ಒಟ್ಟು 810 ಕಡೆಗಳಲ್ಲಿ , 90 ದಾಸರು , 631 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದು ವನಜದಳಾಂಬಕ ದೊರೆಯ ಪ. ಕನಸಿನಲೆ ಕಂಡೆನು ಮನಸಿಜನಯ್ಯನ ದನುಜಸಂಕುಲವನೆಲ್ಲವ ಕ್ಷಣದಿಸವರಿದ ಕಡುಗಲಿರಾಮನ ಅ.ಪ. ವರ ರನ್ನಹಾರ ಕಿರೀಟ ಕೋಟಿತರಣಿಸನ್ನಿಭಸಂಕಾಶ ಕೌಸ್ತುಭ ಶ್ರೀವತ್ಸ ಲಾಂಚಿತವಕ್ಷ | ಕೊರಳೊಳು ಧರಿಸಿರ್ಪ ವರರತ್ನ ಹಾರಂಗಳ್ | ತರುಣಿ ಶ್ರೀ ತುಳಸೀ ವನಮಾಲೆಯಿಂದೊಲಿಯಲ್ | ಪರಮ ಮಂಗಳಮೂರ್ತಿವರದ ಹಸ್ತವನೆತ್ತಿ | ಶರಣಜನ ಮೋಹಿಪ ದುರುಳ ರಕ್ಕಸರ ಬೇರಸವರಿದ ಪಾರಕೀರ್ತಿ | ಅರಿತೆನಾ ತರಳ ಪ್ರಹ್ಲಾದನಂ ಪೊರೆದ ಕರುಣಾಮೂರ್ತಿ 1 ವೇದಪಾರಾಯಣಗೈವ ವರದ್ವಾದಶನಾಮದಿ ಮೆರೆವ ಕೀರ್ತನದಿಂ ಮೈಮರೆವ | ಸಾಧುಸಜ್ಜನವೃಂದ ಭಕ್ತಿಭಾವದಿ ಕೈಕಟ್ಟಿ | ಶ್ರೀಧರಾಚ್ಯುತ ಪಾದ ಸಮ್ಮುಖದಿ ನಿಂದು ಭಜಿಪರ ಪರಮಾದರದೆನೋಡಿ | ಶ್ರೀದೇವಿ ಕೆಲದೋಳ್ ನೆಲಸಿರಲ್ ಮನದಿ ಸಂತಸವು ಮೂಡಿ | ಸಾದರದಿ ಕರೆದಾದರಿಸಿ ಕಾಂಕ್ಷಿತಾರ್ಥವನೀಡಿ | ಮೋದಗೊಳ್ಳುತಿಹ ಶ್ರೀಧರನ ಕಂಡು ಮೈಮರೆದೆನೇನಿವನ ನೋಡಿ 2 ಕನಕಖಚಿತ ರತ್ನಮಂಟಪದ ಮಧ್ಯೆ | ಮಿನುಗುವ ಮಣಿಪೀಠದಿ ವೈದೇಹಿ | ವನಜಾಕ್ಷಿ ಕುಳಿತಿರಲು ಕೆಲದೊಳ್ ಮರುತಾತ್ಮಜ | [ನುನಮಿಸ] (ರ)ಲು ಪರಮಸಂಭ್ರಮದಿ ಸೋದರರು ಸಂಸೇವಿಸೆ | [ವÀನ] ತರಣಿಸುತ ಸಪರಿವಾರ ಸಂಭ್ರಮಿಸೆ, ಶರಣ ವಿಭೀಷ | ಣನು ಜಯಘೋಷವೆಬ್ಬಿಸೆ ವರವಸಿಷ್ಟಾದೈಖಿಲ | ಮುನಿವರ ರಾಶೀರ್ವಚಿಸೆ ಸರಸವಚನವೆರಸಿ ರಘುವರ ವರನೆ ತಾನೆಂದು ತೋರೆ 3
--------------
ನಂಜನಗೂಡು ತಿರುಮಲಾಂಬಾ
