ಒಟ್ಟು 92 ಕಡೆಗಳಲ್ಲಿ , 40 ದಾಸರು , 85 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತಿದೇವಿ ಭಕ್ತಸಂಜೀವಿ ಪ ಮಾರುತನರಾಣಿ ಮಾಮಮ ಕಲ್ಯಾಣಿ ಅ.ಪ ಭಕುತಿ ವಿದೂರ ಕುಯುಕುತಿಗಳ ತರಿದು ಯುಕುತ ಮಾರ್ಗದೊಳಗಿರಿಸುವದೆಮ್ಮನು | ಜನನಿ 1 ಬುದ್ಧಿಯನು ಪರಿಶುದ್ಧಮಾಡಿಯನಿ- ರುದ್ಧನ ತೋರಿಸೆ ಪ್ರದ್ಯುಮ್ನನ ಸುಕುಮಾರಿ 2 ಸ್ಮರಿಸುವ ಶರಣರ ಚರಣಸೇವೆಯ ಕೊಡುವುದು 3
--------------
ಗುರುರಾಮವಿಠಲ
ಭೋಗ ಬೇರಿಹುದಣ್ಣ ಭವ ಭೋಗಗಳೆಲ್ಲವು ರೋಗಗಳಣ್ಣ ಭೋಗವ ಪೊಂದುವ ಯೋಗವ ಮರೆಸುವ ರೋಗಗಳಿಗೆ ಗುರಿಯಾಗದಿರಣ್ಣ 1 ಬಗೆ ಬಗೆ ಭಕ್ಷಗಳ ಭೋಗವು ಸೊಗಸೆಂದರಿಯದಿರು ಹಗರಣದಲಿ ತನು ದುಗುಡಕೆ ಸಿಲುಕಲು ಸೊಗಸುಗಳೆಲ್ಲವು ಹಗೆಯಾಗುವುವು 2 ಅಂಗನೆಯರ ಸರಸ ಎಳೆಯ ಭು ಜಂಗನ ಸಹವಾಸ ಅಂಗಗಳಲಿ ಬಲ ಸಡಲಲು ನಿನ್ನಯ ಹಂಗಿಲ್ಲದೆ ಮಾನಭಂಗ ಮಾಡುವರು 3 ಉಡಿಗೆ ತೊಡುಗೆ ಯೋಗ ಜಗದಲಿ ಹುಡುಗುತನದ ಭೋಗ ಗಿಡಗ ಗಿಳಿಮರಿಯನೊಯ್ಯುವ ತೆರದಲಿ ಪಿಡಿಯಲು ದೂತರು ತಡೆ ಮಾಡುವರೇ 4 ಪ್ರಕೃತಿಯೊಳ್ ಸಿಲುಕಿರಲು ಭೋಗಕೆ ಶಕುತಿ ಸಾಲದಣ್ಣ ಭಕುತ ಪ್ರಸನ್ನನು ಭಕುತಿಯೆಂಬೊ ನಿನ್ನ ಯುಕುತಿಗೆ ನೀಡುವ ಮುಕುತಿಯೆಂಬ ದಿವ್ಯ 5
--------------
ವಿದ್ಯಾಪ್ರಸನ್ನತೀರ್ಥರು
ಭ್ರಮೆಯ ಪುಟ್ಟಿಸಬೇಡ ಭಾವಿ ಭಾರತೀಶಾ ಪ ದಾತ ಭವದಿ ಪ್ರಖ್ಯಾತ ಅ.ಪ. ಕೃತ ಪ್ರತೀಕದಿ ನಿಂದು ನಾಮರೂಪವ ಧರಿಸಿ ನಿರುತತ್ವದ್ದಾಸರಿಂದ ಪೂಜೆಯಾ ಗೊಂಬೀಮನ ಪಾಶದಿಂ ಬಿಗಿದೆನ್ನ ಮನಶೆಳೆಯುತಿಹರೈ ಕೃತಿರಮಣನ ಪ್ರೀಯನಿನ್ನ ಕೃತ್ಯಗಳಿಗೆ ನಮೋ ನಮೋ ಎಂಬೆನಲ್ಲದೆ 1 ಪಾದ ಕುಸುಮ ಶರವೈರಿ ಪದ ಪಿತನೆ 2 