ಒಟ್ಟು 474 ಕಡೆಗಳಲ್ಲಿ , 4 ದಾಸರು , 451 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವನ ಪಾಲಿಸಿದರೆ ನಿನಗೆ ಪುಣ್ಯ ಪ ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು | ಘಟ್ಟಿಯಾಗಿ ಭಕುತನ್ನ ಕಾಪಾಡು1 ಸಾಧನ ಪ್ರಾಣಿಗಳಿರಲಿ ಬೇಕು | ವಾಕು 2 ತ್ರಿಜಗದೊಳಗೆ ನಿ£ಗ್ಯಾರೆಣೆಯೆ | ವಿಜಯವಿಠ್ಠಲ ಕೇಳೆನ್ನ ದೊರೆಯೆ 3
--------------
ವಿಜಯದಾಸ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಪ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ 1 ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ2 ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ ಸಂಗತಿಲೆನ್ನ ಇಟ್ಟು | ಪರಮ ಶುದ್ಧನ ಮಾಡಿ ವಿಜಯವಿಠ್ಠಲ ನಿನ್ನ | ಚರಣಸೇವೆ ನಿರಂತರ ಕೊಡೆಂದೆನಲ್ಲದೆ3
--------------
ವಿಜಯದಾಸ
ಈ ವೈಷ್ಣವ ಜನುಮ ಸಫಲವಿಂದು | ಈ ಉಡುಪಿ ಯಾತ್ರಿಗಭಿಮುಖವಾದುದು ಪ ಮನೋವಾಕ್ಕಾಯ ಕರ್ಮಗಳು ಬಲುಪರಿ ಇರಲು | ಮನುಜ ಪೋಗುವೆನೆಂದು ಒಮ್ಮೆ | ನೆನೆಸಿದ ಕ್ಷಣದಲ್ಲಿ ನಾಕವಾಗೋವು ಸು ಭವ ವನಧಿಗೆ ಇದೇ ಮೂಲ 1 ದೇಶದೊಳಗುಳ್ಳ ನಾನಾ ಯಾತ್ರೆ ತೀರಥಾ | ಏಸುಬಾರಿ ಪೋಗಿ ಬರಲಿ ಉಂಟೆ | ಈ ಸುಲಭ ಯಾತ್ರೆ ಕಂಡವರಿಗೆ ದೊರಿಯದು | ಲೇಸಾಗಿ ಕೇಳುವದು ಕುತ್ಸಿತ ಭಾವನೆ ಬಿಟ್ಟು 2 ಕೃಷ್ಣರಾಯನ ದರುಶನಕೆ ಮನಮಾಡಿದ | ಶಿಷ್ಟಾಚಾರಗೆ ಲಿಂಗಕಾಯ ಭಂಗಾ | ದಿಟ್ಟ ಮೂರುತಿ ವಿಜಯವಿಠ್ಠಲ ಕರುಣಿ ಜ್ಞಾನ | ಕೊಟ್ಟುಪಾಲಿಸುವ ಬಲು ಮೂರ್ಖರಾದರೂ ಸಿದ್ಧ3
--------------
ವಿಜಯದಾಸ
