ಒಟ್ಟು 129 ಕಡೆಗಳಲ್ಲಿ , 44 ದಾಸರು , 124 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರೆಯನಾಳುವನೊಬ್ಬ ದೊರೆ ಜೈಶೀಲನಾ ಹರದಿ ಮಂಜುಳೆಯಿರಲು ಮಕ್ಕಳಿಗಾಗಿ ಮರುಗುತ ಸೊರಗಿರಲು ಈ ಪರಿಯ ನೋಡುತ ಹರನು ಬ್ಯಾಗ ತಾ ತಿಳಿದವರ ಮನ ತಿರುಕನಂದದಿ ಬರಲು ಧಾನ್ಯವ ಕರೆದು ನೀಡಿದರೊಲ್ಲದಾಗಲೆ ತಿರುಗಿ ಪೋದನೆ ಉರಗಭೂಷಣ ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 1 ನಂದಿವಾಹನನ ಪೂಜಿಸಿ ಫಲಗಳ ಬೇಡೆ ಕಂದನಿಗಾಯುಷ್ಯವು ಐದರಾ ಮ್ಯಾಲ್ ಹ- ನ್ನೊಂದು ವರುಷವೆನಲು ವರ ನೀಡುತಿರಲು ಮಂಜುಳೆಯು ಗರ್ಭವನೆ ಧರಿಸಲು ಬಂಧುಗಳು ಹೂ ಮುಡಿಸಿ ಪರಮಸಂಭ್ರಮದಿ ಸೀ- ಮಂತ ಮಾಡಲು ತುಂಬಿತಾ ನವಮಾಸವಾಗಲೆ 2 ಜಾತವಾಗಲು ನಾಮಕರಣ ಮಾಡುತ ಚಂದ್ರಶೇಖರ- ನೆಂದ್ಹೆಸರಿಡುತ ಜಾವಳ ಜುಟ್ಟು ಪ್ರೀತಿಂದುಪನಯನ ಮಾಡುತ ವಿದ್ಯೆಗಳ ಕಲಿಸುತ ಆತಘದಿನಾರ್ವರುಷ ಬರುತಿರೆ ಪ್ರೀತಿಯಿಂದ್ಹಣಕೊಟ್ಟು ಕಾಶಿಯಾತ್ರೆಗೆನುತಲಿ ಕಳುಹೆ ಬ್ಯಾಗನೆ3 ಒಂದಾಗಿ ಅಳಿಯ ಮಾವಂದಿರು ಬರುತಿರೆ ಕಂಡಿಳಿದರು ತೋಟವ ಗೆಳತಿಯರು ಬಂದು ಹೂವಿಗೆ ಆಟವಾಡುತಲಿ ಕೋಪಿಸೆ ಒಂದಕ್ಕೊಂದು ಮಾತಾಡೆ ರಾಜ ನಂದನೆಯು ತಾ ನೊಂದುಕೊಳ್ಳದೆ ನಂದಿವಾಹನನರಸಿ ದಯವಿರಲೆಂದು ನಡೆದಳು ಮಂದಿರಕೆ 4 ಬಂದ ರಾಜನ ಮಗಳಿಗೆ ನಿಬ್ಬಣವು ಕರೆ- ತಂದರಸುಕುಮಾರನ ಧಾರೆಯನೆರೆದು ಮಂಗಳ ಸೂತ್ರವನು ಬಂಧನವ ಮಾಡಿದ- ರÀಂದದಿಂದಲಿ ಲಾಜಹೋಮವ ಬಂಧುಗಳ ಸಹಿತುಂಡು ಭೌಮವ ಚೆಂದದಿಂದಲಿ ಸುತ್ತಿಸಾಡ್ಯವ ಅಂದಿನಿರುಳಲಾನಂದವಾಗಿರೆ 5 ಸತಿಪತಿಯರು ಭಾಳ ಹಿತದಿಂದ ಮಲಗಿರೆ ಅತಿ ಹಸಿವೆನಗೆನಲು ಲಡ್ಡಿಗೆ ತಂದು ಘೃತ ಬಟ್ಟಲೊಳು ಕೊಡಲು ತಿಂದಿಡಲು ಮುದ್ರಿಕಾ ಸತಿ ಸಹಿತ ಸುಖನಿದ್ರೆಲಿರೆ ಪಾ- ರ್ವತಿಯು ಬಂದಾ ಖದ್ರುದೇವಿಸುತ ಬರುವನೆಂದ್ಹೇಳೆ ಕಳಸವ ಅತಿಬ್ಯಾಗದಿ ತುಂಬಿಟ್ಟಳುರಗವ 6 ಅತ್ತೆ ಕಾಶಿಗೆ ಪೋಗಿ ಅಳಿಯ ಮಾವಂದಿರು ಕ್ವಾಷ್ಟನ ಕರೆದು ತಂದು ಕುಳಿತಿರಲಾಗ್ವಿಚಿತ್ರ- ಭೂಷಿತಳು ಬಂದು ನೋಡುತಲಿ ನಿಂದು ಥಟ್ಟನೆದ್ದು ತಾ ತಿರುಗಿ ಪೋಗೆನ್ನ ಪಟ್ಟದರಸಿವನಲ್ಲವೆನುತಲಿ ಹೆತ್ತಜನಕ ನೀ ಅನ್ನಕ್ಷೇತ್ರವ ಇಟ್ಟು