ಇದ್ದಿದ್ದೊಮ್ಮೆ ಇಂಥಾ ಕಷ್ಟ ಏನು ತಂದ್ಯೋ ಹರಿಯೆ ಪೊರೆಯಬೇಕೆಂದು ನುತಿಸುವವಗೆ ಪ ಮಧ್ಯಾಹ್ನಕ್ಕೆ ಮನೆಯ ಒಳಗೆ ಮುದ್ದಿಗೆ ಗತಿಯಿಲ್ಲಾ ವಿದ್ಯಾರ್ಥಿಗಳು ಇಷ್ಟರು ಬಂದರೆ ಇಷ್ಟೂ ಅನ್ನವಿಲ್ಲಾ ಎಂದು ಹೋಗುವೆನು ಎಲ್ಲಿಗೇನೆಂದರೆ ಎಲ್ಲಿ ಏನಿಲ್ಲಾ ಬದ್ಧ ಕಂಕಣವ ಕಟ್ಟಿಕೊಂಡು ನಿನ್ನ ಪಾದವೆ ಗತಿ ಯೆಂದಿರುವೆ ಇಷ್ಟು 1 ಭಿಕ್ಷಕೆ ಬಂದವರಿಗೆ ನೀಡಲು ಹಿಡಿ ಭತ್ತಕೆ ನೆಲೆಯಿಲ್ಲಾ ಕುಕ್ಷುಂಬರರಾಗಿ ಗೃಹಕೆ ಬಂದವರಿಗೆ ಕೂಳಿಗೆ ಗತಿಯಿಲ್ಲಾ ತುಚ್ಛ ಕುಬುದ್ಧಿ ತುಂಟರ ಕೂಡ ಉಪೇಕ್ಷೆ ಮಾಡ್ವರಲ್ಲಾ ಲಕ್ಷ್ಮೀರಮಣ ಶ್ರೀ ರಘುಕುಲ ತಿಲಕ ನೀ ರಕ್ಷಕನೆಂದಾ ಪೇಕ್ಷೆಯಲಿರುವನಿಗೆ 2 ಅತಿಥಿ ಆಭ್ಯಾಗತರು ಬಂದರೆ ಪೂಜಿಸೊ ಅಧಿಕಾರವು ಇಲ್ಲ ಸುತರು ಹಿತರು ಕೂಡುಂಬುವ ಸಂತತ ಸುಖವು ಕಾಣಲಿಲ್ಲ ಹಿತವರುದಾರಿಲ್ಲ ಪತಿ 'ಹೊನ್ನೆ ವಿಠ್ಠಲ’ ಪರಮ ಪುರುಷ ಕೃಷ್ಣಾ 3
--------------
ಹೆನ್ನೆರಂಗದಾಸರು
ಇನ್ನಾರಿಗುಸುರುವೆ ಇನ್ನಾರ ಬಳಲಿಸುವೆನಿನ್ನ ಚಿತ್ತಬಂದಂತೆ ನೀನೆ ಕಾಯಯ್ಯ ಪ. ಅನ್ನಾಥರೊಡೆಯ ಎನ್ನ ಮುನ್ನ ಮಾಡಿದ ಪಾಪತÀನ್ನ ಫಲವಾಯಿತೆಂದು ಇನ್ನುಬ್ಬಿ ಕೊಬ್ಬುತಿದೆಎನ್ನುದರದಿ ಅನುದಿನ್ನ ಕೂಡಿಘನ್ನಪಿತ್ತವೆಂಬ ಬಲುಕಿಚ್ಚು ಹೆಚ್ಚುತಿದೆ 1 ದ್ರೌಣ್ಯಸ್ತ್ರದಿಂದ ಬೆಂದ ನಿನ್ನ ತಂಗಿಯ ಮೊಮ್ಮಗಸನಕಾದಿಗಳರ್ಚಿಸುವ ಸೌಮ್ಯಪಾದದಕೊನೆಯನ್ನೆ ಮುಟ್ಟಿಸಿ ಪೆಣನಾಗಿರ್ದ ಹಸುಳೆಯ ಜನರು ಜಯಜಯವೆನೆ ಜೀವಂತನ್ನ ಮಾಡಿದೆ 2 ನಿತ್ಯ ಮೃತನು ನಾನುಭೃತ್ಯನು ಪಾಪವ ಕಿತ್ತು ಎತ್ತಿಕೋ ತಂದೆ 3 ಅಂಜಿದ ಕಪಿಕಟಕ ಸಭೆಯ ಪಂಜರ ಬಸಿವುತಿದೆ ನಿನ್ನಕಂಜಾಕ್ಷದಿಂದ ನೋಡಿದರವರಂಜಿಪೋಗದೆಅಂಜನಾದೇವಿಯ ಸುತನಾಳಿದ ರಘುರಾಯಅಂಜಿಸಬೇಡ ತಂದೆ ನಿನ್ನ ಕಂದನ ರಕ್ಷಿಸಿಕೊ 4 ವನ್ನದ ಹರಿಣನಂತೆ ಸುತ್ತ ಮುನ್ನ ಬರಲು ಕೃಷ್ಣಎನ್ನ ತಾಪವು ಅನುದಿನ್ನ ತಟ್ಟದುಇನ್ನೊಬ್ಬ ಮದ್ದನೀಯೆ ಅದು ಉನ್ನತವಾಗುತಿದೆ ತಂದೆಎನ್ನಾಳು ಹಯವದನ ಇನ್ನಾದರೆ ಸಲಹೊ 5
--------------
ವಾದಿರಾಜ
ಇನ್ನಾರು ಜಗದೀಶ---- ಎನ್ನ ಮೊರೆ ಕೇಳು ಶ್ರೀರಾಮ ಪ ನಿರ್ವಹಿಸಲಾದೆ ಶ್ರೀರಾಮಾ ತೋರಿ ಎಣಿಸುವರಾರು ರಾಮಾ 1 ಅಕಳಂಕ ಚರಿತ ಶ್ರೀರಾಮ ರುಕ್ಮಿಣಿಯರಸ ಶ್ರೀರಾಮ 2 ನೀನೆ ಎಂದು ಸ್ತುತಿಸುವೆನು ಶ್ರೀರಾಮಾ ಪರಿಹರಿಸಿ ಕಾಯೋ ರಾಮಾ 3 ಬ್ರಾಹ್ಮಂಡನಾಯಕ ಹರೇ ರಾಮಾ ಮೂರ್ತಿ ಕೋದಂಡದರ ಶ್ರೀರಘು ರಾಮಾ 4 ತೋರಿನಿಮ್ಮ ಸ್ಮರಿಸುವೆನು ರಾಮಾ ಭಾರವು ನಿನ್ನದು ಶ್ರೀರಾಮ 5
--------------
ಹೆನ್ನೆರಂಗದಾಸರು
ಇಲ್ಲವಾಯಿತು ಸಾಧು ಜನಕೆ ಎಲ್ಲಾ | ಇಲ್ಲವೆಂಬುದವರ ಚಿತ್ತದೊಳಗಿಲ್ಲಾ ಪ ತನುವಿಲ್ಲ ಮನವಿಲ್ಲ, ಮನದೊಳಗೆ ನೆನವಿಲ್ಲ | ಬಿನುಗಿನ ಸುಖವ ಬಯಸಲಿಲ್ಲ |ಅನುಮಾನ ಎಂಬುವದಲ್ಲಿ ಜನಿಸುವದಿಲ್ಲ |ಚಿನುಮಯಾತ್ಮಕರಾಗಿ ಚರಿಸುತಿಹರೆಲ್ಲ 1 ಸತಿ ಸುತರೆಲ್ಲ ಹಿತವರೆಂದೆನಿಸಲಿಲ್ಲ | ಪತಿತಪಾವನ ರಘುನಾಥ ನೀನನ್ನದಲೆ |ಮಿತಿಯ ಆಯುಷ್ಯ ಕಳೆದರಲ್ಲ 2 ಮೂರ್ತಿ ಭವತಾರಕನ | ವ್ಯಾಪ ಕಾಣದೆ ಅನ್ಯ ಕಾಣಲಿಲ್ಲ 3
--------------
ಭಾವತರಕರು
