ಒಟ್ಟು 331 ಕಡೆಗಳಲ್ಲಿ , 68 ದಾಸರು , 254 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆವು ಗುರುದಿವ್ಯ ಶ್ರೀ ಸುಚರಣ ಮಂಡಲದೊಳಾಯಿತು ಸುಭೂಷಣ ಧ್ರುವ ಇದೆ ನಿಜ ಪುಣ್ಯ ಪೂರ್ವಾರ್ಜಿತ ಇದರಿಟ್ಟು ಬಂತೆನಗಾಯಿತು ಒದಗಿ ಕೈಗೂಡಿತು ತ್ವರಿತ ಹೃದಯಲೆನ್ನಾಯಿತು ಉದಿತ 1 ಕಣ್ಣಾರೆ ಕಂಡೆವು ನಿಜ ಧನ ಜನುಮವೆನ್ನಾಯಿತು ಪಾವನ ಎನ್ನೊಳು ದೋರಿತಾನಂದ ಘನ ಧನ್ಯ ಧನ್ಯವಾಯಿತು ಜೀವನ 2 ಲೇಸು ಲೇಸಾಯಿತಯ್ಯ ನೋಡಿ ಭಾವಿಸಿದ ಸದ್ಗುರು ದಯಮಾಡಿ ವಾಸನೆ ಪೂರಿಸಿತು ಇಲ್ಲೆ ನೋಡಿ ದಾಸಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರವ ಪಿಡಿಯೋ ಬ್ರಹ್ಮಣ್ಯಾ ಗುರುವೇ ದುರಿತ ನೋಡದಲೆನ್ನ ಪರಮ ನಿರ್ಮಲ ಜ್ಞಾನ ತ್ವರಿತದಿಂದಿತ್ತೆನ್ನ ಪ ದೂರದೂರದಲಿದ್ದ ನರರು ನಿಮ್ಮಯ ಚರಣ ಸೇರಿ ಸೇವೆಯ ಮಾಡೆ ಕರುಣದಿ ಕಾಯ್ವೆ ನೀ 1 ದಿಟ್ಟತನದಿ ಭಕ್ತಿ ಇಟ್ಟು ಸೇವಿಸಲಾಗ ಕುಷ್ಟಾದಿ ರೋಗಗಳಟ್ಟುವೀ ಬೇಗನೆ 2 ಪರಿ ಭವದೊಳು ತಿರುಗಿಸದೆ ಎನ್ನ ನರಹರಿ ಚರಣದ ಸ್ಮರಣೆಯನ್ನೆ ಇತ್ತು 3
--------------
ಪ್ರದ್ಯುಮ್ನತೀರ್ಥರು
ಕರುಣಲೆನ್ನ ನೋಡೋ ಬ್ರಹ್ಮಾನಂದಸುಖದೊಳಗಿಡೋ 1 ತಾಳಿದೆ ಕ್ರಿಮಿಕುಲ ನೀ ದಯಾಳ 2 ಜನ್ಮದಿ ನೊಂದು ಬಂದೆ ಇನ್ನಾದರೆ ತಂದೆ 3 ದುರಾಚಾರಿಯು ನಾ ಪರಮ ನೀ ಘನಮಹಿಮ 4 ಹೊರಿಯೋ ಸರ್ವೇಶ ಭವಭಯನಾಶ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಸಾಗರನಹುದೊ ಶರಣ ಜನರ ಪ್ರಿಯ ಧ್ರುವ ಕರಿರಾಜ ಮೊರೆ ಇಡಲು ಭರದಿಂದೊದಗಿ ಬಂದ್ಯೊ ದುರಿತ ಬಂದಡರಿದಾವಸರದೊಳು ನೀ ಪರಿಹರಿಸಿದ್ಯೊ ಶ್ರಮ ಪರಮ ದಯಾಳು 1 ದುರಿತ ನಿರ್ಮಿಸಿದವನ ಬೆರಳಲಿ ಸೀಳಿದ್ಯೊ ಪೂರ್ಣ ಹರಿಯಂದಾ ಮಾತಿಗೆ ಕರುಣದಿಂದೊದಗಿ ನೀ ಪರಪರಗಾಯಿದ್ಯೊ ತರಳ ಪ್ರಹ್ಲಾದನ 2 ಧರ್ಮಪತ್ನಿಯ ಸೆರಗೆ ಭರದಿಂದೆಳೆಯುವ ಸಮಯ ಸ್ಮರಣಿ ಒದಗಿ ಬಂದೊ ಪರಿಪರಿ ವಸ್ತುವ ಪೂರಿಸಿದ್ಯೊ ಶ್ರೀ ಹರಿ ಕೃಷ್ಣ ಕೃಪಾಳು 3 ಅರಗಿನ ಮನೆಯೊಳು ಮರೆ ಮೋಸ ಮಾಡಿರಲು ಶರಣಾಗತವತ್ಸಲ ಪಾಂಡವಪ್ರಿಯ 4 ಹಲವು ಪರಿಯಲೆನ್ನ ಸಲಹುವ ಸದ್ಗುರುಪೂರ್ಣ ಬಾಲಕ ಮಹಿಪತಿಯ ಪಾಲಕ ನೀನಹುದೊ ಮೂಲೋಕದೊಡೆಯ ಶ್ರೀ ಹರಿ ದಯಾಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಲಿಪುರುಷನಿಗತಿಹರುಷ ಬಲುಸಜ್ಜನಗಳುಬಾಯ್ಬಾಯ್ಬಿಡುವುದು ಪ ಅಲಕ್ಷ್ಮೀರಮಣ ಅಖಿಲ ದುರ್ಗುಣಂ ಗಳಕೊಟ್ಟೆಲ್ಲರ ಗಾಳಿಗೆ ತೂರುವೆ ಅ.ಪ ರಾವಣಾಸುರಗೆ ಮಗನೆನಿಸಿ ದೇವತೆಗಳ ಸೆರೆಯಲ್ಲಿಡಿಸಿ ಭಾವಜ್ಞರನು ನಿರಾಕರಿಸಿ ಸಭಾಸ್ಥಾನಗಳ ಭಂಗಪಡಿಸಿ ಬಹುದುಃಖ ಪಡಿಸಿ ಪಾಂಡುಕುಮಾರರ ಪಾವನಿಯಿಂತೊಡೆಯೊಡೆದು ಬೀಳುತ ಬಗೆಯ ನೆನದುಯೀಗೆಮ್ಮ ಬಾಧಿಸುವೆ 1 ಆಗಮಗಳು ಸುಳ್ಳೆಂಬುವದು | ನಾ ಯೋಗಿಯೆಂದು ಹಿಗ್ಗುತಲಿಹುದು ಭಾಗವರತ ನಿಂದನೆಗೈದು | ನಿರ್ ಭಾಗ್ಯತನ್ನತಾನೆ ಪೊಗಳುವದು ಸಾಗರದಂತಿಹ ದುರಾಸೆಯೊಳಗಾ ವಾಗಲು ಜನ ಮುಳುಗುತ ತಿಳಿಯದೆ ಹಾಗರ್ವದಿ ನಿಷ್ಫಲವ ಪೊಂದುವರಿದು 2 ನೀತಿ ತಪ್ಪಿತಾವ್ನಡೆಯುವುದು | ದು ರ್ಜಾತಿಗಳುತ್ತಮರೆಂಬುವದು ಆತುರದಲಿಮನವಳುಕುವುದು | ಬಲು ಘಾತಕತನದಲಿತಿರುಗುವದು ಗಾತುರಸುಖವೇ ಮೊಕ್ಷವೆಂದು ವಿಷ ಯಾತಿಶಯದಿಯರಿಷಡ್ವರ್ಗಗಳೊಳು ರಾತಿರಿಪಗಲೆನ್ನದೆ ಬೀಳ್ವುದುನಿ ನ್ನಾತಗಳಿಂಗೆ ಸ್ವಭಾವಗುಣಂಗಳು 3 ಕ್ಷಾಮಡಾಂಬರಗಳ್ಹೆಚ್ಚುವದು | ನಿ- ಷ್ಕಾಮರ ಹಾಸ್ಯವಮಾಡುವದು ಕಾಮದಿಜನಗಳ ಬಾಧಿಪದು ನಿಷ್ಕಾರಣರೋಗದಿ ಸಾಯುವದು ಪಾಮರರೆಲ್ಲರು ಪಂಡಿತರಾವೆಂ- ದೀಮಹಿಯೊಳುಮನಬಂದಂತೆಸದಾ ತಾಮಸಗಳಬೋಧಿಸುತಲಿಜಗದೊಳು ದ್ರವ್ಯಾರ್ಜನೆಮುಖ್ಯಸಾಧನವೆಂಬುದು 4 ವಿಪರೀತ ಫಲಗಳಾಗುವುದು ಚಪಲಹೊಂದಿಚಿಂತಿಸುತಿಹುದು ಜಪಹೋಮಗಳನು ತ್ಯಜಿಸುವದು ಬಲುಜಾಡ್ಯಂಗಳನನುಭವಿಸುವದು ಉಪಕಾರಗಳನುಮಾಳ್ಪರಲ್ಲಿ ಪ್ರ ತ್ಯಪಕಾರಗಳೆಣಿಸುತಲಾವಾಗಲು ಕಾಲಕಳೆಯುತ ವೃಥಾನೋಯುವದು 5 ಶೂದ್ರರುವೇದವ ಪಠಿಸುವದು | ನಿರು ಪದ್ರವನುದಂಡಿಸುತಿಹುದು | ಹರಿ ರುದ್ರವಿಧಿಗಳದೂಷಿಪದು | ಅ- ಬದ್ಧವೆಬಲುರುಚಿಯೆಂಬುವದು ಕ್ಷುದ್ರಕುನಾಸ್ತಿಕಮತವನಂಬಿ ದೇ- ವದ್ರೋಹಗಳನುಮಾಡುತ ಬಾಯಲಿ ಇದ್ದದ್ದಾದರುಯಿಲ್ಲೆಂಬುವದು6 ಪರರೊಡವೆಗಳಪಹರಿಸುವದು | ನೆರೆ- ಹೊರೆಯಂತಿರಬೇಕೆಂಬುವದು ಗುರುವಿನಲ್ಲಿ ದ್ವೇಷವೆಣಿಸುವದು | ಸತಿ- ಯರುಪತಿಯಲಿದ್ವೇಷಿಸುತಿಹುದು ನಿರತವುಜೀವನಕಿಲ್ಲೆಂದುಬಳಲಿ ದುರ್ವಿದ್ಯಗಳಭ್ಯಾಸಿಸಿಕಡೆಯಲಿ ನರಕಂಗಳಿಗೆ ಪ್ರಯಾಣಮಾಡುವದು7
--------------
ಗುರುರಾಮವಿಠಲ
ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ ಜಲಜನಾಭನ ಕೃಪೆಯ ಪಡೆದವರು ಕೇಳಿ ಅ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1 ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2 ವೈರಿ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3 ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4 ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5 ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6 ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7 ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8 ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9 ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10 ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11
--------------
ಕನಕದಾಸ
ಕಲ್ಲು ನಾಯೇನೋ ಕೈವಲ್ಯದಾಯಕನೆ ಕಲ್ಲು ಕರುಣದಿಂದ್ಹೆಣ್ಣಾಗಿರಲುದ್ಧಾರ ಕೇಳೊ ಪ (ಉಡಬಲ್ಲೆ ಉಣಬಲ್ಲೆ) ಉತ್ತಮ ಸಂಗ ಬಿಡಬಲ್ಲೆ ನಡೆಯಬಲ್ಲೆನೋ ದುರ್ಮಾರ್ಗದಿಂದ ಕಡುಕೋಪದಿಂದ ಕಠಿಣ ಮಾತನಾಡಲು ಬಲ್ಲೆ ಕಡಲಶಯನನ್ನ ನಾಮ ನುಡಿಯಲೊಂದರಿಯೆನೊ 1 ಕಾಮಕ್ರೋಧವ ಬಲ್ಲೆ ಮತ್ಸರ ಮದ ಲೋಭ ಮೋಹ ಬಲ್ಲೆನೊ ಬಾಂಧವ ಭವದಿ ಪಾದದಿ ಭಕುತಿ ಪರಮಾದರೊಂದರಿಯೆನೊ 2 ನಿಷ್ಠುರಾಡುತ ಜನರ ನಿಂದಿಸುವುದು ಬಲ್ಲೆ ಕಷ್ಟದಾರಿದ್ರ್ಯ ಒಲ್ಲೆನ್ನಬಲ್ಲೆ ದುಷ್ಟ ಅಲ್ಪರಿಗೆ ಬಾಯ್ ತೆರೆಯಬಲ್ಲೆ ಭೀಮೇಶ- ಕಷ್ಟ ನಿನದಯ ಬೇಡಿಕೊಂಬೋದೊಂದರಿಯೆನೊ 3
--------------
ಹರಪನಹಳ್ಳಿಭೀಮವ್ವ
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಯ್ಯಾ ಕಾಯೊ ಮುರಾರಿ | ದಯದಲೆನ್ನಾ ಪ ತರಳತೆಯಿಂದಾ ಸ್ಮರಣೆಯ ನಿನ್ನಾ | ಮರೆದುನೊಂದೆ ಬಹು ಪರಿದಯದಲೆನ್ನಾ 1 ಮತಿಹೀನನೆಂದು ಒಲಮಿಲಿ ನೋಡಿ | ಪಾದ ದೋರಿ ದಯದಲೆನ್ನಾ 2 ಮಹಿಪತಿ ನಂದನ ಜೀವನರಾಮಾ | ಅಹಿತರ ವಂಶವಿದಾರಿ ದಯದಲೆನ್ನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೆ ಕರುಣಾಂಬುಧಿಯೆ ತೋಯಜನಯನೆ ಪ ಕಾಯೆ ಕರುಣಿ ಗಿರಿರಾಯನ ಪಟ್ಟದ ಜಾಯೆ ಭವದಲಿ ನೋಯಗೊಡದಲೆನ್ನ ಅ.