ನಡೆಸೀಗ್ವೀಳ್ಯಗಳ ಕೊಡುವುದು 7 ತಂದು ಭೋಜನಮಾಡುತ ಕುಳಿತಿರಲಾಗ ತಂದು ವೀಳ್ಯವ ಕೊಡುತ ಮುಖ ನೋಡಿ ನಗುತ ಸಂದೇಹಿಲ್ಲದೆ ಎನ್ನಪತಿ ಹೌದೆಂದು ನುಡಿದಳು ಬಂದು ಜನರು ನಿಂದು ಗುರುತೇನೆಂದು ಕೇಳಲು ತಂದು ತೋರಿದುಂ(ದಳುಂ?) ಗುರವ ಜನರಿಗೆ 8 ನಿನ್ನ ಗುರುತು ಏನ್ಹೇಳೆನ್ನಲು ಸಭೆಯೊಳು ಪನ್ನಂಗದ ಕಳಸವನು ತೆಗೆಯಲು ಬಾಯಿ ರನ್ನ ಮುತ್ತಿನ ಸರವು ಆಗಿರಲು ಉರಗವು ಕನ್ನೆಯರು ಹರಸ್ಹಾಕೆ ಕೊರಳಿಗೆ ಮನ್ನಿಸುತ ಮಹಾರಾಜ ಮಗಳನು ಚಿನ್ನದಾಭರಣಗಳು ಉಡುಗೊರೆ ತನ್ನಳಿಯಗುಪಚಾರ ಮಾಡುತ 9 ಸತಿಪತಿಯರು ತಮ್ಮ ಪಿತರ ಅಪ್ಪಣೆಗೊಂಡು ರತುನದಂದಣವೇರಲು ಮಾರ್ಗದಿ ಗೌರೀ- ವ್ರತ ಮಾಡಿ ನಡೆತರಲು ಪಿತಗ್ಹೇಳಿ ಕಳುಹಲು ಸುತನು ಬಂದರಮನೆಗೆ ಭಾಗೀ- ರಥಿಯು ಮಾತುಳ ಮಡದಿ ಸಹಿತ ಹಿತದಿ ಬಂದೆರಗಿದರೆ ಸೊಸೆಮಗ ಅತಿಹರುಷದಿಂದಪ್ಪಿ ಕೇಳುತ 10 ದಾವ ಪುಣ್ಯದ ಫಲದಿಂದ ನಿನ್ನರಸನ ಪ್ರಾಣ ಪಡೆದಿಯೆನಲು ಮಂಗಳಗೌರಿ ದೇವಿ- ದಯವಿರಲೆಂದು ಹೇಳಲು ಶ್ರೀಗೌರಿಕಥೆಯನು ಕಾಮಿತವನದೊಳಗೆ ದ್ರೌಪದಿಗ್ಹೇಳಿದನು ಭೀಮೇಶಕೃಷ್ಣನು ಮಾಡಿದರೆ ಮುತ್ತೈದೆತನಗಳ ಬೇಡಿದಿಷ್ಟಾರ್ಥಗಳ ಕೊಡುವೋಳು ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 11
--------------
ಹರಪನಹಳ್ಳಿಭೀಮವ್ವ
ನದಿಗಳು ಗಂಗಾದೇವಿ ನಮೋ ನಮೋ ಗಂಗಾದೇವಿ ತರಂಗಿಣಿ ನೀ ಮುದ್ದು ಮಂಗಳಾಂಗನ ಮುಖ ತೋರಿಸೆ ಗಂಗಾದೇವಿ ಪ ವಾಮನನಖದಿಂದ ಒಡೆದÀು ಬ್ರಹ್ಮಾಂಡ ಬಹಿರಾವರಣದಿಂದಿಳಿದೆಯೆ ಬಹಿರಾವರಣದಿ ಇಳಿದು ನಿರಂಜನ ಆಲಯದೊಳು ಬಂದೆ ಭರದಿಂದ1 ಹರಿಪಾದೋದಕವಾಗಿ ಹರಿದು ಬಂದೆಯೆ ನೀನು ಹರನ ಜಟೆಯಲ್ವಾಸವ ಮಾಡಿ ಹರನ ಜಟೆಯಲ್ವಾಸವ ಮಾಡಿ ನೀ ಮೇರುಗಿರಿಯಲ್ಲಿ ನಾಲ್ಕು ಸೀಳಾದೆಯೆ 2 ಜಕ್ಷು ಭದ್ರಾ ಸೀತಾ ಎಂಬ ಮೂವರ ಬಿಟ್ಟು ಭರತಖಂಡಕೆ ಬಂದೆ ಬಹುದೂರ ಭಾಗಮ್ಮ ಪ್ರತ್ಯಕ್ಷ ಅಳಕನಂದನ ತಾಯಿ 3 ಸಾಗರನರಸಿ ಪ್ರಯಾಗದಿ ಮರದ ಬಾಗಿಣವನು ಕೊಂಬೆ ವೇಣಿಯ ದಾನ ಕೊಂಬೆ ವೇಣಿಯ ದಾನ ಮುತ್ತೈದೇ- ರಾಗಿರೆಂದ್ಹರಸಿ ಪೂಜೆಯಗೊಂಬೆ 4 ಸಗರನ ಮಕ್ಕಳ ಅಗಿವೆ ಕಡಿವೆನೆಂದು ಭಗೀರಥನ್ಹಿಂದೆ ಬಂದೆಯೆ ನೀನು ಭಗೀರಥನ್ಹಿಂದೆ ಬಂದೆಯೆ ಹಿಮಾಲಯ ದಾಟಿ ಜಾಹ್ನವಿ 5 ಗಮನ ಮಾಡುವ ಗಂಗಾ ಸಮನಾಗಿ ಹರಿದೆ ಸಂಗಮಳಾಗಿ ಸಮನಾಗಿ ಹರಿದೆ ಸಂಗಮಳಾಗಿ ತ್ರಿವೇಣಿ ಯುಗಳ ಪಾದಗಳಾರು ತೋರಿಸೆ 6 ಭೀಷ್ಮನ ಜನನಿ ಭೀಮೇಶ ಕೃಷ್ಣನ ಪುತ್ರನ(ತ್ರಿ ನೀ?) ದೋಷವ ಕಳೆದÀು ಸಂತೋಷದಿ ದೋಷವ ಕಳೆದÀು ಸಂತೋಷದಿ ಸಾಯುಜ್ಯ ಬ್ಯಾಸರದಲೆ ಕೊಟ್ಟು ಸಲಹಮ್ಮ 7
--------------
ಹರಪನಹಳ್ಳಿಭೀಮವ್ವ
ನಮಿಸುವೆ ನಿನ್ನ ಶ್ರೀಗುರುವೆ ಅಮಿತಾನಂದಾತ್ಮಸ್ವರೂಪನೇ ಶಮನ ಮಾತು ಈ ಭವಭಾಧೆಯ ನೀ ಚಿನುಮಯ ಮೂರುತಿಯೇ ಪ ಬೆಂದೆನು ಸುಖದುಃಖಗಳಲಿ ನಾ ಬಹು ನೊಂದೆನು ಜನಿಮೃತಿ ಹೊಂದುತಾ ಎಂದಿಗೆ ಪರಮಾನಂದವ ಪಡೆವೇ ಬಂದೆನು ಶರಣಾಗಿ 1 ಭೋಗದಿ ಸುಖಿಸುವೆನೆಂಬುವಾ ಅನು ರಾಗದಿ ವಿಷಯಗಳಲಿ ಸಿಲುಕಿ ಭೋಗಿಸಿದಂತೆಯೆ ವಾಸನಾ ಬಲ ವಾಗಂತ ಬಂದಿತು ಮನದಲ್ಲಿ 2 ಭವ ರೋಗದಿ ಬಳಲುವೆನೀಗಲೇ ತ್ಯಾಗದಿ ನಿಜಸುಖ ದೊರಕುವ ರೀತಿಯ ತಿಳುಹಿಸು ಗುರುವರನೆ 3 ವಿಶ್ವದ ತೊಡಕನು ಹಾಕಿಕೊಂತು ಈಶ್ವರನನ್ನೇ ಮರೆತಿರುವೆ ನಶ್ವರವಾಗಿಹ ಈ ಜಗವನು ಶಾಶ್ವತವೆಂದೇ ತಿಳಿದಿರುವೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ನರನಾಗ್ಹುಟ್ಟಿದ್ದೀ ಮರುಳೆ ಅರಿವು ಎಲ್ಲಿಟ್ಟಿದ್ದೀ ಪ ವರವೇದಸ್ಮøತಿಶಾಸ್ತ್ರರಿದುನೋಡದೆ ವರವರ ಒದರುವಿ ಮರೆವಿನೊಳಗೆ ಬಿದ್ದು ಅ.ಪ ಮನಗಳು ಸ್ಥಿರಮಾಡಿ ಬರಿದ್ವಾಕ್ಕೆಣೆಸುವಿ ಸಟ್ಟೆಮಾಡಿ ಮನಕೆ ಬಂದಂತಾಡಿ ನರಕದ ಕುಣಿಗೆ ಬೀಳುವಿ ಖೋಡಿ ಜನನಮರಣವೆಂಬ ಕುಣಿಕೆಯೊಳಗೆ ಸಿಕ್ಕು ಘನತರ ನೋಯ್ವುವ ನೆನೆಸಿಕೊಳ್ಳದೆ 1 ಕುಜನ ಸಂಗೀಡ್ಯಾಡೊ ಸುಮನದಿ ಸುಜನರೊಡಗೂಡೊ ನಿಜಮತಿಯೊಳು ಕೂಡೊ ನಿಶ್ಚಲದಿ ನಿಜವನ್ನು ಹುಡಿಕ್ಯಾಡೊ ಗಜಿಬಿಜಿಯೊಳು ಬಿದ್ದು ಗಿಜಿಗಿಜಿಯಾಗದೆ ತ್ಯಜಿಸೆಲೋ ಸಂಶಯ ನಿಜವು ತಿಳಿಯುತಿದೆ 2 ಪಕ್ಷಪಾತವನ್ನು ನೀಗಿ ಜ್ಞಾನಚಕ್ಷು ತೆರೆದು ಇನ್ನು ಸಾಕ್ಷಿಯಾಗಿ ನೀನು ಮಹದಪರೋಕ್ಷವನ್ನು ಕಾಣು ಶಿಕ್ಷೆ ಪಡೆಯದೆ ಮಹಮೋಕ್ಷ ಪಡೆಯೊ ಜಗ ದ್ರಕ್ಷ ಶ್ರೀರಾಮನ ಸೂಕ್ಷ್ಮದಿ ತಿಳಿದು 3
--------------
ರಾಮದಾಸರು
