ಒಟ್ಟು 73 ಕಡೆಗಳಲ್ಲಿ , 15 ದಾಸರು , 73 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನಾಥಾ ಅಂಗಜಾಪಿತಾ [ಮಾ] ವಂದಿತ ಪ ಜಗದಾದಿ ಮೂಲಕಾರಣ ನಗಧರಾಘ ನಿವಾರಣ ಖಗನುತಾ ಭಕ್ತಕಂಕಣ 1 ದೀನಪಾಲ ಸ್ವರ್ಣಮೇಖಲಾ | ಗಾನಲೋಲಾನುಪಮಲೀಲಾ ಕರುಣಾಲವಾಲ 2 ತಾಮಸನಿಕರಮಾನಿತಾ ಶ್ಯಾಮಲಾಂಗಾ ಪೊರೆ ಶ್ರೀಯುತಾ ರಾಮದಾಸಾರ್ಚಿತ [ಮಾಂಗಿರೀಶ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರತ್ನದೊಳಗಿದು ರತ್ನ ನವರತ್ನಗಳೊಳಗಿದು ರತ್ನ ಪ ಚಿತ್ತಜಪಿತನೆಂಬ ರತ್ನ ನಮ್ಮ ನಿತ್ಯಮುಕ್ತರಂಗರತ್ನ ಅ.ಪ ಭಕ್ತಪಾಲಕನೆಂಬ ರತ್ನ ಸತ್ಯಾಸಕ್ತ ವರದನೆಂಬ ರತ್ನ ಮುಕ್ತಿದಾಯಕ ರಾಮರತ್ನ ನಮ್ಮ ಯುಕ್ತಿಭರಿತ ಕೃಷ್ಣರತ್ನ1 ಗೋಪಾಲಕೃಷ್ಣನೆಂಬ ರತ್ನ ವರತಾಪಸವಿನುತ ಮಾರತ್ನ ಶ್ರೀಪತಿಯೆಂಬ ಜೀವರತ್ನ ನಮ್ಮ ಪಾಪವಿನಾಶಕರತ್ನ 2 ಚಾರು ವೇದದೊಳಿಹ ರತ್ನ ನಮ್ಮಶ್ರೀರಮಣ ಎಂಬರತ್ನ 3 ಕರಿರಾಜವರದ ಸುರತ್ನ ನಮ್ಮ ಕರುಣಾಕರಯೆಂಬ ರತ್ನ ಶರಣ ಜನರ ಹಸ್ತರತ್ನ ನಮ್ಮ ತರಳಧ್ರುವನ ಕಾಯ್ದ ರತ್ನ 4 ಪ್ರೇಮರಸಾನ್ವಿತ ರತ್ನ ಇದು ಶ್ರೀಮಾಂಗಿರಿರಂಗರತ್ನ ನಮ್ಮ ರಾಮದಾಸಾರ್ಚಿತ ರತ್ನ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮ ನಿಮ್ಮ ನಾಮಧ್ಯಾನ ಜಿಹ್ವೆ ಮೇಲೆ ನಿಲಿಸು ಪ ಜಗದಭಿಮಾನ ಬಿಡಿಸಿ ಸುಗುಣ ಸಂತಸಂಗ ಪಾಲಿಸಿ ಸುಗುಣಾಂತರಂಗ ನಿನ್ನ ಸಗುಣ ಪೊಗಳಿಸೆನ್ನ ಮುಖದಿ 1 ಮದಮತ್ಸರಗಳನು ಬಿಡಿಸಿ ಸದಮಲ ಜ್ಞಾನಾನಂದದಿರಿಸಿ ಸದಮಲಾತ್ಮ ನಿಮ್ಮ ಮೂರ್ತಿ ಸದಾಯೆನ್ನ ನೇತ್ರದೊಳ್ನಿಲಿಸು 2 ಕಾಮಿತಂಗಳ ಕಡೆಹಾಯ್ಸಿ ಭೂಮಿ ಸೀಮೆ ಮೋಹ ತೊರೆಸಿ ಸ್ವಾಮಿ ಮಮಪ್ರಾಣದಾರ್ಯ ಶ್ರೀ ರಾಮದಾಸನೆನಿಸು ಒಲಿದು 3