ಜ್ಞಾನವಿಲ್ಲದೆ ಮಧ್ಯಜ್ಞಾನ ಶರಧಿಯೊಳು ಮುಳುಗಿ ದೂರಾದೆನೋ ರಾಯಾನಿನ್ನ ವಿಷಯ ವಿರಕ್ತಿ ಅನ್ಯ ವಿಷಯ ಸುಭಕ್ತಿಯಿಂದ ನಿಜಭಕ್ತಿಗಾಣೆನೋಭಕುತಿರಮಣನೇ ನಿನ್ನ ಯುಕುತಿಗಳಿಗಭಿವಂದಿಪೆ ತಂದೆವರದಗೋಪಾಲವಿಠಲನ ತೋರಿಸೋ ಜೀಯಾ 3
--------------
ತಂದೆವರದಗೋಪಾಲವಿಠಲರು
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ಮಂದೇಹರ ಹರವೂ | ಕಾಲದಿ | ಸಂಧ್ಯಾ ವಂದನವೂ ಪ ಶುಭ | ವೆಂದ್ಹೇಳುವುದು ಅ.ಪ. ಶಚಿ ನೀನಾಗಿರಲೂ | ಕಾಯೋ | $ಶುಚೀ ಎನಿಸಿರಲೂ ||ಶುಚಿಯೆನಿಸುವಿ ಕಿವಿಯು | ಪಚರಿಸುತಲ್ಹರಿವಚ ನುಡಿಸುತ ಶ್ರೀ | ತಾಚಮನದಲೀ 1 ಕಾಲ ಕಾಲ ಮೂರ್ತಿಯನು 2 ಯುಕುತಿ ತಿಳಿದು ನೀನು | ಆರ್ಯರ | ಉಕುತಿ ಪಾಲಿಸಿನ್ನೂಮುಕುತಿದಾಯಕ ಗುರು ಗೋವಿಂದ ವಿಠಲನುಭಕುತಿಗೊಲಿದು ನಿಜ ಭಕುತರ ಪಾಲಿಪ 3
--------------
ಗುರುಗೋವಿಂದವಿಠಲರು
ಮಧ್ವಮತವ ಪೊಂದಿ ಭಜಿಸಿರೊ | ಉದ್ಧಾರವಾಗಲು ಮಧ್ವಮತವ ಪೊಂದಿ ಭಜಿಸಿರೊ ಪ ಮಧ್ವಮತವ ಪೊಂದಿ ಭಜಿಸಿ ಶುದ್ಧ ಜ್ಞಾನ ಭಕುತಿಗಳಿಸಿ ಗೆದ್ದು ಈ ಭವಾಬ್ಧಿಯನ್ನು ಪದ್ಮನಾಭನ ಪಾದವ ತೋರೆ ಅ.ಪ. ನಾನೆ ವಾಸುದೇವನೆಂದು ಹೀನ ಪೌಂಡ್ರಕನು ತಾನು ಏನು ಗತಿಯ ಕಂಡನೆಂದು ಜ್ಞಾನದಿಂದ ತಿಳಿದು ಮುನ್ನ 1 ಹರಿಯೆ ಸರ್ವೋತ್ತಮನು | ವಿಶ್ವ ವಿರುವುದಯ್ಯ ಸತ್ಯವಾಗಿ ತಾರತಮ್ಯ ಪಂಚಭೇದ ಸ್ಥಿರವೆಂದು ಸಾರಿಪೇಳ್ವ 2 ಭಕುತಿಯಿಂದ ಸೇವಿಪ ಜನಕೆ ಮುಕುತಿಯಲ್ಲಿ ನೈಜ ಸುಖವ ಲಕುಮಿಕಾಂತನು ಪಾಲಿಪನೆಂದು ಯುಕುತವಾಗಿ ಪ್ರಕಟಿಸಿದಂತ 3
--------------
ಲಕ್ಷ್ಮೀನಾರಯಣರಾಯರು