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ | ವಾಸುದೇವ ಮುನಿಯಿದ್ದ ಕಾರಣ ಪ ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು | ತೇಜದಲಿ ನೋಡೆ ಸೂರ್ಯನದೆ ಸೋಲು || ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು | ಭೋಜನದಲಿ ನೋಡೆ ಅಮೃತಕೆ ಮೇಲು 1 ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ | ಸತ್ಸಂಗತಿಯ ನೋಡೆ ಬುಧ ಸಂಗತಿ || ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ | ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2 ಓಲಗದಲಿ ನೋಡೆ ಸತ್ಯಲೋಕಕೆ ಸಮ | ಪೇಳುವ ಕೀರ್ತನೆ ನೋಡು ವೇದಸ್ತೋಮ || ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ | ತಿಳಿದ ಮಾನವಗೆ ಫಲವು ನಿಷ್ಕಾಮಾ3
--------------
ವಿಜಯದಾಸ
ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಪ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ 1 ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ ಕುಲದಲ್ಲಿ ಉದ್ಭವನೀತ | ದ್ವಿಜನ ಶಾಪವ ಕೈಕೊಂಡನೀತ | ದ್ವಿಜ ಭೂಷಣ ಯಾಗದಲಿ ಸೂರ್ಯನ | ಧ್ವಜವ ಕಿತ್ತಿದನೀತ ಕೈಲಾಸ | ದ್ವಿಜವಾಗಿವುಳ್ಳ ಉಗ್ರೇಶನೀತ2 ತ್ರಿಗುಣಾಕಾರ ನೀತ ಮೂರು | ಜಗವದಲ್ಲಣನೀತ ಮೇರು | ನಗಚಾಪನೀತ ನಾರಾಯಣಾಸ್ತ್ರದಿ | ನಗರನುರುಪಿ ಬಿಟ್ಟನೀತ | ಬಗೆಬಗೆಯ ಜೀವಿಗಳಿಗೆ ಬಿಡದೆ | ಅಗಣಿತ ಭೋಗ ಪ್ರದಾತನೀತ | ಮೃಗಲಾಂಛನದ ಮೊಗನಗೆ ಈತ | ನಿಗಮಾಶ್ರವದಗಧಿಕನೀತಾ 3 ಭಸುವ ರಾವಣ ಮಾಗಧ ಕಶ್ಯಪ | ಅಸುರಗಣಕೆ ವರವಿತ್ತನೀತ | ಪಶುವದನ ಪರಮೇಶ್ವರನೀತ | ವಿಷವ ಭಂಜನಭವ ಶಿವನೀತ | ಬಿಸಿಜ ಸಂಭವ ನಂದನನೀತ | ಅಸಮವೀರ ವೈಷ್ಣವನೀತ | ವಸುಧಿಯೊಳಗೆ ಶರಣ ಜನಕೆ | ವಶವಾಗಿಯಿಪ್ಪ ಉಗ್ರೇಶನೀತಾ 4 ಹೇಮಕೂಟಾದ್ರಿ ನಿಲಯನೀತ | ರಾಮದೇವ ವಾಸವಂದ್ಯ | ಸೋಮವರ್ಣನೀತ ಸಕಲ | ಕಾಮಿತಾರ್ಥವ ಕೊಡುವನೀತ | ಯಾಮ ಯಾಮಕೆ ಮನದೊಳು ನಿಂದು | ಕ್ಷೇಮ ಮಾರ್ಗಕ್ಕೆ ಪ್ರೇರಕÀನೀತ | ರಾಮ ವಿಜಯವಿಠ್ಠಲನಂಘ್ರಿ | ನಾಮನೆನಿಸಿ ಕೊಂಡಾಡುವನೀತಾ5
