ಒಟ್ಟು 78 ಕಡೆಗಳಲ್ಲಿ , 33 ದಾಸರು , 73 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆ ನೀ ಸ್ಥಿರವಾಗಿ ಹರಿಯ ಪಾದಾಂಬುಜ_ವನು ಸೇರಿ ಅಲ್ಲಿಯೆ ನಿಲ್ಲಯ್ಯ ಬಿಡದೆ ಪ ಅನುದಿನ ಸೇವಿಸಲನುವಾಗುದಯ್ಯಾಘನ ಚಂಚಲ ನೀನು ಎಚ್ಚರ ಎಚ್ಚರ ಅ.ಪ. ಅಲ್ಲಲ್ಲಿ ಇಲ್ಲೆಂದು ಎಲ್ಲೂ ಹುಡುಕಲು ಬೇಡಎಲ್ಲೆಲ್ಲ್ಯೂ ಇರುವ ಶ್ರೀವಲ್ಲಭನುಬಲ್ಲವರಾಡುವ ಸೊಲ್ಲನು ಲಾಲಿಸುಖುಲ್ಲನೆಂಬುವ ನಿಂದೆಗೀಡಾಗಬೇಡಾ 1 ನಿತ್ಯ 2 ಧ್ಯಾನದ ದಾರದಿಂ ಜಪವೆಂಬ ಗಂಟಿರಲಿಶ್ರೀನಿವಾಸನ ಪಾದವೆಂಬ ಗೂಟಕೆ ಕಟ್ಟಿಮೌನದಿಂ ಕಟ್ಟಿಸಿಕೊಂಡಲ್ಲೇ ಸುಳಿದಾಡುಸ್ಥಾನವ ಬಿಟ್ಟನ್ಯನಿಟ್ಟಿಗೆ ಪೋಗದೆ 3 ಸಕಲರ ಪಾಪವ ತೊಳೆದು ಪಾವನಗೈದುಮುಕುತಿಯ ದಾರಿಯ ತೋರುವ ನದಿಗಂಗೆಪ್ರಕಟವಾಗಿರುವಂತೆ ಚರಣದೊಳುರುಳಾಡುಭಕುತಿಯ ಬೇಡು ನೀ ಪ್ರತಿದಿನ ನೋಡು 4 ಗದುಗಿನ ವೀರನಾರಾಯಣಗೂ ನಿನಗೂ ಹೃದಯವೆ ಮಂದಿರವಲ್ಲವೆ ದೀಪದಕದಿರಂತ ಚಾಚುತ ಪೋಗಿಬರುವದೇತಕೆಸದನವ ಬಿಡದಲ್ಲೇ ಹರಿಯನು ಸೇವಿಸು 5
--------------
ವೀರನಾರಾಯಣ
ಮರೆತಿರಲಾರೆ ಪ್ರಿಯನ ಮಾರನಯ್ಯನ ಪ ಇರುಳು ಹಗಲು ಅನುಸರಿಸಿ ತಿರುಗುತಲಿ ಸುರತ ವಾರ್ತೆಗಳನಾಡಿಸುತ ನಲಿಸುತಿಹನ ಅ.ಪ ಎನಗೆ ಬೇಕಾದುದ ತನಗೆ ತಾ ಕೊಡುತಲಿ ಮನಕೆ ಹರುಷವ ಕೊಡುವನ ತ್ರಿಲೋಕ ಸುಂದರನ 1 ಎನ್ನ ನೋಡುತಲಿ ಹಿಗ್ಗುತಲಿರುವನ ಕಣ್ಣಲಿ ಕಾಣದ ಘಳಿಗೆ ಯುಗವಾಗಿರುವುದೆಲೆ 2 ಪ್ರೇಮದಿ ಬಿಗಿದಪ್ಪುತ ಮುದ್ದಿಸಿ ಲಾಲಿಪನ 3 ಚದುರನ ಸರಸವು ವಿಧ ವಿಧ ಲೀಲೆಗಳ 4 ಜನುಮ ಜನುಮಕು ಇವನೆ ಪ್ರಿಯನಾಗಿರ- ಅನುದಿನ 5 ಅವನಿಲ್ಲದ ಸೌಖ್ಯವು ನರಕಕ್ಕೆ ಸಮ ಸವಿಯಾಗದು ಅಮೃತವು ವಿಷವಾಗುವುದೆಲೆ ಮನಕೆ 6 ಬೆರೆವ ಸುಖಕೆ ಇನ್ನು ಸರಿಯಾವುದೆ ಜಗದೊಳು 7