ಇಲ್ಲೇ ಹರಿ ಇರುವ ಪ ಬಲ್ಲವರದ ನೋಡಲಲ್ಲೇ ತೋರುವ ಅ.ಪ ಗಿಡದ ಬೇರು ಕಾಂಡ ಕೊಂಬೆ ರೆಂಬೆಗಳಲ್ಲಿ ಅಡಗಿ ಎಲೆಯೊಳ್ಹೀಚು ಹೂವ್ಕಾಯ್ಗಳಲ್ಲಿ ಮೃಡ ಸಖನಲ್ಲಲ್ಲೆ ವಿವಿಧ ರೂಪಗಳಿಂದ ಅಡಗಿದ್ದು ಬೆಳೆಸುವ ಕಳೆಗೊಳಿಸುವನು1 ವಸ್ತ್ರದ್ಹಾಸುಹೊಕ್ಕು ದಾರಗಳಂದದಿ ವಿಸ್ತಾರಗೊಂಡ ಈ ಲೋಕದೊಳು ಹಸ್ತಿವರದನಾದಿಮೂಲ ತಾ ನೆಲೆಗೊಂಡು ಸ್ವಸ್ಥದಿ ಪೊರೆವನನಂತ ಪ್ರಾಣಿಗಳ 2 ಅನಿರುದ್ಧ ಪ್ರದ್ಯುಮ್ನ ಸಂಕರ್ಷಣ ರೂಪ ವನು ತಾಳಿ ನಾರಾಯಣ ವಾಸುದೇವನು ಅನಿಮಿತ್ತಬಂಧು ಚರಾಚರ ಪೃಥ್ವಿಯ ನನುದಿನ ಪೊರೆವ ರಘುರಾಮವಿಠಲನು 3
--------------
ರಘುರಾಮವಿಠಲದಾಸರು
ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಪ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ 1 ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ ಕುಲದಲ್ಲಿ ಉದ್ಭವನೀತ | ದ್ವಿಜನ ಶಾಪವ ಕೈಕೊಂಡನೀತ | ದ್ವಿಜ ಭೂಷಣ ಯಾಗದಲಿ ಸೂರ್ಯನ | ಧ್ವಜವ ಕಿತ್ತಿದನೀತ ಕೈಲಾಸ | ದ್ವಿಜವಾಗಿವುಳ್ಳ ಉಗ್ರೇಶನೀತ2 ತ್ರಿಗುಣಾಕಾರ ನೀತ ಮೂರು | ಜಗವದಲ್ಲಣನೀತ ಮೇರು | ನಗಚಾಪನೀತ ನಾರಾಯಣಾಸ್ತ್ರದಿ | ನಗರನುರುಪಿ ಬಿಟ್ಟನೀತ | ಬಗೆಬಗೆಯ ಜೀವಿಗಳಿಗೆ ಬಿಡದೆ | ಅಗಣಿತ ಭೋಗ ಪ್ರದಾತನೀತ | ಮೃಗಲಾಂಛನದ ಮೊಗನಗೆ ಈತ | ನಿಗಮಾಶ್ರವದಗಧಿಕನೀತಾ 3 ಭಸುವ ರಾವಣ ಮಾಗಧ ಕಶ್ಯಪ | ಅಸುರಗಣಕೆ ವರವಿತ್ತನೀತ | ಪಶುವದನ ಪರಮೇಶ್ವರನೀತ | ವಿಷವ ಭಂಜನಭವ ಶಿವನೀತ | ಬಿಸಿಜ ಸಂಭವ ನಂದನನೀತ | ಅಸಮವೀರ ವೈಷ್ಣವನೀತ | ವಸುಧಿಯೊಳಗೆ ಶರಣ ಜನಕೆ | ವಶವಾಗಿಯಿಪ್ಪ ಉಗ್ರೇಶನೀತಾ 4 ಹೇಮಕೂಟಾದ್ರಿ ನಿಲಯನೀತ | ರಾಮದೇವ ವಾಸವಂದ್ಯ | ಸೋಮವರ್ಣನೀತ ಸಕಲ | ಕಾಮಿತಾರ್ಥವ ಕೊಡುವನೀತ | ಯಾಮ ಯಾಮಕೆ ಮನದೊಳು ನಿಂದು | ಕ್ಷೇಮ ಮಾರ್ಗಕ್ಕೆ ಪ್ರೇರಕÀನೀತ | ರಾಮ ವಿಜಯವಿಠ್ಠಲನಂಘ್ರಿ | ನಾಮನೆನಿಸಿ ಕೊಂಡಾಡುವನೀತಾ5