--------------
ವಿಜಯದಾಸ
ಈತನೀಗ ಭಾರತೀಶನು ತನ್ನ ಪ್ರೀತಿಸುವರ | ಮನದ ಮಾತು ಸಲಿಸಿ ಮುಕುತಿ ಈವ ಪ ಶರಧಿ ಜಿಗಿದು ಹಾರಿ ಲಂಕಾಪುರವ ಶೋಧಿಸಿ | ಹರಿಯ ರಾಣಿಗೆ ಕುರುಹನಿತ್ತು ಮರಗಳುರುಹಿ || ಮುರಿದು ಧರೆಗೆ ವರಿಸಿದಾತಾ ಅಪ ಧುರದೊಳಕ್ಷನ ಹರಣವಳಿದು | ಗುರುವರ್ಹತ್ತುಶಿರನ ಜರಿದು || ನಗರ ಉರುಪಿ ಮರಳಿ | ಹರಿಯ ಚರಣಕ್ಕೆರಗಿದಾತಾ 1 ಕುರುನಿಕರ ಕರುಬಿ ಬೊ-| ಬ್ಬಿರಿದು ನಿಂದುರವಣಿಸಿ ಎದುರಾ-|| ದರಿಗಳ ಶಿರ ತರಿದು ತಳೋ-| ದರಿಯ ಹರುಷಬಡಿಸಿದಾತಾ2 ಕರಿಯ ತೆರದಿ ದುಷ್ಟ ಸಂಕರನು | ತಿರುಗಲವನ ಮುರಿದು ಮತ್ತೆ || ಮರುತಮತದ ಬಿರುದನೆತ್ತಿ - |ಪರನೆ ವಿಜಯವಿಠ್ಠಲನೆಂದಾ 3
--------------
ವಿಜಯದಾಸ
ಈಶಾ ಕೈಲಾಸವಾಸಾ | ಕಾಶೀನಗರಾಧೀಶಾ | ಶೇಷಭೂಷಣ | ಗಿರೀಶಾ | ವಿಶ್ವೇಶ ಚಿತ್ತವಾಸಾ ಪ ಶಿವಸಿದ್ಧ ಸಾಧ್ಯ ಸೇವ್ಯಾ | ಭವವನಾಶವ ದಿವ್ಯ | ಕವಿ ಪ್ರಿಯ ಜ್ಞಾನ ದ್ರವ್ಯಾ ಹಾ || ಶಿವ ಓಂ ನಮಃ ಶಿವ | ಸÀವಚರಣ ನೋಡುವ | ಪವಿತ್ರ ಚಿತ್ತವ ಕೊಡು | ಧವಳ ಗಂಗಾಧರನೇ 1 ವ್ರಾತ | ಪತಿತ ಪಾವನ ತಾತ | ಕೃತುವೈ ಪದ್ಮಜಾತ ಹಾ || ಕ್ಷಿತಿಯೊಳು ನೀಲಲೋಹಿತ | ನೀನೇ ಗುರುವೆಂದು | ತುತಿಪ ಗತಿಗೆ ರಘು | ಪತಿನಾಮ ಎನಗೀಯೋ 2 ತ್ರಯನೇತ್ರ ಚಿತ್ರಗಾತ್ರ | ನಯ ನಮಿಪರ ಮಿತ್ರ ಜಯ | ಜಯಾಮರ ಸ್ತೋತ್ರ | ದಯಮಾಡೋ ಪುಣ್ಯ ಪಾತ್ರಾ ಹಾ || ಸಿರಿ | ವಿಜಯವಿಠ್ಠಲನ | ಭಕುತಿಯ ಕೊಡು ಅತಿ | ಶಯದಿ ಪಿನಾಕೀಶಾ 3
--------------
ವಿಜಯದಾಸ
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ
ಉದ್ದರುಸುವದೆನ್ನ ಉದಧಿಶಯನ | ಪಾದ | ಪದ್ಮದ್ವಯಕೆಯಿಂದು ಪ ಅಂದು ನೀ ಪೇಳಿದಂದಲಿ ತೀರ್ಥಯಾತ್ರೆ | ನಿಂದರದೆ ಸಂಚರಿಸಿ ಪುಣ್ಯವೆಲ್ಲಾ | ತಂದು ನಿನಗರ್ಪಿಸಿದೆ ಕೈ ಕೊಂಡು | ತೋರು ತಡಮಾಡದಲೆ ದೇವಾ 1 ಯಾತರವ ನಾನು ನರಮನೆ ಗಾಯಕರ ದೂತರೆಂಜಲನುಂಡು ಬೆಳದ ನರನೋ || ನೋತ ಫಲವಾವದೊ ನೀನೆ ಬಲ್ಲೆಯಾ ಜೀಯಾ | ಮಾತು ಮಾತಿಗೆ ಹಿಗ್ಗಿ ನಗುವ ಚನ್ನಿಗರಾಯಾ2 ಇಷ್ಟೆನ್ನ ಮನದ ಭೀಷ್ಟೆ ಒಂದೆ ವುಂಟು | ಕೃಷ್ಣಾ ಸ್ನಾನ ಕೃಷ್ಣ ಸಂದರುಶನಾ | ಕೊಟ್ಟು ಕೇವಲವಾಗಿ ನಿನ್ನಂಘ್ರಿಯಲಿ ರತಿ | ಇಟ್ಟು ಭಜಿಸುವಂತೆ ಭಾಗ್ಯವನು ಕೊಡೊವೇಗಾ3 ಏನು ಕಡಿಮೆ ನೀನು ಒಲಿದರಾದಡೆ ರಾಮ | ಧೇನು ತರುಮಣಿ ಬಾರದೆ ನಿಲ್ಲವೇ || ಶ್ರೀನಿವಾಸನೆ ನಿನ್ನ | ಲೇಶ ಸುಖವು ತೋರದು ದೇವಾ 4 ವೆಂಕಟಗಿರವಾಸಾ ವೇದ ವಂದಿತ ಚರಣಾ | ಶಂಖ ಚಕ್ರಪಾಣಿ ಕರುಣಾಕರಾ | ಶಂಖಾಣ ನೃಪವರದ ವಿಜಯವಿಠ್ಠಲ ತಿಮ್ಮ ಅಂಕದ ಮೇಲಾಡುವ ಬಾಲನೆಂದು ಬಿಡದೆ 5
--------------
ವಿಜಯದಾಸ
ಊಟವನು ಮಾಡು ಬಾ ಉದಧಿಶಯನಾ | ಆಟವನು ಸಾಕುಮಾಡಿ ಅತಿ ವೇಗದಿಂದಲಿ ಪ ಪರಿ | ತೋಯ ಸಂಡಿಗೆ ಪಳದೆ ಹುಳಿ ಸಾರು || ಪಾಯಸ ನೊರೆಹಾಲು ಸಕ್ಕರೆಗೂಡಿಸಿ | ತಾಯಿ ದೇವಕಿಯು ಎಡೆಯ ಮಾಡಿದಳು ತಂದು 1 ಯಾಲಕ್ಕಿ ಹಾಕಿದ ಹೋಳಿಗೆಯು ಪರಿಮಳ | ಸಲೆ ಶಾಲ್ಯೋದನ ಕರಿದ ಭಕ್ಷ್ಯಾ || ಮೇಲಾದ ಇಂಗು ಜೀರಿಗೆ ಮೆಣಸಿನ ಹುಗ್ಗಿ | ಶ್ರೀ ಲಕುಮಿದೇವಿ ಎಡೆ ಮಾಡಿದಳು ತಂದು 2 ಕಸಕಸಿ ಎಳ್ಳು ಲಡ್ಡಿಗೆಯು ಅಪ್ಪಾಲು ಅರೆ-| ರಸ ದೋಸೆ ಬೆಣ್ಣೆ ಸೂಸಲುಕಡಬು || ಹಸನಾಗಿ ಕರಿದ ಹಪ್ಪಳ ಸಂಡಿಗೆ ನಿನ್ನ ಸೊಸೆ ಸರಸ್ವತಿ ಎಡೆ ಮಾಡಿದಳು ತಂದು 3 ಕಾದಾಕಳ ತುಪ್ಪ ಅಳಗಳಗ ತಿಳಿತುಪ್ಪ | ಮಾಧುರ್ಯವಾಗಿದ್ದ ಜೇನು ಘೃತವು || ಕಾದಾರಿದ ಪಾಲು ಕಟ್ಟುಸುರು ಕೆನೆಮೊಸರು | ಭೂದೇವಿ ನಲಿನಲಿದು ಎಡೆ ಮಾಡಿದಳೊ ತಂದು4 ಸರಳಿಗೆ ಗೌಲಿ ಬಟಿವೆ ಪರಡಿ ಸಜ್ಜಿಗೆ | ಸರಸವಾಗಿದ್ದ ಚಿತ್ರಾನ್ನಂಗಳು || ಪರಿ ಫಲ ಪಕ್ವಾನ್ನ ಸೋಪಚಾರದಿ | ಗಿರಿಜಾದಿಗಳು ತಾವು ಎಡೆ ಮಾಡಿದರೊ ತಂದು5 ಖಾರುಳ್ಳ ಪಚ್ಚಡಿ ಹಚ್ಚಗೆ ಹಸಿರು ವರ್ಣದ | ವಾರುಣದಿ ಉಪ್ಪಿನಕಾಯಿ ಕೂಟಾ || ನೀರು ಮಜ್ಜಿಗೆ ನಿಂಬೆÀಹಣ್ಣನೆ ಹಿಂಡಿ | ಭಾರತೀದೇವಿ ಎಡೆಮಾಡಿದಳೊ ತಂದು 6 ಉಂಡ ತರುವಾಯದಲಿ ಹರಿಯೇ ಪೀಠದಿ ಕುಳಿತು | ಕೊಂಡು ಬಂದ ಗಂಧ ತಾಂಬೂಲವ || ಸಿರಿ ವಿಜಯವಿಠ್ಠಲ | ಕೊಂಡನಾದ ಪುರಂದರಗೆ ಒಲಿದು ಒಲಿದು 7