--------------
ಗುರುರಾಮವಿಠಲ
ಮುರಳಿಯ ಧ್ವನಿಯು ಕರೆಯುತಲಿರುವುದು ಪೋಗುವ ಬಾರೆ ಸಖಿ ಪ ಪೋಗುವ ಬಾರೆ ಸಖಿ ಬೇಸರ ನೀಗುವ ಬಾರೆ ಸಖಿ ವಿಧ ವಿಧ ಭೋಗವ ಪಡುವ ಸಖೀ ಅ.ಪ ವರವಂಶದಿ ಜನಿಸಿದ ಭಾಗ್ಯವ ಈ ಮುರಳಿಯು ತಂದಿತು ಕೇಳೆ ಸಖಿ ಪರಮ ಪ್ರೇಯಸಿ ಇವಳಂತರಂಗವ ಮರೆ ಮಾಚುವ ರಸಿಕಾಗ್ರಣಿ ಕೃಷ್ಣನ 1 ಕ್ಷೀರಶರಧಿತನಯಳ ವೈಭವ ಈ ನೀರಸಳಿಗೆ ಇದು ಅಚ್ಚರಿಯು ಕೋರಿ ಚುಂಬಿಸುವ ಕೃಷ್ಣನಧರ ಸುಧೆ ಧಾರೆಯೊ ಸೂರೆಯೊ ಶೌರಿಯ 2 ಹುಲ್ಲೆ ಹುಲಿಯ ಭಯ ತೊರೆದು ಕೇಳುತಿದೆ ಕಲ್ಲು ಕರಗಿ ಮೃದುವಾಗಿರುವಂತೆ ನಲ್ಲೆ ಎನ್ನ ಹೃದಯವು ಕರಗಿತು ನಾ ನಿಲ್ಲಿ ಎನ್ನ ಮನವಲ್ಲಿ ಪ್ರಸನ್ನನ 3
--------------
ವಿದ್ಯಾಪ್ರಸನ್ನತೀರ್ಥರು
ಮೂರ್ತಿ ಪ ಲೋಕದ ಜನರಘವನು ತೊಳೆಯಲಿಕೆ ತ್ರೈ ಲೋಕ ದೊಡೆಯ ಚದಂಬರನಾಗಿ ಭೂಕಾಂತೆಯೊಳಗೆ ಮೂರ್ತಿ ದಯಾಪರ ಮೂರುತಿ 1 ಮಾಡಿಕೊಂಡ ಪಾಪದ ರಾಶಿಯು ದಿನ ದಿನ ಉರಿಗೊಂಡು ಸುಟ್ಟುದು ಮರೆಹೊಕ್ಕೆನೀಗಳು ಪಾದ ಪುಂಡರೀಕವನು ಚಿದಂಬರಮೂರ್ತಿ 2 ಹೊನ್ನು ಹಣವ ಚಿನ್ನ ಚಿಗುರು ಬೇಡುವನಲ್ಲ ಪಾದ ಪದ್ಮದ ಸ್ಮರಣೆಯನು ಸಂಪೂರ್ಣವಾಗಿರುವ ನಿತ್ಯ ಸುಖಾರ್ಣವಾನಂದ ಚಿದಂಬರಮೂರ್ತಿ 3 ಬೇಡುವೆನೊಂದು ವರವ ಕೊಡುವರೆ ಈ ಗೂಡಿರುವತನಕ ಕೃಪೆಮಾಡಿ ಸಲಹೋ ಎನ್ನ ನೋಡಿ ಬಡವನ ಚಿದಂಬರಮೂರ್ತಿ 4 ಪ್ರಾಕುನುಡಿದ ಪುಣ್ಯದಿಂದ ನಿಮ್ಮಯಪಾದ ಸೇರೆ ನಾ ಕೃತ ಕೃತ್ಯನಾದೆ ನಿಂದಿನ ಜನ್ಮ ಸಾರ್ಥಕ ವಾಯ್ತು ಪರಾಕೆ ಚಿದಂಬರ ನೀ ಕರುಣಿಸೋ ಎನಗಭಯವಿತ್ತು 5
--------------
