ಒಟ್ಟು 359 ಕಡೆಗಳಲ್ಲಿ , 76 ದಾಸರು , 336 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಏಳಯ್ಯ ಗುರುವೆ ಬೆಳಗಾಯಿತು ಏಳಯ್ಯ ಗುರುರಾಯ ಏಳಯ್ಯ ಶುಭಕಾಯ ಏಳು ಮಹರಾಯ ಏಳು ಎನ ಜೀಯಾ ಪ ಶೀಲ ನಿನ್ನ ಭಕ್ತರು ಸಾಲು ಸಾಲಾಗಿ ನಿಂತಿಹರೋ ಅ.ಪ ಉದಯಾದ್ರಿ ಶೃಂಗದಲಿ ಉದಿಸಿದನು ಭಾಸ್ಕರನು ಸದಮಲ ಬುಧರೆಲ್ಲ ಮುದದಿಂದಲೀ ಎದ್ದು ನದಿಯ ಸ್ನಾನವ ಮಾಡಿ ಉದಕ ಪುಷ್ಪಗಳಿಂದ ಪಾದ - ಸಂದರುಶನಕೆ ಬಂದಿಹರೋ 1 ನಿತ್ಯ ಭಜಿಸುವ ಜನರೆಲ್ಲ ಹೊತ್ತು ಮೀರಿತು ಎಂದು ಚಿತ್ತ ಶುದ್ಧಿಯಲಿಂದ ಉತ್ತುಮಾರ್ಹಣೆಗಳಾ ತಮ್ಮ ನೆತ್ತಿಯಿಂದಾ ಪೊತ್ತು ಜತ್ತಾಯುತಾಗಿ ನಿಂತಿಹರೋ ಉತ್ತಮಾ ನಿನ ನಿದ್ರೆ ಹೊತ್ತು ಮೀರ್ಯಾಯಿತೊ ಪಾದ ಒತ್ತಿ ಬೋಧಿಸುತಿಹರೋ ಚಿತ್ತಕ್ಕೆ ತಂದು ತ್ವರಿತದಿ ಏಳೋ 2 ವಿಮತಾದ್ರಿ ಕುಲಿಶನೇ ವಿಮಲ ಗಾತ್ರನೇ ಏಳೋ ದಾತ ದಿವಿಜದೃಮನೆ ವಾರಿಧಿ ಎಳೋ ತಾಮರಸಾಂಬಕನೆ ಏಳೋ ಆಮಯ ಧ್ವಂಸಕÀ ನೀನೇಳೋ ಗೋಮತೀ ಕುಮುದ ಸೋಮ ಸಾಂದ್ರನೆ ಏಳೋ - ಶ್ರೀ ಪಾದ ಭೃಂಗನೇ ಏಳೋ ಯಾಮ ಮೀರಿತು ವಿಶ್ವನಿಯಾಮಕ ದೂತನೇ ಸಾಮಗಾಯನ ಲೋಲ ರಮಾ ವಲ್ಲಭಪ್ರೀಯ ಗುರುರಾಜವರ್ಯ 3 ಮೌನಿ ಕುಲರನ್ನ ಮಾನ ನಿಧಿಯೇ ಎನ್ನ ಬಿನ್ನಪವ ಕೇಳಯ್ಯ ಜೀಯಾ ನಿನ್ನ ಭೋಧಿಪಕನ್ಯ ಜನರುಂಟೆ ನಿನ್ನಿಂದ ನೀ ಚನ್ನಾಗಿ ಏಳೋ ಮುನೆÀ್ನ ಮಹ ಕಾರ್ಯಂಗಳೂ ಘನ್ನವಾಗಿರುತಿಹವು ನಿನ್ಹೊರತು ಇನ್ನಾರು ಮಾಳ್ಪರು ಎನ್ನ ನುಡಿ ಈಗ ಚನ್ನಾಗಿ ಮನದಿ ತಂದು ಮನ್ನಿಸೀ ಪೊರೆಯೊ ಧ್ವರಿಯೇ 4 ಸೋತು ಮಲಗಿದೆಯಾ ಪಾತಕಾಂಬುಧಿ ಪೋತನೇ ಮಾತರಿಶ್ವನ ತಾತ ಪಾದ ಭವ ಯುಗ್ಮದಲಿ ಸಂ - ಜಾತವಾಗಿಹ ಸುಧಾ - ಪೀತ ಕಾರಣ ಮದಾ ಸಂ - ಭೂತದಿಂದ ಮಲಗಿದೆಯಾ ಭೂತನಾಥನ ಗುರು ಜಗ - ನ್ನಾಥ ವಿಠಲನ ದೂತ ನಾನೆಂಬ ಗರುವಿಂದ ಮಲಗಿದೆಯಾ 5
--------------
ಗುರುಜಗನ್ನಾಥದಾಸರು
ಒಲ್ಲೆ ಒಲ್ಲೆ ಸ್ವಾಮಿ ಒಲ್ಲೆ ಒಲ್ಲೆ ಪ ವಲ್ಲಭ ಶ್ರೀ ಕೃಷ್ಣವಿಠಲನಲ್ಲದೆ ಬೇರೆ ವಲ್ಲಭನನು ನಾ ಅ.ಪ. ಹರಿ ನಿಮ್ಮ ಗುಣಗಳ ಪಾಡದೆ ಇರಲೊಲ್ಲೆ ನಿತ್ಯ ಕೇಳದೆ ಇರಲೊಲ್ಲೆ ಚರಣ ಪೂಜೆಯನಿರುತ ಮಾಡದೆ ಇರಲೊಲ್ಲೆ ದೊರೆಯೆ ನಿಮ್ಮನು ಬಿಟ್ಟು ಬೇಡೆ ಅನ್ಯರ ನಾನು 1 ದುಷ್ಟಜನರ ಸಂಗ ಎಂದೆಂದಿಗುವಲ್ಲೆ ಶಿಷ್ಟಜನರ ಸಂಗ ಎಂದಿಗು ಬಿಡಲೊಲ್ಲೆ ಅಷ್ಟಕರ್ತನು ಜಗಕೆ ವಿಷ್ಣು ಒಬ್ಬನೆ ಬಲ್ಲೆ ಕಷ್ಟ ನೀಡುವ ಭವವ ಎಂದೆಂದಿಗು ಮುಂದೆ 2 ದುರಿತ ರಾಶಿಯ ಮತ್ತೆ ಮಾಡಲು ನಾನೊಲ್ಲೆ ಅರಿಷಡ್ವರ್ಗಂಗಳ ಜಯಿಸದೆ ಬಿಡಲೊಲ್ಲೆ ಗುರುಪಾದ ಪದ್ಮಗಳ ಒಲೆಸದೆ ಬಿಡಲೊಲ್ಲೆ ಪರನಾರಿಯರ ಸಂಗ ಎಂದೆಂದಿಗು ಒಲ್ಲೆ 3 ಉತ್ತಮೋತ್ತುಮ ಕೃಷ್ಣಸಾರದೆ ಇರಲೊಲ್ಲೆ ಭೃತ್ಯ ನಿನ್ನವನೆಂದು ಸಾರದೆ ಇರಲೊಲ್ಲೆ ನಿತ್ಯ ಶೃತಿಯ ಆಜ್ಞೆ ನಡಿಸದೆ ಬಿಡಲೊಲ್ಲೆ ಸುತ್ತಿ ಕಾಯುವೆ ನಮ್ಮ ಬಲ್ಲೆಬಲ್ಲೆನು ಸತ್ಯ 4 “ಶ್ರೀ ಕೃಷ್ಣವಿಠಲ”ನೆ ಪರಮಾಪ್ತ ಸರಿಬಲ್ಲೆ ವಾಕು ಸತ್ಯವೆಂಬುದ ಬಲ್ಲೆ ಏಕ ಭಕ್ತಿಯ ಬಿಟ್ಟು ಏನೇನು ನಾನೊಲ್ಲೆ ಶ್ರೀಕಾಂತನನು ಬಿಟ್ಟು ಕ್ಷಣವು ಜೀವಿಸಲೊಲ್ಲೆ5
--------------
ಕೃಷ್ಣವಿಠಲದಾಸರು
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಓಹೋ ಸುಮ್ಮನೆ ಮರುಳಾದೆ ಮಹಿಮೆಯನರಿಯದೆ ಪ. ದೇವಾಧಿ ದೇವ ಬಂದು ಮನೆಯಲಿಂದು ಕಾವಲಾಗಿರುವನೆಂದು ತಾ ತಿಳಿದಿರಲಿಂದು ನಾ ವನಿತೆಯ ಒಡಗೂಡುತ ಪೊರಟರೆ ಕಾವರಿದಾರೆಂಬುದ ಭ್ರಮೆಗೊಂಡು 1 ನೀರಿನ ಮೇಲೆ ಧರೆಯ ನಿಲ್ಲಿಸಿದಂಥ ಈರೇಳು ಲೋಕದ ದೊರೆಯ ವಕ್ಷಸ್ಥಿತ ಸಿರಿಯ ಸೇರಿದ ದಾಸರಿಗಾರಿಂದಲು ಭಯ ಬಾರದೆಂಬ ಶ್ರುತಿಸಾರವ ಗ್ರಹಿಸದೆ 2 ಎಲ್ಲಿ ನೋಡಿದರಲ್ಲಿಪ್ಪ ಶ್ರೀವನಿತೆಯ ನಲ್ಲ ಭೂಪತಿ ನಮ್ಮಪ್ಪ ನೆನೆದಲ್ಲಿಗೆ ಬಪ್ಪ ಅಲ್ಲಿ ಇಲ್ಲಿ ಭಯವೆಲ್ಲವು ಬಿಡಿಸಲು ಬಲ್ಲ ಶೇಷಗಿರಿವಲ್ಲಭನಿರುತಿರೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡಿರ ಮಧುರ ನಾಥನ ಕಂಡವರು ಪೇಳಿ ದಮ್ಮಯ್ಯ ಪ ದುಂಡು ಮುಖದ ಮೋಹನಾಂಗನು ಕೊಂಡು ಪೋದನೆಮ್ಮ ಮನವ ಅ.ಪ ಮಲ್ಲಿಗೆ ತುಳಸಿ ಮಾಲತಿ ಎಲ್ಲಿ ಪೋದನು ಪೇಳಿ ಕೃಷ್ಣನು ವಲ್ಲಭನ ಚರಣಗಳಲಿ ನಿಮ್ಮನು ಸಲ್ಲಿಸಿದ ಹಂಗೆಮ್ಮೊಳಿದ್ದರೆ 1 ತೋರಿದೆರೆ ನಯನಾಭಿರಾಮನ ಸೇರುವೆ ಅವನಂಘ್ರಿಯುಗಳಕೆ ಭೂರಿ ತರದುಪಕಾರ ನಿಮಗೆ ಸ ತ್ಕಾರ ಬರುವುದು ವಿಧಿಭವರಿಂದ 2 ಪದ್ಮೆಯರಸನು ನಿಮ್ಮೊಳಿರುವ ಸುದ್ದಿ ಬಲ್ಲೆವು ತೋರದಿದ್ದರೆ ಪದ್ಮಸಂಭವ ಪಣೆಯ ಬರಹವ ತಿದ್ದಿ ಪೇಳಿರಿ ಪದ್ಮಗಳಿರ 3 ಪಾರಿಜಾತ ಸುಜಾತ ನಂದಕು ಮಾರ ಮಣಿಯೊಂದನು ಕೊಡಲಾರೆಯ ಹೇರು ವಿಧ ವಿಧ ರತ್ನ ಮಣಿಗಳ ಸೂರೆಗೈವ ಅಭೀಷ್ಠಪ್ರದಾತ 4 ಕೇಳಲೇನುಪಯೋಗವಿವರು ಪೇಳಲಾರರು ಸುದ್ದಿ ಎಮಗೆ ತಾಳಲೆಂತು ಪ್ರಸನ್ನ ಕೃಷ್ಣನೆ ಕೇಳೆಲೆಮ್ಮಯ ಮೊರೆಯ ದಯದಿ 5
--------------