--------------
ರಾಮದಾಸರು
ರೌದ್ರಿ ಭದ್ರಿ ಮಹಕ್ಷುದ್ರ ಛಿದ್ರಿ ಹಿ ಮಾದ್ರಿಯುದ್ಭವಿಗೆ ನಮೋ ನಮೋ ಪ ರುದ್ರರೂಪೆ ದಾರಿದ್ರ್ಯಮರ್ದನಿ ರುದ್ರನರ್ಧಾಂಗಿಗೆ ನಮೋ ನಮೋ ಅ.ಪ ನಿಗಮಾತೀತೆ ಮಹದಾಗಮನುತೆ ತ್ರೈ ಜಗದ ಮಾತೆಗೆ ನಮೋ ನಮೋ ಸುಗುಣಸಂತಜನರಘನಾಶಿನಿ ಸುಖ ಸ್ವರ್ಗಾಧಿಕಾರಿಗೆ ನಮೋ ನಮೋ 1 ಮೃಡಮೃತ್ಯುಂಜನನೆಡದೊಡೆಯೊಳು ಕಡುಸಡಗರವಾಸಿಗೆ ನಮೋ ನಮೋ ದೃಢತರ ಭಕ್ತರ ದೃಢದ್ವಾಸಿನಿ ಜಗ ದೊಡೆಯ ಮೃಡಾಣಿಗೆ ನಮೋ ನಮೋ 2 ಕಮಲೆ ಕಾತ್ಯಾಯಿನಿ ಉಮೆ ಶಿವೆ ಸಾವಿತ್ರಿ ಕಮಲನೇತ್ರೆಗೆ ನಮೋ ನಮೋ ಸುಮನ ಸೌಭಾಗ್ಯ ಶಮೆ ದಮೆ ದಯಾನ್ವಿತೆ ವಿಮಲ ಚರಿತ್ರೆಗೆ ನಮೋ ನಮೋ 3 ಭಂಡದನುಜಕುಲ ರುಂಡ ಚೆಂಡಾಡಿದ ಪುಂಡ ಉದ್ದಂಡೆಗೆ ನಮೋ ನಮೋ ಖಂಡ ಕಿತ್ತು ಖಳರ್ಹಿಂಡು ಭೂತಕಿತ್ತ ಚಂಡಿ ಚಾಮುಂಡಿಗೆ ನಮೋ ನಮೋ 4 ರಕ್ತಬೀಜರೆಂಬ ದೈತ್ಯರ ಮದ ಮುರಿ ದೊತ್ತಿದ ವೀರೆಗೆ ನಮೋ ನಮೋ ಮತ್ತೆ ಶುಂಭರ ಶಿರ ಮುತ್ತಿ ಕತ್ತಿರಿಸಿದ ಶಕ್ತಿ ಶಾಂಭವಿಗೆ ನಮೋ ನಮೋ 5 ಓಂಕಾರರೂಪಿಣಿ ಹ್ರೀಂಕಾರಿ ಕಲ್ಯಾಣಿ ಶಂಕರಿ ಶರ್ವಾಣಿಗೆ ನಮೋ ನಮೋ ಮ ಹಂಕಾಳಿ ನತಸುಖಂಕರಿ ಪಾರ್ವತಿ ಶಂಕರನರಸಿಗೆ ನಮೋ ನಮೋ 6 ಶೌರಿ ಔದರಿಯ ಶಾರದೆ ಶ್ರೀಕರಿ ಶೂರ ಪರಾಂಬೆಗೆ ನಮೋ ನಮೋ ಪಾರಾವಾರ ದಯೆಕಾರಿ ನಿರಾಮಯೆ ಧೀರ ಚಿದ್ರೂಪೆಗೆ ನಮೋ ನಮೋ 7 ಉಗ್ರರೂಪಿ ಭವನಿಗ್ರಹ ದುಷ್ಟ ಸ ಮಗ್ರ ಹರಿಣಿಗೆ ನಮೋ ನಮೋ ಆಗ್ರಭಕ್ತರಿಷ್ಟ ಶೀಘ್ರ ಕೊಡುವ ಜೈ ದುರ್ಗಾದೇವಿಗೆ ನಮೋ ನಮೋ 8 ಹೈಮಾವತಿಯೆ ನಿರ್ಮಾಯೆ ಮೂರುತಿ ಕೋಮಲ ಹೃದಯೆಗೆ ನಮೋ ನಮೋ ಭೀಮಪರಾಕ್ರಮಿ ರಾಮದಾಸಜನ ಪ್ರೇಮಪೂರ್ಣಿಗೆ ನಮೋ ನಮೋ 9
--------------
ರಾಮದಾಸರು
ವಿಶ್ವಧಾರನೋ ಶ್ರೀಶ ವಿಶ್ವಕಾರನೋ ವಿಶ್ವ ವಿಶ್ವಭರಿತ ವಿಶ್ವರಕ್ಷ ವಿಶ್ವಚರಿತ ಪ ನಾದಭರಿತನೋ ಹರಿ ನಾದಾತೀತನೋ ವೇದಾಧರನೋ ರಂಗ ವೇದ ಗೋಚರನೋ ವೇದವೇದಾಂತ ಸ್ವಾದ ನಿಖಿಲ ಬೋಧರೂಪ ಭೇದರಹಿತ ಆದಿ ಅನಾದಿದಾತ ಸತತ ಸಾಧುಸಜ್ಜನವಿನುತ ಅಮಿತ1 ದೇವದೇವನೋ ಸ್ವಾಮಿ ದಿವ್ಯಚರಿತನೋ ಕಾವ ಕರುಣನೋ ಭಕ್ತಿ ಭಾವಪೂರ್ಣನೋ ಸಾವುಹುಟ್ಟು ಭಯವಿದೂರ ಮಾಯಗೆಲಿದ ಮಹಪ್ರಕಾಶ ಭಾವಜಜನಕ ಭವಭಂಗ ಸೇವಕಜನರ ಜೀವದಾಪ್ತ 2 ದೋಷನಾಶನೋ ಕೃಷ್ಣ ಮೀಸಲಾತ್ಮನೋ ಭಾಸುರಂಗನೋ ಜಗದೀಶ ಗಮ್ಯನೋ ವಾಸುಕಿಶಯನ ವಾಸುದೇವ ಸಾಸಿರನಾಮದೊಡೆಯ ಇಂದಿ ರೇಶ ಗೋವಿಂದ ಪೋಷಿಸೆನ್ನ ಶ್ರೀಶ ಶ್ರೀರಾಮದಾಸಪ್ರಿಯ 3
--------------
ರಾಮದಾಸರು
ವೀಣೆ ಧರಿಸಿದ ಕಾರಣೇನೊ ಹನುಮಾ ಜಾಣತನವಿದು ಏನು ಪೇಳೊ ಬಲಭೀಮ ಪ. ತ್ರೇತೆಯಲಿ ಶ್ರೀ ರಾಮದಾಸತ್ವ ಚರಿಸಿದುದು ಖ್ಯಾತಿ ಬರಲಿಲ್ಲೆಂದು ಮನದಿ ತಿಳಿದೂ ಪ್ರೀತಿಯಿಂದಲಿ ಕೃಷ್ಣನಂಘ್ರಿ ಗುಪ್ತದಿ ಭಜಿಸಿ ನೀ ತಪೋನಿಧಿ ಎನಿಸಿ ಮುನಿಯಾದ ಮಹಿಮಾ 1 ಮೂರು ಅವತಾರದಲಿ ತೋರದಂತ್ಹರಿ ದಾಸ್ಯ ಆರಾಧಿಸುತ ಮೀಸಲಾಗಿ ಚಲಿಸೇ ಧೀರಭಕ್ತರು ಬಯಲಿಗೆಳೆದು ಖ್ಯಾತಿಯ ಪಡೆಯೆ ತೋರದಂತಾಗೆ ಬೇಗನೆ ದಾಸ್ಯ ವಹಿಸೀ 2 ದಾಸರನುಭವಿಪ ಆನಂದ ನೋಡುತ ಭಾರ ತೀಶ ನೀ ಮೊದಲು ದಾಸನು ಎನಿಸಲು ವಾಸುಕೀಶಯನ ಗೋಪಾಲಕೃಷ್ಣವಿಠ್ಠಲಗೆ ದಾಸನಾಗುತ ವೀಣೆ ಪುಸ್ತಕವ ಪಿಡಿದಿಯಾ 3
--------------
ಅಂಬಾಬಾಯಿ
ವೇದವಿದಿತ ಶೌರೀ ಮುರಾರೀ ಮಧು ಕೈಟಭವೈರೀ ಪ ಭೋಗಿ ಶಯನ ಮಾಯ ಶ್ರೀಗುರು ಚಿನ್ಮಯ ನಾಗಭೂಷಣಹೃದಯಾ ಸದಯಾ ಅ.ಪ ನಡುಗಡಲಿನೊಳೆನ್ನ ಬಿಡಬೇಡ ಸಲಹೆನ್ನ ಅಡಿಗೆರಗುವೆ ನಿನ್ನ ಶ್ರೀಶ ಮೋಹನ್ನಾ ಕಡುಬಾಲ ಧ್ರುವ ತನ್ನದೃಢದಿ ನೆನೆಯೆ ನಿನ್ನ ಪಡೆದನು ಪದವಿಯ ತಾ ವಿನೀತ 1 ಅಜಮಿಳವರದನೆ ಗಜರಾಜಗೊಲಿದನೆ ಸುಜನ ಸಮ್ಮಾನಿತನೆ ಮಾಂಗಿರಿಯರಸನೆ ಅಜಸುರ ವಿನುತನೆ ರಾಮದಾಸಾರ್ಚಿತನೆ ಭಜಕ ವಾರಿಧಿಸೋಮ ವಿರಾಮಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಮತೇ ಶ್ರೀ ಭಾಷ್ಯಕರಾಯನೇ [ಮಾಮವ] ದೇವಾ ಕರುಣಿಸು ಮಹರಾಯನೇ ಪ ಮಂತ್ರ ರಹಸ್ಯದಿ ಜ್ಞಾನ ತ್ರಯಂಗಳ ನಿಂತು ನೀ ಕೃಪೆ ಮಾಡಿದೇ ಅ.ಪ [ವರ]ತತ್ವದುಯ್ಯಾಲನಾಡಿದೆ ಭರಗೈದು ಬಂದಿಲ್ಲಿ ಪರತತ್ವವನು ಗೂಡಿದೇ 1 ಸಿರಿಮಾತೇ [ಮೂಲಕ] ಹರಿಯಾಜ್ಞೆಯನುಗೊಂಡು ಪರಮಭಕ್ತರಿಗೆಲ್ಲಾ ಪ್ರತ್ಯಕ್ಷವಾದಂಥಾ ಪರಮಪದವಿ ಮಾಡಿದೇ 2 ಯದುಶೈಲವಾಸದೊಳಧಮರಾದವರಿಗೆ ಸುಧೆಯ ಸುರಿದು ತೋರಿದೆ ಸದುಪಾಯದಿಂ ಬಂದು ಸರ್ವಸ್ವತಂತ್ರದೊ ಳಿದು ನೋಡೆನುತ ಸಾರಿದೆ 3 ಪರಕಾಲಗುರು ಸರ್ವತಿರುಮಳಿಶಯ್ಯಾಳ್ವಾರೆಂ ಬೆರುಮಾನರಡಿಯಾದೆನೈ ಗುರುಕುಲದೊಳಗೆನ್ನ ಕರೆದಿತ್ತ ಹರಿನಾಮ ನುಡಿಯದೆ ನಾ ಹೋದೆನೈ 4 ಅದ್ವೈತ ಕುಲವನ್ನು ಪರಿಶೋಧಿಸಿ ಬಿಟ್ಟು ಶ್ರೀ ಮದ್ರಾಮಾನುಜಾಚಾರ್ಯನೇ ಮದ್ಗುರುವಾದ ಶ್ರೀತುಲಶೀರಾಮದಾಸ [ರೈ ದಾಸಕುಲತೂರ್ಯರೈ] 4
--------------
ಚನ್ನಪಟ್ಟಣದ ಅಹೋಬಲದಾಸರು
ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ಪ ಮೇದಿನಿ ಅ.ಪ ಎಂದಿಗೆ ನಂದಿ ನಾನೊಂದುವೆನೆಂದು ನೀ ಸಂದೇಹ ಸಂವರಿಪನೊಲಿದು ತಾ 1 ತಾನಾದರೆ ತನ್ನದೇನು ಜಾಣ ತಾ ನೋಡುತಂ ಪ್ರಾಣನಾಥ ನೀನೆಂದಾಡುತಂ ಪಾಡುತ 2 ವಿಶ್ವದೊಳು ರಾಜಿಪ ಸಸ್ವರೂಪಾ ಗುರು ಅಸ್ಮದಾರ್ಯ ತುಲಸಿರಾಮದಾಸನಿತ್ತ 3
--------------
ಚನ್ನಪಟ್ಟಣದ ಅಹೋಬಲದಾಸರು
ಸಿಕ್ಕದೆ ಪೋಪೆಯೇತಕೆ ಮಾಂಗಿರಿರಂಗ ಪ ಸಿಕ್ಕದೆ ಪೋಪೆಯೇಕೆ ಠಕ್ಕುಮಾಡುವೆಯೇಕೆ ಅಕ್ಕರೆಯಿಂದ ನಾ ಸಕ್ಕರೆ ಕೊಡುವೆನೆ ಅ.ಪ ಚಿಣ್ಣರ ಕೂಡಾಡಿ ಕಣ್ಣುಸನ್ನೆಯ ಮಾಡಿ ಸಣ್ಣಕೊಳಲಪಾಡಿ ಬೆಣ್ಣೆಗಳ್ಳ ರಂಗಾ1 ಪಿಡಿದು ಬರುವೆನೆಂದು ಕಡಲಿನೊಳಗೆ ಮಿಂದು ಪೊಡವಿದೇವಿಯ ತಂದು ಕಡುನೊಂದುದಾಯ್ತಿನ್ನು 2 ತರಳ ಪ್ರಹ್ಲಾದನು ಕರೆಯುತಲಿಹನೇ ನಿನ್ನ ಕರದೆ ಬೆಣ್ಣೆಯನಿಟ್ಟು ಕರುಣಾಳು ಬಾರೆನಲ 3 ಕಡುನುಡಿಗಳ ಕೇಳಿ ಪಿಡಿಯಲಾರೆನೇ ನನ್ನ ಕಡೆಗಣಿಸಲಿ ಬೇಡ ಅಡಿಗೆರಗುವೆ ರಂಗಾ 4 ಮಾಂಗಿರಿಮೇಗಿಹ ಶೃಂಗಾರ ದೇವಯ್ಯ ರಂಗ ನೀನೆನ್ನಂತರಂಗ ದೇವದೇವಾ 5 ತಾಮರಸಾಕ್ಷನೆ ಕಾಮಿತ ದಾತನೆ ರಾಮದಾಸಾರ್ಚಿತ ಭೀಮವಿಕ್ರಮ ರಂಗಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸಿ ಸುಖಿಸೆಲೋ ಮಾನವಾ ಪ ಸರಸಿಜಾಸನ ಸತತ ನೆನೆವ ಹರಿನಾಮವನು ಅ.ಪ ಜವರಾಯ ಕಿಂಕರರ ಹಿಮ್ಮೆಟ್ಟಸಿದ ನಾಮ ಧ್ರುವರಾಯಗೊಲಿದ ಘನವು ಈ ನಾಮ ನವನೀತರೂಪದಿಂದ ಘನವ ತಾಳ್ದಿಹ ನಾಮ ಸುವಿಲಾಸದಿಂ ಪಾರ್ಥಗೊಲಿದಿರ್ಪನಾಮವನು 1 ಸನಕಾದಿ ಮುನಿಗಳು ಸತತ ಭಜಿಸುವ ನಾಮ ಅನಿಲಜಾತನಿಗೊಲಿದ ಪರಮನಾಮ ವನಚಾರಿಯಾಗಿದ್ದ ಶಬರಿಗೊಲಿದ ನಾಮ ವನಚರರ ಗರುವವನು ಮುರಿಯುವ ನಾಮ 2 ಪಾಂಚಾಲಿಗಕ್ಷಯದ ವರವನಿತ್ತಾ ನಾಮ ಪಾಂಚಜನ್ಯವ ಸಿರಿಯೊಳೆಸೆಯುತಿಹ ನಾಮ ವಂಚಕರ ಹೃದಯಗಳ ಭೇದಿಸುತ್ತಿಹನಾಮ ಚಂಚಲೆಯರುತ್ಸಾಹದಿಂ ಭಜಿಪ ನಾಮವನು 3 ದುರುಳದೈತ್ಯರ ಮನವ ಕದಡಿ ಕಲಕುವ ನಾಮ ಶರಣಾಗತಾವಳಿಯ ಪೊರೆಯುತಿಹನಾಮ ತರಳಪ್ರಹ್ಲಾದ ತಾ ಪಿತಗೊರೆವ ನಾಮವನು 4 ಮಾಂಗಿರೀ ವರಾಗ್ರದೊಳು ಮರೆಯುತಿಹ ಸಿರಿನಾಮ ಶೃಂಗಾರ ಶ್ರೀ ಪಾಂಡುರಂಗ ನಾಮ ಗಂಗಾಧರಾನುತ ಸುಖದಾತ ಶ್ರೀನಾಮ ಮಂಗಳಕರ ರಾಮದಾಸನುತ ನಾಮವನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(2) ರಾಮಾನುಜ ಸ್ತುತಿಗಳುಭಜರೇ ಗುರುಚರಣಂ | ದುಸ್ತರಭವಸಾಗರತರಣಂ ಪಸುಜನರಾಮಾನುಜ ಗುರುಪತಿ ಸ್ಮರಣಂನಿಜಸೇವಕಜನ ಸಂಕಟ ಹರಣಂ 1ವರರಾಮಾನುಜ ಗುರುಪತಿ ಬೋಧಂಪರಮಭಕ್ತಜನಕಲುಷವಿಚ್ಛೇದಂ2ಧರ ರಾಮಾನುಜ ಗುರುಪತಿ ರೂಪಂನಿರತಮು ದಾಸುಲನಿಜ ನಿಕ್ಷೇಪಂ 3ಅಲಶ್ರೀ ಪೆರಂಬುದೂರು ನಿವಾಸುಲುತುಲಸಿ ರಾಮದಾಸ ಹೃದಯ ನಿವೇಶುಲು 4
--------------
ತುಳಸೀರಾಮದಾಸರು
(ಅ) ಶ್ರೀಹರಿಸ್ತುತಿ87ಎಷ್ಟು ಆನಂದವೊ ಶ್ರೀಹರಿಯ ಭಜನೆ ಪದುಷ್ಟತರ ದೋಷಗಳು ಬಳಲುವಕಷ್ಟಗಳ ಪರಿಹರಿಸಿ ಸರ್ವೋತ್ಕøಷ್ಟ ಪದವಿಯ ಕೊಡುವ ಲಕ್ಷ್ಮೀಇಷ್ಟನಾರಾಯಣನ ಭಜನೆ 1ಪದ್ಮದಳನಯನ ಪ್ರತಿಷ್ಠೆಯಪದ್ಮಶಾಲಿಯ ಭಕ್ತರೆಲ್ಲರುಪದ್ಮನಾಭನ ಪ್ರೀತಿಮಾಡಿ ಸುಭದ್ರಸಂಪದ್ಯುಕ್ತರಾದರು 2ಮಂದಿರವು ಕಟ್ಟಿಸಿಯು ಪರಮಾನಂದದಿಂ ಉತ್ಸವವು ನಡಿಸಿದರೆಂದು ಕೇಳಿದ ಭಾಗ್ಯಶಾಲಿಗಳುಇಂದಿರೇಶನ ಕೃಪೆಯ ಪಡೆದರು 3ಅಂಬುಜೋದರದಾಸರೆಲ್ಲರುತಂಬುರೆಯು ಕರತಾಳವಾದ್ಯವಿಜೃಂಭಿಸಿ ಹರಿಸ್ಮರಣೆಯ ಮಾಡುತಸಂಭ್ರಮದಿ ಬಂದವರು ನೋಡಲು 4ವಾಸುಕೀನಗರೇಶ ದಾಸರದಾಸರಾಗಿಯು ತುಲಸಿರಾಮದಾಸ ಪರಮೋಲ್ಲಾಸದಿಂ ಶ್ರೀವಾಸುದೇವನ ಚರಣನಂಬಿದೆ 5
--------------
ತುಳಸೀರಾಮದಾಸರು
(ಆ) ಲಕ್ಷ್ಮೀಸ್ತುತಿಗಳು95ಅಮ್ಮಾಯಮ್ಮಾಲಕ್ಷ್ಮೀನನಗೆ ಅಭಯವಕೊಡುಸೀತಮ್ಮಾ ಪಬೊಮ್ಮನ ಜಗಂಗಳ ಪೆತ್ತ ಸುತಾಯೆಸುಮ್ಮನೆ ಕಾಲವ ಕಳೆಯದೆ ಬೇಗನೆ 1ನಂಬಿದೆ ನಿನ್ನ ಚರಣಾಂಬುಜಯುಗಳವಕಂಬುಕಂಧರನ ಕಾಂತೆಸುಶಾಂತೆ 2ಧರ್ಮನಿಲಯ ದಾರಿದ್ರ್ಯನಿವಾರಿಣಿಧರ್ಮವಲ್ಲ ತವದಾಸನುಪೇಕ್ಷೆಯು 3ಹೇಮಮಹೀಧರ ಸ್ವಾಮಿನಿ ತುಲಸೀರಾಮದಾಸನÀ ಪ್ರೇಮದಿ ಪಾಲಿಸು 4
--------------
ತುಳಸೀರಾಮದಾಸರು