ಕವಿ ಪರಮದೇವದಾಸರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯಾಕುಪೇಕ್ಷಿಸುವಿ ಕರುಣೈಕನಿಧಿ ನರಸಿಂಹ ವೈರಿ ಪುಂಜನನ ಶ್ರೀಕರನೆ ನೀನೆನಗೆ ಶರಣೆಂದು ನಂಬಿದೆನು ಸಾಕಬೇಕಯ್ಯ ದಾಸರನು ಪ. ಹುಡುಗ ಪ್ರಲ್ಹಾದ ಜಗದೊಡೆಯ ನೀನಹುದೆಂಬ ನುಡಿಯಲಾಲಿಸುತವನ ಪಿತನು ಕಡಿವೆನೆಂದೆದ್ದು ಮುಂದಡಿಯಿಟ್ಟು ಮುಂದರಸಿ ದೃಢ ಮುಷ್ಟಿಯಿಂದ ಖಂಬವನು ಬಡಿಯುತಿರೆ ಶತಕೋಟಿ ಸಿಡಿಲಂತೆ ಗರ್ಜಿಸುತ ಘುಡುಘುಡಿಸಿ ಬಂದು ದೈತ್ಯನನು ಪಿಡಿದೆತ್ತಿ ತೊಡೆಯ ಮೇಲ್ ಕೆಡಹಿ ದಶನಖದಿಂದ ಒಡಲ ಬಗೆದನೆ ನೀಚರನು 1 ನರಸಿಂಹನೆಂಬ ಈರೆರಡು ವರ್ಣವ ಜಪಿಸೆ ದುರಿತ ದೂರೋಡುತಿಹವೆಂದು ಸರಸಿಜೋದ್ಭವ ಶಂಭು ಸುರನಾಥ ಮುಖ್ಯಮುನಿ ವರರು ಕೊಂಡಾಡುತಿಹರಿಂದು ಅರಿತದನು ತ್ವತ್ಪಾದ ಸರಸಿಜವೆ ಶರಣೆಂದು ದೊರೆ ನಿನ್ನ ನಂಬಿಕೊಂಡಿಹೆನು ಅರಿಭಾವ ಸಾಧಿಸುವ ದುರುಳರನು ಪಿಡಿದವರ ಕರುಳ ತೆಗೆದೆತ್ತಿ ಬೀರದನು 2 ಅತಿ ಸೂಕ್ಷ್ಮಯಂದಗ್ನಿ ಗತಿಯನ್ನುಪೇಕ್ಷಿಸಲು ವಿತತವಾಗುವುದು ಕ್ಷಣದೊಳಗೆ ಜತನ ಮಾಡುವರದರ ಗತಿಯನಳಿಸುವುದು ಸ- ಮ್ಮತವಾಗಿರುವುದು ಜಗದೊಳಗೆ ಪತಿತಪಾವನ ಶೇಷಗಿರಿರಾಜ ನೀ ಯೆನಗೆ ಗತಿಯಾಗಿ ಸಲಹುವುದರಿಂದ ವಿತಥಾಭಿಲಾಷೆಯಾತತಾಯಿಗಳ ತ್ವರೆಯಿಂದ ಹತಮಾಡಿಸು ಶ್ರೀ ಮುಕುಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯೇಸು ಧನ್ಯನೊ ಹರ ತಾನೇಸು ಧನ್ಯನೊ ವಾಸವಾದಿ ಸುರರಿಗಿಂತ ಕೇಶವನ ಕರುಣ ಪಾತ್ರ ಪ. ವೇದವಿನುತನಮಲ ಪದ್ಮ ಪಾದ ಮೋದಿಸ್ವರ್ಧುನಿಯ ಸಾದರದಿ ಶಿರದಿ ಧರಿಸಿ ಮೋದ ಬಡುವ ಮುಕ್ಕಣ್ಣಾ 1 ಶ್ರೀಶನನ್ನು ಭಜಿಪ ಮುಖ್ಯ ದಾಸತಾನೆಂದರಿಯಿರೆಂದು ಹಾಸಿಕೆಯ ಹೆಗಲ ಮೇಲೆ ಭೂಷಣಗೊಂಡಮಿತ ಮಹಿಮ 2 ಅಂಹೊಮೋಪಾಹನರ ಸಿಂಹನನ್ನು ಹೃದಯಕಮಲ ಸಿಂಹಾಸನದೊಳಿರಿಸಿ ದಿವ್ಯ ಜಿಂಹ್ಮೆಯಿದ್ದನವಗೈವ 3 ಘೋರ ಸಂಸಾರಾಬ್ಧಿ ಭಯ ತಾರಕವಾಗಿರುವ ರಾಮ ತಾರಕ ಮಂತ್ರೋಪದೇಶ ತಾರಕ ರಘುವಾರ ದೇವ 4 ಪಂಕಜಾಕ್ಷ ಪರಮ ಕರುಣಿ ವೆಂಕಟಾದ್ರಿವಾಸ ಹರಿಯಾ ಕಿಂಕರ ಭಕ್ತಿ ಜನರಾ ತಂಕವಾರಾ ಶಂಕರ 5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ವರವ ಕೊಡೆ ತಾಯೆ ವರವ ಕೊಡೆ ಪ. ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆ ಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆ ನೆರೆ ನಂಬಿದೆನು ನಿನ್ನ ಚರಣಕಮಲವನು ಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ1 ಹೊಳೆವಂಥ ಅರಸಿನ ಹೊಳೆವ ಕರಿಯ ಮಣಿ ಸ್ಥಿರವಾಗಿ ಕಟ್ಟುವಂಥ ವರವ ಕೊಡೆ ತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆ ಯಾವಾಗಲಿರುವಂಥ ವರವ ಕೊಡೆ 2 ಬಾಗಿಲ ತೋರಣ ಮದುವೆ ಮುಂಜಿ ನಾಮಕರಣ ಯಾವಾಗಲಾಗುವಂಥ ವರವ ಕೊಡೆ ಬಂಧುಬಳಗ ಹೆಚ್ಚಿ ಹೆಸರುಳ್ಳ ಮನೆ ಕಟ್ಟಿ ಉಂಡಿಟ್ಟಿಡುವಂಥ ವರವ ಕೊಡೆ 3 ಹಾಲ ಕರೆಯುವ ಮೇಲಾದ ಸರಳೆಮ್ಮೆ ಸಾಲಾಗಿ ಕಟ್ಟುವಂಥ ವರವ ಕೊಡೆ ಕಂಡಕಂಡವರಿಗೆ ಕರೆದು ಮೃಷ್ಟಾನ್ನವ ತಿಳಿ ನೀರು ಕೊಡುವಂಥ ವರವ ಕೊಡೆ 4 ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿ ಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿ ಅಷ್ಟೈಶ್ವರ್ಯವು ಪುತ್ರಸಂತಾನವ ಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಿಜಯ ಭೈರವಿ ತಾಯೆ ವಿಶ್ವೇಶಿ ಮಹಾಮಾಯೆ ಸ್ವಜನನೆಂದೆನ್ನ ಕಾಯೆ ಕುಜನ ಕೃತ್ಯಗಳನ್ನು ಕಾಲಿಂದಲೊರಸು ಕಂ- ಬುಜನೇತ್ರೆ ಕರುಣಾಸುಧೆಯ ನೀಡು ದಯಮಾಡು ಪ. ಪರಿ ಪರಿಯಲಿ ದೇಹ ಕರಗಿಸುತಿಹ ನಾನಾ ದುರಿತ ಕಾರಣವೇನೆಂದರಿಯದಲೇ ಮರುಗುತಲಿರೆಯಿಂದಿನಿರುಳ ಸ್ವಪ್ನದಿ ಬಂದು ಹರಿಯ ಚಿತ್ತದ ರೀತಿಯರುಪಿ ತ್ವರಿತದಿ 1 ಶರಣು ಜನ ಮಂಥಾರ ಶಾಶ್ವತ ತರಣಿ ಕೋಟಿ ಸಮಾನ ಭಾಸುರ ಚರಣ ಕಮಲಗಳನ್ನು ಶಿರದಲಿ ನಿರಪದಿಯೊಳಿಟ್ಟಿರವ ತೋರಿಸು 2 ಪಂಚ ವಿಂಶತಿ ತತ್ವ ಪರಿಭಾಸೆ ಪುರುಶಕ್ತಿ ಪಾಂಚ ಭೌತಿಕ ದೇಹ ಗತ ಬಾಧೆಯ ಕೊಂಚವಲ್ಲದೆ ಹರವಂಚವಾಗಿರುವೆ ವಿ- ರಿಂಚಿಯ ಜನನಿ ನಿಷ್ಕಿಂಚನ ಜನವಂದ್ಯೆ 3 ಪಾಂಚಜನ್ಯೋದಕವ ಸೇಚಿಸಿ ಪಂಚಕರಣಕೆ ಮಾರ್ಗ ಸೂಚಿಸಿ ಪಂಚವರ್ನದ ಶು ....... * 4
--------------
ತುಪಾಕಿ ವೆಂಕಟರಮಣಾಚಾರ್ಯ
ಶಿವಮಂತ್ರವ ಜಪಿಸೋ ಮೂಢಶಿವಮಂತ್ರವ ಜಪಿಸೋಶಿವನೇ ನೀನಾಗುವೆಯೆಂದು ನಂಬುತ ಪ ಸ್ನಾನ ಬೇಡ ಸಂಧ್ಯಾಕರ್ಮವು ಬೇಡಧ್ಯಾನ ಬೇಡ ಧಾರಣೆ ಬೇಡಮೌನ ಬೇಡ ಮಣಿಮಾಲಿಕೆ ಬೇಡಧ್ಯಾನ ಬೇಡ ಪಶುವಧೆಗಳು ಬೇಡ 1 ದೇಶಕಾಲ ಪಾತ್ರವ ನೋಡಬೇಡಕಾಷಾಯಾಂಬರ ಧಾರಣೆ ಬೇಡಭಾಸುರ ಜಡೆಯನು ಬೆಳೆಸಲು ಬೇಡಈ ಶರೀರವನೆ ದಂಡಿಸಬೇಡ 2 ಕಾಲನ ದೂತರು ಎಳೆಯದ ಮುನ್ನನಾಲಿಗೆ ತನ್ನಾಧೀನವಾಗಿರುವಾಗಏಳುಕೋಟೆ ಮಂತ್ರಕೆ ಮಣಿಯಾದ ವಿ-ಶಾಲ ಕೆಳದಿ ರಾಮೇಶ್ವರನೆ ಗತಿಯೆಂದು 3
--------------
ಕೆಳದಿ ವೆಂಕಣ್ಣ ಕವಿ
ಶೇಷ ಪರ್ಯಂಕ ಶಯನ ವಿಠಲ ಪೊರೆ ಇವಳ ಪ ವಾಸುದೇವನೆ ನಿನ್ನ | ದಾಸಿ ಎಂದೆನಿಸಿ ಭವಪಾಶವನೆ ಕಳೆಯೊ ಸುವಿ | ಶೇಷ ಹರಿಯೇ ಅ.