ್ಕಸರನೆಲ್ಲ ನೆಲಸಮ ಮಾಳ್ಪೆನೆಂಬೀ ಅಣುಗನಿಗಪ್ಪಣೆಯನು ಪಾಲಿಸೆನಲು ಅನುಮತಿನೀಡಿದ ಅವನಿಜೆಗೊಂದಿಸಿ ಕ್ಷಣದೊಳು ವನಭಂಗವ ಮಾಡಿದ ನುಡಿ ಕೇ- ಳಿದ ರಾವಣನ ಪುರವ ಅನಲನಿಗಾಹುತಿ ಇತ್ತ 6 ಜಯ ಜಯ ಜಯ ಹನುಮಂತ ಜಯ ಜಯ ಬಲವಂತ ಜಯ ಶ್ರೀರಾಮರ ಪ್ರಿಯದೂತ ಜಯ ಜಯ ಜಯವೆಂದು ಸನಕಾದಿಗಳು ಪೊಗಳೆ ಅನಲ ಸಖನ ಸೂನುವನು ಸ್ತೋತ್ರದಿಂದ ಪಾಡೆ ಕಮಲಜಾದಿ ಸುರಗಣ ತಲೆದೂಗೆ ಶ್ರೀ ಕಮಲನಾಭ ವಿಠ್ಠಲನನು ಪಾಡುತ ಅಮಿತ ಪರಾಕ್ರಮವಂತನ ಪೊಗಳುತ ನಮಿಸಿ ಶ್ರೀರಾಮರ ಗುಣಗಳ ಪೊಗಳುವ 7
--------------
ನಿಡಗುರುಕಿ ಜೀವೂಬಾಯಿ
ರಕ್ಷಿಸೆನ್ನನು ಶಾರದಾಂಬೆ ನೀನುಪಕ್ಷಿವಾಹನ ಸುತ ಮನಃಪ್ರತಿಬಿಂಬೆ ಪಆದಿಮಧ್ಯಾಂತರ'ತಳೆ ಅನಾದಿ ವಸ್ತು'ನಲ್ಲಿ ಭೇದರ'ತಳೆವಾದಿಜನರಿಗಗೋಚರಳೆ ನಿನ್ನ ಪಾದವೆ ಗತಿಯೆಂದರಾದರಿಸುವಳೆ 1ಚಿದ್ರೂಪೆಯಾಗಿಪ್ಪೆ ನಿಜದಿ ಹರಿ ಮುದ್ರಿತೆಯಾಗಿ ನಾದದಿ ತೋರ್ಪೆ ಮುದದಿ ಇದ್ದು ನೀ ಚಕ್ರಸಪ್ತಕದಿ ನಾಲ್ಕ ಹೊದ್ದಿ ನಾಮವನದ ಪ್ರPಟಿಪೆ ಕ್ರಮದಿ 2ಪರವೆಂದು ನಾಭಿಯಲಿರುವೆ ಮತ್ತೆ ಮೆರೆವೆ ಹೃದಯದಲ್ಲಿ ಪಶ್ಯಂತಿ ಭಾವೆಕೊರಳಲ್ಲಿ ಬಿಡದಿರುತಿರುವೆ ಮಧ್ಯಮೆವರ ನಾಮ ವೈಖರಿುಂದ ತೋರಿಸುವೆ 3ಗೀತೆ ಭಾಗವತರೂಪಿನಲಿ ನೀನು ಮಾತೆಯಂದದಲರ್ಥಗಳನು ಪ್ರೀತಿಯಲಿ ಮಾತು ಬೋಧಿಸಿ ಪರಮನಲಿ ನಿತ್ಯ ಪ್ರೀತಿಯನುಂಟು ಮಾಡಿದೆ ಮನಸಿನಲಿ 4ಮಂದಬುದ್ಧಿಯ ನೆರೆ ಬಿಡಿಸು 'ಂದೆ ಬಂಧಿಸಿ ಬಂದಕರ್ಮವ ಕಡೆಗೊಳಿಸುತಂದೆ ಕೃಷ್ಣನ ಮುಂದೆ ನಿಲಿಸು ುನ್ನೂ ಸಂದೇಹವೇಕೆ ನೀನೇ ಬಂದು ನೆಲಸು 5ತೋರಿಸು ಮತಿಗೆ ಜ್ಞಾನವನು ಇದು ಜಾರದಂದದಲರ್ಥಗಳನು ಪ್ರೀತಿಯನುಸೇರಿ ಚಿತ್ತದಲಿನ್ನು ನೀನು ಮಂದ ಬಾರದ ಹಾಗೆ ಮಾಡೆನ್ನ ಮುಕ್ತನನು 6ಕರುಣಾಪೂರಿತದ್ಟೃುಂದ ನಿನ್ನ ಚರಣದಲಿಂಬಿಟ್ಟು ಕೊಳಲದರಿಂದನೆರೆ ಧನ್ಯನಹೆನು ನಿನ್ನಿಂದ ಕೂಡೆ ತಿರುಪತಿ ವೆಂಕಟನೊಲವದರಿಂದ 7ಓಂ ಕಮಲಾನಾಥಾಯ ನಮಃ || 2 ||ಗುರುಸ್ತುತಿಗಳು:
--------------
ತಿಮ್ಮಪ್ಪದಾಸರು