ನಾ ಮಂದನಾದರು ಸರಿ ಗುರುಗಳ ಕೃಪೆಯಿಂದ ನಾ ಎಂಬುದ ಮರೆತು ಅರಿತಷ್ಟು ಪೇಳುವೆನು ಕಾಮನಯ್ಯ ಕೇಶವನ್ನ ಸ್ಮರಿಸು ಲಲಾಟದಲ್ಲಿ ಒಮ್ಮನಸಿನಿಂದ ಮೂಲವನ್ನು ಉದರ ಮಧ್ಯದಲಿ ಸಾನುವಂದಿತಾದ ಮೇಶನನ್ನು ಹೃದಯದಿ ಉ ಪಮೇರಹಿತನಾದ ಗೋವಿಂದನನ್ನು ಕಂಠ ಮಧ್ಯದಿ ಪತಿ ಶ್ರೀ ವಿಷ್ಣುವಿನನ್ನುದಷೋದರದಿ ಶೂನ್ಯ ಮಧುರಿಪುವಿನ ದಕ್ಷಭುಜದಿ ವಾಮ ಪ್ರತಿಕಂಠದಿ ತ್ರಿವಿಕ್ರಮನನ್ನು ವಾಮನ ಉದರದಿ ವಾಮನ ಮೂರ್ತಿಯನ್ನು ವಾಮ ಭುಜಕಂಠದಿ ಶ್ರೀಧರ ಹೃಷಿಕೇಶರನ್ನು ಸ್ವಾಮಿಯಾಗದಿ ಪದ್ಮನಾಭನನ್ನು ಪುಷ್ಟಭಾಗದಿ ನಿಮ್ಮ ಮಹಿಮ ಗುರು ಕಾಳೀಮರ್ಧಕೃಷ್ಣ ಭಿನ್ನ ದಾಮೋದರನನ್ನು ಶಿರೋ ಭಾಗದಿ ನೆನೆಯೊ 1 ಉದರ ಮಧ್ಯದಲಿ ಐದು ಚಕ್ರಂಗಳು ಹೃದಯಾಕಾಶದಲ್ಲಿ ಮೂರು ಚಕ್ರಂಗಳು ಹೃದಯ ಮೇಲಿನ ಕಂಠದಲ್ಲಿ ಒಂದು ಉದರದಕ್ಷ ಕುಕ್ಷಿಯಲ್ಲಿ ಎರಡು ಮಧುಸೂದÀನ ಸ್ಥಳದಿ ಮೇಲೆ ಎರಡು ಅಧರ ಭಾಗದಿ ವಾಮ ಬಾಹುವಿನಲ್ಲಿ ಒಂದು ಅದಲ್ಲದೆ ವಾಮಕಂಠದಿ ತಾ ಒಂದು ಎದೆಯ ಬಲಪಕ್ಷ ಕಪೋಲದಿ ಮೂರು ಒಂದು ಇದೇ ಇದೇ ತಿಳಿದು ಚಕ್ರಂಗಳ ಧರಿಸುವರು ಸದಮಲಗುರು ಕಾಳೀಮರ್ಧನಕೃಷ್ಣನ ಕೊಂಡರು ದಕ್ಷ ಬಾಹು ಕಂಠದಲ್ಲಿ ಕೆಳಗೆ ಒಂದು ಒಂದರಂತೆ ಕುಕ್ಷಿವಾಮದಲ್ಲಿ ಭಂಧದಿಕೊಂದು ಪರಂಗಳ ಪಕ್ಷಿವಾಹನನಾದ ಶ್ರೀಧರಸ್ಥಾನದ ಮೇಲೆ ಎರಡು ಕಪೋಲ ಒಂದು ಮೂರರಂತೆ ಕ್ರಮದಿ ದಕ್ಷನಾಗಿ ಧರಿಸಿ ಗುರು ಕಾಳೀಮರ್ಧನ ಕೃಷ್ಣನನೆಯೆ 3
--------------
ಕಳಸದ ಸುಂದರಮ್ಮ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಿಧಾನವೆ ಕೇಳಿ ಸಜ್ಜನವೇ ಇಂದು ಜಿನ ಶಕ್ತಿಯಾನಂದದಾರಾಧನ ಪ ಒಂದು ಮನದಲಿ ವದಗಿನ್ನು ಒಂದು ಮನದಲಿ ವದಗಿನ್ನು ನೀವೆಲ್ಲಾ ವಂದದಾರುತಿಯಾ ಬೆಳಗುವಾ 1 ಒಂದು ಮಾರ್ಗವಿಡಿದು ಬಂದು ಗುರುಮುಖದಿಂದ ಒಂದನೆ ಭಕ್ತಿ ತಿಳಿದಿನ್ನು ಒಂದನೆ ಭಕ್ತಿ ತಿಳಿದು ಪರೀಕ್ಷಿತಿಯಂತೆ ವಂದನಾರುತಿಯಾ ಬೆಳಗುವಾ 2 ಎರಡಕ ಮೀರದಾ ಎರಡಕ್ಷರದಿಂದ ಎರಡನೆ ಭಕ್ತಿ ತಿಳಿದಿನ್ನು ಎರಡನೇ ಭಕ್ತಿ ತಿಳಿದು ನಾರದರಂತೆ ಎರಡನಾರತಿಯಾ ಬೆಳಗೀರೇ 3 ಮೂರು ಬಲಿಯನೆದಾಟಿ ಮೂರು ರತ್ನವಗಂಡು ಮೂರನೇ ಭಕ್ತಿ ತಿಳಿದಿನ್ನು ಮೂರನೇ ಭಕ್ತಿ ತಿಳಿದು ಪ್ರಲ್ಲಾದನಂತೆ ಮೂರನಾರತಿಯಾ ಬೆಳಗೀರೇ 4 ನಾಕುಸ್ಥಾನವ ಮುಟ್ಟಿ ನಾಕರಂತವ ನೋಡಿ ನಾಕನೇ ಭಕ್ತಿ ತಿಳಿದಿನ್ನು ನಾಕನೇ ಭಕ್ತಿ ತಿಳಿದು ಜನಕನಂತೆ ನಾಕನಾರತಿಯಾ ಬೆಳಗೀರೇ 5 ಐದುಕ್ಲೇಶಗಳ್ಹಿಂಗಿ ಐದರೊಂದನೆ ಮಾಡಿ ಐದನೇ ಭಕ್ತಿ ತಿಳಿದಿನ್ನು ಐದನೇ ಭಕ್ತಿ ತಿಳಿದು ಗರುಡನಂತೆ ಐದನಾರತೀಯ ಬೆಳಗೀರೆ 6 ಆರನೇ ಭಕ್ತಿ ಆರು ಸಂಗವ ಮೀರಿ ಆರು ಪರಿಯಾಗದೇ ಆರನೇ ಭಕ್ತಿ ತಿಳಿದಿನ್ನು ಆರನೇ ಭಕ್ತಿ ತಿಳಿದು ಪುಂಡಲೀಕನಂತೆ ಆರನಾರತಿಯಾ ಬೆಳಗೀರೆ 7 ಏಳು ವ್ಯಸನವ ಬಿಟ್ಟು ಏಳು ಧಾತುವ ಕಂಡು ಏಳನೇ ಭಕ್ತಿ ತಿಳಿದಿನ್ನು ಏಳನೇ ಭಕ್ತಿ ತಿಳಿದು ಹನುಮಂತನಂತೆ ಏಳನಾರತಿಯಾ ಬೆಳಗೀರೆ 8 ಎಂಟು ಮದಗಳ ಜರಿದು ಎಂಟು ಸಿದ್ಧಿಯ ತೊರೆದು ಎಂಟನೆ ಭಕ್ತಿ ತಿಳಿದಿನ್ನು ಎಂಟನೇ ಭಕ್ತಿ ತಿಳಿದು ಅರ್ಜುನ ನಂತೆ ಎಂಟನೇ ಭಕ್ತಿ ಯಾರತಿಯಾ ಬೆಳಗೀರೆ 9 ಒಂಭತ್ತರನೇ ಬಲಿದು ಒಂಭತ್ತರ ನೆಗೆಲಿದು ಒಂಭತ್ತರನೇ ಭಕ್ತಿ ತಿಳಿದಿನ್ನು ಒಂಭತ್ತರನೇ ಭಕ್ತಿ ತಿಳಿದು ಬಲಿಯಂದದಿ ಒಂಭತ್ತನಾರತಿಯಾ ಬೆಳಗೀರೆ 10 ಗುರು ಮಹಿಪತಿ ಸುತಬ ಹೊರವ ದೇವಿಗೆ ಧರಿಯೊಳೀಪರಿಯಲಿ ನೀವು ಧರಿಯೊಳೀಪರಿ ನೀವು ಮಾಡಲಿಕೀಗ ಪರಮ ಆನಂದಾದೋರುವದು 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನೆ ರಕ್ಷಿಸಬೇಕು ಹೀನಬುದ್ಧಿಯ ನರನ ಪಯೇನೆಂಬೆ ವಿಷಯಗಳೊಳು ಮನಮುಳುಗಿ ಧ್ಯಾನವನೊಮ್ಮೆಯು ಮಾಡದ ಮರುಳ ಅ.ಪಕಂಡುದನೆಲ್ಲವ ಬಯಸಿ ದಂಡಿಸಲಾರದೆ ಮನವಕೆಂಡಕೆ ಮುತ್ತುವ ಶಲಭನ ತೆರದಿ ಕಂಡು ನೊಂದು ಮತ್ತದ ಬಿಡದಿರಲು 1ಕಾಯವ ನಿತ್ಯವಿದೆಂದು ಹೇಯದಿ ತೋರಲು ಕಂಡು ನೋಯದೆ ತಾಪತ್ರಯಗಳನುಂಡು ಆಯಸಗೊಳುತಿರಲಿದ ನೀ ಕಂಡು 2ದುಃಖದಿ ನೋವರ ನೋಡಿ ಸುಕ್ಕುತಲಾಕ್ಷಣದೊಳಗೆದುಃಖವು ಬಂದರೆ ಪರಿಹರವಾಗದೆ ಸಿಕ್ಕಿರೆ ಬಲೆಯೊಳು ದುಃಖಿಸುತಿರಲು 3ಪ್ರಾಚೀನ ಕರ್ಮಗಳು ವೀಚಿಗಳಂದದಿ ಬರಲುಸೂಚಿಸಿ ಶಿಕ್ಷಿಪ ಶಾಸ್ತ್ರದ ನೆಳಲೊಳು ಚಾಚದೆ ತಾವೆ ತಾವಾಗಿರಲು 4ದುರಿತಗಳೆ ಬಹುವಾಗಿ ಸ್ಫುರಿಸುತ್ತಲಿರಲಾಗಿಮರುಗುವ ರಕ್ಷಕ ನೀನಿರಲಾಗಿ ಮರೆಯೊಗದಿರಲೀ ದುರಿತವ ನೀಗಿ 5ದ್ವಂದ್ವಗಳೊಂದೆಂದೊಮ್ಮೆ ನಿಂದಿರೆ ಕರ್ಮದ ಹೆಮ್ಮೆಹೊಂದದು ಎಂದಿಗು ಅದು ತನ್ನ ಸೊಮ್ಮೆಯೆಂದಿಗೆ ಹೃದಯದಿ ನಿಲುವೆ ನೀನೊಮ್ಮೆ 6ಮಾನವ ಬಿಟ್ಟರೆ ಬುದ್ಧಿ ಜ್ಞಾನದ ಸಾಧನ ಸಿದ್ಧಿತಾನೇ ಬರುವುದು