ವಿದ್ಯಾಪ್ರಸನ್ನತೀರ್ಥರು
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಡುಮುದ್ದು ಮೋಹನನಾದ ಈ ಸೊಬಗ ನ-ಮ್ಮುಡುಪಿನ ಕೃಷúರಾಯನ ನೋಡು ನೋಡುಪ. ಬೊಮ್ಮರುದ್ರಾದಿಗಳ ಕಣ್ಗೆಗೋಚರಿಸದನಿರ್ಮಲ ಚಿನ್ಮಯ ಬೊಮ್ಮವೆÉನಮ್ಮ ಚರ್ಮದೃಷ್ಟಿಗಳಿಗೆ ಗಮ್ಯವಾಯಿತ-ಮ್ಮಮ್ಮ ಇನ್ಯಾರ ಪುಣ್ಯವೊ ನೋಡು ನೋಡು 1 ಶುದ್ಧ ಸಿದ್ಧಾಂತವ ಜಗಕೆ ತೋರಿಸಿದಮಧ್ವಮುನಿಗೊಲಿದು ಬಂದಅಬ್ಧಿಜೆಯರಸನೀತನು ತನ್ನಹೊದ್ದಿದರಿಗರ್ಧ ಶರೀರವನೀವನೆ ನೋಡು ನೋಡು 2 ಪಾದ ಕಟಿ ವಕ್ತ್ರ ನೇತ್ರ ಮೌಳೀಯ ನಲ್ಲಗೊಲ್ಲಪಳ್ಳಿಯ ನೊಲ್ಲದೆ ಬಂದÀನೆ 3 - - - - - - - - - - ಅಲ್ಲಿ ಬೆಣ್ಣೆಗಳ್ಳನೆಂಬೊರಿವನೆಲ್ಲಇಲ್ಲದಿದ್ದರೆಲ್ಲಿಂದೆಲ್ಲಿಗಿಲ್ಲಿಯ ವಾಸ ನೋಡು ನೋಡು 4 ಶ್ರುತಿಗಗೋಚರನೆನಿಪ ಯತಿತತಿಮತಿಗೆ ಮೈಗೊಡದ ಬೊಮ್ಮಪತಿತ ಪಾತಕಿಗಳಿಗೆ ಕ್ಷಿತಿಯೊಳ-ಗತಿ ಸುಲಭವಾಯಿತಿನ್ನು ನೋಡು ನೋಡು 5 ಬಲ್ಲವರೆ ಬಲ್ಲರಿವನ ಈ ಮಹಿಮೆಯದುರ್ಲಭಕ್ಕೆ ದುರ್ಲಭನವಚೆಲ್ವ ಹಯವದನನಾದ ಭಕುತ ಯತಿ-ವಲ್ಲಭನಿಂದಿಲ್ಲಿ ಸುಲಭ ನೋಡು ನೋಡು 6
--------------
ವಾದಿರಾಜ
ಕಂತು ಜನಕ ಶ್ರೀಕಾಂತನ ಸ್ತುತಿಸಲ ನಂತನಿಗಸದಳವೈ ಪ ದಂತಿಚರ್ಮಧರಾಧ್ಯರು ಈತನ ಅಂತುಗಾಣದಲೆ ಚಿಂತಿಪರೈ ಅ.ಪ ಮಾವನ ಮಥಿನಿದ ಮಾವನಿಗೊಲಿದ ಮಹರಾಯನವನು | ಮಾವನ ಮಗನ ಮೋಹದ ಮಗಳಿಗೆ ಮಾವನೆನಿಸಿದವನು ಮಾವನ ತಮ್ಮಗೆ ತನ್ನಯ ಭಕುತನ ಮಹಿಮೆ ತೋರಿಸಿದನು || ಪರಿ ಪರಿ ಪೊರೆದನು ಉ ಮಾವಲ್ಲಭನುತ ನಗಧರನಿವನು 1 ಸತಿಯ ಪಿತನ ಪೆತ್ತನ ಮಾತೆಗೆ ಪತಿಯಾದವ ನಿವನು | ಸತಿಯಳ ಪಿಡಿದೊಯ್ದಾತನ ಭ್ರಾತನ ಸುತನ ಪಾಲಿಸಿದನು ಸತಿಯ ಪಡೆದವಳ ಸುತನ ಮರ್ದಿಸಿ ಸತಿಯರ ಕೂಡಿದನು | ಸತಿಗೆ ಕೊಟ್ಟ ವರ ಹಿತದಿ ನೀಡಲು ಸತಿಯನ್ನಗಲಿದ ಶತಕ್ರತು ವಂದ್ಯನು 2 ಕಾಲುರಹಿತ ಕೈಕಾಲು ಮುದುರುವ ಕೋಲರೂಪಿ ಇವನು ಕಾಲನಂತೆ ಘನ ಕೋಪಿಯಾಗಿ ನದಿ ಕಾಲಲಿ ಪಡೆದವನು ಕಾಲಕ್ಷತ್ರಿಯರ ತಾ ಬಾಲೆಯ ಸಲಹಿದನು ಕಾಳಿವೈರಿ ಶ್ರೀ ಶಾಮಸುಂದರ ನಖ ಸಖ ಕಲಿ ಭಂಜನನು 3
--------------
ಶಾಮಸುಂದರ ವಿಠಲ
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕಪಾಲಧರ ತ್ರಯತಾಪರಿಹಾರ ಭ ಜಿಪೆ ಕಾಪಾಡು ಕೃಪೆ ಪಾಲಿಸಿ ಪ ಅಪಾರ ಪತಿವ್ರತಾಶಾಪವಿಮೋಚನ ಗೋಪ ಗೋಪತಿ ನಮಿತ ಗೋಪಾಲನೊಲಿಸೆನಗೆ ಅ.ಪ ಅಗಜಾವಲ್ಲಭ ಸುಗುಣರಘದೂರ ಜಗದೊಡೆಯ ಮಗುವಿನ ಮೊರೆ ಪಾಲಿಸು ವಿನುತ ಅಗಣಿತಾಗಣಿತಮಹಿಮೆ ಬಗೆದೆನ್ನ ನುಡಿಯಾಲಿಸು ನಗಧರ ಖಗರೂಢ ಜಗರಕ್ಷ ಹರಿನಾಮ ಅಗಣಿತ ಮತಿ ನೀಡೊ 1 ಅಜಭವಸುರ ನಮಿತ ರಜತಾದ್ರಿಮಂದಿರ ನಿಜಜ್ಞಾನ ದಯಮಾಡೊ ಮೃಡ ಗಜಚರ್ಮಾಂಬರ ಜಗದ ಗೋಜು ಮುಂದೆನಗೆ ಬೇಡೊ ಸುಜನ ಸಂರಕ್ಷಕ ಪಾದ ನಿಜಧ್ಯಾನ ಸ್ಥಿರಕೊಡೋ 2 ಮೃತ್ಯುವಿಜಯ ಸತ್ಯ ಚಿತ್ತ ನಿರ್ಮಲ ನಿತ್ಯ ಸತ್ಯರ ಸಖ್ಯ ನೀಡೊ ಸತ್ಯಸದ್ಭಕ್ತಿನಿತ್ತು ಮತ್ರ್ಯರಿಂದುಳಿಸೆನ್ನ ಚಿತ್ತ ಪರಿಶುದ್ಧ ಮಾಡೊ ಭಕ್ತವತ್ಸಲ ನಿಜಮುಕ್ತಿದಾಯಕ ಮಮ ಕರ್ತ ಶ್ರೀರಾಮನ ಭಕ್ತನೆಂದೆನಿಸೆನ್ನ 3
--------------
ರಾಮದಾಸರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