--------------
ವಿಜಯದಾಸ
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎಂತಹದೋ ನಿನ್ನ ಸಂದುರಶನಾ | ಕಂತುವಿನ ಜನಕ ಉಡಪಿ ಕೃಷ್ಣರಾಯಾ ಪ ಓದನ ತಿಂದೆ | ಪರರ ದ್ರವ್ಯದ ತಂದೆ | ಪರ ಸತಿಯರಿಗೆ ನೊಂದೆ | ಗುರು ಹಿರಿಯರ ನಿಂದೆ | ಹಿರದಾಗಾಡಿದೆ ಮುಂದೆ | ಬರುತಿಪ್ಪ ಪಾಪದಿಂದೆ | ಪರಿಯಾಗಿ ಈ ಬಂದೆ | ಅರುಹು ತೊರದೆ ಬಂದೆ | ಕರುಣಿಸು ಜಗದ ತಂದೆ 1 ಸುಜನರ ಗುಣವ ಹಳಿದೆ | ಕುಜನರ ಸಂಗದಲಿ ಬೆಳಿದೆ | ಭಜನೆಗೆÀಟ್ಟು ಸುಳಿದೆ | ಪ್ರಜರನು ಪೊಗಳಿದೆ | ವೃಜ ಪುಣ್ಯಕೋಶ ಕಳಿದೆ | ಋಜುಮಾರ್ಗವ ತೊರದುಳಿದೆ | ರಜನಿಚರ ಮತಿಗಳಿದೆ | ವಿಜಯ ವಾರ್ತೆಗೆ ಮುಳಿದೆ | ತ್ರಿಜಗಪತಿ ಕೇಳಿದೆ 2 ಹರಿವಾಸರವ ಬಿಟ್ಟೆ | ದುರುಳರಿಗೆ ಧನ ಕೊಟ್ಟೆ | ಹರಿಭಕ್ತರ ತೊರೆದು ಕೆಟ್ಟೆ | ಹರಿಶ್ರವಣ ಬಚ್ಚಿಟ್ಟೆ | ಪರಮ ವ್ರತವ ಮೆಟ್ಟೆ | ಹರುಷದಲ್ಲಿಗೆ ಮನಮುಟ್ಟಿ | ಬಟ್ಟೆ | ವಿರಕುತಿಯನು ಬಿಟ್ಟೆ | ದುರಿತಕ್ಕೆ ಗುರುತಿಟ್ಟೆ | ಬಟ್ಟೆ 3 ಜ್ಞಾನವೆಂಬೋದೇ ಇಲ್ಲಾ | ಏನು ಪೇಳಲಿ ಸೊಲ್ಲಾ | ನೀನೆಂಬೋದಿಲ್ಲವಲ್ಲಾ | ಹಾನಿ ವೃದ್ದಿಗಳೆಲ್ಲಾ | ನಾನುಂಟೆ ಎಲ್ಲ ಸಲ್ಲಾ | ದಾನಾದೆ ಸತತ ಖುಲ್ಲಾ | ತಾ ನುಡಿಗೆ ಸೋತು ಚಿಲ್ಲಿ | ರಾನಡತಿ ಸಿರಿನಲ್ಲಾ | ನಾ ನಡದೆ ನೀ ಬಲ್ಲಾ | ದೇ ನೋಡು ಪ್ರತಿ ಮಲ್ಲಾ 4 ಅಪರಾಧಿ ನಾನಯ್ಯ | ಅಪವಾದದವನಯ್ಯ | ಕೃಪಣದಿಂದೆನ್ನ ಕಾಯಾ | ಉಪಜಯವಾಯಿತು ಪ್ರೀಯಾ | ಸ್ವಪನದಿ ಪುಣ್ಯ ಸಹಾಯಾ | ಲಪಮಾಡಲಿಲ್ಲ ಜೀಯಾ | ಕೃಪೆಯಲ್ಲಿ ಪಿಡಿ ಕೈಯಾ | ವಿಜಯವಿಠ್ಠಲರೇಯಾ | ಗುಪುತವಾದುದುಪಾಯಾ | ತಪಸಿಗಳ ಮನೋಜಯಾ 5
--------------
ವಿಜಯದಾಸ