ಪುಣ್ಯಸಮೃದ್ಧಿ ಜ್ಞಾನಾತ್ಮಕ ಕೃಷ್ಣ ನೀನಿರು ಹೊದ್ದಿ 7ಭಜಿಸಿದನೆ ಭಕ್ತಿಯಲಿ ಯಜಿಸಿದನೆ ಯಾಗದಲಿದ್ವಿಜತನವನ್ನಾದರು ಬಿಡದಿದ್ದನೆ ಅಜಮಿಳನೆ ನಿನ್ನೊಲವಿಗೆ ಸಾಕ್ಷಿ 8ಕರುಣಕಟಾಕ್ಷವ ನೀನು ುರಿಸಲು ಧನ್ಯನು ನಾನುತಿರುಪತಿ ನಿಲಯ ಶ್ರೀ ವೆಂಕಟ ಕಾಣು ಗುರು ವಾಸುದೇವರೂಪಿನ ಚಿದ್ಭಾನು 9ಓಂ ದಾನವೇಂದ್ರ ವಿನಾಶಕಾಯ ನಮಃ
--------------
ತಿಮ್ಮಪ್ಪದಾಸರು
ನೀನ್ಯಾಕೊ ನಿನ್ನ ಗೊಡಿವ್ಯಾಕೊ ಹನುಮೇಶ ಪ ಅನ್ಯಮತಿ ಪೊಂದಿ ಮಿಥ್ಯಾಜ್ಞಾನಿಯಾಗದೆ ಪಾದ ಪೊಂದಿದ್ದರೆ ಸಾಕೊ ಅ.ಪ ಜೀವೋತ್ತಮರ ಭಾವವನನುಸರಿಸಿ ನೋವಾಗುವ ಮಾರ್ಗವ ಜರಿದು ಭಾವಜನಯ್ಯ ನಿನ್ನ ಭಾವವ ಕಂಡು ಆವಾಗಲು ಸುಖಿಪರ ಗೃಹ ಕಾವನಾದರೆ ಸಾಕು 1 ದೇಹಸ್ಥಿರವಲ್ಲ ದಹನಶೀಲಭವ ಇಹಸುಖ ಹೇಯವೆಂದು ಮೋಹಪಾಶಕೆ ಸಿಗಿಸದೆ ನಿನ್ನನುಪಮ ಮಹಿಮೆಗಳ ಕೇಳುತ ಆನಂದವಾದರೆ ಸಾಕು 2 ಮೋದತೀರ್ಥರೆ ಸದ್ಗುರು ಭೇದ ಜ್ಞಾನವೆ ಗತಿಪ್ರದ ವೇದ ಸಚ್ಛಾಸ್ತ್ರಂಗಳೆ ಸತ್ಯ ತಿಳಿದು ಆದಿ ವಿಜಯ ರಾಮಚಂದ್ರವಿಠಲನೆ ಅಗಾಧಮಹಿಮ ಮಮ ಪ್ರೀಯನೆಂಬ ಭಕ್ತಿ ಇತ್ತರೆ ಸಾಕೊ3
--------------
ವಿಜಯ ರಾಮಚಂದ್ರವಿಠಲ
ನೀಲಕಂಠನ ಸುತಗಭಿನಮಿಸಿ ಆದಿಬ್ರಹ್ಮನ ಸತಿಯಳ ಭಜಿಸಿ ನೀಲವರ್ಣನು ಲಕ್ಷ್ಮೀಲೋಲನ ದಯದಿಂದ ಪಾಲಿಸಿದರೆ ಪಾಡಿ ಪೊಗಳುವೆನು ಪ ಜಯ ಜಯ ಭೀಮ ಭಾರತಿಗೆ ಜಯ ಜಯ ಧರ್ಮ ಭೀಮಾರ್ಜುನರಿಗೆ ಜಯ ದ್ರೌಪದಿ ನಕುಲ ಸಾದೇವಗೆ .......... ........... ............ 1 ಉಕ್ಕುವೊಯೆಣ್ಣೆಯೊಳಗೆ ನೋಡಿ ಕೊಟ್ಟೇನೆನುತ ಪರಮುತ್ಸವದಿಂದಲಿ ಪೃಥಿವಿರಾಯರಿಗ್ವಾಲೆ ಬರೆದ ರಾಯ 2 ದಿಕ್ಕು ದಿಕ್ಕಿನ ರಾಜರು ಬರಲು ಕೃಷ್ಣ್ಣೆಸ್ವಯಂವರ ನೋಡಬೇಕೆನುತ ವಿಪ್ರವೇಷವÀ ಧರಿಸಿ ಹೆತ್ತಮ್ಮನ ಸಹಿತಾಗಿ ಸತ್ಯಪಾಂಡವರು ಬಂದರು ಬ್ಯಾಗ 3 ಬಲವಂತ ರಾಯರೆಲ್ಲರು ತಾವು ಬಲುಮೆಯಿಂದಲಿ ಧನುವೆತ್ತಿ ಬೀಳೆ ಹಲಧರನನುಜ ತಾ ಚೆಲುವ ಪಾರ್ಥನ ನೋಡಿ ಬಲವಕೊಟ್ಟನು ಭೀಮಾರ್ಜುನಗೆ 4 ಸಾದೇವನನುಜ ಸುಂದರ ಪಾರ್ಥ ಆದಿಮೂರುತಿಯ ಪಾದಕ್ಕೆ ನಮಿಸಿ ಕಾದಯೆಣ್ಣೆಯ ನೋಡಿ ಕಟ್ಟಿದ ಮೀನವ ತಾ ಧನುವೆತ್ತಿ ಹೊಡೆದನಾಗ 5 ಚೆಲ್ಲೆಗಂಗಳ ದ್ರೌಪದಿದೇವಿ ವಲ್ಲಭ ಪಾರ್ಥಗೊಲಿದು