--------------
ವಿಜಯದಾಸ
ಈತನೇನೆ ನಿನ್ನ ಮಗನು ಪ ಸೀತಾಪತಿ ರಘುನಾಥನೆಂಬವನು ಅ ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು 1 ಶರಧಿ ಶಯನ ಮಾಡಿದಾತನು 2 ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ 3
--------------
ಕನಕದಾಸ
ಈಶಾ ಕೈಲಾಸವಾಸಾ | ಕಾಶೀನಗರಾಧೀಶಾ | ಶೇಷಭೂಷಣ | ಗಿರೀಶಾ | ವಿಶ್ವೇಶ ಚಿತ್ತವಾಸಾ ಪ ಶಿವಸಿದ್ಧ ಸಾಧ್ಯ ಸೇವ್ಯಾ | ಭವವನಾಶವ ದಿವ್ಯ | ಕವಿ ಪ್ರಿಯ ಜ್ಞಾನ ದ್ರವ್ಯಾ ಹಾ || ಶಿವ ಓಂ ನಮಃ ಶಿವ | ಸÀವಚರಣ ನೋಡುವ | ಪವಿತ್ರ ಚಿತ್ತವ ಕೊಡು | ಧವಳ ಗಂಗಾಧರನೇ 1 ವ್ರಾತ | ಪತಿತ ಪಾವನ ತಾತ | ಕೃತುವೈ ಪದ್ಮಜಾತ ಹಾ || ಕ್ಷಿತಿಯೊಳು ನೀಲಲೋಹಿತ | ನೀನೇ ಗುರುವೆಂದು | ತುತಿಪ ಗತಿಗೆ ರಘು | ಪತಿನಾಮ ಎನಗೀಯೋ 2 ತ್ರಯನೇತ್ರ ಚಿತ್ರಗಾತ್ರ | ನಯ ನಮಿಪರ ಮಿತ್ರ ಜಯ | ಜಯಾಮರ ಸ್ತೋತ್ರ | ದಯಮಾಡೋ ಪುಣ್ಯ ಪಾತ್ರಾ ಹಾ || ಸಿರಿ | ವಿಜಯವಿಠ್ಠಲನ | ಭಕುತಿಯ ಕೊಡು ಅತಿ | ಶಯದಿ ಪಿನಾಕೀಶಾ 3
--------------
ವಿಜಯದಾಸ
ಉರಗಗಿರಿವಾಸ ವಿಠಲ | ಪೊರೆಯ ಬೇಕಿವಳಾ ಪ ಪರಮಕರುಣಾಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ನಿರತ ನಿನ ಸ್ಮರಿಪರಘ | ಪರಿಹರಿಪೆ ನೆಂಬನುಡಿಪರಮ ಸಾರ್ಥಕ ಗೊಳಿಸೊ | ತರಳೇ ಇವಳಲ್ಲಿಕರುಣ ಸಾಗರ ನಿನ್ನ | ಬೇರೊಂದಪೇಕ್ಷಿಸದೆ |ಸರಸದಲಿ ತವರೂಪ | ಚಿಂತೆಯಲ್ಲಿಹಳೋ 1 ಮರುತ ಮತವನೆ ಪೊಂದಿ | ತರತಮದ ಸುಜ್ಞಾನ ಪರಪಂಚಬೇಧಗಳ | ಅರಿತು ಭಜಿಸುವಳೋನೆರೆನಂಬಿ ತವಪಾದ | ಹಾರೈಸುತಿರುತಿಹಳವರ ಸುಸಾಧನವನ್ನೆ | ಅಭಿದೃದ್ಧಿಗೊಳಿಸೊ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀಹರಿಯೆಂಬಮತಿಯಿಂದ ಸೇವಿಸುತ | ದ್ರವ್ಯ ವಿಭಮನಾಹತಗೈದು ಕತೃಪ್ವ | ಅಂತಕಾರಕ ಭ್ರಮವಕ್ಷಿತಿರಮಣ ಪರಿಹರಿಸಿ | ಆರ್ತಳುದ್ಧರಿಸೋ3 ಜ್ಞಾನ ಸದ್ವೈರಾಗ್ಯ | ಅನುವಂಶಿಕವಾಗಿನೀನಾಗಿ ಕರುಣಿಸಿಹೆ | ಜ್ಞಾನಾತ್ಮಹರಿಯೆಮೌನಿಕುಲ ಸನ್ಮಾನ್ಯ | ಜ್ಞಾನಿ ಜನಸಂಗವನುನೀನಾಗಿ ಕೊಟ್ಟಿವಳ ಉದ್ಧರಿಸೋ ಹರಿಯೆ 4 ಸರ್ವಜ್ಞ ಸರ್ವೇಶ | ಸರ್ವಾಂತಾರಾತ್ಮಕನೆದರ್ವಿ ಜೀವಿಯ ಹೃದಯ | ಗಹ್ವರದಿ ನಿನ್ನಾಭವ್ಯರೂಪವ ತೋರಿ | ಉದ್ದಾರ ಗೈ ಇವಳಾಶರ್ವವಂದ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಉರುಟಣೆಯ ಹಾಡು ಜಯಜಯ ಸಾರಸನಯನ ಜಯಜಯ ವಾರಿಧಿಶಯನ ಜಯಜಯ ಲಕ್ಷ್ಮೀರಮಣ ಜಯ ಭಕ್ತಾಭರಣ ಪ. ಸ್ಮರತಾತಾ ಶ್ರೀಕಾಂತ ವರದಾತಾ ರಘುನಾಥ ವರಕÀಪೋಲವ ತಾರೈ ಅರಿಸಿನ ಹಚ್ಚುವೆನು 1 ಶೌರಿ ಸುರರಿಪುಸಂಕುಲ ವೈರಿ ಕರಪಲ್ಲವತೋರೈ ಅರಿಸಿನ ಪೂಸುವೆನು2 ಪಾದಾಪ ಹೃತಶಾಪ ಪರಮಪಾವನರೂಪ ಪಾದಪದ್ಮವ ತಾರೈ ಪೂಜಿಪೆ ನಾನೊಲವಿಂ3 ಖಲದೈತ್ಯಕುಲಕಾಲ ಬಾಲೇಂದು ನಿಭಫಾಲ ಸ್ಥಳದೊಳುಮಿಗೆ ಪೊಳೆವ ತಿಲಕವ ತಿದ್ದುವೆನು 4 ಶಂಭುಸನ್ನುತನಾಮ ಜಂಭಾರಿನುತರಾಮ ಕಂಬುಕಂಧರ ತೋರೈ ಗಂಧವ ಹಚ್ಚುವೆನು 5 ಕಮನೀಯ ಮೃದುಲಾಂಗ ಕಮಲಾಕ್ಷ ಶ್ರೀರಂಗ ನಳವಡಿಪೆ ನಿನ್ನೀಕೊರಳೊಳು ಕಮಲಮಾಲೆಯ 6 ವರಶೇಷಾಚಲವಾಸ ಶರದಿಂದುನಿಭಹಾಸ ಕರುಣಿಸುನೀಂಹೃದಯೇಶ ತರಣಿಕುಲಾವತಂಸ 7