ಪ. ಪತಿಸುತರು ಹಿತರಲ್ಲಿ | ವಿತತವಾಗಿರುವಂಥಅತಿಶಯದ ತವರೂಪ | ಸತತ ಚಿಂತಸುವಾ |ಮತಿಯನೇ ಕರುಣಿಸುತ | ಕೃತ ಕಾರ್ಯಳೆಂದೆನಿಸೊಕ್ಷಿತಿರಮಣ ಭಿನ್ನವಿಪೆ | ಪತಿಕರಿಸೊ ಇದನಾ 1 ಬುದ್ಧಿಯಲಿ ಸನ್ನಿಹಿತ | ವೃದ್ಧಿಗೈಸಿವಳಲ್ಲಿಮಧ್ವಮತ ಸಿದ್ಧಾಂತ | ಪದ್ಧತಿಗಳಾಅಧ್ವರೇಡ್ಯನೆ ಅನಿ | ರುದ್ಧ ಮೂರುತಿ ಹರಿಯೇಕೃದ್ಧಖಳ ಸಂಹಾರಿ | ಪದ್ಮನಾಭಾ 2 ಕೀಚಕಾರಿ ಪ್ರಿಯನೆ | ಮೋಚಕೇಚ್ಛೆಯ ಮಾಡಿಪ್ರಾಚೀನ ಕರ್ಮದಿಂ | ಮೋಚನವ ಗೈಸೋ |ಯಾಚಿಸುವೆನೋ ಸವ್ಯ | ಸಾಚಿಸಖ ನೀನೆಂದುಈಕ್ಷಿಪುದು ಕರುಣ ಕಟಾಕ್ಷದಲಿ ಹರಿಯೇ 3 ಸಾರ ಸುಖಸಾಂದ್ರಾ 4 ಕಾವ ಕರುಣಿಗಳರಸ | ಭಾಮಕರ ಪರಿಪಾಲಾಓವಿತವ ಸಂಸ್ಮರಣೆ | ಸಾರ್ವಕಾಲಿದಲೀಈವುದಿವಳಿಗೆ ಎಂದು | ಭಾವದಲಿ ಭಿನ್ನವಿಪೆಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀ ಗುರು ಜಗನ್ನಾಥಾರ್ಯ ಕರುಣಿಸಯ್ಯ ಮೊರೆಹೊಕ್ಕೆ ತ್ವತ್ವದಕೆÉ ಮರಿಯದಲೆ ಪಿಡಿ ಕೈಯ್ಯ ಪ ಪ್ರಹ್ಲಾದನನುಗ್ರವು ಎಲ್ಲ ಕಾಲದಲಿ ನಿ ನ್ನಲ್ಲಿ ಸಂಪೂರ್ಣವಾಗಿರುವದೆಂಬ ಸೊಲ್ಲು ಲಾಲಿಸಿ ನಿನ್ನ ಪಲ್ಲಾವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಜನಕಾಗ್ರಜಾತಾರ್ಯ | ನರನಿಸಿ ಜನಿಸುತ ಮಂತ್ರಮುನಿ ನಿಲಯ ಮುನಿವರ್ಯ ಶ್ರೀ ರಾಯರ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವುದರೆ ಅನುಕೂಲಿಸಿದ ಜ್ಞಾನಿ 2 ಶ್ರೀಶಾಮಸುಂದರನ ದಾಸವರ್ಯರ ಉಪ ದೇಶವನು ಕೊಂಡು ಉಪಾಸನೆಯನು ಲೇಸಾಗಿ ಬಿಡದೆ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಕೋಸಿಗೆ ವಾಸ 3
--------------
ಶಾಮಸುಂದರ ವಿಠಲ
ಶ್ರೀ ಯುವನಾಮ ಸಂವತ್ಸರ ಸ್ತೋತ್ರ 152 ಉಗ್ರಂ ವೀರಂ ಮಹಾ ವಿಷ್ಣು ಅನುಪಮ ಮಹಾಜಾಜ್ವಲ್ಯ ಸರ್ವತೋಮುಖ ಭೀಷಣ ಭದ್ರ ಮೃತ್ಯು ನರಸಿಂಹ ದೇವ ದೇವ ದೇವೋತ್ತಮನಲಿ ಶರಣಾದೆ ಯುವನಾಮ ಸಂವತ್ಸರ ಅಸಮ ನಿಯಾಮಕನಲ್ಲಿ ಪ. ಬಾಲಿಶತನ ಕಳಿದು ಪ್ರೌಢಿಮೆಯಲಿ ಬರುವ ಯುವಕ ಯುವತಿಯರು ಸಾರ ಅಸಾರ ವಿವೇಕದಿ ಇಹಪರ ಸಾರ್ಥಕ ಆಗುವ ಜೀವನ ಕ್ರಮದಿ ಚರಿಸಲು ಯೋಗ್ಯವಾಗಿರುವದು ಈ ಯುವನಾಮ ವರ್ಷ 1 ಹರಿರೇವ ಪರೋ ಹರಿರೇವ ಗುರುರ್ ಹರಿರೇವ ಜಗತ್ಪಿತೃ ಮಾತೃಗತಿಃಯೆಂಬ ಪರಮೋತ್ತಮ ಬಲು ಆಪ್ತ ವಾಕ್ಯವ ಪ್ರತಿಕ್ಷಣ ಸಂಸ್ಮರಿಸಿದರೆ ಇಷ್ಟ ಸಿದ್ಧಿ ಅನಿಷ್ಟ ನಿವಾರಣ ದಿನ ದಿನ ವಿಹಿತ ಸಾಧು ಕರ್ಮ ಆಚರಿಪರಿಗೆ 2 ವಿಷ್ಣು ಪುರಾಣದಿ ಪರಾಶರ ಮಹರ್ಷಿ ಉಪದೇಶಿಸಿದಂತೆ ಪಾಷಂಡಿಗಳಲ್ಲಿ ಪಾಷಂಡ ಮತ ಪ್ರವರ್ತಕರಲಿ ಮೋಹ ಕೂಡದು ಸಾತ್ವಿಕ ಪುರಾಣಧಿಕ್ಕರಿಸುವ ಸ್ತ್ರೀ ಪುರುಷರ ಕ್ರೌರ್ಯಕ್ಕೆ ಬಾಗಿ ಸ್ನೇಹಿಸುವ ಜನರು ವಿಪತ್ತಿಗೆ ಗುರಿ ಜನ್ಮ ಜನ್ಮಕ್ಕೂ 3 ಯುವ ವರ್ಷ ರಾಜನು ಸಾಧು ಸಜ್ಜನಪ್ರಿಯ ಶನಿಮಹಾರಾಜನು ಹರಿಭಕ್ತರು ಸಜ್ಜನರುಗಳಿಗೆ ಸಹಾಯಕನು ಗೋಚಾರದಿ ಸ್ವಕ್ಷೇತ್ರಿ ಮೂಲ ತ್ರಿಕೋಣದೆ ಚಾರ ಶ್ರೀಹರಿ ನಿಯಮನದಿ ಮಂತ್ರಿ ಶುಕ್ರಚಾರ್ಯರು ಗೋಜನ ಪ್ರಿಯರು ಲೋಕ ಹಿತಕರರು 4 ಶನೈಶ್ಚರ ಕೃತ ಲಕ್ಷ್ಮಿ ಭೋಮ ನರಸಿಂಹ ಸ್ತೋತ್ರ ಅವಶ್ಯಪಠನೀಯ ಧಶರಥ ಕೃತ ಮತ್ತು ಪ್ರಸನ್ನ ಶ್ರೀನಿವಾಸೀಯ ಶನಿ ಸ್ತೋತ್ರ ಈ ನುಡಿಗಳು ಸಂವತ್ಸರ ಸ್ತೋತ್ರ ಯತಿವರ್ಯರು ಪಂಡಿತರು ಮತ್ತೆಲ್ಲರಿಂಪಠನೀಯ ಭಕ್ತಿ ಪೂರ್ವದಿ ಪಠಿಸಿ ಮನನ ಮಾಳ್ಪರಿಗೆ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ ರಕ್ಷಿಸುವ ಪ್ರತಿಕ್ಷಣದಿ 5
--------------
ಪ್ರಸನ್ನ ಶ್ರೀನಿವಾಸದಾಸರು