ಬ್ಯಾಗ ಮಲ್ಲಮರ್ದನಸಖನಲ್ಲಿ ನಡೆದು ಬಂದು ಮಲ್ಲಿಗೆ ಮಾಲೆ ಹಾಕಿದಳಾಗ 6 ವಿಪ್ರ ಕ್ಷತ್ರಿಯರೊ ದಾವಕುಲವೊ ನೆಲೆ ಕಾಣದಲೆ ಮಾಜದೆ ನಿಮ್ಮ ಮರ್ಮಗಳ್ಹೇಳಬೇಕೆಂದು ಕೇಳುತ್ತಿದ್ದನು ಕಂಗೆಡುತ ರಾಯ 7 ಮಚ್ಛಯೆಸೆಯಲು ಮಗಳ ನಾನು ಕೊಟ್ಟೇನೆನುತ ನಿಶ್ಚಯವ ಮಾಡಿ ಇಷ್ಟುವಿಚಾರದಿಂದೀಗೇನು ಫಲವೆಂದು ಸತ್ಯಧರ್ಮಜ ನುಡಿದನು ನಗುತ 8 ಕೇಳುತ ಕುಂತಿಸುತರುಯೆಂದು ಭಾಳ ಸಂಭ್ರಮದಿ ಪಾದವ ತೊಳೆಯೆ ಕಾಲ ನೀಡಲು ಕಂಡು ತಾ ಜಾರಿ ಹಿಂದಕ್ಕೆ ಸರಿದ ರಾಜ9 ಸತ್ಯವತಿಯ ಸುತರ್ಹೇಳುತಿರೆ ಮತ್ತಾಗೆರೆದನು ಮಗಳ ಧಾರೆ ಮುತ್ತು ಮಾಣಿಕ್ಯದ ಮಂಗಳಸೂತ್ರವ ಕಟ್ಟಿ ಕೊಟ್ಟನೈವರಿಗೆ ದ್ರೌಪದಿಯನಾಗ 10 ಲಾಜಾಹೋಮವು ಭೂಮಾನಂತರದಿ ಮೂರ್ಜಗದೊಡೆಯ ಕೃಷ್ಣನ ಸಹಿತ ರಾಜಾಧಿರಾಜರೈವರು ಕುಳಿತಿರೆ ಕೃಷ್ಣ ರಾಜ ಧರ್ಮರ ವಾಮಭಾಗದಲಿ 11 ರುಕ್ಮಿಣಿದೇವಿ ಪಾರ್ವತಿ ಗಂಗಾ ಸತ್ಯಭಾಮೇರ ಸಹಿತಾಗಿ ಬಂದು ಸತ್ಯ ಪಾಂಡವರಿಗೂಟಣಿ (ಉರುಟಣೆ?) ಮಾಡಬೇಕೆಂದು ಕೃಷ್ಣೆ ನೀಯೇಳೆಯೇಳೆನುತಿದ್ದರು 12 ಕಂಜನೈಯ್ಯನು ಕಡೆನೋಟದಲಿ ತಂಗಿ ಕೃಷ್ಣೆಯ ಮುಖವನು ನೋಡಿ ಅಂಜದಲ್ಹೇಳುತಲೈವರ ಗುಣಗಳ ಹಂಗೀಸೂಟಾಣಿ ಮಾಡಬೇಕೆಂದನು 13 ಕನ್ನೆ ದ್ರೌಪದಿ ಅರಿಷಿಣ ಪಿಡಿದು ತನ್ನ ಪತಿಗೆ ಎದುರಾಗಿ ನಿಂತು ಸುಮ್ಮನೆ ರಾಜ್ಯವ ಬಿಟ್ಟು ವನವನಾ ತಿರುಗೋ ಧsÀರ್ಮರೇ ನಿಮ್ಮ ಮುಖ ತೋರಿರೆಂದಳು 14 ಕಂಕಭಟ್ಟೆನಿಸುವೊ ದೊರೆಗಳಿಗೆ ಕುಂಕುಮ ಹಚ್ಚುವೆ ಕುಶಲದಿಂದ ಪಂಚಾಂಗ ಪಠಿಸುವ ಪಾಣಿಯ ಪಿಡಿದು ನಾ ಮುಂಚೆ ಗಂಧವ ಹಚ್ಚುವೆನೆಂದಳು 15 ಯಿಟ್ಟಸತಿಯ ಅನುಜರನೆಲ್ಲ ಗಟ್ಟಿ ಹೃದಯಕ್ಕೆ ಬುಕ್ಕಿ ್ಹಟ್ಟು ಪರಿಮಳ ಹಚ್ಚಿ ಅಚ್ಚ ಮಲ್ಲಿಗೆ ಹಾರ ಹಾಕುವೆನೆಂದಳು 16 ಶಾಂತಧರ್ಮರ ಚರಣಕ್ಕೆ ಎರಗಿ ಮಂತ್ರಿಭೀಮನ ಮುಂಭಾಗದಲಿ ಕಾಂತರ ಮುಖಕ್ಕೆ ಹಚ್ಚುವೆನೆಂದಳು 17 ಬಂದೇಕಚಕ್ರನಗರದಲ್ಲಿ ಬಂಡಿಲನ್ನವನುಂಡು ¨ಕಾಸುರನ ತುಂಡು ಮಾಡ್ಯವನ ತೋರಣ ಕಟ್ಟಿದ ತೋಳಿಗೆ ಗಂಧವ ಹಚ್ಚೇನೆಂದಳು ನಗುತ 18 ಇಟ್ಟ ವಿಷದ ಲಡ್ಡಿಗೆಯ ಮೆದ್ದು ಭಿಕ್ಷÀದನ್ನವು ಬರಿಯಾಗದಲೆ ಹುಟ್ಟುಹಿಡಿದು ಅಟ್ಟುಂಬೋ ಪುರುಷರಿಗೆ ಬು- ಕ್ಕಿ ್ಹಟ್ಟು ಪರಿಮಳ ಹಾಕುವೆನೆಂದಳು 19 ಕಪಿಗಳೊಳಗೆ ಶ್ರೇಷ್ಠರುಯೆನಿಸಿ ಅತಿ ಬ್ಯಾಗದಿಂದ ಕೌರವರ ಕುಲ ಹತವ ಮಾಡ್ಯತಿಯಾಗೋ ಪತಿಗೆ ಮಾಲೆಯ ಹಾಕಿ ಅತಿ ಭಕ್ತಿಲಿಂದೆರಗಿದಳಾಗ 20 ಸರಸಿಜಮುಖಿ ದ್ರೌಪದಿದೇವಿ ಅರಸು ಅರ್ಜುನಗೆದುರಾಗಿ ನಿಂತು ಅರಿಷಿಣ ಕುಂಕುಮ ಪಿಡಿದು ಸ್ತ್ರೀರೂಪವ ಧರಿಸುವ ನಿಮ್ಮ ಮುಖ ತೋ(ರಿ)ರೆಂದಳು 21 ತಂದು ಗಜವ ತೋ
--------------
ಹರಪನಹಳ್ಳಿಭೀಮವ್ವ
ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ
ಪಾದವನು ನಂಬಿದೆನೊ ಪರಮಪುರುಷಾ ಪಾವನನ ಮಾಡೆನ್ನ ಶ್ರೀರಂಗನಾಥ ಪ ಪಾದ ಪಾದ ಬಲಿಯ ಪಾದ ಪಾದ 1 ಪಾದ ಪಾದ ಪಾದ ಪಾದ 2 ಪಾದ ಪಾದ ಪಾದ 3 ಪಾದ ಪಾದ ಪಾದ ಪಾದ 4 ದುರುಳ ಕಂಸಾಸುರನ ಎದೆಯ ತುಳಿದ ಪಾದ ಮುಚುಕುಂದಗೆ ಮುಕ್ತಿಯನಿತ್ತ ಪಾದ ಕಿಚ್ಚು ಬಳಸಲು ಪರ್ವತವನೆತ್ತಿದ ಪಾದ5 ಶಿಲೆಯಾದ ಆಹಲ್ಯೆಯನು ಕಾಯ್ದ ಪಾದ ಪಾದ ಹರನ ಧನುವನು ಮುರಿದು ಜಾನಕಿಯ ತಂದ ಪಾದ ಪಾದ 6 ಪಾದ ಪಾದ ಸೇತುಬಂಧನ ಮಾಡಿ ಸೀತೆಯನು ತಂದ ಪಾದ ಪಾದ 7 ಪಾದ ಪಾದ ಪಾದ 8 ರಾಜಸೂಯಾಗದಲಿ ಪೂಜೆಗೊಂಡ ಪಾದ ಪಾದ ದಂತವಕ್ರಾದಿಗಳನು ಸೆಳೆದುಕೊಂಡ ಪಾದ ಪಾದ 9 ಕÀುರುಪಾಂಡವರಿಗೆ ಸಂಧಿಗೈತಂದ ಪಾದ ವಿದುರನಾ ಮನೆಯಲ್ಲಿ ಭೋಜನಗೈದ ಪಾದ ಪಾದ ದುರುಳ ದುರ್ಯೋಧನನ ಉರುಳಿಸಿದ ಶ್ರೀಪಾದ 10 ರಣದೊಳಗೆ ಅರ್ಜುನಗೆ ಸಾರಥಿಯಾದ ಪಾದ ದೊರೆ ಧರ್ಮಾದಿಗಳ [ನು] ಒಲಿದ ಪಾದ ಪಾದ ಪಾದ 11 ಪಾದ ಇಕ್ಷ್ವಾಕು ಶ್ರೀರಾಮರಾರಾಧಿಸಿದ ಪಾದ ಧರ್ಮವರ್ಮಾದಿ ಚೋಳೇಂದ್ರ ಪೂಜಿತ ಪಾದ ಪಾದ 12 ತೊಂಡಮಾನ್ ಚಕ್ರವರ್ತಿಗೊಲಿದು ಬಂದ ಪಾದ ಶೇಷಾದ್ರಿಗಿರಿಯಲ್ಲಿ ನೆಲೆಸಿರ್ಪ ಪಾದ ಪಾದ ಪಾದ 13 ಅಜನ ಯಜ್ಞಕುಂಡದೊಳಗುದಿಸಿ ಬಂದ ಪಾದ ಪಾದ ವ್ಯಾಧರೂಪಿನಲ್ಲಿ ನಡೆತಂದ ಶ್ರೀಪಾದ ಪಾದ 14 ಪಾದ ಯಾದವಾಗಿರಿಯಲ್ಲಿ ನೆಲೆಸಿರ್ಪ ಪಾದ ವರಸಂಧಿಗೃಹದಲ್ಲಿ ವಾಸವಾಗಿಹ ಪಾದ ಪಾದ 15 ಕರುಣದಿಂದರ್ಜುನಿಗೆ ಸಾರಥಿಯಾದ ಪಾದ ಕೈರವಿಣೀ ತೀರದಲಿ ನೆಲೆಸಿರ್ಪ ಪಾದಾ ರುಕ್ಮಿಣೀ ಬಲಭದ್ರರೊಡನೆ ಒಪ್ಪಿದ ಪಾದ ಕರುಣ ವೆಂಕಟಕೃಷ್ಣನೆಂಬೊ ಬಿರುದರಳ್ಳ ಪಾದಾ 16
--------------
ಯದುಗಿರಿಯಮ್ಮ
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