--------------
ನಂಜನಗೂಡು ತಿರುಮಲಾಂಬಾ
ಎಂತು ವರ್ಣಿಸಲಮ್ಮ ನಾನು ಕಂತುಜನಕನಾನಂತನಗಮ್ಯನನÀಂತವತಾರನಪ. ಸಂತತ ಸಜ್ಜನರಂತರಂಗದಲಿ ನಿಂತಿಹ ಲಕ್ಷ್ಮೀಕಾಂತನ ಮಹಿಮೆಯ ಅ.ಪ. ನೀರೊಳಾಡುತ ಭಾರವ ಹೊರೆವ ಧಾರುಣಿಯ ಪೊರೆವ ಘೋರ ರೂಪದಲಿ ಭೂಮಿಯನಳೆವ ಕ್ರೂರನೃಪರಳಿವ ಆ ರಾವಣನ ಬಲವ ಮುರಿವ ಚೋರ ದಿಗಂಬರವ ಚಾರು ಕುದುರೇಯನೇರಿ ಬರುವ ಸುಕು- ಮಾರ ಜಗದೊಳು ಶೂರ ಜಾರುವ ಕಠಿಣಶರೀರದಿ ಭೂಮಿಯ ಸೇರುವ ಕಂಬವಿದಾರಣ ಮಾಡುವ ಮೀರುವಭುವನಕೆ ತೋರುವ ಪರಶುವ ಜಾರ ವಸನಹೀನ ಧೀರ ಸುಅಶ್ವವನೇರಿ ಮೆರೆವನ 1 ನಿಗಮೋದ್ಧರಿಸುವ ನಗವನು ತರುವ ಜಗತಿಯುದ್ಧರಿಸುವ ಮಗುವ ಪಾಲಿಸುವ ಮಾಯದಿ ಬೆಳೆವ ದುಗುಡ ನೃಪಕುಲವ ಬಗಿದು ಭಾಸ್ಕರ ತನಯನಿಗೊಲಿವ ನೆಗಹಿ ಗೋವರ್ಧನವ ಬಗೆಬಗೆ ಮಾತಾಡಿ ಸುಗುಣ ವಾಜಿಯನೇರಿ ಬಂದ ಸಚ್ಚಿದಾನಂದ ಹುಗಿದು ಸೋಮಕನ ಅದ್ರಿಗೆ ಬೆನ್ನಿತ್ತು ಅಗಿದು ಭೂಮಿಯ ನರಮೃಗನಾಗುತ ಗಗನಕೆ ಬೆಳೆದು ಘಾತಿಸಿ ಕ್ಷತ್ರಿಯರ ರಘುವರ ಯದುಪತಿ ವಿಗತವಸನನಾಗಿ ಜಗಕೆ ಬಲ್ಲಿದ ಹಯವೇರಿ ಬರುವನ 2 ನಳಿನೋದ್ಭವನಿಗಾಗಮವನಿತ್ತ ಗಿರಿಯ ನಿಲಿಸಿತ್ತ ಇಳೆಯ ಕದ್ದೊಯ್ದ ದಾನವನಳಿದ ನರಹರಿ ತಾನಾದ ಬಲಿಮುಖವ ಮುರಿದ ಖಳಭೂಪರಳಿದ ದÀಶಶಿರನÀಳಿದ ಕೊಳಲನೂದಿದ ದುಷ್ಟ ಲಲನೇರ ವ್ರತವಳಿದ ಕಲಿಯ ಮರ್ದಿಸಿದ ಹೊಳೆವ ಬೆನ್ನಲಿ ಗಿರಿತಳವೆತ್ತಿದನ ನೆಲನ ಬಗಿದು ಕಂಬದಲಿ ಬಂದವನ ಬೆಳೆದ ಬೊಮ್ಮಾಂಡಕೆ ಭಾರ್ಗವಾಧಿಪನ ಬುದ್ಧ ಕಲ್ಕಿ ಚೆಲುವ ಹಯವದನನ ಬಲ್ಲಿದನ 3
--------------
ವಾದಿರಾಜ