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮುನಿರಾಯರ ಸ್ಮರಣೆ ಮಾಡಿರೊ ಮಧ್ವ ಮುನಿರಾಯರ ಸ್ಮರಣೆ ಪ ಚರಣಕಮಲವ ಭರದಿ ಭಜಿಸುವ ಧರಣಿ ಸುರರಾದರದಿ ಪೊರೆಯುವ ತರಣಿ ಮಂಡಲಗಣವ ಗೆಲಿಯುವ ಹರಿಣವಾಹನನಂಶನಾದ ಅ.ಪ ಕಪಿರೂಪವÀ ಧರಿಸಿ ರಾಮನ ಆಜ್ಞೆಯನು ಶಿರದಲಿ ವಹಿಸಿ ವಾರಿಧಿಯನು ನಿಮಿಷ ಮಾತ್ರದಿ ಲಂಘಿಸಿ ದಶವದನನ ಅಶೋಕವನದಲಿ ಶಶಿಮುಖಿಯ ತಾ ಕಂಡು ವಂದಿಸಿ ದಶರಥ ಸುತನ ವಾರ್ತೆ ಪೇಳಿ ನಿಶಿಚರೇಶನ ಪುರವ ವಹಿಸಿದ 1 ಕುರುಕುಲದೊಳಗೆ ಪುಟ್ಟಿ ಮತ್ಸಾಧಿಪನ ನಗರದೊಳಗೆ ತಾ ಜಟ್ಟಿ ಕಾಳಗದಲ್ಲಿ ಮಲ್ಲರ ತಲೆಯ ಮೆಟ್ಟಿ ದುರುಳ ದುರ್ಯೋಧನನ ಸೇನೆಯು ಬರಲು ಪಶುಗಳ ಕದಿಬೇಕೆಂದು ತಿರುಗಿ ಓಡಿಸುವಂತೆ ಮಾಡಿದ 2 ಪರಬ್ರಹ್ಮ ಅಗುಣನೆಂದು ಜೀವೇಶರಿಗೆ ಬೇಧವೇ ಇಲ್ಲವೆಂದು ಪ್ರಪಂಚಕ್ಕೆ ಸತ್ಯತ್ವ ಯಾವುದೆಂದು ಜಗನ್ಮಿಥ್ಯಾವಾದಿ ಜನಗಳ ನಿಗಮ ಯುಕುತಿಗಳಿಂದ ಖಂಡಿಸಿ ಖಗವಾಹನ ನಾಮಗಿರಿ ಸಿರಿ ನೃಹರಿ ಮೂರುತಿಗರ್ಪಿಸಿದ 3
--------------
ವಿದ್ಯಾರತ್ನಾಕರತೀರ್ಥರು
ಮೂಲ ಕಾರಣ ವಿಠಲ | ಪಾಲಿಸಿವಳಾ ಪ ಲೀಲಾ ಮನೋರೂಪ | ಬಾಲಗೋಪಾಲಾ ಅ.ಪ. ಕರ್ಮಕರ್ಮಗಳ | ಮರ್ಮಗಳ ತಿಳಿಸುತ್ತಕರ್ಮ ನಾಮಕ ಕಾಯೊ | ಪೇರ್ಮೆಯಲಿ ಇವಳಾದುರ್ಮತಧ್ವಾಂತಾಕ | ಸಮೀರ ಮತ ತಿಳಿಸಿನಿರ್ಮಲಾತ್ಮನೆ ಸಲಹೊ | ಭರ್ಮ ಗರ್ಭಾತ್ಮ 1 ಸುಖ ದುಃಖ ದ್ವಂದಗಳು | ಸಕಲಕ್ಕು ಶ್ರೀ ಹರಿಯೆಮುಖ್ಯ ಕಾರುಣಾನೆಂಬ | ಸುಖತೀರ್ಥ ಭಾವಾ |ಕಕುಲಾತಿಯಿಲ್ಲದೆ | ತ್ರೈಕರಣ ಪೂರ್ವಕದಿನಿಖಿಲಾತ್ಮ ಕೃತವೆಂಬ | ಯುಕುತಿಯನೆ ತಿಳಿಸೋ 2 ಪತಿಸುತರು ಹಿತರಲ್ಲಿ | ವ್ಯಾಪ್ತನಾಗಿಹ ಹರಿಯಹಿತದಿಂದ ಸೇವೆಯಲಿ | ಕೃತಕೃತ್ಯಳೆನಿಸಿಮತಿಮತಾಂವರರಂಘ್ರಿ | ಶತಪತ್ರ ನಮಿಪ ಸ-ನ್ಮತಿಯನ್ನೆ ಪಾಲಿಸೋ | ಕೃತಿರಮಣದೇವ 3 ಗಜ ಪಂಚಾಸ್ಯ | ಪರಿಹರಿಸಿ ಇವಳ ಘವಸರ್ವದ ಪೊರೆಯಲ್ಕೆ | ಹರಿಯೆ ಬಿನ್ನವಿಪೇ 4 ಸೃಷ್ಟಿ ಸ್ಥಿತಿ ಸಂಹಾರ | ಅಪ್ಟ ಕರ್ತೃತ್ವಗಳಸುಷ್ಠು ಚಿಂತನೆಯಲ್ಲಿ | ನೆಟ್ಟ ಮನವಿರಿಸೀಕೃಷ್ಣ ಗುರು ಗೋವಿಂದ | ವಿಠಲನೇ ಗತಿಯೆಂಬಶ್ರೇಷ್ಠ ಮತಿಯಲಿ ಭವದ | ಕಟ್ಟನೇ ಬಿಡಿಸೋ5
--------------
ಗುರುಗೋವಿಂದವಿಠಲರು
ಯಜ್ಞೋಪವೀತವೀವೆನೊ ನಿನಗೆ ಸ್ವಾಮಿ ಪ ಯಜ್ಞಪುರಷ ಮುನಿ ಯಜ್ಞಪಾಲಕನಿಗೆ ಅ.ಪ ಅಜ್ಞ್ಯಮನೋರಥನು ನಾನು | ಕಿಂ ಚಿಜ್ಞನೆಂದಿಗು ನಿನ್ನ ಪೊಂದಿದೆನು ಸುಜ್ಞಾನವೆಂಬುದು ಸ್ವಪ್ನದೊಳರಿಯೆ | ಸ ರ್ವಜ್ಞ ನಿನ್ನವನೆಂದು ವಿಜ್ಞಾನ ಪಾಲಿಸು 1 ಸಾಧು ಜನಪ್ರಿಯ ಸರೋಜಾಕ್ಷ ಪೂರ್ಣ ಬೊಧಾಮೃತ ಮಯದಿವಿಜ ಪಕ್ಷಾ ಕಾದುಕೊಂಡಿರುವೆ ಅನಾದಿಯಿಂದಲಿ ನಮ್ಮ ನಿ- ರಾದರಣೆ ಮಾಡದೆ ನೀ ದಯದಿಂದ ಸಲಹೊ 2 ಮುಕುತಿದಾಯಕ ದೇವಾಧಿದೇವಾ ನಿಜ ಭಕುತ ಜನರಿಗೆ ನೀನೇ ಸಂಜೀವಾ | ಆ ಯುಕುತ ಮಾತುಗಳಿದಲ್ಲ ವೇದಾಂತ ರಹಸ್ಯ ಸಕಲಾಧಾರನೆ ಶ್ರೀ ಗುರುರಾಮವಿಠಲ 3
--------------
ಗುರುರಾಮವಿಠಲ
ರಂಗಾ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೋ ಕರುಣಾ ಸಾಗರ ಪ ಅರಿಯರೋ ನೀನಲ್ಲದೆ ಮತ್ತನ್ಯದೈವರ ಮರೆಯರೋ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೋ ನಿನ್ನಂಘ್ರಿ ಸೇವಾ ಪ್ರತಿವಾಸರಾ ಒರೆಯರೋ ಪರತತ್ವವಲ್ಲದೆ ಇತರ ವಿಚಾರಾ 1 ಮೂಕ ಬಧಿರರಂತಿಪ್ಪರೋ ನೋಳ್ಪಜನಕೆ ಕಾಕುಯುಕುತಿಗಳನ್ನು ತಾರರೋ ಮನಕೆ ಸ್ವೀಕರಿಸರನರ್ಪಿತ ಒಂದು ಕಾಲಕ್ಕೆ ಆ ಕೈವಲ್ಯಭೋಗ ಸುಖ ಅವರಿಗೆ ಬೇಕೆ 2 ಕಂಡಕಂಡಲ್ಲಿ ವಿಶ್ವರೂಪ ಕಾಂಬೋರೋ ಉಂಡು ಉಣಿಸಿದ್ದೆಲ್ಲ ನಿನ್ನ ಯಜ್ಞವೆಂಬರೋ ಬಂಡುಣಿಯಂದದಿ ನಾಮಾಮೃತವ ಸವಿವರೋ ಹೆಂಡಿರು ಮಕ್ಕಳು ನಿನ್ನ ತೊಂಡರೆಂಬೋರೋ 3 ಬಿಡರು ತಮ್ಮ ಸ್ವಧರ್ಮಗಳೇನು ಬಂದರೂ ಬಡರು ದೈನ್ಯ ಒಬ್ಬರಿಗೂ ಲೋಕ ವಂದ್ಯರೊ ಪಿಡಿಯರೋ ನಿನ್ನ ದ್ವೇಷಿಗಳಿಂದೇನು ಬಂದರು ಕೊಡುವರೋ ಬೇಡಿದಿಷ್ಟಾರ್ಥ ನಿತ್ಯಾನಂದರೂ 4 ಜಯಾಜಯ ಲಾಭಾಲಾಭ ಮಾನಾಪಮಾನಾ ಭಯಾಭಯ ಸುಖದುಃಖ ಲೋಷ್ಟ ಕಾಂಚನಾ ಪ್ರಿಯಾಪ್ರಿಯ ನಿಂದಾಸ್ತುತಿಗಳನುದಿನಾ ಶ್ರೀಯರಸ ಚಿಂತಿಸುವರೋ ನಿನ್ನ ಅಧೀನ 5 ಈಶಿತವ್ಯರೆಂಬರೋ ಏಕಾಂತ ಭಕ್ತರೋ ದೇಶಕಾಲೋಚಿತ ಧರ್ಮ ಕರ್ಮಾಸಕ್ತರು ಆಶಾ ಕ್ರೋಧ ಲೋಭ ಮೋಹ ಪಾಶ ಮುಕ್ತರು ಈ ಸುಜನರೇವೆ ಶಾಪಾನುಗ್ರಹ ಶಕ್ತರು 6 ನಗುವರೋ ರೋದಿಸುವರೊ ನಾಟ್ಯವಾಡೋರೊ ಬಗೆಯರೋ ಬಡತನ ಭಾಗ್ಯ ಭಾಗವತರು ತೆಗೆಯರೋ ನಿನ್ನಲ್ಲಿ ಮನ ಒಮ್ಮೆಗಾದರೂ ಜಗನ್ನಾಥವಿಠಲ ನಿನ್ನವರೇನು ಧನ್ಯರೋ 7
--------------
ಜಗನ್ನಾಥದಾಸರು
ರಾಯರೆ ಗತಿಯು ನಮಗೆ | ವಾಯುಮತೋದ್ಧಾರ ಶ್ರೀ ರಾಘವೇಂದ್ರಗುರು ಪ ಯುಕುತ ಮಾಗಿಹ ಚೂತ ಸುಕುಜ ಗತಿಯು | ಅಕಳಂಕ ಶ್ರೀಮಂತ್ರಮಂದಿರದಿ ನೆಲೆಸಿಪ್ಪ 1 ಋಷಿಗಳಿಗೆ ಪ್ರಣವೆಗತಿ ಝಷಗಳಿಗೆ ಜಲವೆ ಗತಿ ಸಸಿಗಳಭಿವೃದ್ಧಿಗೆ ಶಶಿರವಿ ಗತಿಯೊ ಶಿಶುಗಳಿಗೆ ಜನನಿಗತಿ ಪಶುಗಳಿಗೆ ತೃಣವೆ ಗತಿ ಅಸಮ ಮಹಿಮೆಯಲಿ ಮೆರೆವ ಮಿಸುನಿ ಶಯ್ಯಜರಾದ 2 ಕಾಮಿನಿ ಮಣಿಯರಿಗೆ ಕೈಪಿಡಿದ ಕಾಂತಗತಿ ಭೂಮಿ ಬುಧರಿಗೆ ಮಧ್ವಶಾಸ್ತ್ರ ಗತಿಯೊ ಧಾಮ ಭಯ ಪೋಪುದಕೆ ಶಾಮಸುಂದರವಿಠಲ ಸ್ವಾಮಿ ನಾಮವೆ ಗತಿಯೊ 3
--------------
ಶಾಮಸುಂದರ ವಿಠಲ
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