ಪ ಅಂಬುಜಾಂಬಕೆ ಅಂಭ್ರಣಿ ಸುಗುಣ ಸನ್ಮಣಿ ಕಂಬುಚಕ್ರಾಂಕಿತಪಾಣಿ ಅಂಬೆ ನಿನ್ನಯ ಪಾದಾಂಬುಜ ನಂಬಿದೆ ಬಿಂಬನ ಎನ ಹೃದಯಾಂಬರದಲಿ ತೋರೆ 1 ಕಾಮಿತಾರ್ಥ ಪ್ರದಾತೆ ಜಗದೊಳಗೆ ಖ್ಯಾತೆ ಕಾಮಿತ ಸಲಿಸೆನ್ನ ಮಾತೆ ಪ್ರೇಮದಿ ನಿನ್ನನು ನೇಮದಿ ಭಜಿಪೆನ್ನ ಧಾಮದೊಳಗೆ ನೀ ಕ್ಷೇಮದಿ ನಿಲಿಸೀ 2 ದೂತಜನಕತಿ ಪ್ರೀತೆ ಈ ಜಗಕೆ ಮಾತೆ ಸೀತೆ ಪಾಲ್ಗಡಲಾ ಸಂಭೂತೆ ದಾತ ಗುರುಜಗನ್ನಾಥ ವಿಠಲಗೆ ಪ್ರೀತ ಸತಿಯೆ ಸುಖವ್ರಾತವ ಸಲಿಸಿ ನೀ 3
--------------
ಗುರುಜಗನ್ನಾಥದಾಸರು
ಕಾಯೊ ಕಾಯೊ ಕಾಯೊ ಕಾಯೊ ಕೃಪಾನಿಧಿ ಕಾಯೊ ಕೃಪಾಳು ಸದ್ಗುರು ದಯ ನೀ ಪಾಲಿಸಿ ಸೋಹ್ಯಸೊನ್ನೆ ಸೂತ್ರಗುಹ್ಯ ಗೂಢದೋರಿ ಸಾಹ್ಯಮಾಡೊ ಸ್ವಾಮಿ ಸಾಕ್ಷಾತ್ಕಾರ ನೀ ದೋರಿಸಿ ನ್ಯಾಯದಲಿ ಮಿಥ್ಯಾಮಾಯ ಮೊನೆಮುರಿಸಿ ತೋಯಜಾಕ್ಷ ನಿಮ್ಮ ಶ್ರಯ ಸುಖ ಬೀರಿ ಭವ ಭಯ ಹರಿಸೊ ಗುರು ಕರುಣಿಸೊ 1 ನಾನಾರು ಎಂದು ಸಾಖೂನ ತಿಳಿಯದೆ ನಾನಾ ಯೋನಿಮುಖ ಜನಿಸಿ ಬಂದೆÀನಯ್ಯ ಜನುಮ ಜ್ಞಾನಗಮ್ಯವಾದ ಸ್ಥಾನದೋರಿ ನಿಜ ಧ್ಯಾನ ಮೌನದನುಭವ ಸುಖ ನೀಡೊ ನಿಮ್ಮ ನ್ಯೂನ ಪೂರ್ಣ ಎನ್ನ ನೀ ನೋಡದೆ ಸ್ವಾಮಿ ಸ್ವಾÀನುಭವದ ಸುಜ್ಞಾನ ದೀಪಲಿಡೊ ನಮ್ಮ ಮನೋನ್ಮನವಾಗಿ ಘನ ಕೈಗೂಡುವಾ ಸನ್ಮತ ನೋಡಿ ಸುವರ್ಮ 2 ನೋಡದೆ ಗುಣದೋಷ ಮಾಡಿ ಉಪದೇಶ ದೃಢಭಾವದ ಸುಪಥ ಒಡನೆ ಗೂಡಿಸೊ ನೋಡಿ ದೃಷ್ಟಿಲೆನ್ನ ಒಡೆಯ ಸದ್ಗುರು ಪೂರ್ಣ ಓಡಿಹೋಗುವಂತೆ ಭಕ್ತಿ ಜ್ಞಾನ ವೈರಾಗ್ಯವಿಡಿಸೊ ನೀಡಿ ಅಭಯಕರುಣಕವಚವ ತೊಡಿಸೊ ಪಿಡಿದು ಎನ್ನ ಕೈಯಾ ಮೂಢ ಮಹಿಪತಿಯ ಬಿಡದೆ ಕಡೆಗಾಣಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಕೆಡಬೇಡವೋ ಎಲೆ ಕರ್ಮಿ ಮನುಜ ನೀಕೆಡದಿಹ ಪಥವ ಕೇಳಿನ್ನು ಪ ಹಿಂಡು ಹಿಂಡು ಸಂದಳಿಯ ಬಿಡು ಇನ್ನು 1 ಬಹುಗೃಹ ಕಟ್ಟಿದೆ ದಿಕ್ಕಿಲ್ಲವೆಂಬೆ ಬಹು ಗೃಹವನು ಸುಡಲೆನ್ನುಇಹುದಿದು ದ್ರವ್ಯವು ಇದಕೇನೆಂಬೆಯ ಇಹುದನು ಧರ್ಮವ ಮಾಡಿನ್ನುದಾಹದಿ ಗಳಿಸಿದೆ ಆಸ್ತಿಯನೆಂಬೆಯ ಸಜ್ಜನರಿಗೆ ಕೊಳ್ಳೆನ್ನುಇಹೆ ನಾಲಕು ದಿನ ಎಂಬ ಭ್ರಮೆಯನು ಇಡು ಪಾದರಕ್ಷೆಯೊಳಿನ್ನು 2 ಮತಿವಂತರು ಆರಿಲ್ಲವೆಂಬೆಯ ಮತಿಗೆ ಶಿವ ತಾನಿಹೆನೆನ್ನುಗತಿಯೇನಿನ್ನು ಈ ಕುಟುಂಬಕೆಂಬೆಯ ಗತಿಯಿದ್ದಾಗುವುದೆನ್ನುಅತಿ ಋಣ ಭಾರವು ಆಗಿಹುದೆಂಬೆಯ ಆರಿಗೆ ಋಣ ಎಂದೆನ್ನುಸುತರಿಲ್ಲ ತನಗೆ ಗತಿಯಿಲ್ಲವೆಂಬೆಯ ಸುತರಿಂದ ಗತಿಯು ಸಾಕಿನ್ನು 3 ಪರ ಬ್ರಹ್ಮವ ನೋಡುತ ಸುಖದಲಿ ಆನಂದದಿ ಮಲಗಿನ್ನು4 ನಿರಂಜನ ನಿರವಯ ನಿತ್ಯನು ಬೇರಿಲ್ಲೆನ್ನುಪ್ರತ್ಯಗಾತ್ಮ ಪರಾತ್ಪರ ಪರತರ ಪ್ರತ್ಯಗೆ ತಾನಹುದೆನ್ನುಚಿತ್ತಿನ ಪ್ರಭೆಯದು ಢಾಳಿಸುತಿರುತಿರೆ ಚಿತ್ತವಲಯ ಮಾಡಿನ್ನುಪ್ರತ್ಯಗಾತ್ಮ ಚಿದಾನಂದನ ನೆನೆಯುತ ಪ್ರಾಣವ ಕಳೆಯಿನ್ನು 5
--------------
ಚಿದಾನಂದ ಅವಧೂತರು
ಕೆಡುವೆಯೇಕೋ ಮನುಜ ಕೆಡುವೆಯೇಕೋ ಪ ಪೊಡವಿಯಾ ಸುಖ ಸ್ಥಿರವದೆಂಬ ದೃಢವನಾಂತು ನೀ ಅ.ಪ ಧನವಗಳಿಸಲೇಂ ಮನುಜಾ ಮನೆಗಳೀಡಾಡೆ ಎನಿತು ಬಳಗಮಿರ್ಪೊಡೇನು ತನುವಿನಾಸೆಯಿಂ 1 ಮರೆವೆಯೇತಕೋ ಮನುಜಾ ಅರಿಯಲೆನ್ನುತಾ ಬರಿಯ ಮಾಯೆಯೀ ಪ್ರಪಂಚ ಚಿರವೆಂದೆನ್ನುತಾ 2 ರಂಗಮಾಲೋಲನಾ ಮಾಂಗಿರೀಶನ ನೆನೆ[ದರೆ] ಹಿಂಗದೇ ಭವಬಂಧಗಳನು | ಭಂಗಗೈಯನೇ 3 ಕಾಲದೂತ ರಂಗ ಕಾಲಿನಿಂದೊದೆಯುವಾಗ ಬಾಲರಾಮದಾಸ[ನುತನ] ನಲಿದು ನೆನೆಯದೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್